Headlines

‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ – Kannada News | Sri Muralis PARAAK Teaser Launch: Actor Addresses Film Concept

ನಟ ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ ಪರಾಕ್ ಚಿತ್ರದ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ಹಾಲೇಶ್ ಕೋಗುಂಡಿ ನಿರ್ದೇಶನದ ಈ ಚಿತ್ರವು ಕಮರ್ಷಿಯಲ್ ಅಂಶಗಳ ಜೊತೆಗೆ ವಿಭಿನ್ನ ಕಥಾವಸ್ತುವನ್ನು ಹೊಂದಿದೆ ಎಂದು ಶ್ರೀಮುರಳಿ ತಿಳಿಸಿದ್ದಾರೆ. ಇದು ಕಳೆದ ಎರಡೂವರೆ-ಮೂರು ವರ್ಷಗಳಿಂದ ಚರ್ಚೆಯಲ್ಲಿದ್ದ ಹೊಸ ಪರಿಕಲ್ಪನೆಯ ಸಿನಿಮಾ ಎಂದು ಅವರು ಹೇಳಿದರು. ಚಿತ್ರವು ಕಂಟೆಂಟ್-ಡ್ರಿವನ್ ಆಗಿದ್ದು, ಒಬ್ಬ ವ್ಯಕ್ತಿಯ ಹಿನ್ನೆಲೆ, ಘಟನೆಗಳು ಹಾಗೂ ನ್ಯಾಯದ ಕುರಿತು ಮಹತ್ವದ ವಿಚಾರಗಳನ್ನು ಒಳಗೊಂಡಿದೆ ಎಂದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ಅಬ್ಬರ: ಯುಎಇ ತೈಲ ನೌಕೆಗಳ ಮೇಲೆ ದಾಳಿ, ಓರ್ವ ಭಾರತೀಯ ಸಾವು – Kannada News | Iran Missile Attack in Hormuz: UAE Oil Tankers Hit, Indian Sailor Killed Amid US Blockade

ಟೆಹ್ರಾನ್, ಜುಲೈ 14: ಮಧ್ಯಪ್ರಾಚ್ಯದಲ್ಲಿ ಜಾಗತಿಕ ತೈಲ ಮಾರ್ಗವಾದ ಹಾರ್ಮುಜ್ ಜಲಸಂಧಿ(Hormuz Strait)ಯಲ್ಲಿ ಇರಾನ್ ತನ್ನ ಉಗ್ರ ಸ್ವರೂಪವನ್ನು ಪ್ರದರ್ಶಿಸುತ್ತಿದೆ. ಸೋಮವಾರ ರಾತ್ರಿ ಓಮನ್ ದೇಶದ ಕಡಲ ಗಡಿಯೊಳಗೆ ಚಲಿಸುತ್ತಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್​​ಗೆ ಸೇರಿದ ಎರಡು ಬೃಹತ್ ತೈಲ ಟ್ಯಾಂಕರ್ ಹಡಗುಗಳ ಮೇಲೆ ಇರಾನ್ ಸೇನೆ ಕ್ರೂಸ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರೆ ಎಂಟು ಸಿಬ್ಬಂದಿ ರಕ್ತದ ಮಡುವಿನಲ್ಲಿ ಬಿದ್ದು ನರಳಾಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ…

Read More

Karnataka Weather Forecast: ಮುಂಗಾರು ದುರ್ಬಲ, ಇಂದು-ನಾಳೆ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ – Kannada News | Karnataka Weather Forecast for 14 and 15 July 2026: IMD Predicts Light Rain and Strong Winds Across Several Districts

ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಮುಂಗಾರು (Monsoon Rain) ದುರ್ಬಲಗೊಂಡಿದ್ದು, ಮಳೆಯ ಅಬ್ಬರ ತಗ್ಗಿದೆ. ಆದಾಗ್ಯೂ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಜುಲೈ 14 ಹಾಗೂ 15 ರಂದು ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಉತ್ತರ ಕರ್ನಾಟಕದಲ್ಲಿ ಮಳೆಯಾಗುತ್ತಾ? ಉತ್ತರ ಒಳನಾಡು ಕರ್ನಾಟಕದ ಬೆಳಗಾವಿ…

Read More

ಪರಭಾಷೆಯಲ್ಲಿ ಮಿಂಚಿ ತಾಯ್ನಾಡಿನಲ್ಲಿ ಸೋಲುತ್ತಿದ್ದಾರಾ ಸ್ಟಾರ್ ನಟ ಪೃಥ್ವಿರಾಜ್? – Kannada News | Prithviraj Sukumaran: Why His Malayalam Films Are Failing Despite Rajamouli Varanasi Hype

ಪೃಥ್ವಿರಾಜ್ ಸುಕುಮಾರನ್ ಮಲಯಾಳಂ ಚಿತ್ರರಂಗದ ಟಾಪ್ ಸ್ಟಾರ್‌ಗಳಲ್ಲಿ ಒಬ್ಬರು. ಸದ್ಯ ಅವರು ಎಸ್‌ಎಸ್‌ ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಸ್ವಂತ ಚಿತ್ರರಂಗದಲ್ಲಿ ಮಾತ್ರ ಅವರ ಮಾರುಕಟ್ಟೆ ಕೊಂಚ ಮಂಕಾದಂತೆ ಕಾಣುತ್ತಿದೆ. ಅವರ ಹೊಸ ಸಿನಿಮಾ ‘ಐ, ನೋಬಡಿ’ ಇತ್ತೀಚೆಗಷ್ಟೇ ತೆರೆಕಂಡಿದೆ. ಈ ಚಿತ್ರ ಬೇರೆ ಭಾಷೆಗೂ ಡಬ್ ಆಗಿ ಬಿಡುಗಡೆಯಾಗಿತ್ತು. ಆದರೆ ಡಬ್ ಆದ ಭಾಷೆಗಳಲ್ಲಿ ಸಿನಿಮಾ ಅಟ್ಟರ್ ಫ್ಲಾಪ್ ಹಾದಿಯಲ್ಲಿದೆ. ಮಲಯಾಳಂನಲ್ಲೂ ಕೂಡ ಈ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ…

Read More

ಹಗರಣದ ಬೆನ್ನಲ್ಲೇ ದೊಡ್ಡ ನಿರ್ಧಾರ: ರಾಮ ಮಂದಿರ ‘CEO’ ಹುದ್ದೆಗೆ ಅರ್ಜಿ ಆಹ್ವಾನಿಸಿದ ಟ್ರಸ್ಟ್ – Kannada News | Ram Mandir CEO: Ayodhya Trust Hires Chief for Transparency and Security Reforms

ಅಯೋಧ್ಯೆ, ಜುಲೈ 14: ಇತ್ತೀಚೆಗಷ್ಟೇ ರಾಮ ಮಂದಿರ(Ram Mandir)ದಲ್ಲಿ ಭಕ್ತರು ಅರ್ಪಿಸಿದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ನೌಕರರೇ ವ್ಯವಸ್ಥಿತವಾಗಿ ಲೂಟಿ ಮಾಡಿದ ಘಟನೆ ಬಯಲಿಗೆ ಬಂದ ತಕ್ಷಣ ಎಚ್ಚೆತ್ತುಕೊಂಡ ರಾಮ ಜನ್ಮಭೂಮಿ ಟ್ರಸ್ಟ್​ ಮಂದಿರದ ಇಡೀ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಮುಂದಾಗಿದೆ. ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ಟ್ರಸ್ಟ್​​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಟ್ರಸ್ಟ್​ ಅಧಿಕೃತ ಅಧಿಸೂಚನೆ ಹೊರಡಿಸಿದೆ. ವಿಶೇಷ ತನಿಖಾ ತಂಡ ಕಳ್ಳತನದ ತನಿಖೆ ನಡೆಸಿ ಈಗಾಗಲೇ…

Read More

ಯಾದಗಿರಿಯಲ್ಲಿ 16 ಸಾವಿರಕ್ಕೂ ಹೆಚ್ಚು ಗರ್ಭಧಾರಣೆಗಳ ಮುಂದಿನ ಮಾಹಿತಿಯೇ ಇಲ್ಲ! ತಜ್ಞರ ಸಮಿತಿ ವರದಿಯಲ್ಲಿ ಆಘಾತಕಾರಿ ಅಂಶ ಬಯಲು – Kannada News | Yadgir Pregnancy Tracking Gaps Raise Concern: Expert Panel Flags Missing Follow up in Over 16,000 Cases

ಯಾದಗಿರಿ ಜಿಲ್ಲಾಸ್ಪತ್ರೆ (ಸಾಂದರ್ಭಿಕ ಚಿತ್ರ)Image Credit source: tv9 ಯಾದಗಿರಿ, ಜುಲೈ 14: ಯಾದಗಿರಿ (Yadgir) ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 53,595 ಮಹಿಳೆಯರು ಗರ್ಭಧಾರಣೆ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ 35,424 ಮಹಿಳೆಯರಿಗೆ ಹೆರಿಗೆ ಆಗಿದ್ದು, 2,055 ಪ್ರಕರಣಗಳಲ್ಲಿ ಗರ್ಭಪಾತ ದಾಖಲಾಗಿದೆ. ಆದರೆ ಉಳಿದ 16,116 ಗರ್ಭಧಾರಣೆ ಪ್ರಕರಣಗಳ ಅಂತಿಮ ಫಲಿತಾಂಶ ಅಥವಾ ಮುಂದಿನ ಮಾಹಿತಿ ದಾಖಲೆಗಳಲ್ಲಿ ಲಭ್ಯವಾಗಿಲ್ಲ ಎಂಬ ಆಘಾತಕಾರಿ ವಿಚಾರ ಬಯಲಾಗಿದೆ. ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಗರ್ಭಧಾರಣೆ ಮೇಲ್ವಿಚಾರಣೆ ಕುರಿತಂತೆ ಕೇಳಿಬಂದಿದ್ದ ಆರೋಪಗಳ…

Read More

ಶಾರುಖ್ ನನ್ನ ಕಾಲು ನೆಕ್ಕುತ್ತಿದ್ದಾರೆ ಎಂದಿದ್ದ ಆಮಿರ್ ಖಾನ್; ಇಲ್ಲಿದೆ ಅಸಲಿ ಕಥೆ – Kannada News | Aamir Khan Shah Rukh Dog Controversy: The Truth Behind Bollywood Infamous Feud

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಹಿಂದೊಮ್ಮೆ ನೀಡಿದ್ದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿತ್ತು. ‘ಶಾರುಖ್ ನನ್ನ ಕಾಲು ನೆಕ್ಕುತ್ತಿದ್ದಾನೆ. ನಾನು ಅವನಿಗೆ ಬಿಸ್ಕತ್ ಹಾಕುತ್ತಿದ್ದೇನೆ’ ಎಂದು ಆಮಿರ್ ಹೇಳಿದ್ದರು. ಇದನ್ನು ಕೇಳಿ ಶಾರುಖ್ ಖಾನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಅಸಲಿಗೆ ಆಮಿರ್ ಖಾನ್ ಮಾತನಾಡಿದ್ದು ನಟ ಶಾರುಖ್ ಬಗ್ಗೆ ಅಲ್ಲ. ಅದು ಅವರ ಮನೆಯಲ್ಲಿದ್ದ ನಾಯಿಯ ಹೆಸರಾಗಿತ್ತು. 2008ರಲ್ಲಿ ನಡೆದ ಘಟನೆ ಇದು ಆಮಿರ್ ಖಾನ್ 2008ರಲ್ಲಿ ತಮ್ಮ ಬ್ಲಾಗ್‌ನಲ್ಲಿ ಈ…

Read More

Corona Virus Returns: ಆಂಧ್ರಪ್ರದೇಶಗಲ್ಲಿ ಕೊರೊನಾಗೆ ಇಬ್ಬರು ಬಲಿ; ಕರ್ನಾಟಕಕ್ಕೆ ಮತ್ತೆ ಒಕ್ಕರಿಸಲಿದೆಯೇ ಕೋವಿಡ್ ಮಹಾಮಾರಿ? – Kannada News | Covid Fear Returns: Coronavirus Cases Rise to 32 in Karnataka, High Alert After Andhra Deaths

ಬೆಂಗಳೂರು, ಜುಲೈ 14: ನಾಲ್ಕು ವರ್ಷಗಳ ಹಿಂದೆ ಜಗತ್ತನ್ನೇ ನಡುಗಿಸಿದ್ದ ಹೆಮ್ಮಾರಿ ಕೊರೊನಾ (Corona) ಈಗ ಮತ್ತೆ ಅಬ್ಬರಿಸಲು ಹೊಂಚು ಹಾಕುತ್ತಿದೆ. ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೊವಿಡ್ ಆತಂಕ ಸೃಷ್ಟಿಸಿದ್ದು, ಕರ್ನಾಟಕದ ಗಡಿಯಲ್ಲೂ ಆತಂಕದ ನೆರಳು ಆವರಿಸಿದೆ. ರಾಜ್ಯದಲ್ಲಿ ಈಗಾಗಲೇ 30ಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಆಂಧ್ರದ ಕಡಪಾದಲ್ಲಿ ಇಬ್ಬರ ಬಲಿ! ಕಳೆದ ಮೂರು ವರ್ಷಗಳ ಹಿಂದೆ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಚೀನಾದ ವುಹಾನ್ ವೈರಸ್ ರೂಪಾಂತರದ ಭೀತಿ ಈಗ ಮತ್ತೆ…

Read More

ಸೋಮವಾರದ ಪರೀಕ್ಷೆಯಲ್ಲಿ ಗೆದ್ದ ‘ಧಮಾಲ್ 4’; ನಾಲ್ಕು ದಿನಕ್ಕೆ 100 ಕೋಟಿ ಕಲೆಕ್ಷನ್ – Kannada News | Dhamal 4 Box Office: 100 Crore in 4 Days Passes Monday Test, Sets Global Record

ಸಾಮಾನ್ಯವಾಗಿ ವಾರಾಂತ್ಯದ ಭರ್ಜರಿ ಗಳಿಕೆಯ ನಂತರ ದೊಡ್ಡ ಸಿನಿಮಾಗಳಿಗೆ ಸೋಮವಾರದ ದಿನ ಅತ್ಯಂತ ನಿರ್ಣಾಯಕವಾಗಿರುತ್ತದೆ. ಬಾಲಿವುಡ್‌ನ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಚಿತ್ರ ‘ಧಮಾಲ್ 4’ ಸೋಮವಾರವೂ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುವ ಮೂಲಕ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ. ವಾರದ ದಿನಗಳಲ್ಲೂ ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಕೇವಲ ನಾಲ್ಕೇ ದಿನಗಳಲ್ಲಿ ಈ ಸಿನಿಮಾ ಜಾಗತಿಕವಾಗಿ 100 ಕೋಟಿ ರೂಪಾಯಿ ಗಳಿಕೆಯ ಗಡಿಯನ್ನು ದಾಟಿ ಹೊಸ ದಾಖಲೆ ಬರೆದಿದೆ. ಸೋಮವಾರದ ಗಳಿಕೆ ಎಷ್ಟು? ನಾಲ್ಕನೇ ದಿನವಾದ…

Read More

ಹಾರ್ಮುಜ್ ಜಲಸಂಧಿಯಲ್ಲಿ ಮಹಾ ಸುಂಕದ ಸಮರ, ಟ್ರಂಪ್ ಅವರ ಶೇ.20 ಶುಲ್ಕದ ಬೇಡಿಕೆಗೆ ಇರಾನ್ ಕೌಂಟರ್ – Kannada News | Hormuz Strait Tariff War: Trump’s 20 percent Fee Sparks Iran Counter and Global Oil Crisis

ಟೆಹ್ರಾನ್, ಜುಲೈ 14: ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ(Hormuz Strait)ಯ ನಿಯಂತ್ರಣ ಮತ್ತು ಸುಂಕದ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತು ಇರಾನ್ ನಡುವೆ ತೀವ್ರ ಮಾತಿನ ಚಕಿಮಕಿ ನಡೆದಿದೆ. ಜಲಸಂಧಿಯ ಮೂಲಕ ಹಾದು ಹೋಗುವ ವಿಶ್ವದ ಎಲ್ಲಾ ವಾಣಿಜ್ಯ ಹಡಗುಗಳ ಸರಕುಗಳ ಮೇಲೆ ಬರೋಬ್ಬರಿ ಶೇ.20ರಷ್ಟು ಸುರಕ್ಷತಾ ಶುಲ್ಕ ವಿಧಿಸುವ ಟ್ರಂಪ್ ಯೋಜನೆ ಬಗ್ಗೆ ಇರಾನ್ ತಮಾಷೆ ಮಾಡಿದೆ. ಇದಕ್ಕೆ ಎಕ್ಸ್​​ ಪೋಸ್ಟ್​ ಮೂಲಕ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಸಯ್ಯದ್…

Read More