Headlines

ಸಿಎಲ್​​ಪಿ ಸಭೆಗೆ ಮುಹೂರ್ತದ ಬೆನ್ನಲ್ಲೇ ಜೋರಾದ ಸಚಿವಾಕಾಂಕ್ಷಿಗಳ ಲಾಬಿ: ರೇಸ್​​ನಲ್ಲಿ ಇರೋದು ಯಾರ್ಯಾರು?

ಸಚಿವ ಸ್ಥಾನದ ರೇಸ್​​ನಲ್ಲಿ ಇರೋದು ಯಾರ್ಯಾರು? Image Credit source: Tv9 Kannada ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದೆ. ನಾಳೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯೂ ನಿಗದಿಗೊಂಡಿದ್ದು, CLP ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದೆ. ಹೀಗಾಗಿ ನೂತನ ಮುಖ್ಯಮಂತ್ರಿಗಳ ಚಿವ…

Read More

IPL 2026: ಆರೆಂಜ್ ಕ್ಯಾಪ್​ಗಾಗಿ ನಾಲ್ವರ ನಡುವೆ ನೇರ ಪೈಪೋಟಿ

IPL 2026: ಇಂಡಿಯನ್ ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 72 ಪಂದ್ಯಗಳು ಮುಗಿದಿದೆ. ಇನ್ನುಳಿದಿರುವುದು ಕೇವಲ 2 ಮ್ಯಾಚ್​ ಮಾತ್ರ. ಈ ಎರಡು ಪಂದ್ಯಗಳ ಮೂಲಕ ಈ ಬಾರಿ ಆರೆಂಜ್ ಕ್ಯಾಪ್ ಗೆಲ್ಲೋರು ಯಾರು ಎಂಬುದು ನಿರ್ಧಾರವಾಗಲಿದೆ. ಸದ್ಯ ನಾಲ್ವರು ಆಟಗಾರರ ನಡುವೆ ಆರೆಂಜ್ ಕ್ಯಾಪ್​ಗಾಗಿ ನೇರ ಪೈಪೋಟಿ ಇದ್ದು, ಆ ಆಟಗಾರರು ಯಾರೆಂದರೆ… (PC: IPL) 1- ವೈಭವ್ ಸೂರ್ಯವಂಶಿ: ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ…

Read More

ತೀರ್ಪು ವಿಳಂಬಕ್ಕೆ ಸುಪ್ರೀಂ ಬ್ರೇಕ್: ಹೈಕೋರ್ಟ್‌ಗಳಿಗೆ 3 ತಿಂಗಳ ಡೆಡ್‌ಲೈನ್, ಜಾಮೀನು ಸಿಕ್ಕರೆ ಅದೇ ದಿನ ಬಿಡುಗಡೆ

ನವದೆಹಲಿ, ಮೇ 29: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಮುಕ್ತಿ ಹಾಡಲು ಸುಪ್ರೀಂಕೋರ್ಟ್(Supreme Court)​ ಶುಕ್ರವಾರ ಒಂದು  ಮಹತ್ವದ ನಿರ್ದೇಶನ ನೀಡಿದೆ. ತೀರ್ಪು ನೀಡಲು ವಿಳಂಬ ಮಾಡುವುದರಿಂದ ದಾವೆದಾರರಿಗೆ ತುಂಬಲಾರದ ನಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಎಲ್ಲಾ ಹೈಕೋರ್ಟ್‌ಗಳಿಗೆ ಕಟ್ಟುನಿಟ್ಟಾದ ಗಡುವನ್ನು ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸಂವಿಧಾನದ 142 ನೇ ವಿಧಿಯಡಿ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ…

Read More

ಮುಟ್ಟಿನ ನೈರ್ಮಲ್ಯ ದಿನ: ಸಮರ್ಪಕ ನೀತಿ ಮತ್ತು ಅನುಷ್ಠಾನಕ್ಕೆ ಮಹಿಳೆಯರ ಒತ್ತಾಯ

ಮೇ 28 ರಂದು ವಿಶ್ವ ಮುಟ್ಟಿನ ನೈರ್ಮಲ್ಯ ದಿನದ (World Menstrual Hygiene Day) ಅಂಗವಾಗಿ, News9 ವಾಹಿನಿಯು ಭಾರತದ ಅತ್ಯಂತ ಪ್ರಭಾವಶಾಲಿ ಮಹಿಳೆಯರನ್ನು ಒಟ್ಟುಗೂಡಿಸಿ ‘ದಿ ಶಿ-ಕಾನಮಿ ಅಜೆಂಡಾ, ಪಿರಿಯಡ್ ಪವರ್’ (The SHEconomy Agenda, Period Power) ಎಂಬ ವಿಶೇಷ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಮುಟ್ಟಿನ ಬಡತನ (period poverty), ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಒಳಗೊಳ್ಳುವಿಕೆ, ಶೌಚಾಲಯದ ಮೂಲಸೌಕರ್ಯಗಳು ಮತ್ತು ಭಾರತಕ್ಕೆ ತುರ್ತಾಗಿ ಅಗತ್ಯವಿರುವ ಮುಟ್ಟಿನ ನೀತಿ ಸುಧಾರಣೆಗಳ ಕುರಿತು ಗಂಭೀರ…

Read More

ಮನೆ ಮಾಲೀಕರು ಹೊರಗೆ ಹೋದಾಗ ಮಕ್ಕಳನ್ನು ಮಲಗಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕೆಲಸದಾಕೆ

ಮನೆ ಮಾಲೀಕರು ಮಾರುಕಟ್ಟೆಗೆ ಹೋಗಿರುವಾಗ ಮನೆ ಕೆಲಸದಾಕೆ ಮಕ್ಕಳಿಗೆ ಊಟದಲ್ಲಿ ನಿದ್ರೆ ಬೆರೆಸಿ ತಿನ್ನಿಸಿ ಮಲಗಿಸಿದ್ದಾಳೆ. ಬಳಿಕ ಆಕೆ ಕೆಲವೇ ನಿಮಿಷಗಳಲ್ಲಿ ಮನೆಯಲ್ಲಿದ್ದ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿ ಪರಾರಿಯಾಗಿದ್ದಾಳೆ. ಈ ಇಡೀ ಆಘಾತಕಾರಿ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೀಗಾಗಿ ಮನೆಯಲ್ಲಿ ಮಕ್ಕಳ ಜತೆ ಕೆಲಸದಾಕೆಯನ್ನು ಬಿಟ್ಟು ಹೋಗುವುದು ಅಥವಾ ಮನೆಯಲ್ಲಿ ಕೆಲಸದವರನ್ನು ಒಂಟಿಯಾಗಿರಲು ಬಿಡುವುದು ಕಷ್ಟಕರವಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ದೇವರು ವರ-ಶಾಪ ನೀಡಲ್ಲ, ಅವಕಾಶ ಕೊಡ್ತಾನೆ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಭಾವುಕ ಪೋಸ್ಟ್

ಡಿಕೆ ಶಿವಕುಮಾರ್ & ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮೇ 29: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅತ್ಯಂತ ಭಾವುಕ ಮತ್ತು ಗೌರವಪೂರ್ವಕ ಸಂದೇಶ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಐದು ದಶಕಗಳ ರಾಜಕೀಯ ಸೌಹಾರ್ದತೆ, ಹೋರಾಟದ ಹಾದಿ ಮತ್ತು ಜನಪರ ಆಡಳಿತವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಡಿಕೆ ಶಿವಕುಮಾರ್, ‘ವೇಗವಾಗಿ ನಡೆಯಬೇಕೆಂದರೆ ಒಬ್ಬನೇ ನಡೆಯಬೇಕು, ಸುದೀರ್ಘ ದೂರ ಸಾಗಬೇಕೆಂದರೆ ಜೊತೆಯಾಗಿ ನಡೆಯಬೇಕು’…

Read More

ಬರುತ್ತಿದೆ ಸಿಎಂ ವಿಜಯ್ ಪುತ್ರನ ಮೊದಲ ಸಿನಿಮಾ, ಬಿಡುಗಡೆ ದಿನಾಂಕ ಘೋಷಣೆ

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಈಗ ಸಿಎಂ ಆಗಿದ್ದಾರೆ. ಚಿತ್ರರಂಗಕ್ಕೆ ವಿದಾಯ ಹೇಳಿದ್ದಾರೆ. ವಿಜಯ್ ಅವರ ಸ್ಥಾನವನ್ನು ತುಂಬಬಲ್ಲ ನಟ ಯಾರು ಎಂಬ ಚರ್ಚೆ ಶುರುವಾಗಿದೆ. ಇದೆಲ್ಲದರ ನಡುವೆ ಸಿಎಂ ವಿಜಯ್ ಅವರ ಪುತ್ರನ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಕೂಡಲೇ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಲಿದೆ. ವಿಜಯ್ ಅವರ ಪುತ್ರ ಜೇಸನ್ ಸಂಜಯ್ ತಮಿಳು ಚಿತ್ರರಂಗದ ಪ್ರವೇಶಿಸಿದ್ದಾರೆ ಆದರೆ ನಟನಾಗಿ ಅಲ್ಲ…

Read More

ಸಿಲ್ಕ್ ಬೋರ್ಡ್ ಜಂಕ್ಷನ್ ಈಗ ‘ಸ್ವಿಮ್ಮಿಂಗ್ ಪೂಲ್’!: ಕೋಟಿ ಕೋಟಿ ಖರ್ಚು ಮಾಡಿದ್ರೂ ಸುಧಾರಿಸದ ಸಿಲಿಕಾನ್ ಸಿಟಿ

ಬೆಂಗಳೂರು ಮೇ,29: ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆಗೆ (Traffic) ಸದಾ ಪ್ರಸಿದ್ಧಿ ಪಡೆದಿರುವ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್, ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇಡೀ ರಸ್ತೆ ಯಾವ ಮಟ್ಟಿಗೆ ಮುಳುಗಡೆಯಾಗಿದೆ ಎಂದರೆ, ಇದು ಬೆಂಗಳೂರಿನ ಅತ್ಯಂತ ಬ್ಯುಸಿ ರಸ್ತೆಯೋ ಅಥವಾ ಯಾವುದಾದರೂ ಈಜುಕೊಳವೋ (Swimming Pool) ಎಂದು ಸಾರ್ವಜನಿಕರು ಮೂಗಿನ ಮೇಲೆ ಬೆರಳಿಡುವಂತಾಗಿದೆ. ಈ ಅವ್ಯವಸ್ಥೆ ಬಗ್ಗೆ @Karnataka Portfolio ಎಂಬ ಎಕ್ಸ್​​ ಖಾತೆ ವಿಡಿಯೋವೊಂದನ್ನು ಹಂಚಿಕೊಂಡಿದೆ. ಇಲ್ಲಿ ಅತ್ಯಂತ ಅಘಾತಕಾರಿ…

Read More

ಡಿ.ಕೆ. ಶಿವಕುಮಾರ್​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿ ನೀಡಿದ್ದ ಶುಭ ಸೂಚನೆ!

ಕಾರವಾರ, ಮೇ 29: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಆಂದ್ಲೆ ಶ್ರೀ ಜಗದೀಶ್ವರಿ ದೇವಸ್ಥಾನಕ್ಕೆ ಈ ಹಿಂದೆ ಭೇಟಿ ನೀಡಿದ್ದ ಡಿ.ಕೆ. ಶಿವಕುಮಾರ್​​ ಭೇಟಿ ನೀಡಿದ್ದರು. ದೇವಿಯ ಅನುಗ್ರಹದಿಂದಲೇ ಅವರೀಗ ಕರ್ನಾಟಕದ ನೂತನ ಸಿಎಂ ಆಗುವುದು ಬಹುತೇಕ ಖಚಿತ ಎಂಬ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೇವಸ್ಥಾನದ ಅರ್ಚಕ ಗಣೇಶ್ ನಾಯ್ಕ್, ಡಿಸೆಂಬರ್ ತಿಂಗಳಲ್ಲಿ ಡಿ‌.ಕೆ‌.ಶಿವಕುಮಾರ್ ದೇಗುಲಕ್ಕೆ ಬಂದಿದ್ದರು. ಅಂದು ಅವರು ಕೇಳಿದ್ದಕ್ಕೆ ದೇವಿ ಒಳ್ಳೆಯ ಸೂಚನೆ ಕೊಟ್ಟಿದ್ದಳು. ಎರಡು ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದ ಮುನ್ಸೂಚನೆಯೂ…

Read More

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್: ಇಲ್ಲಿದೆ ದಿನಾಂಕ, ಸಮಯದ ವಿವರ

ಬೆಂಗಳೂರು, ಮೇ 29: ಬೆಂಗಳೂರಿನಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದೆ. ಈ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆಪಿಸಿಸಿ ಕಚೇರಿಯಿಂದ ಎಲ್ಲಾ ಶಾಸಕರಿಗೂ ಬೆಂಗಳೂರಿನಲ್ಲೇ ಇರುವಂತೆ ಸೂಚನೆ ನೀಡಲಾಗಿದೆ. ಬಹುತೇಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಈ ವೇಳೆ ಹೈಕಮಾಂಡ್ ನಾಯಕರಿಂದ ಮುಂದಿನ ಮುಖ್ಯಮಂತ್ರಿಯನ್ನು ಘೋಷಿಸಲಾಗುತ್ತದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು…

Read More