ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್​​ ನೀಡಲಿದೆ ಬಿಗ್​​​​ ಗಿಫ್ಟ್​? ಅಂದು ಅಭಿಮಾನಿಗಳಿಗೆ ಡಿಸಿಎಂ ನೀಡಿದ ಖಡಕ್ ಸೂಚನೆ ಏನು? – Kannada News | Karnataka Cabinet Expansion: D.K. Shivakumar and Ministers Await High Commands Decision Amidst Birthday Buzz

ಬೆಂಗಳೂರು, ಏ. 26: ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ ಇದ್ದಾರೆ. ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ಹೊರಬೀಳುವ ಸಾಧ್ಯತೆ ಬಗ್ಗೆ ಮಾಧ್ಯಮಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಡಿಕೆ ಶಿವಕುಮಾರ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ತಾನು ಮುಖ್ಯಮಂತ್ರಿ ಹುದ್ದೆಯ ಚರ್ಚೆಯನ್ನು…

Read More

‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್ – Kannada News | Sudeep Wishes Yash on ‘Toxic’ Teaser: Sandalwood Unity Surprises Fans

ಕನ್ನಡ ಚಿತ್ರರಂಗದಲ್ಲಿ ಸ್ಟಾರ್​​ಗಳ ಮಧ್ಯೆ ಯಾವುದೂ ಸರಿ ಇಲ್ಲ, ಒಬ್ಬರಿಗೊಬ್ಬರು ಬೆಂಬಲ ಕೊಡೋದಿಲ್ಲ ಎಂಬಿತ್ಯಾದಿ ಮಾತುಗಳು ಆಗಾಗ ಕೇಳಿ ಬರುತ್ತಾ ಇರುತ್ತವೆ. ಈಗ ಕನ್ನಡ ಚಿತ್ರರಂಗದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ನೋಡಿದ ಸುದೀಪ್ ಅವರು ಯಶ್​​ಗೆ ವಿಶ್ ಮಾಡಿದ್ದಾರೆ. ‘ಟಾಕ್ಸಿಕ್’ ಟೀಸರ್ ಬೋಲ್ಡ್ ಎಂದವರಿಗೂ ಅವರ ಬಳಿ ಉತ್ತರವಿದೆ. ಈ ಬೆಳವಣಿಗೆ ಸ್ಯಾಂಡಲ್​​ವುಡ್ ಪಾಲಿಗೆ ಪಾಸಿಟಿವ್ ಎಂಬ ಮಾತುಗಳು ಕೇಳಿ ಬಂದಿವೆ. ಇಂದು (ಜನವರಿ 8) ಯಶ್ ಜನ್ಮದಿನ. ಈ…

Read More

RCB ತಂಡದ ಖರೀದಿಗೆ ಹಿಂದೇಟು: ಫೈನಲ್​​ ರೇಸ್​ನಲ್ಲಿ ಇಬ್ಬರು ಬೆಂಗಳೂರಿಗರು!

ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ  RCB ಫ್ರಾಂಚೈಸಿ ಮಾರಾಟ ಪ್ರಕ್ರಿಯೆಯು ಇದೀಗ ಅಂತಿಮ ಹಂತಕ್ಕೆ ತಲುಪಿದೆ. ಆದರೆ ಈ ಹಿಂದೆ ಇದ್ದ ಪ್ರಮುಖ ಕಂಪೆನಿಗಳು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಯಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಮ್ಯಾಂಚೆಸ್ಟರ್ ಯುನೈಟೆಡ್ ಮಾಲೀಕ ಅವ್ರಾಮ್ ಗ್ಲೇಝರ್ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್‌ನ ಅದಾರ್…

Read More

ಬಜೆಟ್​ ಮಂಡನೆಗೆ ಸಿಎಂ ಸಜ್ಜು: ಪಟ್ಟದ ಪಟ್ಟು ಮತ್ತಷ್ಟು ಗಟ್ಟಿಗೊಳಿಸಿದ ಡಿಕೆಶಿ; ದೂರ ಉಳಿದ ಮಲ್ಲಿಕಾರ್ಜುನ ಖರ್ಗೆ – Kannada News | Karnataka Congress CM Tussle: Siddaramaiah, DK Shivakumar Power Play Intensifies

ಡಿಕೆ ಶಿವಕುಮಾರ್​, ಮಲ್ಲಿಕಾರ್ಜನ್​ ಖರ್ಗೆ, ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 14: ಪ್ರಸ್ತುತ ರಾಜಕೀಯ ವಿದ್ಯಮಾನ ನೋಡುತ್ತಿದ್ದರೆ ಕಾಂಗ್ರೆಸ್​ನಲ್ಲಿ (Congress) ಪಟ್ಟದಪಗಡೆಯಾಟ ರೋಚಕಘಟ್ಟಕ್ಕೆ ತಲುಪಿದಂತೆ ಕಾಣಿಸುತ್ತಿದೆ. ಸಿಎಂ ಸಿದ್ರಾಮಯ್ಯ (Siddaramaiah) 17ನೇ ಬಾರಿ ಬಜೆಟ್​ಗೆ ಸಿದ್ಧತೆ ಮಾಡುವ ಮೂಲಕ ಮತ್ತೊಂದು ದಾಖಲೆ ಸೃಷ್ಟಿಸಲು ಸಜ್ಜಾಗಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್​ ತಮ್ಮದೇ ಆದ ರೀತಿಯಲ್ಲಿ ತಂತ್ರಗಾರಿಕೆ ನಡೆಸ್ತಿದ್ದಾರೆ. ಮೊನ್ನೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಏನು ಹೇಳ್ಬೇಕೋ ಎಲ್ಲಾ ಹೇಳಿದ್ದೀನಿ ಅನ್ನೋ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಅನ್ನೋ…

Read More

ರಿಷಬ್ ಶೆಟ್ಟಿಗೆ ಐಎನ್​​ಸಿಎ ಅವಾರ್ಡ್: ಧನ್ಯವಾದ ಹೇಳಿದ್ದು ಯಾರಿಗೆ? – Kannada News | Rishab Shetty got three INCA awards for Kantaran Chapter 1

‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾಗಳು ರಿಷಬ್ ಶೆಟ್ಟಿಯನ್ನು (Rishab Shetty) ಪ್ಯಾನ್ ಇಂಡಿಯಾ ಸ್ಟಾರ್ ನಟ ಮತ್ತು ನಿರ್ದೇಶಕರನ್ನಾಗಿ ಮಾಡಿವೆ. ಈ ಎರಡು ಸಿನಿಮಾಗಳು ರಿಷಬ್ ಅವರಿಗೆ ಹಲವು ವೇದಿಕೆಗಳಲ್ಲಿ ಗೌರವ ಪ್ರಾಪ್ತವಾಗುವಂತೆ ಮಾಡಿದೆ. ‘ಕಾಂತಾರ’ ಮತ್ತು ‘ಕಾಂತಾರ 1’ ಸಿನಿಮಾಗಳಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಐಎನ್​​ಸಿಎ ಪ್ರಶಸ್ತಿ ಸಹ ಲಭಿಸಿದೆ. ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ, ಅತ್ಯುತ್ತಮ…

Read More

ಸಾಕು ನಾಯಿಗೆ ಅದ್ದೂರಿಯಾಗಿ ಸೀಮಂತ: ಆರತಿ ಎತ್ತಿ, ಉಡಿ ತುಂಬಿದ ಮಹಿಳೆಯರು

ಧಾರವಾಡ, ಮಾರ್ಚ್​​ 09: ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಮುದ್ದಿನ ಸಾಕು ನಾಯಿಗೆ ಕುಟುಂಬಸ್ಥರು ಅದ್ದೂರಿಯಾಗಿ ಸೀಮಂತ ಕಾರ್ಯಕ್ರಮ ಮಾಡಿದ್ದಾರೆ. ಮಹದೇವಿ ನಾಯ್ಕರ್ ಅವರ ಮನೆಯವರು ಗರ್ಭಿಣಿಯಾಗಿದ್ದ ಡಾಬರಮನ್ ತಳಿಯ ಶ್ವಾನಕ್ಕೆ ಮುತ್ತೈದೆಯರನ್ನು ಕರೆಯಿಸಿ ಉಡಿ ತುಂಬಿಸಿದ್ದಾರೆ. ಅನೇಕ ಧಾರ್ಮಿಕ ವಿಧಿ ವಿಧಾನದಂತೆ ಸೀಮಂತ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಗ್ರಾಮದ ಜನರು ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಗ್ರೋಕ್ ಅಶ್ಲೀಲ ಅವಾಂತರಗಳು; ತಪ್ಪೊಪ್ಪಿಕೊಂಡು ಭಾರತ ಸರ್ಕಾರದ ಆದೇಶ ಪಾಲಿಸಿದ ಎಕ್ಸ್ – Kannada News | X admits its mistakes over grok generated obscene content, says it will comply with Indian law

ನವದೆಹಲಿ, ಜನವರಿ 11: ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್ ಆದ ಎಕ್ಸ್​ನಲ್ಲಿ ಇತ್ತೀಚೆಗೆ ಎಐ ದುರುಪಯೋಗಪಡಿಸಿಕೊಂಡು ಅಶ್ಲೀಲ ಕಂಟೆಂಟ್ ಅನ್ನು ಸೃಷ್ಟಿಸುತ್ತಿರುವ ಪ್ರಕರಣ ಜಾಗತಿಕವಾಗಿ ಪಿಡುಗಾಗಿ ಪರಿಣಿಸಿದೆ. ಭಾರತ ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿದ್ದು, ಗ್ರೋಕ್ (Grok AI) ಮೂಲಕ ಸೃಷ್ಟಿಯಾಗುತ್ತಿರುವ ಅಶ್ಲೀಲ ಕಂಟೆಂಟ್ ಅನ್ನು ಅಳಿಸಬೇಕೆಂದೂ ಮತ್ತು ಭಾರತೀಯ ಕಾನೂನು ನಿಯಮಗಳಿಗೆ ಬದ್ಧವಾಗಿರಬೇಕೆಂದೂ ಎಕ್ಸ್​ಗೆ ಸರ್ಕಾರ ತಿಳಿಸಿತ್ತು. ಇದರ ಬೆನ್ನಲ್ಲೇ ಎಕ್ಸ್ (ಹಿಂದಿನ ಟ್ವಿಟ್ಟರ್) ತನ್ನಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿದ್ದು, ಭಾರತೀಯ ಕಾನೂನಿಗೆ ಬದ್ಧವಾಗಿರುವುದಾಗಿ ಭರವಸೆ ನೀಡಿದೆ. ಸರ್ಕಾರದ…

Read More

Daily Devotional: ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಕಸ ಯಾವ ದಿಕ್ಕಿನಿಂದ ಗುಡಿಸಲು ಶುರು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕಸವನ್ನು ಗುಡಿಸುವ ದಿಕ್ಕು ಮುಖ್ಯವಾಗುತ್ತದೆ. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಧನಯೋಗ ನೆಲಸಬೇಕಾದರೆ, ಈಶಾನ್ಯ ದಿಕ್ಕಿನಿಂದ ಕಸ ಗುಡಿಸಲು ಪ್ರಾರಂಭಿಸಬೇಕು. ನಂತರ ಆಗ್ನೇಯದ ಕಡೆಗೆ ಸಾಗಿ, ವಾಯುವ್ಯ ದಿಕ್ಕಿನ ಮೂಲಕ ನೈರುತ್ಯ ದಿಕ್ಕಿನಲ್ಲಿ ಕಸ ಗುಡಿಸುವುದನ್ನು ಪೂರ್ಣಗೊಳಿಸಬೇಕು. ಈ ವಿಧಾನವು ಮನೆಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡುವುದರಿಂದ ಆರ್ಥಿಕ ಹರಿವಿನಲ್ಲಿ ಅನುಭವಿಸುತ್ತಿರುವ ಅಸ್ಥಿರತೆ ಸಮಸ್ಯೆ ನಿವಾರಣೆ ಆಗುತ್ತದೆ. ದೀರ್ಘ ಕಾಲದಿಂದ ಬರಬೇಕಾದ ಹಣವೇನಾದರೂ ಬಾಕಿ ಉಳಿದಿದ್ದಲ್ಲಿ ಅದು ನಿಮ್ಮ ಕೈ ಸೇರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ…

Read More

ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು: ಎದೆಯ ಮೇಲೆ ಯುವಕನ ಹೆಸರು ಹಚ್ಚೆ ಹಾಕಿಸಿಕೊಂಡಿದ್ದೇ ಕಾರಣವಾಯ್ತಾ? – Kannada News | Chikkaballapur Tragedy: Newlywed Woman Commits Suicide Over Tattoo Dispute and Dowry Harassment; Husband Arrested

ಪ್ರೇಮಾ ಹಾಗೂ ಶಿವಕುಮಾರ್Image Credit source: tv9 ಚಿಕ್ಕಬಳ್ಳಾಪುರ, ಮೇ 2: ಮದುವೆಯಾದ ಮೊದಲ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ಮೇ 15ಕ್ಕೆ ಮದುವೆಯ ಸಂಭ್ರಮ ಆಚರಿಸಬೇಕಿದ್ದ ಮನೆ ಈಗ ಸ್ಮಶಾನ ಸದೃಶವಾಗಿದೆ. ಪ್ರಕರಣದ ಹಿನ್ನೆಲೆ ಗೌರಿಬಿದನೂರು ಮೂಲದ ಶಕುಂತಲಾ ಎಂಬುವರ ಪುತ್ರಿ ಪ್ರೇಮಾ ಹಾಗೂ ಶಿಡ್ಲಘಟ್ಟದ ಜಂಗಮಕೋಟೆಯ ಶಿವಕುಮಾರ್ ಪರಸ್ಪರ ಸಂಬಂಧಿಕರು. ಪ್ರೇಮಾಳನ್ನು ಶಿವಕುಮಾರ್ ಕಾಡಿ ಬೇಡಿ…

Read More