Headlines

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಐಕ್ಯೂಐ ಸ್ಥಿತಿಯಲ್ಲಿ ಭಾರಿ ಸುಧಾರಣೆ – Kannada News | Bengaluru AQI Update: Air Quality Improves Across Karnataka Cities

ಬೆಂಗಳೂರು, ಜೂನ್ 22: ಕರ್ನಾಟಕ ಹಾಗೂ ಪ್ರಮುಖವಾಗಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ತೃಪ್ತಿದಾಯಕ ಮತ್ತು ಉತ್ತಮ ಮಟ್ಟದಲ್ಲಿದೆ. ರಾಜ್ಯದಾದ್ಯಂತ ಮುಂಗಾರು ಮಳೆ ಮುಂದುವರಿದಿರುವುದರಿಂದ ಗಾಳಿಯಲ್ಲಿನ ಮಾಲಿನ್ಯಕಾರಕ ಕಣಗಳು ಗಣನೀಯವಾಗಿ ಕಡಿಮೆಯಾಗಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಮಳೆಯ ಕಾರಣದಿಂದಾಗಿ ಬೆಂಗಳೂರಿನ ವಾಯು ಗುಣಮಟ್ಟವು ಇಂದು ಉತ್ತಮ ಮಟ್ಟದಲ್ಲಿದೆ. ರಾಜ್ಯದ ಬಹುತೇಕ ಪ್ರಮುಖ ನಗರಗಳಲ್ಲಿ ಮಾಲಿನ್ಯ ಸೂಚ್ಯಂಕ ತೃಪ್ತಿದಾಯಕವಾಗಿ ದಾಖಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಶುದ್ಧ ಗಾಳಿಯ ವಾತಾವರಣ ಕಂಡುಬಂದಿದೆ. ಬೆಂಗಳೂರಿನ…

Read More

Karnataka Weather Forecast: ನಾಳೆ 7 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್; ಕರಾವಳಿಯಲ್ಲಿ ಮಳೆಯಬ್ಬರ – Kannada News | Karnataka Weather Forecast: Orange Alert Issued for 7 Districts on July 8; Coastal and Malnad Regions on High Alert

ಬೆಂಗಳೂರು, ಜುಲೈ 07: ಕರ್ನಾಟಕದ ಹಲವೆಡೆ ಇನ್ನೂ ಕೆಲವು ದಿನಗಳ ಕಾಲ ಮುಂಗಾರು ಮಳೆಯ ಆರ್ಭಟ ಮುಂದುವರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 9 ಮತ್ತು 10ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 9ರಂದು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ 8 ಮತ್ತು 9ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿಯ…

Read More

ವಿಜಯ್ ದೇವರಕೊಂಡ ವೃತ್ತಿ ಜೀವನಕ್ಕೆ 10 ವರ್ಷ; ಇಲ್ಲಿದೆ ಕರಿಯರ್ ವಿವರ – Kannada News | 10 Years Of Vijay Deverakonda: The Phenomenal Journey Of A Solo Hero

ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಸೋಲೋ ಹೀರೋ ಆಗಿ ಚಿತ್ರರಂಗದಲ್ಲಿ ಯಶಸ್ವಿಯಾಗಿ 10 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಪಯಣವು ಅವರ ಸಿನಿ ಬದುಕಿನ ಅತ್ಯಂತ ಪ್ರಮುಖ ಮೈಲಿಗಲ್ಲಾಗಿದೆ. ಕೇವಲ ಒಂದು ದಶಕದಲ್ಲೇ ಅವರು ತೆಲುಗು ಚಿತ್ರರಂಗದಲ್ಲಿ ತಮಗಾಗಿಯೇ ಒಂದು ಗಟ್ಟಿಯಾದ ಸ್ಥಾನವನ್ನು ನಿರ್ಮಿಸಿಕೊಂಡಿದ್ದಾರೆ. ಅವರ ನಟನೆ ಹಾಗೂ ವಿಶಿಷ್ಟ ಶೈಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದೆ. ಅರ್ಜುನ್ ರೆಡ್ಡಿ ಕೊಟ್ಟ ಬ್ರೇಕ್ 2016ರಲ್ಲಿ ತೆರೆಕಂಡ ‘ಪೆಳ್ಳಿ ಚೂಪುಲು’ ಸಿನಿಮಾ ಮೂಲಕ ವಿಜಯ್ ಅವರ ನಾಯಕ…

Read More

ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಹೆಚ್​​. ಡಿ. ರೇವಣ್ಣ – Kannada News | Revanna Bats for Sumalatha Ambareesh, Makes Surprise Political Remark

ಬೆಂಗಳೂರು, ಜೂನ್​​ 18: ಹೆಚ್​.ಡಿ. ದೇವೇಗೌಡರಿಗೆ ರಾಜ್ಯಸಭಾ ಸ್ಥಾನ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್​​.ಡಿ. ರೇವಣ್ಣ, ದೇವೇಗೌಡರು ಅಧಿಕಾರಕ್ಕಾಗಿ ಎಂದಿಗೂ ಯಾರ ಬಾಗಿಲಿಗೂ ಹೋಗಿಲ್ಲ. ಪ್ರಧಾನಮಂತ್ರಿ ಹುದ್ದೆಯನ್ನೇ ಅವರು ತ್ಯಾಗ ಮಾಡಿದ್ದರು ಎಂಬುದನ್ನು ಅವರು ನೆನಪಿಸಿದ್ದಾರೆ. ರಾಜ್ಯಸಭಾ ಸ್ಥಾನಕ್ಕಾಗಿ ದೇವೇಗೌಡರು ಅಥವಾ ಕುಮಾರಸ್ವಾಮಿಯವರು ಯಾರನ್ನೂ ಕೇಳಿರಲಿಲ್ಲ. ರಾಜ್ಯಸಭಾ ಸ್ಥಾನಕ್ಕೆ ಮೊದಲು ದೇವೇಗೌಡರು ಮತ್ತು ಸದಾನಂದಗೌಡರ ಹೆಸರುಗಳು ಕೇಳಿಬಂದಿದ್ದವು. ನಂತರ ಮಂಡ್ಯದ ಮೇಡಂ ಎಂದು ಸುಮಲತಾ ಅಂಬರೀಶ್ ಅವರ ಹೆಸರನ್ನು ಪ್ರಸ್ತಾಪಿಸಿದ ರೇವಣ್ಣ, ಅವರಿಗೂ ಟೋಪಿ ಹಾಕಲಾಯಿತು ಎಂದು…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ – Kannada News | Karnataka Weather Today: Light Rain in Some Areas, Rising Temperatures

ಬೆಂಗಳೂರು, ಫೆ.26: ಕರ್ನಾಟಕದಲ್ಲಿ ಇಂದು (ಫೆಬ್ರವರಿ 26, 2026) ಮುಖ್ಯವಾಗಿ ಶುಷ್ಕ ಹವಾಮಾನವಿದ್ದು, ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಗದಗ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ…

Read More

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! – Kannada News | Raichur Student Basavaraj Dies in Horrific Auto Bus Accident on Station Road

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! ರಾಯಚೂರು, ಮಾರ್ಚ್ 01: ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಬಡ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ವೇಗದಲ್ಲಿದ್ದ ಆಟೋದಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದಿದ್ದು, ಬಸವರಾಜ್ (21) ಎಂಬ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಭಯಾನಕ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೇಟರಿಂಗ್ ಕೆಲಸಕ್ಕೆ ಹೋಗುವಾಗ ಘಟನೆ ಬಸವರಾಜ್ ಆಶಾಪುರ ರಸ್ತೆಯಿಂದ ಬಸವೇಶ್ವರ…

Read More

“ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ? – Kannada News | Maharashtra: NCP Merger Talks and Mahayuti Alliance Future Post Ajit Pawar

ಮಹಾರಾಷ್ಟ್ರ, ಜ.31: ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗಳು ನಡೆದಿದೆ. ಎನ್‌ಸಿಪಿ (NCP) ಎರಡೂ ಬಣಗಳ ವಿಲೀನ ಮತ್ತು ಹೊಸ ನಾಯಕತ್ವದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಅಜಿತ್ ಪವಾರ್ ಮತ್ತು ಶರದ್ ಪವಾರ್ ನೇತೃತ್ವದ ಎರಡು ಬಣಗಳ ವಿಲೀನ ಪ್ರಕ್ರಿಯೆಯು ಅಜಿತ್ ಪವಾರ್ ಬದುಕಿದ್ದಾಗಲೇ ಅಂತಿಮ ಹಂತಕ್ಕೆ ತಲುಪಿತ್ತು. ಫೆಬ್ರವರಿ 8 ಅಥವಾ ಫೆಬ್ರವರಿ ಮಧ್ಯಭಾಗದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ. ಫೆಬ್ರವರಿ…

Read More

Karnataka Dam Water Level: ಕೃಷ್ಣಾ ನದಿಯ ಭಾಗದಲ್ಲಿ ಹೆಚ್ಚಿದ ಹರಿವು, ಕಾವೇರಿ ಕಣಿವೆಯಲ್ಲಿ ಕ್ಷೀಣಿಸಿದ ಸಂಗ್ರಹ – Kannada News | Karnataka Dam Water Level: Inflow Rises in Krishna Basin, Cauvery Storage Drops

ಬೆಂಗಳೂರು, ಜುಲೈ 24: ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಟ್ಟದ ತಾಜಾ ವರದಿ ಲಭ್ಯವಾಗಿದ್ದು, ಕೃಷ್ಣಾ ನದಿ ಪಾತ್ರದಲ್ಲಿ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿದ್ದರೆ, ಕಾವೇರಿ ಅಚ್ಚುಕಟ್ಟು ಪ್ರದೇಶದ ಜಲಾಶಯಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದೆ. 1. ಹೇಮಾವತಿ ಜಲಾಶಯ (ಹಾಸನ) ಗರಿಷ್ಠ ಮಟ್ಟ: 2922 ಅಡಿ (37 TMC) ಇಂದಿನ ನೀರಿನ ಮಟ್ಟ: 2904.65 ಅಡಿ (22.82 TMC) ಒಳಹರಿವು: 1,198 ಕ್ಯೂಸೆಕ್ |…

Read More

ದಾವಣಗೆರೆ: ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ಬಾಲಕ ಸಾವು – Kannada News | Class 9 Student Dies of Suspected Heart Attack in Davanagere’s Goguddu Village

ದಾವಣಗೆರೆ, ಫೆಬ್ರವರಿ 24: ಕರ್ನಾಟಕದಲ್ಲಿ (Karnataka) ಇತ್ತೀಚೆಗೆ ಕಿರಿಯ ವಯಸ್ಸಿನವರಲ್ಲಿ ಹೃದಯಾಘಾತ (Heart Attack), ಅದರಿಂದಾಗಿ ಸಾವುಗಳು ಸಂಭವಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ಜೋರಾಗಿದೆ. ಇದರ ನಡುವೆಯೇ, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆ…

Read More

ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ – Kannada News

ಮಂಗಳೂರು, ಜೂ.8: ಯುಟಿ ಖಾದರ್​​ ಅವರು ಅಧಿಕಾರ ಸ್ವೀಕಾರ ಮಾಡಿದ ನಂತರ ತಮ್ಮ ಆಡಳಿತಕ್ಕೆ ಚುರುಕು ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಆಗಿರುವ ತಪ್ಪುಗಳನ್ನು ಹಾಗೂ ಕೆಲವೊಂದು ಬದಲಾವಣೆಗಳನ್ನು ಮಾಡಲು ಮುಂದಾಗಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಮಂಗಳೂರಿನಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಉನ್ನತ ಅಧಿಕಾರಿಗಳು ಹಾಗೂ ವೈದ್ಯಕೀಯ ತಂಡದ ಪ್ರಮುಖ ಸಭೆಯನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ನಡೆಸಿದ್ದಾರೆ. ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜಿಲ್ಲೆಯ ಸರ್ಕಾರಿ…

Read More