Headlines

IPL 2026: ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ರಾಯಲ್ಸ್ ತಂಡ ತೊರೆಯಲಿ

ರಾಜಸ್ಥಾನ್ ರಾಯಲ್ಸ್ (RR) ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ಐಪಿಎಲ್ 2026 (IPL 2026) ರ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದುಕೊಂಡಿದೆ. ರಾಜಸ್ಥಾನ್ ತಂಡದ ಈ ಗೆಲುವಿನಲ್ಲಿ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ ಸಿಡಿಲಬ್ಬರದ 97 ರನ್​ಗಳ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಇದೀಗ ರಾಜಸ್ಥಾನ್ ತಂಡ ಫೈನಲ್​ಗೇರಬೇಕೆಂದರೆ ಇದೀಗ ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಬೇಕಿದೆ. ಈ ಪಂದ್ಯದಲ್ಲೂ ವೈಭವ್ ಅಬ್ಬರಿಸಿದರೆ ತಂಡಕ್ಕೆ ಗೆಲುವು ಖಚಿತ….

Read More

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ಧೋ ಅಂತ ಸುರಿಯುತ್ತಿದೆ ಮಳೆ!: ಆಫೀಸ್ ಮುಗಿಸಿ ಬರುವ ಉದ್ಯೋಗಿಗಳೇ ಎಚ್ಚರ

ಬೆಂಗಳೂರು, ಮೇ,28: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ (IMD) ನೀಡಿದ್ದ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ಅಕ್ಷರಶಃ ನಿಜವಾಗಿದೆ. ಇದೀಗ ಸಿಲಿಕಾನ್ ಸಿಟಿಯಾದ್ಯಂತ ಹವಾಮಾನ ಸಂಪೂರ್ಣ ತಲೆಕೆಳಗಾಗಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಿದ ಭೀಕರ ಧೂಳಿನ ಬಿರುಗಾಳಿ (Gusty Winds) ಮತ್ತು ಗುಡುಗು-ಮಿಂಚಿನ ಆರ್ಭಟದೊಂದಿಗೆ ಧಾರಾಕಾರ ಮಳೆ ಆರಂಭವಾಗಿದೆ. ಮಧ್ಯಾಹ್ನದವರೆಗೆ ಉರಿ ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನಲ್ಲಿ ಸಂಜೆ 6 ಗಂಟೆಯ ನಂತರ ದಿಢೀರ್ ಆಗಿ ಕಪ್ಪು ಮೋಡಗಳು ಆವರಿಸಿದವು. ಬಿರುಗಾಳಿಯ ತೀವ್ರತೆ ಎಷ್ಟಿತ್ತೆಂದರೆ…

Read More

‘ದಿ ಕೇರಳ ಸ್ಟೋರಿ 2’ ನಿರ್ದೇಶಕನ ಹೊಸ ಸಿನಿಮಾ ‘ಶ್ರೀ ರಾಮ್ ಭೂಮಿ’

ಖ್ಯಾತ ಸಿನಿಮಾ ನಿರ್ಮಾಣ ಸಂಸ್ಥೆಯಾದ ಜೀ ಸ್ಟುಡಿಯೋಸ್ (Zee Studios) ತನ್ನ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದೆ. ‘ಶ್ರೀ ರಾಮ್ ಭೂಮಿ’ (Shri Ram Bhoomi) ಎಂದು ಹೆಸರಿಡಲಾಗಿರುವ ಈ ಹೊಸ ಸಿನಿಮಾದ ಪ್ರಕಟಣೆಯನ್ನು ಸಂಸ್ಥೆಯು ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಶೀರ್ಷಿಕೆಯ ಕಾರಣದಿಂದಾಗಿ ಈ ಸಿನಿಮಾ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಈ ಬಿಗ್ ಬಜೆಟ್ ಚಿತ್ರದಲ್ಲಿ ಬಾಲಿವುಡ್‌ನ ಹಿರಿಯ ನಟ ಅನುಪಮ್ ಖೇರ್ (Anupam Kher) ಅವರು ಪ್ರಮುಖ ಪಾತ್ರ ಮಾಡಲಿದ್ದಾರೆ. ಅನುಪಮ್…

Read More

ಮುಜರಾಯಿ ದೇಗುಲಗಳ ಆದಾಯಕ್ಕೆ ಬೂಸ್ಟ್​​ ಕೊಟ್ಟ ಶಕ್ತಿ ಯೋಜನೆ: ಭಕ್ತರ ಜೊತೆ ಕಾಣಿಕೆ ಸಂಗ್ರಹವೂ ಹೆಚ್ಚಳ

ಬೆಂಗಳೂರು, ಮೇ 28: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಪರಿಣಾಮ ರಾಜ್ಯದ ಮುಜರಾಯಿ ದೇಗುಲಗಳಲ್ಲಿನ ಆದಾಯದಲ್ಲಿ ಗಣನೀಯ ಹೆಚ್ಚಳ ಆಗಿರುವುದು ಕಂಡುಬಂದಿದೆ. ಈ ಯೋಜನೆಯಡಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಸಿಗುತ್ತಿರುವ ಕಾರಣ ದೇಗುಲಗಳಿಗೆ ಬರುತ್ತಿರುವ ಭಕ್ತರ ಸಂಖ್ಯೆ ಹಡೆಚ್ಚಿದೆ. ಹೀಗಾಗಿ ಆದಾಯವೂ ಏರಿಕೆ ಕಾಣುತ್ತಿದೆ ಎನ್ನಲಾಗಿದೆ. ಆದಾಯದಲ್ಲಿ ಗಮನಾರ್ಹ ಹೆಚ್ಚಳ ವಿಶೇಷವಾಗಿ ಮಹಿಳೆಯರು ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವ ಪರಿಣಾಮ, ರಾಜ್ಯದ ಪ್ರಮುಖ 15 ದೇವಸ್ಥಾನಗಳ…

Read More

ನಾಳೆಯಿಂದ 3 ದಿನ ರಾಜ್ಯಾದ್ಯಂತ ಭಾರಿ ಗುಡುಗು, ಸಿಡಿಲು ಸಹಿತ ಮಳೆ; ಈ ಜಿಲ್ಲೆಗಳಿಗೆ ಆರೆಂಜ್‌ – ಯೆಲ್ಲೋ ಅಲರ್ಟ್

ಬೆಂಗಳೂರು, ಮೇ,28: ರಾಜ್ಯದಲ್ಲಿ ದಿನದ ಅವಧಿಯಲ್ಲಿ ಬಿಸಿಲಿನ ಬೇಗೆ ಮುಂದುವರಿದಿದ್ದರೂ, ಮಧ್ಯಾಹ್ನದ ನಂತರ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು (ಮೇ 28) ನೀಡಿರುವ ವರದಿಗಳ ಪ್ರಕಾರ, ಮುಂದಿನ 7 ದಿನಗಳ ಅಧಿಕೃತ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮೇ 31 ರವರೆಗೆ ಭಾರಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ (Squall) ಸಹಿತ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡು: ಇಂದು ಆರೆಂಜ್ ಅಲರ್ಟ್! ಮೇ 28 : ಅತ್ಯಂತ ಅಪಾಯಕಾರಿ ಹವಾಮಾನ ಇರಲಿದ್ದು,…

Read More

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ತುಮಕೂರು, (ಮೇ 28): ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ (DK Shivakumar) ಮುಂದಿನ ಸಿಎಂ ಎನ್ನುವುದು ಖಚಿತವಾಗಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ಆದ ಬೆಳವಣಿಗೆಗಳ ಬಗ್ಗೆ ಡಿಕೆ ಶಿವಕುಮಾರ್ ಬಹುವಾಗಿ ನಂಬುವ ನೊಣವಿನಕೆರೆ ಮಠದ (Nonavinakere Swamiji) ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಡಿಕೆಶಿ ಸಿಎಂ ಆಗುವ ಬಗ್ಗೆ ಭವಿಷ್ಯ ನುಡಿದಿದ್ದರು.  ಅದರಂತೆ ಇದೀಗ ಸ್ವಾಮೀಜಿಯ ಭವಿಷ್ಯ ನಿಜವಾಗಿದೆ. ಇನ್ನು ಇತ್ತ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಸ್ವಾಮೀಜಿ, ಡಿಕೆ ಶಿವಕುಮಾರ್ ಬಗ್ಗೆ ಕೆಲ…

Read More

June Festival List 2026: ಜೂನ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳ ಪಟ್ಟಿ ಇಲ್ಲಿದೆ

ತಿಂಗಳು ಉರುಳಿದ್ದೇ ತಿಳಿಯುತ್ತಿಲ್ಲ. ಕಣ್ಣು ಮುಚ್ಚಿ ಬಿಡುವುದರೊಳಗೆ 2026 ರ ಆರನೇ ತಿಂಗಳಿಗೆ ಕಾಲಿಡಲು ಸಜ್ಜಾಗಿದ್ದೇವೆ. ಮೇ ತಿಂಗಳಿಗೆ ಗುಡ್ ಬೈ ಹೇಳಿ ಜೂನ್ ತಿಂಗಳನ್ನು ಆಹ್ವಾನಿಸಲು ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಹಿಂದೂ ಪಂಚಾಂಗದ (Hindu Calendar) ಪ್ರಕಾರವಾಗಿ ಜೂನ್ ತಿಂಗಳು ಜ್ಯೇಷ್ಠ ಮಾಸದಿಂದ ಪ್ರಾರಂಭವಾಗುತ್ತದೆ. ಜೂನ್ ತಿಂಗಳಲ್ಲಿ ಪ್ರಮುಖವಾದ ಹಬ್ಬ ಹಾಗೂ ಆಚರಣೆಗಳಿವೆ. ಹಾಗಾದ್ರೆ ಈ ಜೂನ್ ತಿಂಗಳಿನಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳ ಕುರಿತಾದ ಮಾಹಿತಿ ಇಲ್ಲಿದೆ. ಜೂನ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ…

Read More

ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?

ಬೆಂಗಳೂರು, (ಮೇ 28): ಬಡವರಿಗೆ ಭಾಗ್ಯಗಳ ಕೊಟ್ಟ ಸರದಾರ.. ಹಸಿದವರಿಗೆ ಅನ್ನ ನೀಡಿದ ಅನ್ನರಾಮಯ್ಯ.. ರೈತರ ಧ್ವನಿಯಾಗಿದ್ದ ರೈತರಾಮಯ್ಯ, ಕನ್ನಡ ನಾಡು ನುಡಿಗಾಗಿ ದಿಟ್ಟ ಹೆಜ್ಜೆ ಇಟ್ಟ ಕನ್ನಡ ರಾಮಯ್ಯ.. ದಾಖಲೆ ಬಜೆಟ್ ಮಂಡಿಸಿದ ಬಜೆಟ್ ರಾಮಯ್ಯ. ವಿಧಾನಸಭೆಯಲ್ಲಿ ಎದುರಾಳಿಗಳನ್ನ ಮಾತಿನಲ್ಲೇ ಕಟ್ಟಿಹಾಕುತ್ತಿದ್ದ ಸಿದ್ದರಾಮಯ್ಯ, ತಮ್ಮ ಕೆಲಸಗಳಿಂದಲೇ ನಾನಾ ಹೆಸರಿನಿಂದ ಕರೆಸಿಕೊಂಡವರು. ಇಂತಹ ಸಿದ್ದರಾಮಯ್ಯ (Siddaramaiah) ಇವತ್ತು ಮುಖ್ಯಮಂತ್ರಿ ಪದವಿಯನ್ನೇ ತ್ಯಾಗ ಮಾಡಿ ತ್ಯಾಗರಾಮಯ್ಯರಾಗಿದ್ದಾರೆ. ಎದೆಭಾರ ಮಾಡಿಕೊಂಡೇ ತನ್ನ ಆಪ್ತ ಭೈರತಿ ಸುರೇಶ್ ಕಾರು ಹತ್ತಿದ ಸಿದ್ದರಾಮಯ್ಯ,…

Read More

ಕೊನೆಯುಸಿರಿರುವವರೆಗೂ ನೀನೇ ನನ್ನವಳು!: ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ

ದೆಹಲಿ, ಮೇ.28: “ಪ್ರೀತಿ ಅಂದರೆ ಹೀಗಿರಬೇಕು, ಕೊನೆಯುಸಿರಿರುವವರೆಗೂ ಜೊತೆಯಾಗಿ ಬಾಳಬೇಕು” ಎಂಬ ಮಾತಿಗೆ ಇಲ್ಲೊಂದು ಅತ್ಯಂತ ಭಾವುಕ ಹಾಗೂ ಕಣ್ಣೀರು ತರಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ ಐಸಿಯು (ICU) ಹಾಸಿಗೆಯ ಮೇಲೆ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ತನ್ನ ಪ್ರೀತಿಯ ಪತ್ನಿಗೆ, ಪತಿ ಸಾಂಪ್ರದಾಯಿಕ ಚುಮರಿ (Chunari) ಹೊದಿಸಿ, ಹಣೆಗೆ ಸಿಂಧೂರ ಇಟ್ಟು ತನ್ನ ಪತಿ ಧರ್ಮ ಹಾಗೂ ಜೀವಮಾನದ ಒಡನಾಟದ ಭಾಷೆಯನ್ನು ಅತ್ಯಂತ ಭಕ್ತಿ-ಪ್ರೀತಿಯಿಂದ ನಿಭಾಯಿಸಿದ್ದಾನೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿ ಆಸ್ಪತ್ರೆಯ…

Read More

‘ನನ್ನ ತಲೆ ಪೂರ್ತಿ ಬೋಳಾಗಿದೆ, ವಿಗ್ ಧರಿಸಿದ್ದೇನೆ’: ಡ್ರಗ್ಸ್ ದುಷ್ಪರಿಣಾಮದ ಬಗ್ಗೆ ಬಾಯ್ಬಿಟ್ಟ ಹನಿ ಸಿಂಗ್

ಖ್ಯಾತ ರ‍್ಯಾಪರ್ ಹಾಗೂ ಗಾಯಕ ಯೋ ಯೋ ಹನಿ ಸಿಂಗ್ (Yo Yo Honey Singh) ತಮ್ಮ ವೈಯಕ್ತಿಕ ಜೀವನದ ಕುರಿತು ಅತ್ಯಂತ ಆಘಾತಕಾರಿ ಮತ್ತು ಭಾವುಕ ಸತ್ಯವೊಂದನ್ನು ಬಹಿರಂಗಪಡಿಸಿದ್ದಾರೆ. ತಮಗೆ ಸಂಪೂರ್ಣವಾಗಿ ಬೋಳು ತಲೆಯಾಗಿದ್ದು, ಸದ್ಯ ತಾವು ವಿಗ್ (Wig) ಧರಿಸುತ್ತಿರುವುದಾಗಿ ಅವರು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಡ್ರಗ್ಸ್ (Drugs) ಸೇವನೆ ಬಳಿಕ ಉಂಟಾದ ಬೈಪೋಲಾರ್ ಡಿಸಾರ್ಡರ್ ಎಂಬ ಮಾನಸಿಕ ಆರೋಗ್ಯ ಸಮಸ್ಯೆಯಿಂದಾಗಿ ತೆಗೆದುಕೊಂಡ ಭಾರಿ ಪ್ರಮಾಣದ ಔಷಧಿಗಳೇ ತಮ್ಮ ಈ ಸ್ಥಿತಿಗೆ ಕಾರಣ ಎಂದು ಅವರು…

Read More