Horoscope Today 25 January : ಇಂದು ಈ ರಾಶಿಯವರ ನಂಬಿಕೆ ಸುಳ್ಳಾಗಲಿದೆ

ಮೇಷ ರಾಶಿ:

ನಿಮಗೆ ಸೂಚಿತ ದಿಕ್ಕಿನಲ್ಲಿ ತೆರಳಿ ಕಾರ್ಯವನ್ನು ಸಾಧಿಸಿಕೊಳ್ಳಿ. ಹೊಸ ಅನ್ವೇಷಣೆಯ ಬಗ್ಗೆ ನಿಮಗೆ ಕುತೂಹಲ ಹೆಚ್ಚುವುದು. ಸುಮ್ಮನೇ ಒತ್ತಡವಿದ್ದಂತೆ ತೋರಿಸುವಿರಿ. ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಆಪತ್ತಿನಿಂದ ಜಾರಿಕೊಳ್ಳುವ ಮಾರ್ಗ ನಿಮಗೆ ತಿಳಿಯುವುದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಅನ್ಯರ ಮೂಲಕ ನಿಮ್ಮ ಕಾರ್ಯವು ಆಗಲಿದೆ. ಕಳೆದ ವ್ಯರ್ಥ ಕಾಲವನ್ನು ಮತ್ತೆ ಸೇರಿಸಲಗಾದು ಎಂದು ವ್ಯಥೆಪಡುವುದು ಬೇಡ.

ವೃಷಭ ರಾಶಿ:

ಮೌನದಿಂದ ಇದ್ದರೆ ಯಾವ ಸಂಗತಿಯೂ ನಿಮ್ಮ ಬಳಿ ಬಾರದು. ಸಂಗಾತಿಯನ್ನು ನೀವು ಸರಿಯಾಗಿ ತಿಳಿದುಕೊಳ್ಳಲಾಗದು. ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಆಲಸ್ಯದಿಂದ ನಿಮ್ಮ ಸಾಮರ್ಥ್ಯವು ಕಡಿಮೆ ಆಗಲಿದೆ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಬಂಧುಗಳಿಂದ ಅವಶ್ಯಕವಾದ ಸಂಪತ್ತನ್ನು ನಿರೀಕ್ಷಿಸುವಿರಿ. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಓದುವಿಕೆಯಲ್ಲಿ ಆಸಕ್ತಿಯು ಹೆಚ್ಚಾಗಬಹುದು.

ಮಿಥುನ ರಾಶಿ:

ನಕಾರಾತ್ಮಕ ಅಂಶಗಳನ್ನು ಬಿಟ್ಟು ಒಳ್ಳೆಯದರ ಕಡೆ ಯೋಚಿಸಿ. ನೀವು ಇಂದು ಸ್ವಂತ ವಾಹನವನ್ನು ಬಾಡಿಗೆ ಕೊಡುವಿರಿ. ಇರುವ ಸಾಲವನ್ನು ತೀರಿಸಿಕೊಳ್ಳಲು ಬೇಕಾದ ಯೋಜನೆ ಮಾಡಿ. ವಿವಾಹ ಸಂಬಂಧದಲ್ಲಿ ದುಡುಕಿ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ. ಭೂಮಿಯ ವ್ಯವಹಾರದಿಂದ ಲಾಭವಿಲ್ಲದಿದ್ದರೂ ಅದನ್ನೇ ನಡೆಸಲು ಇಷ್ಟಪಡುವಿರಿ. ಯಾರ ಜೊತೆಗೂ ಪಕ್ಷಪಾತವನ್ನು ಇಟ್ಟುಕೊಳ್ಳುವುದು ಬೇಡ.

ಕರ್ಕಾಟಕ ರಾಶಿ:

ಸಹೋದರರ ಹಣಕಾಸಿಗೆ ಕಲಹವಾಗಬಹುದು. ಸ್ತ್ರೀಯರು ಇಂದಿನ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಗಳಿಸುವರು. ಕೂಡಿಬರುವ ವಿವಾಹಕಾಲವನ್ನು ಅಲ್ಲಗಳೆಯುವುದು ಬೇಡ. ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಸಮಯಕ್ಕಾಗಿ ಕಾದು ನೋಡಿ. ದಿನಚರಿಯನ್ನು ಬದಲಾಯಿಸಿಕೊಳ್ಳುವುದು ಬೇಕಾಗಬಹುದು. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ.

ಸಿಂಹ ರಾಶಿ:

ಸಾಹಿತ್ಯ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಸಿಗಲಿದೆ. ಹೊಸ ಗೃಹವನ್ನು ಖರೀದಿಸುವ ವಿಚಾರವನ್ನು ದಂಪತಿಗಳು ಚರ್ಚಿಸುವರು. ಮಾತಿನಿಂದ ನಿಮಗೆ ಆದಾಯ ಬರಬಹುದು. ಉದ್ಯೋಗಕ್ಕಾಗಿ ನೀವು ವಿದೇಶಕ್ಕೆ ತೆರಳುವ ಆಸೆ ಇರಲಿದೆ. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ. ಮಕ್ಕಳಿಂದ ನಿಮಗೆ ಅಸಮಾಧಾನ ಇರಲಿದೆ. ಅವಿವಾಹಿತರು ವಿವಾಹದ ಬಯಕೆಯನ್ನು ತಾಯಿಯ ಜೊತೆ ಹಂಚಿಕೊಳ್ಳುವರು. ಸಂಗಾತಿಯ ಮಾತಿಗೆ ಏನಾದರೂ ಪ್ರತಿಕ್ರಿಯೆಯನ್ನು ನೀಡಿ. ಎಲ್ಲರೆದುರು ಸಭ್ಯರಂತೆ ತೋರುವಿರಿ.

ಕನ್ಯಾ ರಾಶಿ:

ಅತಿಯಾದ ಕೋಪವನ್ನು ನೀವು ಯಾವ ಮಾರ್ಗದಿಂದಲಾದರೂ ಕಡಿಮೆ ಮಾಡಿಕೊಳ್ಳುವುದು ಉತ್ತಮ. ಹತಾಶೆಯಿಂದ ಅಧ್ಯಾತ್ಮದ ಕಡೆ ಒಲವು ಹೆಚ್ಚಬಹುದು. ಎಲ್ಲ ಕೆಲಸದಲ್ಲಿಯೂ ನಿಮ್ಮ ನಿರೀಕ್ಷೆಯ ಸುಳ್ಳಾಗಿ ಎಲ್ಲರಿಂದ ಹೇಳಿಸಿಕೊಳ್ಳಬೇಕಾಗುವುದು. ಆರೋಗ್ಯದ ಬಗ್ಗೆ ಅತಿಯಾದ ಚಿಂತೆಯಿಂದ ಮತ್ತಷ್ಟು ಹಾಳುಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನವನ್ನು ಕೊಡುವುದು ಕಷ್ಟವಾಗಬಹುದು. ಹಿರಿಯರ ಉಪದೇಶದಲ್ಲಿ ಆಸಕ್ತಿ ಕಡಿಮೆ ಆಗುವುದು. ಸ್ಥಿರಾಸ್ತಿಯ ವಿಚಾರವಾಗಿ ನೆರೆಯವರ ಜೊತೆ ಕಲಹವಾಗಬಹುದು. ಮಾಡಿಕೊಂಡ ಸಾಲವನ್ನು ತೀರಿಸಲು ಸ್ನೇಹಿರಿಂದ ಸಹಾಯ.

ತುಲಾ ರಾಶಿ:

ಹಣವನ್ನು ಅಲ್ಪ ಹೂಡಿಕೆ ಮಾಡಿ ಪರೀಕ್ಷಿಸಿಕೊಳ್ಳಿ. ಸಂತೋಷದ ಸುದ್ದಿಯನ್ನು ಆನಂದಿಸುವ ಮನಃಸ್ಥಿತಿ ಇಂದು ನಿಮ್ಮಲ್ಲಿ ಇರದು. ಸದಾ ಅವಕಾಶಗಳನ್ನು ಹುಡುಕುತ್ತಲೇ ಇರುವಿರಿ. ಸ್ನೇಹಿತರ ಮೇಲೆ ಕೂಗಾಡುವಷ್ಟು ಸಲುಗೆ ಬೇಡ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸಿಕೊಳ್ಳಲು ಯಾರದ್ದಾದರೂ ಸಹಾಯವನ್ನು ಪಡೆಯುವಿರಿ. ತಾಳ್ಮೆಯನ್ನು ಕಳೆದುಕೊಳ್ಳದೇ ಎಲ್ಲರ ಜೊತೆ ವ್ಯವಹರಿಸಿ. ಉನ್ನತ ಸ್ಥಾನದ ನಿರೀಕ್ಷೆಯುಳ್ಳವರು ವಿರುದ್ಧ ದಿಕ್ಕಿನಲ್ಲಿ ಹೋದರೆ ಆಗದು. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉಪಯೋಗಕ್ಕೆ ಬರಲಿದೆ.

ವೃಶ್ಚಿಕ ರಾಶಿ:

ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೋಭಾವವು ಬರಬಹುದು. ಕುಟುಂಬದ ಜೊತೆ ಸುಳ್ಳು ಹೇಳಿ, ನಿಮ್ಮ ನಿಜವಾದ ಕಾರ್ಯವನ್ನು ಮುಚ್ಚಿಡುವಿರಿ. ತಾಯಿಯನ್ನು ಬಹಳ ಚೆನ್ನಾಗಿ ನೋಡಿಕೊಳ್ಳುವಿರಿ. ಯಾರಿಗೂ ನೋವಾಗದಂತೆ ಎಚ್ಚರಿಕೆಯಿಂದ ಮುನ್ನಡೆಯುವುದು ಶ್ರೇಯಸ್ಕರ. ನೂತನ ಉದ್ಯಮಕ್ಕೆ ಹೆಚ್ಚು ಆದ್ಯತೆ ಇರಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಾಗ ನಿಮ್ಮ ಖರ್ಚಿನ ಅಂದಾಜು ತಪ್ಪಿಹೋಗಬಹುದು. ವಾಹನ ಸವಾರಿಯನ್ನು ಬಹಳ ಉತ್ಸಾಹದಿಂದ ಮಾಡುವಿರಿ.

ಧನು ರಾಶಿ:

ವ್ಯಾವಹಾರಿಕ ಜಾಣ್ಮೆಯನ್ನು ನೀವು ಇಟ್ಟುಕೊಂಡು ಲಾಭವನ್ನು ಪಡೆಯುವಿರಿ. ನಿಮಗೆ ವಿದ್ಯೆಯನ್ನು ನೀಡಿದವರು ಅನೇಕ ವರ್ಷಗಳ ಅನಂತರ ಸಿಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ನಿಮ್ಮ ಶ್ರಮ ಬೇಕಾಗುವುದು. ನಿಮ್ಮ ಯೋಜನೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಗಬಹುದು. ಆಸ್ತಿಯನ್ನು ಮಾಡುವ ಚಿಂತನೆ ಅಧಿಕವಾಗಿರುವುದು. ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು. ನಿಮ್ಮ ಇಷ್ಟವಾದ ವಸ್ತುವು ಕಣ್ಮೆಯಾರಿಗಿರುವುದು ಇಂದು ಗೊತ್ತಾಗುವುದು. ಇಂದು ಆರ್ಥಿಕ ಸಹಾಯವನ್ನು ಇನ್ನೊಬ್ಬರಿಂದ ಪಡೆಯುವಿರಿ.

ಮಕರ ರಾಶಿ:

ನಿಮ್ಮ ಕೆಲಸದಿಂದ ಉತ್ತಮ ಹೆಸರು ಕುಟುಂಬಕ್ಕೆ ಸಿಗುವುದು. ನೀವೇ ಕೊಟ್ಟ ಹಣವನ್ನು ಪುನಃ ಕೇಳಲು ಮುಜುಗರವಾದೀತು. ಸಾಲದ ಬಗ್ಗೆ ನಿಮ್ಮನ್ನು ಮತ್ತೆ ಮತ್ತೆ ಎಚ್ಚರಿಸಬೇಕಾಗುವುದು. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ತಲೆಕೊಡಬೇಕಾದೀತು. ನಿಮ್ಮ ಬಗ್ಗೆ ನಕಾರಾತ್ಮಕ ಅಂಶಗಳು ಕೇಳಿಬರಬಹುದು. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಭಯವಾಗಬಹುದು. ನಿಮ್ಮ ಸ್ವಂತ ಕೆಲಸಕ್ಕಾಗಿ ವಿರಾಮ ಸಿಗದು.

ಕುಂಭ ರಾಶಿ:

ನಿಮ್ಮೆದುರೇ ನಿಮ್ಮ ಸಹೋದರರನ್ನು ಹೊಗಳುವುದು ನಿಮಗೆ ಆಗದು. ಯಾರ ಜೊತೆಗಾದರೂ ವೈಮನಸ್ಯವಿದ್ದರೆ ಕುಳಿತು ಮಾತನಾಡಿಕೊಂಡು ಸರಿ ಮಾಡಿಕೊಳ್ಳುವಿರಿ. ನಿಮಗೆ ನಿಮ್ಮವರ ಭಾವವನ್ನು ಸರಿಯಾಗಿ ಅಂದಾಜು ಮಾಡಲಾಗದು. ಹೊಸ ಕಾರ್ಯವನ್ನು ಆರಂಭಿಸಲು ವಿಘ್ನ ಬಾರದೇ ಇದ್ದರೆ, ಮುಂದೆ ಅದು ಬರುವ ಸೂಚನೆಯಾಗಲಿದೆ. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರಬಹುದು. ನಿರಾಕರಿಸುವುದು ಉತ್ತಮ. ಸ್ನೇಹವು ಸಡಿಲವಾಗುವ ಸಾಧ್ಯತೆ ಇದೆ.

ಮೀನ ರಾಶಿ:

ವ್ಯಾಪಾರವು ಕೆಲವು ಆಕಸ್ಮಿಕ ತಿರುವನ್ನು ಪಡೆಯಬಹುದು. ಆತ್ಮೀಯರ ಬಗ್ಗೆ ಕಾಳಜಿ ಹೆಚ್ಚಿರುವುದು. ಚರಾಸ್ತಿಯ ನಷ್ಟಕ್ಕೆ ನೀವೇ ಕಾರಣವಾಗುವಿರಿ. ಆಸ್ತಿಯ ಕಡತಗಳ ಬಗ್ಗೆ ಗಂಭೀರ ಚಿಂತನೆ ಅಗತ್ಯ. ವೃತ್ತಿಯ ಸ್ಥಳದಲ್ಲಿ ಬದಲಾವಣೆಯನ್ನು ಬಯಸುವಿರಿ. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣ ಮಾಡುವಿರಿ.

ಜನವರಿ 25,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಭಾನು ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಸಿದ್ಧ, ಕರಣ : ವಣಿಜ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 19 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16:54 – 18-19 ಯಮಗಂಡ ಕಾಲ 12:37 – 14:02, ಗುಳಿಕ ಕಾಲ 15:28 – 16:54

-ಲೋಹಿತ ಹೆಬ್ಬಾರ್ – 8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ದಿನವಿಡೀ ಪ್ರೊಡಕ್ಟಿವ್ ಆದಂಥ ಕೆಲಸ- ಕಾರ್ಯ, ಚಟುವಟಿಕೆಯಲ್ಲಿ ತೊಡಗಿಕೊಂಡಿರುತ್ತೀರಿ. ಸಂಬಂಧ- ಸ್ನೇಹದಲ್ಲಿ ಈ ಹಿಂದೆ ಯಾರಿಗೆ ಸಮಯ ನೀಡುವುದಕ್ಕೆ ಸಾಧ್ಯವಾಗಿಲ್ಲ ಎಂದು ನಿಮಗೆ ಅನಿಸಿರುತ್ತದೋ ಅಂಥವರ ಜತೆಗೆ ಕಾಲ ಕಳೆಯಲಿದ್ದೀರಿ. ಕೃಷಿ ಉತ್ಪನ್ನಗಳ ಮಾರ್ಕೆಟಿಂಗ್ ನಲ್ಲಿ ತೊಡಗಿಕೊಂಡಿದ್ದೀರಿ ಅಂತಾದಲ್ಲಿ ಆದಾಯದಲ್ಲಿ ಹೆಚ್ಚಳ ಆಗಲಿದೆ. ಇನ್ನು ಕೃಷಿಕರು ಕೆಲವು ಯಂತ್ರ- ಉಪಕರಣಗಳ ಖರೀದಿಗಾಗಿ ವಿಚಾರಣೆ ನಡೆಸಲಿದ್ದೀರಿ, ಅದಕ್ಕಾಗಿ ಕೊಟೇಷನ್ ಪಡೆದುಕೊಳ್ಳುವ ಸಾಧ್ಯತೆ ಸಹ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿಮ್ಮ ಕಾರ್ಯ ವೈಖರಿಯಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ಕೆಲಸ ಪೂರ್ತಿ ಆಗುವ ಮುನ್ನ ಅದರ ಬಗ್ಗೆ ಯಾರ ಜತೆಗೂ ಚರ್ಚೆ ಮಾಡಬಾರದು ಎಂಬ ತೀರ್ಮಾನ ಕೈಗೊಳ್ಳಲಿದ್ದೀರಿ. ಯಾವುದಕ್ಕೂ ಇರಲಿ ಎಂದುಕೊಂಡು, ಕಳೆದ ಕೆಲ ಸಮಯದಿಂದ ಕೂಡಿಡುತ್ತಾ ಬಂದಿದ್ದ ಆಪತ್ ಕಾಲದ ಮೊತ್ತವೊಂದು ಈ ದಿನ ಸಹಾಯಕ್ಕೆ ಬರಲಿದೆ. ತಕ್ಷಣಕ್ಕೆ ಹೊಂದಾಣಿಕೆ ಮಾಡಬೇಕು ಎಂಬಂಥ ವಸ್ತು, ಹಣ ಅಥವಾ ವ್ಯಕ್ತಿಗಳನ್ನು ಶ್ರದ್ಧೆಯಿಂದ ಮಾಡಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ತಲೆಮಾರಿನ ಅಂತರ, ಅಂದರೆ ಜನರೇಷನ್ ಗ್ಯಾಪ್ ಅಂತಾರಲ್ಲ ಈ ದಿನ ನಿಮ್ಮ ಅನುಭವಕ್ಕೆ ಬರಲಿದೆ. ಹಣಕಾಸಿನ ನಿರ್ಧಾರದ ವಿಷಯಕ್ಕೆ ಯಾರಿಗೂ ಸಲಹೆ ನೀಡುವುದಕ್ಕೋ ಅಥವಾ ಹೀಗೇ ನಡೆದುಕೊಳ್ಳಿ ಎನ್ನುವುದಕ್ಕೋ ಹೋಗಬೇಡಿ. ನಿಮ್ಮ ಸಲಹೆಗಳು ಉಪಯುಕ್ತ ಅಲ್ಲ ಎಂಬುದನ್ನು ನೇರವಾಗಿಯೇ ಹೇಳಿ, ಅದನ್ನು ಸಾಬೀತು ಸಹ ಮಾಡಿಬಿಡುವ ಅಪಾಯ ಇದೆ. ಹೀಗಾದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿ ಹೋಗುತ್ತದೆ. ನಿಮ್ಮಲ್ಲಿ ಕೆಲವರಿಗೆ ಸೀಸನಲ್ ವ್ಯವಹಾರದ ಅವಕಾಶವೊಂದು ದೊರೆಯಲಿದೆ. ಒಂದೆರಡು ತಿಂಗಳ ಮಟ್ಟಿಗೆ ಮಾತ್ರ ಆದಾಯ ತಂದುಕೊಡುವಂಥವು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ಒಂದೊಳ್ಳೆ ಸಮಯ ದೊರೆಯಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಕುಟುಂಬದಲ್ಲಿ ಸಾಮರಸ್ಯ ಇರುತ್ತದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆಯೇ ಇತರ ಸದಸ್ಯರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ವ್ಯಾಪಾರ- ವ್ಯವಹಾರದಲ್ಲಿನ ಹೂಡಿಕೆ ವಿಚಾರಗಳಿಗೆ ಪ್ಲಾನಿಂಗ್, ಬಜೆಟ್ ಮಾಡಿಕೊಳ್ಳಲಿದ್ದೀರಿ. ಯಾರು ಉದ್ಯೋಗದಲ್ಲಿ ದೀರ್ಘ ಕಾಲದ ಅಂತರ ಬಂದು, ಈಗ ಕೆಲಸಕ್ಕೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಪ್ರತಿಷ್ಠಿತ ಸಂಸ್ಥೆಯೊಂದರಿಂದ ಆಫರ್ ಬರುವಂಥ ಸೂಚನೆ ಇದೆ. ಅದರಲ್ಲಿಯೂ ನಿಮಗೆ ಅನುಕೂಲ ಆಗುವಂಥ ಪಾಳಿಯಲ್ಲಿಯೇ ಅಥವಾ ಶಾಶ್ವತವಾಗಿ ವರ್ಕ್ ಫ್ರಮ್ ಹೋಮ್ ದೊರೆಯುವಂಥ ಕೆಲಸ ಅದಾಗಿರುವ ಸಾಧ್ಯತೆ ಹೆಚ್ಚಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಉದ್ಯೋಗ ಅಥವಾ ವ್ಯಾಸಂಗದ ಸಲುವಾಗಿ ವಿದೇಶದಲ್ಲಿ ವಾಸ ಆಗಿದ್ದೀರಿ ಅಂತಾದಲ್ಲಿ ಖರ್ಚು- ವೆಚ್ಚವನ್ನು ನಿಭಾಯಿಸುವುದು ಕಷ್ಟವಾಗಲಿದೆ. ಇಷ್ಟು ಸಮಯ ನಿಮಗೆ ನೆರವಾಗುತ್ತಿದ್ದ ಕೆಲವು ಪರಿಸ್ಥಿತಿ ಇನ್ನು ಮುಂದೆ ಹಾಗಿರುವುದಿಲ್ಲ ಎಂಬುದು ಗಮನಕ್ಕೆ ಬರಲಿದೆ. ಸ್ಥಳ ಬದಲಾವಣೆ ಅಥವಾ ನಿಮ್ಮ ನಿರ್ಧಾರದಲ್ಲಿಯೇ ಬದಲಾವಣೆ ಮಾಡಿಕೊಂಡು ಬಿಡುವ ಸಾಧ್ಯತೆ ಇದೆ. ಯಾವುದಾದರೂ ವಿಷಯ ಪೋಷಕರಿಂದ ಮುಚ್ಚಿಟ್ಟಿದ್ದೀರಿ ಅಂದರೆ ಅದನ್ನು ಹೇಳಿಕೊಂಡು ಬಿಡುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಕ್ಕು ಹಗುರಾಗುವುದಕ್ಕೆ ಬೇಕಾದ ವಾತಾವರಣದಲ್ಲಿ ಈ ದಿನ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ. ಸ್ನೇಹಿತರು- ಸಂಬಂಧಿಗಳು ಜತೆಗೂಡಿ ರೆಸಾರ್ಟ್, ಕಿರು ಪ್ರವಾಸ ಇಂಥವುಗಳಿಗೆ ಹೋಗುವ ಯೋಗ ಇದೆ. ಯಾವ ವ್ಯಕ್ತಿಯಿಂದ ನಿಮಗೇನೂ ಅನುಕೂಲ ಆಗುವುದಿಲ್ಲ ಎಂದುಕೊಂಡು ಬಿಟ್ಟಿರುತ್ತೀರೋ ಅಂಥವರಿಂದಲೇ ವೃತ್ತಿ- ವ್ಯವಹಾರ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಮಹತ್ತರವಾದ ಸಹಾಯ ಆಗಲಿದೆ. ಗೃಹಾಲಂಕಾರ ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚು ಆಗಲಿದೆ. ಬ್ರ್ಯಾಂಡೆಡ್ ಉತ್ಪನ್ನಗಳನ್ನೇ ಖರೀದಿಸಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಮನಸ್ಸಿನಲ್ಲಿ ಒಂದು ಬಗೆ ತಲ್ಲಣ ಇರಲಿದೆ. ಹಣಕಾಸಿನ ವಿಚಾರಕ್ಕೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವುದಕ್ಕೆ ಸಾಧ್ಯ ಆಗುತ್ತದೋ ಇಲ್ಲವೋ ಎಂಬ ಕಾರಣವು ನಿಮ್ಮ ಸ್ಥಿತಿಗೆ ಕಾರಣ ಆಗಲಿದೆ. ಇದ್ದದ್ದನ್ನು ಇದ್ದಂತೆಯೇ ನೇರವಾಗಿ ಹೇಳುವುದಕ್ಕೆ ಸಂಕೋಚ ಪಟ್ಟುಕೊಂಡಿದ್ದರಿಂದಲೇ ಇಂಥ ಪರಿಸ್ಥಿತಿ ನಿರ್ಮಾಣ ಆಯಿತು ಎಂದು ನಾಲ್ಕಾರು ಬಾರಿ ಅಂದುಕೊಳ್ಳುತ್ತೀರಿ. ನಿಮ್ಮ ಜೊತೆಗೆ ಕೆಲಸ ಮಾಡುವವರು ಹೆಚ್ಚುವರಿಯಾಗಿ ಆದಾಯ ಬರುವಂತೆ ಕೆಲವು ಸಲಹೆಗಳನ್ನು ನೀಡಲಿದ್ದಾರೆ. ಭಾರವಾದ ವಸ್ತುಗಳನ್ನು ಸಾಗಿಸುವಾಗ ಜಾಗ್ರತೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಕೇಳಿದಷ್ಟು ಹಣವನ್ನು ನೀಡಿದ ಮೇಲೂ ಅಂದುಕೊಂಡಂಥ ಗುಣಮಟ್ಟ ಬರುತ್ತಿಲ್ಲ ಎಂಬುದು ನಿಮ್ಮ ಆಕ್ಷೇಪದ ಮೂಲ ಆಗಲಿದೆ. ಸಣ್ಣ- ಪುಟ್ಟ ಕೆಲಸ ಅಥವಾ ಜವಾಬ್ದಾರಿ ಎಂದು ನೋಡದೆ ನೀವೇ ಮುಂದೆ ನಿಂತು ಮಾಡಿದಂಥ ಕಾರ್ಯಗಳಿಗೆ ಹಲವು ಕಡೆಯಿಂದ ಮೆಚ್ಚುಗೆ ಮಾತುಗಳು ಕೇಳಿಬರಲಿವೆ. ನಿಮಗಾಗಿ ಖರೀದಿ ಮಾಡಿದ್ದಂಥ ಕೆಲವು ಎಲೆಕ್ಟ್ರಿಕ್ ವಸ್ತುವನ್ನು ಇತರರಿಗೆ ನೀಡುವ ಸನ್ನಿವೇಶ ಸೃಷ್ಟಿ ಆಗಲಿದೆ. ರಂಗಭೂಮಿ- ಸಿನಿಮಾ- ಧಾರಾವಾಹಿ- ಯಕ್ಷಗಾನ ಕ್ಷೇತ್ರದಲ್ಲಿ ಯಶಸ್ಸಿದೆ.

ಲೇಖನ- ಸ್ವಾತಿ ಎನ್.ಕೆ.

Source link

WPL 2026: ಈ ಆವೃತ್ತಿಯಲ್ಲಿ ಮೊದಲ ಸೋಲಿಗೆ ಕೊರಳೊಡ್ಡಿದ ಆರ್​ಸಿಬಿ – Kannada News | WPL 2026: Delhi Capitals Dominates RCB in Vadodara, Avenges Previous Loss

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ 15 ನೇ ಪಂದ್ಯವು ವಡೋದರಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಡೆಲ್ಲಿ ತಂಡವನ್ನು ಏಕಪಕ್ಷೀಯವಾಗಿ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲೂ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ಬಾರಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಡೆಲ್ಲಿ ತಂಡ ಯಶಸ್ವಿಯಾಯಿತು. ಆರ್​ಸಿಬಿ ನೀಡಿದ 109 ರನ್​ಗಳ ಅಲ್ಪ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಇನ್ನು 26 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್​ಗಳಿಂದ ಗೆದ್ದುಕೊಂಡಿತು.

Source link

ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್ – Kannada News | Chamarajanagar: MM Hills Leopard Attack: New Pilgrim Timings Imposed for Safety

ಚಾಮರಾಜನಗರ, ಜನವರಿ 24: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara) ಚಿರತೆ (Leopard) ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ಹೊರಡಿಸಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರು ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.

ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಮಾತ್ರ ಅವಕಾಶ

ಚಿರತೆ ದಾಳಿ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಜಿಲ್ಲಾಡಳಿತ ಜನವರಿ 24ವರೆಗೆ ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ಪಾದಯಾತ್ರೆಗೆ ನಿರ್ಬಂಧ ಹೇರಿತ್ತು. ಆದರೆ ಇದೀಗ ಪಾದಯಾತ್ರಿಗರಿ ಜಿಲ್ಲಾಡಳಿತ ಸಮಯದ ಡೈಡ್​ಲೈನ್ ನೀಡಿದೆ. ನಾಳೆಯಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮಾತ್ರ ಪಾದಯಾತ್ರಿಕರಿಗೆ ಹಾಗೂ ದ್ವಿಚಕ್ರ ವಾಹನಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಗ್ಗೆ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಮೂಲದ ಪ್ರವೀಣ್ ಎಂಬ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ತಿಂದ ಘಟನೆ ನಡೆದಿತ್ತು. ಈ ಘಟನೆಯ ಬಳಿಕ ಜಿಲ್ಲಾಡಳಿತವು ತಕ್ಷಣ ಕ್ರಮಕೈಗೊಂಡಿದ್ದು, ಮೊದಲ ಹಂತದಲ್ಲಿ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧವನ್ನು ಜನವರಿ 24ರವರೆಗೆ ಜಾರಿಗೊಳಿಸಲಾಗಿತ್ತು.

ಇದನ್ನೂ ಓದಿ: ಕಾಪಾಡಲಿಲ್ಲ ಮಹದೇಶ್ವರ: ಚಿರತೆ ದಾಳಿಗೆ ಭಕ್ತ ಬಲಿ; ಪಾದಯಾತ್ರೆಗೆ 4 ದಿನಗಳ ಕಾಲ ನಿರ್ಬಂಧ

ಚಿರತೆ ದಾಳಿ ಸಂಭವಿಸುವ ಮೊದಲು ಪಾದಯಾತ್ರಿಕರು ಮತ್ತು ದ್ವಿಚಕ್ರ ವಾಹನಗಳಿಗೆ 24 ಗಂಟೆಗಳ ಕಾಲವೂ ಸಂಚಾರಕ್ಕೆ ಅವಕಾಶವಿತ್ತು. ಆದರೆ ಇತ್ತೀಚಿನ ದುರ್ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೊಸ ಸಮಯ ಮಿತಿಯನ್ನು ವಿಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದ್ವೇಷ ಭಾಷಣ ಕಾಯ್ದೆಯಾಗುವ ಮುನ್ನವೇ ಬಿಜೆಪಿಗರ ಮೇಲೆ ಪೊಲೀಸ್ ನೋಟಿಸ್ ಅಸ್ತ್ರ, ಶಾಸಕ ಕಿಡಿ – Kannada News | Chikkamagaluru Police Notice To BJP Leader Under hate speech bill before implement as Law

ಬೆಂಗಳೂರು, (ಜನವರಿ 24): ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025’ (Karnataka Hate Speech And Hate Crimes Bill) ಅಂಗೀಕಾರಗೊಂಡಿದ್ದು, ಇದಕ್ಕೆ ಇನ್ನೂ ರಾಜ್ಯಪಾಲರ ಅಂಕಿತ ಬಿದ್ದಿಲ್ಲ. ಆದರೂ ಸಹ ಗೃಹ ಇಲಾಖೆ ದ್ವೇಷ ಭಾಷಣದಡಿಯಲ್ಲಿ ಬಿಜೆಪಿ(BJP) ಮುಖಂಡರಿಗೆ ನೋಟಿಸ್ ನೀಡಿರುವು ಬೆಳಕಿಗೆ ಬಂದಿದೆ. ಹೌದು.. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆಯಲ್ಲಿ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳುವ ಮೊದಲೇ ಬಿಜೆಪಿ ಮುಖಂಡ ವಿಕಾಸ ಪುತ್ತೂರ್ ಅವರಿಗೆ ದ್ವೇಷ ಭಾಷಣ ಕಾಯ್ದೆಯ ಎಚ್ಚರಿಕೆ ನೀಡಿ ನೋಟಿಸ್ ನೀಡಲಾಗಿದೆ.

ಇಂದು (ಜನವರಿ 24) ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಹಿಂದೂ ಸಮಾಜೋತ್ಸವ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು, ವಿಕಾಸ ಪುತ್ತೂರ್ ದಿಕ್ಕೂಚಿ ಭಾಷಣಕಾರರಾಗಿದ್ದರು. ಹೀಗಾಗಿ ಚಿಕ್​ಕಮಗಳೂರು ಪೊಲೀಸ್, ವಿಕಾಸ ಪುತ್ತೂರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ದ್ವೇಷ ಭಾಷಣ ಮಸೂದೆ-2025 ಆನ್ವಯ ಸದರಿ ಕಾಯ್ದೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾರ್ಯಕ್ರಮವನ್ನು ನೆಡಸಿಕೊಂಡು ಹೋಗುವುದು. ತಪ್ಪಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್​​ನಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ದ್ವೇಷ ಭಾಷಣ ಮಸೂದೆ ಕಾನೂನಾಗಿ ಜಾರಿಗೆ ಬಂದಿಲ್ಲ. ಆಗಲೇ ಪೊಲೀರು ಬಿಜೆಪಿ ಮುಖಂಡನ ಮೇಲೆ ಕ್ರಮದ ಬಗ್ಗೆ ಎಚ್ಚರಿಕೆ ನೋಟಿಸ್ ನೀಡಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿಳ 22ರಲ್ಲಿ 19 ಮಸೂದೆ ಪಾಸ್, ಎರಡು ವಾಪಸ್: ಕಾಂಗ್ರೆಸ್​​​​ನ ದ್ವೇಷ ಭಾಷಣ ಬಿಲ್ ಆಸೆ​ ಠುಸ್

ಈ ಸಂಬಂಧ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಸಮಾಜಿಕ ಜಾಲತಾಣದ ಮೂಲಕ ಧ್ವನಿ ಎತ್ತಿದ್ದು, ಗೃಹ ಇಲಾಖೆಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದ್ವೇಷ ಭಾಷಣ ಮಸೂದೆ ಕಾಯ್ದೆಯಾಗಿದೆಯೇ? ರಾಜ್ಯಪಾಲರಿಂದ ಇದಕ್ಕೆ ಅಂಕಿತ ಸಿಕ್ಕಿದೆಯೇ? Anticipatory Bail ಎಂಬುದು ಗೊತ್ತಿತ್ತು. ಆದರೆ ಕಾಯ್ದೆ ಜಾರಿಯಾಗುವ ಮೊದಲೇ Anticipatory Notice ನಿಜಕ್ಕೂ ಗೃಹ ಇಲಾಖೆಯ ಹೊಸ ಕಾರ್ಯ ವೈಖರಿ ಎಂದು ಕಿಡಿಕಾರಿದ್ದಾರೆ.

ಸುರೇಶ್ ಕುಮಾರ್ ಪೋಸ್ಟ್​​ ಹೀಗಿದೆ

ವಿಕಾಸ ಪುತ್ತೂರ್ ನಮ್ಮ ಪಕ್ಷದ ಹಿರಿಯ ಕಾರ್ಯಕರ್ತರು. ನನ್ನ ಆತ್ಮೀಯ ಸಹಕಾರಿಗಳೂ ಸಹ. ಪಕ್ಷದಲ್ಲಿನ ಅನ್ಯಾನ್ಯ ಜವಾಬ್ದಾರಿಗಳನ್ನು ಬಹಳ ಶ್ರದ್ದೆಯಿಂದ ನಿರ್ವಹಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳಲು ಅವರು ಬಂದಾಗ ಅವರಿಗೆ ಪೊಲೀಸರು ನೀಡಿರುವ “ಪ್ರೇಮಪತ್ರ” ಇದು. ಅಂದ ಹಾಗೆ ರಾಜ್ಯದ ಗೃಹ ಸಚಿವರಿಗೆ ಹಾಗೂ ವಿಕಾಸ ಪುತ್ತೂರು ಅವರಿಗೆ ನೋಟಿಸ್ ಕೊಟ್ಟ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಗೆ ಇಬ್ಬರಿಗೂ ನನ್ನದೊಂದು ಪ್ರಶ್ನೆ

  • ದ್ವೇಷ ಭಾಷಣ ಮಸೂದೆ ಕಾಯ್ದೆಯಾಗಿದೆಯೇ? ರಾಜ್ಯಪಾಲರಿಂದ ಇದಕ್ಕೆ ಅಂಕಿತ ಸಿಕ್ಕಿದೆಯೇ?
    Anticipatory Bail ಎಂಬುದು ಗೊತ್ತಿತ್ತು. ಆದರೆ ಕಾಯ್ದೆ ಜಾರಿಯಾಗುವ ಮೊದಲೇ Anticipatory Notice ನಿಜಕ್ಕೂ ಗೃಹ ಇಲಾಖೆಯ ಹೊಸ ಕಾರ್ಯ ವೈಖರಿ.
  •  ಇಷ್ಟೊಂದು ಎಚ್ಚರಿಕೆಯಿಂದ ಮತ್ತು ಜತನದಿಂದ ಕಾರ್ಯ ನಿರ್ವಹಿಸುವ ಪೊಲೀಸರಿಗೆ ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ರವರನ್ನು ಇನ್ನೂ ಬಂಧಿಸಲು ಏಕೆ ಸಾಧ್ಯವಾಗಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರು ಪೊಲೀಸರ​ ನೋಟಿಸ್​​ನಲ್ಲೇನಿದೆ?

ಈ ಮೂಲಕ ನಿಮಗೆ (ವಿಕಾಸ ಪುತ್ತೂರು ಅವರಿಗೆ) ತಿಳಿಯಪಡಿಸುವುದೇನೆಂದರೆ, ದಿನಾಂಕ 24-01-2026 ರಂದು ಹಿಂದೂ ಸಮಾಜೋತ್ಸವ ಶೋಭಾಯಾತ್ರೆ ಹಾಗೂ ಸಾರ್ವಜನಿಕ ಸಮಾರಂಭವನ್ನು ಬಯಲು ರಂಗಮಂದಿರ ತರೀಕೆರೆಯಲ್ಲಿ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ದಿಕ್ಕೂಚಿ ಭಾಷಣಕಾರರಾಗಿ ನೀವು ಆಗಮಿಸಿದ್ದು, ನೀವು ಹಿಂದೂ ಭಾಂದವರನ್ನು ಆದೇಶಿಸಿ ಭಾಷಣ ಮಾಡಲಿದ್ದು, ತಾವುಗಳು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಕಾರ್ಯಕ್ರದಲ್ಲಿ ಭಾಷಣವನನು ಮಾಡಲು ಈ ಮೂಲಕ ನಿಮಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿರುತ್ತದೆ.

  • ನೀವುಗಳು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುವ ಸಮಯದಲ್ಲಿ ಅನ್ಯ ಕೋಮಿನ ಸಮುದಾಯದವರ ಭಾವನೆಗಳಿಗೆ ದಕ್ಕೆ ಉಂಟಾಗದಂತೆ ನೋಡಿಕೊಳ್ಳುವುದು.
  •  ತಾವು ಮಾಡುವ ಭಾಷಣವು ಯಾವುದೇ ಗುಂಪಿನ ವಿರುದ್ಧ ದ್ವೇಷ ಹಿಂಸೆ ಪ್ರಚೋದನೆಗೆ ಒಳಪಡಬಾರದು.
  •  ಶೋಭಾಯಾತ್ರೆಯ ಸಮಯದಲ್ಲಿ ತಾವುಗಳು ತರೀಕೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಕಾರ್ಯಕ್ರಮಮ ಹಮ್ಮಿಕೊಂಡಿದ್ದು ಶಾಂತ ರೀತಿಯಲ್ಲಿ ಸಾರ್ವಜನಿಕರಿಗೆ ಮತ್ತು ಸುಗುಮ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದು.
  •  ಘನ ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ದ್ವೇಷ ಭಾಷಣ ಮಸೂದೆ-2025 ಆನ್ವಯ ಸದರಿ ಕಾಯ್ದೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾರ್ಯಕ್ರಮವನ್ನು ನೆಡಸಿಕೊಂಡು ಹೋಗುವುದು. ತಪ್ಪಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

11 ವರ್ಷಗಳ ಬಳಿಕ ಕಂಬಳದ ಕತೆ ಹೊತ್ತು ಬಂದ ರಾಜೇಂದ್ರ ಸಿಂಗ್ ಬಾಬು – Kannada News | Rajendra Singh Babu’s Veera Kambala movie will release in February

ರಾಜೇಂದ್ರ ಸಿಂಗ್ ಬಾಬು ಕನ್ನಡ ಚಿತ್ರರಂಗದ (Sandalwood) ಹಿರಿಯ ಮತ್ತು ಯಶಸ್ವಿ ನಿರ್ದೇಶಕ. ಚಿತ್ರರಂಗಕ್ಕೆ ಹಲವು ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ‘ಅಂತ’, ‘ನಾಗರಹೊಳೆ’, ‘ಬಂಧನ’, ‘ಮುತ್ತಿನ ಹಾರ’ ಹೀಗೆ ಅನೇಕ ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ಇದೀಗ ಅವರು ತುಳು ನಾಡಿನ ಸಂಸ್ಕೃತಿಯಲ್ಲಿ ಬೆರೆತು ಹೋಗಿರುವ ಕ್ರೀಡೆ ಕಂಬಳ ಕುರಿತಾದ ಕತೆ ಹೊಂದಿರುವ ಹೊಸ ಸಿನಿಮಾ ನಿರ್ದೇಶಿಸಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಸುಮಾರು 11 ವರ್ಷಗಳ ಬಳಿಕ ರಾಜೇಂದ್ರ ಸಿಂಗ್ ಬಾಬು ಅವರ ಸಿನಿಮಾ ಒಂದು ಬಿಡುಗಡೆ ಆಗಲಿಕ್ಕೆ ತಯಾರಾಗಿದೆ.

ರಾಜೇಂದ್ರ ಸಿಂಗ್ ಬಾಬು ಅವರು ‘ವೀರ ಕಂಬಳ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದಾರೆ. ತುಳು ನಾಡಿನ ಸಂಸ್ಕೃತಿಯಾದ ಕಂಬಳದ ಬಗೆಗಿನ ಸಿನಿಮಾ ಆಗಿದ್ದು, ಈ ಕ್ರೀಡೆಗೆ ಸುಮಾರು ಎಂಟುನೂರು ವರ್ಷಗಳ ಇತಿಹಾಸವಿದೆ. ಈಗ ಈ ಕ್ರೀಡೆ ಸಾಕಷ್ಟು ಬದಲಾವಣೆಗೆ ಒಳಪಟ್ಟಿದೆ. ಆದರೆ ರಾಜೇಂದ್ರ ಸಿಂಗ್ ಬಾಬು ಅವರು ಈ ಕ್ರೀಡೆಯ ಬಗ್ಗೆ ಸಾಕಷ್ಟು ಸಂಶೋಧನೆ ನಡೆಸಿ ಕತೆ ಮಾಡಿದ್ದಾರೆ. ಕನ್ನಡ ಹಾಗೂ ತುಳು ಭಾಷೆಗಳಲ್ಲಿ ‘ವೀರ ಕಂಬಳ’ ಸಿನಿಮಾವನ್ನು ನಿರ್ಮಿಸಲಾಗಿದೆ.

ಕಂಬಳವನ್ನು ಕೇಂದ್ರವಾಗಿಟ್ಟುಕೊಂಡು ಈ ಕಥೆ, ಚಿತ್ರಕಥೆ ಸಿದ್ಧಪಡಿಸಲು ರಾಜೇಂದ್ರ ಸಿಂಗ್ ಬಾಬು ಅವರು ಸುಮಾರು ಎರಡು ವರ್ಷಗಳ ಕಷ್ಟ ಪಟ್ಟಿದ್ದಾರೆ. ತುಳು ರಂಗಭೂಮಿಯ ಪ್ರಸಿದ್ಧ ನಿರ್ದೇಶಕ ವಿಜಯ್ ಕೊಡಿಯಾಲ್ ಬೈಲ್ ಅವರು ಸಹ ಈ ಸಿನಿಮಾಕ್ಕೆ ಜೊತೆಯಾಗಿದ್ದು, ಚಿತ್ರಕತೆ ಮತ್ತು ಸಂಭಾಷಣೆ ಬರೆದಿದ್ದಾರೆ. ರಾಜೇಂದ್ರ ಸಿಂಗ್ ಬಾಬು ಅವರ ಪುತ್ರ ಆದಿತ್ಯ ಅವರು ನಾಯಕನಾಗಿ ನಟಿಸಿದ್ದಾರೆ. ತುಳುನಾಡಿನ ಪ್ರಾಜ್ಞರ ಮಾರ್ಗದರ್ಶನದಲ್ಲಿ ಯಾವುದೇ ತೊಡಕಿಲ್ಲದಂತೆ ವೀರ ಕಂಬಳವನ್ನು ಸಿನಿಮಾ ಮಾಡಿರುವುದಾಗಿ ರಾಜೇಂದ್ರ ಸಿಂಗ್ ಬಾಬು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:

ದಕ್ಷಿಣ ಕನ್ನಡದ ಮೂಡುಬಿದರೆಯ ಬಳಿಯಲ್ಲಿ ವಿಶಾಲವಾದ ಕಂಬಳದ ಗದ್ದೆಯನ್ನು ಸಿದ್ಧಪಡಿಸಿ, ಅಲ್ಲಿ ಕಂಬಳದ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಪ್ರತೀ ದಿನ ಇಪ್ಪತ್ತು ಜೊತೆ ಕೋಣಗಳು ಹಾಗೂ ಐನೂರಕ್ಕೂ ಅಧಿಕ ಮಂದಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದರಂತೆ. ವಿಶೇಷವೆಂದರೆ, ಕಂಬಳದಲ್ಲಿ ಕೋಣಗಳನ್ನು ಓಡಿಸೋದರಲ್ಲಿ ದಾಖಲೆ ಬರೆದಿರುವ ಶ್ರೀನಿವಾಸ್ ಗೌಡ ಇಲ್ಲಿಯೂ ಸಹ ಶ್ರೀನಿವಾಸ್ ಗೌಡರ ಪಾತ್ರದಲ್ಲೇ ನಟಿಸಿದ್ದಾರೆ. ಸ್ವರಾಜ್ ಶೆಟ್ಟಿ ಅವರಿಗೆ ಜೊತೆಯಾಗಿದ್ದಾರೆ. ಸಿನಿಮಾದ ಚಿತ್ರೀಕರಣವನ್ನು ದುಬೈನಲ್ಲಿಯೂ ಮಾಡಲಾಗಿದೆ. ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳ ಅಂತಿಮ ಘಟ್ಟದಲ್ಲಿರುವ ಚಿತ್ರತಂಡ ಇಷ್ಟರಲ್ಲಿಯೇ ಬಿಡುಗಡೆಯ ನಿಖರ ದಿನಾಂಕ ಘೋಷಿಸಲಿದೆ.

ಈ ಚಿತ್ರವನ್ನು ಬಾಬಾ’ಸ್ ಬ್ಲೆಸಿಂಗ್ ಫಿಲ್ಮ್ಸ್ ಬ್ಯಾನರಿನಡಿಯಲ್ಲಿ ಡಾ.ವಿನಿತ ವಿಜಯ್ ಕುಮಾರ್ ರೆಡ್ಡಿ ಹಾಗೂ ಅರುಣ್ ರೈ ತೊಡಾರ್ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ಚೇತನ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ. ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಸದರಿ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಪ್ರಸಿದ್ಧ ತುಳು ರಂಗಭೂಮಿ ಹಿನ್ನೆಲೆಯ ನಟರು ನಟಿಸಿದ್ದಾರೆ. ವಿಜಯ್ ಕೊಡಿಯಾಲ್‌ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಫೆಬ್ರವರಿಯಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Pro Wrestling League 2026: ಭಾರತೀಯ ಕುಸ್ತಿಪಟುಗಳಿಗೆ ಹೊಸ ವೇದಿಕೆ ಪ್ರೊ ಕುಸ್ತಿ ಲೀಗ್ – Kannada News | Pro Wrestling League 2026: Noida Hosts Olympic Level Action & Global Stars

ಒಲಿಂಪಿಕ್ ಮಟ್ಟದ ಕುಸ್ತಿಯನ್ನು ವೃತ್ತಿಪರ ಕ್ರೀಡೆಯಾಗಿ ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ಪ್ರೊ ಕುಸ್ತಿ ಲೀಗ್-2026 ( Pro Wrestling League 2026) ಉತ್ತರ ಪ್ರದೇಶದ ನೋಯ್ಡಾದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ದೇಶೀಯ ಕುಸ್ತಿಪಟುಗಳು ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುವ ಈ ಲೀಗ್, ಕುಸ್ತಿಗೆ ಹೊಸ ಗುರುತನ್ನು ತರಲಿದೆ. ಯುವ ಕುಸ್ತಿಪಟುಗಳಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಅನುಭವವನ್ನು ಒದಗಿಸುವುದು ಈ ಲೀಗ್‌ನ ಮುಖ್ಯ ಉದ್ದೇಶವಾಗಿದೆ. ವೈಯಕ್ತಿಕ ಸ್ಪರ್ಧೆಯಾಗಿರುವ ಕುಸ್ತಿಯನ್ನು ತಂಡ ಆಧಾರಿತ ಸ್ವರೂಪವಾಗಿ ಪರಿವರ್ತಿಸುವುದು ಮತ್ತು ಅಭಿಮಾನಿಗಳಿಗೆ ಅದನ್ನು ಹೆಚ್ಚು ಆಸಕ್ತಿದಾಯಕವಾಗಿಸುವುದು ಮತ್ತೊಂದು ಗುರಿಯಾಗಿದೆ.

ಕುಸ್ತಿಪಟುಗಳಿಗೆ ವೃತ್ತಿಪರ ವೇದಿಕೆ

ಪಿಡಬ್ಲ್ಯೂಎಲ್ ಕುಸ್ತಿಪಟುಗಳಿಗೆ ನಿಯಮಿತ ವೃತ್ತಿಪರ ಸ್ಪರ್ಧೆಗಳು ಮತ್ತು ವೃತ್ತಿ ಭದ್ರತೆಯನ್ನು ಒದಗಿಸುತ್ತದೆ. ಗ್ರಾಮೀಣ ಪ್ರದೇಶಗಳಿಂದ ರಾಷ್ಟ್ರೀಯ ತಂಡಕ್ಕೆ ಮತ್ತು ಅಲ್ಲಿಂದ ಅಂತರರಾಷ್ಟ್ರೀಯ ಸ್ಪರ್ಧೆಗಳಿಗೆ ಕುಸ್ತಿಪಟುಗಳನ್ನು ಸಿದ್ಧಪಡಿಸುವ ವೇದಿಕೆಯಾಗಿದೆ. ಪ್ರೊ ಕುಸ್ತಿ ಲೀಗ್ ಯುವ ಕುಸ್ತಿಪಟುಗಳಿಗೆ ಉತ್ತಮ ವೇದಿಕೆಯಾಗಿದೆ ಎಂದು ಕ್ರೀಡಾ ತಜ್ಞರ ಅಭಿಪ್ರಾಯವಾಗಿದೆ.

ಜನವರಿ 15 ರಿಂದ ಫೆಬ್ರವರಿ 1 ರವರೆಗೆ

ಮೇಲೆ ಹೇಳಿದಂತೆ ಪ್ರೊ ಕುಸ್ತಿ ಲೀಗ್- 2026 ಜನವರಿ 15 ರಿಂದ ಫೆಬ್ರವರಿ 1 ರವರೆಗೆ ಉತ್ತರ ಪ್ರದೇಶದ ನೋಯ್ಡಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಭಿಮಾನಿಗಳು ಸೋನಿ ಲಿವ್ ಮತ್ತು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ (ಸೋನಿ ಟೆನ್ 4, ಸೋನಿ ಟೆನ್ 5) ನಲ್ಲಿ ಲೀಗ್ ಅನ್ನು ನೇರ ಪ್ರಸಾರ ವೀಕ್ಷಿಸಬಹುದಾಗಿದೆ. ಹಾಗೆಯೇ ದೂರದರ್ಶನ ಹಾಗೂ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿಯೂ ಪ್ರಸಾರ ಮಾಡಲಾಗುತ್ತದೆ.

ಭಾರತೀಯ ಕುಸ್ತಿಪಟುಗಳಿಗೆ ಹೊಸ ಸವಾಲು

ಇಲ್ಲಿಯವರೆಗೆ ಕೆಲವೇ ಕಾರ್ಯಕ್ರಮಗಳಿಗೆ ಸೀಮಿತವಾಗಿದ್ದ ಕುಸ್ತಿಯನ್ನು ಪ್ರಮುಖ ಪ್ರೇಕ್ಷಕರ ಕ್ರೀಡೆಯನ್ನಾಗಿ ಪರಿವರ್ತಿಸುವುದು ಪಿಡಬ್ಲ್ಯೂಎಲ್ ಗುರಿಯಾಗಿದೆ. ವಿವಿಧ ದೇಶಗಳ ಕ್ರೀಡಾಪಟುಗಳ ಭಾಗವಹಿಸುವಿಕೆಯು ಸ್ಪರ್ಧೆಯ ವೈವಿಧ್ಯತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಭಾರತೀಯ ಕುಸ್ತಿಪಟುಗಳಿಗೆ ಹೊಸ ಸವಾಲುಗಳನ್ನು ಒಡ್ಡುತ್ತಿದೆ. ಅದೇ ಸಮಯದಲ್ಲಿ, ಅಭಿಮಾನಿಗಳು ವಿಶ್ವ ದರ್ಜೆಯ ಕುಸ್ತಿಯನ್ನು ನೇರಪ್ರಸಾರ ವೀಕ್ಷಿಸುವ ಅವಕಾಶವನ್ನು ಪಡೆಯುತ್ತಾರೆ.

ಪ್ರೊ ಕುಸ್ತಿ ಲೀಗ್- 2026 ತಂಡಗಳು

  1. ಡೆಲ್ಲಿ ದಂಗಲ್ ವಾರಿಯರ್ಸ್
  2. ಹರಿಯಾಣ ಥಂಡರ್ಸ್
  3. ಟೈಗರ್ಸ್ ಆಫ್ ಮುಂಬೈ ದಂಗಲ್
  4. ಮಹಾರಾಷ್ಟ್ರ ಕೇಸರಿ
  5. ಪಂಜಾಬ್ ರಾಯಲ್ಸ್
  6. ಯುಪಿ ಡೊಮಿನೇಟರ್ಸ್

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಕೇಂದ್ರ ಗುಡ್​​ ನ್ಯೂಸ್​​: ವೇತನ ಪರಿಷ್ಕರಣೆಗೆ ಅಸ್ತು – Kannada News | Central Govt Approves Wage and Pension Revision: Boost for PSU Insurance, NABARD, RBI Employees and Pensioners

ದೆಹಲಿ, ಜನವರಿ 24: ಬಹುಕಾಲದಿಂದ ಬಾಕಿ ಉಳಿದಿದ್ದ ವೇತನ ಪರಿಷ್ಕರಣೆಗೆ (Wage Revision) ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಆ ಮೂಲಕ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್​​ ಉದ್ಯೋಗಿಗಳು, ಭಾರತೀಯ ರಿಸರ್ವ್​​ ಬ್ಯಾಂಕ್ ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​​​ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳವಾಗಲಿದೆ.​​​

ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಮಾಧ್ಯಮ ಪ್ರಕರಟಣೆ ಹೊರಡಿಸಿದೆ. ಈ ನಿರ್ಧಾರವು ಪಿಂಚಣಿದಾರರ ದೀರ್ಘ ಮತ್ತು ಸಮರ್ಪಿತ ವೃತ್ತಿಪರ ಸೇವೆಯನ್ನು ಗುರುತಿಸಿ, ಸರ್ಕಾರದ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಯೋಗಕ್ಷೇಮದ ಮೇಲಿನ ನಿರಂತರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಒತ್ತಿ ಹೇಳಿದೆ.

ನಿರ್ಮಲಾ ಸೀತಾರಾಮನ್ ಟ್ವೀಟ್​

ಸಾರ್ವಜನಿಕ ವಲಯದ ವಿಮಾ ಸಂಸ್ಥೆಗಳ ಉದ್ಯೋಗಿಗಳಿಗೆ ವೇತನ ಪರಿಷ್ಕರಣೆ ಘೋಷಣೆಯಾಗಿದ್ದು, ಈ ಪರಿಷ್ಕರಣೆಯಿಂದ ಒಟ್ಟಾರೆ ವೇತನ ವೆಚ್ಚದಲ್ಲಿ 12.41 ಶೇಕಡಾ ಹೆಚ್ಚಳವಾಗಲಿದೆ. ಇದರ ಭಾಗವಾಗಿ, ಪ್ರಸ್ತುತ ಮೂಲ ವೇತನ ಮತ್ತು ಡಿಯರ್ನೆಸ್ ಅಲೌನ್ಸ್ ಮೇಲೆ 14 ಶೇಕಡಾ ಹೆಚ್ಚಳ ನೀಡಲಾಗುತ್ತದೆ.

ಇದನ್ನೂ ಓದಿ: ಗುಜರಾತ್​ನಲ್ಲಿ ಗೆಲುವು ಹೀಗೆಯೇ ಆರಂಭವಾಗಿತ್ತು, ಮುಂದೆ ಕೇರಳದಲ್ಲೂ ಗೆಲ್ತೀವಿ: ಪ್ರಧಾನಿ ಮೋದಿ

ಈ ವೇತನ ಪರಿಷ್ಕರಣೆಯಿಂದ ಒಟ್ಟು 43,247 ಪಿಎಸ್‌ಜಿಐಸಿ ಉದ್ಯೋಗಿಗಳು ಲಾಭ ಪಡೆಯಲಿದ್ದಾರೆ. ಜೊತೆಗೆ, 01 ಏಪ್ರಿಲ್ 2010ರ ನಂತರ ಸೇವೆಗೆ ಸೇರಿದ ಉದ್ಯೋಗಿಗಳ ಭವಿಷ್ಯ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್)ಗೆ ನೀಡುವ ಕೊಡುಗೆಯನ್ನು 10 ಶೇಕಡೆಯಿಂದ 14 ಶೇಕಡಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ವೇತನ ಪರಿಷ್ಕರಣೆಯಿಂದ ಸರ್ಕಾರಕ್ಕೆ ಒಟ್ಟು ರೂ. 8,170.30 ಕೋಟಿ ರೂ ವೆಚ್ಚವಾಗಲಿದೆ. ಇದರಲ್ಲಿ ವೇತನ ಪರಿಷ್ಕರಣೆ ಬಾಕಿ ಹಣ (ಅರಿಯರ್ಸ್) ಪಾವತಿಗೆ ರೂ. 5,822.68 ಕೋಟಿ ಮೀಸಲಿಡಲಾಗಿದೆ. ಜೊತೆಗೆ, ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್)ಗಾಗಿ ರೂ. 250.15 ಕೋಟಿ ರೂ ಹಾಗೂ ಕುಟುಂಬ ಪಿಂಚಣಿಗೆ ರೂ. 2,097.47 ಕೋಟಿ ರೂ ವೆಚ್ಚವಾಗಲಿದೆ.

ನಬಾರ್ಡ್‌ನ ಗ್ರೂಪ್ ‘ಎ’, ‘ಬಿ’ ಮತ್ತು ‘ಸಿ’ ವರ್ಗದ ಎಲ್ಲಾ ಉದ್ಯೋಗಿಗಳಿಗೆ ವೇತನ ಹಾಗೂ ಭತ್ಯೆಗಳಲ್ಲಿ  ಶೇಕಡಾ 20ರಷ್ಟು ಹೆಚ್ಚಳ ನೀಡಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಿಂದ ಸುಮಾರು 3,800 ಸೇವೆಯಲ್ಲಿರುವ ಹಾಗೂ ನಿವೃತ್ತ ಉದ್ಯೋಗಿಗಳು ಲಾಭ ಪಡೆಯಲಿದ್ದಾರೆ. ಈ ವೇತನ ಪರಿಷ್ಕರಣೆಯಿಂದ ನಬಾರ್ಡ್‌ಗೆ ವರ್ಷಕ್ಕೆ ಹೆಚ್ಚುವರಿ ಸುಮಾರು ರೂ. 170 ಕೋಟಿ ರೂ ವೇತನ ವೆಚ್ಚವಾಗಲಿದೆ. ಅಲ್ಲದೆ, ಬಾಕಿ ಹಣ (ಅರಿಯರ್ಸ್) ಪಾವತಿಗೆ ಒಟ್ಟು ಸುಮಾರು ರೂ. 510 ಕೋಟಿ ವೆಚ್ಚವಾಗಲಿದೆ.

ಪಿಂಚಣಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಒಮ್ಮೆ ಮಾತ್ರ ನೀಡಲಾಗುವ ಬಾಕಿ ಪಾವತಿಗೆ ರೂ. 50.82 ಕೋಟಿ ರೂ ಖರ್ಚಾಗಲಿದ್ದು, ಪ್ರತೀ ತಿಂಗಳು ಪಿಂಚಣಿ ಪಾವತಿಗಾಗಿ ಹೆಚ್ಚುವರಿಯಾಗಿ ರೂ. 3.55 ಕೋಟಿ ರೂ ವೆಚ್ಚವಾಗಲಿದೆ. ಇದರಿಂದ ನಬಾರ್ಡ್‌ನ 269 ಪಿಂಚಣಿದಾರರು ಹಾಗೂ 457 ಕುಟುಂಬ ಪಿಂಚಣಿದಾರರು ಲಾಭ ಪಡೆಯಲಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಕಾಂಗ್ರೆಸ್​​​​​ ನಿಯಮವನ್ನು ಉಲ್ಲಂಘಿಸಿಲ್ಲ: ಈ ವಿಚಾರದಲ್ಲಿ ಕೇಂದ್ರವನ್ನು ಬೆಂಬಲಿಸುವೆ ಎಂದ ಶಶಿ ತರೂರ್

ಇನ್ನು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ನಿವೃತ್ತ ಉದ್ಯೋಗಿಗಳಿಗೆ ಪಿಂಚಣಿ ಹಾಗೂ ಕುಟುಂಬ ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹಿರಿಯ ನಾಗರಿಕರು ಹಾಗೂ ಅವಲಂಬಿತರಿಗಾಗಿ ನ್ಯಾಯಸಮ್ಮತ, ಸಮರ್ಪಕ ಮತ್ತು ದೀರ್ಘಕಾಲಿಕ ನಿವೃತ್ತಿ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಸುಮಾರು 46,322 ಉದ್ಯೋಗಿಗಳು, 23,570 ಪಿಂಚಣಿದಾರರು ಹಾಗೂ 23,260 ಕುಟುಂಬ ಪಿಂಚಣಿದಾರರು ಲಾಭ ಪಡೆಯಲಿದ್ದಾರೆ. ಈ ನಿರ್ಧಾರವು ಪಿಎಸ್‌ಜಿಐಸಿ ಮತ್ತು ನಬಾರ್ಡ್ ಸಂಸ್ಥೆಗಳ ಉದ್ಯೋಗಿಗಳು, ಆರ್‌ಬಿಐ ಹಾಗೂ ನಬಾರ್ಡ್‌ನ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ಮಹತ್ವದ ಪರಿಹಾರವನ್ನು ಒದಗಿಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version