Tirumala: ತಿರುಮಲದಲ್ಲಿ ‘ಕಪ್ಪು ಬಂಗಾರ’ದ ಹೊಸ ದಾಖಲೆ: ಕೇವಲ ಒಂದೇ ತಿಂಗಳಲ್ಲಿ ಮುಡಿ ಕೊಟ್ಟ ಭಕ್ತರೆಷ್ಟು ಗೊತ್ತಾ?

ತಿರುಮಲದಲ್ಲಿ ‘ಕಪ್ಪು ಬಂಗಾರ’ದ ಹೊಸ ದಾಖಲೆImage Credit source: Pinterest

ಕಲಿಯುಗದ ದೈವ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ತಿರುಮಲಕ್ಕೆ ಹರಿದುಬರುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. ಇದರೊಂದಿಗೆ, ಸ್ವಾಮಿಗೆ ಭಕ್ತರು ಅರ್ಪಿಸುವ ತಲೆಗೂದಲಿನ (ಮುಡಿಪು) ಪ್ರಮಾಣವೂ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ಟಿಟಿಡಿ (TTD) ಇತಿಹಾಸದಲ್ಲಿಯೇ ಅತ್ಯಂತ ಪ್ರಮುಖ ಆದಾಯದ ಮೂಲಗಳಲ್ಲಿ ಒಂದಾಗಿರುವ ಹಾಗೂ ‘ಕಪ್ಪು ಬಂಗಾರ’ (Black Gold) ಎಂದೇ ಕರೆಯಲ್ಪಡುವ ಈ ತಲೆಗೂದಲಿನ ಸಂಗ್ರಹ ಈ ವರ್ಷದ ಮೇ ತಿಂಗಳಲ್ಲಿ ಹಿಂದೆಂದೂ ಕಾಣದ ಮಟ್ಟಿಗೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ಮೇ ತಿಂಗಳಲ್ಲೇ ದಾಖಲೆ ಬರೆದ ಭಕ್ತರ ಮುಡಿ ಸೇವೆ:

ಬೇಸಿಗೆ ರಜೆ ಮತ್ತು ವಾರಾಂತ್ಯದ ಸರಣಿ ರಜೆಗಳ ಕಾರಣದಿಂದಾಗಿ ಮೇ ತಿಂಗಳಲ್ಲಿ ತಿರುಮಲದಲ್ಲಿ ಭಕ್ತರ ದಟ್ಟಣೆ ವಿಪರೀತವಾಗಿತ್ತು. ಟಿಟಿಡಿ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಮೇ 27ರ ಒಳಗೆ ಬರೋಬ್ಬರಿ 12,43,063 ಭಕ್ತರು ತಮ್ಮ ಮುಡಿಯನ್ನು ದೇವರಿಗೆ ಸಮರ್ಪಿಸಿ ಹರಕೆ ತೀರಿಸಿದ್ದಾರೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಮುಡಿಪು ಕೊಟ್ಟವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. 2024ರ ಮೇ ತಿಂಗಳಲ್ಲಿ 10,65,729 ಭಕ್ತರು ಹಾಗೂ 2025ರ ಮೇ ತಿಂಗಳಲ್ಲಿ 10,18,370 ಭಕ್ತರು ಮುಡಿಪು ಕೊಟ್ಟಿದ್ದರು. ಆದರೆ ಈ ಬಾರಿ ಕೇವಲ 27 ದಿನಗಳಲ್ಲೇ ಈ ಎರಡು ವರ್ಷಗಳ ದಾಖಲೆಯನ್ನು ದಾಟಿ ಮುನ್ನಡೆದಿದೆ.

ಮೇ 23 ರಂದು ಸೃಷ್ಟಿಯಾಯಿತು ಸಾರ್ವಕಾಲಿಕ ದಾಖಲೆ:

ಮೇ ತಿಂಗಳ ಮೂರನೇ ವಾರದಲ್ಲಿ ಜನದಟ್ಟನೆ ಯಾವ ಮಟ್ಟಿಗಿತ್ತೆಂದರೆ, ಮೇ 18 ರಿಂದ ಮೇ 23 ರವರೆಗೆ ಸರಣಿಯಾಗಿ ಆರು ದಿನಗಳ ಕಾಲ ಪ್ರತಿದಿನ 50 ಸಾವಿರಕ್ಕೂ ಅಧಿಕ ಭಕ್ತರು ಮುಡಿಪು ಕೊಟ್ಟಿದ್ದಾರೆ. ಅದರಲ್ಲೂ ವಿಶೇಷವಾಗಿ ಮೇ 23 ರಂದು ಒಂದೇ ದಿನ ಬರೋಬ್ಬರಿ 57,580 ಭಕ್ತರು ತಲೆನೀಲಾಲ (ಮುಡಿ) ಸಮರ್ಪಿಸುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದ್ದಾರೆ. ಭಕ್ತರನ್ನು ನಿಭಾಯಿಸಲು ಮತ್ತು ಅವರು ಕಾಯುವ ಸಮಯವನ್ನು ಕಡಿಮೆ ಮಾಡಲು ತಿರುಮಲ ತಿರುಪತಿ ದೇವಸ್ಥಾನವು ಹಗಲು-ರಾತ್ರಿ ನಿರಂತರವಾಗಿ ಕಲ್ಯಾಣಕಟ್ಟೆಗಳಲ್ಲಿ ಸೇವೆಯನ್ನು ಒದಗಿಸಿದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಭಕ್ತರ ಅನುಕೂಲಕ್ಕಾಗಿ 11 ಉಪ-ಕಲ್ಯಾಣಕಟ್ಟೆಗಳ ವ್ಯವಸ್ಥೆ:

ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸುಲಭವಾಗಿ ಮುಡಿಪು ಕೊಡಲು ಟಿಟಿಡಿ ತಿರುಮಲದಾದ್ಯಂತ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ. ಮುಖ್ಯ ಕಲ್ಯಾಣಕಟ್ಟೆಯ ಜೊತೆಗೆ ಪಿಎಸಿ-1, ಪಿಎಸಿ-2, ಪಿಎಸಿ-3, ಪಿಎಸಿ-5 (PAC centers), ಜಿಎನ್‌ಸಿ, ಎಚ್‌ವಿಸಿ ಸೇರಿದಂತೆ ಸಪ್ತಗಿರಿ, ನಂದಕಂ, ಕೌಸ್ತುಭಂ, ಶ್ರೀ ವೆಂಕಟೇಶ್ವರ, ಶ್ರೀ ಪದ್ಮಾವತಿ ಮತ್ತು ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಗಳ ಬಳಿ ಒಟ್ಟು 11 ಸಣ್ಣ ಮುಡಿಪು ಕೇಂದ್ರಗಳನ್ನು (Mini Kalyanakattas) ಲಭ್ಯವಾಗಿಸಿದೆ. ಈ ಕೇಂದ್ರಗಳಲ್ಲಿ ಒಟ್ಟು 1,152 ಕ್ಷೌರಿಕರು (ಸಿಬ್ಬಂದಿ) ಭಕ್ತರಿಗೆ ಅತ್ಯಂತ ಭಕ್ತಿ ಭಾವದಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ.

ಟಿಟಿಡಿಗೆ ‘ಕಪ್ಪು ಬಂಗಾರ’ದಿಂದ ಕೋಟ್ಯಂತರ ರೂಪಾಯಿ ಆದಾಯ:

ತಿರುಮಲದಲ್ಲಿ ಭಕ್ತರು ಭಕ್ತಿಯಿಂದ ಸಮರ್ಪಿಸುವ ಈ ತಲೆಗೂದಲನ್ನು ಅತ್ಯಂತ ಜಾಗರೂಕತೆಯಿಂದ ವರ್ಗೀಕರಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಇ-ಹರಾಜು (e-Auction) ಮಾಡಲಾಗುತ್ತದೆ. ಗುಣಮಟ್ಟಕ್ಕೆ ಅನುಗುಣವಾಗಿ ಕೂದಲನ್ನು ವಿವಿಧ ಗ್ರೇಡ್‌ಗಳಾಗಿ ವಿಂಗಡಿಸಿ ಮಾರಾಟ ಮಾಡುವುದರಿಂದ ಟಿಟಿಡಿಗೆ ವಾರ್ಷಿಕವಾಗಿ ನೂರಾರು ಕೋಟಿ ರೂಪಾಯಿಗಳ ಆದಾಯ ಹರಿದುಬರುತ್ತದೆ. ತಿರುಪತಿ ತಿಮ್ಮಪ್ಪನಿಗೆ ಭಕ್ತರು ನೀಡುವ ಈ ವಿಶಿಷ್ಟ ಕಾಣಿಕೆಯೇ ದೇವಸ್ಥಾನದ ಬೊಕ್ಕಸ ತುಂಬಿಸುವ ಪ್ರಮುಖ ‘ಕಪ್ಪು ಬಂಗಾರ’ವಾಗಿ ಮಾರ್ಪಟ್ಟಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:02 pm, Fri, 29 May 26

Source link

ತಮಿಳು ಸ್ಟಾರ್ ನಟನ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿ

ಕನ್ನಡದ ನಟಿಯರು ತಮ್ಮ ಪ್ರತಿಭೆ, ಸೌಂದರ್ಯದಿಂದಾಗಿ ಪರಭಾಷೆಗಳಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಈಗಾಗಲೇ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಕನ್ನಡತಿ ಶ್ರೀಲೀಲಾ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಶ್ರದ್ಧಾ ಶ್ರೀನಾಥ್, ಶ್ರೀನಿಧಿ ಶೆಟ್ಟಿ ಇನ್ನೂ ಕೆಲವರು ಸಹ ಪರಭಾಷೆಗಳಲ್ಲಿ ಬಹಳ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದು, ಗಮನ ಸೆಳೆಯುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಮೂಲಕ ತಮ್ಮ ಪ್ರತಿಭೆಯ ಅನಾವರಣ ಮಾಡಿದ ರುಕ್ಮಿಣಿ ವಸಂತ್ ಸಹ ಇದೀಗ ಪ್ಯಾನ್ ಇಂಡಿಯಾ ನಟಿಯಾಗುವ ಹಂತದಲ್ಲಿದ್ದಾರೆ.

ಈಗಾಗಲೇ ಕನ್ನಡದ ಹೊರತಾಗಿ ಕೆಲ ಪರಭಾಷೆ ಸಿನಿಮಾಗಳಲ್ಲಿಯೂ ನಟಿಸಿರುವ ರುಕ್ಮಿಣಿ ವಸಂತ್, ಇದೀಗ ತಮಿಳಿನ ಸ್ಟಾರ್ ನಟರೊಬ್ಬರ 50ನೇ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈಗಾಗಲೆ ತೆಲುಗಿನ ಜೂ ಎನ್​​ಟಿಆರ್ ಜೊತೆಗೆ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿರುವ ರುಕ್ಮಿಣಿ ವಸಂತ್, ಇದೀಗ ತಮಿಳಿನ ಸ್ಟಾರ್ ನಟನ ಜೊತೆ ನಟಿಸುವ ಅವಕಾಶ ಬಾಚಿಕೊಂಡಿದ್ದಾರೆ.

ತಮಿಳಿನ ಸ್ಟಾರ್ ನಟ ಸೂರ್ಯ ನಟನೆಯ ‘ಕರುಪ್ಪು’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದೆ. ಇದೀಗ ಅವರು ತಮ್ಮ 50ನೇ ಸಿನಿಮಾದ ತಯಾರಿಯಲ್ಲಿದ್ದಾರೆ. ವೃತ್ತಿ ಜೀವನದ 50ನೇ ಸಿನಿಮಾ ಆಗಿರುವ ಕಾರಣಕ್ಕೆ ಸಿನಿಮಾ ವಿಶೇಷವಾಗಿರಬೇಕು ಎಂಬ ಕಾಳಜಿ ಸೂರ್ಯ ಅವರಿಗಿದ್ದು, ವಿಶೇಷ ಕತೆಯೊಂದನ್ನು ಸಿನಿಮಾಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಈ ಸಿನಿಮಾಕ್ಕೆ ಬಂಡವಾಳ ಹೂಡುತ್ತಿರುವುದು ಕೆವಿಎನ್ ಪ್ರೊಡಕ್ಷನ್ಸ್​.

ಇದನ್ನೂ ಓದಿ:ಕೃತಿ ಸನೋನ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ರಶ್ಮಿಕಾ ಮಂದಣ್ಣ

ಸೂರ್ಯ ಅವರ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಸೂರ್ಯ ನಟಿಸಿದ್ದ ಬ್ಲಾಕ್ ಬಸ್ಟರ್ ಸಿನಿಮಾ ‘24’ ನಿರ್ದೇಶಿಸಿದ್ದ ವಿಕ್ರಂ ಅವರೇ ಸೂರ್ಯ ಅವರ 50ನೇ ಸಿನಿಮಾ ನಿರ್ದೇಶಿಸಲಿದ್ದು, ಈ ಸಿನಿಮಾನಲ್ಲಿ ವಿಲನ್ ಆಗಿ ಬಾಲಿವುಡ್ ನಟ ಅಕ್ಷಯ್ ಖನ್ನಾ ನಟಿಸಲಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಲಿದ್ದು, ಕೆವಿಎನ್ ಪ್ರೊಡಕ್ಷನ್ಸ್​​ನವರು ಭಾರಿ ಬಜೆಟ್​​ ಹಾಕಿ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಶೀಘ್ರವೇ ಈ ಸಿನಿಮಾದ ಅಧಿಕೃತ ಘೋಷಣೆ ಹೊರಬೀಳಲಿದ್ದು, ಸಿನಿಮಾದ ಚಿತ್ರೀಕರಣವೂ ಶುರುವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್​ ಕಣ್ಣೀರು

ದಾವಣಗೆರೆ, ಮೇ 29: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆ ದಾವಣಗೆರೆಯಲ್ಲಿ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್​ ಕಣ್ಣೀರು ಹಾಕಿದ್ದಾರೆ. ಸಿದ್ದರಾಮಯ್ಯರನ್ನು ಕಳೆದ 2-3 ದಿನಗಳಿಂದ ನೋಡಲು ಆಗುತ್ತಿಲ್ಲ. ಅವರು ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋದ ನಾಯಕರಾಗಿದ್ದು, ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ. ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ ಹಿನ್ನೆಲೆ ಸಂಪುಟ ವಿಸರ್ಜನೆಗೊಂಡಿದ್ದು, ಡಿ.ಕೆ.ಶಿವಕುಮಾರ್ ನೂತನ​ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಈ ವೇಳೆ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ರೇಸ್ ಕೋರ್ಸ್ ರಸ್ತೆ ಕಾಮಗಾರಿ: 8 ತಿಂಗಳಾದರೂ ಮುಗಿಯದ ಕೆಲಸಕ್ಕೆ ಸಾರ್ವಜನಿಕರ ಹಿಡಿಶಾಪ!

ರೇಸ್ ಕೋರ್ಸ್ ರಸ್ತೆಯಲ್ಲಿ ಕಾಮಗಾರಿ

ಬೆಂಗಳೂರು, ಮೇ 29: ನಗರದ ರಸ್ತೆ ಕಾಮಗಾರಿಗಳು ಸಾರ್ವಜನಿಕರ ತಾಳ್ಮೆ ಪರೀಕ್ಷೆ ಮಾಡುವುದು ಹೊಸದೇನಲ್ಲ. ಇದಕ್ಕೆ ಮತ್ತೊಂದು ತಾಜಾ ಸಾಕ್ಷಿ ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ರಸ್ತೆ. ಜಿಬಿಎ (GBA) ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಇಲ್ಲಿನ ರಸ್ತೆ ಕಾಮಗಾರಿ ಆರಂಭವಾಗಿ ಬರೋಬ್ಬರಿ 8 ತಿಂಗಳು ಕಳೆದರೂ ಇನ್ನು ಪೂರ್ಣಗೊಂಡಿಲ್ಲ. ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಖ್ಯಾಂಶಗಳು

  • ರೇಸ್ ಕೋರ್ಸ್ ರಸ್ತೆ ಕಾಮಗಾರಿ ಎಂಟು ತಿಂಗಳಾದರೂ ಮುಗಿಯದೆ ಆಮೆಗತಿಯಲ್ಲಿ ಸಾಗುತ್ತಿದೆ.

  • ಯಾವುದೇ ಮುಂಜಾಗ್ರತಾ ಸುರಕ್ಷತಾ ಬ್ಯಾರಿಕೇಡ್‌ಗಳಿಲ್ಲದೆ ನಿರಂತರವಾಗಿ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ.

  • ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ.

ಆಮೆಗತಿಯ ಕಾಮಗಾರಿ

ಬೆಂಗಳೂರಿನ ಅತ್ಯಂತ ಪ್ರಮುಖ ಹಾಗೂ ವಿಐಪಿಗಳು ಹೆಚ್ಚಾಗಿ ಓಡಾಡುವ ರೇಸ್ ಕೋರ್ಸ್ ರಸ್ತೆಯ ಸದ್ಯದ ಪರಿಸ್ಥಿತಿ ಅಧೋಗತಿಗೆ ತಲುಪಿದೆ. ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ಮಾರ್ಗದಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ಕೆಲಸದಿಂದಾಗಿ ಸಂಚಾರ ಮಾಡುವುದೇ ಸವಾರರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ರಸ್ತೆ ತುಂಬೆಲ್ಲಾ ಹರಡಿರುವ ಧೂಳಿನಿಂದಾಗಿ ಪಾದಚಾರಿಗಳು ಮುಖ ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಸವಾರರು ಆಯತಪ್ಪಿ ಬಿದ್ದು ಸಣ್ಣಪುಟ್ಟ ಅಪಘಾತಗಳು ಇಲ್ಲಿ ನಿರಂತರವಾಗಿ ಸಂಭವಿಸುತ್ತಿವೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಕಾಮಗಾರಿ ತಡವಾಗುತ್ತಿರುವುದು ಒಂದು ಕಡೆಯಾದರೆ, ಗುತ್ತಿಗೆದಾರರು ಮತ್ತು ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇಷ್ಟೊಂದು ದೊಡ್ಡ ಮಟ್ಟದ ಅಗೆತದ ಕೆಲಸ ನಡೆಯುತ್ತಿದ್ದರೂ ರಸ್ತೆಯಲ್ಲಿ ಯಾವುದೇ ರೀತಿಯ ಸುರಕ್ಷತಾ ಬ್ಯಾರಿಕೇಡ್‌ಗಳನ್ನಾಗಲಿ ಅಥವಾ ಸೂಚನಾ ಫಲಕಗಳನ್ನಾಗಲಿ ಅಳವಡಿಸಿಲ್ಲ.

ಅಭಿವೃದ್ಧಿ ಹೆಸರಲ್ಲಿ ಕಾಮಗಾರಿ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಕನಿಷ್ಠ ಪಕ್ಷ ರಾತ್ರಿ ವೇಳೆ ಕಾಣಿಸುವಂತಹ ರಿಫ್ಲೆಕ್ಟಿವ್ ಬ್ಯಾರಿಕೇಡ್‌ಗಳನ್ನು ಹಾಕಬೇಕಲ್ಲವೇ? ಅಧಿಕಾರಿಗಳ ಈ ಉದಾಸೀನತೆ ಜನರ ಪ್ರಾಣಕ್ಕೆ ಸಂಚಕಾರ ತರುತ್ತಿದೆ” ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಆಮೆಗತಿಯ ಕೆಲಸ ಮತ್ತು ಅಧಿಕಾರಿಗಳ ಸುರಕ್ಷತೆಯ ಉದಾಸೀನತೆ ಅವರ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. ಇನ್ನಾದರೂ ಸಂಬಂಧಪಟ್ಟ ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳು ಎಚ್ಚೆತ್ತುಕೊಂಡು, ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾಮಗಾರಿಯನ್ನು ಮುಗಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ವರದಿ: ಅರುಣ್ ಕುಮಾರ್, ಟಿವಿ9, ಬೆಂಗಳೂರು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಬೆಂಗಳೂರು, ಮೇ.29: ಸತೀಶ್ ಜಾರಕಿಹೊಳಿ ಅವರ ಹೇಳಿಕೆಯ ಪ್ರಕಾರ, ಹೈಕಮಾಂಡ್ ತೀರ್ಮಾನದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ರಾಜಕೀಯದಲ್ಲಿ ಅಧಿಕಾರದಿಂದ ಕೆಳಗಿಳಿಯುವುದು ಸಹಜ ಪ್ರಕ್ರಿಯೆ. ಹೈಕಮಾಂಡ್‌ನೊಂದಿಗೆ ಮಾಡಿಕೊಂಡ ಒಪ್ಪಂದದ ಪ್ರಕಾರವೇ ಸಿದ್ದರಾಮಯ್ಯ ತಮ್ಮ ಕರ್ತವ್ಯವನ್ನು ಪೂರೈಸಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಜಾಗದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜಕೀಯದಲ್ಲಿ ಒಬ್ಬರು ಹೋಗುತ್ತಾರೆ, ಮತ್ತೊಬ್ಬರು ಬರುತ್ತಾರೆ ಎಂಬುದು ಸಹಜ. ಪಕ್ಷದ ಹಿತಾಸಕ್ತಿಗಾಗಿ ಹೋದವರು ಮತ್ತು ಬರುವವರು ಸೇರಿದಂತೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಸಿದ್ಧರಾಮಯ್ಯ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ರಾಜೀನಾಮೆ ನೀಡುವುದು ಮತ್ತು ಹೊಸಬರು ಅಧಿಕಾರಕ್ಕೆ ಬರುವುದು ರಾಜಕೀಯದಲ್ಲಿ ಹೊಸತೇನಲ್ಲ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕ ರಾಜಕೀಯದಲ್ಲಿ ಮತ್ತಷ್ಟು ಬೆಳವಣಿಗೆಗಳಾಗುವ ನಿರೀಕ್ಷೆಯಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಬಿಜೆಪಿ ಬಾಗಿಲು ತಟ್ಟಿದ್ದ ಕೆಲ ಕಾಂಗ್ರೆಸಿಗರು!

ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ವರಿಷ್ಠರಿಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಬಂಡಾಯದ ಭೀತಿ ಕಾಡಿತ್ತು. ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಾಯಕರ ಸಂಪರ್ಕಿಸಲು ಕೆಲ ಕಾಂಗ್ರೆಸಿಗರು ಯತ್ನಿಸಿದ್ದ ಸುದ್ದಿ ತಿಳಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆಯನ್ನು ಕಾಂಗ್ರೆಸ್​​ ಹೈಕಮಾಂಡ್​​ ಸೂಕ್ಷ್ಮವಾಗಿ ಗಮನಿಸಿತ್ತು. ಮಂಗಳವಾರದ ರಾತ್ರಿಯಿಂದ ಒತ್ತಡದಲ್ಲಿದ್ದ ಹೈಕಮಾಂಡ್ ನಾಯಕರು ಅದಕ್ಕಾಗಿಯೇ ರಣದೀಪ್​ ಸುರ್ಜೇವಾಲ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದರು. ಕಾಂಗ್ರೆಸ್ ಶಾಸಕರ ಚಲನವಲನದ ಮೇಲೆ ಕಣ್ಣಿಟ್ಟಿಡುವ ಜೊತೆಗೆ ರಾಜೀನಾಮೆ ಬಳಿಕ ಸಿದ್ದರಾಮಯ್ಯರನ್ನು ದೆಹಲಿಗೆ ಕರೆತರುವಂತೆ ಸುರ್ಜೇವಾಲಾಗೆ ಸೂಚನೆ ನೀಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಜೊತೆಯಲ್ಲೇ ಸುರ್ಜೇವಾಲ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಾಧುರಿ ದೀಕ್ಷಿತ್​​ಗೂ ಕಾಡಿತು ಎಐ ವಿಡಿಯೋ ಕಾಟ

ಬಾಲಿವುಡ್‌ನ ಧಕ್ ಧಕ್ ಗರ್ಲ್ ಮಾಧುರಿ ದೀಕ್ಷಿತ್ ಅವರದ್ದೇ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾಧುರಿ ಅವರು ಅತ್ಯಂತ ಗ್ಲಾಮರಸ್ ಹಾಗೂ ಬೋಲ್ಡ್ ಆದ ಕಪ್ಪು ಬಣ್ಣದ ಸ್ಲಿಟ್ ಗೌನ್ ಧರಿಸಿ ಕುಳಿತಿರುವಂತೆ ಈ ವಿಡಿಯೋದಲ್ಲಿ ಬಿಂಬಿಸಲಾಗಿದೆ. ಇದನ್ನು ನೋಡಿದ ಅನೇಕ ಅಭಿಮಾನಿಗಳು ಮತ್ತು ನೆಟ್ಟಿಗರು ಇದು ನಿಜವಾದ ವಿಡಿಯೋ ಎಂದುಕೊಂಡು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ. ಆದರೆ, ಈ ವಿಡಿಯೋದ ಹಿಂದಿರುವ ಅಸಲಿ ಸತ್ಯವೇ ಬೇರೆ.

ಸದ್ಯ ಹರಿದಾಡುತ್ತಿರುವ ಮಾಧುರಿ ದೀಕ್ಷಿತ್ ಅವರ ಈ ವಿಡಿಯೋ ಸಂಪೂರ್ಣವಾಗಿ ಫೇಕ್ ಆಗಿದೆ. ಆಧುನಿಕ ತಂತ್ರಜ್ಞಾನವಾದ ಡೀಪ್‌ಫೇಕ್ ಬಳಸಿ ಬೇರೊಬ್ಬ ನಟಿಯ ದೇಹಕ್ಕೆ ಮಾಧುರಿ ದೀಕ್ಷಿತ್ ಅವರ ಮುಖವನ್ನು ಎಡಿಟ್ ಮಾಡಲಾಗಿದೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ಈ ವಿಡಿಯೋ ಎಷ್ಟು ನೈಜವಾಗಿ ಮೂಡಿಬಂದಿದೆಯೆಂದರೆ, ಮೊದಲ ನೋಟಕ್ಕೆ ಇದು ನಕಲಿ ಎಂದು ಪತ್ತೆಹಚ್ಚುವುದು ಸಾಮಾನ್ಯ ಜನರಿಗೆ ಅಸಾಧ್ಯವಾಗಿದೆ.

ಈ ವಿಡಿಯೋದಲ್ಲಿ ಇರುವುದು ಬಾಲಿವುಡ್‌ನ ಮತ್ತೊಬ್ಬ ಗ್ಲಾಮರಸ್ ನಟಿ ಭಾಗ್ಯಶ್ರೀ ಬೋರ್ಸೆ. ಪ್ರಶಸ್ತಿ ಸಮಾರಂಭವೊಂದರಲ್ಲಿ ಭಾಗ್ಯಶ್ರೀ ಅವರು ಧರಿಸಿದ್ದ ಬೋಲ್ಡ್ ಉಡುಪಿನ ವಿಡಿಯೋವನ್ನು ಕೆಲವರು ಎಡಿಟ್ ಮಾಡಿದ್ದಾರೆ. ತಂತ್ರಜ್ಞಾನದ ಸಹಾಯದಿಂದ ಭಾಗ್ಯಶ್ರೀ ಅವರ ಮುಖದ ಜಾಗಕ್ಕೆ ಮಾಧುರಿ ದೀಕ್ಷಿತ್ ಅವರ ಮುಖವನ್ನು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ.

ಇದನ್ನೂ ಓದಿ: ಸೀರಿಯಲ್ ಕಿಲ್ಲರ್ ಆದ ಮಾಧುರಿ ದೀಕ್ಷಿತ್; ಹೊಸ ಅವತಾರದಲ್ಲಿ ಧಕ್ ಧಕ್ ಗರ್ಲ್

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಇಂತಹ ಡೀಪ್‌ಫೇಕ್ ವಿಡಿಯೋಗಳನ್ನು ಹರಿಬಿಡುವುದು ಹೆಚ್ಚಾಗುತ್ತಿದ್ದು, ಇಂಟರ್ನೆಟ್‌ನಲ್ಲಿ ಕಾಣುವ ಎಲ್ಲವೂ ನಿಜವಲ್ಲ ಎಂಬುದಕ್ಕೆ ಈ ವಿಡಿಯೋ ಮತ್ತೊಂದು ಸಾಕ್ಷಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 12:30 pm, Fri, 29 May 26

Source link

ಸಿಎಲ್​​ಪಿ ಸಭೆಗೆ ಮುಹೂರ್ತದ ಬೆನ್ನಲ್ಲೇ ಜೋರಾದ ಸಚಿವಾಕಾಂಕ್ಷಿಗಳ ಲಾಬಿ: ರೇಸ್​​ನಲ್ಲಿ ಇರೋದು ಯಾರ್ಯಾರು?

ಸಚಿವ ಸ್ಥಾನದ ರೇಸ್​​ನಲ್ಲಿ ಇರೋದು ಯಾರ್ಯಾರು?
Image Credit source: Tv9 Kannada

ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದೆ. ನಾಳೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯೂ ನಿಗದಿಗೊಂಡಿದ್ದು, CLP ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ. ಹೀಗಾಗಿ ನೂತನ ಮುಖ್ಯಮಂತ್ರಿಗಳ ಚಿವ ಸಂಪುಟ ಸೇರಲು ಆಕಾಂಕ್ಷಿಗಳ ಲಾಬಿಯೂ ಜೋರಾಗಿಯೇ ನಡೆಯುತ್ತಿದೆ.

ಜೋರಾದ ಲಾಬಿ

ಹೊಸ ಸರ್ಕಾರ ರಚನೆಯ ಕಸರತ್ತು ಗರಿಗೆದರುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡೇ ದಿಲ್ಲಿಗೆ ಜಿಗಿದಿದೆ. ಮುಂಜಾನೆ 3 ಗಂಟೆಯ ವಿಮಾನದಲ್ಲೇ ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಹಾಗೂ ಎನ್.ಎಸ್. ಬೋಸರಾಜು ಸೇರಿದಂತೆ ಹಲವು ಪ್ರಮುಖ ನಾಯಕರು ದೆಹಲಿಗೆ ತಲುಪಿದ್ದಾರೆ. ಸದ್ಯ ಸಚಿವರಾಗಿರುವವರು ಮುಂದಿನ ಸಂಪುಟದಲ್ಲೂ ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ಹಿರಿಯ ಶಾಸಕರಾಗಿದ್ದೂ ಈವರೆಗೆ ಸಚಿವ ಸ್ಥಾನ ಸಿಗದ ನಾಯಕರು ಈ ಬಾರಿ ಸಂಪುಟ ಸೇರಲು ದೆಹಲಿ ಮಟ್ಟದಲ್ಲಿ ಭರ್ಜರಿ ಸರ್ಕಸ್ ಆರಂಭಿಸಿದ್ದಾರೆ .

ಯಾರಿಗೆಲ್ಲ ಸಚಿವ ಸ್ಥಾನ?

ನೂತನ ಸಚಿವ ಸಂಪುಟ ಸೇರ್ಪಡೆ ಸಂಬಂಧ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆ ಮತ್ತೆ ಸಚಿವರಾಗುವ ವಿಶ್ವಾಸದಲ್ಲಿ 11ರಿಂದ 13 ಶಾಸಕರಿದ್ದಾರೆ ಎನ್ನಲಾಗಿದೆ. ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ್​, ಡಾ.ಪರಮೇಶ್ವರ್, H​.K.ಪಾಟೀಲ್, ಶಿವರಾಜ ತಂಗಡಗಿ, ಮುನಿಯಪ್ಪ, ಮಂಕಾಳು ವೈದ್ಯ, ಸಂತೋಷ್​​ ಲಾಡ್​, ದಿನೇಶ್ ಗುಂಡೂರಾವ್ ಮತ್ತೆ ಸಂಪುಟ ಸೇರ್ಪಡೆ ಸಾಧ್ಯತೆ ಇದೆ. ಇದನ್ನು ಹೊರತುಪಡಿಸಿ ಕೆಲವರ ಹೆಸರನ್ನು ಡಿಕೆಶಿ ಪರಿಗಣಿಸುವ ಸಾಧ್ಯತೆಯೂ ಇದೆ. ಹೈಕಮಾಂಡ್ ಒಪ್ಪಿದರೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಇದ್ದ 29 ಮಂದಿ ಸಚಿವರ ಪೈಕಿ 11ರಿಂದ 13 ಮಂದಿ ಸಂಪುಟಕ್ಕೆ ಪುನಃ ಆಯ್ಕೆ ಸಾಧ್ಯತೆ ಇದೆ.

ಇದನ್ನೂ ಓದಿ: ದೇವರು ವರ-ಶಾಪ ನೀಡಲ್ಲ, ಅವಕಾಶ ಕೊಡ್ತಾನೆ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಭಾವುಕ ಪೋಸ್ಟ್

ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ವರಿಷ್ಠರನ್ನು ಡಿ.ಕೆ. ಶಿವಕುಮಾರ್ ಭೇಟಿ ಮಾಡಲಿದ್ದಾರೆ. ಈ ವೇಳೆ ಶಾಸಕಾಂಗ ಪಕ್ಷದ (CLP) ಸಭೆ ಹಾಗೂ ಹೊಸ ಸರ್ಕಾರದ ರಚನೆ ಕುರಿತು ಪ್ರಮುಖ ಚರ್ಚೆಗಳು ನಡೆಯಲಿವೆ. ಹೊಸದಾಗಿ ಯಾರೆಲ್ಲಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕು, ನೂತನ ಸಿಎಂ ಜೊತೆಗೆ ಎಷ್ಟು ಜನ ಸಚಿವರು ಮೊದಲ ಹಂತದಲ್ಲಿ ಅಧಿಕಾರ ವಹಿಸಿಕೊಳ್ಳಬೇಕು ಎಂಬ ಬಗ್ಗೆ ಹೈಕಮಾಂಡ್‌ನಿಂದ ಡಿಕೆಶಿ ನಿರ್ದೇಶನ ಹಾಗೂ ಸಲಹೆಗಳನ್ನು ಪಡೆಯಲಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: ಆರೆಂಜ್ ಕ್ಯಾಪ್​ಗಾಗಿ ನಾಲ್ವರ ನಡುವೆ ನೇರ ಪೈಪೋಟಿ

Source link

ತೀರ್ಪು ವಿಳಂಬಕ್ಕೆ ಸುಪ್ರೀಂ ಬ್ರೇಕ್: ಹೈಕೋರ್ಟ್‌ಗಳಿಗೆ 3 ತಿಂಗಳ ಡೆಡ್‌ಲೈನ್, ಜಾಮೀನು ಸಿಕ್ಕರೆ ಅದೇ ದಿನ ಬಿಡುಗಡೆ

ನವದೆಹಲಿ, ಮೇ 29: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಮುಕ್ತಿ ಹಾಡಲು ಸುಪ್ರೀಂಕೋರ್ಟ್(Supreme Court)​ ಶುಕ್ರವಾರ ಒಂದು  ಮಹತ್ವದ ನಿರ್ದೇಶನ ನೀಡಿದೆ. ತೀರ್ಪು ನೀಡಲು ವಿಳಂಬ ಮಾಡುವುದರಿಂದ ದಾವೆದಾರರಿಗೆ ತುಂಬಲಾರದ ನಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಎಲ್ಲಾ ಹೈಕೋರ್ಟ್‌ಗಳಿಗೆ ಕಟ್ಟುನಿಟ್ಟಾದ ಗಡುವನ್ನು ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸಂವಿಧಾನದ 142 ನೇ ವಿಧಿಯಡಿ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ ಈ  ಆದೇಶಗಳನ್ನು ಹೊರಡಿಸಿದೆ.

3 ತಿಂಗಳೊಳಗೆ ತೀರ್ಪು ಕಡ್ಡಾಯ: ಹೈಕೋರ್ಟ್‌ಗಳು ಯಾವುದೇ ಪ್ರಕರಣದ ವಾದ-ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿದ (Reserved) ದಿನಾಂಕದಿಂದ ಗರಿಷ್ಠ 3 ತಿಂಗಳ ಒಳಗಾಗಿ ಅಂತಿಮ ತೀರ್ಪನ್ನು ಪ್ರಕಟಿಸಬೇಕು.

ಜಾಮೀನು ಅರ್ಜಿಗಳಿಗೆ ವಿಶೇಷ ಆದ್ಯತೆ: ವೈಯಕ್ತಿಕ ಸ್ವಾತಂತ್ರ್ಯದ ಪ್ರಕರಣಗಳಲ್ಲಿ ತ್ವರಿತ ನಿರ್ಧಾರಗಳು ಅಗತ್ಯ. ಹೀಗಾಗಿ ಜಾಮೀನು ಅರ್ಜಿಗಳ ಆದೇಶಗಳನ್ನು ಅದೇ ದಿನ ಪ್ರಕಟಿಸಬೇಕು. ಒಂದು ವೇಳೆ ಆದೇಶ ಕಾಯ್ದಿರಿಸಿದರೆ, ಮರುದಿನವೇ ಅದನ್ನು ಪ್ರಕಟಿಸಿ, ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕು.

ಮತ್ತಷ್ಟು ಓದಿ: ಸುಪ್ರೀಂಕೋರ್ಟ್​ ಆದೇಶದಿಂದ ದರ್ಶನ್​​ಗೆ ಹೆಚ್ಚಿತು ಸಂಕಷ್ಟ; 2028ರವರೆಗೂ ಬರಲ್ಲ ಡಿ ಬಾಸ್ ಸಿನಿಮಾ?

ಅದೇ ದಿನ ಜೈಲಿನಿಂದ ಬಿಡುಗಡೆ: ಜಾಮೀನು ಅಥವಾ ಶಿಕ್ಷೆ ಅಮಾನತು ಆದೇಶ ಹೊರಬಿದ್ದ ತಕ್ಷಣ ಆ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ತ್ವರಿತವಾಗಿ ತಲುಪಿಸಬೇಕು. ಅಗತ್ಯ ಪ್ರಕ್ರಿಯೆಗಳನ್ನು ಮುಗಿಸಿ ವಿಚಾರಣಾಧೀನ ಕೈದಿಗಳನ್ನು ಅದೇ ದಿನ ಅಥವಾ ಹೆಚ್ಚೆಂದರೆ ಮರುದಿನವೇ ಜೈಲಿನಿಂದ ಬಿಡುಗಡೆ ಮಾಡಬೇಕು.

24 ಗಂಟೆಗಳಲ್ಲಿ ಅಪ್‌ಲೋಡ್: ಹೈಕೋರ್ಟ್‌ಗಳು ನೀಡುವ ಎಲ್ಲಾ ತೀರ್ಪುಗಳನ್ನು ಅವು ಪ್ರಕಟವಾದ 24 ಗಂಟೆಗಳ ಒಳಗೆ ಆಯಾ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವುದು ಕಡ್ಡಾಯ.

ಆದೇಶದ ಹಿನ್ನೆಲೆ ಏನು?
ಜಾರ್ಖಂಡ್ ಹೈಕೋರ್ಟ್‌ನಲ್ಲಿ ತೀರ್ಪುಗಳು ದೀರ್ಘಕಾಲದವರೆಗೆ ವಿಳಂಬವಾಗುತ್ತಿದ್ದ ವಿಷಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ತೀರ್ಪಿನ ಕಾರ್ಯಕಾರಿ (Main) ಭಾಗವನ್ನು ಪ್ರಕಟಿಸುವ ದಿನಾಂಕವನ್ನೇ ಅಧಿಕೃತ ‘ತೀರ್ಪಿನ ದಿನಾಂಕ’ ಎಂದು ಪರಿಗಣಿಸಲಾಗುವುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಕೋರ್ಟ್ ಮಹತ್ವದ ಹೇಳಿಕೆ: ಹೈಕೋರ್ಟ್‌ಗಳು ಸಾವಿರಾರು ಜನರು ನ್ಯಾಯವನ್ನು ಬಯಸಿ ಬರುವ ಪ್ರಾಥಮಿಕ ಸಂಸ್ಥೆಗಳಾಗಿವೆ. ಇಲ್ಲಿ ಸಮಯಕ್ಕೆ ಸರಿಯಾಗಿ ತೀರ್ಪು ನೀಡುವುದು ಅತ್ಯಗತ್ಯ. ಈ ನಿಯಮಗಳು ಯಾವುದೇ ನ್ಯಾಯಾಧೀಶರು ಅಥವಾ ಸಂಸ್ಥೆಯ ಮೇಲೆ ಆಕ್ಷೇಪ ಹೇರಲು ಅಲ್ಲ, ಬದಲಿಗೆ ನ್ಯಾಯದಾನ ಪ್ರಕ್ರಿಯೆಯನ್ನು ವೇಗಗೊಳಿಸಲು ತರಲಾಗಿದೆ.

ಕೇಂದ್ರ ಮತ್ತು ರಾಜ್ಯಗಳ ಕೆಳ ನ್ಯಾಯಾಲಯಗಳಿಗೂ ನಿಯಮಿತ ಜಾಮೀನು ಆದೇಶಗಳ ಕುರಿತು ತಕ್ಷಣದ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಈ ಆದೇಶದಿಂದಾಗಿ ದೇಶಾದ್ಯಂತ ಲಕ್ಷಾಂತರ ಜನರಿಗೆ ವರದಾನವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version