Padma Awards 2026: ಕರ್ನಾಟಕದ ಮೂವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ; ಮಾಹಿತಿ ಇಲ್ಲಿದೆ – Kannada News | Three from Karnataka Honoured with Padma Shri Awards 2026: Here’s the Details
ಬೆಂಗಳೂರು, ಜನವರಿ 25: 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ ಮೂವರು ಸೇರಿ ಒಟ್ಟು 54 ಮಂದಿ ಕೇಂದ್ರ ಸರ್ಕಾರದಿಂದ ನೀಡಲ್ಪಡುವ ಪ್ರತಿಷ್ಠಿತ ಗೌರವಕ್ಕೆ ಭಾಜನರಾಗಿದ್ದಾರೆ. ರಾಜ್ಯದ ಅಂಕೇಗೌಡ, ಡಾ.ಸುರೇಶ್ ಹನಗವಾಡಿಮತ್ತು ಸುಶೀಲಮ್ಮ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಬಾರಿಯೂ ಕೇಂದ್ರ ಸರ್ಕಾರ ತೆರೆ ಮರೆಯ ಸಾಧಕರನ್ನೇ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ. ಹಿಮೊಫಿಲಿಯಾ ಪೀಡಿತ ಮಕ್ಕಳ ಸೇವಕ ಡಾ.ಸುರೇಶ್ ಹನಗವಾಡಿ JJM ಮೆಡಿಕಲ್ ಕಾಲೇಜು ಪ್ರಾಧ್ಯಾಪಕ ಡಾ.ಸುರೇಶ್ ಹನಗವಾಡಿ ಅವರು, ದಾವಣಗೆರೆಯ…