ಪ್ರೀಮಿಯಂ ಮದ್ಯ, ಬಿಯರ್ ದರ ಇಳಿಕೆಯಾದ್ರೂ ಹಳೆ ದರದಲ್ಲೇ ಸೇಲ್: ಮದ್ಯ ಮಾರಾಟಗಾರರ ವಿರುದ್ಧ ಎಣ್ಣೆ ಪ್ರಿಯರ ಆಕ್ರೋಶ

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI

ಬೆಂಗಳೂರು, ಮೇ 29: ಕರ್ನಾಟಕ (Karnataka) ಸರ್ಕಾರ ಜಾರಿಗೆ ತಂದಿರುವ ಹೊಸ ಅಬಕಾರಿ ತೆರಿಗೆ ನೀತಿಯ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣವನ್ನು (Alcohol Content) ಆಧರಿಸಿ ತೆರಿಗೆ ವಿಧಿಸುವ ಹೊಸ ಎಐಬಿ (Alcohol-in-Beverage) ತೆರಿಗೆ ಪದ್ಧತಿಯನ್ನು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಅದರಂತೆ ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಕಡಿಮೆ ತೆರಿಗೆಯನ್ನು ವಿಧಿಸಲಾಗುತ್ತಿದೆ. ಈ ಹೊಸ ನೀತಿಯಿಂದಾಗಿ ಶ್ರೀಮಂತರು ಖರೀದಿಸುವ ಪ್ರೀಮಿಯಂ ವಿಸ್ಕಿ, ಜಿನ್, ಟಕೀಲಾ ಹಾಗೂ ಬಿಯರ್ ಸೇರಿದಂತೆ ಪ್ರೀಮಿಯಂ ಬ್ರ್ಯಾಂಡ್‌ಗಳ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಆದರೆ, ಬಡವರು ಮತ್ತು ಮಧ್ಯಮ ವರ್ಗದವರು ಖರೀದಿಸುವ ಸಾಮಾನ್ಯ ಮದ್ಯದ ಬ್ರ್ಯಾಂಡ್‌ಗಳ ದರ ದುಬಾರಿಯಾಗಿದೆ. ಆದರೆ, ಈ ಬದಲಾವಣೆಯ ನಡುವೆ ಬಾರ್ ಮತ್ತು ರೆಸ್ಟೋರೆಂಟ್‌ಗಳ ಮಾಲೀಕರು ಗ್ರಾಹಕರನ್ನು ಲೂಟಿ ಮಾಡುತ್ತಿದ್ದು, ಮದ್ಯಪ್ರಿಯರ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿದ ಹೊಸ ತೆರಿಗೆ ನೀತಿಯಿಂದಾಗಿ ಪ್ರೀಮಿಯಂ ಮದ್ಯ ಮತ್ತು ಬಿಯರ್ ದರಗಳು ಶೇ 5 ರಿಂದ ಶೇ 24 ರವರೆಗೆ ಇಳಿಕೆ.
  • ಹೊಸ ತೆರಿಗೆಯಿಂದಾಗಿ ಪ್ರೀಮಿಯಂ ಬ್ರ್ಯಾಂಡ್‌ಗಳು ಅಗ್ಗ.
  • ದರ ಇಳಿಕೆಯಾದರೂ ಹಳೇ ಬೆಲೆಗೇ ಮಾರುತ್ತಿರುವ ಬಾರ್ ಮಾಲೀಕರು.

ಬಾರ್ ಮಾಲೀಕರ ಕಿಲಾಡಿತನ: ಅಬಕಾರಿ ಇಲಾಖೆ ಕ್ರಮಕ್ಕೆ ಆಗ್ರಹ

ರಾಜ್ಯದಲ್ಲಿ ಮೇ 11 ರಿಂದ ಜಾರಿಗೆ ಬಂದಿರುವ ಹೊಸ ನಿಯಮದನ್ವಯ ಎಕ್ಸೈಸ್ ಸ್ಲ್ಯಾಬ್ ಅನ್ನು 16 ರಿಂದ 8 ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಬಹುತೇಕ ಪ್ರೀಮಿಯಂ ಬ್ರ್ಯಾಂಡ್‌ಗಳ ಬೆಲೆ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದ್ದರೂ, ಇದರ ಅಧಿಕೃತ ಲಾಭ ಗ್ರಾಹಕರಿಗೆ ತಲುಪುತ್ತಿಲ್ಲ. ಬಹುತೇಕ ವೈನ್ ಸ್ಟೋರ್, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳು ಇಂದಿಗೂ ಬಾಟಲಿಗಳ ಮೇಲಿರುವ ಹಳೆಯ ಗರಿಷ್ಠ ಚಿಲ್ಲರೆ ಬೆಲೆಯನ್ನು (MRP) ತೋರಿಸಿ ಗ್ರಾಹಕರಿಂದ ಜೇಬು ಕತ್ತರಿಸುತ್ತಿವೆ.

ಮತ್ತೊಂದೆಡೆ, ಹೊಸ ತೆರಿಗೆ ನೀತಿಯಿಂದಾಗಿ ಬೆಲೆ ಹೆಚ್ಚಳವಾಗಿರುವ ಸಾಮಾನ್ಯ ಮದ್ಯದ ಬ್ರ್ಯಾಂಡ್‌ಗಳ ಲೇಬಲ್ ಮೇಲೆ ಹಳೆಯ (ಕಡಿಮೆ) ದರವೇ ಮುದ್ರಿತವಾಗಿದ್ದರೂ, ಮಾಲೀಕರು ಹೊಸದಾಗಿ ಹೆಚ್ಚಳಗೊಂಡಿರುವ ದರವನ್ನು ವಸೂಲಿ ಮಾಡುತ್ತಿದ್ದಾರೆ.

ಬಾರ್ ಮಾಲೀಕರ ಕಳ್ಳಾಟದ ವಿರುದ್ಧ ಗ್ರಾಹಕರ ಕಿಡಿ

ಬಾರ್ ಮಾಲೀಕರ ಈ ಇಬ್ಬಂದಿ ನೀತಿಯ ವಿರುದ್ಧ ಗ್ರಾಹಕರಾದ ಮಹೇಶ್, ಶರಣು, ಸುನೀಲ್ ಕುಮಾರ್ ಹಾಗೂ ಶಿವಣ್ಣ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ‘ದರ ಕಡಿಮೆಯಾಗಿರುವ ಮದ್ಯಕ್ಕೆ ಹಳೆಯ ಹೆಚ್ಚಿನ ಬೆಲೆ ಪಡೆಯುತ್ತಾರೆ, ಆದರೆ ದರ ಹೆಚ್ಚಾಗಿರುವ ಮದ್ಯಕ್ಕೆ ಹೊಸ ಹೆಚ್ಚಿನ ಬೆಲೆ ವಸೂಲಿ ಮಾಡುತ್ತಾರೆ. ಇದು ಮದ್ಯಪ್ರಿಯರಿಗೆ ಮಾಡುತ್ತಿರುವ ನೇರ ವಂಚನೆ’ ಎಂದು ಕೆಂಡಕಾರಿದ್ದಾರೆ.

ಇದನ್ನೂ ಓದಿ: ‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ

ಸರ್ಕಾರ ಹೊಸ ನೀತಿಯನ್ನು ಜಾರಿಗೊಳಿಸಿದ್ದರೂ, ಮದ್ಯದಂಗಡಿಗಳ ಮೇಲೆ ಸೂಕ್ತ ನಿಗಾ ಇಡದ ಕಾರಣ ಈ ಕಳ್ಳಾಟ ನಡೆಯುತ್ತಿದ್ದು, ಅಬಕಾರಿ ಇಲಾಖೆಯು ತಕ್ಷಣವೇ ಇಂತಹ ಮದ್ಯದಂಗಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೆಮಿಮಾ ಮಿಂಚಿಂಗ್: ಟೀಮ್ ಇಂಡಿಯಾಗೆ ಭರ್ಜರಿ ಜಯ

ಚೆಲ್ಮ್ಸ್‌ಫೋರ್ಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾದ ಹಂಗಾಮಿ ನಾಯಕಿ ಸ್ಮೃತಿ ಮಂಧಾನ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ್ತಿಯಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ (0) ಶೂನ್ಯಕ್ಕೆ ಔಟಾಗಿದ್ದರು. ಇನ್ನು ಶಫಾಲಿ ವರ್ಮಾ ಕಲೆಹಾಕಿದ್ದು ಕೇವಲ 2 ರನ್​ ಮಾತ್ರ. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಯಾಸ್ತಿಕಾ ಭಾಟಿಯಾ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ 40 ಎಸೆತಗಳಲ್ಲಿ 54 ರನ್​ಗಳನ್ನು ಬಾರಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೆಮಿಮಾರೊಡ್ರಿಗಸ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. 40 ಎಸೆತಗಳನ್ನು ಎದುರಿಸಿದ ಜೆಮಿಮಾ 1 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 69 ರನ್​ ಸಿಡಿಸಿದರು. ಈ ಸ್ಫೋಟಕ ಅರ್ಧಶತಕದೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 188 ರನ್ ಕಲೆಹಾಕಿತು.

189 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 150 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 38 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

 

Source link

Horoscope Today: ಇಂದು ಈ ರಾಶಿಯವರ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 29, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ತ್ರಯೋದಶಿ ಮತ್ತು ಸ್ವಾತಿ ನಕ್ಷತ್ರದ ವಿಶೇಷತೆಯನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 10:40 ರಿಂದ ಮಧ್ಯಾಹ್ನ 12:16ರ ವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:17 ರಿಂದ 1:53ರ ವರೆಗೆ ಇರುತ್ತದೆ.

ಇಂದು ಶುಕ್ರವಾರವಾದ್ದರಿಂದ ಶ್ರೀ ಮಹಾಲಕ್ಷ್ಮಿಯ ಆರಾಧನೆಗೆ ಅತ್ಯಂತ ಪ್ರಶಸ್ತವಾದ ದಿನವಾಗಿದೆ. ಮಹಾಲಕ್ಷ್ಮಿಯ ದರ್ಶನ ಅಥವಾ ಕುಂಕುಮಾರ್ಚನೆ ಮಾಡುವುದರಿಂದ ಶುಭವಾಗುತ್ತದೆ. ಗ್ರಹಗಳ ಸ್ಥಾನದ ಕುರಿತು ಹೇಳುವುದಾದರೆ, ಇಂದು ಬೆಳಗ್ಗೆ 11:14ಕ್ಕೆ ಬುಧ ಗ್ರಹವು ವೃಷಭ ರಾಶಿಯಿಂದ ಮಿಥುನ ರಾಶಿಗೆ ಸಂಚರಿಸಲಿದೆ. ಈಗಾಗಲೇ ಗುರು ಮತ್ತು ಶುಕ್ರ ಮಿಥುನ ರಾಶಿಯಲ್ಲಿ ಇರುವುದರಿಂದ, ಬುಧ ಗ್ರಹದ ಸೇರ್ಪಡೆ ವಿಶೇಷ ಮಹತ್ವವನ್ನು ಪಡೆದಿದೆ ಎಂದು ಗುರೂಜಿ ಹೇಳಿದ್ದಾರೆ.

 

 

 

Source link

ಜಪಾನ್‌ಗೆ ಭಾರತೀಯ ಮಾವಿನ ರಫ್ತು ತಾತ್ಕಾಲಿಕ ಸ್ಥಗಿತ: ರೈತರಲ್ಲಿ ಆತಂಕ

ನವದೆಹಲಿ, ಮೇ 29: ಸುಮಾರು 20 ವರ್ಷಗಳ ನಿರಂತರ ವ್ಯಾಪಾರದ ನಂತರ, ಜಪಾನ್ ಈ ಋತುವಿನಲ್ಲಿ (ಏಪ್ರಿಲ್-ಜೂನ್) ಭಾರತೀಯ ಮಾವಿನ ಹಣ್ಣುಗಳ(Mangoes) ಆಮದನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಇದು ಭಾರತದ ಮಾವು ರಫ್ತುದಾರರು ಮತ್ತು ರೈತರಲ್ಲಿ ಭಾರಿ ಕಳವಳ ಮೂಡಿಸಿದೆ.

ನಿಷೇಧಕ್ಕೆ ಕಾರಣವೇನು?
ಭಾರತದಿಂದ ಮಾವಿನ ಹಣ್ಣುಗಳನ್ನು ಜಪಾನ್‌ಗೆ ಕಳುಹಿಸುವ ಮುನ್ನ ಆವಿ ಶಾಖ ಚಿಕಿತ್ಸೆ (VHT – Vapor Heat Treatment) ಪ್ರಕ್ರಿಯೆಗೆ ಒಳಪಡಿಸುವುದು ಕಡ್ಡಾಯವಾಗಿದೆ. ಇದು ಹಣ್ಣಿನ ನೊಣಗಳು ಮತ್ತು ಕೀಟಗಳನ್ನು ಕೊಲ್ಲುವ ವಿಧಾನವಾಗಿದೆ.

ಲೋಪದೋಷ ಪತ್ತೆ: ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ರೆಹಮಾನ್‌ಪುರದಲ್ಲಿರುವ ವಿಎಚ್‌ಟಿ ಕೇಂದ್ರವನ್ನು ಜಪಾನ್ ಅಧಿಕಾರಿಗಳು ತಪಾಸಣೆ ನಡೆಸಿದಾಗ, ಅಲ್ಲಿನ ನೈರ್ಮಲ್ಯ , ವ್ಯವಸ್ಥೆಯಲ್ಲಿ ಕೆಲವು ತಾಂತ್ರಿಕ ನ್ಯೂನತೆಗಳು ಕಂಡುಬಂದಿವೆ. ಇದೇ ಕಾರಣಕ್ಕೆ ಮಾರ್ಚ್ 25, 2026 ರ ನಂತರ ನೀಡಲಾದ ತಪಾಸಣಾ ಪ್ರಮಾಣಪತ್ರಗಳಿರುವ ಮಾವಿನ ಸಾಗಣೆಯನ್ನು ಸ್ವೀಕರಿಸುವುದಿಲ್ಲ ಎಂದು ಜಪಾನ್‌ನ ಯೊಕೊಹಾಮಾ ಸಸ್ಯ ಸಂರಕ್ಷಣಾ ಸಂಘ ತಿಳಿಸಿದೆ. ಭಾರತ ತನ್ನ ತಪಾಸಣಾ ವ್ಯವಸ್ಥೆಯನ್ನು ಸುಧಾರಿಸುವವರೆಗೆ ಈ ನಿಷೇಧ ಮುಂದುವರಿಯಲಿದೆ.

ಮತ್ತಷ್ಟು ಓದಿ: ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಮಾವು ಪ್ರಿಯರು

ಪ್ರಭಾವಕ್ಕೆ ಒಳಗಾಗುವ ತಳಿಗಳು
ಈ ನಿರ್ಧಾರದಿಂದಾಗಿ ಜಪಾನ್‌ನಲ್ಲಿ ಹೆಚ್ಚು ಜನಪ್ರಿಯವಾಗಿರುವ ಭಾರತದ ಪ್ರಮುಖ ಮಾವಿನ ತಳಿಗಳ ರಫ್ತಿಗೆ ಹೊಡೆತ ಬಿದ್ದಿದೆ:

ಅಲ್ಫೋನ್ಸೊ (ಹಾಪುಸ್)

ಕೇಸರ್ (ಜಪಾನ್‌ನಲ್ಲಿ ಅತಿ ಹೆಚ್ಚು ಬೇಡಿಕೆ ಇರುವ ತಳಿ)

ಲ್ಯಾಂಗ್ರಾ

ಬಂಗನಪಲ್ಲಿ

ಭಾರತದ ವ್ಯಾಪಾರದ ಮೇಲಾಗುವ ಪರಿಣಾಮ
ಭಾರತೀಯ ಮಾವಿನ ಹಣ್ಣಿಗೆ ಯುಎಇ, ಯುಎಸ್ ಮತ್ತು ಯುಕೆ ದೊಡ್ಡ ಮಾರುಕಟ್ಟೆಗಳಾಗಿದ್ದು, ಜಪಾನ್ ಅತಿ ದೊಡ್ಡ ಖರೀದಿದಾರನೇನಲ್ಲ. ಆದರೂ ಈ ನಿಷೇಧವು ಆರ್ಥಿಕವಾಗಿ ಪರಿಣಾಮ ಬೀರಲಿದೆ. ಜಪಾನ್‌ನಲ್ಲಿ ಕೃಷಿ ನಿಯಮಗಳು ಕಠಿಣವಾಗಿರುವುದರಿಂದ, ಅಲ್ಲಿ ಭಾರತೀಯ ಮಾವಿನ ಹಣ್ಣುಗಳಿಗೆ ಬೇರೆ ದೇಶಗಳಿಗಿಂತ ಹೆಚ್ಚಿನ ಬೆಲೆ (ಪ್ರೀಮಿಯಂ ದರ) ಸಿಗುತ್ತಿತ್ತು. ಇದರಿಂದ ರಫ್ತುದಾರರ ಗಳಿಕೆಗೆ ನಷ್ಟವಾಗಲಿದೆ.

ಈಗಾಗಲೇ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ತೀವ್ರ ಉಷ್ಣ ಅಲೆಯಿಂದಾಗಿ ಅಲ್ಫೋನ್ಸೊ ಇಳುವರಿ ಕಡಿಮೆಯಾಗಿದೆ. ಇದರೊಂದಿಗೆ ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದಾಗಿ ಸರಕು ಸಾಗಣೆ (ಲಾಜಿಸ್ಟಿಕ್ಸ್) ವೆಚ್ಚವೂ ಹೆಚ್ಚಾಗಿದೆ. ಈ ಸಂಕಷ್ಟದ ಸಮಯದಲ್ಲಿ ಜಪಾನ್ ನಿಷೇಧ ಹೇರಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಮುಂದೇನು?: ಈ ನಿಷೇಧ ಯಾವಾಗ ತೆರವಾಗುತ್ತದೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಭಾರತದ APEDA ಮತ್ತು ಜಪಾನ್‌ನ ಸಸ್ಯ ಸಂರಕ್ಷಣಾ ಕೇಂದ್ರಗಳು ಮಾತುಕತೆಯ ಮೂಲಕ ತಾಂತ್ರಿಕ ದೋಷಗಳನ್ನು ಸರಿಪಡಿಸಿದ ನಂತರವಷ್ಟೇ ರಫ್ತು ಪುನರಾರಂಭಗೊಳ್ಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Daily Devotional: ದೇವಾಲಯಗಳಲ್ಲಿ ಮಹಿಳೆಯರು ಅರ್ಚಕರಾಗಬಹುದಾ?

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ದೇವಾಲಯಗಳಲ್ಲಿ ಮಹಿಳೆಯರು ಅರ್ಚಕರಾಗಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.  ಭಗವಂತನ ಮತ್ತು ಭಕ್ತರ ನಡುವೆ ಸೇತುವೆಯಾಗಿರುವ ಅರ್ಚಕ ವೃತ್ತಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರ” ಎಂಬ ನಾಣ್ಣುಡಿಯಂತೆ, ಅರ್ಚಕರ ಭಕ್ತಿ ಮತ್ತು ಪ್ರಭಾವದಿಂದ ಶಿಲೆಯಲ್ಲಿಯೂ ಶಂಕರನ ಅನುಭವ ಸಾಧ್ಯ. ಈ ಪವಿತ್ರ ವೃತ್ತಿಯಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಇದಕ್ಕೆ ಉತ್ತರ ಸ್ಪಷ್ಟ: ಧಾರ್ಮಿಕ ಆಚರಣೆಗಳಲ್ಲಿ ಲಿಂಗಭೇದಕ್ಕೆ ಪ್ರಾಶಸ್ತ್ಯವಿಲ್ಲ.

ಮಹಿಳೆಯರು ದೇವಾಲಯಗಳಲ್ಲಿ, ಹೋಮ-ಯಜ್ಞಾದಿಗಳಲ್ಲಿ ಅರ್ಚಕರಾಗಿ ಕಾರ್ಯನಿರ್ವಹಿಸಲು ಅರ್ಹರಾಗಿದ್ದಾರೆ. ಇದಕ್ಕೆ ಅಗತ್ಯವಿರುವುದು ತಾಳ್ಮೆ, ಶಾಂತಿ ಮತ್ತು ಶುದ್ಧ ಮನಸ್ಸು. ವೇದಗಳಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂಬುದಕ್ಕೆ ಮೈತ್ರೇಯಿ, ಲೋಪಮುದ್ರರಂತಹ ಮಹಾನ್ ವಿದುಷಿಯರು ಉದಾಹರಣೆಯಾಗಿದ್ದಾರೆ. ಅನೇಕ ಮಹಿಳೆಯರು ಈಗಾಗಲೇ ಮಠಾಧೀಶರಾಗಿಯೂ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅರ್ಹತೆ ಮತ್ತು ಅಧ್ಯಯನಕ್ಕೆ ಹೆಚ್ಚಿನ ಪ್ರಾಶಸ್ತ್ಯವಿರುವುದರಿಂದ, ಮಹಿಳೆಯರು ಭಕ್ತಿ ಮತ್ತು ಶ್ರದ್ಧೆಯಿಂದ ಈ ವೃತ್ತಿಯನ್ನು ನಿರ್ವಹಿಸಬಹುದು ಎಂದು ಗುರೂಜಿ ತಿಳಿಸಿದ್ದಾರೆ.

 

 

Source link

ಚಿತ್ರರಂಗದಿಂದ ದೂರ ಸರಿಯುತ್ತಿದ್ದಾರೆ ಕರಣ್; ಬಾಲಿವುಡ್ ಪ್ರಮುಖರ ಜೊತೆ ಅಂತರ

‘ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರು (Karan Joahr) ಇತ್ತೀಚೆಗೆ ಬಾಲಿವುಡ್​ ಚಿತ್ರರಂಗದಿಂದ ದೂರ ಸರಿಯುತ್ತಿದ್ದಾರಾ?’- ಹೀಗೊಂದು ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ಮೊದಲು ತಮ್ಮ ಧರ್ಮ ಪ್ರೊಡಕ್ಷನ್ಸ್ ಹೌಸ್​​ನ ಶೇ.50ರಷ್ಟು ಷೇರನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಮಾರಾಟ ಮಾಡಿದ್ದರು. ಈಗ ಬಾಲಿವುಡ್​ನ ಪ್ರಮುಖರನ್ನೇ ಇನ್​​ಸ್ಟಾಗ್ರಾಮ್​​ನಲ್ಲಿ ಅನ್​ಫಾಲೋ ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕರಣ್ ಜೋಹರ್ ಈ ದಿಢೀರ್ ಬದಲಾವಣೆ ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಚಿತ್ರರಂಗದ ಜೊತೆ ದಶಕಗಳ ಕಾಲ ಆಪ್ತ ಒಡನಾಟ ಹೊಂದಿರುವ ಕರಣ್, ತಮ್ಮ ಅತ್ಯಂತ ಆಪ್ತ ಸ್ನೇಹಿತರಾದ ಶಾರುಖ್ ಖಾನ್, ಕರೀನಾ ಕಪೂರ್ ಖಾನ್, ಮನೀಶ್ ಮಲ್ಹೋತ್ರಾ ಮತ್ತು ತಾವೇ ಚಿತ್ರರಂಗಕ್ಕೆ ಪರಿಚಯಿಸಿದ್ದ ಆಲಿಯಾ ಭಟ್ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ. ಕೇವಲ ಇಷ್ಟೇ ಅಲ್ಲದೆ, ವರುಣ್ ಧವನ್, ಸಿದ್ದಾರ್ಥ್ ಮಲ್ಹೋತ್ರಾ, ಮಲೈಕಾ ಅರೋರಾ ಹಾಗೂ ಅನನ್ಯಾ ಪಾಂಡೆ ಅವರೂ ಸಹ ಕರಣ್ ಅವರ ಫಾಲೋಯಿಂಗ್ ಲಿಸ್ಟ್‌ನಿಂದ ಮಾಯವಾಗಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಬರೋಬ್ಬರಿ 1.7 ಕೋಟಿಗೂ (17.5 ಮಿಲಿಯನ್) ಹೆಚ್ಚು ಫಾಲೋವರ್ಸ್ ಹೊಂದಿರುವ ಕರಣ್ ಜೋಹರ್, ಪ್ರಸ್ತುತ ಫಾಲೋ ಮಾಡುತ್ತಿರುವುದು ಕೇವಲ 78 ಖಾತೆಗಳನ್ನು ಮಾತ್ರ. ವಿಶೇಷವೆಂದರೆ, ತಮ್ಮ ಮುಂಬರುವ ‘ನಾಗ್‌ಜಿಲ್ಲಾ’ ಸಿನಿಮಾದ ನಾಯಕ ಕಾರ್ತಿಕ್ ಆರ್ಯನ್ ಅವರನ್ನೂ ಅವರು ಅನ್‌ಫಾಲೋ ಮಾಡಿದ್ದಾರೆ. ಪ್ರಿಯಾಂಕಾ ಚೋಪ್ರ ಅವರನ್ನು ಕರಣ್ ಫಾಲೋ ಮಾಡುತ್ತಿದ್ದಾರೆ ಈ ದಿಢೀರ್ ನಿರ್ಧಾರಕ್ಕೆ ನಿಖರ ಕಾರಣವೇನೆಂಬುದನ್ನು ಕರಣ್ ಜೋಹರ್ ಇದುವರೆಗೆ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ಬದಲಾದ ಕರಣ್ ಜೋಹರ್; ಬಾಲಿವುಡ್ ನೆಪೋ ಕಿಡ್ಸ್ ಕಳ್ಳಾಟ ಬಯಲು ಮಾಡಿದ ನಿರ್ಮಾಪಕ

ಕರಣ್ ಜೋಹರ್ ಅವರು ತಮ್ಮ ಒಡೆತನದ ‘ಧರ್ಮ ಪ್ರೊಡಕ್ಷನ್ಸ್’ ಸಂಸ್ಥೆಯ ಶೇಕಡಾ 50 ರಷ್ಟು ಷೇರುಗಳನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಧಾರ್ ಪೂನಾವಾಲಾ ಅವರ ‘ಸೆರೀನ್ ಪ್ರೊಡಕ್ಷನ್ಸ್’ಗೆ 1,000 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಿದ್ದರು. ಈ ಬೆಳವಣಿಗೆಯಿಂದ ಕರಣ್ ಅವರು ಸಿನಿಮಾ ರಂಗದಿಂದ ದೂರ ಹೋಗುತ್ತಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಡಿಕೆ ಶಿವಕುಮಾರ್​ಗೆ ಪಟ್ಟಾಭಿಷೇಕದ ತಯಾರಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಡಿಸಿಎಂ

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್Image Credit source: tv9

ಬೆಂಗಳೂರು, ಮೇ 29: ಕರ್ನಾಟಕ ಕಾಂಗ್ರೆಸ್ (Congress) ಕೋಟೆಯಲ್ಲಿ ಕೊನೆಗೂ ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆಬಿದ್ದಿದ್ದು, ರಾಜ್ಯ ರಾಜಕೀಯ ಚಟುವಟಿಕೆಗಳು ಈಗ ದೆಹಲಿ ಮಟ್ಟಕ್ಕೆ ಶಿಫ್ಟ್ ಆಗಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ರಾಜೀನಾಮೆ ನೀಡುತ್ತಿದ್ದಂತೆಯೇ, ನೂತನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ, ಕನಕಪುರ ಬಂಡೆ ಡಿಕೆ ಶಿವಕುಮಾರ್ (DK Shivakumar) ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಬುಧವಾರ ನಡೆದ ಸಚಿವರ ಉಪಾಹಾರ ಕೂಟದಲ್ಲೇ ಸಿದ್ದರಾಮಯ್ಯ ಅವರು, ‘ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರೇ ಆಗಲಿದ್ದಾರೆ’ ಎಂದು ತಮ್ಮ ಸಹೋದ್ಯೋಗಿಗಳಿಗೆ ಅಧಿಕೃತವಾಗಿ ಮಾಹಿತಿ ನೀಡಿದ್ದರು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ, ನೂತನ ಸಚಿವ ಸಂಪುಟ ರಚನೆ ಹಾಗೂ ಪ್ರಮಾಣವಚನದ ಮುಹೂರ್ತ ನಿಗದಿಪಡಿಸುವ ಸಲುವಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಮುಖ್ಯಾಂಶಗಳು

  • ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣಕ್ಕೆ ಹೈಕಮಾಂಡ್ ಮಟ್ಟದಲ್ಲಿ ಗ್ರೀನ್ ಸಿಗ್ನಲ್.
  • ನೂತನ ಮುಖ್ಯಮಂತ್ರಿಯೊಂದಿಗೆ 8 ರಿಂದ 10 ಸಚಿವರ ಪ್ರಮಾಣವಚನಕ್ಕೆ ಪ್ಲಾನ್.
  • ಜ್ಯೋತಿಷಿ ದ್ವಾರಕನಾಥ್ ಅವರಿಂದ 3 ಮುಹೂರ್ತ ಪಡೆದ ಡಿಕೆಶಿ.

ದೆಹಲಿಯಲ್ಲಿ ಡಿಕೆ ಶಿವಕುಮಾರ್ ತಂತ್ರ

ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯನ್ನು ಭೇಟಿಯಾಗಿ, ಹೊಸ ಸಚಿವ ಸಂಪುಟದ ಮಾದರಿ ಹಾಗೂ ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಲಿರುವ 8 ರಿಂದ 10 ಪ್ರಮುಖ ಸಚಿವರ ಪಟ್ಟಿಯ ಕುರಿತು ಹೈಕಮಾಂಡ್ ನಿರ್ದೇಶನ ಪಡೆಯಲಿದ್ದಾರೆ. ಇದೇ ವೇಳೆ, ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲು ತಮ್ಮ ಆಪ್ತ ಜ್ಯೋತಿಷಿ ದ್ವಾರಕನಾಥ್ ಗುರೂಜಿ ಅವರಿಂದ ಮೂರು ವಿಭಿನ್ನ ಶುಭ ಮುಹೂರ್ತಗಳನ್ನು ಪಡೆದಿರುವ ಡಿಕೆಶಿ, ಹೈಕಮಾಂಡ್ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಲಭ್ಯತೆಯನ್ನು ನೋಡಿಕೊಂಡು ದಿನಾಂಕ ಫಿಕ್ಸ್ ಮಾಡಲು ಮುಂದಾಗಿದ್ದಾರೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಅಧಿಕೃತ ಸಭೆ ನಡೆಸಿ, ಶಾಸಕಾಂಗ ನಾಯಕನ ಆಯ್ಕೆಯಾದ ಬಳಿಕ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಡಿಕೆ ಸಹೋದರರ ಮೌನ ಮತ್ತು ಅಭಿಮಾನಿಗಳ ಜೈಕಾರ

ಇಷ್ಟೆಲ್ಲಾ ಸಂಚಲನ ನಡೆಯುತ್ತಿದ್ದರೂ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ ಸದ್ಯಕ್ಕೆ ಮೌನ ಮಂತ್ರ ಅನುಸರಿಸುತ್ತಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಅಧಿಕೃತ ಹೇಳಿಕೆ ನೀಡದೆ ಕೇವಲ ಕೈಮುಗಿಯುತ್ತಾ ವಿಕ್ಟರಿ ಸಿಂಬಲ್ ತೋರಿಸುತ್ತಿರುವ ಡಿಕೆಶಿ ನಡೆ ಕುತೂಹಲ ಮೂಡಿಸಿದೆ. ಡಿ.ಕೆ. ಸುರೇಶ್ ಪ್ರತಿಕ್ರಿಯಿಸಿ, ‘ಪಕ್ಷದ ಮುಂದಿನ ಅಧಿಕೃತ ನಿರ್ಧಾರಕ್ಕೆ ನಾವೆಲ್ಲರೂ ಕಾಯೋಣ’ ಎಂದಿದ್ದಾರೆ. ಇತ್ತ ಬೆಂಗಳೂರಿನ ಸದಾಶಿವನಗರದ ನಿವಾಸದಿಂದ ಡಿಕೆಶಿ ಹೊರಡುವಾಗ ಅಭಿಮಾನಿಗಳು ‘ಡಿಕೆ ಡಿಕೆ’ ಎಂದು ಘೋಷಣೆ ಕೂಗಿದರೆ, ವಿಜಯಪುರದ ಗಾಂಧಿ ವೃತ್ತದಲ್ಲಿ ಅಭಿಮಾನಿಗಳು ಬೃಹತ್ ಬ್ಯಾನರ್ ಹಿಡಿದು, ಪಟಾಕಿ ಸಿಡಿಸಿ ಭರ್ಜರಿಯಾಗಿ ಸಂಭ್ರಮಿಸಿದ್ದಾರೆ.

ಹೈಕಮಾಂಡ್ ನಾಯಕರಿಗೆ ಕೃತಜ್ಞತೆ ಸಲ್ಲಿಸಲಿರುವ ಸಿದ್ದರಾಮಯ್ಯ

ಮತ್ತೊಂದೆಡೆ, ಮಧ್ಯರಾತ್ರಿಯೇ ದೆಹಲಿ ತಲುಪಿರುವ ಸಿದ್ದರಾಮಯ್ಯ ಅವರು ಕರ್ನಾಟಕ ಭವನಕ್ಕೆ ತೆರಳದೆ ನೇರವಾಗಿ ಐಟಿಸಿ ಮೌರ್ಯ (ITC Maurya) ಹೋಟೆಲ್‌ನಲ್ಲಿ ತಂಗಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಲಿರುವ ಸಿದ್ದರಾಮಯ್ಯ, ತಮ್ಮ ಅಧಿಕಾರಾವಧಿಗೆ ನೀಡಿದ ಸಹಕಾರಕ್ಕಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ವೈಯಕ್ತಿಕವಾಗಿ ಕೃತಜ್ಞತೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಉಪಾಹಾರ ಕೂಟದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆತ್ಮೀಯ ಕ್ಷಣ! ಇಲ್ಲಿವೆ ಅಪರೂಪದ ಚಿತ್ರಗಳು

ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿಯಾಗಿ ರಾಜ್ಯ ರಾಜಕೀಯದ ಮುಂದಿನ ಸೌಹಾರ್ದಯುತ ನಡೆಗಳ ಬಗ್ಗೆ ಚರ್ಚಿಸಲಿದ್ದಾರೆ. ಒಟ್ಟಿನಲ್ಲಿ ಕರುನಾಡಿನ ಜನರ ಚಿತ್ತವೀಗ ಸಂಪೂರ್ಣವಾಗಿ ದೆಹಲಿಯತ್ತ ನೆಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:53 am, Fri, 29 May 26

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಸಹವಾಸ ದುಷ್ಪರಿಣಾಮವನ್ನು ಉಂಟುಮಾಡುವುದು..

ಮೇಷ ರಾಶಿ:

ನಿಮ್ಮ ಮಾತು ಸತ್ಯವಾಗಿದ್ದು ಕುಟುಂಬದವರು ಅಚ್ಚರಿಪಡುವರು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಯಾರ ಮಾತನ್ನೂ ಆಲಿಸುವ ವ್ಯವಧಾನ ಇಂದು ಇರದು. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ಚಿಸುವಿರಿ.

ವೃಷಭ ರಾಶಿ :

ನಿಮ್ಮ ಮಾತಿಗೆ ಬೆಲೆಯು ಕಡಿಮೆಯಾದೀತು. ಮಾರ್ಗಾಯಾಸದಿಂದ ವಿಶ್ರಾಂತಿ ಪಡೆಯುವಿರಿ. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿದೆ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ಸಾಮಾಜಿಕ ಬದ್ಧತೆಯನ್ನು ಪೂರೈಸುವಿರಿ. ನಿಮ್ಮ ಕೆಲವು ಅಭ್ಯಾಸವನ್ನು ನೀವು ಬಿಡಬೇಕಾಗಿಬರಬಹುದು. ಹೊಸತನ ಅನ್ವೇಷಣೆಯಲ್ಲಿ ನೀವು ಇರುವಿರಿ. ದೈವವನ್ನು ದೂರುತ್ತ ಕೂರುವುದು ಬೇಡ.‌ ಬಂಧುಗಳ ವಿಚಾರದಲ್ಲಿ ನಿಮಗೆ ಪೂರ್ಣವಾದ ನಂಬಿಕೆ ಇರದು.

ಮಿಥುನ ರಾಶಿ :

ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ನಿಮ್ಮ ಗುಣಗಳು ನಿಮ್ಮನ್ನು ಕಟ್ಟಿಹಾಕಬಹುದು. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಸಮಸ್ಯೆಗೆ ಬೇಕಾದ ಪರಿಹಾರವನ್ನು ತಿಳಿದೂ ಅದನ್ನು ಮಾಡಲಾರಿರಿ. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ.

ಕರ್ಕಾಟಕ ರಾಶಿ :

ಆಕಸ್ಮಿಕವಾಗಿ ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಆಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ನಿಮ್ಮ ಅಸ್ತಿತ್ವ ಮರೆಯಾಗದಂತೆ ನೋಡಿಕೊಳ್ಳಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು. ಕೆಲವನ್ನು ಬಿಟ್ಟುಕೊಡುವುದು ಅನಿವಾರ್ಯವಗಬಹುದು.

ಸಿಂಹ ರಾಶಿ:

ನಿಮ್ಮ ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಲು ಇಷ್ಟಪಡುವುದಿಲ್ಲ. ಅನೇಕ ಒತ್ತಡಗಳು ನಿಮ್ಮ ಬಲವನ್ನು ಕುಗ್ಗಿಸುವುದು. ಮನೆಯ ವ್ಯವಹಾರದಲ್ಲಿ ಭಾಗವಹಿಸಲು ಇಷ್ಟವಾಗದು. ಇದರಿಂದ ಕುಟುಂಬವು ಬೇಸರಗೊಳ್ಳುವುದು. ಆದಾಯದ ಮಟ್ಟವು ಇಂದು ಅಧಿಕವಾಗಲಿದೆ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ.

ಕನ್ಯಾ ರಾಶಿ :

ಹಿರಿಯರ ಪಾಲನ್ನೂ ನೀವೇ ಪಡೆಯುವ ಆಸೆ ಇದೆ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ನಿಮ್ಮ ಆಲೋಚನೆ ಹಾಗೂ ಸಾಮರ್ಥ್ಯದಿಂದ ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಡುವುದು ಒಳ್ಳೆಯದಲ್ಲ. ಅನೇಕ ಗೊಂದಲಗಳು ನಿಮ್ಮ ಜೀವನದಲ್ಲಿ ಬರುವುದು. ಯಾರನ್ನೂ ಅಪ್ರಯೋಜಕರಂತೆ ನೋಡುವುದು ಬೇಡ. ಆಪ್ತರು ನಿಮಗೆ ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು.

ತುಲಾ ರಾಶಿ :

ಇಂದಿನ ಆಯಾಸದಿಂದ ಯಾವ ಉತ್ಸಾಹವೂ ನಿಮ್ಮಲ್ಲಿ ಇರದು. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ವಾಹನವು ನಾಷ್ಟವಾಗುವ ಸಾಧ್ಯತೆಯಿದೆ. ಹೊಸ ಹವ್ಯಾಸದ ಕಡೆಗೆ ಗಮನವಿರಲಿ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ಇಂದು ನೀವು ಕೆಲವು ಅನಗತ್ಯ ಖರ್ಚುಗಳನ್ನು ಸಹ ಅನುಭವಿಸಬಹುದು. ದುಂದುವೆಚ್ಚ ಮಾಡುವ ಸಾಧ್ಯತೆಯೂ ಇದೆ. ಆಪ್ತರು ನಿಮಗೆ ಪ್ರೀತಿಯಿಂದ ಆತಿಥ್ಯವನ್ನು ಕೊಡಿಸುವರು.

ವೃಶ್ಚಿಕ ರಾಶಿ:

ಅನುಭವಿಗಳ ಜೊತೆಗಿನ ಒಡನಾಟದದಿಂದ ಉದ್ಯಮವು ಹೆಚ್ಚಾಗುವುದು. ಉತ್ತಮ‌ ವಿಚಾರಗಳ ಕಡೆ ಗಮನವಿರಲಿ. ಪೋಷಕರ ಬೆಂಬಲ ಮತ್ತು ಆಶೀರ್ವಾದದಿಂದ ಸಮಾಧಾನವಿರುತ್ತದೆ. ವ್ಯವಹಾರದಿಂದ ಬಾಂಧವ್ಯ ನಿರ್ಣಯ ಮಾಡುವುದು ಬೇಡ. ನಿಮ್ಮ ಬಂಧುಗಳ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮಾಡಬೇಡಿ. ನಿಮ್ಮ ಸಂಗಾತಿಯ ಜೊತೆ ನಿಮ್ಮ ಸಂಬಂಧವು ಹಿಂದಿಗಿಂತ ಚೆನ್ನಾಗುವುದು. ನೀವು ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ.

ಧನು ರಾಶಿ:

ದೇಹದಂಡನೆಯಿಂದ ದಿನದ ಕೊನೆಯಲ್ಲಿ ಅನಾರೋಗ್ಯದಂತೆ ಅನ್ನಿಸುವುದು. ನಿಂತಲ್ಲೇ ಇರುವ ಬುದ್ಧಿ ಹಾಗೂ ಮನಸ್ಸಿನಿಂದ ಕೆಟ್ಟ ಆಲೋಚನೆಗಳು ಬರಲಿವೆ. ಹಿತಶತ್ರುಗಳ ಜಾಲದಲ್ಲಿಯೇ ಇದ್ದರೂ ಅರಿವಿಗೆ ಬಾರದು. ಸ್ವಾತಂತ್ರ್ಯವನ್ನು ಪಡೆಯಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ನೀವು ನಿಮ್ಮ ಹೆತ್ತವರ ಬಗ್ಗೆ ವಿಶೇಷ ಕಾಳಜಿ ವಹಿಸುವಿರಿ. ನಿಮ್ಮ ಅಪೂರ್ಣ ಕೆಲಸವು ಇಂದು ಪೂರ್ಣಗೊಳ್ಳುತ್ತದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿದೆ.

ಮಕರ ರಾಶಿ :

ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಇಂದಿನ ಶಕ್ತಿಗೆ ಅನುಗುಣವಾಗಿ ಉದ್ಯೋಗವನ್ನು ಮಾಡುವುದು ಉತ್ತಮ. ಸತ್ಸಂಗದಲ್ಲಿ ದಿನ ಕಳೆಯುವಿರಿ. ಉದ್ಯೋಗದ ಹುಡುಕಾಟದಲ್ಲಿ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಉಂಟಾಗುವುದು. ಅಮೂಲ್ಯ ವಸ್ತುವಿನ ಬಗ್ಗೆ ನಿಷ್ಕಾಳಜಿ ಸರಿಯಲ್ಲ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು.

ಕುಂಭ ರಾಶಿ :

ನಿಮ್ಮ ಗುರಿಯನ್ನು ಆಪ್ತರೇ ತಪ್ಪಿಸಬಹುದು. ಉಡುಗೆ ತೊಡುಗೆಯ ವ್ಯವಹಾರಕ್ಕಾಗಿ ಮ‌ನೆಯಲ್ಲಿ ಕಲಹ. ನಿಮ್ಮನ್ನು ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ನಿಮ್ಮಲ್ಲಿ ಕಲಾವೃಕ್ಷವಿದ್ದು ಅದಕ್ಕೆ ಸರಿಯಾಗಿ ನೀರೆರಿಯಿರಿ. ಇದೇ ನಿಮ್ಮನ್ನು ಎತ್ತರಕ್ಕೆ ಒಯ್ಯಲಿದೆ. ಹಳೆಯ ಖಾಯಿಲೆಯು ಮತ್ತೆ ಮರುಕಳಿಸಬಹುದು. ಪ್ರವಾಸ ವಿಚಾರದಲ್ಲಿ ಬಹಳ ಗೊಂದಲವಿರುವುದು. ಕೆಲಸದ ವಿಷಯದಲ್ಲಿ ನೀವು ಯಾರ ಮಾತನ್ನೂ ನೀವು ಕೇಳುವುದಿಲ್ಲ.

ಮೀನ ರಾಶಿ :

ತಪ್ಪುಗಳು ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಶ್ಚಿಂತೆಯಿಂದ ಮುನ್ನಡೆಯಿರಿ. ಪರಿಚಿತರ ಜೊತೆ ಅಕಾರಣ ತಿರುಗಾಟವನ್ನು ಮನೆಯವರು ನಿಲ್ಲಿಸುವರು.‌ ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಉತ್ತಮ ಸ್ನೇಹಿತರ ಸಮೂಹವೂ ಸಹ ಹೆಚ್ಚಾಗಲಿದೆ. ಕುಟುಂಬ ಸದಸ್ಯರಿಂದ ಗೌರವವನ್ನೂ ಪಡೆಯುವಿರಿ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ವಿಶಾಖಾ, ಯೋಗ : ವ್ಯತಿಪಾತ್, ಕರಣ : ಗರಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:45 – 12:22, ಯಮಗಂಡ ಕಾಲ 15:35 – 17:11, ಗುಳಿಕ ಕಾಲ 07:33 – 09:09

-ಲೋಹಿತ ಹೆಬ್ಬಾರ್-8762924271 (what’s app only)

Source link

IPL 2026: ರಾಜಸ್ಥಾನ್ ಟ್ರೋಫಿ ಗೆಲ್ಲುವುದು ಕಷ್ಟ ಎನ್ನುತ್ತಿವೆ ಅಂಕಿ ಅಂಶಗಳು

ಐಪಿಎಲ್ 2026 (IPL 2026) ರ ಫೈನಲ್​ನಲ್ಲಿ ಆರ್​ಸಿಬಿಯನ್ನು (RCB) ಯಾವ ತಂಡ ಎದುರಿಸಲಿದೆ ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ. ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್‌ (RR) ಎರಡೂ ತಂಡಗಳು ಕ್ವಾಲಿಫೈಯರ್ 2 ರಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್​ಗೇರಿದರೆ, ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಕ್ವಾಲಿಫೈಯರ್ 2 ಪಂದ್ಯವು ಮೇ 29 ರಂದು ನಡೆಯಲಿದೆ. ಇದಾದ ನಂತರ ಮೇ 31 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ಈ ತಂಡವನ್ನು ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಆದಾಗ್ಯೂ ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್​ನಲ್ಲಿ ಗೆದ್ದು ಟ್ರೋಫಿ ಎತ್ತಿಹಿಡಿಯುವುದು ಅಂದುಕೊಂಡಷ್ಟು ಸುಲಭವಲ್ಲ ಎಂಬುದನ್ನು ಇದುವರೆಗಿನ ಅಂಕಿ ಅಂಶಗಳು ಸಾರಿ ಹೇಳುತ್ತಿವೆ.

2016 ರ ಇತಿಹಾಸ ಮರುಕಳಿಸುತ್ತಾ?

ಏಕೆಂದರೆ ಐಪಿಎಲ್ ಇತಿಹಾಸದಲ್ಲಿ ಎಲಿಮಿನೇಟರ್ ಆಡಿದ ತಂಡವೊಂದು ಫೈನಲ್ ಗೆದ್ದು ಪ್ರಶಸ್ತಿ ಗೆದ್ದಿರುವುದು ಒಮ್ಮೆ ಮಾತ್ರ. ಈ ಸಾಧನೆ ಮಾಡಿದ ಏಕೈಕ ತಂಡವೆಂದರೆ ಅದು ಸನ್‌ರೈಸರ್ಸ್ ಹೈದರಾಬಾದ್. 2016 ರಲ್ಲಿ, ಡೇವಿಡ್ ವಾರ್ನರ್ ನೇತೃತ್ವದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಫೈನಲ್​ನಲ್ಲಿ ಆರ್​ಸಿಬಿಯನ್ನು ಮಣಿಸಿ ಟ್ರೋಫಿ ಎತ್ತಿಹಿಡಿದಿತ್ತು.

ಆದರೆ ಅದಕ್ಕೂ ಮುನ್ನ ಎಲಿಮಿನೇಟರ್ ಸುತ್ತಿನಲ್ಲಿ ಕೆಕೆಆರ್ ತಂಡವನ್ನು 22 ರನ್‌ಗಳಿಂದ ಸೋಲಿಸಿ, ಆ ನಂತರ ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಲಯನ್ಸ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತ್ತು. ಇದೀಗ, ರಾಜಸ್ಥಾನ ರಾಯಲ್ಸ್ 2016 ರ ಸಾಧನೆಯನ್ನು ಪುನರಾವರ್ತಿಸುತ್ತದೆಯೇ? ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಏಕೆಂದರೆ ನಾಕೌಟ್ ಸುತ್ತಿನಲ್ಲಿ ಎರಡು ಪಂದ್ಯಗಳನ್ನು ಗೆಲ್ಲುವುದು ಮತ್ತು ಫೈನಲ್ ಪಂದ್ಯವನ್ನು ಗೆಲ್ಲುವುದು ಅಂದುಕೊಂಡಷ್ಟು ಸುಲಭವಲ್ಲ.

IPL 2026: 30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ; ಭವಿಷ್ಯ ನುಡಿದ ಸೆಹ್ವಾಗ್

ರಾಜಸ್ಥಾನ್ ಐಪಿಎಲ್ ಇತಿಹಾಸ

ಐಪಿಎಲ್ ಇತಿಹಾಸದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಒಮ್ಮೆ ಮಾತ್ರ ಪ್ರಶಸ್ತಿ ಗೆದ್ದಿದೆ. ಶೇನ್ ವಾರ್ನ್ ನೇತೃತ್ವದಲ್ಲಿ ರಾಜಸ್ಥಾನ್, 2008 ರ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಎತ್ತಿಹಿಡಿದಿತ್ತು. ಅದರ ನಂತರ, ರಾಜಸ್ಥಾನ್ ರಾಯಲ್ಸ್ 2022 ರಲ್ಲಿ ನೇರವಾಗಿ ಫೈನಲ್ ತಲುಪಿತ್ತಾದರೂ, ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ಪ್ರಶಸ್ತಿಯಿಂದ ವಂಚಿತವಾಗಿತ್ತು. ಇದೀಗ ರಾಜಸ್ಥಾನ್ 3ನೇ ಬಾರಿಗೆ ಫೈನಲ್ ತಲುಪುತ್ತದೆಯೇ? ಎಂಬುದು ಪ್ರಶ್ನೆ. ಎಲಿಮಿನೇಟರ್ ಸುತ್ತಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸುವ ಮೂಲಕ ರಾಜಸ್ಥಾನ್ ಕ್ವಾಲಿಫೈಯರ್ 2 ಅನ್ನು ಪ್ರವೇಶಿಸಿದೆ. ಇದೀಗ ಮೊದಲ ಬಾರಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸುವುದು ದೊಡ್ಡ ಸವಾಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಣವೀರ್ ಸಿಂಗ್‌, ಫರ್ಹಾನ್ ಅಖ್ತರ್ ನಡುವಿನ ಜಗಳ ಬಿಡಿಸಲು ಸಲ್ಮಾನ್ ಖಾನ್ ಎಂಟ್ರಿ?

ಹಿಂದಿ ಚಿತ್ರರಂಗದಲ್ಲಿ ಯಾರಾದರೂ ಸಂಕಷ್ಟದಲ್ಲಿದ್ದರೆ ಮೊದಲು ಧಾವಿಸುವುದೇ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan). ಅದಕ್ಕಾಗಿಯೇ ಬಾಲಿವುಡ್​ನ ಹಲವು ಮಂದಿಗೆ ಅವರು ಗಾಡ್‌ಫಾದರ್ ಆಗಿದ್ದಾರೆ. ಇದೀಗ ‘ಡಾನ್ 3’ (Don 3) ಚಿತ್ರದ ವಿಚಾರವಾಗಿ ನಟ ರಣವೀರ್ ಸಿಂಗ್ (Ranveer Singh) ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಇಡೀ ಹಿಂದಿ ಚಿತ್ರರಂಗವನ್ನು ಇಬ್ಭಾಗ ಮಾಡಿದೆ. ಆದರೆ, ಮೀಡಿಯಾ ಮುಂದೆ ಈ ವಿವಾದ ದೊಡ್ಡ ಸರ್ಕಸ್ ಆಗುವುದನ್ನು ತಡೆಯಲು ಸಲ್ಮಾನ್ ಖಾನ್ ಈಗ ಅಖಾಡಕ್ಕೆ ಇಳಿದಿದ್ದಾರೆ ಎನ್ನಲಾಗಿದೆ.

‘ಬಾಲಿವುಡ್ ಹಂಗಾಮಾ’ ವರದಿ ಮಾಡಿರುವ ಪ್ರಕಾರ, ಸಲ್ಮಾನ್ ಖಾನ್ ಅವರಿಗೆ ರಣವೀರ್ ಸಿಂಗ್ ಮೇಲೂ ಪ್ರೀತಿಯಿದೆ ಹಾಗೂ ಅಖ್ತರ್ ಕುಟುಂಬದೊಂದಿಗೂ ಆತ್ಮೀಯ ಒಡನಾಟವಿದೆ. ಹೀಗಾಗಿ, ಅವರು ಇಬ್ಬರೊಂದಿಗೂ ಫೋನ್‌ನಲ್ಲಿ ಮಾತನಾಡಿ, ತಮ್ಮ ವೈಯಕ್ತಿಕ ಪ್ರಾಜೆಕ್ಟ್‌ಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

‘ಸಿನಿಮಾ ಇಂಡಸ್ಟ್ರಿಯಲ್ಲಿ ಕ್ರಿಯೇಟಿವ್ ಭಿನ್ನಾಭಿಪ್ರಾಯಗಳು ದಶಕಗಳಿಂದಲೂ ಸಾಮಾನ್ಯ ಎಂದು ಸಲ್ಮಾನ್ ಅವರು ಫರ್ಹಾನ್ ಅಖ್ತರ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅದೇ ರೀತಿ ರಣವೀರ್ ಸಿಂಗ್ ಜೊತೆಯೂ ಸುದೀರ್ಘವಾಗಿ ಮಾತನಾಡಿ ಅವರ ನಿಲುವನ್ನು ಅರ್ಥಮಾಡಿಕೊಂಡಿದ್ದಾರೆ. ಯಾರೊಬ್ಬರಿಗೂ ಅನ್ಯಾಯವಾಗದಂತೆ ಈ ವಿವಾದವನ್ನು ಹತ್ತಿಕ್ಕಲು ಸಲ್ಮಾನ್ ಸಂಧಾನಕಾರನ ಪಾತ್ರ ವಹಿಸುತ್ತಿದ್ದಾರೆ’ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಆಗಿದೆ.

ಸಲ್ಮಾನ್ ಖಾನ್ ಅವರ ಈ ಮಾತನ್ನು ಫರ್ಹಾನ್ ಅಖ್ತರ್ ಮತ್ತು ರಣವೀರ್ ಸಿಂಗ್ ಇಬ್ಬರೂ ಗಂಭೀರವಾಗಿ ಪರಿಗಣಿಸಿದ್ದು, ಯಾವುದೇ ದೊಡ್ಡ ವಿವಾದ ಸೃಷ್ಟಿಸದೆ ಕಾನೂನು ಹೋರಾಟ ಅಥವಾ ಚಲನಚಿತ್ರ ವಾಣಿಜ್ಯ ಮಂಡಳಿಗಳ ಮಧ್ಯಸ್ಥಿಕೆ ಇಲ್ಲದೆ ಪರಸ್ಪರ ಮಾತುಕತೆಯ ಮೂಲಕವೇ ಇತ್ಯರ್ಥಕ್ಕೆ ಬರಲು ಆಲೋಚಿಸುತ್ತಿದ್ದಾರೆ. ತಮ್ಮನ್ನು ಒಳಗೊಂಡಂತೆ, ಯಾವುದೇ ಮೂರನೇ ವ್ಯಕ್ತಿಯನ್ನು ಇದರಲ್ಲಿ ಎಳೆದು ತರದೆ ನೇರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಸಲ್ಮಾನ್ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಚಿತ್ರರಂಗದಿಂದ ರಣವೀರ್ ಸಿಂಗ್‌ ಬ್ಯಾನ್; ಸಿನಿಮಾ ನೌಕರರ ಒಕ್ಕೂಟದಿಂದ ಕಠಿಣ ನಿರ್ಧಾರ

ಮತ್ತೊಂದೆಡೆ, ಸಿನಿಮಾ ತಡವಾಗಿದ್ದರಿಂದ ಫರ್ಹಾನ್ ಅಖ್ತರ್ ಅವರಿಗೆ ಆಗಿರುವ ಆರ್ಥಿಕ ನಷ್ಟಕ್ಕೆ ಸಲ್ಮಾನ್ ಬೆಂಬಲವಾಗಿ ನಿಂತಿದ್ದಾರೆ. ಹಾಗೆಯೇ, ಇತ್ತೀಚೆಗಷ್ಟೇ ಬಾಕ್ಸ್ ಆಫೀಸ್‌ನಲ್ಲಿ ಐತಿಹಾಸಿಕ ಯಶಸ್ಸು ಸಾಧಿಸಿದ ‘ಧುರಂಧರ್’ ಚಿತ್ರದ ಗೆಲುವಿನ ಅಲೆಯನ್ನು ಬಳಸಿಕೊಂಡು ಹೊಸ ಪ್ರಾಜೆಕ್ಟ್ ಆರಂಭಿಸುವಂತೆ ರಣವೀರ್ ಸಿಂಗ್ ಅವರಿಗೂ ಸಲ್ಮಾನ್ ಖಾನ್ ಉತ್ತೇಜನ ನೀಡುತ್ತಿದ್ದಾರೆ ಎಂದು ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version