ಕರ್ನಾಟಕ ಬಂದ್ ಎಫೆಕ್ಟ್: ಬಾಟಲ್ ಹಿಡಿದು ಹೋದ್ರೆ ಇಂದು ಬಂಕ್ಗಳಲ್ಲಿ ಸಿಗಲ್ಲ ಪೆಟ್ರೋಲ್! – Kannada News | Karnataka Bandh Effect: Petrol Not Available for Those Carrying Bottles Today
ಬೆಂಗಳೂರು, ಆಗಸ್ಟ್ 13: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ಪೆಟ್ರೋಲ್ ಬಂಕ್ಗಳಿಗೆ ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ಬಾಟಲಿಗಳಲ್ಲಿ ಪೆಟ್ರೋಲ್ ವಿತರಣೆ ಮಾಡದಂತೆ ಕಟ್ಟುನಿಟ್ಟಾಗಿ ಎಚ್ಚರಿಕೆ ನೀಡಲಾಗಿದೆ. ಬಾಟಲಿಗಳಲ್ಲಿ ಪೆಟ್ರೋಲ್ ನೀಡುವುದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಆತಂಕ ಹಿನ್ನೆಲ ಮಹತ್ವದ ಸೂಚನೆ ನೀಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. Source link