ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅರ್ಧಶತಕದ ಬಳಿಕ ಕೂಡ ಕಿವೀಸ್ ಬೌಲರ್ಗಳ ಬೆಂಡೆತ್ತಿದ ಯುವ ದಾಂಡಿಗ 20 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು.
ಈ ಮೂಲಕ ಟೀಮ್ ಇಂಡಿಯಾ ಕೇವಲ 10 ಓವರ್ಗಳಲ್ಲಿ 155 ರನ್ ಸಿಡಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ನ್ಯೂಝಿಲೆಂಡ್ ಆಟಗಾರರಾದ ಮಿಚೆಲ್ ಸ್ಯಾಂಟ್ನರ್, ಡೆವೊನ್ ಕಾನ್ವೆ ಹಾಗೂ ಜೇಕಬ್ ಡಫಿ ಅಭಿಷೇಕ್ ಶರ್ಮಾ ಅವರ ಬ್ಯಾಟ್ ಅನ್ನು ಪರಿಶೀಲಿಸುತ್ತಿರುವುದು ಕಂಡು ಬಂತು.
ಅಭಿಷೇಕ್ ಶರ್ಮಾ ಅವರ ಆರ್ಭಟವನ್ನು ಕಣ್ತುಂಬಿಕೊಂಡಿದ್ದ ಕಿವೀಸ್ ಆಟಗಾರರು ಇದೇನು ಬ್ಯಾಟಾ? ಅಥವಾ ಬ್ಯಾಟ್ನಲ್ಲಿ ಸ್ಪ್ರಿಂಗ್ ಏನಾದ್ರೂ ಇಟ್ಟಿದೆಯಾ ಎಂಬಾರ್ಥದಲ್ಲಿ ಟೀಮ್ ಇಂಡಿಯಾ ದಾಂಡಿಗನ ಕಾಲೆಳೆಯುತ್ತಿರುವುದು ಕಂಡು ಬಂತು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್ಗಳಲ್ಲಿ ಚೇಸ್ ಮಾಡಿ ಹೊಸ ಇತಿಹಾಸವನ್ನು ನಿರ್ಮಿಸಿದೆ.
ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧುರಂಧರ್ (Dhurandhar) ಸಿನಿಮಾ ಕಲಾವಿದ ನದೀಮ್ ಖಾನ್ ಅವರನ್ನು ಬಂಧಿಸಲಾಗಿದೆ. ಇವರು ‘ಧುರಂಧರ್’ ಸಿನಿಮಾದಲ್ಲಿ ಡಕಾಯಿತ್ ರೆಹಮಾನ್ ಮನೆಯ ಬಾಣಸಿಗ ಅಖ್ಲಾಕ್ ಆಗಿ ಕಾಣಿಸಿಕೊಂಡಿದ್ದರು. ನದೀಮ್ ಖಾನ್ ಅವರನ್ನು ಪೊಲೀಸರು ವಶದಲ್ಲಿ ಇಟ್ಟುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ 10 ವರ್ಷಗಳಿಂದ ಮನೆ ಕೆಲಸದಾಕೆಯನ್ನ ನದೀಮ್ ಖಾನ್ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು. ಮದುವೆ ಆಗೋದಾಗಿ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಈಗ ಅವರು ಮೋಸ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದಾರೆ.
41 ವರ್ಷದ ಮಹಿಳೆ ಈ ದೂರನ್ನು ನೀಡಿದ್ದಾರೆ. 2015ರಲ್ಲಿ ನದೀಮ್ ಖಾನ್ ಅವರನ್ನು ಸಂತ್ರಸ್ತೆ ಭೇಟಿ ಮಾಡಿದರು. ಆಗ ಅವರಿಗೆ 31 ವರ್ಷ. ಮನೆಕೆಲಸದವಳಾಗಿ ಅವರು ಸೇರಿಕೊಂಡರು. ನಂತರ ಇದು ದೈಹಿಕ ಸಂಬಂಧಕ್ಕೆ ತಿರುಗಿತು. ಇಬ್ಬರೂ ಆಪ್ತರಾದರು. ಈ ವೇಳೆ ನದೀಮ್ ಖಾನ್ ಅವರಿಗೆ ಮದುವೆ ಆಗುವ ಭರವಸೆ ನೀಡಿದರು ಎನ್ನಲಾಗಿದೆ.
ಈ ಭರವಸೆ ಮೇಲೆ ಅವರು ದೈಹಿಕ ಸಂಪರ್ಕಕ್ಕೆ ಒಪ್ಪಿದರು.ಇದು 10 ವರ್ಷಗಳ ಕಾಲ ಮುಂದುವರಿಯಿತು. ಈಗ ಅವರು ಮದುವೆ ಆಗಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ಪೊಲೀಸರನ್ನು ಸಂಪರ್ಕಿಸಲು ಅವರು ನಿರ್ಧರಿಸಿದರು.
ಆರಂಭಿಕ ತನಿಖೆ ನಡೆಸಿ ನದೀಮ್ ಖಾನ್ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ಮುಂದುವರೆದಿದ್ದು, ಅಧಿಕಾರಿಗಳು ಹೆಚ್ಚುವರಿ ಹೇಳಿಕೆಗಳನ್ನು ದಾಖಲಿಸುವ ಮತ್ತು ಆರೋಪಗಳಿಗೆ ಸಂಬಂಧಿಸಿದ ಪುರಾವೆಗಳನ್ನು ಪರಿಶೀಲಿಸುವ ಸಾಧ್ಯತೆ ಇದೆ.
ಧುರಂಧರ್ ಸಿನಿಮಾ ಹೊಸ ದಾಖಲೆ ಬರೆದಿದೆ. ಈ ಚಿತ್ರ ವಿಶ್ವಾದ್ಯಂತ 1300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಜನವರಿ 30ರಂದು ಸಿನಿಮಾ ನೆಟ್ಫ್ಲಿಕ್ಸ್ ಮೂಲಕ ಪ್ರಸಾರ ಕಾಣಲಿದೆ. ರಣವೀರ್ ಸಿಂಗ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸೀಕ್ವೆಲ್ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಕನ್ನಡದ ‘ಟಾಕ್ಸಿಕ್’ ಎಸುರು ಸಿನಿಮಾ ತೆರೆಗೆ ಬರುತ್ತಿದೆ.
ನವದೆಹಲಿ, ಜನವರಿ 26: ದೇಶದಾದ್ಯಂತ ಇಂದು 77ನೇ ಗಣರಾಜ್ಯೋತ್ಸವವನ್ನು (Republic Day 2026) ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯ ಕರ್ತವ್ಯಪಥ, ಬೆಂಗಳೂರಿನ ಮಾಣೆಕ್ ಶಾ ಮೈದಾನ ಸೇರಿದಂತೆ ನಾಡಿನಾದ್ಯಂತ ಗಣರಾಜ್ಯೋತ್ಸವ ದಿನನ ಆಚರಿಸಲಾಗಿದ್ದು, ಸಂಭ್ರಮ ಮುಗಿಲುಮುಟ್ಟಿದೆ. ಹಲವು ಕಾರಣಗಳಿಂದ ಈ ವರ್ಷದ ಗಣರಾಜ್ಯೋತ್ಸವ ವಿಶೇಷ ಮಹತ್ವವನ್ನೂ ಪಡೆದಿದೆ. ಹಾಗಾದರೆ, ಈ ಬಾರಿಯ ಗಣತಂತ್ರ ದಿವಸನದ ವಿಶೇಷಗಳೇನು? ಇಲ್ಲಿದೆ ಮಾಹಿತಿ.
ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಬಂಕಿಮಚಂದ್ರ ಚಟರ್ಜಿ (ಬಂಕಿಮಚಂದ್ರ ಚಟ್ಟೋಪಾಧ್ಯಾಯ) ರಚಿಸಿದ ‘ವಂದೇ ಮಾತರಂ’ನ 150ನೇ ವರ್ಷಾಚರಣೆ. ಈ ಸಂಭ್ರಮವನ್ನು ವರ್ಷಪೂರ್ತಿ ಆಚರಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 2025 ರ ನವೆಂಬರ್ 7 ರಂದು ಕರೆ ನೀಡಿದ್ದರು.
ಸಮೃದ್ಧಿ ಕಾ ಮಂತ್ರ್- ಆತ್ಮನಿರ್ಭರ ಭಾರತ: ರಾಷ್ಟ್ರದ ಸ್ವಾವಲಂಬನೆ ಮತ್ತು ಕಳೆದ ವರ್ಷದ ಸಾಧನೆಗಳನ್ನು ಈ ಥೀಮ್ ಪ್ರತಿಬಿಂಬಿಸುತ್ತದೆ.
ಆಪರೇಷನ್ ಸಿಂದೂರ್ ಮತ್ತು ಮಿಷನ್ ಸುದರ್ಶನ ಚಕ್ರ: ಭಯೋತ್ಪಾದನೆಯ ವಿರುದ್ಧ ಭಾರತದ ದಿಟ್ಟ ಪ್ರತಿಕ್ರಿಯೆಯನ್ನು ಪರೇಡ್ನ ಈ ಥೀಮ್ ಮೂಲಕ ಎತ್ತಿ ತೋರಿಸಲಾಯಿತು. ವಿಶೇಷವಾಗಿ 2025ರ ಪಹಲ್ಗಾಮ್ ದಾಳಿಯ ನಂತರ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದ ‘ಆಪರೇಷನ್ ಸಿಂದೂರ್’ ಥೀಮ್ ಪ್ರದರ್ಶಿಸುತ್ತಿರುವುದು ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ವಿಶೇಷ.
ಭಾರತೀಯ ಸೇನೆಯು ಆಧುನಿಕ ಯುದ್ಧ ಸನ್ನದ್ಧ ಮತ್ತು ರಕ್ಷಣಾ ಸಾಮರ್ಥ್ಯವನ್ನು ಕರ್ತವ್ಯ ಪಥದಲ್ಲಿ ಪ್ರದರ್ಶಿಸಲಾಯಿತು.
ಪ್ಯಾರಾಶೂಟ್ ರೆಜಿಮೆಂಟ್, ಬ್ರಿಗೇಡ್ ಆಫ್ ದಿ ಗಾರ್ಡ್ಸ್ ಮತ್ತು ರಜಪೂತಾನ ರೈಫಲ್ಸ್ನ 75 ಸಂಗೀತಗಾರರ ತಂಡವು ಲತಾ ಮಂಗೇಶ್ಕರ್ ಅವರು ಹಾಡಿರುವ ‘ವಂದೇ ಮಾತರಂ’ ಆವೃತ್ತಿಯನ್ನು ನುಡಿಸಿತು.
‘ಆಯುಷ್ ಕಾ ತಂತ್ರ, ಸ್ವಾಸ್ಥ್ಯ ಕಾ ಮಂತ್ರ’ ಎಂಬ ವಿಷಯದ ಅಡಿಯಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯನ್ನು ಕೃತಕ ಬುದ್ಧಿಮತ್ತೆಯೊಂದಿಗೆ ಸಂಯೋಜಿಸಿ ಪ್ರದರ್ಶನ.
ಎಐ, ನವೀಕರಿಸಬಹುದಾದ ಇಂಧನ ಮತ್ತು ಸೆಮಿಕಂಡಕ್ಟರ್ಗಳಂತಹ ಭವಿಷ್ಯದ ಕ್ಷೇತ್ರಗಳ ಮೇಲೆ ಗಮನ ಹರಿಸಿದ ಟ್ಯಾಬ್ಲೋಗಳು.
ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರಿಗಾಗಿ ಭಾರತದ ಮೊದಲ ಡಿಜಿಟಲ್ ವಸ್ತುಸಂಗ್ರಹಾಲಯವನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ.
ಬಿಎಸ್ಎಫ್ನ ವಿಶ್ವದ ಏಕೈಕ ಒಂಟೆ ಸವಾರರ ಬ್ಯಾಂಡ್ ತಂಡವು ಈ ಮೆರವಣಿಗೆಯಲ್ಲಿ ಭಾಗವಹಿಸಿದೆ.
ಭಾರತ್ ಪರ್ವ ಕಾರ್ಯಕ್ರಮ: ವಿವಿಧ ರಾಜ್ಯಗಳ ಆಹಾರ, ಕಲೆ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ಕಾರ್ಯಕ್ರಮ.
ವೀರ್ ಗಾಥಾ 5.0: ದೇಶಾದ್ಯಂತ 1.92 ಕೋಟಿ ವಿದ್ಯಾರ್ಥಿಗಳಲ್ಲಿ ಆಯ್ಕೆಯಾದ 100 ವಿಜೇತ ವಿದ್ಯಾರ್ಥಿಗಳನ್ನು ಕರ್ತವ್ಯ ಪಥದಲ್ಲಿ ಗೌರವಿಸಲಾಯಿತು.
ಬೆಂಗಳೂರು, ಜನವರಿ 26: ಚಿನ್ನದ ಬೆಲೆ ಭರ್ಜರಿ ಏರಿಕೆ ಮುಂದುವರಿದೆ. ಬೆಳ್ಳಿ ಬೆಲೆಯೂ ಭರ್ಜರಿಯಾಗಿ ಏರಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿ ದಾಟಿ ಹೋಗಿದೆ. ಆಭರಣ ಚಿನ್ನದ ಬೆಲೆ (Gold Rate) 15,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ತೀವ್ರವಾಗಿ ಹೆಚ್ಚಿದೆ. ಬೆಳ್ಳಿ ಬೆಲೆಯೂ ಗಗನಕ್ಕೇರುತ್ತಲೇ ಇದೆ. ಚೆನ್ನೈ ಮೊದಲಾದ ಕಡೆ ಬೆಳ್ಳಿ ಬೆಲೆ ಒಂದು ಕಿಲೋಗೆ 3,75,000 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,49,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,62,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 34,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,49,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 34,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 37,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 26ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,271 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,915 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,203 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,271 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,915 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ದೆಹಲಿ, ಜ.26: 2026ರ ಗಣರಾಜ್ಯೋತ್ಸವದಂದು ದೇಶವು ಅತ್ಯಂತ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಪ್ರದಾನ ಮಾಡಿದರು. ಇದು 77ನೇ ಗಣರಾಜ್ಯೋತ್ಸವದ ಪ್ರಮುಖ ಘಟನೆಗಳಲ್ಲಿ ಒಂದಾಗಿತ್ತು. ಶುಭಾಂಶು ಶುಕ್ಲಾ ಅವರ ಈ ಗೌರವಕ್ಕೆ ಕಾರಣ ಅವರ ಅಸಾಧಾರಣ ಸೇವೆ ಮತ್ತು ಸಾಹಸಮಯ ಕಾರ್ಯ. ಬಾಹ್ಯಾಕಾಶದಲ್ಲಿ ಭಾರತದ ಪತಾಕೆಯನ್ನು ಹಾರಿಸಿದಂತಹ ಮಹತ್ತರ ಕೀರ್ತಿ ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ ಮತ್ತು ಧೈರ್ಯಕ್ಕಾಗಿ ಅಶೋಕ ಚಕ್ರದಂತಹ ಶ್ರೇಷ್ಠ ಗೌರವವನ್ನು ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯು ಅವರ ಸಮರ್ಪಣೆ, ಸಾಹಸ ಮತ್ತು ರಾಷ್ಟ್ರಕ್ಕಾಗಿ ಮಾಡಿದ ಅಪ್ರತಿಮ ಕೊಡುಗೆಯನ್ನು ಗುರುತಿಸುತ್ತದೆ. ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಈ ಸಾಧನೆಯು ಯುವ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಮತ್ತು ಭಾರತೀಯ ಸೇನೆಯ ಶೌರ್ಯ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ದೇಶದ ಗೌರವ ಮತ್ತು ಕೀರ್ತಿಯನ್ನು ಬಾಹ್ಯಾಕಾಶದಲ್ಲೂ ಎತ್ತಿ ಹಿಡಿದ ಅವರ ಕಾರ್ಯ ಸದಾ ಸ್ಮರಣೀಯ.
ಬೆಳಗಾವಿ, ಜನವರಿ 26: ಚೋರ್ಲಾ ಘಾಟ್ ಬಳಿ ಸುಮಾರು 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್ಗಳು ದರೋಡೆಯಾದ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಅಕ್ಟೋಬರ್ನಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಣ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ಖರ್ಚಿಗೆ ಸಾಗಿಸಲಾಗುತ್ತಿತ್ತು ಎಂಬ ಅನುಮಾನಗಳು ವ್ಯಕ್ತವಾಗಿವೆ. ಮಹಾರಾಷ್ಟ್ರ ಸರ್ಕಾರ ಈ ರಾಬರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದ್ದಾರೆ. ಮತ್ತೊಂದೆಡೆ ಈ ಬಗ್ಗೆ ಗಂಭೀರ ಆರೋಪ ಮಾಡಿರುವ ಕರ್ನಾಟಕ ಬಿಜೆಪಿ ಎಂಎಲ್ಸಿ ರವಿಕುಮಾರ್, ಗೋವಾದಿಂದ ತಿರುಪತಿಗೆ ಹಣ ಸಾಗಿಸಿ ಹಳೆ ನೋಟುಗಳನ್ನು ಹೊಸ ನೋಟುಗಳಾಗಿ ಬದಲಾಯಿಸುವ ಯೋಜನೆ ಇತ್ತು ಎಂದಿದ್ದಾರೆ. ಅಲ್ಲದೆ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ, ಪಾಂಡಿಚೇರಿ ಸೇರಿದಂತೆ ಐದು ರಾಜ್ಯಗಳ ಚುನಾವಣೆಗೆ ಹಣ ಸರಬರಾಜು ಆಗುತ್ತಿತ್ತಾ ಎಂ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ. ಪಾಟೀಲ್ ಕೂಡ ಹಣದ ಮೂಲದ ಬಗ್ಗೆ ಪ್ರಶ್ನಿಸಿ, ತನಿಖೆಗೆ ಒತ್ತಾಯಿಸಿದ್ದಾರೆ.
ಉಡುಪಿ, ಜನವರಿ 26: ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದರು. ಘಟನೆ ವೇಳೆ ಶ್ಯಾಮರಾಜ್ ವೀಲ್ಚೇರ್ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದ ಗೆಲುವಿನ ನಾಗಾಲೋಟ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವುಗಳೊಂದಿಗೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ ಬರೆದಿದ್ದಾರೆ.
ನ್ಯೂಝಿಲೆಂಡ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ನಲ್ಲಿ ಭಾರತ ತಂಡದ 3ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಇದೀಗ ಕೊಹ್ಲಿಯನ್ನು ಸೂರ್ಯ ಹಿಂದಿಕ್ಕಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 52 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ. ಈ ವೇಳೆ 32 ಮ್ಯಾಚ್ಗಳಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಇನ್ನು 18 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋತರೆ, 2 ಮ್ಯಾಚ್ ಟೈನಲ್ಲಿ ಅಂತ್ಯ ಕಂಡಿತ್ತು. ಹಾಗೆಯೇ ಎರಡು ಪಂದ್ಯಗಳು ರದ್ದಾಗಿದ್ದವು.
ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಒಟ್ಟು 41 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಬರೋಬ್ಬರಿ 33 ಪಂದ್ಯಗಳಲ್ಲಿ. ಅಲ್ಲದೆ ಸೋತಿರುವುದು ಕೇವಲ 6 ಮ್ಯಾಚ್ಗಳಲ್ಲಿ ಮಾತ್ರ. ಇನ್ನು 2 ಮ್ಯಾಚ್ಗಳು ಕಾರಣಾಂತರಗಳಿಂದ ರದ್ದಾಗಿದ್ದವು.
ಇನ್ನು ಭಾರತ ಟಿ20 ತಂಡದ ಯಶಸ್ವಿ ನಾಯಕರುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದರೆ, ಮಹೇಂದ್ರ ಸಿಂಗ್ ಧೋನಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಧೋನಿ 72 ಪಂದ್ಯಗಳಲ್ಲಿ 41 ಗೆಲುವು ತಂದುಕೊಟ್ಟಿದ್ದಾರೆ. ಅತ್ತ ರೋಹಿತ್ ಶರ್ಮಾ ಮುಂದಾಳತ್ವದಲ್ಲಿ 62 ಟಿ20 ಪಂದ್ಯಗಳನ್ನಾಡಿದ್ದ ಟೀಮ್ ಇಂಡಿಯಾ 50 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.
ದೆಹಲಿ, ಜ.26: ಇಂದು ದೇಶದಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು (Republic Day) ಆಚರಣೆ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಯುರೋಪಿಯನ್ ಕಮಿಷನ್ನ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹಾಗೂ ಯುರೋಪಿಯನ್ ಕೌನ್ಸಿಲ್ನ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಭಾಗವಹಿಸಿದ್ದಾರೆ. ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ. ಈ ಬಾರಿಯ ಪರೇಡ್ನಲ್ಲಿ ಮಹಿಳಾ ಸಬಲೀಕರಣ (ನಾರಿ ಶಕ್ತಿ) ಮತ್ತು ಭಾರತದ ವೈವಿಧ್ಯಮಯ ಸಂಸ್ಕೃತಿಯ ಅನಾವರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಕರ್ನಾಟಕದ ಸ್ತಬ್ಧಚಿತ್ರವೂ ಸಹ ಪ್ರೇಕ್ಷಕರ ಗಮನ ಸೆಳೆಯಿತು. ಈ ಬಾರಿಯ ಗಣರಾಜ್ಯೋತ್ಸವಕ್ಕೆ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದ (ASEAN) ನಾಯಕರನ್ನು ಆಹ್ವಾನಿಸಲಾಗಿತ್ತು. ಭಾರತ ಮತ್ತು ASEAN ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ ಸಂಕೇತವಾಗಿ ಈ ಭೇಟಿ ಬಹುಮುಖ್ಯವಾಗಿದೆ. ದಕ್ಷಿಣ ಏಷ್ಯಾದಲ್ಲಿ ಭದ್ರತೆ ಮತ್ತು ಆರ್ಥಿಕ ಸಹಕಾರವನ್ನು ಬಲಪಡಿಸುವ ಉದ್ದೇಶವನ್ನು ಇದು ಹೊಂದಿದೆ. ಹಾಗೂ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವು “ಅನ್ನದಾತನ ಸಾಹಸ ಮತ್ತು ಸಿರಿಧಾನ್ಯಗಳ ಶ್ರೀಮಂತಿಕೆ” ಎಂಬ ವಿಷಯವನ್ನು ಆಧರಿಸಿದೆ. ಸ್ತಬ್ಧಚಿತ್ರದ ಮುಂಭಾಗದಲ್ಲಿ ರೈತ ಮಹಿಳೆಯರು ಸಿರಿಧಾನ್ಯಗಳನ್ನು (Millets) ಸಂಸ್ಕರಿಸುವ ದೃಶ್ಯವನ್ನು ಮನಮೋಹಕವಾಗಿ ಕೆತ್ತಲಾಗಿದೆ. ಜತೆಗೆ ಕರ್ನಾಟಕದ ಜಾನಪದ ಕಲೆಗಳಾದ ಡೊಳ್ಳು ಕುಣಿತ ಮತ್ತು ಯಕ್ಷಗಾನದ ಪ್ರದರ್ಶನವು ಸ್ತಬ್ಧಚಿತ್ರದ ಮೆರುಗನ್ನು ಹೆಚ್ಚಿಸಿದೆ.
ಗಣರಾಜ್ಯೋತ್ಸವದ ಮುನ್ನಾದಿನದಂದು ಪದ್ಮ ಪ್ರಶಸ್ತಿಗಳು ಮತ್ತು ಸೇನಾ ಪದಕಗಳನ್ನು ಘೋಷಿಸಲಾಗುತ್ತದೆ. ಈ ಬಾರಿ ಕರ್ನಾಟಕದ ಹಲವು ಗಣ್ಯರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದವರಿಗೆ ಪದ್ಮ ಪ್ರಶಸ್ತಿಗಳು ಮತ್ತು ಸೇನಾ ಪದಕ ಘೋಷಣೆ ಮಾಡಲಾಗಿದೆ. ಕಲೆ, ಸಮಾಜ ಸೇವೆ, ಮತ್ತು ಕೃಷಿ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಕರ್ನಾಟಕದ ಗ್ರಾಮೀಣ ಭಾಗದ ಸಾಧಕರಿಗೆ ಈ ಬಾರಿ ಹೆಚ್ಚಿನ ಆದ್ಯತೆ ನೀಡಲಾಗಿದೆ. ವಿಶಿಷ್ಟ ಸೇವೆಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ‘ರಾಷ್ಟ್ರಪತಿ ಪೊಲೀಸ್ ಪದಕ’ಕ್ಕೆ ಭಾಜನರಾಗಿದ್ದಾರೆ. ಪ್ರಾಣದ ಹಂಗು ತೊರೆದು ಇತರರನ್ನು ರಕ್ಷಣೆ ನಿಂತ ಕರ್ನಾಟಕದ ಧೈರ್ಯಶಾಲಿ ಮಕ್ಕಳಿಗೆ ‘ರಾಷ್ಟ್ರೀಯ ಬಾಲ ಪುರಸ್ಕಾರ’ ನೀಡಿ ಗೌರವಿಸಲಾಗಿದೆ. ಪರೇಡ್ನಲ್ಲಿ ಪ್ರದರ್ಶಿಸಲಾದ ಕಲಾತಂಡಗಳು ಭಾರತವು ತಂತ್ರಜ್ಞಾನ ಮತ್ತು ಸಂಪ್ರದಾಯ ಎರಡರಲ್ಲೂ ಹೇಗೆ ಮುಂಚೂಣಿಯಲ್ಲಿದೆ ಎಂಬುದನ್ನು ತೋರಿಸಿಕೊಟ್ಟವು.
ಇಲ್ಲಿದೆ ನೋಡಿ ಲೈವ್ ವಿಡಿಯೋ (Tv9 kannada)
ಜನವರಿ 26 ರಂದೇ ಏಕೆ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತದೆ?
ಭಾರತಕ್ಕೆ ಸ್ವಾತಂತ್ರ್ಯ ಸಿಗುವ ಮೊದಲು, 1929ರ ಡಿಸೆಂಬರ್ನಲ್ಲಿ ಲಾಹೋರ್ನಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಒಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು. ಬ್ರಿಟಿಷರ ಆಡಳಿತದಿಂದ ನಮಗೆ ಸಂಪೂರ್ಣ ಸ್ವಾತಂತ್ರ್ಯ ಬೇಕು ಎಂದು ನಿರ್ಣಯಿಸಿ, ಅದನ್ನು ‘ಪೂರ್ಣ ಸ್ವರಾಜ್ಯ’ ಎಂದು ಕರೆದರು. ಆ ದಿನದ ನೆನಪಿಗಾಗಿ 1930ರ ಜನವರಿ 26 ರಂದು ಮೊದಲ ಬಾರಿಗೆ “ಸ್ವಾತಂತ್ರ್ಯ ದಿನ”ವನ್ನು ಆಚರಿಸಲಾಗಿತ್ತು. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 1947ರ ಆಗಸ್ಟ್ 15 ರಂದು. ಆದರೆ, ಭಾರತಕ್ಕೆ ತನ್ನದೇ ಆದ ಕಾನೂನು ಮತ್ತು ಸಂವಿಧಾನ ಇರಲಿಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ರಚನೆಯಾದ ನಂತರ, ಅದನ್ನು ಜಾರಿಗೆ ತರಲು ಒಂದು ವಿಶೇಷ ದಿನ ಬೇಕಿತ್ತು. 1930ರ ಆ ಐತಿಹಾಸಿಕ ‘ಪೂರ್ಣ ಸ್ವರಾಜ್ಯ’ ಘೋಷಣೆಯ ದಿನಕ್ಕೆ ಗೌರವ ಸಲ್ಲಿಸಲು, ಸಂವಿಧಾನವನ್ನು 1950ರ ಜನವರಿ 26 ರಂದೇ ಜಾರಿಗೆ ತರಲಾಯಿತು. ಅಂದಿನಿಂದ ಭಾರತವು ಬ್ರಿಟಿಷ್ ಕಾನೂನುಗಳಿಂದ ಮುಕ್ತವಾಗಿ, ಒಂದು ಸಾರ್ವಭೌಮ ಗಣರಾಜ್ಯವಾಯಿತು.
ಭಾರತವು ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಗಳಿಸಿತು, ಆದರೆ ಸಂವಿಧಾನ ಜಾರಿಗೆ ಬಂದ ನಂತರವೇ ಅದು ಪ್ರಜಾಪ್ರಭುತ್ವ ರಾಷ್ಟ್ರವಾಯಿತು. ಭಾರತದ ಸಂವಿಧಾನವನ್ನು ನವೆಂಬರ್ 26, 1949 ರಂದು ರಚಿಸಲಾಯಿತು, ಆದರೆ ಅದು ಜನವರಿ 26, 1950 ರಂದು ಜಾರಿಗೆ ಬಂದಿತು. ಈ ದಿನದಂದು, ಭಾರತವು ತನ್ನನ್ನು ತಾನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿಕೊಂಡಿತು. ಈ ದಿನವನ್ನು ಭಾರತದ ಗಣರಾಜ್ಯ ದಿನವೆಂದು ಗುರುತಿಸಲಾಯಿತು ಮತ್ತು ಈ ಕಾರಣಕ್ಕಾಗಿಯೇ ಭಾರತವು ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಆಚರಿಸುತ್ತದೆ.
ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜಪಾನ್ಗೆ ತೆರಳಿದರು. ಅಲ್ಲಿ ‘ಪುಷ್ಪ 2’ ಸಿನಿಮಾ ರಿಲೀಸ್ ಆಯಿತು. ಜಪಾನ್ ಭಾಷೆಯಲ್ಲಿ ಜನರು ಸಿನಿಮಾ ನೋಡಿದರು. ಜಪಾನ್ನಲ್ಲಿ ಚಿತ್ರದ ಪ್ರಚಾರ ನಡೆಯುತ್ತಿದ್ದಾಗ, ಅನಿರೀಕ್ಷಿತ ಘಟನೆ ಸಂಭವಿಸಿತು. ತನ್ನ ನೆಚ್ಚಿನ ನಾಯಕನನ್ನು ನೋಡಲು ಬಂದಿದ್ದ ಜಪಾನಿನ ಅಭಿಮಾನಿಯೊಬ್ಬರು ಇದ್ದಕ್ಕಿದ್ದಂತೆ ತೆಲುಗಿನಲ್ಲಿ ಮಾತನಾಡಿದರು. ಇದರಿಂದ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ದಿಗ್ಭ್ರಮೆಗೊಂಡಿದರು.
ವಿಶ್ವಾದ್ಯಂತ ಬ್ಲಾಕ್ಬಸ್ಟರ್ ಯಶಸ್ಸನ್ನು ಕಂಡ ‘ಪುಷ್ಪ 2’ ಚಿತ್ರ ಇತ್ತೀಚೆಗೆ ಜಪಾನ್ನಲ್ಲಿ ಬಿಡುಗಡೆಯಾಯಿತು. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಈ ಚಿತ್ರದ ಪ್ರಚಾರಕ್ಕಾಗಿ ಜಪಾನ್ಗೆ ಹೋಗಿದ್ದರು. ಅಲ್ಲಿ, ಜಪಾನಿನ ಪ್ರೇಕ್ಷಕರು ನಮ್ಮ ನಾಯಕರು ಮತ್ತು ನಾಯಕಿಯರಿಗೆ ಭವ್ಯ ಸ್ವಾಗತ ನೀಡಿದರು.
ಪ್ರಚಾರ ಚಟುವಟಿಕೆಗಳ ಭಾಗವಾಗಿ ಅಭಿಮಾನಿಗಳೊಂದಿಗೆ ಸಂವಹನ ನಡೆಸುವಾಗ ಒಂದು ಆಸಕ್ತಿದಾಯಕ ದೃಶ್ಯ ನಡೆಯಿತು. ಜಪಾನ್ ವ್ಯಕ್ತಿ ಇದ್ದಕ್ಕಿದ್ದಂತೆ ಪರಿಪೂರ್ಣ ತೆಲುಗಿನಲ್ಲಿ ಮಾತನಾಡಿದರು. ಐಕಾನಿಕ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನೂ ಸಹ ಆಶ್ಚರ್ಯಗೊಂಡರು. ರಶ್ಮಿಕಾ ಅಚ್ಚರಿಯಿಂದ ಮಾತೇ ಬರದಂತೆ ಆದರು.
ಸಾಮಾನ್ಯವಾಗಿ ವಿದೇಶಿಯರಿಗೆ ತೆಲುಗು ಪದಗಳನ್ನು ಉಚ್ಚರಿಸಲು ಕಷ್ಟವಾಗುತ್ತದೆ. ಆದರೆ ಜಪಾನಿನ ಅಭಿಮಾನಿಯೊಬ್ಬರು ಮುಂದೆ ಬಂದು ನಿಜವಾದ ತೆಲುಗು ವ್ಯಕ್ತಿಯಂತೆ ಅಲ್ಲು ಅರ್ಜುನ್ ಅವರೊಂದಿಗೆ ತುಂಬಾ ಸರಳವಾಗಿ ಮಾತನಾಡಲು ಪ್ರಾರಂಭಿಸಿದರು. ‘ನನಗೆ ನೀವು ತುಂಬಾ ಇಷ್ಟ.. ನಿಮ್ಮ ನಟನೆ ಅದ್ಭುತವಾಗಿದೆ’ ಎಂದು ಅವರು ತೆಲುಗಿನಲ್ಲಿ ಹೇಳಿದರು ಮತ್ತು ಅಲ್ಲು ಅರ್ಜುನ್ ಶಾಕ್ ಆದರು. ವಿದೇಶಿಯೊಬ್ಬ ತನ್ನ ಮಾತೃಭಾಷೆಯನ್ನು ಇಷ್ಟು ಸ್ಪಷ್ಟವಾಗಿ ಮಾತನಾಡುವುದನ್ನು ನೋಡಿ ಐಕಾನ್ ಸ್ಟಾರ್ ಸಂತೋಷಪಟ್ಟರು. ಅಭಿಮಾನಿಯ ಭಾಷಾ ಪ್ರಾವೀಣ್ಯತೆಯನ್ನು ನೋಡಿ ರಶ್ಮಿಕಾ ಮಂದಣ್ಣ ಕೂಡ ಆಶ್ಚರ್ಯಚಕಿತರಾದರು.
ಈ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅಲ್ಲು ಅರ್ಜುನ್ ಕೂಡ ಅಭಿಮಾನಿಯನ್ನು ಹತ್ತಿರಕ್ಕೆ ಕರೆದೊಯ್ದು ಅಭಿನಂದಿಸಿದರು. ಇದು ಎಲ್ಲರನ್ನೂ ಮೆಚ್ಚಿಸಿತು. ರಶ್ಮಿಕಾ ತಮ್ಮದೇ ಆದ ಶೈಲಿಯಲ್ಲಿ ಮುಗುಳ್ನಕ್ಕು ಅಭಿಮಾನಿಗೆ ಧನ್ಯವಾದ ಅರ್ಪಿಸಿದರು. ಸಾಮಾನ್ಯವಾಗಿ ಭಾರತದವರು ಬೇರೆ ಭಾಷೆ ಕಲಿಯಲು ಪ್ರಯತ್ನಿಸುತ್ತಾರೆ. ಆದರೆ, ಇದೊಂದು ಭಿನ್ನ ಬೆಳವಣಿಗೆ ಎನ್ನಬಹುದು.