ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ – Kannada News | Bengaluru Techie Sharmila Murder: Accused Admits Physical assault Attempt

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ

ಬೆಂಗಳೂರು, ಜನವರಿ 26: ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ (Techie Sharmila case) ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನಿಖೆ ವೇಳೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನೆರೆಮನೆಯವನೇ ಆದ ಆರೋಪಿ ಕರ್ನಲ್ (18), ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನುವ ಶಂಕೆ ವ್ಯಕ್ತವಾಗಿತ್ತು. ಮೊದಲಿಗೆ ದೌರ್ಜನ್ಯದ ಆರೋಪವನ್ನು ಕರ್ನಲ್ ತಳ್ಳಿಹಾಕಿದ್ದ. ಆದರೀಗ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿರುವುದಾಗಿ ಪೊಲೀಸ್ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ.

ಹೊಂಚು ಹಾಕಿ ಕಾದು ಕುಳಿತಿದ್ದ ಯುವಕ

34 ವಯಸ್ಸಿನ ಟೆಕ್ಕಿ ಶರ್ಮಿಳಾನ್ನು ಪ್ರೀತಿಸುತ್ತಿದ್ದ. ಆಕೆಯ ಹತ್ಯೆಗೂ ಒಂದುವರೆ ತಿಂಗಳಿಂದ ಪ್ರತಿನಿತ್ಯ ಟೆರಸ್ ಮೇಲೆ ಯುವತಿಯ ಚಲನ ವಲನಗಳನ್ನು ಗಮನಿಸುತ್ತಿದ್ದ. ಶರ್ಮಿಳಾ ಕೆಲಸಕ್ಕೆ ಹೋಗುವಾಗಲೂ ಆಕೆಯನ್ನು ಹಿಂಬಾಲಿಸುತ್ತಿದ್ದ ಯುವಕ, ಕೆಲಸ ಮುಗಿಸಿ ಆಕೆ ವಾಪಸ್ ಬರುವ ವೇಳೆ ಕಾದು ಕೂರುತ್ತಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಹಲವು ದಿನಗಳಿಂದ ಆಕೆಯ ಮೇಲೆ ಕಣ್ಣಿಟ್ಟಿದ್ದ ಆರೋಪಿ ಜನವರಿ 3ರ ರಾತ್ರಿ ಟೆಕ್ಕಿಯ ಮನೆಗೆ ನುಗ್ಗಿ, ಆಕೆಯ ಮೇಲೆ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಪಟ್ಟಿದ್ದಾಗಿ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್: ಹತ್ಯೆಗೂ ಮುನ್ನ ರೇಪ್ ಮಾಡಿರುವ ಶಂಕೆ

ಆ ರಾತ್ರಿ ನಡೆದಿದ್ದೇನು?

ಶರ್ಮಿಳಾ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ ಸಮಯದಲ್ಲಿ ಆಕೆ ಜೋರಾಗಿ ಕಿರುಚಿಕೊಂಡಿದ್ದರು. ಈ ವೇಳೆ ಆಕೆಯ ಬಾಯಿಯನ್ನು ಗಟ್ಟಿಯಾಗಿ ಮುಚ್ಚಿದ್ದ. ಮಹಿಳೆ ಎಷ್ಟೇ ಬೇಡಿಕೊಂಡರೂ ಕನಿಕರವಿಲ್ಲದೆ ಕತ್ತು ಹಿಸುಕಿ ಕೊಲೆ ಮಾಡಿದ್ದ. ಆ ಬಳಿಕ ಟಿಶ್ಯು ಪೇಪರ್ ಹಾಸಿಗೆ ಮೇಲಿಟ್ಟು ಬೆಂಕಿ ಹಚ್ಚಿದ್ದ ಕಿರಾತಕ‌, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಾಲ್ಕನಿ ಡೋರ್ ಮೂಲಕವೇ ಜಿಗಿದು ಪರಾರಿಯಾಗಿದ್ದ. ಅಗ್ನಿ ಅವಘಡದಿಂದಾಗಿ ಮಹಿಳೆ ಸಾವನ್ನಪ್ಪಿದ್ದಾರೆಂದು ಬಿಂಬಿಸಲು ಹೊರಟಿದ್ದವನ ಸತ್ಯ ವಿಚಾರಣೆ ವೇಳೆ ಹೊರಬಂದಿದೆ. ಸಧ್ಯಕ್ಕೆ ಮೃತರ ಪೋಸ್ಟ್​ಮಾರ್ಟಮ್ ರಿಪೋರ್ಟ್​ ಸೇರಿ ಕೆಲ ಮೆಡಿಕಲ್ ಸ್ಯಾಂಪಲ್​ಗಳನ್ನು ಎಫ್​ಎಸ್​ಎಲ್ಗೆ ಕಳುಹಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Sanjana Burli Engagement: ವೈದ್ಯನ ಜೊತೆ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಬುರ್ಲಿ

Source link

ರಿಷಿ-ಪ್ರಕಾಶ್ ಬೆಳವಾಡಿ ಚಿತ್ರಕ್ಕೆ ‘ಅನಂತ ಪದ್ಮನಾಭ’ ಟೈಟಲ್; ಶೀರ್ಷಿಕೆಯಲ್ಲೇ ಕಥೆಯ ಎಳೆ ರಿವೀಲ್ – Kannada News | Ananta Padmanabha: Rishi, Prakash Belawadi Star in Prashanth Rajappa’s Comedy Drama

ಸಂಭಾಷಣೆಕಾರರು ಸಿನಿಮಾ ನಿರ್ದೇಶಕರಾಗಿ ಬಡ್ತಿ ಪಡೆದ ಸಾಕಷ್ಟು ಉದಾಹರಣೆ ಇದೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.‘ಅಧ್ಯಕ್ಷ’, ‘ವಿಕ್ಟರಿ’, ‘ರನ್ನ’, ‘ಪೊಗರು’, ‘ತೀರ್ಥರೂಪ ತಂದೆಯವರಿಗೆ’, ‘ಅಣ್ಣ ಫ್ರಂ ಮೆಕ್ಸಿಕೋ’ ರೀತಿಯ ಸಿನಿಮಾಗಳಿಗೆ ಸಂಭಾಷಣೆ ಬರೆದ ಪ್ರಶಾಂತ್‌ ರಾಜಪ್ಪ ಈಗ ನಿರ್ದೇಶನ ಮಾಡುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ‘ಅನಂತ ಪದ್ಮನಾಭ’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿ ರಿಷಿ ಹಾಗೂ ಪ್ರಕಾಶ್‌ ಬೆಳವಾಡಿ (Prakash Belavadi) ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾದ ಟೈಟಲ್ ರಿವೀಲ್ ಮಾಡುವ ಪೋಸ್ಟರ್ ರಿವೀಲ್ ಆಗಿದೆ. ಈ ಪೋಸ್ಟರ್​​ನಲ್ಲಿ ಕಾರಿನ ಎದುರು ರಿಷಿ ಹಾಗೂ ಪ್ರಕಾಶ್ ಕುಳಿತಿದ್ದಾರೆ. ಕಾರಿನ ಮೇಲೆ ಬ್ಯಾಗ್​​ಗಳು ಇವೆ. ಇದನ್ನು ನೋಡಿದರೆ ಇದೊಂದು ಟ್ರಾವೆಲ್ ಕಥೆಯ ಸಿನಿಮಾ ಇರಬಹುದು ಎಂದು ಪ್ರೇಕ್ಷಕರು ಊಹಿಸುತ್ತಿದ್ದಾರೆ. ಟೈಟಲ್ ಪೋಸ್ಟರ್ ಮೂಲಕ ಸಿನಿಮಾ ಮೇಲಿನ ಕುತೂಹಲ ಹೆಚ್ಚಿದೆ.

ಎರಡು ಜನರೇಷನ್‌ ಬಗ್ಗೆ ಇರೋ ಕಥೆಯನ್ನು ಚಿತ್ರ ಹೊಂದಿದೆ ಎನ್ನಲಾಗಿದೆ. ರಿಷಿ ಅವರು ನಟನೆ ಮೂಲಕ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಪ್ರಕಾಶ್ ಬೆಳವಾಡಿ ನಟನೆಯಲ್ಲಿ ಸಾಕಷ್ಟು ಪಳಗಿದವರು. ಇವರ ಕಾಂಬಿನೇಷನ್ ನೋಡಲು ಪ್ರೇಕ್ಷಕರು ಕಾದಿದ್ದಾರೆ.

ಇದನ್ನೂ ಓದಿ: ‘ಹಿಕೋರಾ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಪ್ರಕಾಶ್ ಬೆಳವಾಡಿ

ಕಾಮಿಡಿ ಡ್ರಾಮ ಇರೋ ‘ಅನಂತ ಪದ್ಮನಾಭ’ ಸಿನಿಮಾವನ್ನ ಅಮ್ರೇಜ್‌ ಸೂರ್ಯವಂಶಿ ನಿರ್ಮಾಣ ಮಾಡಿದ್ದಾರೆ. ಸದ್ಯ ತಂಡ ಟೈಟಲ್‌ ಪೋಸ್ಟರ್‌ ರಿಲೀಸ್‌ ಮಾಡಿದ್ದು, ಬಹುತೇಕ ಶೂಟಿಂಗ್ ಪೂರ್ಣಗೊಳಿಸಿಕೊಂಡಿದೆ. ಎರಡು ಹಾಡುಗಳ ಚಿತ್ರೀಕರಣ ಬಾಕಿ ಇದೆ.‘ಅನಂತ ಪದ್ಮನಾಭ’ ಚಿತ್ರಕ್ಕೆ ಬೆಂಗಳೂರು, ಸಾಗರ, ತೀರ್ಥಹಳ್ಳಿ ಭಾಗದಲ್ಲಿ ಶೂಟಿಂಗ್ ನಡೆದಿದೆ. ಅಶ್ವಿನ್‌ ಪಿ ಕುಮಾರ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ವೀನಸ್‌ ನಾಗರಾಜ್‌ ಮೂರ್ತಿ ಛಾಯಾಗ್ರಾಹಣ ಚಿತ್ರಕ್ಕಿದೆ.ಶೀಘ್ರವೇ ತಂಡ ರಿಲೀಸ್ ದಿನಾಂಲ ರಿವೀಲ್ ಮಾಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್! – Kannada News | 77th Republic Day: Lakshmi Hebbalkar Hoists flag on St. Marys Island by Boat

ಉಡುಪಿ, ಜನವರಿ 26: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ (Republic Day 2026) ನೆರವೇರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಅಧಿಕಾರಿಗಳು ಮತ್ತು ಗಣ್ಯರು ಬೋಟ್ ಮೂಲಕ ದ್ವೀಪಕ್ಕೆ ತೆರಳಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಈ ವಿಶೇಷ ಸಂದರ್ಭದಲ್ಲಿ, ಸಶಸ್ತ್ರ ಪಡೆಗಳ ವತಿಯಿಂದ ರಾಷ್ಟ್ರೀಯ ವಂದನಾ ಪರೇಡ್ ಹಾಗೂ ಸಶಸ್ತ್ರ ಪರೇಡ್ ಜರುಗಿತು. ಇದು ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಮತ್ತು ಗಾಂಭೀರ್ಯದ ಸ್ಪರ್ಶ ನೀಡಿತು. ಸೈಂಟ್ ಮೇರಿಸ್ ದ್ವೀಪದಲ್ಲಿ ನಡೆದ ಈ ವಿಶಿಷ್ಟ ಆಚರಣೆಯು 77ನೇ ಗಣರಾಜ್ಯೋತ್ಸವದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಬಂಗಾರದ ದರ 1 ಕಿಲೋಗೆ 8-9 ಕೋಟಿ ರೂಗೆ ಏರುತ್ತಾ? ಯಾಕಿಷ್ಟು ಏರುತ್ತಿದೆ ಬೆಲೆ? – Kannada News | Reasons for rising gold prices, and future rates prediction

ನವದೆಹಲಿ, ಜನವರಿ 26: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ (Gold Rate) ಒಂದು ಔನ್ಸ್​ಗೆ 5,000 ಡಾಲರ್ ದಾಟಿ ಹೋಗಿದೆ. ಈ ಮೈಲಿಗಲ್ಲು ಮುಟ್ಟಿದ್ದು ಬಂಗಾರದ ಇತಿಹಾಸದಲ್ಲೇ ಇದು ಪ್ರಥಮ ಬಾರಿಗೆ. ಸ್ಪಾಟ್ ಗೋಲ್ಡ್ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ ಸೋಮವಾರ 5,092 ಡಾಲರ್​ವರೆಗೂ ಏರಿದೆ. ಒಂದು ಔನ್ಸ್ ಎಂದರೆ 28.3495 ಗ್ರಾಮ್. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ ಸ್ಪಾಟ್ ಮಾರ್ಕೆಟ್​ನಲ್ಲಿ 16,410 ರೂಗಿಂತ ಹೆಚ್ಚಾಗಿದೆ.

ಚಿನ್ನದ ಬೆಲೆ ಏರಲು ಕಾರಣಗಳೇನು?

  • ಸೆಂಟ್ರಲ್ ಬ್ಯಾಂಕುಗಳು ಚಿನ್ನದ ಖರೀದಿ ಭರಾಟೆಯಲ್ಲಿರುವುದು
  • ಗೋಲ್ಡ್ ಇಟಿಎಫ್​ಗಳಲ್ಲಿ ಹೂಡಿಕೆ ಬಹಳ ಹೆಚ್ಚಿರುವುದು
  • ಅಮೆರಿಕದ ಡಾಲರ್ ದುರ್ಬಲಗೊಳ್ಳುತ್ತಿರುವುದು
  • ಅಮೆರಿಕದ ಟ್ಯಾರಿಫ್​ನ ಪರಿಣಾಮ ಬೀರುತ್ತಿರುವುದು
  • ಯುದ್ಧ ಭೀತಿಯಿಂದ ಜಾಗತಿಕ ರಾಜಕೀಯ ಅನಿಶ್ಚಿತತೆ ಹೆಚ್ಚಿರುವುದು.

ಐತಿಹಾಸಿಕವಾಗಿ ಚಿನ್ನವು ಸೇಫ್ ಹೇವನ್ ಅಥವಾ ಭದ್ರತಾ ಲೋಹವಾಗಿ ಪರಿಗಣಿತವಾಗಿದೆ. ಅನಿಶ್ಚಿತ ಸಂದರ್ಭ ಎದುರಾಗಬಹುದು ಎಂದಾಗ ಜನರು ಚಿನ್ನದಂತಹ ನೈಜ ಮತ್ತು ಅಮೂಲ್ಯ ವಸ್ತುಗಳನ್ನು ತೆಗೆದಿರಿಸಿಕೊಳ್ಳುವುದುಂಟು. ಈಗಲೂ ಕೂಡ ಆ ಪ್ರವೃತ್ತಿ ಮುಂದುವರಿದಿದೆ.

ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

ಚಿನ್ನದ ಬೆಲೆ ಎಷ್ಟಾಗುತ್ತೆ?

ಗೋಲ್ಡ್​ಮನ್ ಸ್ಯಾಕ್ಸ್ ವರದಿ ಪ್ರಕಾರ ಈ ವರ್ಷಾಂತ್ಯದೊಳಗೆ (2026ರ ಡಿಸೆಂಬರ್) ಚಿನ್ನದ ಬೆಲೆ ಒಂದು ಔನ್ಸ್​ಗೆ 5,400 ಡಾರ್ ಮುಟ್ಟಬಹುದು. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ 17,430 ರೂಗೆ ಏರಬಹುದು. ಈಗ ನಡೆಯುತ್ತಿರುವ ಏರಿಕೆಯ ಗತಿ ಗಮನಿಸಿದರೆ ಇನ್ನೆರಡು ತಿಂಗಳಲ್ಲೇ ಈ ಬೆಲೆ ಬಂದುಬಿಡಬಹುದು. ಮೆಟಲ್ಸ್ ಫೋಕಸ್ ಎನ್ನುವ ಕಂಪನಿ ಮಾಡಿರುವ ಅಂದಾಜು ಪ್ರಕಾರ ಈ ವರ್ಷಾಂತ್ಯದಲ್ಲಿ ಚಿನ್ನದ ಬೆಲೆ ಔನ್ಸ್​ಗೆ 5,500 ಡಾಲರ್ ಆಗಬಹುದು. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ 17,753 ರೂ ಆಗಬಹುದು.

ರಾಬರ್ಟ್ ಕಿಯೋಸಾಕಿ ಭಯಾನಕ ಭವಿಷ್ಯ

ಹಣಕಾಸು ತಜ್ಞ ಹಾಗು ರಿಚ್ ಡ್ಯಾಡ್ ಪೂರ್ ಡ್ಯಾಡ್ ಪುಸ್ತಕದ ಕರ್ತೃ ರಾಬರ್ಟ್ ಕಿಯೋಸಾಕಿ ಅವರು ಚಿನ್ನದ ಬೆಲೆ ಒಂದು ಔನ್ಸ್​ಗೆ 27,000 ಡಾಲರ್ ಆಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ. ಅಂದರೆ, ಈಗಿರುವ ಬೆಲೆಗಿಂತ ಐದು ಪಟ್ಟು ಹೆಚ್ಚು ಬೆಲೆಯಾಗಬಹುದು. ಅವರ ಭವಿಷ್ಯ ನಿಜವಾದರೆ ಒಂದು ಗ್ರಾಮ್ ಚಿನ್ನದ ಬೆಲೆ 87,154 ರೂ ಆಗುತ್ತದೆ. ಅಂದರೆ ಒಂದು ಕಿಲೋ ಚಿನ್ನದ ಬೆಲೆ 8,71,54,000 (8.71 ಕೋಟಿ) ರೂ ಆಗಬಹುದು. ಇಷ್ಟು ಅಗಾಧ ಚಿನ್ನದ ಬೆಲೆ ಯಾವಾಗ ಆಗುತ್ತೆ ಎಂದು ಕಿಯೋಸಾಕಿ ಟೈಮ್​ಲೈನ್ ಕೊಟ್ಟಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಮಹಿಳೆ, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ! – Kannada News | Revenge Plot: Vasundhara Injects HIV into Ex Lover’s Wife in Kurnool

ಆಂಧ್ರಪ್ರದೇಶ, ಜಿ.26: ಕರ್ನೂಲ್ ಪಟ್ಟಣದಲ್ಲಿ ಬಿ.ಬಿ. ವಸುಂಧರಾ (40) ಎಂಬ ಮಹಿಳೆ, ತನ್ನ ಮಾಜಿ ಪ್ರಿಯಕರನ ಪತ್ನಿಯ ಮೇಲೆ ಎಚ್‌ಐವಿ (HIV) ಇಂಜೆಕ್ಟ್ ಮಾಡುವ ಮೂಲಕ ಕೊಲೆಗೆ ಸಂಚು ರೂಪಿಸಿದ್ದಾಳೆ. ಸಂತ್ರಸ್ತ ಮಹಿಳೆಯು ವೃತ್ತಿಯಲ್ಲಿ ವೈದ್ಯೆಯಾಗಿದ್ದು (ಸಹಾಯಕ ಪ್ರಾಧ್ಯಾಪಕಿ), ಈಕೆಯ ಪತಿ ಕೂಡ ವೈದ್ಯರಾಗಿದ್ದಾರೆ. ವಸುಂಧರಾ ತನ್ನ ಮಾಜಿ ಪ್ರಿಯಕರ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದನ್ನು ಸಹಿಸಲಾರದೆ, ಅವರ ಸಂಸಾರವನ್ನು ಹಾಳುಮಾಡಲು ಈ ಭೀಕರ ಸಂಚು ರೂಪಿಸಿದ್ದಳು. ಜನವರಿ 9, 2026 ರಂದು ಸಂತ್ರಸ್ತ ವೈದ್ಯೆ ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ, ವಸುಂಧರಾ ಮತ್ತು ಆಕೆಯ ಸಹಚರರು ಉದ್ದೇಶಪೂರ್ವಕವಾಗಿ ಬೈಕ್‌ನಿಂದ ಡಿಕ್ಕಿ ಹೊಡೆದಿದ್ದಾರೆ. ವೈದ್ಯೆ ಕೆಳಗೆ ಬಿದ್ದಾಗ, ವಸುಂಧರಾ ಮತ್ತು ಆಕೆಯ ಜತೆಗಿದ್ದ ಇತರರು ಸಹಾಯ ಮಾಡುವ ನೆಪದಲ್ಲಿ ಹತ್ತಿರ ಬಂದಿದ್ದಾರೆ. ಈ ಗದ್ದಲದ ನಡುವೆಯೇ ವಸುಂಧರಾ ಮೊದಲೇ ಸಿದ್ಧಪಡಿಸಿಕೊಂಡಿದ್ದ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಅನ್ನು ವೈದ್ಯೆಯ ದೇಹಕ್ಕೆ ಚುಚ್ಚಿದ್ದಾಳೆ.

ಘಟನೆಯ ನಂತರ ಅನುಮಾನಗೊಂಡ ವೈದ್ಯೆ ಮತ್ತು ಆಕೆಯ ಪತಿ ಜನವರಿ 10 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಸಂಚಿನ ಬಗ್ಗೆ ಬಹಿರಂಗವಾಗಿದೆ. ವಸುಂಧರಾ ಸೇರಿದಂತೆ ನಾಲ್ವರು ಆರೋಪಿಗಳನ್ನು (ಜ್ಯೋತಿ, ಜಶ್ವಂತ್ ಮತ್ತು ಶ್ರುತಿ) ಬಂಧಿಸಿದ್ದಾರೆ. ಆರೋಪಿ ವಸುಂಧರಾ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಸಂಶೋಧನೆಯ ನೆಪದಲ್ಲಿ ಎಚ್‌ಐವಿ ಪೀಡಿತ ರೋಗಿಗಳ ರಕ್ತವನ್ನು ಸಂಗ್ರಹಿಸಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಸುಂಧರಾ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಸಂಶೋಧನೆಯ ನೆಪದಲ್ಲಿ ಎಚ್‌ಐವಿ ಪೀಡಿತ ರೋಗಿಗಳ ರಕ್ತವನ್ನು ಸಂಗ್ರಹಿಸಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಗಣರಾಜ್ಯೋತ್ಸವದಂದು ರೂಪಿಸಿದ್ದ ಬಹುದೊಡ್ಡ ಸಂಚು ವಿಫಲಗೊಳಿಸಿದ ಭದ್ರತಾ ಪಡೆ, 10,000 ಕೆಜಿ ಸ್ಫೋಟಕ ವಶ

ಬಂಧಿತರಾದ ಮುಖ್ಯ ಆರೋಪಿ ಬಿ. ಬಿ. ವಸುಂಧರಾ ಮತ್ತು ಆಕೆಯ ಮೂವರು ಸಹಚರರನ್ನು (ಜ್ಯೋತಿ, ಜಶ್ವಂತ್ ಮತ್ತು ಶ್ರುತಿ) ಕರ್ನೂಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎಲ್ಲಾ ನಾಲ್ವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ (Judicial Remand) ವಿಧಿಸಿ ಆದೇಶಿಸಿದೆ. ಕರ್ನೂಲ್ ಪೊಲೀಸರು ಈ ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಮತ್ತು ಈ ಸಂಚಿನಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂದು ತಿಳಿಯಲು ಪೊಲೀಸರು ಆರೋಪಿಗಳನ್ನು ತಮ್ಮ ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಸರ್ಕಾರಿ ಆಸ್ಪತ್ರೆಯಿಂದ ಎಚ್‌ಐವಿ ಸೋಂಕಿತ ರಕ್ತವನ್ನು ಪಡೆಯಲು ಯಾರಾದರೂ ಆಸ್ಪತ್ರೆಯ ಸಿಬ್ಬಂದಿ ಸಹಾಯ ಮಾಡಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India Equals Pakistan T20 World Record

ಈ ಮೂಲಕ ಟೀಮ್ ಇಂಡಿಯಾ ಸತತವಾಗಿ 11 ಟಿ20 ಸರಣಿಗಳನ್ನು ಗೆದ್ದುಕೊಂಡು, ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. ಇನ್ನು ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡರೆ, ಟಿ20 ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಲಿದೆ.

Source link

ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆನ್ನಿಗೆ ನಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ಹೇಳಿದ್ದೇನು ನೋಡಿ – Kannada News | Udupi Saffron Flag Controversy: Minister Lakshmi Hebbalkar Backs Udupi DC, Says No Place for Politics

ಉಡುಪಿ, ಜನವರಿ 26: ಉಡುಪಿ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಕೇಸರಿ ಧ್ವಜ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ವಿವಾದಕ್ಕೆ ಗ್ರಾಸವಾಗಿತ್ತು. ಆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯ ಸೈಂಟ್ ಮೇರೀಸ್ ದ್ವೀಪದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು.

ಇದೇ ವೇಳೆ, ಡಿಸಿ ವಿರುದ್ಧ ಕಾಂಗ್ರೆಸ್​​ನವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇದು ಧಾರ್ಮಿಕ ಕಾರ್ಯಕ್ರಮ. ಸಂಸ್ಕೃತಿ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ಹೆಸರುವಾಸಿ ಆದಂತಹ ಜಿಲ್ಲೆ ಉಡುಪಿ. ಕೇಸರಿ ಧ್ವಜ ವಿಚಾರವಾಗಿ ದೂರು ಕೊಟ್ಟಿರುವುದು ಈಗಾಗಲೇ ನನಗೆ ತಿಳಿದಿದೆ. ಇದನ್ನು ಇಲ್ಲಿಗೆ ಬಿಟ್ಟುಬಿಡಬೇಕು. ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಜನರ ಮನೋಭಾವನೆಯನ್ನು ಕೆರಳಿಸುವಂತಹ ಕೆಲಸವನ್ನು ಮಾಡಲು ಹೋಗಬಾರದು. ಯಾರು ಏನೇ ಮಾತನಾಡಿದ್ದರೂ, ದೂರು ನೀಡಿದ್ದರೂ ಅವರ ಬಳಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನರೇಗಾ ಹೆಸರು ಬದಲಾವಣೆ ವಿರೋಧಿಸಿ ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ – Kannada News | Congress Raj Bhavan Chalo: DK Shivakumar Leads Protest Against MGNREGA Changes in Bengaluru on Jan 27th

ಬೆಂಗಳೂರು, ಜನವರಿ 26: ನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ರಾಜಭವನ ಚಲೋ ಕಾರ್ಯಕ್ರಮದ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಫ್ರೀಡಂಪಾರ್ಕ್​​ನಿಂದ ರಾಜಭವನದತ್ತ ನಡೆಯುವ ಈ ಪ್ರತಿಭಟನೆಗೆ ರಾಜ್ಯಾದ್ಯಂತ ಎಲ್ಲ ಶಾಸಕರು, ಎಂಎಲ್​ಸಿಗಳು ಹಾಗೂ ನರೇಗಾ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಈ ಕಾರ್ಯಕ್ರಮದ ಜತೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಪ್ರತಿ ಕ್ಷೇತ್ರದಲ್ಲೂ ಕನಿಷ್ಠ 5 ಕಿಲೋಮೀಟರ್ ಪಾದಯಾತ್ರೆ ನಡೆಸುವಂತೆ ಸೂಚಿಸಲಾಗಿದೆ. ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ಸೋನಿಯಾ ಗಾಂಧಿ ನೇತೃತ್ವದ ಮನಮೋಹನ್ ಸಿಂಗ್ ಸರ್ಕಾರ ಜಾರಿಗೊಳಿಸಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಮತ್ತೆ ಅನುಷ್ಠಾನಕ್ಕೆ ತರುವುದು ಈ ಹೋರಾಟದ ಮುಖ್ಯ ಉದ್ದೇಶವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಪ್ರತಿ ವರ್ಷ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸುಮಾರು 6 ಸಾವಿರ ಕೋಟಿ ರೂಪಾಯಿಗಳ ಕೆಲಸ ನಡೆಯುತ್ತಿತ್ತು. ಇದನ್ನು ನಿಲ್ಲಿಸಲು ಹೊಸ ಕಾನೂನು ತರಲಾಗಿದೆ ಎಂದು ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಜನವಿರೋಧಿ, ಗ್ರಾಮೀಣ ಅಭಿವೃದ್ಧಿ ವಿರೋಧಿ ಮತ್ತು ಬಡವರ ವಿರೋಧಿ ನೀತಿ ಎಂದು ಅವರು ಖಂಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ – Kannada News | India UAE Strategic Alliance Deepens: Pakistan’s Isolation Amidst Economic Crisis and New Deals

ದೆಹಲಿ, ಜ.26: 77ನೇ ಗಣರಾಜ್ಯೋತ್ಸವದ (2026) ಹೊತ್ತಿನಲ್ಲೇ ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದಲ್ಲಿ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಬೆನ್ನಲ್ಲೇ, ಪಾಕಿಸ್ತಾನದ ವಿಮಾನ ನಿಲ್ದಾಣದ ಒಪ್ಪಂದದಿಂದ ಯುಎಇ ಹಿಂದೆ ಸರಿದಿದೆ . ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಯುಎಇಗೆ ಹಸ್ತಾಂತರಿಸಲು ಮಾತುಕತೆ ನಡೆದಿತ್ತು. ಈ ಒಪ್ಪಂದವು ಸುಮಾರು ಆಗಸ್ಟ್ 2025 ರಿಂದ ಚರ್ಚೆಯಲ್ಲಿತ್ತು. ಇತ್ತೀಚಿನ ವರದಿಗಳ ಪ್ರಕಾರ, ಈ ಒಪ್ಪಂದದ ಮಾತುಕತೆಗಳು ವಿಫಲವಾಗಿವೆ. ಯುಎಇ ಈ ಯೋಜನೆಯಿಂದ ಹಿಂದೆ ಸರಿಯಲು ನಿರ್ಧರಿಸಿದೆ, ಇದು ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ನೀಡಿದೆ.

ಜನವರಿ 19, 2026 ರಂದು ಯುಎಇ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿ ಪ್ರಧಾನಿ ಮೋದಿಯವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಈ ಚರ್ಚೆಯ ನಂತರ ಯುಎಇ ಈಗ ಪಾಕಿಸ್ತಾನದಂತಹ ಸಾಲದ ಸುಳಿಯಲ್ಲಿರುವ ದೇಶಗಳಿಗಿಂತ ಭಾರತದಂತಹ ಸ್ಥಿರ ಮತ್ತು ಬೆಳೆಯುತ್ತಿರುವ ಆರ್ಥಿಕತೆಯ ಮೇಲೆ ಹೆಚ್ಚು ನಂಬಿಕೆ ಇಟ್ಟಿದೆ ಎಂದು ಹೇಳಲಾಗಿದೆ. ಭಾರತದೊಂದಿಗೆ $200 ಬಿಲಿಯನ್ (Rs. 16,60,000 Crore) ವ್ಯಾಪಾರದ ಗುರಿಯನ್ನು ಯುಎಇ ಹೊಂದಿದೆ. ಈ ಹಿಂದೆ ಯುಎಇ ಪಾಕಿಸ್ತಾನಕ್ಕೆ ಆಪ್ತ ಮಿತ್ರನಾಗಿತ್ತು. ಆದರೆ ಈಗ ರಕ್ಷಣೆ, ತಂತ್ರಜ್ಞಾನ ಮತ್ತು ಶಕ್ತಿಯ ಕ್ಷೇತ್ರದಲ್ಲಿ ಭಾರತದೊಂದಿಗೆ ಯುಎಇ ಮಾಡಿಕೊಳ್ಳುತ್ತಿರುವ ದೊಡ್ಡ ಒಪ್ಪಂದಗಳು ಪಾಕಿಸ್ತಾನವನ್ನು ರಾಜತಾಂತ್ರಿಕವಾಗಿ ಏಕಾಂಗಿ ಮಾಡುತ್ತಿವೆ.

ಗುಜರಾತ್‌ನ ಧೋಲೇರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿಪಡಿಸಲು ಯುಎಇ ಆಸಕ್ತಿ ತೋರಿದೆ. ಅಂದರೆ ಪಾಕಿಸ್ತಾನದಲ್ಲಿ ಹೂಡಿಕೆ ಮಾಡಬೇಕಿದ್ದ ಹಣ ಈಗ ಭಾರತದ ಕಡೆಗೆ ಹರಿಯುತ್ತಿದೆ. ಈ ಮೂಲಕ ಯುಎಇ ಅಧ್ಯಕ್ಷರ ಭೇಟಿಯು ಭಾರತದ ಪಾಲಿಗೆ ಅತ್ಯಂತ ಯಶಸ್ವಿಯಾಗಿದೆ. ಅದರಲ್ಲೂ ವಿಶೇಷವಾಗಿ ರಕ್ಷಣೆ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಆಗಿರುವ ಒಪ್ಪಂದಗಳು ಭಾರತವನ್ನು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿವೆ.

ಭಾರತ – ಯುಎಇ ಪ್ರಮುಖ ಒಪ್ಪಂದಗಳ:

ಭಾರತದ ‘ಮೇಕ್ ಇನ್ ಇಂಡಿಯಾ’ ಅಡಿಯಲ್ಲಿ ಅತ್ಯಾಧುನಿಕ ಡ್ರೋನ್ ತಂತ್ರಜ್ಞಾನ ಮತ್ತು ಲಘು ಶಸ್ತ್ರಾಸ್ತ್ರಗಳನ್ನು (Small Arms) ಜಂಟಿಯಾಗಿ ತಯಾರಿಸಲು ಎರಡೂ ದೇಶಗಳು ಒಪ್ಪಿಕೊಂಡಿವೆ. ಇವುಗಳನ್ನು ಭಾರತ ಮತ್ತು ಯುಎಇ ಸೇನೆಗಳು ಬಳಸುವುದಲ್ಲದೆ, ಇತರ ದೇಶಗಳಿಗೂ ರಫ್ತು ಮಾಡುವ ಗುರಿ ಹೊಂದಲಾಗಿದೆ.ಯುಎಇಯ ಗಗನಯಾತ್ರಿಗಳಿಗೆ ಭಾರತದ ಇಸ್ರೋ (ISRO) ತರಬೇತಿ ನೀಡುವ ಬಗ್ಗೆ ಒಪ್ಪಂದವಾಗಿದೆ. ಮುಂದಿನ ದಿನಗಳಲ್ಲಿ ಭಾರತದ ‘ಗಗನ್ಯಾನ್’ ನೌಕೆಯಲ್ಲಿ ಯುಎಇಯ ಗಗನಯಾತ್ರಿಯೊಬ್ಬರು ಪ್ರಯಾಣಿಸುವ ಸಾಧ್ಯತೆಯಿದೆ. ಕೃತಕ ಬುದ್ಧಿಮತ್ತೆ (AI) ಬಳಸಿ ಸೈಬರ್ ದಾಳಿಗಳನ್ನು ತಡೆಯಲು ಮತ್ತು ಸಮುದ್ರ ಮಾರ್ಗದ ಭದ್ರತೆಯನ್ನು (Maritime Security) ಹೆಚ್ಚಿಸಲು ಜಂಟಿ ಕಾರ್ಯಪಡೆ ರಚಿಸಲಾಗಿದೆ.

ಇದನ್ನೂ ಓದಿ: ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಪಾಕಿಸ್ತಾನದ ಇತ್ತೀಚಿನ ಆರ್ಥಿಕ ಸ್ಥಿತಿ:

ಪಾಕಿಸ್ತಾನವು ಚೀನಾ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ಗೆ ನೀಡಬೇಕಾದ ಸಾಲದ ಕಂತುಗಳನ್ನು ತೀರಿಸಲು ಹೆಣಗಾಡುತ್ತಿದೆ. ದೇಶದ ಒಟ್ಟು ಆದಾಯದ ಬಹುಪಾಲು ಸಾಲದ ಬಡ್ಡಿಯನ್ನು ಕಟ್ಟಲೇ ವ್ಯಯವಾಗುತ್ತಿದೆ. ಇದೀಗ ಯುಎಇ ಅಧ್ಯಕ್ಷರು ಪಾಕಿಸ್ತಾನಕ್ಕೆ ಭೇಟಿ ನೀಡುವ ಬದಲು ಭಾರತಕ್ಕೆ ಬಂದಿರುವುದು, ಹೂಡಿಕೆದಾರರಿಗೆ ಪಾಕಿಸ್ತಾನವು ಹೂಡಿಕೆಗೆ ಸುರಕ್ಷಿತವಲ್ಲ ಎಂಬ ಸಂದೇಶ ನೀಡಿದೆ.ತನ್ನ ಆರ್ಥಿಕತೆಯನ್ನು ಉಳಿಸಿಕೊಳ್ಳಲು ಪಾಕಿಸ್ತಾನವು ತನ್ನ ಪ್ರಮುಖ ಬಂದರುಗಳು (Ports) ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ವಿದೇಶಿ ಕಂಪನಿಗಳಿಗೆ ಗುತ್ತಿಗೆ ನೀಡಲು ಪ್ರಯತ್ನಿಸುತ್ತಿದೆ, ಆದರೆ ಇದಕ್ಕೆ ಸರಿಯಾದ ಪ್ರತಿಕ್ರಿಯೆ ಸಿಗುತ್ತಿಲ್ಲ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version