Headlines

ಮುಂದಿನ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು, ಮೇ 28: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮತ್ತು ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು, ತಮಗೆ ಹೈಕಮಾಂಡ್‌ನಿಂದ ರಾಜ್ಯಸಭಾ ಸ್ಥಾನದ ಆಫರ್ ಬಂದಿದ್ದರೂ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲದ ಕಾರಣ ಅದನ್ನು ವಿನಮ್ರವಾಗಿ ನಿರಾಕರಿಸಿರೋದಾಗಿ ತಿಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ. ಜನ ನನ್ನನ್ನು ಐದು ವರ್ಷಕ್ಕೆ ಆಯ್ಕೆ ಮಾಡಿದ್ದಾರೆ, ಇನ್ನೆರಡು ವರ್ಷಗಳು ಬಾಕಿ ಇವೆ. ಅಲ್ಲಿಯವರೆಗೂ…

Read More

RR vs GT: ಕ್ವಾಲಿಫೈಯರ್ 2 ರದ್ದಾದರೆ ಯಾರಿಗೆ ಫೈನಲ್‌ ಟಿಕೆಟ್?

2026 ರ ಐಪಿಎಲ್ (IPL 2026) ಇದೀಗ ಅಂತಿಮ ಹಂತವನ್ನು ತಲುಪಿದೆ. ಈ ವರ್ಷದ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಯಾರು ಎದುರಿಸುತ್ತಾರೆ ಎಂಬುದು ಕ್ವಾಲಿಫೈಯರ್ 2 ಪಂದ್ಯ ಮುಗಿದ ಬಳಿಕ ಗೊತ್ತಾಗಲಿದೆ. ಅದರಂತೆ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇತ್ತ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಆದರೆ ಈ ಪಂದ್ಯ ಮಳೆಯಿಂದಾಗಿ…

Read More

Netrasemi Chip: ಭಾರತದ ನೇತ್ರಸೆಮಿಯಿಂದ ದೇಶೀಯ ವಿನ್ಯಾಸದ ಎಐ ಪ್ರೋಸಸರ್ A2000 ಅನಾವರಣ

ಸೆಮಿಕಂಡಕ್ಟರ್ ಸಾಂದರ್ಭಿಕ ಚಿತ್ರImage Credit source: Shutterstock ನವದೆಹಲಿ, ಮೇ 28: ದೇಶೀಯ ಸೆಮಿಕಂಡಕ್ಟರ್ ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವಲಯದಲ್ಲಿ ಭಾರತವು ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಭಾರತದ ಪ್ರಮುಖ ಸೆಮಿಕಂಡಕ್ಟರ್ ನವೋದ್ಯಮವಾದ ನೇತ್ರಸೆಮಿ ಪ್ರೈವೇಟ್ ಲಿಮಿಟೆಡ್ (NetraSemi), ತನ್ನ ಅತ್ಯಂತ ಮಹತ್ವಾಕಾಂಕ್ಷೆಯ ಎಡ್ಜ್ AI ಸಿಸ್ಟಮ್-ಆನ್-ಚಿಪ್ (SoC) ಆಗಿರುವ ‘A2000’ ಪ್ರೊಸೆಸರ್ ಅನ್ನು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಭಾರತದಲ್ಲೇ ಸಂಪೂರ್ಣವಾಗಿ ವಿನ್ಯಾಸಗೊಳಿಸಲಾದ ಈ ಚಿಪ್, ಜಾಗತಿಕ ಮಟ್ಟದಲ್ಲಿ ಎಡ್ಜ್ ಕಂಪ್ಯೂಟಿಂಗ್ ಮತ್ತು…

Read More

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್​: ಇಡಿ ಇಲಾಖೆಯಲ್ಲಿ ಹುದ್ದೆಗಳ ಭಾರಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್​​

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್​Image Credit source: Pinterest ಭಾರತ ಸರ್ಕಾರದ ಅತ್ಯಂತ ಪ್ರಭಾವಶಾಲಿ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯ (ED)ವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಪರಾಧಗಳು ಮತ್ತು ಹಣ ವರ್ಗಾವಣೆ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿತ್ತು. ಹೀಗಾಗಿ, ಹೆಚ್ಚುತ್ತಿರುವ ಪ್ರಕರಣಗಳ ತ್ವರಿತ ತನಿಖೆ ಮತ್ತು ಕಲಾಪಗಳನ್ನು ವೇಗಗೊಳಿಸುವ ಉದ್ದೇಶದಿಂದ ಇಲಾಖೆಯಲ್ಲಿನ ಹುದ್ದೆಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ. ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯು…

Read More

ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ, ಹೇಳಿದ್ದೇನು?

ಬೆಂಗಳೂರು, (ಮೇ 28): ಸಿದ್ದರಾಮಯ್ಯನವರು ಇಂದು (ಮೇ 28) ಅಧಿಕೃತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್​​ ಹುಲಿಯಾನ ಮೂರು ವರ್ಷದ ರಾಜ್ಯಭಾರ ಅಂತ್ಯವಾಗಿದೆ. ಇನ್ನು ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯನವರು ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುಟುಕಾಗಿ ತಮ್ಮ ರಾಜಕೀಯ ಹಾದಿ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮೆಲುಕು ಹಾಕಿದರು. ಇನ್ನು ಇದೇ ವೇಳೆ ಸಿದ್ದರಾಮಯ್ಯನವರು ನಟ ರಾಜಕುಮಾರ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷ. ನಟ ರಾಜಕುಮಾರ್ ಅಭಿಮಾನಿ ದೇವರು ಅಂತಾ…

Read More

ಹಿಂದಿನ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ‘ಕೈ’ ಕಮಾಂಡ್​​: ಕರ್ನಾಟಕ ವಿಷಯದಲ್ಲಿ ಎಚ್ಚರಿಕೆಯ ನಡೆ

ಬೆಂಗಳೂರು, ಮೇ 28: ವಿವಿಧ ರಾಜ್ಯಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಎಡವಿದ್ದ ಕಾಂಗ್ರೆಸ್​​ (Congress) ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್​​ನಲ್ಲಿ ತಲೆದೋರಿದ್ದ ಅಧಿಕಾರ ಹಂಚಿಕೆಯ ಕಗ್ಗಂಟನ್ನು ಯಶಸ್ವಿಯಾಗಿ ಬಿಡಿಸಿದೆ. ಸಿಎಂ‌ ಬದಲಾವಣೆ ಎಂಬ ಬೆಟ್ಟದಂತ ಸಮಸ್ಯೆ ಯನ್ನು ವರಿಷ್ಠರು ಯಶ್ವಸಿಯಾಗಿ ನಿರ್ವಹಿಸಿದೆ. ಈ ಹಿಂದೆ ವಿವಿಧ ರಾಜ್ಯ್ಲಲ್ಲಿ ನಾಯಕರ ತಪ್ಪು ನಿರ್ಧಾರದಿಂದ ಪಕ್ಷಕ್ಕೆ ಭಾರಿ ನಷ್ಟ ಉಂಟಾಗಿತ್ತು. ಹಲವು ರಾಜ್ಯಗಳೇ ಕಾಂಗ್ರೆಸ್​​ ಕೈತಪ್ಪಿ ಹೋಗಿತ್ತು ಎನ್ನುವುದು ಇತಿಹಾಸ. ಪಂಜಾಬ್​​ನಲ್ಲಿ ಅಮರಿಂದರ್ ಸಿಂಗ್ vs ಸಿಧು ಪಂಜಾಬ್​​ನಲ್ಲಿ ಕ್ಯಾಪ್ಟನ್ ಅಮರಿಂದರ್…

Read More

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ

ಬೆಂಗಳೂರು, (ಮೇ 28): ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ  (Siddaramaiah) ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದು, ಇನ್ನು ಒಂದು ಪುಟದ ರಾಜೀನಾಮೆ ಪತ್ರವನ್ನು ಪ್ರಭುಶಂಕರ್ ಅವರು ಸ್ವೀಕರಿಸಿದ್ದಾರೆ. ಇದರೊಂದಿಗೆ  ಸಿದ್ದರಾಮಯ್ಯನವರ ಮೂರು ವರ್ಷದ ಆಡಳಿತ ಅಂತ್ಯವಾಗಿದೆ. ಈ ವೇಳೆ ಪ್ರಭುಶಂಕರ್…

Read More

ರಣ್ವೀರ್ ಸಿಂಗ್​​ಗೆ ಮುಂಚೆ ಬಾಲಿವುಡ್​​ನಲ್ಲಿ ನಿಷೇಧಕ್ಕೊಳಗಾಗಿದ್ದ ನಟರಿವರು

ಈಗಿನ ಖ್ಯಾತ ನಟಿ ಅನನ್ಯಾ ಪಾಂಡೆ ಅವರ ತಂದೆ, ಒಂದು ಕಾಲದ ಸ್ಟಾರ್ ನಟ ಚಂಕಿ ಪಾಂಡೆ ವಿರುದ್ಧ 1987ರಲ್ಲೇ ನಿಷೇಧ ಹೇರಲಾಗಿತ್ತು. ಇಡೀ ಚಿತ್ರರಂಗ ಪ್ರತಿಭಟನೆ ಮಾಡುತ್ತಿದ್ದಾಗ ಚಂಕಿ ಪಾಂಡೆ, ಪೆಹ್ಲಾಜ್ ನಿಹಲಾನಿ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದರು. ಪ್ರತಿಭಟನೆ ಇದ್ದಾಗಿಯೂ ಬೆಂಗಳೂರು ಮತ್ತು ಊಟಿಯಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಹಾಗಾಗಿ ಚಂಕಿ ಮೇಲೆ ನಿಷೇಧ ಹೇರಲಾಗಿತ್ತು. ವಾರದ ಬಳಿಕ ಚಂಕಿ ಪಾಂಡೆ ಕ್ಷಮೆ ಕೇಳಿದರು. ನಿಷೇಧವನ್ನು ತೆರವು ಮಾಡಲಾಯ್ತು. ಖ್ಯಾತ ಗಾಯಕ ಮತ್ತು ನಟ ದಿಲ್ಜೀತ್ ದೊಸ್ಸಾಂಜ್…

Read More

ಮೊದಲ ಬಾರಿ ಮಗನನ್ನು ಪರಿಚಯಿಸಿದ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್: ಆದರೆ ಒಂದು ಷರತ್ತು

ಬಾಲಿವುಡ್‌ನ ಸ್ಟಾರ್ ಜೋಡಿ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ ತಮ್ಮ ಮುದ್ದಾದ ಮಗನ ಪ್ರೈವೆಸಿ ವಿಷಯದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ, ಸಿದ್ದಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿಯ ಹಾದಿಯನ್ನೇ ತುಳಿದಿದ್ದಾರೆ. ಇತ್ತೀಚೆಗಷ್ಟೇ ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ನವಜಾತ ಶಿಶು ವಿಹಾನ್​ನನ್ನು (Vihaan Kaushal) ಪಾಪರಾಜಿಗಳಿಗೆ ಪರಿಚಯಿಸಿರುವ ಈ ದಂಪತಿ, ಮಗನ ಫೋಟೋಗಳನ್ನು ಕ್ಲಿಕ್ಕಿಸದಂತೆ ಮತ್ತು ಸಾರ್ವಜನಿಕವಾಗಿ ಹಂಚಿಕೊಳ್ಳದಂತೆ ಮನವಿ ಮಾಡಿದ್ದಾರೆ. ಏರ್‌ಪೋರ್ಟ್‌ನಲ್ಲಿ ವಿಕ್ಕಿ ಕೌಶಲ್ ಫೋಟೋಗಳಿಗೆ ಪೋಸ್ ನೀಡಿದರು. ಮಗ ವಿಹಾನ್‌ನನ್ನು ಎದೆಗೆ…

Read More

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ…

Read More