Headlines

ಐಪಿಎಲ್​ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೈ ಜೋಡಿಸಿ: ECB ಬಿಗ್ ಆಫರ್ – Kannada News | New England Coach Can Job Share With IPL, Confirms ECB

ಬ್ರೆಂಡನ್ ಮೆಕಲಮ್ ಅವರನ್ನು ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಳಿಸಿರುವ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB), ಇದೀಗ ಹೊಸ ಮುಖ್ಯ ತರಬೇತುದಾರರ ಹುಡುಕಾಟ ಆರಂಭಿಸಿದೆ. ಈ ಹುಡುಕಾಟದ ಬೆನ್ನಲ್ಲೇ ಇಸಿಬಿ, ಹೊಸ ಕೋಚ್ ಆಗಲಿರುವವರಿಗೆ ಬಿಗ್ ಆಫರ್ ಒಂದನ್ನು ಮುಂದಿಟ್ಟಿದೆ. ಆ ಆಫರ್ ಏನೆಂದರೆ ಐಪಿಎಲ್​ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೆಲಸ ಮಾಡಿ ಎಂಬುದು. ಇಸಿಬಿ ಬಿಗ್ ಆಫರ್: ಇಂಗ್ಲೆಂಡ್ ಟೆಸ್ಟ್​ ತಂಡದ ಹೊಸ ಕೋಚ್ ಆಗುವವರು, ಐಪಿಎಲ್‌ನಲ್ಲೂ ಮುಕ್ತವಾಗಿ ಕಾರ್ಯನಿರ್ವಹಿಸಬಹುದು ಎಂದು…

Read More

ದೀಪಿಕಾ ನನಗೆ ಪ್ರಪೋಸ್ ಮಾಡಿದ್ರು ಎಂದು ಹೇಳಿ ಈಗ ಉಲ್ಟಾ ಹೊಡೆದ ನಟ – Kannada News | Deepika Padukone Controversy: Muzammil Ibrahim Clarifies Viral Proposal Video

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ರಿಲೇಶನ್​​ಶಿಪ್​ ವಿಷಯಕ್ಕೆ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ರಣವೀರ್​ ಸಿಂಗ್ ಪ್ರೀತಿಸುವುದಕ್ಕೂ ಮೊದಲು ಕೆಲವರ ಜೊತೆ ಡೇಟ್ ಮಾಡಿದ್ದರು ಎಂಬ ಆರೋಪ ಇದೆ. ಇದಕ್ಕೆ ಪೂರಕವಾಗಿ ನಟ ಮುಜಮ್ಮಿಲ್ ಇಬ್ರಾಹಿಂ ಹೇಳಿಕೆ ನೀಡಿದ್ದರು. ವರ್ಷದ ಬಳಿಕ ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. 2025ರಲ್ಲಿ ಸಿದ್ಧಾರ್ಥ್ ಕಣ್ಣನ್ ಜೊತೆ ಅವರು ನಡೆಸಿದ್ದ ಸಂದರ್ಶನದ ತುಣುಕುಗಳು ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ತೀವ್ರ ಟೀಕೆಗೆ ಒಳಗಾಗಿದ್ದವು. ಆ…

Read More

ಪಾಲಕರೇ ಗಮನಿಸಿ: ಮಕ್ಕಳಲ್ಲಿ ಹೆಚ್ಚುತ್ತಿದೆ ‘ಕೈ, ಕಾಲು, ಬಾಯಿ’ ಸೋಂಕು! – Kannada News | Hand, Foot, and Mouth Disease Spreads Among Children in Hubballi Dharwad; Doctors Issue Advisory

ಮಕ್ಕಳಲ್ಲಿ ಹೆಚ್ಚಾದ ಕೈ, ಕಾಲು, ಬಾಯಿ ರೋಗ ಹುಬ್ಬಳ್ಳಿ, ಜುಲೈ 14: ರಾಜ್ಯದಲ್ಲಿ ಹವಾಮಾನ ವೈಪರೀತ್ಯಕ್ಕೆ ಇತ್ತೀಚೆಗೆ ಹಲವು ರೋಗಗಳು ಬರುತ್ತಿವೆ. ಮಲೆನಾಡು, ಕರಾವಳಿಯಲ್ಲಿ ಮುಂಗಾರು ಮಳೆಯ ಆರ್ಭಟವಿದ್ದರೆ, ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳು ಮಳೆ-ಬೆಳೆ ಇಲ್ಲದೆ ತತ್ತರಿಸುತ್ತಿವೆ. ಇದರ ಪರಿಣಾಮವಾಗಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿದ್ದು, ಪ್ರಮುಖವಾಗಿ ಐದು ವರ್ಷದೊಳಗಿನ ಮಕ್ಕಳಲ್ಲಿ ತೀವ್ರವಾಗಿ ಹರಡುತ್ತಿರುವಕೈ, ಕಾಲು ಮತ್ತು ಬಾಯಿ ರೋಗ (HFMD) ಈಗ ಪಾಲಕರಲ್ಲಿ ಭೀತಿ ಮೂಡಿಸಿದೆ. ಚಿಕನ್ ಪಾಕ್ಸ್ ಅಲ್ಲ, ಇದು HFMD! ಸಾಮಾನ್ಯವಾಗಿ ಈ…

Read More

ಫ್ರಾನ್ಸ್​ vs ಸ್ಪೇನ್ ಅಲ್ಲ, ರಿಯಲ್ ಮ್ಯಾಡ್ರಿಡ್ vs ಬಾರ್ಸಿಲೋನಾ! – Kannada News | FIFA World Cup 2026: Forget France vs Spain, This is Real Madrid vs Barcelona

FIFA World Cup 2026: ಫ್ರಾನ್ಸ್ ಮತ್ತು ಸ್ಪೇನ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವುಅಂತಾರಾಷ್ಟ್ರೀಯ ಮಟ್ಟದ ‘ಎಲ್ ಕ್ಲಾಸಿಕೊ’  ಕದನವಾಗಿ  ಬಿಂಬಿತವಾಗಿದೆ. ಇದಕ್ಕೆ ಮುಖ್ಯ ಕಾರಣ ರಿಯಲ್ ಮ್ಯಾಡ್ರಿಡ್​ನ ಕಿಲಿಯನ್ ಎಂಬಾಪೆ ಹಾಗೂ ಬಾರ್ಸಿಲೋನಾ ತಂಡದ ಲಾಮಿನ್ ಯಮಾಲ್ ಮುಖಾಮುಖಿಯಾಗುತ್ತಿರುವುದು. ರಿಯಲ್ ಮ್ಯಾಡ್ರಿಡ್ vs ಬಾರ್ಸಿಲೋನಾ: ಲಾ ಲಿಗಾ ಅಂಗಳದ ಬದ್ದ ವೈರಿಗಳಾದ ರಿಯಲ್ ಮ್ಯಾಡ್ರಿಡ್ ಮತ್ತು ಬಾರ್ಸಿಲೋನಾ ತಂಡಗಳು ವಿಭಿನ್ನ ಶೈಲಿಯ ಆಟಕ್ಕೆ ಹೆಸರುವಾಸಿ. ಈ ಆಟದ ಶೈಲಿಯಲ್ಲೇ ಇದೀಘ ಫ್ರಾನ್ಸ್ ಹಾಗೂ ಸ್ಪೇನ್ ತಂಡಗಳು…

Read More

ವಿಯೆಟ್ನಾಂ ಸ್ಪೀಡ್ ಬೋಟ್ ದುರಂತ: ಮುಂಬೈಗೆ ಬಂದಿಳಿದ 15 ಭಾರತೀಯರ ಮೃತದೇಹಗಳ ಹೊತ್ತ ವಿಮಾನ – Kannada News | Vietnam Speedboat Tragedy: 15 Indian Victims’ Bodies Arrive in Mumbai; Travel Safety Concerns

ಮುಂಬೈ, ಜುಲೈ 14: ವಿಯೆಟ್ನಾಂ ದೇಶದ ಸುಂದರ ದ್ವೀಪದಲ್ಲಿ ಕಳೆದ ವಾರ ನಡೆದ ಭೀಕರ ಸ್ಪೀಡ್‌ಬೋಟ್ ಅಪಘಾತದಲ್ಲಿ ಜಲಸಮಾಧಿಯಾಗಿದ್ದ 15 ಭಾರತೀಯ ಪ್ರವಾಸಿಗರ ಮೃತದೇಹಗಳನ್ನು ಸೋಮವಾರ ರಾತ್ರಿ ಕೊನೆಗೂ ಭಾರತಕ್ಕೆ ತರಲಾಗಿದೆ. ವಿಯೆಟ್ನಾಂ ಏರ್‌ಲೈನ್ಸ್‌ನ ವಿಶೇಷ ವಿಮಾನ (VN 979) ರಾತ್ರಿ 9.19 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅಲ್ಲಿ ಬಂದಿದ್ದ  ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತ 15 ದುರ್ದೈವಿಗಳಲ್ಲಿ ಇಬ್ಬರು ಮಹಿಳೆಯರಿದ್ದಾರೆ. ಇವರಲ್ಲಿ 10 ಮಂದಿ ತಮಿಳುನಾಡಿನವರು, ಮೂವರು…

Read More

ಬಂಕಿಪುರ ಉಪಚುನಾವಣೆ : ಪ್ರಶಾಂತ್ ಕಿಶೋರ್ ಕುಟುಂಬದ ಒಟ್ಟು ಆಸ್ತಿ 198 ಕೋಟಿ ರೂ.ಗೂ ಅಧಿಕ! – Kannada News | Prashant Kishor’s Rs198 Crore Assets Declared for Bankipur By Election Nomination

ಪಾಟ್ನಾ, ಜುಲೈ 14: ಚುನಾವಣಾ ರಾಜಕೀಯಕ್ಕೆ ಪ್ರಥಮ ಬಾರಿಗೆ ನೇರವಾಗಿ ಧುಮುಕಿರುವ ಪ್ರಶಾಂತ್ ಕಿಶೋರ್(Prashanth Kishor), ಜುಲೈ 30ರಂದು ನಡೆಯಲಿರುವ ಬಂಕಿಪುರ ವಿಧಾನಸಭಾ ಉಪ ಚುನಾವಣೆ(Assembly Election)ಗಾಗಿ ಸೋಮವಾರ ರೋಡ್ ಶೂ ಮಾಡಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ಪ್ರಶಾಂತ್ ಕಿಶೋರ್ ಹಾಗೂ ಅವರ ಪತ್ನಿ ಡಾ. ಜಹಾನ್ವಿ ದಾಸ್ ಅವರ ಒಟ್ಟು ಕುಟುಂಬದ ಆಸ್ತಿ ಮೌಲ್ಯ ಬರೋಬ್ಬರಿ 198 ಕೋಟಿ ರೂ.ಗೂ ಅಧಿಕ ಎಂದು ಘೋಷಿಸಲಾಗಿದೆ. ಅವರು…

Read More

Navagrahas in Temples: ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪ ಏಕೆ ಇರುವುದಿಲ್ಲ? ಇದರ ಹಿಂದಿನ ಆಧ್ಯಾತ್ಮಿಕ ಕಾರಣ ಇಲ್ಲಿದೆ – Kannada News | Navagrahas in Temples: Why Ancient Vaishnava Shrines Lack Them While Shiva Temples Don’t

ಹಿಂದೂ ಧರ್ಮದಲ್ಲಿ ನವಗ್ರಹಗಳಿಗೆ ವಿಶೇಷ ಮಹತ್ವವಿದೆ. ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು ಮತ್ತು ಕೇತು ಈ ಒಂಬತ್ತು ಗ್ರಹಗಳು ಮಾನವನ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಆದ್ದರಿಂದ ದೇವಾಲಯಗಳಿಗೆ ತೆರಳುವ ಅನೇಕ ಭಕ್ತರು ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಿ ಆಶೀರ್ವಾದ ಪಡೆಯುತ್ತಾರೆ. ಆದರೆ ಒಂದು ಕುತೂಹಲಕಾರಿ ವಿಷಯವೆಂದರೆ, ಅನೇಕ ಪ್ರಾಚೀನ ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪಗಳು ಕಾಣಿಸುವುದಿಲ್ಲ. ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪ ಇಲ್ಲದಿರಲು ಕಾರಣವೇನು? ಆಧ್ಯಾತ್ಮಿಕ…

Read More

ಉಡುಪಿ ಶ್ರೀಕೃಷ್ಣದಲ್ಲಿ ಆದಿ ಶಂಕರಾಚಾರ್ಯರ ನಿಂದನೆ ವಿವಾದ: ಕ್ಷಮೆ ಯಾಚಿಸಿದ ಹರಿಕಥೆ ಕಲಾವಿದೆ, ಶಿರೂರು ಮಠದಿಂದಲೂ ಸ್ಪಷ್ಟನೆ – Kannada News | Udupi Sri Krishna Mutt Adi Shankaracharya controversy: Harikatha Artist Apologises, Shirur Mutt Issues Clarification

ಹರಿಕಥೆ ಕಲಾವಿದೆ ಹಾಗೂ ಶಿರೂರು ಮಠದ ಸ್ಪಷ್ಟನೆImage Credit source: tv9 ಉಡುಪಿ, ಜುಲೈ 14: ಉಡುಪಿ  (Udupi) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಹರಿಕಥೆ ಕಲಾವಿದೆ ವಿಡಿಯೋ ಸಂದೇಶದ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಜೊತೆಗೆ, ಈ ವಿಚಾರದಲ್ಲಿ ಉಡುಪಿ ಮಠ ಅಥವಾ ಶಿರೂರು ಮಠಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಕಲಾವಿದೆ, ‘ಯಾರನ್ನೂ ನಿಂದಿಸುವ ಉದ್ದೇಶ ನಮಗಿರಲಿಲ್ಲ….

Read More

ಮಂಗಳೂರಿನಲ್ಲಿ ಮತ್ತೆ 11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ – Kannada News | 11 More Illegal Bangladeshi Immigrants Detained in Mangaluru During Police Crackdown; Total Reaches 17

11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನImage Credit source: Mangalore Police ಮಂಗಳೂರು, ಜುಲೈ 14: ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada)  ಮಂಗಳೂರು (Mangaluru) ನಗರದ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಇದರೊಂದಿಗೆ, ಕಳೆದ…

Read More

ಶಸ್ತ್ರಚಿಕಿತ್ಸೆ ಮಾಡದೆ ನಿರ್ಲಕ್ಷ್ಯ, ಮಹಿಳೆ ಸಾವು: ಜಯದೇವ ಹೃದ್ರೋಗ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ – Kannada News | Jayadeva Hospital Negligence Allegation: Family Claims 65 Year Old Woman Died After Delay in Heart Surgery

ಬೆಂಗಳೂರು, ಜುಲೈ 14: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವಿರುದ್ಧ ವೈದ್ಯಕೀಯ ನಿರ್ಲಕ್ಷ್ಯದ ಗಂಭೀರ ಆರೋಪ ಕೇಳಿಬಂದಿದೆ. 65 ವರ್ಷದ ಮಾಯಮ್ಮ ಎಂಬ ಮಹಿಳೆಗೆ ತುರ್ತು ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೂ, ಸಮಯಕ್ಕೆ ಚಿಕಿತ್ಸೆ ನೀಡದೆ ವಿಳಂಬ ಮಾಡಿದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರ ಪ್ರಕಾರ, ಕಳೆದ ಶುಕ್ರವಾರ ಮಾಯಮ್ಮ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ಬಳಿಕ ತಕ್ಷಣ ಓಪನ್ ಹಾರ್ಟ್ ಸರ್ಜರಿ ಅಗತ್ಯವಿದೆ…

Read More