Daily Devotional: ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ ! – Kannada News | Daily Devotional: Three Zodiac Signs Should Avoid Black Clothes Until Ugadi

ಬೆಂಗಳೂರು, ಜನವರಿ 26: ಬಣ್ಣಗಳು ಮತ್ತು ವಸ್ತ್ರಗಳು ನಮ್ಮ ಮನಸ್ಸು ಹಾಗೂ ಜೀವನದ ಮೇಲೆ ಗಣನೀಯ ಪ್ರಭಾವ ಬೀರುತ್ತವೆ. ಕೆಲವು ಬಣ್ಣಗಳು ಅದೃಷ್ಟ ತಂದರೆ, ಇನ್ನು ಕೆಲವು ದುರಾದೃಷ್ಟವನ್ನು ತರಬಹುದು. ಕಪ್ಪು ಬಣ್ಣವು ಶನಿಯ ಪ್ರತೀಕವಾಗಿದೆ. ಪ್ರತಿಯೊಂದು ಬಣ್ಣಕ್ಕೂ ತನ್ನದೇ ಆದ ಶಕ್ತಿ ಇರುತ್ತದೆ, ಅದು 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ. ಯುಗಾದಿಯ (ಮಾರ್ಚ್ 19) ತನಕ ಮೂರು ನಿರ್ದಿಷ್ಟ ರಾಶಿಚಕ್ರದವರಿಗೆ ಕಪ್ಪು ಬಟ್ಟೆಗಳನ್ನು ಧರಿಸುವುದು ಅಶುಭಕರವೆಂದು ಪರಿಗಣಿಸಲಾಗಿದೆ.

ಮೇಷ, ಕರ್ಕಾಟಕ, ಮತ್ತು ಕನ್ಯಾ ರಾಶಿಗಳಿಗೆ ಈ ಎಚ್ಚರಿಕೆ ಅನ್ವಯಿಸುತ್ತದೆ. ಮೇಷ ರಾಶಿಯವರಿಗೆ ಕಪ್ಪು ಬಟ್ಟೆ ಧರಿಸುವುದರಿಂದ ಸಂಕಲ್ಪಗಳು ಹಿನ್ನಡೆ ಅನುಭವಿಸಬಹುದು. ಕರ್ಕಾಟಕ ರಾಶಿಯವರಿಗೆ, ಚಂದ್ರನ ಪ್ರಭಾವದಿಂದ ಕಪ್ಪು ಬಣ್ಣವು ಮಾನಸಿಕ ಶಾಂತಿಗೆ ಭಂಗ ತರಬಹುದು. ಕನ್ಯಾ ರಾಶಿಯವರಿಗೆ ಕಪ್ಪು ವಸ್ತ್ರಗಳು ಮಾನಸಿಕವಾಗಿ ಫಲಿತಾಂಶಗಳನ್ನು ಕಡಿಮೆ ಮಾಡಬಹುದು, ಅಶಾಂತಿ ಮತ್ತು ವ್ಯಾಪಾರದಲ್ಲಿ ತೊಂದರೆಗಳನ್ನು ಉಂಟುಮಾಡಬಹುದು ಎಂದು ನಂಬಲಾಗಿದೆ. ಇವೆಲ್ಲವೂ ನಂಬಿಕೆಯ ಆಧಾರದ ಮೇಲೆ ನೀಡಲಾದ ಸಲಹೆಗಳಾಗಿವೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

Horoscope Today 26 January: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 26 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು 77ನೇ ಗಣರಾಜ್ಯೋತ್ಸವ ಹಾಗೂ ಭೀಷ್ಮಾಷ್ಟಮಿ, ಅಪ್ಪಯ್ಯ ದೀಕ್ಷಿತರ ಮತ್ತು ಸಂಗೊಳ್ಳಿ ರಾಯಣ್ಣನ ಪುಣ್ಯದಿನವಾಗಿದೆ. ಈ ವಿಶೇಷ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಅಶ್ವಿನಿ ನಕ್ಷತ್ರದೊಂದಿಗೆ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ.

ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಪ್ರತಿ ರಾಶಿಯವರು ಎದುರಿಸಬಹುದಾದ ಸವಾಲುಗಳು ಮತ್ತು ಪಡೆಯಬಹುದಾದ ಅವಕಾಶಗಳನ್ನು ವಿವರಿಸಲಾಗಿದೆ. ಅಲ್ಲದೆ, ಪ್ರತಿಯೊಂದು ರಾಶಿಯವರಿಗೆ ಅದೃಷ್ಟದ ಸಂಖ್ಯೆ, ಶುಭ ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳನ್ನು ಸಹ ಸೂಚಿಸಿದ್ದಾರೆ. ಈ ಮೂಲಕ ಈ ವಿಶೇಷ ದಿನವನ್ನು ಹೇಗೆ ಉತ್ತಮಗೊಳಿಸಿಕೊಳ್ಳಬೇಕೆಂಬುದಕ್ಕೆ ಮಾರ್ಗದರ್ಶನ ನೀಡಿದ್ದಾರೆ.

 

 

 

Source link

ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ – Kannada News | Stone Pelting Incident Targeting CM Siddaramaiah’s Economic Advisor Basavaraj Rayareddi in Koppal

ಕೊಪ್ಪಳ, ಜನವರಿ 26: ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಭಾನುವಾರ ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರತ್ತ ಕಲ್ಲೆಸೆಯಲಾಗಿದೆ. ಗ್ರಾಮದ ಅನ್ನದಾನೇಶ್ವರ ಮಠದ ಆವರಣದಲ್ಲಿ ಜನಗಳ ಸಮಸ್ಯೆ ಆಲಿಸಲು ಶಾಸಕರು ಜನಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಬಸವರಾಜ್ ರಾಯರೆಡ್ಡಿ ಭಾಷಣ ಮಾಡುತ್ತಿದ್ದಾಗ ಅವರ ಮುಂದೆಯೇ ಒಂದು ಕಲ್ಲು ಬಿದ್ದಿದೆ.

ಈ ಅನಿರೀಕ್ಷಿತ ಘಟನೆಯಿಂದಾಗಿ ಶಾಸಕ ಬಸವರಾಜ್ ರಾಯರೆಡ್ಡಿ ಕೆಲಕಾಲ ಗಾಬರಿಗೊಂಡರು. ಅಲ್ಲಿದ್ದ ಜನರೂ ಕೂಡಾ ಆತಂಕಗೊಂಡರು. ತಕ್ಷಣದ ಪರಿಶೀಲನೆಯ ನಂತರ, ಕಲ್ಲೆಸೆದ ವ್ಯಕ್ತಿ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದೆ. ಅದೃಷ್ಟವಶಾತ್ ಶಾಸಕರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ. ಈ ಘಟನೆಯಿಂದಾಗಿ ಕಾರ್ಯಕ್ರಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಜನಸಂಪರ್ಕ ಕಾರ್ಯಕ್ರಮ ಸಸೂತ್ರವಾಗಿ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದ್ದು, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಲಿದ್ದೀರಿ. ಪ್ರಾಣಿಗಳಿಂದ ಕಡಿತಕ್ಕೆ ಒಳಗಾಗುವ ಯೋಗ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಮನಸ್ಸಿಗೆ ಸಮಾಧಾನ ತರುವಂಥ ಬೆಳವಣಿಗೆಗಳು ಆಗಲಿವೆ. ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಇಂಟರ್ ವ್ಯೂ ಕರೆ ಬರಬಹುದು. ಇನ್ನು ವೃತ್ತಿಪರರು ನೀವಾಗಿಯೇ ಕೆಲವು ಕ್ಲೈಂಟ್ ಗಳಿಗೆ ಇನ್ನು ಕೆಲಸ ಮಾಡಿಕೊಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಲಿದ್ದೀರಿ. ಊಟ- ತಿಂಡಿಗಾಗಿ ದೂರದ ಸ್ಥಳಗಳಿಗೆ ಹುಡುಕಿಕೊಂಡು ಹೋಗಲಿದ್ದೀರಿ. ಇದಕ್ಕೆ ನಿಮ್ಮ ಸ್ನೇಹಿತರು ಸಹ ಜೊತೆಯಾಗುತ್ತಾರೆ. ಕೋರ್ಟ್- ಕಚೇರಿ ಅಲೆದಾಟ ಮಾಡುತ್ತಿರುವವರಿಗೆ ರಾಜೀ- ಸಂಧಾನಕ್ಕೆ ಪ್ರಸ್ತಾವ ಬರಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಯಾಕೆ- ಏನು ಎಂಬ ಪ್ರಶ್ನೆ ಮಾಡದೆ ತಮಗೆ ಬೇಕಾದ ಕೆಲಸವನ್ನು ಮಾಡಿಕೊಡಬೇಕು ಎಂಬುದು ನಿಮ್ಮ ಸ್ನೇಹಿತರ ನಿರೀಕ್ಷೆ ಆಗಿರಲಿದೆ. ಇದಕ್ಕಾಗಿ ನಡೆಯುವ ಮಾತುಕತೆ ವೇಳೆ ನಿಮ್ಮ ಮೇಲೆ ಹಿಡಿತ ಸಾಧಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದೆನಿಸುವುದಕ್ಕೆ ಶುರು ಆಗಲಿದೆ. ಜಮೀನು- ಸೈಟು ಇಂಥ ದಾಖಲೆಗಳ ವಿಚಾರದಲ್ಲಿ, ಮನೆ- ಮಳಿಗೆ ನಿರ್ಮಾಣದಲ್ಲಿ ತೊಡಗಿಕೊಂಡವರು ನಿಯಮಾನುಸಾರ ಕೆಲಸ- ಕಾರ್ಯಗಳು ನಡೆಯುತ್ತಾ ಇವೆಯೇ ಎಂದು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

 

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಯೋಗ ಇದೆ. ಬಹಳ ಸಮಯದಿಂದ ನೀವು ಹೇಳಬೇಕು ಅಂದುಕೊಳ್ಳುತ್ತಾ ಇದ್ದ ಕೆಲವು ವಿಚಾರಗಳನ್ನು ಸಂಬಂಧ ಪಟ್ಟವರಿಗೆ ಹೇಳಲಿದ್ದೀರಿ. ಧಾರ್ಮಿಕ ವೃತ್ತಿಯಲ್ಲಿ ಇರುವವರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ನೀವು ಕೈಯಿಂದ ಹಣ ಹಾಕಿ, ಮಾಡಿಕೊಟ್ಟ ಕೆಲಸದ ಬಾಕಿ ವಸೂಲಿ ಮಾಡುವುದು ಈ ದಿನ ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಕುದುರುವುದು ಕಷ್ಟ ಆಗಲಿದೆ. ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಮನೆಯ ಖರ್ಚು ವೆಚ್ಚಗಳು ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿಗೆ ಆಗಲಿದೆ. ಆದಾಯ ಹಾಗೂ ಅದನ್ನು ಬಳಸುವುದಕ್ಕೂ ತಾಳೆ ಆಗುತ್ತಿಲ್ಲ ಎಂಬುದು ಚಿಂತೆಗೆ ಕಾರಣ ಆಗಲಿದೆ. ಆದಾಯದ ಮೂಲ ಜಾಸ್ತಿ ಮಾಡಿಕೊಳ್ಳಲು ಹಾಕುವಂಥ ಶ್ರಮ ಫಲ ನೀಡುತ್ತದೆ. ಸಂಗಾತಿ ಜತೆಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಅವರ ಬೇಕು- ಬೇಡಗಳನ್ನು ಕೇಳಿಕೊಂಡು, ಅದನ್ನು ಒದಗಿಸಿಕೊಡಲು ಆದ್ಯತೆ ನೀಡಲಿದ್ದೀರಿ. ನಿಮ್ಮ ನಿಲವು- ಉದ್ದೇಶದ ಬಗ್ಗೆ ಸಂಬಂಧಿಕರು ಆಕ್ಷೇಪದ ಮಾತುಗಳನ್ನು ಹೇಳಲಿದ್ದಾರೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿರ್ಭಾವುಕ ನಿರ್ಧಾರ ತೆಗೆದುಕೊಳ್ಳಬೇಕು, ಯಾರನ್ನೂ ಹಚ್ಚಿಕೊಳ್ಳಬಾರದು ಎಂದುಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮಿಂದ ನಿರೀಕ್ಷೆ ಮಾಡುತ್ತಿರುವುದು ತಲುಪಲು ಸಾಧ್ಯ ಇಲ್ಲದಷ್ಟು ಎತ್ತರದಲ್ಲಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ. ನೀವು ಒಪ್ಪಿಸಿದ ಕೆಲಸ- ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವುದಾಗಿ ಮಾತು ನೀಡಿದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯವಾಗುತ್ತಿಲ್ಲ ಎನ್ನುವುದರಿಂದ ನೀವು ಇಕ್ಕಟ್ಟಿಗೆ ಸಿಲುಕಿಕೊಳ್ಳುತ್ತೀರಿ. ಪ್ರಯಾಣಕ್ಕೆ ಹೆಚ್ಚು ಖರ್ಚು ಮಾಡುವ ಯೋಗ ಇದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂಬ ನಿಮ್ಮ ಬದ್ಧತೆಗೆ ಮೆಚ್ಚುಗೆ ವ್ಯಕ್ತವಾಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಪ್ಲಾನ್ ಬಿ ಮಾಡಿಕೊಳ್ಳುವ ವಿಧಾನದಿಂದ ಅನುಕೂಲ ಆಗಲಿದೆ. ಕಠಿಣವಾದ ವಿಷಯಗಳನ್ನು ಸಹ ಸಲೀಸಾಗಿ ಅರ್ಥ ಮಾಡಿಕೊಳ್ಳುವ ರೀತಿಯಿಂದಾಗಿಯೇ ಇತರರು ನಿಮ್ಮ ಕಡೆಗೆ ಬೆರಗಿನಿಂದ ನೋಡುತ್ತಾರೆ. ದೊಡ್ಡ ಮಟ್ಟದ ಖರ್ಚು ಬರಬಹುದು ಎಂದು ಅಂದಾಜು ಮಾಡಿಕೊಂಡಿದ್ದು, ತುಂಬ ಕಡಿಮೆ ಮೊತ್ತದಲ್ಲಿ ಅಂದುಕೊಂಡ ರೀತಿಯಲ್ಲಿಯೇ ಕೆಲಸ ಮುಗಿಯುತ್ತದೆ. ಉದ್ಯೋಗ ಬಿಟ್ಟು ಹೊಸ ವ್ಯವಹಾರ- ವ್ಯಾಪಾರ ಆರಂಭಿಸುವ ನಿರ್ಧಾರದ ಬಗ್ಗೆ ನಿಮ್ಮಲ್ಲಿ ಕೆಲವರು ಸ್ನೇಹಿತರ ಜೊತೆಗೆ ಚರ್ಚೆ ಮಾಡಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಕೆಲವು ಬದಲಾವಣೆಗೆ ಸಂಬಂಧಿಸಿದಂತೆ ನಿಮ್ಮನ್ನು ಒಪ್ಪಿಸುವುದಕ್ಕೆ ಸಹೋದ್ಯೋಗಿಗಳು ಪ್ರಯತ್ನ ಮಾಡಲಿದ್ದಾರೆ. ಎಲ್ಲಿಯೂ ಹೇಳಿಕೊಳ್ಳದ ಸಂಗತಿಗಳನ್ನು ಬಾಯಿ ಬಿಟ್ಟು ಹೇಳಿಕೊಳ್ಳುವಂತೆ ಆಗಲಿದೆ. ನಿಮ್ಮ ಸಾಮರ್ಥ್ಯ, ಬದ್ಧತೆ, ಅದರಿಂದ ಆಗಿರುವ ಅನುಕೂಲಗಳ ಬಗ್ಗೆ ಮಾತನಾಡುತ್ತೀರಿ. ಇದರ ಆಚೆಗೆ ಆಗುವ ಯಾವುದೇ ಬದಲಾವಣೆಗೆ ಒಪ್ಪಿಕೊಳ್ಳುವುದಕ್ಕೆ ಸಿದ್ಧರಿಲ್ಲ ಎಂಬುದನ್ನು ಸಹ ಹೇಳಲಿದ್ದೀರಿ. ಯಾವುದಾದರೂ ನಿರ್ದಿಷ್ಟ ಕಾಯಿಲೆ ಆಗಿದೆಯಾ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ಏನಾದರೂ ಸೂಚಿಸಿದ್ದಲ್ಲಿ ಗಂಭೀರ ಸಮಸ್ಯೆ ಇಲ್ಲ ಎಂಬುದು ತಿಳಿದುಬರಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನಿಮ್ಮ ಹತ್ತಿರ ಏನಿದೆಯೋ ಅದು ಮಾತ್ರ ನಿಮ್ಮದು. ನೀವು ಬೇರೆಯವರಿಗೆ ಕೊಟ್ಟಂಥ ಸಾಲ, ಈಗಾಗಲೇ ಕೆಲಸ ಮಾಡಿಯಾಗಿದೆ ಅದರ ಹಣ ಬರಬೇಕಿದೆ, ಸ್ನೇಹಿತರು- ಸಂಬಂಧಿಕರು ಸಹಾಯ ಮಾಡುವುದಾಗಿ ಕೊಟ್ಟಂಥ ಮಾತು ಇದ್ಯಾವುದನ್ನೂ ನೆಚ್ಚಿಕೊಂಡು ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದಕ್ಕೆ ಹೋಗಬೇಡಿ. ಹೋಟೆಲ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದೆ. ಪ್ರೀತಿಯಲ್ಲಿ ಇರುವವರು ಜೊತೆಯಾಗಿ ಸಮಯವನ್ನು ಕಳೆಯುವಂಥ ಯೋಗ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 26 January : ಇಂದು ಈ ರಾಶಿಯವರು ಯಾವ ಸವಾಲನ್ನು ಒಪ್ಪುಕೊಳ್ಳರು – Kannada News | Horoscope Today: January 26, Monday 2026 Daily Zodiac Predictions and Lucky Signs

ಮೇಷ ರಾಶಿ:

ಇನ್ನೊಬ್ಬರಿಂದ ಮತ್ತೆ ಮತ್ತೆ ಹೇಳಿಸಿಕೊಳ್ಳಬೇಕಾಗುವುದು. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯಾಗುವ ಮಾತುಗಳು ಬರಬಹುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಭವಿಷ್ಯದ ವಿದ್ಯಾಭ್ಯಾಸದ ಬಗ್ಗೆ ಆತಂಕ ಕಾಣಿಸುವುದು.

ವೃಷಭ ರಾಶಿ:

ನಿಮ್ಮ ಬಗ್ಗೆ ಅನಗತ್ಯ ಮಾತುಗಳು ಬರುವುದು. ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಕೆಲವರು ದೂರವಾದಷ್ಟು ನಿಮಗೆ ನೆಮ್ಮದಿ ಇರುವುದು. ಹಿರಿಯರ ಜೊತೆ ವಾಗ್ವಾದ ಆಗಬಹುದು. ಪ್ರಯಾಣದ ಆಯಾಸದಿಂದ ಜ್ವರ, ಆಶಕ್ತತೆಯು ಬರಬಹುದು. ನಿಮ್ಮ ಶ್ರಮವು ಹಾಕಬೇಕಾದಲ್ಲಿ ಹಾಕದೇ ಮತ್ತೆಲ್ಲೋ ಹಾಕುವಿರಿ. ಪ್ರಯಾಣದಿಂದ ಸ್ವಲ್ಪ ಆಯಾಸವಾಗಲಿದ್ದು ವಿಶ್ರಾಂತಿಯಿಂದ ಸರಿಮಾಡಿಕೊಳ್ಳಿ. ನಿಮ್ಮ ವಸ್ತುಗಳನ್ನು ಕಳೆದುಕೊಳ್ಳುವ ಸಂಭವವಿದೆ.

ಮಿಥುನ ರಾಶಿ:

ಇಂದು ಮಾಡಲಾಗದ ಕಾರ್ಯವನ್ನು ಮತ್ತೆಂದೋ ಮಾಡುವ ಬದಲು ಅದಕ್ಕಾಗಿ ಇಂದೇ ದಿನವನ್ನು ನಿಶ್ಚಯಿಸಿ. ನಿಮ್ಮ ಗೌರವಕ್ಕೆ ದಕ್ಕೆ ಬರುವ ಕಡೆ ಹೋಗಲಾರಿರಿ. ಉತ್ಪನ್ನ ಮಾಡುವವರಿಗೆ ಬೇಡಿಕೆ ಅಧಿಕವಾಗಿದ್ದು, ಪೂರೈಸೈಲು ನಿಮಗೆ ಅಷ್ಟವಾಗುವುದು. ನಿಮ್ಮಲ್ಲಿ ಆದ ಬದಲಾವಣೆಯನ್ನು ಸಹೋದ್ಯೋಗಿಗಳು ಗಮನಿಸಬಹುದು. ದೀರ್ಘಕಾಲದ ರೋಗವು ಇಂದು ಗೊತ್ತಾಗಬಹುದು. ವಿದ್ಯಾರ್ಥಿಗಳು ಮನೆಯ ಜವಾಬ್ದಾರಿಯನ್ನೂ ನಡೆಸುವ ಸಂದರ್ಭವು ಬರಬಹುದು.

ಕರ್ಕಾಟಕ ರಾಶಿ:

ಸಾಹಿತ್ಯಾಸಕ್ತರಿಗೆ ಉತ್ತಮ ಅವಕಾಶಗಳು ಪ್ರಾಪ್ತವಾಗಿ, ತಮ್ಮ ಜೀವನವನ್ನು ಬದಲಿಸಿಕೊಳ್ಳುವರು. ಆಲಂಕಾರಿಕ ವಸ್ತುಗಳ ಖರೀದಿಯನ್ನು ಮಾಡುವಿರಿ. ಸಮಯವನ್ನು ಬಹಳ ದುರುಪಯೋಗ ಮಾಡಿಕೊಳ್ಳುವ ಸಂಭವವಿದೆ. ಸಂಗಾತಿಯಿಂದ ನಿಮಗೆ ಅಪರೂಪದ ವಸ್ತುಗಳು ಸಿಗಬಹುದು. ನಿಮ್ಮ ಶ್ರೇಯಸ್ಸಿಗೆ ದೈವದ ಕೃಪೆಯನ್ನು ಬೇಡುವಿರಿ. ಹೊಸ ಯೋಜನೆಗಳನ್ನು ಆರಂಭಿಸಲು ಧೈರ್ಯ ಮಾಡುವುದು ಬೇಡ. ಏನಾದರೂ ಒಂದು ಅಸಂಬದ್ಧವನ್ನು ಮಾಡಿರುವ ಹಣೆಪಟ್ಟಿ ಬರಬಹುದು.

ಸಿಂಹ ರಾಶಿ:

ಸಹೋದರರ ಜೊತೆ ಸಣ್ಣ ವಿಚಾರಕ್ಕೆ ಕಲಹವಾಗಬಹುದು. ಜಯದಿಂದ ನಿಮಗೆ ಅಹಂಕಾರ ಬರುವ ಸಾಧ್ಯತೆ ಇದೆ. ವಿದ್ಯಾಭ್ಯಾಸವನ್ನು ಮುಗಿಸಿ ಹೊಸ ಉದ್ಯೋಗವನ್ನು ಹುಡುಕುವಿರಿ. ಸರ್ಕಾರದಿಂದ ಆಗಬೇಕಾದ ಕೆಲಸಕ್ಕೆ ಹೆಚ್ಚು ಖರ್ಚನ್ನು ಮಾಡಬೇಕಾಗುದು. ಯಾವುದೋ ಆಲೋಚನೆಯಲ್ಲಿ ಮಗ್ನರಾಗಿ ಮಾಡಬೇಕಾದ ಕೆಲಸವನ್ನು ಮಾಡಲಾಗದು. ನಿಮ್ಮ ಮಾತನ್ನು ತಪ್ಪಾಗಿ ಅರ್ಥೈಸಬಹುದು. ಕುರುಡಾಗಿ ಮುನ್ನುಗ್ಗುವುದು ಬೇಡ.

ಕನ್ಯಾ ರಾಶಿ:

ಅದೃಷ್ಟವು ನಿಮಗೆ ಸಂಕೇತದ ರೂಪದಲ್ಲಿ ಕಾಣಿಸಿಕೊಳ್ಳಬಹುದು. ವಿದ್ಯಾಭ್ಯಾಸದ ಹಿನ್ನಡೆಯ ಕಾರಣ ಎಲ್ಲರಿಂದ ಅವಮಾನವಾಗಬಹುದು. ಕೃಷಿಕರಿಗೆ ಲಾಭಾವಾಗಲಿದೆ. ನಿಮಗೆ ಪ್ರೋತ್ಸಾಹದ ಕೊರತೆ ಅಧಿಕವಾಗಿ ಕಾಣಿಸುವುದು. ಅಧಿಕಾರಿಗಳಿಂದ ನಿಮಗೆ ಮಾನಸಿಕ ಹಿಂಸೆ ಆಗಬಹುದು. ಎಷ್ಟೋ ವರ್ಷಗಳಿಂದ ಆಗದೇ ಇರುವ ಕೆಲಸವನ್ನು ಸಾಮಾಜಿಕ ಕೆಲಸದಿಂದ ಸಾಧಿಸುವಿರಿ. ವಾಹನ ಚಾಲನೆಯಲ್ಲಿ ಸುರಕ್ಷತೆ ಇರಲಿ.

ತುಲಾ ರಾಶಿ:

ವಿದ್ಯಾರ್ಥಿಗಳು ಅಧ್ಯಯನವನ್ನು ಚುರುಕು ಮಾಡುವುದು ಒಳ್ಳೆಯದು. ಹಿತಶತ್ರುಗಳನ್ನೇ ನಿಮ್ಮ ಬೆಂಬಲಕ್ಕೆ ಇಟ್ಟುಕೊಳ್ಳುವಿರಿ. ರಾಜಕೀಯದವರಿಗೆ ಬೆಂಬಲಿಗರಿಂದ ಒತ್ತಡಗಳು ಬರಬಹುದು. ಸಂಗಾತಿಯ ಮನೋಭಾವವು ಬದಲಾದಂತೆ ಅನ್ನಿಸುವುದು. ನಿಮ್ಮ ಆದಾಯವನ್ನು ಧಾರ್ಮಿಕ ಕಾರ್ಯಗಳಿಗೆ ಉಪಯೋಗಿಸುವಿರಿ. ಮನೆಯ ವಾತಾವರಣವು ನಿಮಗೆ ಹಿತವೆನಿಸಲಿದ್ದು ಮನೆಯಿಂದ ದೂರವಿರಲು ಕಷ್ಟವಾಗುವುದು. ಸ್ವಾಭಿಮಾನಕ್ಕೆ ಆಪ್ತರಿಂದ ತೊಂದರೆಯಾಗಬಹುದು. ಸಂಗಾತಿಯ ಮೌನದಿಂದ ನಿಮಗೆ ಕಷ್ಟ.

ವೃಶ್ಚಿಕ ರಾಶಿ:

ನೀವು ಮಾಡಿದೆ ಕಾರ್ಯಕ್ಕೆ ದಾಖಲೆ ಅವಶ್ಯಕತೆ ಇರಲಿದೆ. ಸಾಲವನ್ನು ಪಡೆಯಲು ನಿಮಗೆ ಸರಿಯಾದ ಆದಾಯ ಮೂಲದ ಅವಶ್ಯಕತೆ ಇರುವುದು. ಪೋಷಕರ ಜೊತೆ ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಪರೋಪಕಾರ ಗುಣವು ನಿಮ್ಮಲ್ಲಿ ಇಂದು ಜಾಗರೂಕವಾಗಿ ಇರುವುದು. ನಿಮ್ಮನ್ನು ಅವ್ಯವಹಾರಕ್ಕೆ ಸಹೋದ್ಯೋಗಿಗಳು ಪ್ರೇರಿಸಬಹುದು. ನಿದ್ರಾಹೀನತೆ ಕಾಣಿಸುವುದು. ಅಪ್ರಯೋಜಕ ಎಂದುಕೊಂಡ ವಿದ್ಯೆಯಿಂದ ಪ್ರಯೋಜನವಾಗುವುದು. ಬಹಳ ದಿನಗಳಿಂದ ಮನೆಗೆ ಬಂಧುಗಳ ಆಗಮನವು ಆಗದೇ ಇರುವುದು ಬೇಸರತಂದೀತು.

ಧನು ರಾಶಿ:

ಇಂದು ಸಂಗಾತಿಯ ಜೊತೆ ಹೊರಗೆ ಸುತ್ತಾಡುವ ಬಯಕೆಯಾಗುವುದು. ವಾಹನ ಖರೀದಿಯ ಬಗ್ಗೆ ನಿಮಗೆ ಚಿಂತೆಯಾಗಬಹುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ವಿಚಾರದಲ್ಲಿ ತಜ್ಞರ ಸಂಪರ್ಕ ಮಾಡುವುದು ಉತ್ತಮ. ನಿಮ್ಮ ಇಂದಿನ ಕೆಲಸವನ್ನು ಪೂರ್ಣ ಮಾಡಲು ಬಹಳ ಆತುರದಿಂದ ಇರುವಿರಿ. ಸಹೋದರನ ಮನವೊಲಿಸಲು ನಿಮಗೆ ಕಷ್ಟವಾದೀತು. ತಂದೆಯ ಅಸಮಾಧಾನವನ್ನು ಕುಳಿತು ಬಗೆಹರಿಸಿ. ಯಾರದೋ ಕೋಪವನ್ನು ಮತ್ಯಾರದೋ ಮೇಲೆ ತೋರಿಸಬೇಕಾಗುವುದು. ಧಾರ್ಮಿಕ ಕರ್ಮಗಳಿಗೆ ಅಶ್ರದ್ಧೆ.

ಮಕರ ರಾಶಿ:

ಎಲ್ಲದಕ್ಕೂ ಇನ್ನೊಬ್ಬರನ್ನು ಅವಲಂಬಿಸುವುದು ನಿಮಗೆ ಇಷ್ಟವಾಗದು. ಇದಕ್ಕಾಗಿ ಬೇರೆ ಮಾರ್ಗವನ್ನೂ ಅನ್ವೇಷಿಸುವಿರಿ. ಹಿರಿಯರ ಪ್ರೀತಿ ನಿಮಗೆ ಸಿಗಲಿದೆ. ಇಂದು ಕಾರ್ಯದ ಸ್ಥಳದಲ್ಲಿ ನಿಮ್ಮ ಹಿತಶತ್ರುಗಳು ಏನಾದರೂ ಕಿರಿಕಿರಿ ಮಾಡಿ ನಿಮ್ಮ ಕೆಲಸವು ಪೂರ್ಣವಾಗದಂತೆ ನೋಡಿಕೊಳ್ಳುವರು. ಇಂದು ನಿಮ್ಮ ಕುಟುಂಬದ ಸದಸ್ಯರು ನಿಮ್ಮನ್ನು ಬಿಟ್ಟು ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳುವರು. ಬಹಳ ಹುಡುಕಿದರೂ ನಿಮಗೆ ಬೇಕಾದ ಉದ್ಯೋಗವು ಸಿಗದೇ ಜೀವನವು ನಿರುತ್ಸಾಹವು ಉಂಟಾಗಬಹುದು. ಮಾನಸಿಕವಾಗಿ ನೀವು ಕುಗ್ಗಬಹುದು.

ಕುಂಭ ರಾಶಿ:

ನಿಮ್ಮ ಹೆಚ್ಚುತ್ತಿರುವ ಖರ್ಚುಗಳ ಬಗ್ಗೆ ಚಿಂತಿಸಬೇಕಾಗುವುದು. ಇಂದು ನಿಮ್ಮ ಮಕ್ಕಳ ಬಗ್ಗೆ ಸಕಾರಾತ್ಮಕ ವಾರ್ತೆಯನ್ನು ಕೇಳುವಿರಿ. ನೀವು ಇಂದು ಯಾರ ಜೊತೆಗದರೂ ಹಣವನ್ನು ವಿನಿಮಯ ಮಾಡಿಕೊಳ್ಳಲು ಯೋಚಿಸುತ್ತಿದ್ದರೆ, ಸರಿಯಾದ ಲೆಕ್ಕಾಚಾರವನ್ನು ಇಟ್ಟುಕೊಳ್ಳಿ. ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ನಿಮ್ಮ ಅಪರೂಪದ ವ್ಯಕ್ತಿಗಳು ಆಕಸ್ಮಾತ್ತಾಗಿ ಭೇಟಿಯಾಗುವರು. ನಿಮಗೆ ಕೊಟ್ಟ ಕಾರ್ಯವನ್ನು ಮರೆತು ಅನ್ಯರ ಕಾರ್ಯದಲ್ಲಿ ಮಗ್ನರಾಗುವಿರಿ. ಮನಸ್ತಾಪವನ್ನು ಗುಟ್ಟಾಗಿಡುವುದು ಬೇಡ. ಹಾಗೆಂದು ಎಲ್ಲರ ಮುಂದೂ ಹೇಳಬೇಡಿ.

ಮೀನ ರಾಶಿ:

ನಿಮ್ಮ ಮಗುವನ್ನು ಹೊರಗೆ ಓದಲು ಕಳುಹಿಸಲು ಬಯಸುವಿರಿ. ಸಂಗಾತಿಯನ್ನು ಒಪ್ಪಿಸುವುದು ಸುಲಭವಲ್ಲ. ವಿವಾಹದ ವಾತಾವರಣವು ಮನೆಯಲ್ಲಿ ಇದ್ದರೂ ಉದ್ವೇಗಕ್ಕೆ ಒಳಗಾಗದೇ ನೀವೂ ನೆಮ್ಮದಿಯಿಂದ ಓಡಾಡುವಿರಿ. ಚಲಿಸುವ ವಾಹನದಿಂದ ಬೀಳುವ ಸಾಧ್ಯತೆ ಇದೆ. ಕಳ್ಳತನದ ಅಪವಾದದಿಂದ ತಲೆಮರೆಸಿಕೊಳ್ಳುವಿರಿ. ಸ್ವಂತ ಉದ್ಯೋಗದ ಮೇಲೆ ಕಾಳಜಿಯು ಅನ್ಯ ಕಾರ್ಯದ ನಿಮಿತ್ತ ಕಡಿಮೆಯಾಗುವುದು. ಇದರಿಂದ ನಿಮ್ಮ ಆದಾಯಕ್ಕೆ ಹೊಡೆತ ಬೀಳಬಹುದು.

ಜನವರಿ 26,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಭರಣೀ, ಯೋಗ : ಸಾಧ್ಯ, ಕರಣ : ಬವ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 19 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08:20 – 09-46, ಯಮಗಂಡ ಕಾಲ 11:11 – 12:37, ಗುಳಿಕ ಕಾಲ 14:03 – 15:28

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸೋಲಿನ ಸುಳಿಯಿಂದ ಹೊರತಂದ ನಿರ್ದೇಶಕನಿಗೆ ಭಾರಿ ಉಡುಗೊರೆ ಕೊಟ್ಟ ಮೆಗಾಸ್ಟಾರ್ – Kannada News | Megastar Chiranjeevi gifts luxury car to director Anil Ravipudi

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಲೆಜೆಂಡರಿ ನಟ. ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆದಿದ್ದಾರೆ ಚಿರಂಜೀವಿ. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್ ಅವರಿಗಿಂತಲೂ ದೊಡ್ಡ ಸ್ಟಾರ್ ಆಗಿದ್ದ ಚಿರಂಜೀವಿ, ಬಚ್ಚನ್ ಅವರಿಗಿಂತಲೂ ಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ತೀರ ಇತ್ತೀಚೆಗಿನ ವರೆಗೂ ಸಹ ಮೆಗಾಸ್ಟಾರ್ ಅನ್ನು ಬಾಕ್ಸ್ ಆಫೀಸ್​​ ಕಲೆಕ್ಷನ್​​ನಲ್ಲಿ ಹಿಂದಿಕ್ಕುವವರಿರಲಿಲ್ಲ. ಆದರೆ ರಾಜಕೀಯಕ್ಕೆ ಹೋಗಿ ಮರಳಿದ ಬಳಿಕ ಚಿರಂಜೀವಿ ಸತತ ಸೋಲುಗಳನ್ನೇ ಕಂಡಿದ್ದರು. ಯಾವ ಸಿನಿಮಾ ಸಹ ದೊಡ್ಡ ಹಿಟ್ ಆಗಿರಲಿಲ್ಲ. ಆದರೆ ಇದೀಗ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಮೂಲಕ ಹಲವು ವರ್ಷಗಳ ಬಳಿಕ ದೊಡ್ಡ ಯಶಸ್ಸನ್ನು ಚಿರಂಜೀವಿ ಕಂಡಿದ್ದಾರೆ.

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಪ್ರಸ್ತುತ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಆದ ಪ್ರಭಾಸ್ ಸಿನಿಮಾವನ್ನು ಸಹ ಹಿಂದಿಕ್ಕಿ ಸಂಕ್ರಾಂತಿಯ ವಿನ್ನರ್ ಎನಿಸಿಕೊಂಡಿದೆ. ಇದಕ್ಕಿಂತಲೂ ಮುಖ್ಯವಾಗಿ, ಸತತ ಸೋಲು ಕಂಡು ಕಂಗಾಲಾಗಿದ್ದ ಚಿರಂಜೀವಿ ಅವರಿಗೆ ಅತ್ಯಂತ ಅವಶ್ಯಕವಾದ ಗೆಲುವನ್ನು ತಂದುಕೊಟ್ಟಿದೆ. ಮೆಗಾಸ್ಟಾರ್ ಅನ್ನು ಮತ್ತೆ ಗೆಲುವಿನ ಹಳಿಗೆ ತಂದಿದೆ.

ತಮ್ಮನ್ನು ಸೋಲಿನ ಸುಳಿಯಿಂದ ಮೇಲೆತ್ತಿದ ನಿರ್ದೇಶಕನಿಗೆ ಮೆಗಾಸ್ಟಾರ್ ಚಿರಂಜೀವಿ ಭರ್ಜರಿ ಉಡುಗೊರೆಯನ್ನೇ ಕೊಟ್ಟಿದ್ದಾರೆ. ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾದ ನಿರ್ದೇಶಕ ಅನಿಲ್ ರವಿಪುಡಿ ಅವರಿಗೆ ಚಿರಂಜೀವಿ ಅವರು ಐಶಾರಾಮಿ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಅನಿಲ್ ರವಿಪುಡಿ ಅವರಿಗೆ ಅತ್ಯಂತ ಐಶಾರಾಮಿ ರೇಂಜ್ ರೋವರ್ ಸ್ಪೋರ್ಟ್ಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ:ಚಿರಂಜೀವಿ ಕ್ರೇಜ್: ಒಂದೇ ಕುಟುಂಬದ 140 ಮಂದಿಯಿಂದ ಸಿನಿಮಾ ವೀಕ್ಷಣೆ

ಚಿರಂಜೀವಿ ಉಡುಗೊರೆ ನೀಡಿರುವ ಕಾರಿನ ಪ್ರಾರಂಭಿಕ ಬೆಲೆಯೇ 1.70 ಕೋಟಿ ರೂಪಾಯಿಗಳಿದೆ. ಟಾಪ್ ಮಾಡೆಲ್ ಬೆಲೆ 3.39 ಕೋಟಿ ರೂಪಾಯಿಗಳಿದೆ. ಅತ್ಯಂತ ಐಶಾರಾಮಿ ಸೌಲಭ್ಯಗಳು ಹಾಗೂ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಈ ಕಾರು, ಭಾರತದಲ್ಲಿ ಸ್ಟೇಟಸ್ ಸಿಂಬಲ್ ಎನಿಸಿಕೊಂಡಿದೆ. ಕಾರನ್ನು ಉಡುಗೊರೆಯಾಗಿ ಪಡೆದಿರುವ ಅನಿಲ್ ರವಿಪುಡಿ ಖುಷ್ ಆಗಿದ್ದಾರೆ. ಚಿರಂಜೀವಿ ಅವರು ಕಾರು ಉಡುಗೊರೆ ನೀಡುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ಕೆಲ ತಿಂಗಳ ಹಿಂದೆ ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸಹ ತಮ್ಮ ಸಿನಿಮಾ ‘ಓಜಿ’ಯನ್ನು ನಿರ್ದೇಶಿಸಿದ್ದ ಸುಜೀತ್ ಅವರಿಗೆ ಹೀಗೆಯೇ ಒಂದು ಐಶಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಪವನ್ ಕಲ್ಯಾಣ್, ಲ್ಯಾಂಡ್ ರೋವರ್ ಡಿಫೆಂಡರ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಅದರ ಬೆಲೆ ಸುಮಾರು 3 ಕೋಟಿ ರೂಪಾಯಿಗಳಾಗಿತ್ತು. ಇದೀಗ ಪವನ್ ಅವರ ಅಣ್ಣ ಚಿರಂಜೀವಿ ಸಹ ದುಬಾರಿ ಕಾರನ್ನು ನಿರ್ದೇಶಕನಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಗುರುವಿಗೆ ತಕ್ಕ ಶಿಷ್ಯ; 2ನೇ ಅತಿ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ – Kannada News | Abhishek Sharma’s Record 14 Ball Fifty Powers India to 13th Consecutive T20I Series Win vs NZ

ಇನ್ನು ವಿಶ್ವ ಕ್ರಿಕೆಟ್‌ನಲ್ಲಿ ಪೂರ್ಣ ಸದಸ್ಯ ತಂಡಗಳನ್ನು ನೋಡಿದರೆ, ಅಭಿಷೇಕ್ ಶರ್ಮಾ ಜಂಟಿಯಾಗಿ ಮೂರನೇ ಅತಿ ವೇಗದ ಅರ್ಧಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಯುವರಾಜ್ ಸಿಂಗ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಜಿಂಬಾಬ್ವೆ ವಿರುದ್ಧ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ನಮೀಬಿಯಾದ ಆಟಗಾರ ಜಾನ್ ಫ್ರೈಲಿಂಕ್ ಎರಡನೇ ಸ್ಥಾನದಲ್ಲಿದ್ದಾರೆ. 2016 ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಕಾಲಿನ್ ಮುನ್ರೋ ಅವರೊಂದಿಗೆ ಅಭಿಷೇಕ್ ಶರ್ಮಾ ಅವರ ಹೆಸರು ಈಗ ಜಂಟಿಯಾಗಿ ಮೂರನೇ ಸ್ಥಾನದಲ್ಲಿದೆ.

Source link

‘ಜನ ನಾಯಗನ್’ ಸಿನಿಮಾಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ: ನೂರಾರು ಕೋಟಿ ನಷ್ಟದ ಭೀತಿ – Kannada News | Amazon Prime warned Jana Nayagan producer sue over release date chaos

ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಕಾರಣಕ್ಕೆ ತೀವ್ರ ಹಿನ್ನಡೆ ಆಗಿದ್ದು, ಈಗಾಗಲೇ ಬಿಡುಗಡೆ ದಿನಾಂಕ ಮುಂದೆ ಹೋಗಿ ನಿರ್ಮಾಪಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಎಂತೆಂಥ ಸಿನಿಮಾಗಳಿಗೆ ಸುಲಭವಾಗಿ ಪ್ರಮಾಣ ಪತ್ರ ನೀಡಿರುವ ಸೆನ್ಸಾರ್ ಮಂಡಳಿ, ರೀಮೇಕ್ ಸಿನಿಮಾ ಆಗಿರುವ ‘ಜನ ನಾಯಗನ್’ಗೆ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಪ್ರಕರಣ ಇದೀಗ ಮದ್ರಾಸ್ ಹೈಕೋರ್ಟ್​​ನಲ್ಲಿದೆ. ಹೀಗಿರುವಾಗ ಸಿನಿಮಾದ ನಿರ್ಮಾಪಕರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಪ್ಪಂದದಂತೆ ಸಿನಿಮಾ ಬಿಡುಗಡೆ ಮಾಡದಿದ್ದರೆ ನಷ್ಟಪರಿಹಾರ ನೀಡಬೇಕೆಂದು ಒಟಿಟಿಯವರು ನಿರ್ಮಾಪಕರಿಗೆ ಎಚ್ಚರಿಸಿದ್ದಾರೆ.

‘ಜನ ನಾಯಗನ್’ ಸಿನಿಮಾದ ಡಿಜಿಟಲ್​​ ಹಕ್ಕುಗಳನ್ನು ಮುಂಗಡವಾಗಿ ಅಮೆಜಾನ್ ಪ್ರೈಂ ವಿಡಿಯೋಕ್ಕೆ ಭಾರಿ ಮೊತ್ತಕ್ಕೆ ನಿರ್ಮಾಪಕ ವೆಂಕಟ್ ನಾರಾಯಣ್ ಅವರು ಮಾರಾಟ ಮಾಡಿದ್ದರು. ಅಮೆಜಾನ್ ಜೊತೆಗಿನ ಒಪ್ಪಂದದಂತೆ ಸಿನಿಮಾದ ಬಿಡುಗಡೆ ದಿನಾಂಕದ ನಾಲ್ಕು ವಾರಗಳ ತರುವಾಯ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಬೇಕಿತ್ತು. ಒಪ್ಪಂದದ ಪ್ರಕಾರ ‘ಜನ ನಾಯಗನ್’ ಸಿನಿಮಾವನ್ನು ಅಮೆಜಾನ್​​ನಲ್ಲಿ ಬಿಡುಗಡೆ ಮಾಡಲು ಕೆಲವೇ ದಿನಗಳು ಬಾಕಿ ಇವೆ.

ಇದೀಗ ಅಮೆಜಾನ್ ಪ್ರೈಂ ವಿಡಿಯೋದವರು ನಿರ್ಮಾಪಕ ವೆಂಕಟ್ ನಾರಾಯಣ್ ಅವರಿಗೆ ಎಚ್ಚರಿಕೆ ನೀಡಿದ್ದು, ಒಂದೊಮ್ಮೆ ಒಪ್ಪಂದದ ಪ್ರಕಾರ ನಿಗದಿತ ಸಮಯಕ್ಕೆ ‘ಜನ ನಾಯಗನ್’ ಸಿನಿಮಾವನ್ನು ಒಟಿಟಿಗೆ ಬಿಡುಗಡೆ ಮಾಡದಿದ್ದಲ್ಲಿ ಭಾರಿ ಮೊತ್ತದ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಎಂದಿದ್ದಾರೆ. ಅಲ್ಲದೆ, ಸಿನಿಮಾ ಬಿಡುಗಡೆ ಮಾಡದೇ ಇದ್ದಲ್ಲಿ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ

‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿಯು ಪ್ರಮಾಣ ಪತ್ರವನ್ನು ನಿರಾಕರಿಸಿದೆ. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಪಕರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲಿ ಮೊದಲಿಗೆ ಸಿನಿಮಾದ ಪರವಾಗಿ ತೀರ್ಪು ಬಂದಿತ್ತು. ಆದರೆ ತೀರ್ಪು ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಸಿಬಿಎಫ್​​ಸಿ ಆದೇಶವನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದು, ಸಿನಿಮಾದ ಪರವಾಗಿ ಆದೇಶ ನೀಡಿದ್ದ ಮದ್ರಾಸ್ ಹೈಕೋರ್ಟ್​​ ಸ್ವತಃ ತನ್ನದೇ ಆದೇಶಕ್ಕೆ ತಡೆ ನೀಡಿತು. ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿ ಬಂದಿದ್ದೂ ಆಗಿದೆ. ಜನವರಿ 27 ರಂದು ಪ್ರಕರಣದ ಬಗ್ಗೆ ಆದೇಶ ಹೊರಬೀಳಲಿದೆ.

‘ಜನ ನಾಯಗನ್’ ಸಿನಿಮಾವನ್ನು ಎಚ್ ವಿನೋದ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕಾಗಿದೆ. ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿ. ಕೆವಿಎನ್​ ಪ್ರೊಡಕ್ಷನ್ಸ್ ಮೂಲಕ ಸಿನಿಮಾದ ನಿರ್ಮಾಣ ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:39 pm, Sun, 25 January 26

Source link

Exit mobile version