SA20 ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಡೆವಾಲ್ಡ್ ಬ್ರೆವಿಸ್ – Kannada News | SA20 Final: Dewald Brevis Century Powers Pretoria Capitals to 158 at Newlands

ಬ್ರೆವಿಸ್ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಪ್ರಿಟೋರಿಯಾ ತಂಡ 13 ನೇ ಓವರ್‌ನಲ್ಲಿ 100 ರನ್​ಗಳ ಗಡಿ ತಲುಪಲು ಸಹಾಯ ಮಾಡಿದರು. ಮತ್ತೊಂದೆಡೆ ವಿಕೆಟ್‌ಗಳು ಬೀಳುತ್ತಲೇ ಇದ್ದವು, ಇದು ತಂಡದ ಸ್ಕೋರ್ ಮೇಲೆ ಪರಿಣಾಮ ಬೀರಿತು. ಆದಾಗ್ಯೂ, ಬ್ರೆವಿಸ್ ತಮ್ಮ ದಾಳಿಯನ್ನು ಮುಂದುವರೆಸಿ ಕೇವಲ 53 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಕೇಪ್ ಟೌನ್ ಕ್ರೀಡಾಂಗಣದ ಪ್ರೇಕ್ಷಕರನ್ನು ಬೆರಗುಗೊಳಿಸಿದರು. ಆದಾಗ್ಯೂ, ಅವರು 19 ನೇ ಓವರ್‌ನಲ್ಲಿ ಔಟಾದರು.

Source link

ಗಣರಾಜ್ಯೋತ್ಸವ 2026: ಪರಪ್ಪನ ಅಗ್ರಹಾರದ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ – Kannada News | Snacks and Bakery Items Prepared by Prison Inmates Distributed During Republic Day Celebration at Manekshaw Parade Ground

ಬೆಂಗಳೂರು, ಜನವರಿ 25: 77ನೇ ಗಣರಾಜ್ಯೋತ್ಸವಕ್ಕೆ ಮಾಣೆಕ್‌ ಷಾ ಪರೇಡ್‌ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಬೆಳಗ್ಗ 8.55ಕ್ಕೆ ರಾಜ್ಯಪಾಲರು ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಪೊಲೀಸ್ ಬ್ಯಾಂಡ್ ತಂಡದಿಂದ ರಾಷ್ಟ್ರಗೀತೆ ನಡೆದು, ರಾಜ್ಯಪಾಲರು ತೆರೆದ ಜೀಪಿನಲ್ಲಿ ಪರೇಡ್‌ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಲಿದ್ದಾರೆ. ಬಳಿಕ ರಾಜ್ಯಪಾಲರ ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಅಂದರೆ ಪರಪ್ಪನ ಅಗ್ರಹಾರ ಜೈಲಿನ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳು ನಾಳೆ ಬೆಳಿಗ್ಗೆ ಮಾಣೆಕ್‌ ಷಾ ಪರೇಡ್ ಗ್ರೌಂಡ್‌ನಲ್ಲಿ ವಿತರಿಸಲಾಗುವ ಉಪಹಾರದ ಭಾಗವಾಗಲಿವೆ. ಈ ಬಗ್ಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್​​ ಕುಮಾರ್​​ ಅವರೇ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೊನೆಗೂ ಬುದ್ಧಿ ಕಲಿತ ಎಎಂಬಿ: ದರ್ಶನ್ ಫೋಟೊ ನೋಡಿ ಫ್ಯಾನ್ಸ್ ಖುಷ್ – Kannada News | AMB Cinemas finally added Darshan’s photo to wall

ತೆಲುಗು ಚಿತ್ರರಂಗದ ಸ್ಟಾರ್ ನಟ ಮಹೇಶ್ ಬಾಬು (Mahesh Babu), ಸ್ಟಾರ್ ನಟರಾಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಮಹೇಶ್ ಬಾಬು ಅವರು ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದು, ಅವುಗಳಲ್ಲಿ ಚಿತ್ರಮಂದಿರಗಳ ಉದ್ಯಮವೂ ಒಂದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್​ ಉದ್ಯಮ ಹೊಂದಿದ್ದು, ಇತ್ತೀಚೆಗಷ್ಟೆ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಪ್ರಾರಂಭವಾಗಿದೆ. ಅದೂ ಬೆಂಗಳೂರಿನ ಐಕಾನಿಕ್ ಚಿತ್ರಮಂದಿರವಾದ ಕಪಾಲಿ ಚಿತ್ರಮಂದಿರ ಇದ್ದ ಜಾಗದಲ್ಲಿ.

ಅತ್ಯುತ್ತಮ ಗುಣಮಟ್ಟದ ಚಿತ್ರಮಂದಿರ ಇದಾಗಿದೆ ಆದರೆ ಚಿತ್ರಮಂದಿರ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಈ ಚಿತ್ರಮಂದಿರ ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಯ್ತು. ಅದಕ್ಕೆ ಕಾರಣವಾಗಿದ್ದು ದರ್ಶನ್ ಅವರ ಒಂದು ಚಿತ್ರ. ಮಲ್ಟಿಪ್ಲೆಕ್ಸ್ ಆಗಿರುವ ಎಎಂಬಿಯಲ್ಲಿ ಅತ್ಯುತ್ತಮ ಒಳಾಂಗಣ ವಿನ್ಯಾಸ ಮಾಡಲಾಗಿದೆ. ಸ್ಥಳೀಯ ಸಿನಿಮಾಗಳು ಮತ್ತು ಕಲಾವಿದರಿಗೆ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಗೋಡೆಗಳ ಮೇಲೆ ಕನ್ನಡದ ಹಿಟ್ ಸಿನಿಮಾಗಳ, ಸ್ಟಾರ್ ಕಲಾವಿದರ ಫೋಟೊಗಳನ್ನು ಹಾಕಲಾಗಿತ್ತು. ಶಿವರಾಜ್ ಕುಮಾರ್, ಉಪೇಂದ್ರ, ಧ್ರುವ ಸರ್ಜಾ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಹೀಗೆ ಹಲವು ನಟರ ಫೋಟೊಗಳನ್ನು ಹಾಕಲಾಗಿತ್ತು ಆದರೆ ದರ್ಶನ್ ಚಿತ್ರ ಹಾಕಲಾಗಿರಲಿಲ್ಲ.

ಇದನ್ನು ಮೊದಲಿಗೆ ನಿರ್ದೇಶಕ ರವಿ ಶ್ರೀವತ್ಸ ಖಂಡಿಸಿ ಟ್ವೀಟ್ ಮಾಡಿದ್ದರು. ಬಳಿಕ ಕೆಲವು ಮಾಧ್ಯಮಗಳು ವರದಿ ಸಹ ಮಾಡಿದವು. ಸಿನಿಮಾಗಳ ಫೋಟೊಗಳಿದ್ದ ಗೋಡೆಯ ಮೇಲೆ ದರ್ಶನ್ ನಟನೆಯ ‘ಕುರುಕ್ಷೇತ್ರ’ ಸಿನಿಮಾದ ಪೋಸ್ಟರ್ ಇತ್ತು, ಆದರೆ ಕಲಾವಿದರ ಚಿತ್ರವಿದ್ದ ಜಾಗದಲ್ಲಿ ದರ್ಶನ್ ಫೋಟೊ ಇರಲಿಲ್ಲ. ಇದು ದರ್ಶನ್ ಅಭಿಮಾನಿಗಳನ್ನು ಸಖತ್ ಕೆರಳಿಸಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ರೋಶ ಸಹ ಹೊರಹಾಕಿದ್ದರು.

ಇದನ್ನೂ ಓದಿ:ಎಷ್ಟು ಲಕ್ಷುರಿಯಾಗಿದೆ  ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್ 

ಇದೀಗ ಎಎಂಬಿ ಸಿನಿಮಾಸ್ ಕಲಾವಿದರ ಫೋಟೊ ಜೊತೆಗೆ ನಟ ದರ್ಶನ್ ಫೋಟೊವನ್ನು ಸಹ ಸೇರಿಸಿದೆ. ಅಲ್ಲದೆ, ಈ ಹಿಂದೆ ನಟರ ಫೋಟೊಗಳನ್ನು ಒಂದು ಆರ್ಡರ್​​ನಲ್ಲಿ ಜೋಡಿಸದೆ ಮನಸೋಇಚ್ಛೆ ಜೋಡಿಸಲಾಗಿತ್ತು. ಆದರೆ ಈಗ ಜನಪ್ರಿಯತೆ ಮತ್ತು ಹಿರಿತನದ ಆಧಾರದಲ್ಲಿ ಫೋಟೊಗಳನ್ನು ಗೋಡೆಯ ಮೇಲೆ ಅಲಂಕರಿಸಿದ್ದು, ನಟ ದರ್ಶನ್ ಫೋಟೊವನ್ನು ಸಹ ಹಾಕಲಾಗಿದೆ.

ಇತ್ತೀಚೆಗಷ್ಟೆ ನಟ ಉಪೇಂದ್ರ ಅವರು ತಮ್ಮ ಕುಟುಂಬದೊಡನೆ ಎಎಂಬಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ನಟ ಅರ್ಜುನ್ ಸರ್ಜಾ ಅವರು ಸಹ ಈ ಸಮಯದಲ್ಲಿ ಜೊತೆಯಲ್ಲಿದ್ದರು. ಈ ವೇಳೆ ಉಪೇಂದ್ರ ಅವರು ಕಲಾವಿದರ ಫೋಟೊಗಳಿದ್ದ ಗೋಡೆಯ ಬಳಿಯೇ ಚಿತ್ರ ತೆಗೆಸಿಕೊಂಡಿದ್ದು, ಅದರಲ್ಲಿ ಉಪೇಂದ್ರ ಅವರ ಫೋಟೊ ಸ್ಪಷ್ಟವಾಗಿ ಕಾಣುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಯೂರೋಪ್​ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ? – Kannada News | India may reduce tariffs to 40pc on cars from European Union

ನವದೆಹಲಿ, ಜನವರಿ 25: ಐರೋಪ್ಯ ಒಕ್ಕೂಟದ ದೇಶಗಳಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಟ್ಯಾರಿಫ್ ಅನ್ನು ಶೇ. 40ಕ್ಕೆ ಇಳಿಸಲು ಭಾರತ ಯೋಜಿಸಿದೆ ಎಂದು ವರದಿಗಳು ಹೇಳುತ್ತಿವೆ. ಸದ್ಯ ಯಾವುದೇ ಆಮದಿತ ಕಾರುಗಳ ಮೇಲೆ ಭಾರತವು ಶೇ. 110ರಷ್ಟು ಸುಂಕ ವಿಧಿಸುತ್ತಿದೆ. ಯೂರೋಪಿಯನ್ ಯೂನಿಯನ್ ಜೊತೆ ವ್ಯಾಪಾರ ಒಪ್ಪಂದ (India EU trade deal) ಏರ್ಪಟ್ಟಲ್ಲಿ ಕಾರುಗಳ ಮೇಲಿನ ಆಮದು ಸುಂಕವನ್ನು (Tariffs on cars) ಭಾರತ ತಗ್ಗಿಸಬಹುದು ಎನ್ನಲಾಗಿದೆ.

ವರದಿಗಳ ಪ್ರಕಾರ ಟ್ಯಾರಿಫ್ ಅನ್ನು ಶೇ 40ಕ್ಕೆ ಇಳಿಸುವುದು ತತ್​ಕ್ಷಣದ ಕ್ರಮವಾಗಿರುತ್ತದೆ. ನಂತರದ ದಿನಗಳಲ್ಲಿ ಆಮದು ಸುಂಕವನ್ನು ಶೇ. 10ಕ್ಕೆ ಇಳಿಸಲಾಗುತ್ತದೆ ಎನ್ನುವ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು

ಟ್ಯಾರಿಫ್ ಇಳಿಕೆಯು ಪ್ರತೀ ಐರೋಪ್ಯ ಕಂಪನಿಯ ಆಮದಿತ ಕಾರುಗಳ ಸಂಖ್ಯಾ ಮಿತಿ ಮತ್ತು ಬೆಲೆ ಮೇಲೆ ಅವಲಂಬಿತವಾಗಿರುತ್ತದೆ. ಅಂದರೆ, 15,000 ಯೂರೋಗಳಿಗಿಂತ (ಸುಮಾರು 17 ಲಕ್ಷ ರೂ) ಹೆಚ್ಚು ಬೆಲೆ ಮತ್ತು ಸೀಮಿತ ಸಂಖ್ಯೆಯ ಕಾರುಗಳ ಮೇಲೆ ಟ್ಯಾರಿಫ್ ಇಳಿಕೆ ಮಾಡಲು ಸರ್ಕಾರ ಸದ್ಯಕ್ಕೆ ಒಪ್ಪಿದೆ ಎಂದು ಹೇಳಲಾಗುತ್ತಿದೆ.

ವಿಶ್ವದಲ್ಲಿ ಅತ್ಯಂತ ಜನಪ್ರಿಯವಾಗಿರುವ ಕಾರುಗಳಲ್ಲಿ ಹೆಚ್ಚಿನವು ಐರೋಪ್ಯ ದೇಶಗಳ ಕಂಪನಿಗಳದ್ದಾಗಿವೆ. ವೋಸ್​ವ್ಯಾಗನ್, ಮರ್ಸಿಡೆಸ್ ಬೆಂಜ್, ಬಿಎಂಡಬ್ಲ್ಯು ಇತ್ಯಾದಿ ಪ್ರಸಿದ್ಧ ಕಾರ್ ಬ್ರ್ಯಾಂಡ್​ಗಳು ಯೂರೋಪ್ ಮೂಲದ್ದಾಗಿವೆ. ಭಾರತವು ಟ್ಯಾರಿಫ್ ಇಳಿಸುವುದರಿಂದ ಈ ಪ್ರತಿಷ್ಠಿತ ಕಂಪನಿಗಳಿಗೆ ಭಾರತದ ಮಾರುಕಟ್ಟೆ ಪ್ರವೇಶ ಇನ್ನಷ್ಟು ಸಲೀಸಾಗಲಿದೆ. ದೇಶೀಯ ಕಾರ್ ಕಂಪನಿಗಳಾದ ಮಾರುತಿ ಸುಜುಕಿ, ಟಾಟಾ, ಮಹೀಂದ್ರಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಕಠಿಣ ಪೈಪೋಟಿ ನಡೆಯಬಹುದು.

ಇದನ್ನೂ ಓದಿ: ಭಾರತದಲ್ಲಿ ಆ್ಯಪಲ್​ನಂತಹ ಮೊಬೈಲ್ ಕಂಪನಿ ಸದ್ಯದಲ್ಲೇ ಶುರುವಾಗುತ್ತಾ? ಡಾವೊಸ್​ನಲ್ಲಿ ಸುಳಿವು ಕೊಟ್ಟ ಸಚಿವರು

ಅಮೆರಿಕ ಮತ್ತು ಚೀನಾ ಬಿಟ್ಟರೆ ವಿಶ್ವದಲ್ಲಿ ಭಾರತವೇ ಅತಿದೊಡ್ಡ ವಾಹನ ಮಾರುಕಟ್ಟೆ ಹೊಂದಿರುವುದು. ಸ್ಥಳೀಯ ಕಾರ್ ಕಂಪನಿಗಳನ್ನು ಉಳಿಸಲು ಸರ್ಕಾರ ಆಮದಿತ ಕಾರುಗಳ ಮೇಲೆ ಶೇ. 70ರಿಂದ ಶೇ. 110ರಷ್ಟು ಸುಂಕ ವಿಧಿಸುತ್ತದೆ. ಹೀಗಾಗಿ, ಕಾರುಗಳ ಮೇಲೆ ಟ್ಯಾರಿಫ್ ಇಳಿಸಲಿರುವುದು ಗಮನಾರ್ಹ ನಿರ್ಧಾರ ಎನಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಶಿಶುವಿಗೆ ಹಸುವಿನ ಹಾಲು ನೀಡುವುದಕ್ಕೆ ಸರಿಯಾದ ಸಮಯವಿದೆಯೇ? ಯಾವಾಗ ಆರಂಭ ಮಾಡಬೇಕು ತಿಳಿದುಕೊಳ್ಳಿ – Kannada News | Cow’s Milk for Babies: When to Start?

ಒಂದು ಮನೆಯಲ್ಲಿ ಮಗು ಜನಿಸಿದ ಮೇಲೆ ಪೋಷಕರು ತಮ್ಮ ಮಗು ಸೇವಿಸುವ ಆಹಾರದ ಬಗ್ಗೆ ಬಹಳ ಜಾಗರೂಕರಾಗಿರಬೇಕಾಗುತ್ತದೆ. ಆರಂಭಿಕ ವರ್ಷಗಳಲ್ಲಿ, ಮಗುವಿನ ದೇಹ ವೇಗವಾಗಿ ಬೆಳೆಯುತ್ತದೆ, ಆದ್ದರಿಂದ ಅವರು ಪಡೆಯುವ ಪೋಷಣೆ ಬಹಳ ಮುಖ್ಯವಾಗುತ್ತದೆ. ಹಾಗಾಗಿ ಇಂತಹ ಸಮಯದಲ್ಲಿ, ಪೋಷಕರು ಹಸುವಿನ ಹಾಲನ್ನು ಯಾವಾಗ ನೀಡಲು ಪ್ರಾರಂಭಿಸಬೇಕು ಎಂಬ ಗೊಂದಲ ಆರಂಭವಾಗುತ್ತದೆ. ಇದು ಸಾಮಾನ್ಯವಾಗಿದ್ದರೂ ಕೂಡ ಈ ಬಗ್ಗೆ ಸರಿಯಾದ ಮಾಹಿತಿ ಪಡೆಯುವುದು ಅನಿವಾರ್ಯವಾಗುತ್ತದೆ. ಹಸುವಿನ ಹಾಲು (Milk) ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಇತರ ಅಗತ್ಯ ಅಂಶಗಳನ್ನು ಹೊಂದಿರುತ್ತದೆ. ಆದರೆ ಈ ಪೌಷ್ಟಿಕಾಂಶ ಪ್ರತಿ ವಯಸ್ಸಿನವರಿಗೂ ಸೂಕ್ತವಲ್ಲ. ಹೌದು, ಮಾಹಿತಿ ಕೊರತೆಯಿಂದ, ಜನ ತಮಗೆ ಅನಿಸಿದ್ದನ್ನು ಮಾಡುತ್ತಾರೆ. ಆದರೆ ಇದು ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಹಸುವಿನ ಹಾಲನ್ನು ಮಕ್ಕಳಿಗೆ ಯಾವ ವಯಸ್ಸಿನಲ್ಲಿ ನೀಡುವುದು ಸುರಕ್ಷಿತ ಮತ್ತು ಪ್ರಯೋಜನಕಾರಿ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ.

ಯಾವ ವಯಸ್ಸಿನಲ್ಲಿ ಮಗುವಿಗೆ ಹಸುವಿನ ಹಾಲು ಕುಡಿಯಲು ಕೊಡುವುದು ಉತ್ತಮ:

ಡಾ. ರಾಕೇಶ್ ಬಾಗ್ರಿ ಅವರು ಹೇಳುವ ಪ್ರಕಾರ, ಮಕ್ಕಳಿಗೆ 1 ವರ್ಷ ಪೂರ್ಣಗೊಂಡ ನಂತರವೇ ಹಸುವಿನ ಹಾಲನ್ನು ನೀಡಬೇಕು. ಈ ವಯಸ್ಸಿನಲ್ಲಿ, ಮಗುವಿನ ಜೀರ್ಣಾಂಗ ವ್ಯವಸ್ಥೆ ಸ್ವಲ್ಪ ಮಟ್ಟಿಗೆ ಹೆಚ್ಚಾಗಿದ್ದು ಹಸುವಿನ ಹಾಲನ್ನು ಉತ್ತಮವಾಗಿ ಜೀರ್ಣಿಸಿಕೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. 1 ವರ್ಷದ ನಂತರ, ಮಗುವು ವಿಭಿನ್ನ ಪೋಷಕಾಂಶಗಳನ್ನು ಒದಗಿಸುವ ಘನ ಆಹಾರವನ್ನು ತಿನ್ನಲು ಪ್ರಾರಂಭಿಸುತ್ತದೆ. ಈ ಸಮಯದಲ್ಲಿ, ಹಸುವಿನ ಹಾಲು ಅವರ ಆಹಾರದ ಭಾಗವಾಗಬಹುದು. ಆದರೆ ಮಗು ಇತರ ಅಗತ್ಯ ಆಹಾರಗಳನ್ನು ಸಹ ತಿನ್ನಲು ಸಾಧ್ಯವಾಗುವಂತೆ ಹಾಲಿನ ಪ್ರಮಾಣವನ್ನು ಮಿತಿಗೊಳಿಸುವುದು ಬಹಳ ಮುಖ್ಯ. ಈ ರೀತಿ ಸ್ವಲ್ಪ ಸ್ವಲ್ಪ ಹಾಲನ್ನು ನೀಡುವುದರಿಂದ ಮಗುವಿನ ದೇಹವು ಅದಕ್ಕೆ ಹೊಂದಿಕೊಳ್ಳಲು ಅನುವು ಮಾಡಿಕೊಡುತ್ತದೆ, ಪೌಷ್ಟಿಕಾಂಶದ ಸಮತೋಲನವನ್ನು ಕಾಪಾಡಿಕೊಳ್ಳುತ್ತದೆ.

ಇದನ್ನೂ ಓದಿ: ಹಾಲಿನಿಂದ ಅಲರ್ಜಿ ಇರುವವರು ಮೊಸರನ್ನು ಕೂಡ ತಿನ್ನಬಾರದೇ? ಇಲ್ಲಿದೆ ಸ್ಪಷ್ಟ ಮಾಹಿತಿ

1 ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲನ್ನು ನೀಡಬಾರದು ಏಕೆ?

ಸಾಮಾನ್ಯವಾಗಿ 1 ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲನ್ನು ನೀಡಬಾರದು, ಏಕೆಂದರೆ ಅವರ ಜೀರ್ಣಾಂಗ ವ್ಯವಸ್ಥೆಯು ಇನ್ನೂ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿರುವುದಿಲ್ಲ. ಹಸುವಿನ ಹಾಲಿನಲ್ಲಿ ಹೆಚ್ಚಿನ ಪ್ರಮಾಣದ ಪ್ರೋಟೀನ್ ಮತ್ತು ಖನಿಜಗಳಿದ್ದು, ಇದನ್ನು ಚಿಕ್ಕ ಮಗು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲ ಇದರಿಂದ ಕೆಲವು ಮಕ್ಕಳಲ್ಲಿ ವಾಂತಿ, ಅತಿಸಾರ, ಅನಿಲ ಅಥವಾ ಹೊಟ್ಟೆ ನೋವಿನಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಜೋತೆಗೆ ಹಸುವಿನ ಹಾಲು ಕಬ್ಬಿಣ ಅಂಶದ ಹೀರಿಕೊಳ್ಳುವಿಕೆಗೆ ಅಡ್ಡಿಪಡಿಸುತ್ತದೆ, ರಕ್ತಹೀನತೆಯ ಅಪಾಯವನ್ನು ಹೆಚ್ಚಿಸುತ್ತದೆ. ಕೆಲವು ಮಕ್ಕಳಲ್ಲಿ ಇದರ ಅಲರ್ಜಿ ಕೂಡ ಕಂಡುಬರಬಹುದು. ಇನ್ನು, 1 ವರ್ಷದ ನಂತರ ಹಾಲನ್ನು ನೀಡುವಾಗ ಸ್ವಲ್ಪ ಸ್ವಲ್ಪವೇ ನೀಡಿ, ಮಗುವಿನ ಪ್ರತಿಕ್ರಿಯೆಯನ್ನು ಗಮನಿಸಿ. ಸೋಂಕಿನ ಅಪಾಯವನ್ನು ತಡೆಗಟ್ಟಲು ಯಾವಾಗಲೂ ಕುದಿಸಿ, ಆರಿಸಿದ ಹಾಲನ್ನು ನೀಡಿ. ಮಗುವಿನಲ್ಲಿ ಯಾವುದೇ ರೀತಿಯ ಜೀರ್ಣಕಾರಿ ಸಮಸ್ಯೆ, ಅಲರ್ಜಿ ಅಥವಾ ಅಸ್ವಸ್ಥತೆ ಕಂಡುಬಂದರೆ ವೈದ್ಯರ ಸಲಹೆ ಪಡೆಯುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಗಲಲ್ಲಿ ಕಬ್ಬು ಕಟಾವು, ರಾತ್ರಿ ವೇಳೆ ಮನೆ ಕಳ್ಳತನ: ಖತರ್ನಾಕ್​ ಗ್ಯಾಂಗ್​​ ಭೇದಿಸಿದ ಖಾಕಿ – Kannada News | Bagalkote Police Nab Maharashtra Based Workers’ Gang for House Thefts

ಆರೋಪಿಗಳು ವಾಸವಿದ್ದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ.

ಬಾಗಲಕೋಟೆ, ಜನವರಿ 25: ಕಬ್ಬು ಕಟಾವು ಮಾಡುವ ನೆಪದಲ್ಲಿ ಜಿಲ್ಲೆಗೆ ಎಂಟ್ರಿಕೊಟ್ಟು ಮನೆಗಳಲ್ಲಿ ಕಳ್ಳತನ ನಡೆಸುತ್ತಿದ್ದ ಮಹಾರಾಷ್ಟ್ರ ಮೂಲದ ಗ್ಯಾಂಗ್​​ನ ಬಾಗಲಕೋಟೆ ಪೊಲೀಸರು ಭೇದಿಸಿದ್ದಾರೆ. ಶಂಕರ್ ಪವಾರ್ (20), ಅಭಿ ಬೋಸ್ಲೆ(19), ಲಕ್ಷ್ಮೀ ಬೋಸ್ಲೆ (40), ಕರಣ ಪವಾರ್ (20) ಮತ್ತು ಮಮತಾ ಬೋಸ್ಲೆ(21) ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲ ಮಹಾರಾಷ್ಟದ ಪರಬಾನಿ ಜಿಲ್ಲೆ ಮಂಗರೂಲ ತಾಂಡಾದ ನಿವಾಸಿಗಳು ಎಂಬುದು ಗೊತ್ತಾಗಿದೆ.

ಕಬ್ಬು ಕಟಾವು ಕೆಲಸ ಮಾಡುವ ನೆಪದಲ್ಲಿ ಬಾಗಲಕೋಟೆಗೆ ಬಂದಿದ್ದ ಈ ತಂಡ ಹಗಲು ವೇಳೆ ಹೊಲದಲ್ಲಿ ಕೆಲಸ ಮಾಡಿದರೆ, ರಾತ್ರಿ ಕಳ್ಳತನಕ್ಕೆ ಇಳಿಯುತ್ತಿತ್ತು. ಜಾಕೆಟ್ ಮತ್ತು ಮಾಸ್ಕ್​​ ಹಾಕಿಕೊಂಡು ಕೈನಲ್ಲಿ ಬ್ಯಾಟರಿ, ರಾಡ್ ಹಿಡಿದು ಮನೆಗಳ್ಳತನ ಕೆಲಸ ಮಾಡ್ತಿತ್ತು. ಆರೋಪಿಗಳು ಕಳವು ಮಾಡುವ ದೃಶ್ಯಗಳು ಕೂಡ ಲಭ್ಯವಾಗಿದ್ದು, ಖತರ್ನಾಕ್​​ ಗ್ಯಾಂಗ್​​ನ ಹೆಡೆಮುರಿ ಕಟ್ಟುವಲ್ಲಿ ಗುಳೇದಗುಡ್ಡ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 6 ಲಕ್ಷದ 8 ಸಾವಿರ ಮೌಲ್ಯದ 25 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಪಿಯುಸಿ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸಪ್ಪ ಅರೆಸ್ಟ್​​

ಪಕ್ಕಾ ಪ್ಲ್ಯಾನ್​​ ಮಾಡಿ ಕಳ್ಳತನ

ಈ ಖತರ್ನಾಕ್ ಕಳ್ಳರು ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ಬಾದಾಮಿ, ಗದಗ ಜಿಲ್ಲೆ ಸೇರಿ ಒಟ್ಟು ಆರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಗುಳೇದಗುಡ್ಡ ಪಟ್ಟಣ, ಗುಳೇದಗುಡ್ಡ ತಾಲೂಕಿನ ಬೂದಿನಗಡ, ಹಂಸನೂರು, ಬಾದಾಮಿ ತಾಲೂಕಿನ ಮುಮರೆಡ್ಡಿಕೊಪ್ಪ, ಮುತ್ತಲಗೇರಿಯಲ್ಲಿ‌ ಕೈಚಳಕ ತೋರಿಸಿದ್ದರು ಎಂಬುದು ತನಿಖೆ ವೇಳೆ ಬಯಲಾಗಿದೆ. ಇನ್ನು ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಹಡಗಲಿ ಗ್ರಾಮದಲ್ಲಿಯೂ ಇವರು ಮನೆ ಕಳ್ಳತನಕ್ಕೆ ಯತ್ನಿಸಿದ್ದರು. ಆ ದೃಶ್ಯ ಕೂಡ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪುರುಷರು ರಾತ್ರಿ ಕಳ್ಳತನ ಮಾಡಿ ಚಿನ್ನಾಭರಣ ತಂದ್ರೆ ಮಹಿಳೆಯರು ಅವುಗಳನ್ನು ಮರಾಟ ಮಾಡಿ ಹಣ ತರ್ತಿದ್ದರು. ಕಬ್ಬು ಕಟಾವು ಮಾಡುವ ಸ್ಥಳದ ಸುತ್ತಮುತ್ತಲಿನ ಊರು ತಿರುಗಾಡಿ ಯಾವ ಮನೆ ಕಳ್ಳತನ ಮಾಡಬೇಕು? ಹೇಗೆ? ಎಂದೆಲ್ಲ ಸ್ಕೆಚ್ ಹಾಕಿ ರಾತ್ರಿ ಎಂಟ್ರಿ ಕೊಡ್ತಿದ್ದರು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ನಮ್ಮ ಭವಿಷ್ಯಕ್ಕೆ ನಾವೇ ನಿರ್ಮಾತೃಗಳು: ರಾಷ್ಟ್ರಪತಿ ದ್ರೌಪದಿ ಮುರ್ಮು ಗಣರಾಜ್ಯೋತ್ಸವ ಸಂದೇಶ – Kannada News | President Draupadi Murmu speech on eve of 77th Republic Day celebrations

ನವದೆಹಲಿ, ಜನವರಿ 25: ಗಣರಾಜ್ಯೋತ್ಸವದ ಭಾಗವಾಗಿ ರಾಷ್ಟ್ರವನ್ನುದ್ದೇಶಿಸಿ ಭಾನುವಾರ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರರಿಗೆ ಗೌರವಾರ್ಪಣೆ ಸಲ್ಲಿಸಿದರು. ‘ನಾವು ಭಾರತೀಯರು ಬಹಳ ಉತ್ಸಾಹದಿಂದ ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತಿದ್ದೇವೆ. ನಮ್ಮ ದೇಶದ ಭೂತ, ವರ್ತಮಾನ ಮತ್ತು ಭವಿಷ್ಯದ ಸ್ಥಿತಿಯನ್ನು ಅವಲೋಕಿಸಲು ಇದು ಸುದಿನವಾಗಿದೆ ಎಂದು ರಾಷ್ಟ್ರಪತಿಗಳು ಹೇಳಿದರು.

ನಮ್ಮ ರಾಷ್ಟ್ರೀಯ ಭವಿಷ್ಯಕ್ಕೆ ನಾವೇ ನಿರ್ಮಾತೃಗಳು

‘1950ರ ಜನವರಿ 26ರಿಂದಲೂ ನಮ್ಮ ಗಣತಂತ್ರವನ್ನು ಸಾಂವಿಧಾನಿಕ ಗುರಿಗಳತ್ತ ಮುನ್ನಡೆಸುತ್ತಿದ್ದೇವೆ. ಸಂವಿಧಾನ ಪೂರ್ಣವಾಗಿ ಜಾರಿಯಾದ ದಿನವದು. ವಿಶ್ವದ ಇತಿಹಾಸದಲ್ಲೇ ಅತಿದೊಡ್ಡ ಗಣತಂತ್ರ ದೇಶಕ್ಕೆ ಸಂವಿಧಾನವೇ ಆಧಾರ ದಾಖಲೆಯಾಗಿದೆ. ಸಂವಿಧಾನವನ್ನು ರಚಿಸಿದವರು ರಾಷ್ಟ್ರೀಯತೆ ಮತ್ತು ಏಕತೆಗೆ ಭದ್ರ ಬುನಾದಿ ಹಾಕಿದ್ದಾರೆ’ ಎಂದು ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ತಿಳಿಸಿದರು.

ವಂದೇ ಮಾತರಂ ಗೀತೆಯಿಂದ ದೇಶಭಕ್ತಿ…

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಸಂದರ್ಭದಲ್ಲಿ 150 ವರ್ಷ ತುಂಬಿದ ವಂದೇ ಮಾತರಂ ಗೀತೆ ವಿಚಾರ ಪ್ರಸ್ತಾಪಿಸಿ, ಇದು ದೇಶದ ಜನರ ಹೃದಯದಲ್ಲಿ ದೇಶ ಭಕ್ತಿ ಮೂಡಿಸುವ ಒಂದು ಅಮೋಘ ಗೀತೆ ಎಂದು ಬಣ್ಣಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 7:47 pm, Sun, 25 January 26

Source link

Video: ಸೈಕಲ್ ಏರಿ ಹೊರಟ ಮಾಲೀಕನನ್ನು ತಡೆದು ನಿಲ್ಲಿಸಿದ ಗಜರಾಜ – Kannada News | Elephant stops owner riding bicycle, cutest video goes viral

ಪ್ರಾಣಿಗಳೇ ಹಾಗೆ, ತಮ್ಮ ಭಾವನೆಗಳನ್ನು ವಿಭಿನ್ನ ರೀತಿಯಲ್ಲಿ ತೋರ್ಪಡಿಸುತ್ತವೆ. ಯಾರು ತನ್ನನ್ನು ಪ್ರೀತಿ, ಕಾಳಜಿಯಿಂದ ನೋಡಿಕೊಳ್ಳುತ್ತಾರೋ ಅವರ ಜೊತೆಯಲ್ಲಿ ಮಗುವಿನಂತೆ ವರ್ತಿಸುತ್ತವೆ ಹಾಗೂ ಸಲುಗೆ ಬೆಳೆಸಿಕೊಳ್ಳುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಆನೆಯು (elephant) ತನ್ನನ್ನು ಬಿಟ್ಟು ಹೊರಟ ಮಾಲೀಕನನ್ನು ತಡೆದು ನಿಲ್ಲಿಸುವ ದೃಶ್ಯವಾಗಿದೆ. ಈ ಮುದ್ದಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

srithapthaifamily ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಾಲೀಕ ಹಾಗೂ ಗಜರಾಜನ ಸುಂದರ ಬಾಂಧವ್ಯವನ್ನು ನೋಡಬಹುದು. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಸೈಕಲ್ ಏರಿ ಹೊರಟಿರುವುದನ್ನು ಕಾಣಬಹುದು. ಈ ವೇಳೆ ಆನೆಯು ತನ್ನ ಮಾಲೀಕನನ್ನು ತಡೆದು ನಿಲ್ಲಿಸಿ, ಸೈಕಲ್‌ನಿಂದ ಕೆಳಗೆ ಇಳಿಸಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನಗೆ ಬೊಗಳಿದ ಶ್ವಾನವನ್ನು ಒದ್ದು ಓಡಿಸಿದ ಗಜರಾಜ

ಈ ವಿಡಿಯೋ 5 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ತುಂಬಾನೇ ಮುದ್ದಾಗಿದೆ. ಮತ್ತೊಬ್ಬರು, ಪರಿಶುದ್ಧ ಪ್ರೀತಿ, ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಇವರಿಬ್ಬರೂ ಸ್ನೇಹಿತರು, ಆಟ ಆಡುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೈತರ ಪ್ರತಿಭಟನೆ ವೇಳೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ – Kannada News | Bidadi Farmers Protest: Woman Makes Emotional Plea to HD Kumaraswamy for Justice

ರಾಮನಗರ, ಜನವರಿ 25: ಜಿಬಿಐಟಿ ಯೋಜನೆ ವಿರುದ್ಧ ಸ್ಥಳೀಯ ರೈತರಿಂದ ಬಿಡದಿಯ ಬೈರಮಂಗಲದಲ್ಲಿ ನಡೆಯುತ್ತಿರುವ ಬೃಹತ್‌ ಹೋರಾಟದ ಪ್ರತಿಭಟನಾ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮುಂದೆ ರೈತ ಮಹಿಳೆಯೋರ್ವರು ಭಾವನಾತ್ಮಕವಾಗಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. 2006ರ ಭೂಸ್ವಾಧೀನ ನೀತಿಯಿಂದಾದ ಪರಿಣಾಮಗಳು ಮತ್ತು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಉಲ್ಲೇಖಿಸುತ್ತ, ರಾಜಕೀಯ ನಾಯಕರು ರೈತರ 322 ದಿನಗಳ ಧರಣಿಯ ಬಗ್ಗೆ ಬೆಳಗಾವಿ ಸದನದಲ್ಲಿ ಚರ್ಚಿಸದಿರುವ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ವಿನ್ನರ್‌ಗಳಿಗೆ ಸಿಗುವ ಗೌರವ, ರೈತರಿಗೆ ಸಿಗುತ್ತಿಲ್ಲ. ನಮ್ಮನ್ನು ಉಳಿಸಲು ನೀವೇ ನಮ್ಮ ಕೊನೆಯ ಭರವಸೆ. ದಯವಿಟ್ಟು ನಮ್ಮನ್ನು ಉಳಿಸಿ ಅಣ್ಣ ಎಂದು ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಅವರು ಮನವಿ ಮಾಡಿದ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Padma Awards 2026: ರೋಹಿತ್, ಹರ್ಮನ್​ಪ್ರೀತ್ ಸೇರಿದಂತೆ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ – Kannada News | 2026 Padma Awards: Rohit Sharma among 9 others sports persons Honored Padma Awards

2026 ರ ಗಣರಾಜ್ಯೋತ್ಸವಕ್ಕೆ ಒಂದು ದಿನ ಮೊದಲು ಭಾರತ ಸರ್ಕಾರವು ಪ್ರತಿ ವರ್ಷದಂತೆ ಈ ವರ್ಷವೂ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಆ ಪ್ರಕಾರ ಕ್ರೀಡಾ ವಿಭಾಗದಲ್ಲೂ ವಿವಿದ ಸಾಧಕರಿಗೆ ಈ ಗೌರವ ಸಂದಿದೆ. ಅದರಲ್ಲೂ ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಐಸಿಸಿ ಟ್ರೋಫಿಗೆ ಮುನ್ನಡೆಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಪುರುಷರ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಇಬ್ಬರ ಜೊತೆಗೆ ದೇಶದ ಅತ್ಯಂತ ಯಶಸ್ವಿ ಟೆನಿಸ್ ಆಟಗಾರರಲ್ಲಿ ಒಬ್ಬರಾದ ವಿಜಯ್ ಅಮೃತರಾಜ್ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜನವರಿ 25 ರ ಭಾನುವಾರದಂದು, ಸರ್ಕಾರವು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಸೇರಿದಂತೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಿತು. ಈ ವರ್ಷ, ಸರ್ಕಾರವು ಒಟ್ಟು 131 ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಿದೆ, ಅದರಲ್ಲಿ ಐವರಿಗೆ ಎರಡನೇ ಅತ್ಯುನ್ನತ ಪ್ರಶಸ್ತಿಯಾದ ಪದ್ಮವಿಭೂಷಣವೂ ಸೇರಿದೆ. ಹದಿಮೂರು ಜನರಿಗೆ ಪದ್ಮಭೂಷಣ ಮತ್ತು ಒಟ್ಟು 113 ಜನರಿಗೆ ಪದ್ಮಶ್ರೀ ನೀಡಲಾಗಿದೆ. ಕ್ರೀಡಾ ವಿಭಾಗದಲ್ಲಿ ಒಬ್ಬರಿಗೆ ಪದ್ಮಭೂಷಣ ಮತ್ತು ಎಂಟು ಮಂದಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ, ಭಾರತ ತಂಡ ಕಳೆದ ವರ್ಷ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತು. ಹೀಗೆ ರೋಹಿತ್ ಶರ್ಮಾ ಎರಡು ವರ್ಷಗಳಲ್ಲಿ ಭಾರತ ತಂಡವನ್ನು ಎರಡನೇ ಐಸಿಸಿ ಟ್ರೋಫಿಗೆ ಮುನ್ನಡೆಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಇತ್ತ ಕಳೆದ ನವೆಂಬರ್‌ನಲ್ಲಿ, ಹರ್ಮನ್‌ಪ್ರೀತ್ ಕೌರ್ ಭಾರತೀಯ ಮಹಿಳಾ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಾಣದ ಸಾಧನೆ ಮಾಡಿದ್ದರು. ಹರ್ಮನ್‌ಪ್ರೀತ್ ನಾಯಕತ್ವದಲ್ಲಿ ಭಾರತೀಯ ಮಹಿಳಾ ತಂಡವು ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿತ್ತು. ಇದು ಮಹಿಳಾ ಕ್ರಿಕೆಟ್‌ನಲ್ಲಿ ಭಾರತದ ಮೊದಲ ಐಸಿಸಿ ಟ್ರೋಫಿಯಾಗಿದೆ. ಇದೀಗ ಈ ಸಾಧನೆಗಳಿಗಾಗಿ, ಈ ಇಬ್ಬರು ದಿಗ್ಗಜರನ್ನು ಗೌರವಿಸಲಾಗಿದೆ.

ಪದ್ಮ ಪ್ರಶಸ್ತಿಗೆ ಭಾಜನರಾದವರ ಪಟ್ಟಿ

  1. ವಿಜಯ್ ಅಮೃತರಾಜ್ (ಟೆನಿಸ್) – ಪದ್ಮಭೂಷಣ
  2. ರೋಹಿತ್ ಶರ್ಮಾ (ಕ್ರಿಕೆಟ್) – ಪದ್ಮಶ್ರೀ
  3. ಹರ್ಮನ್ಪ್ರೀತ್ ಕೌರ್ (ಕ್ರಿಕೆಟ್) – ಪದ್ಮಶ್ರೀ
  4. ಪ್ರವೀಣ್ ಕುಮಾರ್ (ಪ್ಯಾರಾ-ಅಥ್ಲೆಟಿಕ್ಸ್) – ಪದ್ಮಶ್ರೀ
  5. ಬಲದೇವ್ ಸಿಂಗ್ (ಹಾಕಿ) – ಪದ್ಮಶ್ರೀ
  6. ಭಗವಾನ್‌ದಾಸ್ ರಾಯ್ಕ್ವಾರ್ (ಸಾಂಪ್ರದಾಯಿಕ ಸಮರ ಕಲೆಗಳು) – ಪದ್ಮಶ್ರೀ
  7. ಕೆ.ಪಜನಿವೇಲ್ (ಸಿಲಂಬಂ)- ಪದ್ಮಶ್ರೀ
  8. ಸವಿತಾ ಪುನಿಯಾ (ಹಾಕಿ)- ಪದ್ಮಶ್ರೀ
  9. ವ್ಲಾಡಿಮಿರ್ ಮೆಸ್ಟ್ವಿರಿಶ್ವಿಲಿ (ನಿಧನ) – ಪದ್ಮಶ್ರೀ (ಕುಸ್ತಿ ತರಬೇತುದಾರ)

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version