ವೀರೇಂದ್ರ ಪಾಟೀಲರಿಗೆ ಅಪ್ಪ,ಸಿದ್ದರಾಮಯ್ಯಗೆ ಮಗ ಅಪಮಾನ:ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ ಎಂದ ಜೋಶಿ
ಮಂಗಳೂರು, (ಮೇ 28): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ (Rahul Gandhi) ಕೊಟ್ಟ ಬಳುವಳಿ. ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ. ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮೇಲ್ವರ್ಗದವರು ಸಿಎಂ ಇದ್ದಾರೆ. ಕರ್ನಾಟಕದಲ್ಲಿ ಮಾತ್ರ ಒಬಿಸಿ ಸಿಎಂ ಇದ್ದರು. ಈಗ ಇದ್ದೊಬ್ಬ ಒಬಿಸಿ ಸಿಎಂ ಅನ್ನು ಕಾಂಗ್ರೆಸ್ ಅಸ್ಥಿರಗೊಳಿಸಿದೆ ಎಂದು ಎಂದು ಕೇಂದ್ರ ಆಹಾರ…