Headlines

ಬ್ರಿಟಿಷ್ ಪ್ರಜೆಯಾಗಿ ಕೆರಿಯರ್ ಆರಂಭಿಸಿದ ಅಮೀರ್ – Kannada News | Mohammad Amir Starts Fresh Chapter as British Citizen

ಪಾಕಿಸ್ತಾನದ ಮಾಜಿ ವೇಗದ ಬೌಲರ್ ಮೊಹಮ್ಮದ್ ಅಮೀರ್ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಕೂಡ ಬ್ರಿಟಿಷ್ ಪ್ರಜೆಯಾಗಿ ಎಂಬುದು ವಿಶೇಷ. ಮೊಹಮ್ಮದ್ ಅಮೀರ್ ಅವರು ಅಧಿಕೃತವಾಗಿ ಬ್ರಿಟಿಷ್ ಪೌರತ್ವವನ್ನು ಪಡೆದುಕೊಂಡಿದ್ದು, ಇದೀಗ ಇಂಗ್ಲೆಂಡ್‌ನ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಳೀಯ ಆಟಗಾರನಾಗಿ ಹೊಸ ಪಯಣ ಆರಂಭಿಸಿದ್ದಾರೆ.  ಪೌರತ್ವ ಸಿಕ್ಕಿದ್ದು ಹೇಗೆ? ಮೊಹಮ್ಮದ್ ಅಮೀರ್ ಅವರ ಪತ್ನಿ ನರ್ಜಿಸ್ ಖಾನ್ ಅವರು ಬ್ರಿಟಿಷ್ ಪ್ರಜೆಯಾಗಿದ್ದಾರೆ. ಇದರ ಆಧಾರದ ಮೇಲೆ ಅಮೀರ್ ಕೆಲವು ವರ್ಷಗಳ ಹಿಂದೆಯೇ ಯುಕೆ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ದೀರ್ಘಾವಧಿಯ…

Read More

ಫೋಟೋ ನೋಡಿಯೇ ಪ್ರೀತಿಯಲ್ಲಿ ಬಿದ್ದಿದ್ದ ಗಾನಕೋಕಿಲೆ; ಎಸ್. ಜಾನಕಿ ಅಪರೂಪದ ಪ್ರೇಮಕಥೆ – Kannada News | S Janaki Untold Love Story and Ram Prasad Enduring Support

ಎಲ್ಲಿಯೋ ಸಿಕ್ಕ ಒಂದು ಸುಂದರ ಹುಡುಗನ ಫೋಟೋ. ಅದನ್ನೇ ಯಾರಿಗೂ ತಿಳಿಯದಂತೆ ಬಚ್ಚಿಟ್ಟುಕೊಂಡು ಪ್ರೀತಿಸೋ ಮುಗ್ಧ ಹುಡುಗಿ. ಜೀವನ ಕಳೆದರೆ ಈ ಹುಡುಗನ ಜೊತೆಯೇ ಕಳೆಯಬೇಕು ಎಂದು ಆಕೆ ಆಗಲೇ ಮನಸ್ಸಿನಲ್ಲೇ ನಿರ್ಧರಿಸಿಬಿಡುತ್ತಾಳೆ. ಚಿತ್ರವಿಚಿತ್ರ ಎನಿಸುವ ವಿಧಿಯ ಆಟ ನೋಡಿ, ಆ ಹುಡುಗಿ ಮುಂದೆ ಅದೇ ಹುಡುಗನನ್ನು ಪ್ರೀತಿಸಿ ಮದುವೆ ಕೂಡ ಆಗುತ್ತಾಳೆ.  ಕೇಳಲು ಯಾವುದೋ ಸಿನಿಮಾದ ರೋಮ್ಯಾಂಟಿಕ್ ಕಥೆಯಂತೆ ಅನಿಸಬಹುದು. ಇತ್ತೀಚೆಗೆ ಇಹಲೋಕ ತ್ಯಜಿಸಿದ ಖ್ಯಾತ ಗಾಯಕಿ ಜಾನಕಮ್ಮನವರ ಬಾಳಿನಲ್ಲಿ ಇಂಥದ್ದೊಂದು ಅಪರೂಪದ, ಸುಂದರ ಪ್ರೇಮಕಥೆ…

Read More

ಬೆಂಗಳೂರಿನ ರಸ್ತೆಗಳಲ್ಲಿ ‘ವಿಂಟೇಜ್‌’ ವೈಭವ: ಜಾಗತಿಕ ಮಟ್ಟದಲ್ಲಿ ಧೂಳೆಬ್ಬಿಸಿದ ಜಾವಾ-ಯೆಜ್ಡಿ ಬೈಕ್ ಪ್ರೇಮಿಗಳ ಅದ್ದೂರಿ ಹಬ್ಬ! – Kannada News | International Jawa Yezdi Day Celebrated in Bengaluru: 7500 Riders Join Global Vintage Bike Rally

ಬೆಂಗಳೂರು, ಜುಲೈ 13: ಮೋಟಾರ್‌ಸೈಕಲ್ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಹಾಗೂ ಹೆಮ್ಮೆಯ ಸಂಪ್ರದಾಯ ಹೊಂದಿರುವ ‘ಅಂತಾರಾಷ್ಟ್ರೀಯ ಜಾವಾ-ಯೆಜ್ಡಿ ದಿನ’ವನ್ನು ಭಾನುವಾರ (ಜು 12) ಬೆಂಗಳೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ವೇಳೆ ನೂರಾರು ಬೈಕ್ ಪ್ರೇಮಿಗಳು ಒಂದೆಡೆ ಸೇರಿ 24ನೇ ಆವೃತ್ತಿಯ ಈ ಸಡಗರಕ್ಕೆ ಸಾಕ್ಷಿಯಾದರು. ನಗರದ ರಿಚ್‌ಮಂಡ್‌ ಟೌನ್‌ನಲ್ಲಿರುವ ಬಾಲ್ಡ್‌ವಿನ್‌ ಬಾಯ್ಸ್‌ ಹೈಸ್ಕೂಲ್‌ ಮೈದಾನಕ್ಕೆ ನೂರಾರು ರೈಡರ್‌ಗಳು ತಮ್ಮ ನೆಚ್ಚಿನ ಬೈಕ್‌ಗಳೊಂದಿಗೆ ಸವಾರಿ ಮಾಡಿಕೊಂಡು ಬಂದು ಜಮಾಯಿಸಿದ್ದರು. ಇಡೀ ದಿನ ಮೈದಾನದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಪ್ರದರ್ಶನಕ್ಕಿಟ್ಟಿದ್ದ…

Read More

ಚಲಿಸುವ ರೈಲಿನಲ್ಲಿ ಪೂಜೆ, ವಿಡಿಯೋ ವೈರಲ್ ಆದ ಬೆನ್ನಲ್ಲೇ ಭಾರತೀಯ ರೈಲ್ವೆಯಿಂದ ಸ್ಪಷ್ಟನೆ – Kannada News | Moving Train Puja Viral Video: Indian Railways Clarifies Rs3 Lakh Luxury Saloon Car Booking

ನವದೆಹಲಿ, ಜುಲೈ 13: ಇತ್ತೀಚೆಗಷ್ಟೇ ರೈಲು(Train) ಬೋಗಿಯೊಂದನ್ನು ವಧು-ವರರ ಕೋಣೆಯಂತೆ ಅಲಂಕರಿಸಲಾಗಿದ್ದ ‘ಹನಿಮೂನ್ ಕೋಚ್’ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿತ್ತು. ಈಗ ಚಲಿಸುವ ರೈಲಿನೊಳಗೇ ಪುರೋಹಿತರ ಸಮ್ಮುಖದಲ್ಲಿ ಮಂತ್ರ ಘೋಷಗಳೊಂದಿಗೆ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುತ್ತಿರುವ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈರಲ್ ವಿಡಿಯೋದಲ್ಲಿ, ಬಿಳಿ ವಸ್ತ್ರ ಧರಿಸಿದ ಭಕ್ತರ ಸಮ್ಮುಖದಲ್ಲಿ ಅರ್ಚಕರೊಬ್ಬರು ರೈಲು ಬೋಗಿಯ ನೆಲದ ಮೇಲೆಯೇ ಕುಳಿತು ಪೂಜೆನೆರವೇರಿಸುತ್ತಿರುವುದು ಕಂಡುಬಂದಿದೆ. ಸಾಮಾನ್ಯ ಪ್ರಯಾಣಿಕರು ಓಡಾಡುವ ರೈಲಿನಲ್ಲಿ…

Read More

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ತರಾತುರಿ ತೋರದ ಭಾರತ; ಕೆಟ್ಟ ಒಪ್ಪಂದಕ್ಕಿಂತ, ಒಪ್ಪಂದವಿಲ್ಲದಿರುವುದೇ ಲೇಸು – ಸರ್ಕಾರ ನಿಲುವು – Kannada News | Having no deal better than bad deal, India’s tough stand on US trade agreement

ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್Image Credit source: PTI ನವದೆಹಲಿ, ಜುಲೈ 13: ಅಮೆರಿಕ (US) ಮತ್ತು ಭಾರತದ ನಡುವಿನ ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರ ದೃಢ ನಿಲುವು ತಳೆದಿದೆ. ವ್ಯಾಪಾರ ಮಾತುಕತೆಗಳಲ್ಲಿ ಭಾರತವು ತನ್ನ ಹಿತಾಸಕ್ತಿಗಳಿಗೆ ಧಕ್ಕೆಯಾಗುವಂತಹ ಯಾವುದೇ “ಕೆಟ್ಟ ಒಪ್ಪಂದ” (Bad Deal) ಮಾಡಿಕೊಳ್ಳಲು ಸಿದ್ಧವಿಲ್ಲ. ದೇಶದ ಹಿತಾಸಕ್ತಿಗೆ ಪೂರಕವಾಗಿಲ್ಲದಿದ್ದರೆ ಯಾವುದೇ ಒಪ್ಪಂದ ಮಾಡಿಕೊಳ್ಳದೇ ಇರಲು (No Deal) ಭಾರತ ನಿರ್ಧರಿಸಿದೆ ಎಂದು ಸರ್ಕಾರಿ ಅಧಿಕಾರಿಗಳ ಅಭಿಪ್ರಾಯ ಕೇಳಿ ನ್ಯೂಸ್18…

Read More

ಶಾಸಕ ರಾಯರೆಡ್ಡಿ ಆಪ್ತನ ಲ್ಯಾಂಡ್ ಡೀಲಿಂಗ್ ವಿಡಿಯೋ ವೈರಲ್: ತಕ್ಷಣವೇ ಅಲರ್ಟ್ ಆದ ಶಾಸಕ – Kannada News | Koppal Land Acquisition Row: MLA Rayareddy’s Aide Navali Hiremath Caught in Yelaburga Deals

ಕೊಪ್ಪಳ, ಜು.13: ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ವಿಂಡ್ ಪವರ್, ಸೋಲಾರ್ ಮತ್ತು ಕೆಪಿಟಿಸಿಎಲ್ ವಿದ್ಯುತ್ ಸಬ್‌ಸ್ಟೇಷನ್‌ಗಳ ಜಮೀನು ಸ್ವಾಧೀನ ಪ್ರಕ್ರಿಯೆಯದ್ದೇ ದೊಡ್ಡ ಸುದ್ದಿಯಾಗುತ್ತಿದೆ. ಇದರ ನಡುವೆಯೇ, ಯಲಬುರ್ಗಾ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರ ಆಪ್ತ ಎನ್ನಲಾದ ಮುಖಂಡ ಎಸ್.ಆರ್. ನವಲಿ ಹಿರೇಮಠ ರೈತರೊಂದಿಗೆ ಬಹಿರಂಗವಾಗಿ ಲ್ಯಾಂಡ್ ಡೀಲ್ ಮಾಡುತ್ತಿರುವ ಮತ್ತೊಂದಿಷ್ಟು ಸ್ಫೋಟಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸರಣಿಯಾಗಿ ವೈರಲ್ ಆಗುತ್ತಿದ್ದು, ಕ್ಷೇತ್ರದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಶಾಸಕ…

Read More

Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​! – Kannada News |  Dudhsagar Falls: A Monsoon Spectacle Amidst Western Ghats Restrictions

ಬೆಳಗಾವಿ, ಜುಲೈ 13: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ, ಕಾರವಾರದ ಜೋಯಿಡಾದಲ್ಲಿ ಹುಟ್ಟುವ ದೂದ್ ಸಾಗರ ಜಲಪಾತವು ಜೀವಕಳೆ ಪಡೆದುಕೊಂಡಿದೆ. ಹಾಲಿನ ನೊರೆಯಂತೆ ಭೋರ್ಗರೆಯುತ್ತಾ ಧುಮ್ಮಿಕ್ಕುವ ಈ ಜಲಪಾತವನ್ನು ನೋಡುವ ದೃಶ್ಯ ಕಣ್ಣಿಗೆ ಹಬ್ಬವಾಗಿದೆ. ಕರ್ನಾಟಕದಲ್ಲಿ ಹುಟ್ಟಿ ಗೋವಾಕ್ಕೆ ಹರಿಯುವ ದೂದ್ ಸಾಗರ, ಮಹದಾಯಿ ನದಿಯನ್ನು ಸೇರುತ್ತದೆ. 1017 ಅಡಿ ಎತ್ತರದಿಂದ ಕಲ್ಲು-ಬಂಡೆಗಳನ್ನು ಕೊರೆದುಕೊಂಡು ರಭಸವಾಗಿ ಹರಿಯುವ ಈ ಜಲಪಾತವು ದೇಶದ ನಾಲ್ಕನೇ ಅತಿದೊಡ್ಡ ಜಲಪಾತವಾಗಿದೆ. ಕಳೆದ ಎರಡು ವರ್ಷಗಳಿಂದ ಪ್ರವಾಸಿಗರಿಗೆ ಇಲ್ಲಿ ಸಂಪೂರ್ಣ…

Read More

Karnataka Dam Water Level: ಇನ್ನೂ 100 ಅಡಿ ತಲುಪಿಲ್ಲ ಕೆಆರ್​ಎಸ್, ಕರ್ನಾಟಕದ ಡ್ಯಾಂಗಳ ಇಂದಿನ ನೀರಿನ ಮಟ್ಟದ ವಿವರ – Kannada News | Karnataka Reservoir Water Level on 13 July 2026: KRS Yet to Reach 100 Feet, Hemavathi, Kabini, Almatti Storage Remains Below Last Year

ಬೆಂಗಳೂರು, ಜುಲೈ 13: ಕರ್ನಾಟಕದಲ್ಲಿ ಮುಂಗಾರು ಮಳೆಯ (Monsoon Rain) ಕೊರತೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಜುಲೈ ತಿಂಗಳ ಆರಂಭದಲ್ಲಿ ದಕ್ಷಿಣ ಕನ್ನಡ, ಕಾವೇರಿ ಜಲಾನಯನ ಪ್ರದೇಶ ಹಾಗೂ ಬೆಳಗಾವಿ ಕಡೆ ಭಾರಿ ಮಳೆಯಾಗಿ ಜಲಾಶಯಗಳ ಒಳಹರಿವು ತುಸು ಹೆಚ್ಚಾಗಿದ್ದರೂ ಒಟ್ಟು ಲೆಕ್ಕದಲ್ಲಿ ನೀರಿನ ಸಂಗ್ರಹದಲ್ಲಿ ಭಾರಿ ಏರಿಕೆಯಾಗಿಲ್ಲ. ಕಳೆದ ವರ್ಷ ಜೂನ್ ಆರಂಭದಲ್ಲೇ ನೂರು ಅಡಿ ನೀರು ತುಂಬಿದ್ದ ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಕೆಆರ್​ಎಸ್​​ ಜಲಾಶಯದಲ್ಲಿ (KRS Dam) ಈ ವರ್ಷ ಇನ್ನೂ ನೀರಿನ…

Read More

ತಿರುಪತಿ ತಿಮ್ಮಪ್ಪನಿಗೆ ಪ್ರತಿದಿನ ಮೊದಲ ಆರತಿ ಬೆಳಗುವ ಹಕ್ಕು ಕರ್ನಾಟಕಕ್ಕೆ ಸಿಕ್ಕಿದ್ದು ಹೇಗೆ? ಇಲ್ಲಿದೆ ರೋಚಕ ಇತಿಹಾಸ! – Kannada News | Why is Tirupati Temple First Aarti Performed on Behalf of Karnataka? Know the History

ಬೆಂಗಳೂರು, ಜುಲೈ 13: ಆಂಧ್ರಪ್ರದೇಶದ ತಿರುಮಲದಲ್ಲಿರುವ ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ನೆರವೇರಿಸಲಾಗುವ ಅತ್ಯಂತ ಪವಿತ್ರವಾದ ‘ಮೊದಲ ಆರತಿ’ ಸಾಂಪ್ರದಾಯಿಕವಾಗಿ ನಮ್ಮ ಕರ್ನಾಟಕ ರಾಜ್ಯದ ಹೆಸರಿನಲ್ಲೇ ಸಲ್ಲಿಕೆಯಾಗುತ್ತದೆ. ತಿರುಪತಿ ಕ್ಷೇತ್ರಕ್ಕೂ ಕರ್ನಾಟಕಕ್ಕೂ 400 ವರ್ಷಗಳ ಅವಿನಾಭಾವ ಧಾರ್ಮಿಕ ಮತ್ತು ಐತಿಹಾಸಿಕ ನಂಟಿದೆ. ಈ ನಂಟಿನ ಪ್ರತೀಕವಾಗಿ ಸ್ವಾಮಿಯ ಮೊದಲ ಆರತಿ ಕರ್ನಾಟಕದ ಪರವಾಗಿಯೇ ಸಲ್ಲಿಸಲಾಗುತ್ತದೆ. ಮೈಸೂರು ಮಹಾರಾಜರ ಕೊಡುಗೆ ಮತ್ತು ಐತಿಹಾಸಿಕ ಒಪ್ಪಂದ ಈ ವಿಶಿಷ್ಟ ಧಾರ್ಮಿಕ ಹಕ್ಕಿನ ಹಿಂದೆ ಮೈಸೂರು ಸಂಸ್ಥಾನದ ಒಡೆಯರ್…

Read More

ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ – Kannada News | US Iran Conflict Intensifies: America Bombs Omidiya Airport, Iran Retaliates Against US, Israel, and Gulf Nations

ಟೆಹ್ರಾನ್, ಜುಲೈ 13: ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಅಮೆರಿಕವು ಇರಾನ್‌ನ ಮೇಲೆ ಐದನೇ ಸುತ್ತಿನ ದಾಳಿ ನಡೆಸಿದ್ದು, ಇರಾನ್‌ನ ಖುಜಿಸ್ತಾನ್ ಪ್ರಾಂತ್ಯದಲ್ಲಿರುವ ಒಮೈದಿಯಾ ಏರ್‌ಪೋರ್ಟ್ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದೆ. ಇರಾನ್‌ನಿಂದ ಹಡಗುಗಳ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕ ಈ ಕ್ರಮ ಕೈಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಸುಮ್ಮನಿಲ್ಲ. ಅದು ಅಮೆರಿಕದ ಸೇನಾ ನೆಲೆಗಳು ಮತ್ತು ಇಸ್ರೇಲ್ ಮೇಲೆ ಕ್ಷಿಪಣಿ…

Read More