ಫ್ರಾನ್ಸ್​ vs ಸ್ಪೇನ್ ಅಲ್ಲ, ರಿಯಲ್ ಮ್ಯಾಡ್ರಿಡ್ vs ಬಾರ್ಸಿಲೋನಾ! – Kannada News | FIFA World Cup 2026: Forget France vs Spain, This is Real Madrid vs Barcelona

FIFA World Cup 2026: ಫ್ರಾನ್ಸ್ ಮತ್ತು ಸ್ಪೇನ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವುಅಂತಾರಾಷ್ಟ್ರೀಯ ಮಟ್ಟದ ‘ಎಲ್ ಕ್ಲಾಸಿಕೊ’  ಕದನವಾಗಿ  ಬಿಂಬಿತವಾಗಿದೆ. ಇದಕ್ಕೆ ಮುಖ್ಯ ಕಾರಣ ರಿಯಲ್ ಮ್ಯಾಡ್ರಿಡ್​ನ ಕಿಲಿಯನ್ ಎಂಬಾಪೆ ಹಾಗೂ ಬಾರ್ಸಿಲೋನಾ ತಂಡದ ಲಾಮಿನ್ ಯಮಾಲ್ ಮುಖಾಮುಖಿಯಾಗುತ್ತಿರುವುದು.

ರಿಯಲ್ ಮ್ಯಾಡ್ರಿಡ್ vs ಬಾರ್ಸಿಲೋನಾ:

ಲಾ ಲಿಗಾ ಅಂಗಳದ ಬದ್ದ ವೈರಿಗಳಾದ ರಿಯಲ್ ಮ್ಯಾಡ್ರಿಡ್ ಮತ್ತು ಬಾರ್ಸಿಲೋನಾ ತಂಡಗಳು ವಿಭಿನ್ನ ಶೈಲಿಯ ಆಟಕ್ಕೆ ಹೆಸರುವಾಸಿ. ಈ ಆಟದ ಶೈಲಿಯಲ್ಲೇ ಇದೀಘ ಫ್ರಾನ್ಸ್ ಹಾಗೂ ಸ್ಪೇನ್ ತಂಡಗಳು ಕಣಕ್ಕಿಳಿಯಲಿವೆ.

  • ಸ್ಪೇನ್ (ಬಾರ್ಸಿಲೋನಾ ಶೈಲಿ): ಸ್ಪೇನ್ ತಂಡದ ಬೆನ್ನೆಲುಬು ಬಾರ್ಸಿಲೋನಾದ ಪ್ರಸಿದ್ಧ ‘ಲಾ ಮಾಸಿಯಾ’ ಅಕಾಡೆಮಿ. ಸಣ್ಣ ಪಾಸ್‌ಗಳು, ಚೆಂಡಿನ ಮೇಲಿನ ಸಂಪೂರ್ಣ ನಿಯಂತ್ರಣ ಮತ್ತು ಸಂಘಟಿತ ಆಟಕ್ಕೆ ಸ್ಪೇನ್ ಹೆಸರುವಾಸಿ. ಇದು ಬಾರ್ಸಿಲೋನಾ ಕ್ಲಬ್‌ನ ಸಾಂಪ್ರದಾಯಿಕ ಶೈಲಿಯಾಗಿದೆ.
  • ಫ್ರಾನ್ಸ್ (ರಿಯಲ್ ಮ್ಯಾಡ್ರಿಡ್ ಶೈಲಿ): ಫ್ರಾನ್ಸ್ ತಂಡವು ರಿಯಲ್ ಮ್ಯಾಡ್ರಿಡ್‌ನಂತೆ ವೈಯಕ್ತಿಕ ಪ್ರತಿಭೆ, ವೇಗ ಮತ್ತು ಮಾರಕ ಕೌಂಟರ್-ಅಟ್ಯಾಕ್ ನಂಬಿ ಮೈದಾನಕ್ಕಿಳಿಯುತ್ತದೆ. ಜಗತ್ತಿನ ಅತ್ಯಂತ ದುಬಾರಿ ಮತ್ತು ಪ್ರಭಾವಿ ಆಟಗಾರರನ್ನು ಹೊಂದಿರುವ ಫ್ರಾನ್ಸ್, ಮ್ಯಾಡ್ರಿಡ್‌ನ ‘ಗ್ಯಾಲಕ್ಟಿಕೋಸ್’ ಸಂಸ್ಕೃತಿಯನ್ನು ನೆನಪಿಸುತ್ತದೆ.

ಎಂಬಾಪೆ vs ಲಾಮಿನ್ ಯಮಾಲ್:

ಲಿಯೋನೆಲ್ ಮೆಸ್ಸಿ ಮತ್ತು ಕ್ರಿಸ್ಟಿಯಾನೋ ರೊನಾಲ್ಡೊ ಯುಗದ ನಂತರ, ಫುಟ್‌ಬಾಲ್ ಜಗತ್ತು ಹೊಸ ಸೂಪರ್‌ಸ್ಟಾರ್‌ಗಳ ಪೈಪೋಟಿಗೆ ಕಾಯುತ್ತಿತ್ತು. ಅದು ಈಗ ಈ ಎರಡು ತಂಡಗಳ ಮೂಲಕ ಸಿಕ್ಕಿದೆ.

  • ಕಿಲಿಯನ್ ಎಂಬಾಪೆ (ಫ್ರಾನ್ಸ್ / ರಿಯಲ್ ಮ್ಯಾಡ್ರಿಡ್): ವಿಶ್ವದ ಅತ್ಯಂತ ವೇಗದ ಫಾರ್ವರ್ಡ್ ಆಟಗಾರ, ರಿಯಲ್ ಮ್ಯಾಡ್ರಿಡ್‌ನ ಮುಖ್ಯ ಆಕರ್ಷಣೆಯಾಗಿರುವ ಎಂಬಾಪೆ ಫ್ರಾನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
  • ಲಾಮಿನ್ ಯಮಾಲ್ (ಸ್ಪೇನ್ / ಬಾರ್ಸಿಲೋನಾ): ಕೇವಲ ಹದಿಹರೆಯದಲ್ಲೇ ಫುಟ್‌ಬಾಲ್ ಜಗತ್ತನ್ನು ಮಂತ್ರಮುಗ್ಧಗೊಳಿಸಿರುವ ಯಮಾಲ್, ಬಾರ್ಸಿಲೋನಾದ ಭವಿಷ್ಯದ ಆಶಾಕಿರಣ ಹಾಗೂ  ಸ್ಪೇನ್ ತಂಡದ ಬೆನ್ನೆಲುಬು.

ಫ್ರಾನ್ಸ್ (ರಿಯಲ್ ಮ್ಯಾಡ್ರಿಡ್) vs ಸ್ಪೇನ್ (ಬಾರ್ಸಿಲೋನಾ)

ಮೈದಾನದಲ್ಲಿ ಆಡುವ ಆಟಗಾರರ ಪಟ್ಟಿಯನ್ನು ನೋಡಿದರೆ, ಇದು ಫ್ರಾನ್ಸ್-ಸ್ಪೇನ್ ಪಂದ್ಯ ಎನ್ನುವುದಕ್ಕಿಂತ ರಿಯಲ್ ಮ್ಯಾಡ್ರಿಡ್ ಮತ್ತು ಬಾರ್ಸಿಲೋನಾ ನಡುವಿನ ಪಂದ್ಯದಂತೆ ಕಾಣುತ್ತದೆ. ಇದಕ್ಕೆ ಕಾರಣ ಎರಡು ತಂಡಗಳಲ್ಲಿರುವ ಆಟಗಾರರು.

  • ಸ್ಪೇನ್ ಪಡೆ: ಲಾಮಿನ್ ಯಮಾಲ್, ಪೆಡ್ರೆ, ಗವಿ, ಪಾವ್ ಕುಬಾರ್ಸಿ ಮತ್ತು ಫೆರಾನ್ ಟೊರೆಸ್ ಅವರಂತಹ ಬಾರ್ಸಿಲೋನಾ ಆಟಗಾರರ ದಂಡೇ ಸ್ಪೇನ್ ಪಡೆಯಲ್ಲಿದೆ.
  • ಫ್ರಾನ್ಸ್ ಪಡೆ: ಕಿಲಿಯನ್ ಎಂಬಾಪೆ ಜೊತೆಗೆ ಔರೇಲಿಯನ್ ಚೌವಾಮೆನಿ, ಫೆರ್ಲ್ಯಾಂಡ್ ಮೆಂಡಿ ಮತ್ತು ಎಡ್ವರ್ಡೊ ಕಮಾವಿಂಗಾ ಅವರಂತಹ ರಿಯಲ್ ಮ್ಯಾಡ್ರಿಡ್‌ನ ಪ್ರಮುಖ ಆಟಗಾರರು ಫ್ರಾನ್ಸ್ ತಂಡದಲ್ಲಿದ್ದಾರೆ.

ಈ ಎರಡು ತಂಡಗಳ ಮೂಲಕ ಸಾಂಪ್ರದಾಯಿಕ ಎದುರಾಳಿಗಳು ಕಣಕ್ಕಿಳಿಯುತ್ತಿರುವುದರಿಂದ ರಿಯಲ್ ಮ್ಯಾಡ್ರಿಡ್ ಅಭಿಮಾನಿಗಳು ಫ್ರಾನ್ಸ್ ತಂಡವನ್ನು ಮತ್ತು ಬಾರ್ಸಿಲೋನಾ ಅಭಿಮಾನಿಗಳು ಸ್ಪೇನ್ ತಂಡವನ್ನು ಬೆಂಬಲಿಸುತ್ತಿದ್ದಾರೆ.

ಫ್ರಾನ್ಸ್ ವಿರುದ್ಧ ಸ್ಪೇನ್ ಮೇಲುಗೈ:

ಯೂರೋಪ್ ಮತ್ತು ಜಾಗತಿಕ ಫುಟ್‌ಬಾಲ್‌ನಲ್ಲಿ ಈ ಎರಡು ತಂಡಗಳ ಇತ್ತೀಚಿನ ಮುಖಾಮುಖಿಗಳು ಕ್ಲಾಸಿಕ್ ಪಂದ್ಯಗಳಾಗಿ ಇತಿಹಾಸ ಸೇರಿವೆ.

  • ಯೂರೋ ಕಪ್ 2024 ಸೆಮಿಫೈನಲ್: ಯುವ ಶಕ್ತಿಯ ಬಲದಿಂದ ಫ್ರಾನ್ಸ್ ತಂಡವನ್ನು 2-1 ಗೋಲುಗಳಿಂದ ಮಣಿಸಿ, ಫ್ರೆಂಚ್ ಸಾಮ್ರಾಜ್ಯದ ಹೆಮ್ಮೆಯನ್ನು ಸ್ಪೇನ್ ಮುರಿದಿತ್ತು.
  • ನೇಷನ್ಸ್ ಲೀಗ್ 2025 ಸೆಮಿಫೈನಲ್: 9 ಗೋಲುಗಳು ಮೂಡಿಬಂದ ಈ ಐತಿಹಾಸಿಕ ಪಂದ್ಯದಲ್ಲಿ ಸ್ಪೇನ್ 5-4 ಅಂತರದಲ್ಲಿ ಜಯಗಳಿಸಿತು. ಈ ಪಂದ್ಯವು ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ರೋಚಕ ಮತ್ತು ನಾಟಕೀಯ ಪಂದ್ಯವಾಗಿ ದಾಖಲಾಯಿತು.

ಈ ಎರಡು ಸೋಲುಗಳಿಂದ ಕಂಗಾಲಾಗಿರುವ ಫ್ರಾನ್ಸ್, ಸ್ಪೇನ್ ವಿರುದ್ಧ ಸೇಡು ತೀರಿಸಿಕೊಳ್ಳಲು ಹಪಹಪಿಸುತ್ತಿದ್ದರೆ, ಸ್ಪೇನ್ ತನ್ನ ಜಾಗತಿಕ ಆಧಿಪತ್ಯವನ್ನು ಕಾಯ್ದುಕೊಳ್ಳಲು ಪ್ಲ್ಯಾನ್ ರೂಪಿಸುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಪಂದ್ಯವು ಕೇವಲ ಎರಡು ಬಲಿಷ್ಠ ದೇಶಗಳ ನಡುವಿನ ಸಾಂಪ್ರದಾಯಿಕ ಹೋರಾಟವಾಗಿ ಉಳಿದಿಲ್ಲ. ಇದು ಆಧುನಿಕ ಫುಟ್‌ಬಾಲ್‌ನ ಇಬ್ಬರು ಧ್ರುವತಾರೆಗಳಾದ ಕಿಲಿಯನ್ ಎಂಬಾಪೆ ಮತ್ತು ಲಾಮಿನ್ ಯಮಾಲ್ ನಡುವಿನ ವೈಯಕ್ತಿಕ ಪ್ರತಿಷ್ಠೆಯ ಕದನವೂ ಹೌದು.

ಇದನ್ನೂ ಓದಿ: ನಾವು ಹೆದರಲ್ಲ… ಕೊಹ್ಲಿ, ರೋಹಿತ್​​ಗೆ ಡಕೆಟ್ ಸವಾಲು!

ಹಾಗೆಯೇ ರಿಯಲ್ ಮ್ಯಾಡ್ರಿಡ್ ಮತ್ತು ಬಾರ್ಸಿಲೋನಾ ಕ್ಲಬ್‌ ಅಭಿಮಾನಿಗಳ ನಡುವಿನ ದಶಕಗಳ ಹಳೆಯ ವೈಷಮ್ಯ ಮತ್ತು ಭಾವನಾತ್ಮಕ ಪೈಪೋಟಿಗೆ ಈ ಪಂದ್ಯವು ಹೊಸದೊಂದು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ. ಹೀಗಾಗಿ ಫ್ರಾನ್ಸ್ ಮತ್ತು ಸ್ಪೇನ್ ನಡುವಣ ಸೆಮಿಫೈನಲ್ ಪಂದ್ಯವು ರಿಯಲ್ ಮ್ಯಾಡ್ರಿಡ್ ಮತ್ತು ಬಾರ್ಸಿಲೋನಾ ಅಭಿಮಾನಿಗಳ ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟಿದೆ.

Source link

ವಿಯೆಟ್ನಾಂ ಸ್ಪೀಡ್ ಬೋಟ್ ದುರಂತ: ಮುಂಬೈಗೆ ಬಂದಿಳಿದ 15 ಭಾರತೀಯರ ಮೃತದೇಹಗಳ ಹೊತ್ತ ವಿಮಾನ – Kannada News | Vietnam Speedboat Tragedy: 15 Indian Victims’ Bodies Arrive in Mumbai; Travel Safety Concerns

ಮುಂಬೈ, ಜುಲೈ 14: ವಿಯೆಟ್ನಾಂ ದೇಶದ ಸುಂದರ ದ್ವೀಪದಲ್ಲಿ ಕಳೆದ ವಾರ ನಡೆದ ಭೀಕರ ಸ್ಪೀಡ್‌ಬೋಟ್ ಅಪಘಾತದಲ್ಲಿ ಜಲಸಮಾಧಿಯಾಗಿದ್ದ 15 ಭಾರತೀಯ ಪ್ರವಾಸಿಗರ ಮೃತದೇಹಗಳನ್ನು ಸೋಮವಾರ ರಾತ್ರಿ ಕೊನೆಗೂ ಭಾರತಕ್ಕೆ ತರಲಾಗಿದೆ. ವಿಯೆಟ್ನಾಂ ಏರ್‌ಲೈನ್ಸ್‌ನ ವಿಶೇಷ ವಿಮಾನ (VN 979) ರಾತ್ರಿ 9.19 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅಲ್ಲಿ ಬಂದಿದ್ದ  ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಮೃತ 15 ದುರ್ದೈವಿಗಳಲ್ಲಿ ಇಬ್ಬರು ಮಹಿಳೆಯರಿದ್ದಾರೆ. ಇವರಲ್ಲಿ 10 ಮಂದಿ ತಮಿಳುನಾಡಿನವರು, ಮೂವರು ಆಂಧ್ರಪ್ರದೇಶದವರು ಹಾಗೂ ಇಬ್ಬರು ಕೇರಳದವರು. ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಾಥಮಿಕ ಪ್ರಕ್ರಿಯೆಗಳು ಮುಗಿದ ತಕ್ಷಣ, ಮೃತದೇಹಗಳನ್ನು ಅಂತಿಮ ವಿಧಿವಿಧಾನಗಳಿಗಾಗಿ ಅವರವರ ಸ್ವಗ್ರಾಮಗಳಾದ ಕೊಯಮತ್ತೂರು, ಚೆನ್ನೈ, ಹೈದರಾಬಾದ್ ಮತ್ತು ತಿರುವನಂತಪುರಂಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ.

ಉದ್ಯೋಗಿಗಳಿಗೆ ಲಾವಾ ಕಂಪನಿ ನೀಡಿದ್ದ ‘ಗಿಫ್ಟ್ ಟೂರ್’

ಮೃತರೆಲ್ಲರೂ ಭಾರತದ ಪ್ರಸಿದ್ಧ ಸ್ಮಾರ್ಟ್‌ಫೋನ್ ತಯಾರಿಕಾ ಸಂಸ್ಥೆಯಾದ ‘ಲಾವಾ ಮೊಬೈಲ್ಸ್’ ಕಂಪನಿಯ ಪ್ರಾಯೋಜಿತ ಪ್ರವಾಸದ ಭಾಗವಾಗಿದ್ದರು. ಕಂಪನಿಯು ತನ್ನ ಅತ್ಯುತ್ತಮ ಚಾನೆಲ್ ಪಾಲುದಾರರು, ವಿತರಕರು ಮತ್ತು ಉದ್ಯೋಗಿಗಳಿಗೆ ಪ್ರೋತ್ಸಾಹಕ ಉಡುಗೊರೆಯಾಗಿ ವಿಯೆಟ್ನಾಂನ ಪ್ರಸಿದ್ಧ ‘ಫು ಕ್ವಾಕ್’ ದ್ವೀಪಕ್ಕೆ ಪ್ರವಾಸ ಆಯೋಜಿಸಿತ್ತು.

ಉದ್ಯೋಗಿಗಳು ವಿಯೆಟ್ನಾಂನ ಸುಂದರ ಸಮುದ್ರ ತೀರದಲ್ಲಿ ಸಂಭ್ರಮಿಸುತ್ತಾ ತಮ್ಮ ಮೊಬೈಲ್‌ಗಳಲ್ಲಿ ಫೋಟೋಗಳನ್ನು ತೆಗೆದು ಸಂಭ್ರಮಿಸುತ್ತಿದ್ದರು. ಆದರೆ ವಿಧಿಯ ಆಟ ಬೇರೆಯೇ ಆಗಿತ್ತು. ಶನಿವಾರ ಸಂಜೆ ದ್ವೀಪದಿಂದ ವಾಪಸ್ ಹಿಂತಿರುಗುತ್ತಿದ್ದಾಗ, ಕರಾವಳಿಯಿಂದ ಕೇವಲ 400 ಮೀಟರ್ ದೂರದಲ್ಲಿ ಇವರಿದ್ದ ಸ್ಪೀಡ್ ಬೋಟ್ ಏಕಾಏಕಿ ಸಮುದ್ರದ ಅಲೆಗಳಿಗೆ ಸಿಲುಕಿ ಪಲ್ಟಿಯಾಗಿದೆ.

21 ಜನರ ರಕ್ಷಣೆ; ಒಬ್ಬರ ಸ್ಥಿತಿ ಇನ್ನು ಗಂಭೀರ

ಹನೋಯ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮಾಹಿತಿ ಪ್ರಕಾರ, ಆ ದುರಂತ ದೋಣಿಯಲ್ಲಿ 32 ಭಾರತೀಯ ಪ್ರವಾಸಿಗರು ಮತ್ತು 4 ವಿಯೆಟ್ನಾಂ ಸಿಬ್ಬಂದಿ ಇದ್ದರು. ದೋಣಿ ಮುಳುಗಿದ ತಕ್ಷಣ ವಿಯೆಟ್ನಾಂ ನೌಕಾಪಡೆ ನಡೆಸಿದ ಬೃಹತ್ ರಕ್ಷಣಾ ಕಾರ್ಯಾಚರಣೆಯ ಮೂಲಕ 21 ಜನರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ. ಬದುಕುಳಿದ ಬಹುತೇಕರು ಭಾರತಕ್ಕೆ ಮರಳಿದ್ದಾರಾದರೂ, ಕಣ್ಣೆದುರೇ ಸಹೋದ್ಯೋಗಿಗಳು ಮೃತಪಟ್ಟ ಆಘಾತದಿಂದ ಇನ್ನೂ ಹೊರಬಂದಿಲ್ಲ. ಸದ್ಯ ಮತ್ತೊಬ್ಬ ಭಾರತೀಯನ ಸ್ಥಿತಿ ಗಂಭೀರವಾಗಿದ್ದು, ವಿಯೆಟ್ನಾಂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.

ವಿದೇಶಿ ಪ್ರವಾಸದಲ್ಲಿ ಸುರಕ್ಷತೆ ಎಷ್ಟು ಮುಖ್ಯ?

ವಿದೇಶಿ ಪ್ರವಾಸ ಕೈಗೊಳ್ಳುವಾಗ ಅಥವಾ ಸಾಹಸ ಕ್ರೀಡೆಗಳಲ್ಲಿ ಪಾಲ್ಗೊಳ್ಳುವಾಗ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುವುದು ಜೀವಕ್ಕೆ ರಕ್ಷಣೆಯಾಗುತ್ತದೆ.

ಲೈಫ್ ಜಾಕೆಟ್ ಕಡ್ಡಾಯ: ಇತ್ತೀಚಿನ ದಿನಗಳಲ್ಲಿ ಥೈಲ್ಯಾಂಡ್, ವಿಯೆಟ್ನಾಂ ಮತ್ತು ಇಂಡೋನೇಷ್ಯಾ ದೇಶಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಸ್ಪೀಡ್‌ಬೋಟ್‌ಗಳನ್ನು ಚಲಾಯಿಸಲಾಗುತ್ತಿದೆ. ಯಾವುದೇ ಸಣ್ಣ ದೋಣಿ ಹತ್ತುವ ಮುನ್ನ ಕಡ್ಡಾಯವಾಗಿ ಲೈಫ್ ಜಾಕೆಟ್ ಧರಿಸುವುದು ಹಾಗೂ ಹವಾಮಾನದ ವರದಿಯನ್ನು ಪರಿಶೀಲಿಸುವುದು ಅತ್ಯಗತ್ಯ.

ಟ್ರಾವೆಲ್ ಇನ್ಶೂರೆನ್ಸ್: ಇಂತಹ ದುರಂತಗಳು ಸಂಭವಿಸಿದಾಗ ವಿದೇಶಗಳಲ್ಲಿ ತಗಲುವ ಭಾರಿ ವೈದ್ಯಕೀಯ ವೆಚ್ಚ ಹಾಗೂ ಮೃತದೇಹಗಳನ್ನು ತಾಯ್ನಾಡಿಗೆ ತರಲು ತಗಲುವ ಲಕ್ಷಾಂತರ ರೂಪಾಯಿಗಳ ಆರ್ಥಿಕ ಹೊರೆಗೆ ‘ಅಂತಾರಾಷ್ಟ್ರೀಯ ಟ್ರಾವೆಲ್ ಇನ್ಶೂರೆನ್ಸ್’ ದೊಡ್ಡ ಆಸರೆಯಾಗುತ್ತದೆ. ಸದ್ಯ ಲಾವಾ ಕಂಪನಿಯು ಮೃತರ ಕುಟುಂಬಗಳಿಗೆ ತಕ್ಷಣದ ನೆರವು ಘೋಷಿಸಿದ್ದು, ಭಾರತೀಯ ವಿದೇಶಾಂಗ ಇಲಾಖೆಯು ಇಡೀ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಂಕಿಪುರ ಉಪಚುನಾವಣೆ : ಪ್ರಶಾಂತ್ ಕಿಶೋರ್ ಕುಟುಂಬದ ಒಟ್ಟು ಆಸ್ತಿ 198 ಕೋಟಿ ರೂ.ಗೂ ಅಧಿಕ! – Kannada News | Prashant Kishor’s Rs198 Crore Assets Declared for Bankipur By Election Nomination

ಪಾಟ್ನಾ, ಜುಲೈ 14: ಚುನಾವಣಾ ರಾಜಕೀಯಕ್ಕೆ ಪ್ರಥಮ ಬಾರಿಗೆ ನೇರವಾಗಿ ಧುಮುಕಿರುವ ಪ್ರಶಾಂತ್ ಕಿಶೋರ್(Prashanth Kishor), ಜುಲೈ 30ರಂದು ನಡೆಯಲಿರುವ ಬಂಕಿಪುರ ವಿಧಾನಸಭಾ ಉಪ ಚುನಾವಣೆ(Assembly Election)ಗಾಗಿ ಸೋಮವಾರ ರೋಡ್ ಶೂ ಮಾಡಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಅಫಿಡವಿಟ್ ಪ್ರಕಾರ, ಪ್ರಶಾಂತ್ ಕಿಶೋರ್ ಹಾಗೂ ಅವರ ಪತ್ನಿ ಡಾ. ಜಹಾನ್ವಿ ದಾಸ್ ಅವರ ಒಟ್ಟು ಕುಟುಂಬದ ಆಸ್ತಿ ಮೌಲ್ಯ ಬರೋಬ್ಬರಿ 198 ಕೋಟಿ ರೂ.ಗೂ ಅಧಿಕ ಎಂದು ಘೋಷಿಸಲಾಗಿದೆ. ಅವರು ಚುನಾವಣಾ ತಂತ್ರಗಾರರಾಗಿ ಕೆಲಸ ಮಾಡಿದ್ದರು.

ಪ್ರಶಾಂತ್ ಕಿಶೋರ್ ಆಸ್ತಿ ವಿವರ

ಪ್ರಶಾಂತ್ ಕಿಶೋರ್ ಅವರ ವೈಯಕ್ತಿಕ ಆಸ್ತಿ (ಒಟ್ಟು: 96.06 ಕೋಟಿ ರೂ.)
ಚರ ಆಸ್ತಿ: 22.19 ಕೋಟಿ ರೂ. (ಬ್ಯಾಂಕ್ ಫಿಕ್ಸ್ಡ್ ಡಿಪಾಸಿಟ್ ಹಾಗೂ ಮಾರುಕಟ್ಟೆ ಹೂಡಿಕೆಗಳು ಸೇರಿ).

ಸ್ಥಿರ ಆಸ್ತಿ : 73.87 ಕೋಟಿ ರೂ. (ಬಿಹಾರದ ರೋಹ್ತಾಸ್‌ನಲ್ಲಿರುವ ಮೂರು ಎಕರೆಗೂ ವಿಸ್ತರಿಸಿರುವ ಹಳೆಯ ರೈಸ್ ಮಿಲ್ ಜಾಗ ಹಾಗೂ ವಿವಿಧ ನಗರಗಳಲ್ಲಿನ ವಸತಿ ಆಸ್ತಿಗಳು).

ಕೈಯಲ್ಲಿರುವ ನಗದು: 65,570 ರೂ.

ಸಾಲ: 5.77 ಕೋಟಿ ರೂ.

ಪತ್ನಿ ಡಾ. ಜಹಾನ್ವಿ ದಾಸ್ ಅವರ ಆಸ್ತಿ (ಒಟ್ಟು: 101.93 ಕೋಟಿ ರೂ.)
ದೆಹಲಿಯ ಅಪೊಲೊ ಇಂದ್ರಪ್ರಸ್ಥ ಆಸ್ಪತ್ರೆಯಲ್ಲಿ ಹಿರಿಯ ಸಲಹೆಗಾರರಾಗಿರುವ ಪ್ರಶಾಂತ್ ಕಿಶೋರ್ ಅವರ ಪತ್ನಿ ಡಾ. ಜಹಾನ್ವಿ ದಾಸ್ ಅವರು ತಮ್ಮ ಪತಿಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ.

ಚರ ಆಸ್ತಿ: 89.51 ಕೋಟಿ ರೂ.

ಸ್ಥಿರ ಆಸ್ತಿ: 12.42 ಕೋಟಿ ರೂ.

ಚಿನ್ನಾಭರಣ: 64.12 ಲಕ್ಷ ರೂ. ಮೌಲ್ಯದ 475 ಗ್ರಾಂ ಚಿನ್ನ ಹಾಗೂ 200 ಗ್ರಾಂ ಬೆಳ್ಳಿ.

ಕೈಯಲ್ಲಿರುವ ನಗದು: 1,95,200 ರೂ.

ಸಾಲ: 55.38 ಲಕ್ಷ ರೂ.

ವಿಡಿಯೋ

ಖಾಸಗಿ ಕಂಪನಿಯ ಶೇ. 100 ರಷ್ಟು ಒಡೆತನ ಮತ್ತು ಕೋಟಿ ಕೋಟಿ ರೂ. ದೇಣಿಗೆ

ಪ್ರಶಾಂತ್ ಕಿಶೋರ್ ಅವರು ‘ವೇಧಾಸ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್’ ಎಂಬ ಖಾಸಗಿ ಕಂಪನಿಯಲ್ಲಿ ಶೇ. 100 ರಷ್ಟು ಸಂಪೂರ್ಣ ನಿಯಂತ್ರಣ ಹೊಂದಿದ್ದಾರೆ. ಈ ಕಂಪನಿಯ ಮೌಲ್ಯವೇ ಸುಮಾರು 95.26 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ವಿಶೇಷವೆಂದರೆ, ಇದೇ ಕಂಪನಿಯ ಮೂಲಕ ಪ್ರಶಾಂತ್ ಕಿಶೋರ್ ಅವರು ತಮ್ಮ ಸ್ವಂತ ‘ಜನ ಸುರಾಜ್ ಪಕ್ಷ’ಕ್ಕೆ ಬರೋಬ್ಬರಿ 85 ಕೋಟಿ ರೂ. ಹಾಗೂ ‘ಜನ ಸುರಾಜ್ ಫೌಂಡೇಶನ್’ಗೆ 50 ಲಕ್ಷ ರೂ. ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಬಹಿರಂಗಪಡಿಸಿದ್ದಾರೆ. ತಾವು ರಾಜಕೀಯಕ್ಕೆ ಬರುವ ಮುನ್ನ ಕಾರ್ಪೊರೇಟ್ ಸಲಹೆಗಾರರಾಗಿ ಕೇವಲ 3 ವರ್ಷಗಳಲ್ಲಿ 241 ಕೋಟಿ ರೂ. ಸಂಪಾದಿಸಿದ್ದಾಗಿ ಅವರು ಈ ಹಿಂದೆ ತಿಳಿಸಿದ್ದರು.

ಮತ್ತಷ್ಟು ಓದಿ: Assembly Elections: ಠೇವಣಿ ಉಳಿಯಬೇಕಾದರೆ ಅಭ್ಯರ್ಥಿ ಎಷ್ಟು ಮತ ಪಡೆಯಬೇಕು?

10ನೇ ತರಗತಿ: 1991 ರಲ್ಲಿ ಬಕ್ಸಾರ್‌ನ ಎಂ.ಪಿ ಪ್ರೌಢಶಾಲೆಯಲ್ಲಿ ಅಧ್ಯಯನ

12ನೇ ತರಗತಿ: 1993 ರಲ್ಲಿ ಪ್ರಸಿದ್ಧ ಪಾಟ್ನಾ ವಿಜ್ಞಾನ ಕಾಲೇಜಿನಿಂದ ಅಧ್ಯಯನ ಪೂರ್ಣ

ಬಿಬಿಎ (BBA) ಪದವಿ: 1996 – 1999 ರ ಅವಧಿಯಲ್ಲಿ ಲಕ್ನೋ ವಿಶ್ವವಿದ್ಯಾಲಯದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಶನ್ ಪದವಿ.

ಮಾಸ್ಟರ್ ಆಫ್ ಹೆಲ್ತ್ ಅಡ್ಮಿನಿಸ್ಟ್ರೇಷನ್ (MHA): 2001 – 2003 ರ ಅವಧಿಯಲ್ಲಿ ಹೈದರಾಬಾದ್‌ನ ‘ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಕಾಲೇಜ್ ಆಫ್ ಇಂಡಿಯಾ’ದಿಂದ (ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ) ಸ್ನಾತಕೋತ್ತರ ಪದವಿ.

ಫ್ರೆಂಚ್ ಭಾಷಾ ಪ್ರಾವೀಣ್ಯತೆ: 2010 ರಲ್ಲಿ ಫ್ರಾನ್ಸ್‌ನ ಕ್ಲರ್ಮಾಂಟ್-ಫೆರಾಂಡ್ ವಿಶ್ವವಿದ್ಯಾಲಯದ ಸಂಯೋಜಿತ ಸಂಸ್ಥೆಯಲ್ಲಿ ತೀವ್ರತರವಾದ ಫ್ರೆಂಚ್ ಭಾಷಾ ಅಧ್ಯಯನ ನಡೆಸಿದ್ದಾರೆ.

2021 ರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಚುನಾವಣೆಯ ಭಾರಿ ಗೆಲುವಿನ ನಂತರ ಪ್ರಶಾಂತ್ ಕಿಶೋರ್ ಅವರು ತಾವು ಇತರ ಪಕ್ಷಗಳಿಗೆ ರಾಜಕೀಯ ತಂತ್ರಜ್ಞ ಆಗಿ ಕೆಲಸ ಮಾಡುವುದನ್ನು ಅಧಿಕೃತವಾಗಿ ನಿಲ್ಲಿಸುವುದಾಗಿ ಘೋಷಿಸಿದರು. ನಂತರ ಬಿಹಾರಕ್ಕೆ ಮರಳಿ ‘ಜನ ಸುರಾಜ್’ ಎಂಬ ಸ್ವಂತ ರಾಜಕೀಯ ಸಂಘಟನೆಯನ್ನು ಕಟ್ಟಿ, ಪ್ರಸ್ತುತ ಬಿಹಾರದ ಬಂಕಿಪುರ ವಿಧಾನಸಭಾ ಉಪಚುನಾವಣೆಯ ಮೂಲಕ ತಾವೇ ಖುದ್ದಾಗಿ ನೇರ ರಾಜಕಾರಣಕ್ಕೆ ಇಳಿದಿದ್ದಾರೆ.

ಬಂಕಿಪುರದಲ್ಲಿ ಉಪಚುನಾವಣೆ ಏಕೆ?

ಬಿಜೆಪಿಯ ಪ್ರಭಾವಿ ನಾಯಕರಾಗಿದ್ದ ನಿತಿನ್ ನಬಿನ್ ಅವರು 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಂಕಿಪುರ ಕ್ಷೇತ್ರದಿಂದ ಭಾರಿ ಅಂತರದಲ್ಲಿ ಗೆದ್ದಿದ್ದರು. ಆದರೆ, ಇತ್ತೀಚೆಗೆ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಹಾಗೂ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಹೀಗಾಗಿ ಈ ಕ್ಷೇತ್ರ ತೆರವಾಗಿದ್ದು, ಸದ್ಯ ಬಿಜೆಪಿ ಅಭ್ಯರ್ಥಿ ನೀರಜ್ ಸಿನ್ಹಾ ಮತ್ತು ಜನ ಸುರಾಜ್ ಪಕ್ಷದ ಪ್ರಶಾಂತ್ ಕಿಶೋರ್ ನಡುವೆ ಬಂಕಿಪುರದಲ್ಲಿ ನೇರ ಹಾಗೂ ಜಿದ್ದಾಜಿದ್ದಿನ ಫೈಟ್ ಏರ್ಪಟ್ಟಿದೆ. ಜುಲೈ 30ರ ಮತದಾನ ಹಾಗೂ ಆಗಸ್ಟ್ 3ರ ಫಲಿತಾಂಶದ ಮೇಲೆ ಇಡೀ ಬಿಹಾರದ ಕಣ್ಣಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:44 am, Tue, 14 July 26

Source link

Navagrahas in Temples: ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪ ಏಕೆ ಇರುವುದಿಲ್ಲ? ಇದರ ಹಿಂದಿನ ಆಧ್ಯಾತ್ಮಿಕ ಕಾರಣ ಇಲ್ಲಿದೆ – Kannada News | Navagrahas in Temples: Why Ancient Vaishnava Shrines Lack Them While Shiva Temples Don’t

ಹಿಂದೂ ಧರ್ಮದಲ್ಲಿ ನವಗ್ರಹಗಳಿಗೆ ವಿಶೇಷ ಮಹತ್ವವಿದೆ. ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ, ಶನಿ, ರಾಹು ಮತ್ತು ಕೇತು ಈ ಒಂಬತ್ತು ಗ್ರಹಗಳು ಮಾನವನ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಆದ್ದರಿಂದ ದೇವಾಲಯಗಳಿಗೆ ತೆರಳುವ ಅನೇಕ ಭಕ್ತರು ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಿ ಆಶೀರ್ವಾದ ಪಡೆಯುತ್ತಾರೆ. ಆದರೆ ಒಂದು ಕುತೂಹಲಕಾರಿ ವಿಷಯವೆಂದರೆ, ಅನೇಕ ಪ್ರಾಚೀನ ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪಗಳು ಕಾಣಿಸುವುದಿಲ್ಲ.

ವೈಷ್ಣವ ದೇವಾಲಯಗಳಲ್ಲಿ ನವಗ್ರಹ ಮಂಟಪ ಇಲ್ಲದಿರಲು ಕಾರಣವೇನು?

ಆಧ್ಯಾತ್ಮಿಕ ಸಂಪ್ರದಾಯದ ಪ್ರಕಾರ, ವಿಷ್ಣುವೇ ಎಲ್ಲಾ ಗ್ರಹಶಕ್ತಿಗಳ ಮೂಲಸ್ವರೂಪ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ತನ್ನನ್ನು ಸರ್ವವ್ಯಾಪಿ ಪರಮಾತ್ಮನೆಂದು ವಿವರಿಸಿದ್ದಾನೆ. ಹೀಗಾಗಿ ವಿಷ್ಣುವಿನ ಆರಾಧನೆಯೇ ನವಗ್ರಹಗಳ ಆರಾಧನೆಗೆ ಸಮಾನ ಎಂಬ ನಂಬಿಕೆ ಇದೆ. ಇದೇ ಕಾರಣದಿಂದ ಅನೇಕ ಹಳೆಯ ವೈಷ್ಣವ ದೇವಾಲಯಗಳಲ್ಲಿ ನವಗ್ರಹಗಳನ್ನು ಪ್ರತ್ಯೇಕವಾಗಿ ಪ್ರತಿಷ್ಠಾಪಿಸುವ ಸಂಪ್ರದಾಯ ಇರಲಿಲ್ಲ.

ಶಿವ ದೇವಾಲಯಗಳಲ್ಲಿ ನವಗ್ರಹ ಮಂಟಪ ಏಕೆ ಇರುತ್ತದೆ?

ಶಿವನನ್ನು ನವಗ್ರಹಗಳ ಅಧಿಪತಿ ಹಾಗೂ ಗ್ರಹದೋಷಗಳನ್ನು ಶಮನಗೊಳಿಸುವ ದೇವರೆಂದು ಭಕ್ತರು ನಂಬುತ್ತಾರೆ. ಆದ್ದರಿಂದ ಶಿವ ದೇವಾಲಯಗಳಲ್ಲಿ ನವಗ್ರಹ ಮಂಟಪಗಳನ್ನು ನಿರ್ಮಿಸಿ, ಗ್ರಹಶಾಂತಿ ಹಾಗೂ ನವಗ್ರಹ ಪೂಜೆಗಳನ್ನು ನಡೆಸುವ ಪದ್ಧತಿ ಹೆಚ್ಚು ಪ್ರಚಲಿತದಲ್ಲಿದೆ.

ಇದನ್ನೂ ಓದಿ: ಚಿಕ್ಕ ಮಕ್ಕಳಿಗೆ ಕನ್ನಡಿ ತೋರಿಸಬಾರದು ಏಕೆ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ

ಇತ್ತೀಚಿನ ದೇವಾಲಯಗಳಲ್ಲಿ ಬದಲಾಗಿರುವ ಸಂಪ್ರದಾಯ:

ಕಾಲಕ್ರಮೇಣ ದೇವಾಲಯಗಳ ನಿರ್ಮಾಣ ಶೈಲಿಯಲ್ಲೂ ಬದಲಾವಣೆಗಳಾಗಿವೆ. ಭಕ್ತರ ಅನುಕೂಲಕ್ಕಾಗಿ ಗಣಪತಿ, ಸುಬ್ರಹ್ಮಣ್ಯ, ಅಮ್ಮನವರು ಹಾಗೂ ನವಗ್ರಹಗಳಂತಹ ಉಪದೇವತೆಗಳ ಸನ್ನಿಧಿಗಳನ್ನು ಒಂದೇ ದೇವಾಲಯದ ಆವರಣದಲ್ಲಿ ನಿರ್ಮಿಸಲಾಗುತ್ತಿದೆ. ಈ ಕಾರಣದಿಂದಾಗಿ ಇತ್ತೀಚಿನ ಕೆಲವು ವೈಷ್ಣವ ದೇವಾಲಯಗಳಲ್ಲೂ ನವಗ್ರಹ ಮಂಟಪಗಳನ್ನು ಕಾಣಬಹುದು.

ನವಗ್ರಹ ಪ್ರದಕ್ಷಿಣೆಯ ಬಳಿಕ ಪಾದಗಳನ್ನು ತೊಳೆಯಬೇಕೇ?

ನವಗ್ರಹಗಳಿಗೆ ಪ್ರದಕ್ಷಿಣೆ ಹಾಕಿದ ನಂತರ ಪಾದಗಳನ್ನು ತೊಳೆಯುವುದು ಕಡ್ಡಾಯ ಎಂಬ ನಿಯಮ ಧರ್ಮಶಾಸ್ತ್ರಗಳಲ್ಲಿ ಇಲ್ಲ. ಆದರೆ ಶನಿ ದೇವರಿಗೆ ಎಣ್ಣೆ ಅಭಿಷೇಕ ಅಥವಾ ವಿಶೇಷ ಪೂಜೆಗಳಲ್ಲಿ ಭಾಗವಹಿಸಿದ ಸಂದರ್ಭಗಳಲ್ಲಿ ಸ್ವಚ್ಛತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಪಾದಗಳನ್ನು ತೊಳೆಯುವುದು ಉತ್ತಮ ಎಂದು ವಿದ್ವಾಂಸರು ಸಲಹೆ ನೀಡುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಡುಪಿ ಶ್ರೀಕೃಷ್ಣದಲ್ಲಿ ಆದಿ ಶಂಕರಾಚಾರ್ಯರ ನಿಂದನೆ ವಿವಾದ: ಕ್ಷಮೆ ಯಾಚಿಸಿದ ಹರಿಕಥೆ ಕಲಾವಿದೆ, ಶಿರೂರು ಮಠದಿಂದಲೂ ಸ್ಪಷ್ಟನೆ – Kannada News | Udupi Sri Krishna Mutt Adi Shankaracharya controversy: Harikatha Artist Apologises, Shirur Mutt Issues Clarification

ಹರಿಕಥೆ ಕಲಾವಿದೆ ಹಾಗೂ ಶಿರೂರು ಮಠದ ಸ್ಪಷ್ಟನೆImage Credit source: tv9

ಉಡುಪಿ, ಜುಲೈ 14: ಉಡುಪಿ  (Udupi) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಹರಿಕಥೆ ಕಲಾವಿದೆ ವಿಡಿಯೋ ಸಂದೇಶದ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಜೊತೆಗೆ, ಈ ವಿಚಾರದಲ್ಲಿ ಉಡುಪಿ ಮಠ ಅಥವಾ ಶಿರೂರು ಮಠಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಕಲಾವಿದೆ, ‘ಯಾರನ್ನೂ ನಿಂದಿಸುವ ಉದ್ದೇಶ ನಮಗಿರಲಿಲ್ಲ. ಯಾವುದೇ ಮಧ್ವ ಮಠದವರು ಈ ರೀತಿಯ ಹೇಳಿಕೆ ನೀಡುವಂತೆ ನಮಗೆ ಹೇಳಿಕೊಟ್ಟಿಲ್ಲ. ಪುಸ್ತಕವನ್ನು ಉಲ್ಲೇಖಿಸಿ ಓದಿದ್ದೇವೆ. ನಮ್ಮ ಮಾತಿನಿಂದ ಬೇರೆ ಮತದವರಿಗೆ ಅಥವಾ ಮಠದವರಿಗೆ ನೋವಾಗಿದ್ದರೆ ಹೃತ್ಪೂರ್ವಕ ಕ್ಷಮೆ ಕೋರುತ್ತೇವೆ’ ಎಂದು ಹೇಳಿದ್ದಾರೆ.

ಹರಿಕಥೆ ಕಲಾವಿದೆಯ ಕ್ಷಮೆಯಾಚನೆ ವಿಡಿಯೋ

ವಿಷಾದ ವ್ಯಕ್ತಪಡಿಸಿದ ಶಿರೂರು ಮಠ

ಘಟನೆಗೆ ಸಂಬಂಧಿಸಿದಂತೆ ಪರ್ಯಾಯ ಶಿರೂರು ಮಠವೂ ಅಧಿಕೃತ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ. ಶಿರೂರು ಮಠದ ದಿವಾನರಾದ ಡಾ. ಉದಯಕುಮಾರ ಸರಳತ್ತಾಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ಮಠದ ಸುಪರ್ದಿಯಲ್ಲಿರುವ ರಾಜಾಂಗಣದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದ್ದಾರೆ. ಅಂಕಿತಾ ನಾಯಕ್ ಹಾಗೂ ಗೌರಿ ಪಾಂಡುರಂಗಿ ಅವರು ಭರತನಾಟ್ಯ ಕಾರ್ಯಕ್ರಮಕ್ಕಾಗಿ ಅನುಮತಿ ಕೋರಿದ್ದು, ಕಾರ್ಯಕ್ರಮದ ಮಧ್ಯೆ ‘ಭಕ್ತ ಪ್ರಹ್ಲಾದ’ ಹರಿಕಥೆ ನಡೆಸಲಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಯುವತಿಯರಿಂದ ಶ್ರೀ ಆದಿ ಶಂಕರಾಚಾರ್ಯರ ನಿಂದನೆ ಆರೋಪ: ವಿಡಿಯೋ ವೈರಲ್​​

ಆ ಸಂದರ್ಭದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಕುರಿತು ಅಕ್ಷೇಪಾರ್ಹ ಹೇಳಿಕೆ ನೀಡಿರುವುದು ಮಠದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಬ್ಬರಿಗೂ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸೂಚಿಸಲಾಗಿತ್ತು. ಅದರಂತೆ ಅವರು ಕ್ಷಮೆಯಾಚಿಸಿದ್ದು, ಈ ಅನಪೇಕ್ಷಿತ ಘಟನೆಯ ಬಗ್ಗೆ ಮಠ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಂಗಳೂರಿನಲ್ಲಿ ಮತ್ತೆ 11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ – Kannada News | 11 More Illegal Bangladeshi Immigrants Detained in Mangaluru During Police Crackdown; Total Reaches 17

11 ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನImage Credit source: Mangalore Police

ಮಂಗಳೂರು, ಜುಲೈ 14: ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada)  ಮಂಗಳೂರು (Mangaluru) ನಗರದ ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಇದರೊಂದಿಗೆ, ಕಳೆದ ಕೆಲವು ದಿನಗಳಲ್ಲಿ ಮಂಗಳೂರಿನಲ್ಲಿ ಪತ್ತೆಯಾದ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ.

ಬಂಧಿತರನ್ನು ಎಂ.ಡಿ. ಕೌಸರ್ ಅಲಿ, ಎಂ.ಡಿ. ನೂರ್ ಅಮೀನ್, ಎಂ.ಡಿ. ನಾಹಿದುಲ್ ಇಸ್ಲಾಂ, ಹುಮಾಯೂನ್ ಕಬೀರ್, ರೊಮ್ಜಾನ್ ಅಲಿ, ಅಬ್ದುಲ್ ರಹಮಾನ್ ರೊಯೆಲ್ ಹಾಗೂ ನೋಯಾನ್ ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಅಪ್ರಾಪ್ತರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ನಕಲಿ ವಿಳಾಸದಲ್ಲಿ ಬಂದವರು

ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ನುಸುಳಿ, ಪಶ್ಚಿಮ ಬಂಗಾಳದ ನಕಲಿ ವಿಳಾಸಗಳನ್ನು ಬಳಸಿಕೊಂಡು ಮಂಗಳೂರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಮೂಲದ ಏಜೆಂಟ್ ಒಬ್ಬರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬಂಧಿತರಿಂದ ಬಾಂಗ್ಲಾ ಗುರುತಿನ ಚೀಟಿ ವಶ

ಕಾರ್ಯಾಚರಣೆಯ ವೇಳೆ ಬಂಧಿತರ ಬಳಿಯಿಂದ ಬಾಂಗ್ಲಾದೇಶದ ರಾಷ್ಟ್ರೀಯ ಗುರುತಿನ ಚೀಟಿ (National ID Card), ಜನನ ಪ್ರಮಾಣಪತ್ರ ಹಾಗೂ ಕುಟುಂಬಕ್ಕೆ ಸಂಬಂಧಿಸಿದ ಇತರ ದಾಖಲೆಗಳು ಪತ್ತೆಯಾಗಿವೆ. ಈ ದಾಖಲೆಗಳ ಆಧಾರದ ಮೇಲೆ ಅವರು ಬಾಂಗ್ಲಾದೇಶದ ನಿವಾಸಿಗಳೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸುರತ್ಕಲ್​ನಲ್ಲಿ 11 ಮಂದಿಯ ಬಂಧಿಸಿದ್ದ ಪೊಲೀಸರು

ಇತ್ತೀಚೆಗೆ ಸುರತ್ಕಲ್‌ನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಉರ್ವಾದಲ್ಲಿ 11 ಮಂದಿಯನ್ನು ಬಂಧಿಸಿರುವುದರಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪತ್ತೆಯಾದ ಅಕ್ರಮ ವಲಸಿಗರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಅಕ್ರಮ ವಲಸಿಗರ ಸದ್ದು: ಮಂಗಳೂರಲ್ಲಿ 6 ಮಂದಿ ವಶಕ್ಕೆ; ಮಂಡ್ಯಕ್ಕೂ ಎಂಟ್ರಿ ಕೊಟ್ರಾ ಬಾಂಗ್ಲಾ ಪ್ರಜೆಗಳು?

ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಗೆ ಸಲ್ಲಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ಅಕ್ರಮ ವಲಸೆ ಜಾಲದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಬಗ್ಗೆ ಕೂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಸ್ತ್ರಚಿಕಿತ್ಸೆ ಮಾಡದೆ ನಿರ್ಲಕ್ಷ್ಯ, ಮಹಿಳೆ ಸಾವು: ಜಯದೇವ ಹೃದ್ರೋಗ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ – Kannada News | Jayadeva Hospital Negligence Allegation: Family Claims 65 Year Old Woman Died After Delay in Heart Surgery

ಬೆಂಗಳೂರು, ಜುಲೈ 14: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವಿರುದ್ಧ ವೈದ್ಯಕೀಯ ನಿರ್ಲಕ್ಷ್ಯದ ಗಂಭೀರ ಆರೋಪ ಕೇಳಿಬಂದಿದೆ. 65 ವರ್ಷದ ಮಾಯಮ್ಮ ಎಂಬ ಮಹಿಳೆಗೆ ತುರ್ತು ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೂ, ಸಮಯಕ್ಕೆ ಚಿಕಿತ್ಸೆ ನೀಡದೆ ವಿಳಂಬ ಮಾಡಿದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರ ಪ್ರಕಾರ, ಕಳೆದ ಶುಕ್ರವಾರ ಮಾಯಮ್ಮ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ಬಳಿಕ ತಕ್ಷಣ ಓಪನ್ ಹಾರ್ಟ್ ಸರ್ಜರಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿ, ಹೆಚ್ಚಿನ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಜಯದೇವ ಆಸ್ಪತ್ರೆಗೆ ದಾಖಲಾದ ನಂತರ ಸೋಮವಾರ ರಾತ್ರಿ ತನಕ ಸೂಕ್ತ ಚಿಕಿತ್ಸೆ ನೀಡಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿನ ಆಪರೇಷನ್ ಯೂನಿಟ್ ಬಳಕೆಯ ವಿಚಾರವಾಗಿ ಇಬ್ಬರು ವೈದ್ಯರ ನಡುವೆ ಉಂಟಾದ ಭಿನ್ನಾಭಿಪ್ರಾಯ ಮತ್ತು ಪೈಪೋಟಿಯ ಕಾರಣ ಶಸ್ತ್ರಚಿಕಿತ್ಸೆ ನಡೆಯಲಿಲ್ಲ ಎಂದು ಮೃತೆಯ ಪುತ್ರ ಹಾಗೂ ಸೊಸೆ ಆರೋಪಿಸಿದ್ದಾರೆ. ಈ ವಿಳಂಬವೇ ಮಾಯಮ್ಮ ಅವರ ಸಾವಿಗೆ ಕಾರಣವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಸೋಮವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಮಾಯಮ್ಮ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ತಾಯಿಗೆ ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡಿದ್ದರೆ ಜೀವ ಉಳಿಯುತ್ತಿತ್ತು ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜಯದೇವ ಆಸ್ಪತ್ರೆ ಆಡಳಿತ ಹಾಗೂ ವೈದ್ಯರ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಜಯದೇವ ಆಸ್ಪತ್ರೆ ಆಡಳಿತ ಅಥವಾ ಸಂಬಂಧಪಟ್ಟ ವೈದ್ಯರಿಂದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಸುಪ್ರೀಂ ಕೋರ್ಟ್ ಖಡಕ್ ಸೂಚನೆ; ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ! – Kannada News | Supreme Court Takes Serious Note of Ayodhya Ram Mandir Donation Theft Case, Issues Notices

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣವು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಸಿಬಿಐ ತನಿಖೆಗೆ ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದ್ದು, ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು, ಅಯೋಧ್ಯೆ ಕಾಣಿಕೆ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಸ್ತುತ ತನಿಖೆ ನಡೆಸುತ್ತಿರುವ ಎಸ್ಐಟಿಗೆ, ಪ್ರಕರಣದ ಪ್ರಗತಿ ವರದಿಯನ್ನು ಒಂದು ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಅಲ್ಲದೆ, ರಾಮಮಂದಿರ ಟ್ರಸ್ಟ್ ಸದ್ಯಕ್ಕೆ ಯಾವುದೇ ದೊಡ್ಡ ಹಣಕಾಸು ವಹಿವಾಟು ನಡೆಸಬಾರದು ಎಂದು ಖಡಕ್ ಸೂಚನೆ ನೀಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಚಂದ್ರದ್ರೋಣ ಪರ್ವತ ಚಾರಣ ದುರಂತದ ಎಫೆಕ್ಟ್: ಇನ್ನೂ ಆರಂಭವಾಗದ ಟ್ರೆಕಿಂಗ್, ಚಾರಣ ಪ್ರಿಯರ ಪರದಾಟ! – Kannada News | Trekking Ban in Karnataka: Bengaluru Trekking Spots Closed Awaiting New SOP Rules

ಬೆಂಗಳೂರು, ಜುಲೈ 14: ಮಡಿಕೇರಿ ಹಾಗೂ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಡೆದ ಚಾರಣ (Trekking) ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ರಾಜ್ಯದಾದ್ಯಂತ ಟ್ರೆಕಿಂಗ್ ಚಟುವಟಿಕೆಗಳಿಗೆ ತಾತ್ಕಾಲಿಕ ಬ್ರೇಕ್ ಹಾಕಿತ್ತು. ಚಾರಣಿಗರ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಹೊಸ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಜಾರಿಗೆ ತರುವವರೆಗೆ ನಿರ್ಬಂಧ ಹೇರಲಾಗಿತ್ತು. ಆದರೆ, ಇಷ್ಟು ದಿನ ಕಳೆದರೂ ಎಸ್‌ಒಪಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸದ ಕಾರಣ ರಾಜ್ಯದ ಹಲವೆಡೆ ಟ್ರೆಕಿಂಗ್ ಇನ್ನೂ ಆರಂಭವಾಗಿಲ್ಲ. ಇದು ಚಾರಣ ಪ್ರಿಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ದುರಂತದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದನಾ ಪ್ರಪಾತಕ್ಕೆ ಬಿದ್ದು ದುರ್ಮರಣಕ್ಕೀಡಾಗಿದ್ದರು. ಈ ಘೋರ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ, ಚಾರಣಿಗರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಹೊಸ ಎಸ್‌ಒಪಿ ಜಾರಿಗೆ ತಂದಿದೆ. ಆದರೆ, ಇದರ ಅನುಷ್ಠಾನ ಪ್ರಕ್ರಿಯೆ ತಡವಾಗುತ್ತಿರುವುದರಿಂದ ಚಂದ್ರದ್ರೋಣ ಪರ್ವತದ ಜೊತೆಗೆ ಬೆಂಗಳೂರಿಗರ ಅಚ್ಚುಮೆಚ್ಚಿನ ತಾಣಗಳಾದ ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಕಂದಗಿರಿ ಮತ್ತು ಕೈವಾರ ಬೆಟ್ಟಗಳಲ್ಲೂ ಚಾರಣ ಚಟುವಟಿಕೆಗಳು ಇನ್ನೂ ಸ್ಥಗಿತಗೊಂಡಿವೆ.

ಇದನ್ನೂ ಓದಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ

ಹೊಸ ಎಸ್‌ಒಪಿಯ ಕಠಿಣ ನಿಯಮಗಳೇನು?

ಚಿಕ್ಕಬಳ್ಳಾಪುರ ಡಿಎಫ್‌ಒ ಗಿರೀಶ್ ಅವರು ನೀಡಿರುವ ಮಾಹಿತಿ ಪ್ರಕಾರ, ಸ್ಕಂದಗಿರಿ ಮತ್ತು ಕೈವಾರ ಬೆಟ್ಟಗಳಲ್ಲಿ ಪ್ರತಿದಿನ ಸುಮಾರು 150 ಜನರಿಗೆ ಚಾರಣಕ್ಕೆ ಅವಕಾಶವಿತ್ತು. ಆದರೆ ಹೊಸ ನಿಯಮಗಳ ಅನುಷ್ಠಾನವಾಗದ ಕಾರಣ ಈಗ ನಿರ್ಬಂಧ ಮುಂದುವರಿದಿದೆ. ನೂತನ ನಿಯಮಗಳು ಈ ಕೆಳಗಿನಂತಿವೆ:

  • ಪ್ರತಿ 10 ಮಂದಿ ಚಾರಣಿಗರಿಗೆ ಒಬ್ಬ ಗೈಡ್ ಕಡ್ಡಾಯ ಹಾಗೂ ಗೈಡ್ ಬಳಿ ಫಸ್ಟ್ ಎಯ್ಡ್ ಕಿಟ್, ಟಾರ್ಚ್ ಇರಬೇಕು.
  • ಚಾರಣದ ಅವಧಿಯಲ್ಲಿ ಗೈಡ್ ಮತ್ತು ಚಾರಣಿಗರು ಬೇಸ್ ಕ್ಯಾಂಪ್‌ನೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
  • ಟ್ರೆಕಿಂಗ್ ಮಾರ್ಗದ ಕೆಎಂಎಲ್ (KML) ಫೈಲ್‌ಗಳನ್ನು ಚಾರಣಿಗರ ಮೊಬೈಲ್‌ನಲ್ಲಿ ಅಪ್‌ಲೋಡ್ ಮಾಡಬೇಕು.
  • ನೆಟ್‌ವರ್ಕ್ ಇಲ್ಲದ ಬ್ಲ್ಯಾಕ್ ಸ್ಪಾಟ್‌ಗಳ ಬಗ್ಗೆ ಮುಂಚಿತವಾಗಿಯೇ ಮಾಹಿತಿ ನೀಡಬೇಕು.
  • 60 ವರ್ಷ ಮೇಲ್ಪಟ್ಟವರಿಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರ ಕಡ್ಡಾಯವಾಗಿದೆ.

ನೂತನ ಎಸ್‌ಒಪಿಯ ಎಲ್ಲಾ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ ಬಳಿಕವೇ ಸ್ಕಂದಗಿರಿ ಮತ್ತು ಕೈವಾರ ಬೆಟ್ಟಗಳು ಸೇರಿದಂತೆ ರಾಜ್ಯದ ಹಲವು ಟ್ರೆಕಿಂಗ್ ಸ್ಪಾಟ್​ಗಳಲ್ಲಿ ಮತ್ತೆ ಟ್ರೆಕಿಂಗ್ ಚಟುವಟಿಕೆ ಆರಂಭವಾಗಲಿದೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ. ಆದರೆ, ವಿಳಂಬ ನೀತಿಯಿಂದ ಬೇಸತ್ತಿರುವ ಚಾರಣ ಪ್ರಿಯರು ಶೀಘ್ರವಾಗಿ ಸಿದ್ಧತೆ ಮುಗಿಸಿ ಚಾರಣಕ್ಕೆ ಮುಕ್ತ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತದ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ 1ನೇ ಸ್ಥಾನ – Kannada News | Yash starrer Toxic Tops IMDb Most Anticipated Films List, Setting New Records

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic) ಸದ್ಯ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಈ ಚಿತ್ರದ ವಿರುದ್ಧ ಎಷ್ಟೇ ನೆಗೆಟಿವ್ ಸುದ್ದಿಗಳು ಹರಿದಾಡುತ್ತಿದ್ದರೂ, ಯಾವುದೂ ಚಿತ್ರದ ಕ್ರೇಜ್‌ಗೆ ಧಕ್ಕೆ ತರಲು ಸಾಧ್ಯವಾಗಿಲ್ಲ. ಸಿನಿಮಾ ರಿಲೀಸ್ ವಿಳಂಬ ಆದರೂ ಚಿತ್ರದ ಮೇಲಿರುವ ನಿರೀಕ್ಷೆ ಒಂದುಚೂರು ಕಮ್ಮಿ ಆಗಿಲ್ಲ ಎಂಬುದಕ್ಕೆ ಐಎಂಡಿಬಿ ಬಿಡುಗಡೆ ಮಾಡಿರುವ ಹೊಸ ಪಟ್ಟಿಯೇ ಸಾಕ್ಷಿ.

ಭಾರತದ ಅತ್ಯಂತ ನಿರೀಕ್ಷಿತ ಹೊಸ ಚಿತ್ರಗಳ ರಿಯಲ್-ಟೈಮ್ ಜನಪ್ರಿಯತೆಯ ಪಟ್ಟಿಯಲ್ಲಿ ‘ಟಾಕ್ಸಿಕ್’ ಮೊದಲ ಸ್ಥಾನವನ್ನು ಅಲಂಕರಿಸಿದೆ. ಭಾರತದ ಬೇರೆ ಯಾವ ದೊಡ್ಡ ಸಿನಿಮಾಗೂ ಇದರ ಹತ್ತಿರ ಸುಳಿಯಲು ಸಾಧ್ಯವಾಗಿಲ್ಲ ಎಂಬುದು ಚಿತ್ರದ ಹೆಚ್ಚುಗಾರಿಕೆ. ಇದು ಯಶ್ ಕ್ರೇಜ್​​ಗೆ ಹಿಡಿದ ಕೈಗನ್ನಡಿಯಾಗಿದೆ.

ಬಹುನಿರೀಕ್ಷಿತ ಸಿನಿಮಾ ಪಟ್ಟಿಯಲ್ಲಿ ‘ಟಾಕ್ಸಿಕ್’ ಸಿನಿಮಾ ಶೇಕಡಾ 47 ರಷ್ಟು ವೋಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿರುವ ತಮಿಳು ನಟ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಕೇವಲ ಶೇಕಡಾ 12.7 ರಷ್ಟು ವೋಟ್‌ಗಳನ್ನು ಪಡೆದುಕೊಂಡಿದೆ. ಇದನ್ನು ಗಮನಿಸಿದರೆ ಯಶ್ ಅವರ ಸಿನಿಮಾದ ಮೇಲಿರುವ ಕ್ರೇಜ್ ಭಾರತೀಯ ಚಿತ್ರರಂಗದಲ್ಲಿ ಎಷ್ಟು ಅಗಾಧವಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಮತ್ತೊಂದೆಡೆ ಬಹುನಿರೀಕ್ಷಿತ ಸೀಕ್ವೆಲ್ ಚಿತ್ರಗಳಾದ ‘ಆವಾರಾಪನ್ 2’ ಶೇಕಡಾ 9.4 ಹಾಗೂ ‘ಇಂದ್ರಜಾಲ್’ ಶೇಕಡಾ 9.1 ರಷ್ಟು ವೋಟ್‌ಗಳೊಂದಿಗೆ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಲೋಕೇಶ್ ಕನಕರಾಜ್ ನಟನೆಯ ‘ಡಿಸಿ’ ಸಿನಿಮಾ ಶೇಕಡಾ 7.4 ರಷ್ಟು ಪಡೆದಿದ್ದರೆ, ಶ್ರದ್ಧಾ ಕಪೂರ್ ನಟನೆಯ ‘ಈಥಾ’, ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಹಾಗೂ ಸೂಪರ್ ಹಿಟ್ ವೆಬ್ ಸರಣಿಯ ‘ಮಿರ್ಜಾಪುರ್: ದಿ ಮೂವಿ’ ಕೂಡ ತಲಾ ಮೂರು ಶೇಕಡಾಗಿಂತಲೂ ಕಡಿಮೆ ಕ್ರೇಜ್‌ನೊಂದಿಗೆ ಈ ಪಟ್ಟಿಯಲ್ಲಿ ಕೊನೆಯ ಸಾಲಿನಲ್ಲಿವೆ.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಅಡ್ವಾಣಿಗೆ ಬಂಪರ್ ಸಂಭಾವನೆ; 15 ಕೋಟಿ ರೂಪಾಯಿ ಪಡೆದ ನಟಿ

ಚಿತ್ರದ ರಿಲೀಸ್ ಸಂದರ್ಭದಲ್ಲಿ ‘ಟಾಕ್ಸಿಕ್’ ಇಷ್ಟೊಂದು ದೊಡ್ಡ ಮಟ್ಟದ ಸದ್ದು ಮಾಡುತ್ತಿರುವುದು ಯಶ್ ಅವರ ಜಾಗತಿಕ ಮಾರುಕಟ್ಟೆಯ ತಾಕತ್ತನ್ನು ತೋರಿಸುತ್ತದೆ. ವಿರೋಧಿಗಳು ಹಬ್ಬಿಸುತ್ತಿರುವ ಯಾವುದೇ ನೆಗೆಟಿವ್ ಕಮೆಂಟ್‌ಗಳು ಅಥವಾ ಸುಳ್ಳು ಸುದ್ದಿಗಳು ಚಿತ್ರದ ಪ್ರಚಾರಕ್ಕೆ ಯಾವುದೇ ಪ್ರಭಾವ ಬೀರುತ್ತಿಲ್ಲ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಆ್ಯಕ್ಷನ್ ಎಂಟರ್‌ಟೈನರ್ ಚಿತ್ರದ ಮೂಲಕ ರಾಕಿ ಭಾಯ್ ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಮತ್ತೊಂದು ಬಿರುಗಾಳಿ ಎಬ್ಬಿಸಲು ಸಂಪೂರ್ಣವಾಗಿ ಸಜ್ಜಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version