ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್​ ಕಣ್ಣೀರು

ದಾವಣಗೆರೆ, ಮೇ 29: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆ ದಾವಣಗೆರೆಯಲ್ಲಿ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್​ ಕಣ್ಣೀರು ಹಾಕಿದ್ದಾರೆ. ಸಿದ್ದರಾಮಯ್ಯರನ್ನು ಕಳೆದ 2-3 ದಿನಗಳಿಂದ ನೋಡಲು ಆಗುತ್ತಿಲ್ಲ. ಅವರು ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋದ ನಾಯಕರಾಗಿದ್ದು, ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ. ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ ಹಿನ್ನೆಲೆ ಸಂಪುಟ ವಿಸರ್ಜನೆಗೊಂಡಿದ್ದು, ಡಿ.ಕೆ.ಶಿವಕುಮಾರ್ ನೂತನ​ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಈ ವೇಳೆ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ರೇಸ್ ಕೋರ್ಸ್ ರಸ್ತೆ ಕಾಮಗಾರಿ: 8 ತಿಂಗಳಾದರೂ ಮುಗಿಯದ ಕೆಲಸಕ್ಕೆ ಸಾರ್ವಜನಿಕರ ಹಿಡಿಶಾಪ!

ರೇಸ್ ಕೋರ್ಸ್ ರಸ್ತೆಯಲ್ಲಿ ಕಾಮಗಾರಿ

ಬೆಂಗಳೂರು, ಮೇ 29: ನಗರದ ರಸ್ತೆ ಕಾಮಗಾರಿಗಳು ಸಾರ್ವಜನಿಕರ ತಾಳ್ಮೆ ಪರೀಕ್ಷೆ ಮಾಡುವುದು ಹೊಸದೇನಲ್ಲ. ಇದಕ್ಕೆ ಮತ್ತೊಂದು ತಾಜಾ ಸಾಕ್ಷಿ ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ರಸ್ತೆ. ಜಿಬಿಎ (GBA) ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಇಲ್ಲಿನ ರಸ್ತೆ ಕಾಮಗಾರಿ ಆರಂಭವಾಗಿ ಬರೋಬ್ಬರಿ 8 ತಿಂಗಳು ಕಳೆದರೂ ಇನ್ನು ಪೂರ್ಣಗೊಂಡಿಲ್ಲ. ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮುಖ್ಯಾಂಶಗಳು

  • ರೇಸ್ ಕೋರ್ಸ್ ರಸ್ತೆ ಕಾಮಗಾರಿ ಎಂಟು ತಿಂಗಳಾದರೂ ಮುಗಿಯದೆ ಆಮೆಗತಿಯಲ್ಲಿ ಸಾಗುತ್ತಿದೆ.

  • ಯಾವುದೇ ಮುಂಜಾಗ್ರತಾ ಸುರಕ್ಷತಾ ಬ್ಯಾರಿಕೇಡ್‌ಗಳಿಲ್ಲದೆ ನಿರಂತರವಾಗಿ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ.

  • ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ.

ಆಮೆಗತಿಯ ಕಾಮಗಾರಿ

ಬೆಂಗಳೂರಿನ ಅತ್ಯಂತ ಪ್ರಮುಖ ಹಾಗೂ ವಿಐಪಿಗಳು ಹೆಚ್ಚಾಗಿ ಓಡಾಡುವ ರೇಸ್ ಕೋರ್ಸ್ ರಸ್ತೆಯ ಸದ್ಯದ ಪರಿಸ್ಥಿತಿ ಅಧೋಗತಿಗೆ ತಲುಪಿದೆ. ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ಮಾರ್ಗದಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ಕೆಲಸದಿಂದಾಗಿ ಸಂಚಾರ ಮಾಡುವುದೇ ಸವಾರರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ರಸ್ತೆ ತುಂಬೆಲ್ಲಾ ಹರಡಿರುವ ಧೂಳಿನಿಂದಾಗಿ ಪಾದಚಾರಿಗಳು ಮುಖ ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದ್ವಿಚಕ್ರ ವಾಹನ ಸವಾರರು ಆಯತಪ್ಪಿ ಬಿದ್ದು ಸಣ್ಣಪುಟ್ಟ ಅಪಘಾತಗಳು ಇಲ್ಲಿ ನಿರಂತರವಾಗಿ ಸಂಭವಿಸುತ್ತಿವೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಕಾಮಗಾರಿ ತಡವಾಗುತ್ತಿರುವುದು ಒಂದು ಕಡೆಯಾದರೆ, ಗುತ್ತಿಗೆದಾರರು ಮತ್ತು ಜಿಬಿಎ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇಷ್ಟೊಂದು ದೊಡ್ಡ ಮಟ್ಟದ ಅಗೆತದ ಕೆಲಸ ನಡೆಯುತ್ತಿದ್ದರೂ ರಸ್ತೆಯಲ್ಲಿ ಯಾವುದೇ ರೀತಿಯ ಸುರಕ್ಷತಾ ಬ್ಯಾರಿಕೇಡ್‌ಗಳನ್ನಾಗಲಿ ಅಥವಾ ಸೂಚನಾ ಫಲಕಗಳನ್ನಾಗಲಿ ಅಳವಡಿಸಿಲ್ಲ.

ಅಭಿವೃದ್ಧಿ ಹೆಸರಲ್ಲಿ ಕಾಮಗಾರಿ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಕನಿಷ್ಠ ಪಕ್ಷ ರಾತ್ರಿ ವೇಳೆ ಕಾಣಿಸುವಂತಹ ರಿಫ್ಲೆಕ್ಟಿವ್ ಬ್ಯಾರಿಕೇಡ್‌ಗಳನ್ನು ಹಾಕಬೇಕಲ್ಲವೇ? ಅಧಿಕಾರಿಗಳ ಈ ಉದಾಸೀನತೆ ಜನರ ಪ್ರಾಣಕ್ಕೆ ಸಂಚಕಾರ ತರುತ್ತಿದೆ” ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಆಮೆಗತಿಯ ಕೆಲಸ ಮತ್ತು ಅಧಿಕಾರಿಗಳ ಸುರಕ್ಷತೆಯ ಉದಾಸೀನತೆ ಅವರ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. ಇನ್ನಾದರೂ ಸಂಬಂಧಪಟ್ಟ ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳು ಎಚ್ಚೆತ್ತುಕೊಂಡು, ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾಮಗಾರಿಯನ್ನು ಮುಗಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ವರದಿ: ಅರುಣ್ ಕುಮಾರ್, ಟಿವಿ9, ಬೆಂಗಳೂರು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಿದ್ದರಾಮಯ್ಯ ರಾಜೀನಾಮೆ ಹಿಂದಿನ ಸತ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಬೆಂಗಳೂರು, ಮೇ.29: ಸತೀಶ್ ಜಾರಕಿಹೊಳಿ ಅವರ ಹೇಳಿಕೆಯ ಪ್ರಕಾರ, ಹೈಕಮಾಂಡ್ ತೀರ್ಮಾನದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ರಾಜಕೀಯದಲ್ಲಿ ಅಧಿಕಾರದಿಂದ ಕೆಳಗಿಳಿಯುವುದು ಸಹಜ ಪ್ರಕ್ರಿಯೆ. ಹೈಕಮಾಂಡ್‌ನೊಂದಿಗೆ ಮಾಡಿಕೊಂಡ ಒಪ್ಪಂದದ ಪ್ರಕಾರವೇ ಸಿದ್ದರಾಮಯ್ಯ ತಮ್ಮ ಕರ್ತವ್ಯವನ್ನು ಪೂರೈಸಿದ್ದಾರೆ ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಜಾಗದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜಕೀಯದಲ್ಲಿ ಒಬ್ಬರು ಹೋಗುತ್ತಾರೆ, ಮತ್ತೊಬ್ಬರು ಬರುತ್ತಾರೆ ಎಂಬುದು ಸಹಜ. ಪಕ್ಷದ ಹಿತಾಸಕ್ತಿಗಾಗಿ ಹೋದವರು ಮತ್ತು ಬರುವವರು ಸೇರಿದಂತೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಸಿದ್ಧರಾಮಯ್ಯ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ರಾಜೀನಾಮೆ ನೀಡುವುದು ಮತ್ತು ಹೊಸಬರು ಅಧಿಕಾರಕ್ಕೆ ಬರುವುದು ರಾಜಕೀಯದಲ್ಲಿ ಹೊಸತೇನಲ್ಲ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕ ರಾಜಕೀಯದಲ್ಲಿ ಮತ್ತಷ್ಟು ಬೆಳವಣಿಗೆಗಳಾಗುವ ನಿರೀಕ್ಷೆಯಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಬಿಜೆಪಿ ಬಾಗಿಲು ತಟ್ಟಿದ್ದ ಕೆಲ ಕಾಂಗ್ರೆಸಿಗರು!

ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ವರಿಷ್ಠರಿಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಬಂಡಾಯದ ಭೀತಿ ಕಾಡಿತ್ತು. ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಾಯಕರ ಸಂಪರ್ಕಿಸಲು ಕೆಲ ಕಾಂಗ್ರೆಸಿಗರು ಯತ್ನಿಸಿದ್ದ ಸುದ್ದಿ ತಿಳಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆಯನ್ನು ಕಾಂಗ್ರೆಸ್​​ ಹೈಕಮಾಂಡ್​​ ಸೂಕ್ಷ್ಮವಾಗಿ ಗಮನಿಸಿತ್ತು. ಮಂಗಳವಾರದ ರಾತ್ರಿಯಿಂದ ಒತ್ತಡದಲ್ಲಿದ್ದ ಹೈಕಮಾಂಡ್ ನಾಯಕರು ಅದಕ್ಕಾಗಿಯೇ ರಣದೀಪ್​ ಸುರ್ಜೇವಾಲ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದರು. ಕಾಂಗ್ರೆಸ್ ಶಾಸಕರ ಚಲನವಲನದ ಮೇಲೆ ಕಣ್ಣಿಟ್ಟಿಡುವ ಜೊತೆಗೆ ರಾಜೀನಾಮೆ ಬಳಿಕ ಸಿದ್ದರಾಮಯ್ಯರನ್ನು ದೆಹಲಿಗೆ ಕರೆತರುವಂತೆ ಸುರ್ಜೇವಾಲಾಗೆ ಸೂಚನೆ ನೀಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಜೊತೆಯಲ್ಲೇ ಸುರ್ಜೇವಾಲ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಾಧುರಿ ದೀಕ್ಷಿತ್​​ಗೂ ಕಾಡಿತು ಎಐ ವಿಡಿಯೋ ಕಾಟ

ಬಾಲಿವುಡ್‌ನ ಧಕ್ ಧಕ್ ಗರ್ಲ್ ಮಾಧುರಿ ದೀಕ್ಷಿತ್ ಅವರದ್ದೇ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾಧುರಿ ಅವರು ಅತ್ಯಂತ ಗ್ಲಾಮರಸ್ ಹಾಗೂ ಬೋಲ್ಡ್ ಆದ ಕಪ್ಪು ಬಣ್ಣದ ಸ್ಲಿಟ್ ಗೌನ್ ಧರಿಸಿ ಕುಳಿತಿರುವಂತೆ ಈ ವಿಡಿಯೋದಲ್ಲಿ ಬಿಂಬಿಸಲಾಗಿದೆ. ಇದನ್ನು ನೋಡಿದ ಅನೇಕ ಅಭಿಮಾನಿಗಳು ಮತ್ತು ನೆಟ್ಟಿಗರು ಇದು ನಿಜವಾದ ವಿಡಿಯೋ ಎಂದುಕೊಂಡು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ. ಆದರೆ, ಈ ವಿಡಿಯೋದ ಹಿಂದಿರುವ ಅಸಲಿ ಸತ್ಯವೇ ಬೇರೆ.

ಸದ್ಯ ಹರಿದಾಡುತ್ತಿರುವ ಮಾಧುರಿ ದೀಕ್ಷಿತ್ ಅವರ ಈ ವಿಡಿಯೋ ಸಂಪೂರ್ಣವಾಗಿ ಫೇಕ್ ಆಗಿದೆ. ಆಧುನಿಕ ತಂತ್ರಜ್ಞಾನವಾದ ಡೀಪ್‌ಫೇಕ್ ಬಳಸಿ ಬೇರೊಬ್ಬ ನಟಿಯ ದೇಹಕ್ಕೆ ಮಾಧುರಿ ದೀಕ್ಷಿತ್ ಅವರ ಮುಖವನ್ನು ಎಡಿಟ್ ಮಾಡಲಾಗಿದೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ಈ ವಿಡಿಯೋ ಎಷ್ಟು ನೈಜವಾಗಿ ಮೂಡಿಬಂದಿದೆಯೆಂದರೆ, ಮೊದಲ ನೋಟಕ್ಕೆ ಇದು ನಕಲಿ ಎಂದು ಪತ್ತೆಹಚ್ಚುವುದು ಸಾಮಾನ್ಯ ಜನರಿಗೆ ಅಸಾಧ್ಯವಾಗಿದೆ.

ಈ ವಿಡಿಯೋದಲ್ಲಿ ಇರುವುದು ಬಾಲಿವುಡ್‌ನ ಮತ್ತೊಬ್ಬ ಗ್ಲಾಮರಸ್ ನಟಿ ಭಾಗ್ಯಶ್ರೀ ಬೋರ್ಸೆ. ಪ್ರಶಸ್ತಿ ಸಮಾರಂಭವೊಂದರಲ್ಲಿ ಭಾಗ್ಯಶ್ರೀ ಅವರು ಧರಿಸಿದ್ದ ಬೋಲ್ಡ್ ಉಡುಪಿನ ವಿಡಿಯೋವನ್ನು ಕೆಲವರು ಎಡಿಟ್ ಮಾಡಿದ್ದಾರೆ. ತಂತ್ರಜ್ಞಾನದ ಸಹಾಯದಿಂದ ಭಾಗ್ಯಶ್ರೀ ಅವರ ಮುಖದ ಜಾಗಕ್ಕೆ ಮಾಧುರಿ ದೀಕ್ಷಿತ್ ಅವರ ಮುಖವನ್ನು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ.

ಇದನ್ನೂ ಓದಿ: ಸೀರಿಯಲ್ ಕಿಲ್ಲರ್ ಆದ ಮಾಧುರಿ ದೀಕ್ಷಿತ್; ಹೊಸ ಅವತಾರದಲ್ಲಿ ಧಕ್ ಧಕ್ ಗರ್ಲ್

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಇಂತಹ ಡೀಪ್‌ಫೇಕ್ ವಿಡಿಯೋಗಳನ್ನು ಹರಿಬಿಡುವುದು ಹೆಚ್ಚಾಗುತ್ತಿದ್ದು, ಇಂಟರ್ನೆಟ್‌ನಲ್ಲಿ ಕಾಣುವ ಎಲ್ಲವೂ ನಿಜವಲ್ಲ ಎಂಬುದಕ್ಕೆ ಈ ವಿಡಿಯೋ ಮತ್ತೊಂದು ಸಾಕ್ಷಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 12:30 pm, Fri, 29 May 26

Source link

ಸಿಎಲ್​​ಪಿ ಸಭೆಗೆ ಮುಹೂರ್ತದ ಬೆನ್ನಲ್ಲೇ ಜೋರಾದ ಸಚಿವಾಕಾಂಕ್ಷಿಗಳ ಲಾಬಿ: ರೇಸ್​​ನಲ್ಲಿ ಇರೋದು ಯಾರ್ಯಾರು?

ಸಚಿವ ಸ್ಥಾನದ ರೇಸ್​​ನಲ್ಲಿ ಇರೋದು ಯಾರ್ಯಾರು?
Image Credit source: Tv9 Kannada

ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದೆ. ನಾಳೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯೂ ನಿಗದಿಗೊಂಡಿದ್ದು, CLP ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ. ಹೀಗಾಗಿ ನೂತನ ಮುಖ್ಯಮಂತ್ರಿಗಳ ಚಿವ ಸಂಪುಟ ಸೇರಲು ಆಕಾಂಕ್ಷಿಗಳ ಲಾಬಿಯೂ ಜೋರಾಗಿಯೇ ನಡೆಯುತ್ತಿದೆ.

ಜೋರಾದ ಲಾಬಿ

ಹೊಸ ಸರ್ಕಾರ ರಚನೆಯ ಕಸರತ್ತು ಗರಿಗೆದರುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡೇ ದಿಲ್ಲಿಗೆ ಜಿಗಿದಿದೆ. ಮುಂಜಾನೆ 3 ಗಂಟೆಯ ವಿಮಾನದಲ್ಲೇ ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಹಾಗೂ ಎನ್.ಎಸ್. ಬೋಸರಾಜು ಸೇರಿದಂತೆ ಹಲವು ಪ್ರಮುಖ ನಾಯಕರು ದೆಹಲಿಗೆ ತಲುಪಿದ್ದಾರೆ. ಸದ್ಯ ಸಚಿವರಾಗಿರುವವರು ಮುಂದಿನ ಸಂಪುಟದಲ್ಲೂ ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ಹಿರಿಯ ಶಾಸಕರಾಗಿದ್ದೂ ಈವರೆಗೆ ಸಚಿವ ಸ್ಥಾನ ಸಿಗದ ನಾಯಕರು ಈ ಬಾರಿ ಸಂಪುಟ ಸೇರಲು ದೆಹಲಿ ಮಟ್ಟದಲ್ಲಿ ಭರ್ಜರಿ ಸರ್ಕಸ್ ಆರಂಭಿಸಿದ್ದಾರೆ .

ಯಾರಿಗೆಲ್ಲ ಸಚಿವ ಸ್ಥಾನ?

ನೂತನ ಸಚಿವ ಸಂಪುಟ ಸೇರ್ಪಡೆ ಸಂಬಂಧ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆ ಮತ್ತೆ ಸಚಿವರಾಗುವ ವಿಶ್ವಾಸದಲ್ಲಿ 11ರಿಂದ 13 ಶಾಸಕರಿದ್ದಾರೆ ಎನ್ನಲಾಗಿದೆ. ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ್​, ಡಾ.ಪರಮೇಶ್ವರ್, H​.K.ಪಾಟೀಲ್, ಶಿವರಾಜ ತಂಗಡಗಿ, ಮುನಿಯಪ್ಪ, ಮಂಕಾಳು ವೈದ್ಯ, ಸಂತೋಷ್​​ ಲಾಡ್​, ದಿನೇಶ್ ಗುಂಡೂರಾವ್ ಮತ್ತೆ ಸಂಪುಟ ಸೇರ್ಪಡೆ ಸಾಧ್ಯತೆ ಇದೆ. ಇದನ್ನು ಹೊರತುಪಡಿಸಿ ಕೆಲವರ ಹೆಸರನ್ನು ಡಿಕೆಶಿ ಪರಿಗಣಿಸುವ ಸಾಧ್ಯತೆಯೂ ಇದೆ. ಹೈಕಮಾಂಡ್ ಒಪ್ಪಿದರೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಇದ್ದ 29 ಮಂದಿ ಸಚಿವರ ಪೈಕಿ 11ರಿಂದ 13 ಮಂದಿ ಸಂಪುಟಕ್ಕೆ ಪುನಃ ಆಯ್ಕೆ ಸಾಧ್ಯತೆ ಇದೆ.

ಇದನ್ನೂ ಓದಿ: ದೇವರು ವರ-ಶಾಪ ನೀಡಲ್ಲ, ಅವಕಾಶ ಕೊಡ್ತಾನೆ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಭಾವುಕ ಪೋಸ್ಟ್

ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ವರಿಷ್ಠರನ್ನು ಡಿ.ಕೆ. ಶಿವಕುಮಾರ್ ಭೇಟಿ ಮಾಡಲಿದ್ದಾರೆ. ಈ ವೇಳೆ ಶಾಸಕಾಂಗ ಪಕ್ಷದ (CLP) ಸಭೆ ಹಾಗೂ ಹೊಸ ಸರ್ಕಾರದ ರಚನೆ ಕುರಿತು ಪ್ರಮುಖ ಚರ್ಚೆಗಳು ನಡೆಯಲಿವೆ. ಹೊಸದಾಗಿ ಯಾರೆಲ್ಲಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕು, ನೂತನ ಸಿಎಂ ಜೊತೆಗೆ ಎಷ್ಟು ಜನ ಸಚಿವರು ಮೊದಲ ಹಂತದಲ್ಲಿ ಅಧಿಕಾರ ವಹಿಸಿಕೊಳ್ಳಬೇಕು ಎಂಬ ಬಗ್ಗೆ ಹೈಕಮಾಂಡ್‌ನಿಂದ ಡಿಕೆಶಿ ನಿರ್ದೇಶನ ಹಾಗೂ ಸಲಹೆಗಳನ್ನು ಪಡೆಯಲಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: ಆರೆಂಜ್ ಕ್ಯಾಪ್​ಗಾಗಿ ನಾಲ್ವರ ನಡುವೆ ನೇರ ಪೈಪೋಟಿ

Source link

ತೀರ್ಪು ವಿಳಂಬಕ್ಕೆ ಸುಪ್ರೀಂ ಬ್ರೇಕ್: ಹೈಕೋರ್ಟ್‌ಗಳಿಗೆ 3 ತಿಂಗಳ ಡೆಡ್‌ಲೈನ್, ಜಾಮೀನು ಸಿಕ್ಕರೆ ಅದೇ ದಿನ ಬಿಡುಗಡೆ

ನವದೆಹಲಿ, ಮೇ 29: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಮುಕ್ತಿ ಹಾಡಲು ಸುಪ್ರೀಂಕೋರ್ಟ್(Supreme Court)​ ಶುಕ್ರವಾರ ಒಂದು  ಮಹತ್ವದ ನಿರ್ದೇಶನ ನೀಡಿದೆ. ತೀರ್ಪು ನೀಡಲು ವಿಳಂಬ ಮಾಡುವುದರಿಂದ ದಾವೆದಾರರಿಗೆ ತುಂಬಲಾರದ ನಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಎಲ್ಲಾ ಹೈಕೋರ್ಟ್‌ಗಳಿಗೆ ಕಟ್ಟುನಿಟ್ಟಾದ ಗಡುವನ್ನು ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸಂವಿಧಾನದ 142 ನೇ ವಿಧಿಯಡಿ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ ಈ  ಆದೇಶಗಳನ್ನು ಹೊರಡಿಸಿದೆ.

3 ತಿಂಗಳೊಳಗೆ ತೀರ್ಪು ಕಡ್ಡಾಯ: ಹೈಕೋರ್ಟ್‌ಗಳು ಯಾವುದೇ ಪ್ರಕರಣದ ವಾದ-ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿದ (Reserved) ದಿನಾಂಕದಿಂದ ಗರಿಷ್ಠ 3 ತಿಂಗಳ ಒಳಗಾಗಿ ಅಂತಿಮ ತೀರ್ಪನ್ನು ಪ್ರಕಟಿಸಬೇಕು.

ಜಾಮೀನು ಅರ್ಜಿಗಳಿಗೆ ವಿಶೇಷ ಆದ್ಯತೆ: ವೈಯಕ್ತಿಕ ಸ್ವಾತಂತ್ರ್ಯದ ಪ್ರಕರಣಗಳಲ್ಲಿ ತ್ವರಿತ ನಿರ್ಧಾರಗಳು ಅಗತ್ಯ. ಹೀಗಾಗಿ ಜಾಮೀನು ಅರ್ಜಿಗಳ ಆದೇಶಗಳನ್ನು ಅದೇ ದಿನ ಪ್ರಕಟಿಸಬೇಕು. ಒಂದು ವೇಳೆ ಆದೇಶ ಕಾಯ್ದಿರಿಸಿದರೆ, ಮರುದಿನವೇ ಅದನ್ನು ಪ್ರಕಟಿಸಿ, ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕು.

ಮತ್ತಷ್ಟು ಓದಿ: ಸುಪ್ರೀಂಕೋರ್ಟ್​ ಆದೇಶದಿಂದ ದರ್ಶನ್​​ಗೆ ಹೆಚ್ಚಿತು ಸಂಕಷ್ಟ; 2028ರವರೆಗೂ ಬರಲ್ಲ ಡಿ ಬಾಸ್ ಸಿನಿಮಾ?

ಅದೇ ದಿನ ಜೈಲಿನಿಂದ ಬಿಡುಗಡೆ: ಜಾಮೀನು ಅಥವಾ ಶಿಕ್ಷೆ ಅಮಾನತು ಆದೇಶ ಹೊರಬಿದ್ದ ತಕ್ಷಣ ಆ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ತ್ವರಿತವಾಗಿ ತಲುಪಿಸಬೇಕು. ಅಗತ್ಯ ಪ್ರಕ್ರಿಯೆಗಳನ್ನು ಮುಗಿಸಿ ವಿಚಾರಣಾಧೀನ ಕೈದಿಗಳನ್ನು ಅದೇ ದಿನ ಅಥವಾ ಹೆಚ್ಚೆಂದರೆ ಮರುದಿನವೇ ಜೈಲಿನಿಂದ ಬಿಡುಗಡೆ ಮಾಡಬೇಕು.

24 ಗಂಟೆಗಳಲ್ಲಿ ಅಪ್‌ಲೋಡ್: ಹೈಕೋರ್ಟ್‌ಗಳು ನೀಡುವ ಎಲ್ಲಾ ತೀರ್ಪುಗಳನ್ನು ಅವು ಪ್ರಕಟವಾದ 24 ಗಂಟೆಗಳ ಒಳಗೆ ಆಯಾ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವುದು ಕಡ್ಡಾಯ.

ಆದೇಶದ ಹಿನ್ನೆಲೆ ಏನು?
ಜಾರ್ಖಂಡ್ ಹೈಕೋರ್ಟ್‌ನಲ್ಲಿ ತೀರ್ಪುಗಳು ದೀರ್ಘಕಾಲದವರೆಗೆ ವಿಳಂಬವಾಗುತ್ತಿದ್ದ ವಿಷಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ತೀರ್ಪಿನ ಕಾರ್ಯಕಾರಿ (Main) ಭಾಗವನ್ನು ಪ್ರಕಟಿಸುವ ದಿನಾಂಕವನ್ನೇ ಅಧಿಕೃತ ‘ತೀರ್ಪಿನ ದಿನಾಂಕ’ ಎಂದು ಪರಿಗಣಿಸಲಾಗುವುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಕೋರ್ಟ್ ಮಹತ್ವದ ಹೇಳಿಕೆ: ಹೈಕೋರ್ಟ್‌ಗಳು ಸಾವಿರಾರು ಜನರು ನ್ಯಾಯವನ್ನು ಬಯಸಿ ಬರುವ ಪ್ರಾಥಮಿಕ ಸಂಸ್ಥೆಗಳಾಗಿವೆ. ಇಲ್ಲಿ ಸಮಯಕ್ಕೆ ಸರಿಯಾಗಿ ತೀರ್ಪು ನೀಡುವುದು ಅತ್ಯಗತ್ಯ. ಈ ನಿಯಮಗಳು ಯಾವುದೇ ನ್ಯಾಯಾಧೀಶರು ಅಥವಾ ಸಂಸ್ಥೆಯ ಮೇಲೆ ಆಕ್ಷೇಪ ಹೇರಲು ಅಲ್ಲ, ಬದಲಿಗೆ ನ್ಯಾಯದಾನ ಪ್ರಕ್ರಿಯೆಯನ್ನು ವೇಗಗೊಳಿಸಲು ತರಲಾಗಿದೆ.

ಕೇಂದ್ರ ಮತ್ತು ರಾಜ್ಯಗಳ ಕೆಳ ನ್ಯಾಯಾಲಯಗಳಿಗೂ ನಿಯಮಿತ ಜಾಮೀನು ಆದೇಶಗಳ ಕುರಿತು ತಕ್ಷಣದ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಈ ಆದೇಶದಿಂದಾಗಿ ದೇಶಾದ್ಯಂತ ಲಕ್ಷಾಂತರ ಜನರಿಗೆ ವರದಾನವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮುಟ್ಟಿನ ನೈರ್ಮಲ್ಯ ದಿನ: ಸಮರ್ಪಕ ನೀತಿ ಮತ್ತು ಅನುಷ್ಠಾನಕ್ಕೆ ಮಹಿಳೆಯರ ಒತ್ತಾಯ

ಮೇ 28 ರಂದು ವಿಶ್ವ ಮುಟ್ಟಿನ ನೈರ್ಮಲ್ಯ ದಿನದ (World Menstrual Hygiene Day) ಅಂಗವಾಗಿ, News9 ವಾಹಿನಿಯು ಭಾರತದ ಅತ್ಯಂತ ಪ್ರಭಾವಶಾಲಿ ಮಹಿಳೆಯರನ್ನು ಒಟ್ಟುಗೂಡಿಸಿ ‘ದಿ ಶಿ-ಕಾನಮಿ ಅಜೆಂಡಾ, ಪಿರಿಯಡ್ ಪವರ್’ (The SHEconomy Agenda, Period Power) ಎಂಬ ವಿಶೇಷ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಮುಟ್ಟಿನ ಬಡತನ (period poverty), ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಒಳಗೊಳ್ಳುವಿಕೆ, ಶೌಚಾಲಯದ ಮೂಲಸೌಕರ್ಯಗಳು ಮತ್ತು ಭಾರತಕ್ಕೆ ತುರ್ತಾಗಿ ಅಗತ್ಯವಿರುವ ಮುಟ್ಟಿನ ನೀತಿ ಸುಧಾರಣೆಗಳ ಕುರಿತು ಗಂಭೀರ ಚರ್ಚೆ ನಡೆಸಲಾಯಿತು.

ಕೆಲಸದ ಸ್ಥಳಗಳಲ್ಲಿ ನಿರ್ಲಕ್ಷ್ಯ ಮತ್ತು ಅಗತ್ಯ ಸುಧಾರಣೆಗಳು

ಸಂಶೋಧನೆಗಳ ಪ್ರಕಾರ, ಮುಟ್ಟಿನ ದಿನಗಳು ಮಹಿಳೆಯರ ಕೆಲಸದ ದಕ್ಷತೆಯ ಮೇಲೆ ಪರಿಣಾಮ ಬೀರುತ್ತವೆ. ಆದಾಗ್ಯೂ, ಭಾರತದ ಬಹುತೇಕ ಕಚೇರಿಗಳಲ್ಲಿ ಇದಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ನೀತಿಗಳಿಲ್ಲ. ಇದು ಕೇವಲ ರಜೆ ನೀಡುವುದಕ್ಕೆ ಸೀಮಿತವಾಗಿರದೆ, ಸ್ವಚ್ಛವಾದ ಶೌಚಾಲಯಗಳು, ಬಳಸಿದ ಸ್ಯಾನಿಟರಿ ಪ್ಯಾಡ್‌ಗಳನ್ನು ವಿಲೇವಾರಿ ಮಾಡುವ ಬಿನ್‌ಗಳು, ಕಚೇರಿ ಅವಧಿಯಲ್ಲಿ ಅಗತ್ಯ ವಿರಾಮಗಳು ಮತ್ತು ಮುಟ್ಟಿನ ನೋವಿನ ಬಗ್ಗೆ ಮುಕ್ತವಾಗಿ ಮಾತನಾಡುವಂತಹ ವಾತಾವರಣ ನಿರ್ಮಾಣವಾಗಬೇಕಿದೆ ಎಂಬಿತ್ಯಾದಿ ಅಭಿಪ್ರಾಯಗಳು ಈ ಚರ್ಚೆಯ ವೇಳೆ ಬಂದವು.

ಸುಲಭ್ ಇಂಟರ್ನ್ಯಾಷನಲ್ ಸಂಸ್ಥೆಯ ರಾಷ್ಟ್ರೀಯ ನಿರ್ದೇಶಕಿ ನಿರ್ಜಾ ಭಟ್ನಾಗರ್ ಅವರು, “ನಮ್ಮ ಕೆಲಸದ ಸಂಸ್ಕೃತಿ ಇನ್ನೂ ಪುರುಷ ಪ್ರಧಾನವಾಗಿದೆ. ಕಚೇರಿಗಳು ಲಿಂಗ-ಅಂತರ್ಗತವಾಗಿರಬೇಕು (gender-inclusive) ಮತ್ತು ಮುಟ್ಟಿನ ರಜೆಯಂತಹ (menstrual leave) ನೀತಿಗಳನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದರು.

ಇದನ್ನೂ ಓದಿ: ಪ್ರತಿದಿನ 1 ಕಿಲೋಮೀಟರ್ ನಡೆದರೆ ಎಷ್ಟು ಕ್ಯಾಲೊರಿ ಕರಗುತ್ತೆ ಗೊತ್ತಾ? ಇಲ್ಲಿದೆ ಆರೋಗ್ಯ ತಜ್ಞರು ನೀಡಿರುವ ಮಹತ್ವದ ಮಾಹಿತಿ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಗೀತಾ ಲುತ್ರಾ, “ಸ್ವಚ್ಛ ಮತ್ತು ಬಳಸಲು ಯೋಗ್ಯವಾದ ಶೌಚಾಲಯಗಳು ಮೊದಲ ಅವಶ್ಯಕತೆಯಾಗಿದೆ. ಇತರ ರಜೆಗಳಂತೆಯೇ ಮುಟ್ಟಿನ ರಜೆಗೂ ಕಚೇರಿಗಳಲ್ಲಿ ಅವಕಾಶವಿರಬೇಕು” ಎಂದು ಒತ್ತಾಯಿಸಿದರು.

ಮುಟ್ಟಿನ ಬಗೆಗಿನ ಸಾಮಾಜಿಕ ಕಳಂಕ

ಮ್ಯಾಕ್ಸ್ ಹೆಲ್ತ್‌ಕೇರ್‌ನ ಐವಿಎಫ್ ವಿಭಾಗದ ಮುಖ್ಯಸ್ಥರಾದ ಡಾ. ಸುರ್ವೀನ್ ಘುಮನ್ ಸಿಂಧು ಮಾತನಾಡಿ, “ಮುಟ್ಟಿನ ರಜೆಯಂತಹ ಕ್ರಮಗಳ ಮೂಲಕ ಅಧಿಕೃತ ಮಾನ್ಯತೆ ಸಿಗುವವರೆಗೂ, ಜನರು ಮುಟ್ಟಿನ ಬಗ್ಗೆ ಬಹಿರಂಗವಾಗಿ ಮಾತನಾಡಲು ಹಿಂಜರಿಯುತ್ತಾರೆ. ಮುಟ್ಟು ಎಂಬುದು ಪ್ರಕೃತಿ ಸಹಜ ಪ್ರಕ್ರಿಯೆ ಎಂಬುದನ್ನು ನಾವು ಒಪ್ಪಿಕೊಂಡು, ಯಾವುದೇ ಪೂರ್ವಾಗ್ರಹವಿಲ್ಲದೆ ಈ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ” ಎಂದು ತಿಳಿಸಿದರು.

ಮುಟ್ಟಿನ ನೈರ್ಮಲ್ಯ ದಿನದ ಅಂಗವಾಗಿ ನ್ಯೂಸ್9ನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅತಿಥಿಗಳು (Photo credit: News9)

ನೀತಿಗಳ ಅನುಷ್ಠಾನದಲ್ಲಿನ ಸವಾಲುಗಳು

ನೀತಿ ಆಯೋಗದ ಮಾಜಿ ನಿರ್ದೇಶಕಿ ಊರ್ವಶಿ ಪ್ರಸಾದ್ ಅವರು ನೀತಿಗಳನ್ನು ಅನುಷ್ಠಾನಕ್ಕೆ ತರಲು ಇರುವ ಸವಾಲುಗಳನ್ನು ಪ್ರಸ್ತಾಪಿಸಿದರು. “ಅನೇಕ ನೀತಿಗಳು ಕೇವಲ ಕಾಗದದ ಮೇಲಿರುತ್ತವೆಯೇ ಹೊರತು ಸರಿಯಾಗಿ ಅನುಷ್ಠಾನಕ್ಕೆ ಬರುವುದಿಲ್ಲ. ಮಹಿಳೆಯರಿಗಾಗಿ ತರುವ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂಬ ಮನಸ್ಥಿತಿ ಇಂದಿಗೂ ಇದೆ. ಈ ಮನಸ್ಥಿತಿ ಬದಲಾಗಬೇಕಿದೆ” ಎಂದರು ಊರ್ವಳಿ ಪ್ರಸಾದ್.

ಹ್ಯೂಮನ್ ಕ್ಯಾಪಿಟಲ್ ಕಂಪನಿಯ ಸಲಹೆಗಾರ್ತಿ ಡಾ. ಕಿರಣ್‌ಪ್ರೀತ್ ಕೌರ್ ಅವರೂ ಈ ಅಭಿಪ್ರಾಯಕ್ಕೆ ಧ್ವನಿಗೂಡಿಸಿದರು. ಅಲ್ಲದೆ, “ಮುಟ್ಟಿನ ಆರೋಗ್ಯ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ” ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ: ಥೈರಾಯ್ಡ್‌ನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ; ಆಹಾರದಲ್ಲಿ ಈ ಬದಲಾವಣೆಯನ್ನು ಅಗತ್ಯವಾಗಿ ಮಾಡಿಕೊಳ್ಳಿ

ಎವರೆಸ್ಟ್ ಶಿಖರವೇರಿದ ಮಹಿಳೆಯ ಸಾಹಸ ಗಾಥೆ

ಹಿಮಾಲಯದಲ್ಲಿ ಎವರೆಸ್ಟ್ ಶಿಖರ ಏರಿದ ಮಹಿಳಾ ಸಾಹಸಿ ಸುನಿತಾ ಸಿಂಗ್ ಚೋಕನ್ ಕೂಡ ಈ ಚರ್ಚೆಯಲ್ಲಿ ಪಾಲ್ಗೊಂಡು, ಪರ್ವತಾರೋಹಣದಲ್ಲಿ ಎದುರಾದ ಸವಾಲುಗಳನ್ನು ಪ್ರಸ್ತಾಪಿಸಿದರು. “ನಾನು ಎವರೆಸ್ಟ್ ಏರುವ ಸಮಯದಲ್ಲಿ ಮುಟ್ಟಾಗಿದ್ದೆ. ಆಮ್ಲಜನಕದ ಕೊರತೆ ಮತ್ತು ತೀವ್ರ ದೈಹಿಕ ಸವಾಲುಗಳ ನಡುವೆಯೂ ನಾನು ಮುನ್ನಡೆದು ಶಿಖರ ತಲುಪಿದೆ” ಎಂದರು. ಮಹಿಳೆಯರು ಯಾವುದೇ ಸೂಕ್ತ ಬೆಂಬಲ ಅಥವಾ ಮಾನ್ಯತೆ ಇಲ್ಲದಿದ್ದರೂ ಇಂತಹ ಕಠಿಣ ಪರಿಸ್ಥಿತಿಗಳಲ್ಲಿ ಅಸಾಧಾರಣ ಸಾಧನೆಗಳನ್ನು ಮಾಡುತ್ತಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

ಭಾರತದಲ್ಲಿ ಮಹಿಳೆಯರು ಸುರಕ್ಷಿತವಾಗಿ, ಗೌರವಯುತವಾಗಿ ಮತ್ತು ಖಾಸಗಿತನ ಕಾಯ್ದುಕೊಂಡು ಮುಟ್ಟನ್ನು ನಿರ್ವಹಿಸುವುದು ಇಂದಿಗೂ ಒಂದು ಸವಾಲಾಗಿದೆ. ಶಾಲೆಗಳಲ್ಲಿ ಶೌಚಾಲಯದ ಕೊರತೆಯಿಂದ ಹಿಡಿದು ಕಚೇರಿಗಳಲ್ಲಿ ಮುಟ್ಟಿನ ನೋವನ್ನು ನಿರ್ಲಕ್ಷಿಸುವವರೆಗೆ ಹಲವು ವ್ಯವಸ್ಥಿತ ಮತ್ತು ಸಾಂಸ್ಕೃತಿಕ ಅಡೆತಡೆಗಳಿವೆ. ಇವುಗಳನ್ನು ಹೋಗಲಾಡಿಸಲು ಕಟ್ಟುನಿಟ್ಟಿನ ನೀತಿಗಳು ಮತ್ತು ಸಮಾಜದ ಮನಸ್ಥಿತಿಯಲ್ಲಿ ಬದಲಾವಣೆ ಅತ್ಯಗತ್ಯ ಎಂದು ಈ ಸಂವಾದದಲ್ಲಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮನೆ ಮಾಲೀಕರು ಹೊರಗೆ ಹೋದಾಗ ಮಕ್ಕಳನ್ನು ಮಲಗಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕೆಲಸದಾಕೆ

ಮನೆ ಮಾಲೀಕರು ಮಾರುಕಟ್ಟೆಗೆ ಹೋಗಿರುವಾಗ ಮನೆ ಕೆಲಸದಾಕೆ ಮಕ್ಕಳಿಗೆ ಊಟದಲ್ಲಿ ನಿದ್ರೆ ಬೆರೆಸಿ ತಿನ್ನಿಸಿ ಮಲಗಿಸಿದ್ದಾಳೆ. ಬಳಿಕ ಆಕೆ ಕೆಲವೇ ನಿಮಿಷಗಳಲ್ಲಿ ಮನೆಯಲ್ಲಿದ್ದ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿ ಪರಾರಿಯಾಗಿದ್ದಾಳೆ. ಈ ಇಡೀ ಆಘಾತಕಾರಿ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೀಗಾಗಿ ಮನೆಯಲ್ಲಿ ಮಕ್ಕಳ ಜತೆ ಕೆಲಸದಾಕೆಯನ್ನು ಬಿಟ್ಟು ಹೋಗುವುದು ಅಥವಾ ಮನೆಯಲ್ಲಿ ಕೆಲಸದವರನ್ನು ಒಂಟಿಯಾಗಿರಲು ಬಿಡುವುದು ಕಷ್ಟಕರವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Exit mobile version