Headlines

Bengaluru Rain Effect: ಮೆಟ್ರೋ ನಿಲ್ದಾಣದ ರಸ್ತೇಲಿ 3 ಅಡಿಯಷ್ಟು ನಿಂತ ಮಳೆ‌ನೀರು! ವಾಹನ ಸವಾರರ ಪರದಾಟ

ಬೆಂಗಳೂರು, ಮೇ 29: ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಯು ಮತ್ತೆ ಅವಾಂತರ ಸೃಷ್ಟಿಸಿದೆ. ತಾವರೆಕೆರೆ ಮೆಟ್ರೋ ನಿಲ್ದಾಣದ ಬಳಿ, ಬನ್ನೇರಘಟ್ಟ ರಸ್ತೆಯಲ್ಲಿ ಎರಡರಿಂದ ಮೂರು ಅಡಿಯಷ್ಟು ನೀರು ಸಂಗ್ರಹವಾಗಿದೆ. ನಿನ್ನೆ ರಾತ್ರಿ 7 ಗಂಟೆಗೆ ಸುರಿದ ಮಳೆಯ ಪರಿಣಾಮವಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಧ್ಯರಾತ್ರಿ ಕಳೆದರೂ ನೀರು ಇಳಿದಿಲ್ಲ. ಬನ್ನೇರಘಟ್ಟದಿಂದ ಬೆಂಗಳೂರಿಗೆ ಬರುವ ಮತ್ತು ಬೆಂಗಳೂರಿನಿಂದ ಬನ್ನೇರಘಟ್ಟಕ್ಕೆ ಹೋಗುವ ಎರಡೂ ರಸ್ತೆಗಳಲ್ಲೂ ನೀರು ನಿಂತಿದೆ. ಇದರಿಂದಾಗಿ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲವು ವಾಹನ…

Read More

Video: ಉತ್ತರ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ, ಐವರು ಸಾವು

ಹಮೀರ್​ಪುರ, ಮೇ 29: ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ಬೀಸಿದ ಬಿರುಗಾಳಿಯಿಂದಾಗಿ ಬೆಟ್ವಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯ ಒಂದು ಭಾಗ ಕುಸಿದು ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ಮಾಣ ಕಾರ್ಯದ ಸಮಯದಲ್ಲಿ ಬಲವಾದ ಗಾಳಿ ಬೀಸಿದಾಗ ಸೇತುವೆಯ ಸ್ಲ್ಯಾಬ್ ಮತ್ತು ಪಿಯರ್, ಸ್ಕ್ಯಾಫೋಲ್ಡಿಂಗ್ ರಚನೆಯೊಂದಿಗೆ ಕುಸಿದು ಬಿದ್ದಿದೆ. ಕುರಾರ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದಲ್ಲಿರುವ ಕಂದೌರ್-ಮೊರಕಂದರ್ ಸೇತುವೆಯಲ್ಲಿ ಈ ಘಟನೆ ನಡೆದಿದೆ.  …

Read More

Guru Sanchara 2026: ಗುರು ಸಂಚಾರ ಮೀನ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?

ಮೀನ ರಾಶಿಯವರಿಗೆ 2026ರ ಗುರು ಸಂಚಾರವು ಮಹತ್ವದ ಪರಿವರ್ತನೆಗಳನ್ನು ತರಲಿದೆ ಎಂದು ಡಾ. ಬಸವರಾಜ್ ಗುರೂಜಿ ಹೇಳಿದ್ದಾರೆ. ಜೂನ್ 2ರಿಂದ ಆರಂಭವಾಗುವ ಈ ಗುರುಬಲದಿಂದ ಮೀನ ರಾಶಿಯವರಿಗೆ ಹಲವು ಸಕಾರಾತ್ಮಕ ಬದಲಾವಣೆಗಳು ಕಂಡುಬರಲಿವೆ. ಈ ಸಮಯದಲ್ಲಿ ಐದನೇ ಮನೆಯಲ್ಲಿ ಗುರು ಸಂಚಾರ ಇರುವುದರಿಂದ, ಆರ್ಥಿಕವಾಗಿ ಉತ್ತಮ ಫಲಿತಾಂಶಗಳು ಸಿಗುತ್ತವೆ. ನಿಂತ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ಆರೋಗ್ಯದಲ್ಲಿ ಚೇತರಿಕೆ, ಮಾನಸಿಕ ಸ್ಥೈರ್ಯ ಮತ್ತು ಆತ್ಮಗೌರವ ಹೆಚ್ಚುತ್ತದೆ. ಸಾಡೇಸಾತಿ ನಡೆಯುತ್ತಿದ್ದರೂ, ಗುರು ಬಲದ…

Read More

Bengaluru Air Quality: ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ AQI ವಿವರ ಇಲ್ಲಿದೆ

ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಮೇ 29: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಹೆಚ್ಚಾಗಿ ‘ಸಾಧಾರಣ’ (Moderate) ಹಾಗೂ ಕೆಲವು ಜಿಲ್ಲೆಗಳಲ್ಲಿ ‘ಉತ್ತಮ’ (Good) ಮಟ್ಟದಲ್ಲಿದೆ. ಇತ್ತೀಚೆಗೆ ಸುರಿದ ಸಾಧಾರಣ ಮಳೆ ಹಾಗೂ ಬೀಸುತ್ತಿರುವ ತಂಪಾದ ಗಾಳಿಯ ಕಾರಣದಿಂದಾಗಿ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದ್ದು, ಜನ ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಇತ್ತೀಚಿನ ಮಳೆಯಿಂದಾಗಿ ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸಾಧಾರಣ ಮಟ್ಟದಲ್ಲಿದೆ. ಧಾರವಾಡದಲ್ಲಿ…

Read More

Lakshmi Puja: ಶುಕ್ರವಾರ ಹೀಗೆ ಮಾಡಿ; ಲಕ್ಷ್ಮಿ ದೇವಿಯ ಕೃಪೆಯಿಂದ ಐಶ್ವರ್ಯ ಮತ್ತು ಸಮೃದ್ಧಿ ನಿಮ್ಮದಾಗುವುದು ಖಚಿತ!

ಸನಾತನ ಧರ್ಮದಲ್ಲಿ ಶುಕ್ರವಾರಕ್ಕೆ ಅತ್ಯಂತ ವಿಶೇಷವಾದ ಮಹತ್ವವಿದೆ. ಈ ದಿನವನ್ನು ಧನ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಲಕ್ಷ್ಮಿ ದೇವಿಗೆ ಪ್ರೀತಿಪಾತ್ರವಾದ ದಿನವೆಂದು ನಂಬಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರ ಹಾಗೂ ವಾಸ್ತು ನಿಯಮಗಳ ಪ್ರಕಾರ, ಶುಕ್ರವಾರದಂದು ಮಾಡುವ ಕೆಲವು ಸರಳವಾದ ಪೂಜೆ ಮತ್ತು ಪರಿಹಾರಗಳು ನಮ್ಮ ಜೀವನದಲ್ಲಿ ಅದ್ಭುತವಾದ ಸಕಾರಾತ್ಮಕ ಬದಲಾವಣೆಗಳನ್ನು ತರುತ್ತವೆ. ವಿಶೇಷವಾಗಿ ಮನೆಯಲ್ಲಿನ ಆರ್ಥಿಕ ಸಂಕಷ್ಟಗಳು ದೂರವಾಗಿ, ಸಂಪತ್ತು ವೃದ್ಧಿಯಾಗಬೇಕೆಂದು ಬಯಸುವವರು ಶುಕ್ರವಾರದಂದು ಭಕ್ತಿಶ್ರದ್ಧೆಗಳಿಂದ ದೇವಿಯನ್ನು ಆರಾಧಿಸಿದರೆ ಶೀಘ್ರದಲ್ಲೇ ಉತ್ತಮ ಫಲಿತಾಂಶಗಳು ಸಿಗುತ್ತವೆ. ಹಾಗಾದರೆ, ಲಕ್ಷ್ಮಿ…

Read More

ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ್ ಮೊದಲ ಪ್ರತಿಕ್ರಿಯೆ! ಆದ್ರೆ ಹೇಳಿದ್ದೇನು ಗೊತ್ತಾ? ಇಲ್ನೋಡಿ

ನವದೆಹಲಿ, ಮೇ 29: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಧಿಕಾರ ಹಂಚಿಕೆ ವಿಚಾರವಾಗಿ ಡಿಕೆಶಿ ಈವರೆಗೂ ಮೌನವಾಗಿಯೇ ಇದ್ದರು. ಅಲ್ಲದೆ, ಯಾವುದೇ ರೀತಿಯ ಹೇಳಿಕೆ ನೀಡದಂತೆ ಬೆಂಬಲಿಗರಿಗೂ ಖಡಕ್ ಎಚ್ಚರಿಕೆ ನೀಡಿದ್ದರು. ಸದ್ಯ ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಬಳಿ ಪತ್ರಕರ್ತರು, ‘ನೀವೇ ಮುಂದಿನ ಮುಖ್ಯಮಂತ್ರಿ ಆಗುತ್ತೀರಾ ಸರ್’ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಅವರು,…

Read More

ಅಜ್ಮೀರ್ ಹತ್ಯಾಕಾಂಡ: ನಾಲ್ವರನ್ನು ಕೊಂದು ಕಾರೊಳಗೆ ಹಾಕಿ ಸುಟ್ಟ ಪತ್ನಿ, ಮನೆಯಲ್ಲಿ ಎದೆ ಬಡಿದುಕೊಂಡು ಮೊಸಳೆ ಕಣ್ಣೀರು ಸುರಿಸಿದ ಹಂತಕಿ

ಅಜ್ಮೀರ್, ಮೇ 29: ರಾಜಸ್ಥಾನದ ಅಜ್ಮೀರ್​ನಲ್ಲಿ ಇತ್ತೀಚೆಗಷ್ಟೇ ಕಾರೊಂದು ಬೆಂಕಿಗೆ ಆಹುತಿಯಾಗಿತ್ತು. ಈ ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಆದರೆ ಆ ಸಾವು ಸಹಜ ಸಾವಲ್ಲ ಕೊಲೆ(Murder) ಎಂಬುದು ಈಗ ತಿಳಿದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಶವಗಳಿದ್ದ ಕಾರಿಗೆ ಬೆಂಕಿ ಹಚ್ಚಲಾಗಿದೆ. ಅಚ್ಚರಿಯೆಂದರೆ, ಈ ಇಡೀ ಹತ್ಯಾಕಾಂಡದ ಮಾಸ್ಟರ್‌ಮೈಂಡ್ ಬೇರೆ ಯಾರೂ ಅಲ್ಲ, ಮೃತರ ಮನೆಯಲ್ಲೇ ಕಣ್ಣೀರಿಡುತ್ತಾ ಮೂರ್ಛೆ ಹೋದಂತೆ ನಟಿಸುತ್ತಿದ್ದ ಮೊದಲ ಪತ್ನಿ. ಘಟನೆ…

Read More

ಮಹಾಭಾರತದ ‘ಕುಂತಿ’ ಶಫಕ್ ನಾಜ್ ಈಗ ಎಲ್ಲಿದ್ದಾರೆ?

ಸ್ಟಾರ್ ಪ್ಲಸ್ ವಾಹಿನಿಯಲ್ಲಿ 2013ರಲ್ಲಿ ಪ್ರಸಾರವಾದ ಪೌರಾಣಿಕ ಧಾರಾವಾಹಿ‘ಮಹಾಭಾರತ’ (Mahabharat) ಕಿರುತೆರೆಯ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸೀರಿಯಲ್‌ಗಳಲ್ಲಿ ಒಂದು. 16 ಸೆಪ್ಟೆಂಬರ್ 2013 ರಿಂದ 16 ಆಗಸ್ಟ್ 2014ರವರೆಗೆ ಒಟ್ಟು 267 ಸಂಚಿಕೆಗಳಾಗಿ ಮೂಡಿಬಂದ ಈ ಅದ್ಭುತ ಸರಣಿಯಲ್ಲಿ ಹಲವು ಪ್ರಮುಖ ನಟರು ಬಣ್ಣ ಹಚ್ಚಿದ್ದರು. ಈ ಧಾರಾವಾಹಿಯಲ್ಲಿ ಪಾಂಡವರ ತಾಯಿ ‘ಕುಂತಿ’ ಪಾತ್ರದಲ್ಲಿ ನಟಿಸಿದ್ದ ಮುಸ್ಲಿಂ ನಟಿ ಶಫಕ್ ನಾಜ್ ಅವರ ಬಗ್ಗೆ ಒಂದು ಕುತೂಹಲಕಾರಿ ವಿಷಯ ಇಲ್ಲಿದೆ. ಕೇವಲ 21ನೇ ವಯಸ್ಸಿಗೆ ತಾಯಿ ಪಾತ್ರ!…

Read More

ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ನೀಡಲು ಮುಂದಾದ ಮುಂಬೈ ಇಂಡಿಯನ್ಸ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲು ಎಂಐ ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರ ಮೊದಲ ಹೆಜ್ಜೆಯಾಗಿ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ (Hardik Pandya) ಅವರ ತಲೆದಂಡವಾಗಲಿದೆ. (PC: IPL) ಎಕ್ಸ್​​ಪ್ರೆಸ್ ಸ್ಪೋರ್ಟ್ಸ್ ವರದಿ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಲಾಗಿದೆ. ಕಳೆದ ಮೂರು ಸೀಸನ್​ಗಳಲ್ಲಿ ಪಾಂಡ್ಯ ನಾಯಕತ್ವದಲ್ಲಿ ಕಣಕ್ಕಿಳಿದಿರುವ…

Read More

Vasthu Tips: ಹಳೆಯ ಅಥವಾ ಹರಿದ ಬಟ್ಟೆ ಮನೆ ಒರೆಸಲು ಬಳಸಬಾರದು ಯಾಕೆ ಗೊತ್ತಾ?

ಹರಿದ ಬಟ್ಟೆ ಮನೆ ಒರೆಸಲು ಬಳಸುವುದುImage Credit source: Pinterest ಶುಚಿತ್ವವು ನಮ್ಮ ಬದುಕು, ಕುಟುಂಬ ಮತ್ತು ಮನೆಗೆ ಶ್ರೇಯಸ್ಸು, ಸಮೃದ್ಧಿ ಹಾಗೂ ನೆಮ್ಮದಿ ತರುತ್ತದೆ. ಮನೆಯನ್ನು ಶುಚಿಗೊಳಿಸುವ ಸಂದರ್ಭದಲ್ಲಿ ನಾವು ಬಳಸುವ ವಸ್ತುಗಳ ಬಗ್ಗೆ ಗಮನ ಹರಿಸುವುದು ಮುಖ್ಯ. ಹಿಂದಿನ ಕಾಲದಿಂದಲೂ ಮನೆ ಒರೆಸುವ ವಿಧಾನಗಳಲ್ಲಿ ಬದಲಾವಣೆಗಳಾಗಿವೆ. ಆಧುನಿಕ ಯುಗದಲ್ಲಿ ಮಾಫ್‌ಗಳ ಬಳಕೆ ಸಾಮಾನ್ಯವಾದರೆ, ಕೆಲವರು ಈಗಲೂ ಹಳೆಯ, ಉಪಯೋಗಿಸಿದ, ಹರಿದ ಬಟ್ಟೆಗಳನ್ನು ಮನೆ ಒರೆಸಲು ಬಳಸುತ್ತಾರೆ. ಇದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆಗೆ…

Read More