ಕಿಚ್ಚ ಸುದೀಪ್ ಅವರು ಸದ್ಯ ಸಿಸಿಎಲ್ನಲ್ಲಿ ಬ್ಯುಸಿ ಇದ್ದಾರೆ. ಜನವರಿ 25ರಂದು ನಡೆದ ಪಂದ್ಯದಲ್ಲಿ ಅವರ ಕರ್ನಾಟಕ ಬುಲ್ಡೋಜರ್ಸ್ ತಂಡ ಅದ್ಭುತವಾಗಿ ಆಡಿ ಬೋಜ್ಪುರಿ ದಬಾಂಗ್ ತಂಡವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಸುದೀಪ್ ಅವರು ಸೂಪರ್ ಆಗಿರೋ ಸಿಕ್ಸ್ ಬಾರಿಸಿದ್ದಾರೆ. ಸುದೀಪ್ ಬಾರಿಸಿದ ಚೆಂಡು ಶರವೇಗದಲ್ಲಿ ಬೌಂಡರಿ ಲೈನ್ ದಾಟಿತು. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ.
ಸೌತ್ ಆಫ್ರಿಕಾ ಟಿ20 ಲೀಗ್ನ 4ನೇ ಸೀಸನ್ನಲ್ಲೂ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೇಪ್ ಟೌನ್ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ನಡೆದ ಈ ಬಾರಿಯ ಫೈನಲ್ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ಹಾಗೂ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ನಾಯಕ ಟ್ರಿಸ್ಟನ್ ಸ್ಟಬ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿದ್ದರು.
ಈ ಗುರಿಯನ್ನು 19.2 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಮೂರನೇ ಬಾರಿ ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಇದಕ್ಕೂ ಮುನ್ನ 2023 ಮತ್ತು 2024 ರಲ್ಲಿ ಸನ್ರೈಸರ್ಸ್ ಈಸ್ಟರ್ಸ್ ಕೇಪ್ ತಂಡ ಚಾಂಪಿಯನ್ ಪಟ್ಟಕ್ಕೇರಿದ್ದರು. ಇನ್ನು 2025 ರಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದರು. ಇದೀಗ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ!
ತುಮಕೂರು, ಜನವರಿ 26: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು (Tumakuru) ತಾಲೂಕಿನ ನೆಲಹಾಳ್ ಸಮೀಪ ಇಂದು ಬೆಳಗ್ಗೆ ನಡೆದಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ಹೇಳಲಾಗಿದೆ.
ಮೃತರು ಬೆಂಗಳೂರಿನ ನಿವಾಸಿಗಳು
ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ.
ಪ್ರವಾಸಕ್ಕೆ ತೆರಳಿ ವಾಪಸ್ ಬರುವಾಗ ದುರಂತ
ಮೃತರು ಗೋಕರ್ಣ, ಮುರುಡೇಶ್ವರ ಹಾಗೂ ಉಡುಪಿ ಕಡೆ ಪ್ರವಾಸಕ್ಕೆ ತೆರಳಿದ್ದು, ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆವಿ ಹಾಗೂ ಕೋರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ನವದೆಹಲಿ, ಜನವರಿ 26: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ತವ್ಯ ಪಥದಲ್ಲಿ ಪರೇಡ್, ಪ್ರಧಾನಿ ಮೋದಿ ಭಾಷಣ ಸೇರಿ ಇತರ ಕಾರ್ಯಕ್ರಮಗಳು ಸಂಭ್ರಮದಿಂದ ಇಂದು ಜರಗುತ್ತಿವೆ. ಈ ಬಾರಿ ಪಥಸಂಚಲನದಲ್ಲಿ ಆಪರೇಷನ್ ಸಿಂಧೂರ್ ಅನ್ನು ವಾಯುಪಡೆ ಪ್ರದರ್ಶಿಸಲಿದೆ. ‘ಆಪರೇಷನ್ ಸಿಂಧೂರ್’ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ವಾಯುಪಡೆಯ ಶಕ್ತಿ ತೋರಿಸಲಿವೆ. ಯೂರೋಪಿಯನ್ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಅತಿಥಿಗಳಾಗಿ ಈ ಎಲ್ಲ ಸಂಭ್ರಮವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ
ಬೆಂಗಳೂರು, ಜನವರಿ 26: ಇಂದು ದೇಶಾದ್ಯಂತ 77ನೇ ಗಣರಾಜ್ಯೋತ್ಸವವನ್ನು (Republic Day 2026) ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಪ್ರಧಾನಿ ಮೋದಿ (Narendra Modi)ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ ಶುಭ ಕೋರಿದ್ದಾರೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಭವ್ಯ ಗಣರಾಜ್ಯೋತ್ಸವ ಪರೇಡ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷತೆ ವಹಿಸಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಹಾಗೂ ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಭಾಗವಹಿಸಿರುವುದು ವಿಶೇಷ.
ಶುಭ ಕೋರಿದ ಪ್ರಧಾನಿ ಮೋದಿ
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ X ಖಾತೆಯ ಮೂಲಕ ದೇಶದ ಜನತೆಗೆ ಹೃತ್ಪೂರ್ವಕವಾಗಿ ಶುಭಾಶಯ ಕೋರಿದ್ದಾರೆ. ಭಾರತದ ಗೌರವ, ಹೆಮ್ಮೆ ಮತ್ತು ವೈಭವದ ಸಂಕೇತವಾದ ಗಣರಾಜ್ಯೋತ್ಸವವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಹಾಗೂ ಉತ್ಸಾಹವನ್ನು ತುಂಬಲಿ ಎಂದು ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿರುವ ಪ್ರಧಾನಿ, ನಮ್ಮ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸೋಣ ಎಂದು ಸಂದೇಶ ನೀಡಿದ್ದಾರೆ.
Best wishes on Republic Day.
May this occasion add renewed energy and enthusiasm in our collective resolve to build a Viksit Bharat.
ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ತಮ್ಮ X ಖಾತೆಯ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿ, ಎಲ್ಲರ ಜೀವನವು ಸಂತೋಷ, ಶಾಂತಿ, ಭದ್ರತೆ ಮತ್ತು ಸಾಮರಸ್ಯದಿಂದ ತುಂಬಿರಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರವನ್ನುದ್ದೇಶಿಸಿ ಪ್ರೇರಣಾದಾಯಕ ಭಾಷಣ ಮಾಡಿದ್ದರು. ಸಂವಿಧಾನದ ಅನನ್ಯತೆ, ಸಾಮೂಹಿಕ ಮನೋಭಾವ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಅವರು ಒತ್ತಿ ಹೇಳಿದರು. ಪ್ರತಿಯೊಬ್ಬ ನಾಗರಿಕರು ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊತ್ತು ಭಾರತವನ್ನು ಅಭಿವೃದ್ಧಿಗೊಳಿಸಬೇಕೆಂದು ಹೇಳಿದ್ದರು.
‘ಆಸ್ಕರ್’ ಮತ್ತು ‘ಗೋಲ್ಡನ್ ಗ್ಲೋಬ್’ ನಂತಹ ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ ಕಳೆದ ಕೆಲವು ದಿನಗಳಿಂದ ವಿವಾದದಲ್ಲಿ ಸಿಲುಕಿದ್ದಾರೆ. ಸಂದರ್ಶನವೊಂದರಲ್ಲಿ ಬಾಲಿವುಡ್ ಉದ್ಯಮದ ಬಗ್ಗೆ ಅವರು ನೀಡಿದ ಹೇಳಿಕೆಯಿಂದಾಗಿ ಈ ವಿವಾದ ಉಂಟಾಗಿದೆ. ಈ ಸಂದರ್ಶನದಲ್ಲಿಕಳೆದ ಎಂಟು ವರ್ಷಗಳಿಂದ ಬಾಲಿವುಡ್ನಲ್ಲಿ ತಮಗೆ ಕೆಲಸ ಸಿಕ್ಕಿಲ್ಲ ಎಂದು ರೆಹಮಾನ್ ಹೇಳಿದ್ದರು. ಬಾಲಿವುಡ್ ಉದ್ಯಮದಲ್ಲಿನ ಕೋಮು ತಾರತಮ್ಯ ಇದಕ್ಕೆ ಕಾರಣ ಎಂದು ಅವರು ಹೇಳಿದ್ದರು. ಆರ್ಜಿವಿ (ಆರ್ಜಿವಿ) ಇದಕ್ಕೆ ಪ್ರತಿಕ್ರಿಯಿಸಿದ್ದರು.
ಇತ್ತೀಚಿನ ಸಂದರ್ಶನವೊಂದರಲ್ಲಿ, ರಾಮ್ ಗೋಪಾಲ್ ವರ್ಮ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ರೆಹಮಾನ್ ನೀಡಿದ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಏಕೆಂದರೆ ಅದರಲ್ಲಿ ನನಗೆ ಯಾವುದೇ ಸತ್ಯ ಕಾಣುತ್ತಿಲ್ಲ. ಚಲನಚಿತ್ರೋದ್ಯಮವು ಹಣ ಗಳಿಸುವುದರ ಬಗ್ಗೆ ಮಾತ್ರ ಆಗಿರುತ್ತದೆ. ಜಾತಿ, ಧರ್ಮ ಅಥವಾ ನೀವು ಎಲ್ಲಿಂದ ಬಂದಿದ್ದೀರಿ ಎಂಬುದು ಇಲ್ಲಿ ಮುಖ್ಯವಲ್ಲ. ದಕ್ಷಿಣ ಭಾರತದ ನಿರ್ದೇಶಕರು ಬ್ಲಾಕ್ಬಸ್ಟರ್ಗಳನ್ನು ನೀಡುತ್ತಿದ್ದಾರೆ. ಜನರು ಅವರ ಬಳಿಗೆ ಹೋಗುತ್ತಾರೆ’ ಎಂದರು ಅವರು.
‘ನಿರ್ದೇಶಕ ಸೂರಜ್ ಬರ್ಜತ್ಯ ‘ಮೈನೆ ಪ್ಯಾರ್ ಕಿಯಾ’ ಮತ್ತು ‘ಹಮ್ ಆಪ್ಕೆ ಹೈ ಕೌನ್’ ಚಿತ್ರಗಳಿಗೆ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರನ್ನು ಸಹಿ ಹಾಕಿದಾಗ, ಆ ಚಿತ್ರಗಳಲ್ಲಿನ ಹಾಡುಗಳು ದೊಡ್ಡ ಹಿಟ್ ಆಗಿದ್ದವು. ಅದಕ್ಕಾಗಿಯೇ ಅವರು ಅವುಗಳನ್ನು ಆಯ್ಕೆ ಮಾಡಿಕೊಂಡರು. ಅದರ ನಂತರ, ಇತರ ಹಾಡುಗಳು ಚೆನ್ನಾಗಿ ಬರಲಿಲ್ಲ. ಹೀಗಾಗಿ ಅವರ ಕೈ ಬಿಟ್ಟರು. ಗಾಯಕ ಹಿಂದಿ, ತೆಲುಗು ಅಥವಾ ತಮಿಳು ಆಗಿರಲಿ. ಅದು ಅಪ್ರಸ್ತುತವಾಗುತ್ತದೆ’ ಎಂದು ರಾಮ್ ಗೋಪಾಲ್ ವರ್ಮಾ ಅಭಿಪ್ರಾಯಪಟ್ಟರು.
ವೈಯಕ್ತಿಕ ಅನುಭವಗಳ ಆಧಾರದ ಮೇಲೆ ರೆಹಮಾನ್ ಆ ಹೇಳಿಕೆಯನ್ನು ನೀಡಿರಬಹುದು ಎಂದು ಅವರು ಹೇಳಿದರು. ರೆಹಮಾನ್ ಪರವಾಗಿ ನಾನು ಮಾತನಾಡಲು ಸಾಧ್ಯವಿಲ್ಲ. ಏಕೆಂದರೆ ಅವರಿಗೆ ಏನಾಯಿತು ಎಂದು ನನಗೆ ತಿಳಿದಿಲ್ಲ. ನಮ್ಮಲ್ಲಿ ಯಾರಾದರೂ ಸಾಮಾನ್ಯ ವಿಷಯಗಳ ಬಗ್ಗೆ ಮಾತ್ರ ಮಾತನಾಡಬಹುದು. ಆದರೆ ಯಾರಾದರೂ ಈ ರೀತಿ ಮಾತನಾಡಲು ಕಾರಣವಾದ ನಿರ್ದಿಷ್ಟ ಘಟನೆಯನ್ನು ಅನುಭವಿಸಿರಬೇಕು. ಅವರಿಗೆ ನಿಜವಾಗಿಯೂ ಇಂತಹದ್ದೇನಾದರೂ ಸಂಭವಿಸಿದೆಯೇ ಎಂದು ನನಗೆ ತಿಳಿದಿಲ್ಲ. ಆದ್ದರಿಂದ ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ’ ಎಂದು ವರ್ಮಾ ಸ್ಪಷ್ಟಪಡಿಸಿದರು.
ದೇಶದಲ್ಲಿ ಸ್ವಾತಂತ್ರ್ಯ ದಿನವನ್ನು ಹೇಗೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತದೆಯೋ ಅದೇ ರೀತಿ ಗಣರಾಜ್ಯೋತ್ಸವ ದಿನವನ್ನು (Republic Day) ಸಹ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ದಿನವನ್ನು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜನರ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗಿದೆ. ಜೊತೆಗೆ ಗಣರಾಜ್ಯೋತ್ಸವವು ಅಧಿಕಾರವು ಯಾವುದೇ ವ್ಯಕ್ತಿ, ರಾಜ ಅಥವಾ ಸರ್ಕಾರಕ್ಕೆ ಸೇರಿಲ್ಲ, ಬದಲಾಗಿ ಸಂವಿಧಾನ ಮತ್ತು ಜನರಿಗೆ ಸೇರಿದೆ ಎಂಬುದನ್ನು ನಮಗೆ ನೆನಪಿಸುತ್ತದೆ. ಹೀಗೆ ಪ್ರತಿಯೊಬ್ಬ ಭಾರತೀಯನ ಮಹತ್ವದ ದಿನದ ಈ ಸುಸಂದರ್ಭದಲ್ಲಿ ನಿಮ್ಮ ಸ್ನೇಹಿತರು, ಆಪ್ತರೊಂದಿಗೆ ಹಂಚಿಕೊಳ್ಳಲು ಇಲ್ಲಿವೆ ಶುಭ ಸಂದೇಶಗಳು.
ಗಣರಾಜ್ಯೋತ್ಸವದ ಶುಭ ಸಂದೇಶಗಳು:
ನಾವೆಲ್ಲರೂ ಒಂದೇ. ಜಗಳ, ದ್ವೇಷ ಬಿಟ್ಟು ಒಗ್ಗಟ್ಟಾಗಿ ಮುನ್ನಡೆಯೋಣ, ಗಣರಾಜ್ಯೋತ್ಸವದ ಶುಭಾಶಯಗಳು.
ಭಾರತೀಯರಾಗಿರುವುದಕ್ಕೆ ಹೆಮ್ಮೆ ಪಡೋಣ, ಪ್ರಜಾಪ್ರಭುತ್ವದ ಹಬ್ಬವನ್ನು ಒಟ್ಟಾಗಿ ಆಚರಿಸೋಣ. ಹ್ಯಾಪಿ ರಿಪಬ್ಲಿಕ್ ಡೇ.
ಗಣರಾಜ್ಯೋತ್ಸವದ ಶುಭಾಶಯಗಳು, ಪ್ರಜಾಪ್ರಭುತ್ವದ ದೇಶ ಸಮೃದ್ಧಿಯಾಗಲು ನಾವೆಲ್ಲಾ ಶ್ರಮಿಸೋಣ.
ಈ ಗಣರಾಜ್ಯೋತ್ಸವದಂದು, ನಾವು ಸಂವಿಧಾನವನ್ನು ಗೌರವಿಸುತ್ತೇವೆ ಮತ್ತು ದೇಶದ ಪ್ರಗತಿಗೆ ಕೊಡುಗೆ ನೀಡುತ್ತೇವೆ ಎಂದು ಪ್ರತಿಜ್ಞೆ ಮಾಡೋಣ.
ಅದೆಷ್ಟೋ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ನಾವು ಇಂದು ನಮ್ಮ ಸ್ವಾತಂತ್ರ್ಯವನ್ನು ಪಡೆದಿದ್ದೇವೆ. ಈ ಸ್ವಾತಂತ್ರ್ಯಕ್ಕೆ ನಮ್ಮ ಹೆಮ್ಮೆಯ ಸಂವಿಧಾನ ಇನ್ನಷ್ಟು ಬಲ ತಂದಿದೆ. ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
ಜೀವನದ ಪ್ರತಿಕ್ಷಣದಲ್ಲೂ ದೇಶವನ್ನು ರಕ್ಷಿಸುವ, ದೇಶದ ಪರ ನಿಂತು ಇನ್ನೂ ಸದೃಢ ಭಾರತವನ್ನು ನಿರ್ಮಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳೋಣ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
ಮಹಾನ್ ನಾಯಕರೆಲ್ಲಾ ಜನಿಸಿದ ಪುಣ್ಯಭೂಮಿಯಲ್ಲಿ ಹುಟ್ಟಿದ ನಾವೇ ಧನ್ಯ. ನಾವು ಭಾರತೀಯರೆಂಬ ಹೆಮ್ಮೆ ಮನಸ್ಸಿಗೆ ಸದಾ ಖುಷಿ ಕೊಡುತ್ತದೆ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
ನಮ್ಮ ರಾಷ್ಟ್ರ ವಿಶ್ವದಲ್ಲೇ ಶ್ರೇಷ್ಠವಾದುದು. ಈ ರಾಷ್ಟ್ರವನ್ನು ಇನ್ನಷ್ಟು ಉತ್ತಮಗೊಳಿಸಲು ಪ್ರಯತ್ನಿಸೋಣ. ಹಿರಿಯರು ಹಾಕಿಕೊಟ್ಟ ದೇಶಪ್ರೇಮದ ಹಾದಿಯಲ್ಲಿ ಒಟ್ಟಾಗಿ ಸಾಗೋಣ. ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
ತ್ರಿವರ್ಣ ಧ್ವಜವು ಕೇವಲ ಧ್ವಜವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಗೌರವ ಮತ್ತು ಸ್ವಾಭಿಮಾನದ ಸಂಕೇತವಾಗಿದೆ.
ನಾವು ಜವಾಬ್ದಾರಿಯುತ ಮತ್ತು ಜಾಗೃತ ನಾಗರಿಕರಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಾಧ್ಯ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
ಇಂದು ದೇಶಕ್ಕಾಗಿ ಏನಾದರೂ ಮಾಡುವ ಪ್ರತಿಜ್ಞೆ ಮಾಡುವ ದಿನ. ಗಣರಾಜ್ಯೋತ್ಸವದ ಶುಭಾಶಯಗಳು.
ತ್ರಿವರ್ಣ ಧ್ವಜವು ಎತ್ತರದಲ್ಲಿ ಹಾರಲಿ, ನಮ್ಮ ಭಾರತವು ಬಲಿಷ್ಠವಾಗಿರಲಿ, ಗಣರಾಜ್ಯೋತ್ಸವದ ಶುಭಾಶಯಗಳು.
ಜೀ ಕ್ನಡದ ‘ಕರ್ಣ’ ಧಾರಾವಾಹಿಯಲ್ಲಿ (Karna Serial) ಕರ್ಣ ಇಷ್ಟು ದಿನ ಸೈಲೆಂಟ್ ಆಗಿ ಇರುತ್ತಿದ್ದ. ತಂದೆ ಏನೇ ಹೇಳಿದರೂ ಅದನ್ನು ಸಹಿಸಿಕೊಳ್ಳುತ್ತಿದ್ದ. ಆದರೆ, ಈಗ ಎಲ್ಲವೂ ಬದಲಾಗಿ ಹೋಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಹೌದು, ಕರ್ಣನು ಈಗ ತಂದೆ ರಮೇಶ್ಗೆ ಟಾರ್ಚರ್ ಕೊಡುವ ನಿರ್ಧಾರಕ್ಕೆ ಬಂದಿದ್ದಾನೆ. ಈ ಟಾರ್ಚರ್ನಿಂದ ತಂದೆ ಬೇಸತ್ತು ಹೋಗುವ ಎಲ್ಲಾ ಲಕ್ಷಣ ಇದೆ.
ಕರ್ಣ ಇಷ್ಟು ದಿನ ತಂದೆಯನ್ನು ಅಪಾರವಾಗಿ ಗೌರವಿಸುತ್ತಿದ್ದ. ಈ ಗೌರವ ಅತಿಯಾಗಿತ್ತು. ತಂದೆಯನ್ನು ಸಾಕಷ್ಟು ಪ್ರೀತಿ ಮಾಡುತ್ತಿದ್ದ. ತಂದೆ ಏನೇ ಹೇಳಿದರೂ ಅದನ್ನು ಸಹಿಸಿಕೊಳ್ಳುತ್ತಿದ್ದ. ಇದನ್ನು ಕರ್ಣನ ತಂದೆ ಅಡ್ವಾಂಟೇಜ್ ಆಗಿ ತೆಗೆದುಕೊಂಡ. ಒಂದು ಮಾಸ್ಟರ್ ಪ್ಲ್ಯಾನ್ ಕೂಡ ಮಾಡಿದ ಎಂದೇ ಹೇಳಬಹುದು.
ತಾನು ಬದಲಾದಂತೆ ತೋರಿಸಿಕೊಂಡ. ಒಳ್ಳೆಯವನ ರೀತಿ ವರ್ತಿಸಿದ. ತೇಜಸ್ ಹಾಗೂ ನಿತ್ಯಾಳ ಮದುವೆ ಸಂದರ್ಭದಲ್ಲಿ ತೇಜಸ್ನ ಕಿಡ್ನ್ಯಾಪ್ ಮಾಡಿಸಿದ. ಕಿಡ್ನ್ಯಾಪ್ ಮಾಡಿದ ಬಳಿಕ ಅನಿವಾರ್ಯವಾಗಿ ಕರ್ಣ ಹಾಗೂ ನಿತ್ಯಾ ಮದುವೆ ಮಾಡಿಸಿದ. ಕರ್ಣ ಹಾಗೂ ನಿಧಿ ಪ್ರೀತಿ ಮುರಿದು ಬೀಳುವಂತೆ ಮಾಡಿದ. ಈಗ ಎಲ್ಲವೂ ಬದಲಾಗುವ ಸಮಯ.
ರಮೇಶ್ ತಾನು ಏನೇನು ಪ್ಲ್ಯಾನ್ ಮಾಡಿದ್ದೆ ಎಂಬುದನ್ನು ಹೇಳಿಕೊಳ್ಳುತ್ತಿದ್ದ. ಆ ಸಮಯಕ್ಕೆ ಸರಿಯಾಗಿ ಕರ್ಣ ಅಲ್ಲಿಗೆ ಬಂದು ಕೇಳಿಕೊಂಡ. ಇದನ್ನು ಕೇಳಿ ಕರ್ಣ ‘ದಂಡಂ ದಶಗುಣಂ’ ಎಂದು ಹೇಳಿದ್ದಾನೆ. ಇದರ ನಂತರ ಕರ್ಣನು ಸಂಪೂರ್ಣವಾಗಿ ಬದಲಾಗುವ ಸೂಚನೆ ಕೊಟ್ಟಿದ್ದಾನೆ.
ಕರ್ಣನ ಏಟಿಗೆ ರಮೇಶ್ ತತ್ತಿರಿಸುವ ಸೂಚನೆ ಸಿಕ್ಕಿದೆ. ಇಡೀ ಮನೆಯವರಿಗೆ ಅಡುಗೆ ಮಾಡೋಣ ಎಂದು ಹೇಳಿ ಅಡುಗೆ ಮಾಡಿಸಿದ್ದಾನೆ. ಆ ಬಳಿಕ ರಮೇಶ್ ಬಳಿ ಪಾತ್ರೆ ತೊಳೆಯುವಂತೆ ಹೇಳಿದ್ದಾನೆ.
ಇದೆಲ್ಲವನ್ನೂ ನೋಡಿ ರಮೇಶ್ ಕಂಗಾಲಾಗಿದ್ದಾನೆ. ಕರ್ಣ ಇಷ್ಟು ದಿನ ಸೈಲೆಂಟ್ ಆಗಿ ಇರುತ್ತಿದ್ದರು. ಆದರೆ, ಈಗ ಎಲ್ಲವನ್ನೂ ಸಹಿಸಿಕೊಳ್ಳುವ ಸಮಯ ಅಲ್ಲವೇ ಅಲ್ಲ. ಈ ಬದಲಾವಣೆಯನ್ನು ಸಾಕಷ್ಟು ಇಷ್ಟಪಡುತ್ತಾ ಇದ್ದಾರೆ. ಇದರಿಂದ ಟಿಆರ್ಪಿ ಏರುವ ಎಲ್ಲಾ ಲಕ್ಷಣ ಇದೆ.
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (Gilli Nata) ಅವರು ನಾನಾ ಕಡೆಗಳಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆ. ಪ್ರತಿ ವೇದಿಕೆಯಲ್ಲೂ ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆಯುತ್ತಿದ್ದಾರೆ. ಈ ವಿಷಯ ಅವರ ಖುಷಿಗೆ ಕಾರಣ ಆಗಿದೆ. ಬಿಗ್ ಬಾಸ್ ವೀಕ್ಷಕರು ಕೂಡ ಗಿಲ್ಲಿ ಜನಪ್ರಿಯತೆ ಕಂಡು ನಿಬ್ಬರಗಾಗುತ್ತಿದ್ದಾರೆ. ಈಗ ಗಿಲ್ಲಿ ಹೋದಲ್ಲಿ ಬಂದಲ್ಲಿ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಈಗ ಗಿಲ್ಲಿ ಅವರ ಫನ್ ವಿಡಿಯೋ ವೈರಲ್ ಆಗಿದೆ.
ಗಿಲ್ಲಿ ನಟ ಅವರು ಹಲವು ರಿಯಾಲಿಟಿ ಶೋಗಳನ್ನು ನೀಡಿದವರು. ಇದರಿಂದ ಸ್ವಲ್ಪ ಜನಪ್ರಿಯತೆ ಅವರಿಗೆ ಸಿಕ್ಕಿತ್ತು. ಆದರೆ, ಬಿಗ್ ಬಾಸ್ ತಂದುಕೊಟ್ಟಷ್ಟು ಜನಪ್ರಿಯತೆ ಅವರಿಗೆ ಯಾವ ಶೋ ಕೂಡ ನೀಡಿಲ್ಲ. ಈ ಕಾರಣದಿಂದ ಬಿಗ್ ಬಾಸ್ ಶೋಗೆ ಅವರು ಚಿರಋಣಿ ಆಗಿದ್ದಾರೆ. ಇತ್ತೀಚೆಗೆ ಅವರು ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಒಂದು ಫನ್ ಘಟನೆ ನಡೆದಿದೆ.
ಕಾರ್ಯಕ್ರಮ ಮುಗಿದ ಬಳಿಕ ಗಿಲ್ಲಿನ ಭೇಟಿ ಮಾಡಬೇಕು, ಗಿಲ್ಲಿ ಜೊತೆ ಮಾತನಾಡಬೇಕು, ಗಿಲ್ಲಿ ಜೊತೆ ಸೆಲ್ಫಿ ತೆಗೆಸಿಕೊಳ್ಳಬೇಕು ಎಂದು ಅನೇಕರು ಮುತ್ತಿಕೊಳ್ಳುತ್ತಾರೆ. ಆ ಸಂದರ್ಭದಲ್ಲಿ ಗಿಲ್ಲಿಗೆ ತೊಂದರೆ ಆಗುತ್ತದೆ. ಆ ರೀತಿ ಆಗಬಾರದು ಎಂದೇ ಗಿಲ್ಲಿ ನಟ ಅವರಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ.
ಗಿಲ್ಲಿನ ತೆಗೆದುಕೊಂಡು ಹೋಗುತ್ತಿದ್ದನ್ನು ನೋಡಿದ ಅನೇಕರಿಗೆ, ಪೊಲೀಸರು ಆರೋಪಿಯನ್ನು ಕರೆದುಕೊಂಡು ಹೋದಂತೆ ಕಾಣಿಸಿದೆ. ಗಿಲ್ಲಿ ಯಾರು ಎಂಬ ಗೊತ್ತಿಲ್ಲದ ವ್ಯಕ್ತಿ ಯಾರಾದರೂ ಇದ್ದಲ್ಲಿ ಅವರಿಗೆ ಈ ವಿಡಿಯೋ ಅದೇ ರೀತಿ ಕಾಣಿಸಲಿದೆ. ಗಿಲ್ಲಿ ಕೂಡ ‘ಸರ್, ನಾನೇನು ಕಳ್ಳನಾ?’ ಎಂದು ಕೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೊಲೀಸರು ನಕ್ಕಿದ್ದಾರೆ.