ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈ ತಪ್ಪುವ ಸಾಧ್ಯತೆ, ಅಜ್ಜಯ್ಯ ಭವಿಷ್ಯ

ತುಮಕೂರು, ಮೇ.28: “ಮಾತು ಆಡಿದರೆ ಮುತ್ತು ಒಡೆದು ಹೋದಂತೆ! ಸದ್ಯಕ್ಕೆ ಯಾವುದೇ ಆತುರದ ಹೇಳಿಕೆ ನೀಡಬೇಡಿ, ಇಲ್ಲದಿದ್ದರೆ ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಗಬಹುದು!” – ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ (Nonavinakere Kadasiddeshwara Mutt) ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಇಂತಹದೊಂದು ಅತ್ಯಂತ ಗಂಭೀರ ಹಾಗೂ ನಿಗೂಢ ಎಚ್ಚರಿಕೆಯನ್ನು ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದರಿಂದ ಡಿ.ಕೆ. ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ಚರ್ಚೆಗಳು ಜೋರಾಗಿವೆ. ಆದರೆ, ಅಜ್ಜಯ್ಯನವರು “ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬೇಡಿ. ಈಗ ಆಡುವ ಒಂದು ಸಣ್ಣ ಮಾತು ಕೂಡ ಕೆಲಸವನ್ನು ಕೆಡಿಸಬಹುದು (ಮುತ್ತು ಒಡೆದು ಹೋಗಲಿದೆ)” ಎಂದು ಕಟ್ಟುನಿಟ್ಟಾಗಿ ತಾಕೀತು ಮಾಡಿದ್ದಾರೆ. ಶ್ರೀಗಳ ಈ ಆದೇಶದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಹಾಗೂ ಅವರ ಆಪ್ತ ಬೆಂಬಲಿಗರು ಯಾವುದೇ ವಿಜಯೋತ್ಸವ ಆಚರಿಸದಂತೆ ಮತ್ತು ಸಾರ್ವಜನಿಕವಾಗಿ ಯಾವುದೇ ಹೇಳಿಕೆಗಳನ್ನು ನೀಡದಂತೆ ಸೈಲೆಂಟ್ ಆಗಿದ್ದಾರೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಡಿ.ಕೆ. ಶಿವಕುಮಾರ್ ಅವರಿಗೆ ಸದ್ಯದಲ್ಲೇ ‘ಸಾಡೇ ಸಾತಿ’ ಶನಿ ದೆಸೆ (Sade Sati) ಆರಂಭವಾಗಲಿದೆಯಂತೆ. ಗ್ರಹಗತಿಗಳ ಈ ಏರುಪೇರಿನ ಕಾಲದಲ್ಲಿ ಅತ್ಯಂತ ಜಾಗರೂಕರಾಗಿ ಇರಬೇಕು. ಇಲ್ಲದಿದ್ದರೆ ಸಿಎಂ ಕುರ್ಚಿ ಅತ್ಯಂತ ಹತ್ತಿರ ಬಂದರೂ ಕೊನೆಯ ಕ್ಷಣದಲ್ಲಿ ಕೈ ತಪ್ಪುವ (ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಗುವ) ಗಂಡಾಂತರ ಎದುರಾಗಲಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ ಎನ್ನಲಾಗಿದೆ.

ಈ ಮಹತ್ವದ ರಾಜಕೀಯ ಮತ್ತು ಆಧ್ಯಾತ್ಮಿಕ ಸಲಹೆಯನ್ನು ನೀಡಿದ ಬಳಿಕ ನೊಣವಿನಕೆರೆ ಶ್ರೀಗಳು ಮಾಧ್ಯಮಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ನೇರವಾಗಿ ಮಠದಿಂದ ಹೊರಟು ಹೋಗಿದ್ದಾರೆ. ಸದ್ಯ ಹೈಕಮಾಂಡ್ ಮಟ್ಟದಲ್ಲಿ ಸಿಎಂ ಆಯ್ಕೆ ಕಸರತ್ತು ನಡೆಯುತ್ತಿರುವಾಗಲೇ ಅಜ್ಜಯ್ಯನವರ ಈ ನಡೆ ಇಡೀ ಕೈ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಪೆದ್ದಿ’ ಸಿನಿಮಾ ಬಗ್ಗೆ ವಿಚಾರಿಸಿದ ನರೇಂದ್ರ ಮೋದಿ , ಹೇಳಿದ್ದೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಬಲು ಅದ್ಧೂರಿಯಾಗಿ ಮಾಡುತ್ತಿದೆ. ಮುಂಬೈ, ಭೋಪಾಲ್, ಬೆಂಗಳೂರಿನ ಬಳಿಕ ಇಂದು ದೆಹಲಿಯಲ್ಲಿ ರಾಮ್ ಚರಣ್ ಮತ್ತು ತಂಡ ‘ಪೆದ್ದಿ’ ಸಿನಿಮಾದ ಪ್ರಚಾರ ಮಾಡಿದೆ. ಈ ವೇಳೆ ರಾಮ್ ಚರಣ್ ಕೆಲ ಆಸಕ್ತಿಕರ ವಿಚಾರಗಳನ್ನು ಸಿನಿಮಾದ ಬಗ್ಗೆ ಹಂಚಿಕೊಂಡಿದ್ದಾರೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಪೆದ್ದಿ’ ಸಿನಿಮಾದ ಬಗ್ಗೆ ವಿಚಾರಿಸಿದ ವಿಷಯವನ್ನು ರಾಮ್ ಚರಣ್ ಹೇಳಿದ್ದಾರೆ.

ಈ ಸಿನಿಮಾ ನೆಲದ ಸಂಸ್ಕೃತಿಯೊಂದಿಗೆ ಸಂಬಂಧ ಹೊಂದಿರುವ ಕತೆಯನ್ನು ಹೊಂದಿದೆ. ನಮ್ಮ ಸಿನಿಮಾ ಸಹ ಹಳ್ಳಿಯ ಪ್ರತಿಭಾನ್ವಿತ ಯುವಕನ ಬಗ್ಗೆ ಆ ಮೂಲಕ ಹಳ್ಳಿಗಳಲ್ಲಿ ಅಡಗಿರುವ ಪ್ರತಿಭೆಗಳ ಬಗೆಗೆ ಆಗಿದೆ’ ಎಂದ ರಾಮ್ ಚರಣ್, ಭಾರತದ ಒಲಿಂಪಿಕ್ ಬಿಲ್ಲುಗಾರರ ತಂಡದ ಎಲ್ಲ ಸದಸ್ಯರು ಕಾಡು ಸಮುದಾಯವೊಂದಕ್ಕೆ ಸೇರಿದವರು. ಭಾರತದ ನಿಜವಾದ ಟ್ಯಾಲೆಂಟ್ ಹಳ್ಳಿಗಳಲ್ಲಿದೆ. ನಮ್ಮ ಸಿನಿಮಾ ಸಹ ಅದೇ ವಿಷಯದ ಮೇಲೆ ಆಧರಿತವಾಗಿದೆ’ ಎಂದಿದ್ದಾರೆ.

ಮೋದಿಯ ಭೇಟಿಯ ಬಗ್ಗೆಯೂ ಮಾತನಾಡಿದ ರಾಮ್ ಚರಣ್, ‘ನಾನು ಕಳೆದ ಬಾರಿ ದೆಹಲಿಗೆ ಬಂದಾಗ ಪ್ರಧಾನಿ ಮೋದಿ ಅವರನ್ನು ಭೇಟಿಯಾದೆ. ಆ ಸಂದರ್ಭದಲ್ಲಿ ಅವರು ‘ಪೆದ್ದಿ’ ಸಿನಿಮಾದ ಬಗ್ಗೆ ಕೇಳಿದರು. ಆಗ ನಾನು ಅವರ ‘ವಿಕಸಿತ ಭಾರತ’ ಹಳ್ಳಿಗಳಿಗೆ ಶಕ್ತಿ ನೀಡುವ ಕತೆಯನ್ನು ಹೊಂದಿದೆ ಎಂದೆ. ಕತೆಯ ಬಗ್ಗೆ ವಿವರಣೆಯನ್ನು ನೀಡಿದೆ’ ಎಂದರು.

ಇದನ್ನೂ ಓದಿ:ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

‘ಆಗ ಮೋದಿ ಅವರು ಪಶ್ಚಿಮ ಬಂಗಾಳದ ವಿಷಯವನ್ನು ಹೇಳಿದರು. ನಾನು (ಮೋದಿ) ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಬೇಕಾದರೆ ಒಂದು ಬಾರಿ ಕೆಲ ಯುವಕರನ್ನು ಗಮನಿಸಿದೆ. ಎಲ್ಲರೂ ಮೇಲೆ ಜರ್ಸಿ ಧರಿಸಿದ್ದರು, ಕೆಳಗೆ ಲಂಗೋಟಿ ಧರಿಸಿದ್ದರು. ಅವರೆಲ್ಲರೂ ಫುಟ್​​ಬಾಲ್ ಆಟಗಾರರಾಗಿದ್ದರು. ಆ ಎಲ್ಲರೂ ಬಹುತೇಕ ಒಂದೇ ಊರಿನವರಾಗಿದ್ದರು. ಪಶ್ಚಿಮ ಬಂಗಾಳದ ಒಂದು ಹಳ್ಳಿಯ ವ್ಯಕ್ತಿ ಮೊಹಮ್ಮದ್ ಒಂದು ಸಣ್ಣ ಹಳ್ಳಿಯಿಂದ ಬಂದು ಫುಟ್​​ಬಾಲ್​​ನಲ್ಲಿ ಸಾಧನೆ ಮಾಡಿದರು. ಈಗ ಅವರನ್ನು ಸ್ಪೂರ್ತಿಯಾಗಿರಿಸಿಕೊಂಡು ಹಳ್ಳಿಗಳಿಂದ ಸಾಕಷ್ಟು ಯುವಕರು ಫುಟ್​​ಬಾಲ್ ಆಡುತ್ತಿದ್ದಾರೆ. ಈಗ ಬಂಗಾಳದ ಫುಟ್​​ಬಾಲ್ ಸ್ಟೇಡಿಯಮ್​ಗೆ ಅವರದ್ದೇ ಹೆಸರಿಡಲಾಗಿದೆ ಎಂದರು’ ಎಂದು ರಾಮ್ ಚರಣ್ ವಿವರಿಸಿದರು.

‘ನಮ್ಮ ಸಿನಿಮಾ ‘ಪೆದ್ದಿ’ ಅಂಥಹಾ ಹಳ್ಳಿಯ ಪ್ರತಿಭಾವಂತ ಯುವಕರ ಬಗ್ಗೆ, ಹಳ್ಳಿಯಲ್ಲಿದ್ದು, ರಾಷ್ಟ್ರಮಟ್ಟದಲ್ಲಿ ಸಾಧಿಸಲು ಹೊರಡುವ ಸಾಧಕರ ಕತೆಯನ್ನು ಒಳಗೊಂಡಿದೆ’ ಎಂದ ರಾಮ್ ಚರಣ್. ಸಿನಿಮಾನಲ್ಲಿ ತಮಗೆ ಕುಸ್ತಿ ಪಟುವಿನ ಫಿಸೀಕ್ ಮಾಡುವುದು ಬಹಳ ಕಷ್ಟದ ಕೆಲಸವಾಗಿತ್ತು ಎಂದಿದ್ದಾರೆ.

‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಜೊತೆಗೆ ಜಾನ್ಹವಿ ಕಪೂರ್ ನಾಯಕಿ. ಶಿವರಾಜ್ ಕುಮಾರ್ ಸಹ ಇದ್ದಾರೆ. ಬೊಮನ್ ಇರಾನಿ, ದಿವ್ಯೇಂದು, ಜಗಪತಿ ಬಾಬು ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಈ ಕೆಲವು ವಸ್ತುಗಳನ್ನು ತಪ್ಪಿಯೂ ಬಾತ್‌ರೂಮ್‌ನಲ್ಲಿ ಇಡಬೇಡಿ

ಟೂತ್‌ಬ್ರಷ್‌ನಿಂದ ಹಿಡಿದು ಸ್ಕಿನ್‌ಕೇರ್‌ ಉತ್ಪನ್ನಗಳವರೆಗೆ ನಾವು ನಮ್ಮ ನಿತ್ಯ ಬಳಕೆಯ ಕೆಲವೊಂದು ವಸ್ತುಗಳನ್ನು ಬಾತ್‌ರೂಮ್‌ನಲ್ಲಿ (bathroom) ಇಟ್ಟುಬಿಡುತ್ತೇವೆ. ಆದರೆ ಈ ರೀತಿ ಎಲ್ಲಾ ವಸ್ತುಗಳನ್ನು ಸ್ನಾನಗೃಹದಲ್ಲಿ ಸ್ಟೋರ್‌ ಮಾಡಬಾರದಂತೆ, ಏಕೆಂದರೆ  ಸ್ನಾನಗೃಹದ ತೇವಯುಕ್ತ ಮತ್ತು ಮುಚ್ಚಿದ ವಾತಾವರಣದಲ್ಲಿ, ಕೆಲವು ವಸ್ತುಗಳು ಕ್ರಮೇಣ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ಸಂತಾನೋತ್ಪತ್ತಿಯ ಸ್ಥಳಗಳಾಗುತ್ತವೆ, ಇದು ಸೋಂಕುಗಳು ಮತ್ತು ಅಲರ್ಜಿಗಳಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ ಬಾತ್‌ರೂಮ್‌ನ ತೇವಾಂಶವು ಕೆಲವೊಂದು ವಸ್ತುಗಳನ್ನು ಬಹುಬೇಗನೆ ಹಾಳು ಮಾಡುತ್ತದೆ. ಆದ್ದರಿಂದ ನಿಮ್ಮ ಆರೋಗ್ಯದ ದೃಷ್ಟಿಯಿಂದ ಈ ಕೆಲವೊಂದು ವಸ್ತುಗಳನ್ನು ಬಾತ್‌ರೂಮ್‌ನಲ್ಲಿ ಸ್ಟೋರ್‌ ಮಾಡುವುದನ್ನು ತಪ್ಪಿಸಿ.

ಈ ವಸ್ತುಗಳನ್ನು ಬಾತ್‌ರೂಮ್‌ನಲ್ಲಿ ಇಡಬೇಡಿ:

ಟವೆಲ್‌ಗಳು ಮತ್ತು ಕೊಳಕು ಬಟ್ಟೆಗಳು: ಬಾತ್‌ರೂಮ್‌ನಲ್ಲಿ ಟವೆಲ್‌ ಮತ್ತು ಕೊಳಕು ಬಟ್ಟೆಗಳನ್ನು ಇಡಬಾರದು. ಇಲ್ಲಿನ ತೇವಯುಕ್ತ ವಾತಾವರಣವು ಟವೆಲ್‌ ಮತ್ತು ಕೊಳಕು ಬಟ್ಟೆಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳಿಗೆ ಸಂತಾನೋತ್ಪತ್ತಿ ಮಾಡಲು ಸೂಕ್ತ ಸ್ಥಳವನ್ನು ಒದಗಿಸುತ್ತದೆ. ಅದರಲ್ಲೂ ಬಳಕೆ ಮಾಡಿದ ಟವೆಲ್‌ಗಳನ್ನು ಒಣಗಿಸುವ ಸಲುವಾಗಿ ಬಾತ್‌ರೂಮ್‌ನಲ್ಲಿಯೇ ನೇತು ಹಾಕಿದರೆ ಕೋಲಿಯಂತಹ ಅಪಾಯಕಾರಿ ಬ್ಯಾಕ್ಟೀರಿಯಾಗಳು ಟವೆಲ್‌ಗಳಲ್ಲಿ ಸಂಗ್ರಹವಾಗಬಹುದು. ಇದು ಚರ್ಮದ ಅಲರ್ಜಿಗಳು, ಶಿಲೀಂಧ್ರಗಳ ಸೋಂಕುಗಳು ಮತ್ತು ಮೊಡವೆಗಳಿಗೆ ಕಾರಣವಾಗಬಹುದು.

ಮೇಕಪ್ ಮತ್ತು ಸ್ಕಿನ್‌ಕೇರ್‌  ಉತ್ಪನ್ನಗಳು: ಹೆಚ್ಚಿನ ಮಹಿಳೆಯರು ಸ್ನಾನಗೃಹದ ಕನ್ನಡಿಯ ಮುಂದೆ ಮೇಕಪ್‌ ಮತ್ತು ಸ್ಕಿನ್‌ಕೇರ್‌ ಉತ್ಪನ್ನಗಳನ್ನು ಇಟ್ಟುಬಿಡುತ್ತಾರೆ. ಬಾತ್‌ರೂಮ್‌ನ ಶಾಖ ಮತ್ತು ತೇವಾಂಶ ಈ ಉತ್ಪನ್ನಗಳ ವಿನ್ಯಾಸವನ್ನು ಹಾಳು ಮಾಡುತ್ತದೆ.  ಅಲ್ಲದೆ ಲಿಕ್ವಿಡ್ ಫೌಂಡೇಶನ್ ಮತ್ತು ಲಿಪ್ಸ್ಟಿಕ್‌ಗಳಲ್ಲಿ ಬ್ಯಾಕ್ಟೀರಿಯಾ ಸಂಗ್ರಹವಾಗಬಹುದು. ಇದು ಚರ್ಮದ ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಮೇಕಪ್‌ ಉತ್ಪನ್ನಗಳನ್ನು ಬಾತ್‌ರೂಮ್‌ನಲ್ಲಿ ಇಡಬೇಡಿ.

ಟೂತ್ ಬ್ರಷ್: ಬಹುತೇಕ ಎಲ್ಲರೂ ಟೂತ್‌ಬ್ರಷ್‌ಗಳನ್ನು ಸ್ನಾನಗೃಹದಲ್ಲೇ ಸಂಗ್ರಹಿಸಿಡುತ್ತಾರೆ. ಟೂತ್‌ಬ್ರಷ್‌ಗಳನ್ನು ಯಾವಾಗಲೂ ಒಣ ಸ್ಥಳಗಳಲ್ಲಿ ಸಂಗ್ರಹಿಸಿಡುವುದು ಸೂಕ್ತ ಏಕೆಂದರೆ ಸ್ನಾನಗೃಹದ  ತೇವಾಂಶ ಹಲ್ಲುಜ್ಜುವ ಬ್ರಷ್‌ಗಳಲ್ಲಿ ಬ್ಯಾಕ್ಟೀರಿಯಾ ಬೆಳವಣಿಗೆಗೆ ಕಾರಣವಾಗುತ್ತದೆ. ಇದು ಇದು ಬಾಯಿಯ ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ.

ಔಷಧಿಗಳು: ಸ್ನಾನಗೃಹದಲ್ಲಿ ಔಷಧಿಗಳನ್ನು ಸಂಗ್ರಹಿಸಿಡಬಾರದು. ಬಾತ್‌ರೂಮ್‌ನ  ತಾಪಮಾನವು ನಿರಂತರವಾಗಿ ಏರಿಳಿತಗೊಳ್ಳುತ್ತದೆ. ಇಲ್ಲಿನ ಆರ್ದ್ರತೆ ಮತ್ತು ಶಾಖವು ಔಷಧಿಗಳು ತಮ್ಮ ಪರಿಣಾಮಕಾರಿತ್ವವನ್ನು ಕಳೆದುಕೊಳ್ಳಲು, ಹಾಳಾಗಲು ಕಾರಣವಾಗಬಹುದು. ಮಲಗುವ ಕೋಣೆಯಲ್ಲಿ ಸುರಕ್ಷಿತ ಕ್ಯಾಬಿನೆಟ್‌ನಲ್ಲಿ ಔಷಧಿಗಳನ್ನು ಸಂಗ್ರಹಿಸುವುದು ಯಾವಾಗಲೂ ಉತ್ತಮ.

ಇದನ್ನೂ ಓದಿ: ಬಾತ್‌ರೂಮ್‌ ಕ್ಲೀನ್‌ ಮಾಡಲು ಉಪ್ಪಿನ ಜೊತೆಗೆ ಅಡುಗೆಮನೆಯಲ್ಲಿರುವ ವಸ್ತುಗಳೇ ಸಾಕು

ಜಲನಿರೋಧಕವಲ್ಲದ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು: ಅನೇಕ ಜನರು ಸಂಗೀತ ಕೇಳಲು ತಮ್ಮ ಫೋನ್‌ಗಳು ಅಥವಾ ಸ್ಪೀಕರ್‌ಗಳನ್ನು ಸ್ನಾನಗೃಹಕ್ಕೆ ತೆಗೆದುಕೊಂಡು ಹೋಗುತ್ತಾರೆ. ವಾಟರ್‌ಪ್ರೂಫ್‌ ರೇಟಿಂಗ್‌ಗಳಿಲ್ಲದ ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ನೀರು ಬಿದ್ದರೆ ಅವುಗಳ ಆಂತರಿಕ ಸರ್ಕ್ಯೂಟ್‌ಗಳನ್ನು ಹಾನಿಗೊಳಗಾಗುತ್ತದೆ. ಇದರಿಂದ ಗ್ಯಾಜೆಟ್‌ಗಳು ಬೇಗನೇ ಹಾಳಾಗುತ್ತವೆ ಅಲ್ಲದೆ ಇದು ಶಾರ್ಟ್ ಸರ್ಕ್ಯೂಟ್‌ಗಳ ಅಪಾಯವನ್ನು ಹೆಚ್ಚಿಸುತ್ತದೆ.

ರೇಜರ್‌ಗಳು ಮತ್ತು ಬ್ಲೇಡ್‌ಗಳು: ಸ್ನಾನಗೃಹದ ತೇವಾಂಶದ ಕಾರಣದಿಂದಾಗಿ ಇಲ್ಲಿ ರೇಜರ್‌ಗಳು ಮತ್ತು ಬ್ಲೇಡ್‌ಗಳನ್ನು ಸಂಗ್ರಹಿಸಿಟ್ಟರೆ ಅವು ಬೇಗನೆ ತುಕ್ಕು ಹಿಡಿಯುತ್ತವೆ. ಅಂತಹ ರೇಜರ್‌ನಿಂದ ಶೇವಿಂಗ್ ಮಾಡುವುದರಿಂದ ಚರ್ಮದ ಕಡಿತ ಮತ್ತು ಸೋಂಕಿನ ಅಪಾಯ ಉಂಟಾಗುತ್ತದೆ.

ಆಭರಣಗಳು: ಚಿನ್ನ, ಬೆಳ್ಳಿ ಅಥವಾ ಕೃತಕ ಆಭರಣಗಳನ್ನು ಸ್ನಾನಗೃಹದಲ್ಲಿ ಇಡುವುದರಿಂದ ಅವು ಮಸುಕಾಗಬಹುದು. ತೇವಾಂಶವು ಲೋಹಗಳ ಆಕ್ಸಿಡೀಕರಣ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಇದರಿಂದಾಗಿ ಅವು ತಮ್ಮ ಹೊಳಪನ್ನು ಕಳೆದುಕೊಳ್ಳುತ್ತವೆ. ನಿಮ್ಮ ಅಮೂಲ್ಯವಾದ ಆಭರಣಗಳನ್ನು ಯಾವಾಗಲೂ ಡ್ರೆಸ್ಸಿಂಗ್ ಟೇಬಲ್ ಅಥವಾ ಲಾಕರ್‌ನಲ್ಲಿ ಸಂಗ್ರಹಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತ್ವಿಶಾ ಶರ್ಮಾ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಬಿಐನಿಂದ ಗಿರಿಬಾಲಾ ಸಿಂಗ್ ಬಂಧನ

ಭೋಪಾಲ್, ಮೇ 28: ಮಾಜಿ ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ (Twisha Sharma) ಅವರ ಶಂಕಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮಹತ್ತರ ಕಾರ್ಯಾಚರಣೆ ನಡೆಸಿದ್ದು, ಅವರ ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ಬಂಧಿಸಿದೆ. ಮಧ್ಯಪ್ರದೇಶ ಹೈಕೋರ್ಟ್ ಗಿರಿಬಾಲಾ ಸಿಂಗ್ (Giribala Singh) ಅವರಿಗೆ ಕೆಳ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳಲ್ಲಿ ಸಿಬಿಐ ಈ ಕ್ರಮ ಕೈಗೊಂಡಿದೆ. ಬಂಧಿತ ಗಿರಿಬಾಲಾ ಸಿಂಗ್ ಅವರು ನಿವೃತ್ತ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಸಿಬಿಐ ಅಧಿಕಾರಿಗಳು ಗುರುವಾರ ಬೆಳಗ್ಗೆ ನಿ. ನ್ಯಾ| ಗಿರಿಬಾಲಾ ಸಿಂಗ್ ಅವರ ನಿವಾಸಕ್ಕೆ ಹೋಗಿ ಕೆಲ ಗಂಟೆಗಳ ಕಾಲ ವಿಚಾರಣೆ ನಡೆಸಿ ಆ ನಂತರ ಬಂಧಿಸಿದರೆಂದು ಹೇಳಲಾಗಿದೆ.

ತ್ವಿಶಾ ಅತ್ತೆಗೆ ಹೈಕೋರ್ಟ್ ಜಾಮೀನು ರದ್ದುಗೊಳಿಸಲು ಕಾರಣಗಳೇನು?

ಮೇ 15 ರಂದು ಭೋಪಾಲ್‌ನ ಸೆಷನ್ಸ್ ನ್ಯಾಯಾಲಯವು ಗಿರಿಬಾಲಾ ಸಿಂಗ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ದೇವನಾರಾಯಣ್ ಮಿಶ್ರಾ ಅವರ ಪೀಠವು ಜಾಮೀನನ್ನು ರದ್ದುಪಡಿಸಿತು.

ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ತ್ವಿಶಾ ಸಾವು ನೇಣು ಬಿಗಿದುಕೊಂಡಿದ್ದರಿಂದ ಸಂಭವಿಸಿದೆ. ಆದರೆ, ಅವರ ದೇಹದ ಮೇಲೆ (ಎಡಗೈ, ಉಂಗುರದ ಬೆರಳು ಹಾಗೂ ತಲೆಯಲ್ಲಿ) ಸಾವು ಸಂಭವಿಸುವ ಮುನ್ನವೇ ಆದ 6 ಗಾಯಗಳಿರುವುದು ಪತ್ತೆಯಾಗಿದೆ. ಶವವನ್ನು ಕೆಳಗೆ ಇಳಿಸುವಾಗ ಅಥವಾ ಆಸ್ಪತ್ರೆಗೆ ಸಾಗಿಸುವಾಗ ಈ ಗಾಯಗಳಾಗಿವೆ ಎಂಬ ಪ್ರತಿವಾದಿಗಳ ವಾದವನ್ನು ವೈದ್ಯಕೀಯ ವರದಿ ತಳ್ಳಿಹಾಕಿದೆ.

ಇದನ್ನೂ ಓದಿ: ಮಾಡೆಲ್ ತ್ವಿಶಾ ಶರ್ಮಾ ಸಾವು: ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲ ಸಿಂಗ್ ನಿರೀಕ್ಷಣಾ ಜಾಮೀನು ರದ್ದು

ತ್ವಿಶಾ ಪ್ರಕರಣ: ಗರ್ಭಪಾತದ ಒತ್ತಡ ಮತ್ತು ವಾಟ್ಸಾಪ್ ಚಾಟ್‌ಗಳು

ಮದುವೆಯಾದ ಕೇವಲ 5 ತಿಂಗಳಲ್ಲೇ ತ್ವಿಶಾ ಗರ್ಭಿಣಿಯಾಗಿದ್ದರು ಮತ್ತು ಎರಡು ತಿಂಗಳ ಒಳಗಾಗಿ ಗರ್ಭಪಾತವಾಗಿತ್ತು. ಮಗುವಿನ ಬಗ್ಗೆ ಪತಿ ಅನುಮಾನ ವ್ಯಕ್ತಪಡಿಸುತ್ತಿದ್ದ ಉಲ್ಲೇಖಗಳು ಹಾಗೂ ಗರ್ಭಪಾತ ಮಾಡಿಸಿಕೊಳ್ಳುವಂತೆ ಪತಿ ಮತ್ತು ಅತ್ತೆ ಇಬ್ಬರೂ ಮಾನಸಿಕ ಕಿರುಕುಳ ನೀಡುತ್ತಿದ್ದರೆಂಬ ಆಪಾದನೆಗಳಿಗೆ ಪೂರಕವಾದ ವಾಟ್ಸಾಪ್ ಚಾಟ್‌ಗಳನ್ನು ಕೆಳ ನ್ಯಾಯಾಲಯ ಪರಿಗಣಿಸಿಲ್ಲ ಎಂದು ಹೈಕೋರ್ಟ್ ಆಕ್ಷೇಪಿಸಿತ್ತು.

ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಿಯು ಮಾಧ್ಯಮಗಳಲ್ಲಿ ಸಂದರ್ಶನಗಳನ್ನು ನೀಡುವ ಮೂಲಕ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಮತ್ತು ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಿದ್ದರು.

ತ್ವಿಶಾ ಶರ್ಮಾ ಸಾವು ಪ್ರಕರಣದ ಹಿನ್ನೆಲೆ

33 ವರ್ಷದ ಮಾಜಿ ‘ಮಿಸ್ ಪುಣೆ’ ಮತ್ತು ಎಂಬಿಎ ಪದವೀಧರೆಯಾಗಿದ್ದ ತ್ವಿಶಾ ಶರ್ಮಾ (ಮೂಲತಃ ನೋಯ್ಡಾ ಉದ್ಯಮಿಗಳ ಮಗಳು), ಡಿಸೆಂಬರ್ 2025 ರಲ್ಲಿ ವಕೀಲ ಸಮರ್ಥ್ ಸಿಂಗ್ ಅವರನ್ನು ವಿವಾಹವಾಗಿದ್ದರು. ಮದುವೆಯಾದ ಕೇವಲ ಐದೇ ತಿಂಗಳಲ್ಲಿ, ಅಂದರೆ 2026ರ ಮೇ 12 ರಂದು ಭೋಪಾಲ್‌ನ ಕಟಾರಾ ಹಿಲ್ಸ್‌ನಲ್ಲಿರುವ ಪತಿಯ ಮನೆಯಲ್ಲಿ ತ್ವಿಶಾ ಶವವಾಗಿ ಪತ್ತೆಯಾಗಿದ್ದರು.

ಇದನ್ನೂ ಓದಿ: ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು

ವರದಕ್ಷಿಣೆ ಕಿರುಕುಳದ ಆರೋಪ: ಮದುವೆಯ ಸಮಯದಲ್ಲಿ ತಮ್ಮ ಶಕ್ತಿಗೆ ಮೀರಿ ವರದಕ್ಷಿಣೆ ಮತ್ತು ಉಡುಗೊರೆಗಳನ್ನು ನೀಡಿದ್ದರೂ, ಅತ್ತೆ ಗಿರಿಬಾಲಾ ಸಿಂಗ್ ಹೆಚ್ಚುವರಿಯಾಗಿ 2 ಲಕ್ಷ ರೂ ನಗದು ಬೇಡಿಕೆ ಇಟ್ಟು ಪಡೆದಿದ್ದರು ಎಂದು ತ್ವಿಶಾ ಕುಟುಂಬಸ್ಥರು ದೂರು ನೀಡಿದ್ದಾರೆ. ಮದುವೆಯಾದ ನಂತರವೂ ಪತಿ ಮತ್ತು ಅತ್ತೆ ನಿರಂತರವಾಗಿ ವರದಕ್ಷಿಣೆಗಾಗಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಮತ್ತು ವೈಯಕ್ತಿಕ ಖರ್ಚಿಗೂ ಹಣ ನೀಡದೆ ಸತಾಯಿಸುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸ್ಥಳೀಯ ಪೊಲೀಸರ ತನಿಖೆಯಲ್ಲಿ ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ಮಧ್ಯಪ್ರದೇಶ ಹೈಕೋರ್ಟ್ ನಿರ್ದೇಶನದಂತೆ ಈ ಹೈಪ್ರೊಫೈಲ್ ಪ್ರಕರಣದ ತನಿಖೆಯನ್ನು ಸಿಬಿಐ ಇತ್ತೀಚೆಗಷ್ಟೇ ವಹಿಸಿಕೊಂಡಿದೆ.

ಪ್ರಕರಣದ ಮೊದಲ ಆರೋಪಿಯಾದ ಪತಿ ಸಮರ್ಥ್ ಸಿಂಗ್ 10 ದಿನಗಳ ಕಾಲ ತಲೆಮರೆಸಿಕೊಂಡಿದ್ದು, ನಂತರ ಮೇ 22 ರಂದು ಜಬಲ್ಪುರದಲ್ಲಿ ಬಂಧನಕ್ಕೊಳಗಾಗಿದ್ದರು. ಪ್ರಸ್ತುತ ಪತಿ ಸಮರ್ಥ್ ಸಿಂಗ್ ಕೋರ್ಟ್ ಆದೇಶದ ಮೇರೆಗೆ ಸಿಬಿಐ ಕಸ್ಟಡಿಯಲ್ಲಿದ್ದಾರೆ. ಈಗ ಎರಡನೇ ಆರೋಪಿಯಾದ ಅತ್ತೆ ಗಿರಿಬಾಲಾ ಸಿಂಗ್ ಅವರನ್ನೂ ಸಿಬಿಐ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್

ಮೈಸೂರು, (ಮೇ 28): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ (Karnataka Poliitcs) ನಾಯಕತ್ವ ಬದಲಾವಣೆ ಗುದ್ದಾಟ ಕೊನೆಗೂ ಅಂತ್ಯಗೊಂಡಿದೆ. ಸಿದ್ದರಾಮಯ್ಯನವರು (Siddaramaiah) ಇಂದು (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಮೂರು ವರ್ಷಗಳ ರಾಜ್ಯಭಾರ ಅಂತ್ಯವಾಗಿದ್ದು, ಮುಂದಿನ ಸಿಎಂ ಡಿಕೆ ಶಿವಕುಮಾರ್ (DK Shivakumar) ಎನ್ನಲಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನಕ್ಕೆ ಸಕಲ ಸಿದ್ಧತೆ ನಡೆಸಿದ್ದು, ಪ್ರಮಾಣವಚನಕ್ಕೆ ಮುಹೂರ್ತ ನೀಡುವಂತೆ ಜ್ಯೋತಿಷಿ ಮೊರೆ ಹೋಗಿದ್ದಾರೆ.

ಹೌದು….ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಸಿಎಲ್​​ಪಿ ಸಭೆ, ಹೊಸ ಸಚಿವ ಸಂಪುಟ ಹಾಗೂ ಡಿಸಿಎಂ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅದಕ್ಕೂ ಮೊದಲ ಡಿಕೆ ಶಿವಕುಮಾರ್ ಅವರು ಜ್ಯೋತಿಷಿ ದ್ವಾರಕನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಪ್ರಮಾಣವಚನಕ್ಕೆ ಒಳ್ಳೆ ಮುಹೂರ್ತ ನೋಡಿ ಎಂದು ಮನವಿ ಮಾಡಿದ್ದಾರೆ. ಮೂರು ಬೇರೆ ಬೇರೆ ದಿನಾಂಕಗಳನ್ನು ನೀಡುವಂತೆ ಮನವಿ ಮಾಡಿದ್ದು, ಪ್ರಮಾಣವಚನಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬರುವ ಎಲ್ಲಾ ಸಾಧ್ಯತೆಗಳಿವೆ. ಆದ್ರೆ, ಪ್ರಮಾಣವಚನ ಯಾವಾಗ ಏನು ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ: ರಾಷ್ಟ್ರ ರಾಜಧಾನಿಯತ್ತ ಹಾರಿದ ನಾಯಕರ ದಂಡು

ಬೆಂಗಳೂರು, ಮೇ 28: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ನಂತರ, ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಕುರಿತು ಚರ್ಚಿಸಲು ರಾಜ್ಯ ನಾಯಕರು ದೆಹಲಿಗೆ ಎರಡನೇ ಸುತ್ತಿನ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು, ಅವರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಇಂದು ಸಂಜೆ 7:40ಕ್ಕೆ ದೆಹಲಿಗೆ ಪಯಣ ಬೆಳೆಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಚರ್ಚಿಸಿ ಸಿಎಲ್ಪಿ ಸಭೆ, ಹೊಸ ಸಿಎಂ ಆಯ್ಕೆ, ಡಿಸಿಎಂ ಸ್ಥಾನಗಳ ಹಂಚಿಕೆ ಮತ್ತು ಸಚಿವ ಸಂಪುಟ ರಚನೆ ಕುರಿತು ನಾಯಕರು ಮಾತುಕತೆ ನಡೆಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಎಲ್ಲ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಮುಖ್ಯಮಂತ್ರಿಗಳೊಂದಿಗೆ ಎಷ್ಟು ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಬಗ್ಗೆಯೂ ಚರ್ಚೆಗಳು ನಡೆಯಲಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ದೇವರ ಪ್ರಸಾದವೆಂದು ನಿಂಬೆ ರಸ ಕೊಟ್ಟು ಸಹೋದ್ಯೋಗಿ ಮಿತ್ರರನ್ನು ಪ್ರಾಂಕ್ ಮಾಡಿದ ವ್ಯಕ್ತಿ

ಆಫೀಸಿನಲ್ಲಿ (Office) ಕೆಲಸ ಮಾಡುವ ಸ್ಥಳದಲ್ಲಿ ತಮಾಷೆ ಮಾಡುವ ಸಹೋದ್ಯೋಗಿಗಳಿದ್ದರೆ (colleague) ಸಮಯ ಕಳೆದದ್ದೇ ತಿಳಿಯಲ್ಲ. ಸಹೋದ್ಯೋಗಿಗಳ ನಡುವಿನ ಹರಟೆ ಕೆಲಸದ ವಾತಾವರಣವನ್ನು ಹಗುರವಾಗಿಸುತ್ತದೆ. ತರ್ಲೆ ತಮಾಷೆ ಮಾಡುವವರು ಇದ್ದು ಬಿಟ್ಟರೆ ನಗುವಿಗೇನು ಕೊರತೆ ಇರಲ್ಲ. ವ್ಯಕ್ತಿಯೊಬ್ಬ ಆಫೀಸಿನಲ್ಲಿ ಸಹೋದ್ಯೋಗಿಗಳಿಗೆ ಪ್ರಾಂಕ್ ಮಾಡಿದ್ದಾನೆ. ಹೌದು, ಸಹೋದ್ಯೋಗಿಗಳಿಗೆ ದೇವರ ಪ್ರಸಾದ ಎಂದು ನಿಂಬೆ ರಸ ನೀಡಿರುವ ವಿಡಿಯೋ ವೈರಲ್ ಆಗಿದೆ.

@teambabyorgano ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆಫೀಸಿನ ಸುಂದರ ಕ್ಷಣದ ವಿಡಿಯೋ ಹಂಚಿಕೊಳ್ಳಲಾಗಿದೆ. ವ್ಯಕ್ತಿಯೊಬ್ಬ ಆಫೀಸಿನಲ್ಲಿ ಸಹೋದ್ಯೋಗಿಗಳಿಗೆ ದೇವರ ಪ್ರಸಾದ ಎಂದು ನಿಂಬೆ ರಸ ನೀಡಿ ಪ್ರಾಂಕ್ ಮಾಡಲು ಮುಂದಾಗಿದ್ದಾನೆ. ಒಬ್ಬೊಬ್ಬರಾಗಿ ಪ್ರಸಾದವೆಂದು ಸ್ವೀಕರಿಸಿ ಕುಡಿಯುತ್ತಿದ್ದಂತೆ ನಿಂಬೆ ರಸ ಎಂದು ತಿಳಿದಿದೆ. ಆಫೀಸಿನ ಸಹೋದ್ಯೋಗಿಗಳು ನೀಡಿದ ರಿಯಾಕ್ಷನ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕನಸು ನನಸಾದ ಕ್ಷಣ; ತನ್ನ ಅಜ್ಜಿಯನ್ನು ಮೈಕ್ರೋ ಸಾಫ್ಟ್ ಆಫೀಸ್ ತೋರಿಸಲು ಕರೆದೊಯ್ದ ಉದ್ಯೋಗಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ದೇವರ ಮೇಲಿನ ಭಕ್ತಿ ಅಂತಹದ್ದು ಎಂದರೆ, ಮತ್ತೊಬ್ಬರು ಭಾರತೀಯರುವಿಷ ಕೊಟ್ರು ಬೇಡ ಎನ್ನಲ್ಲ ಎಂದಿದ್ದಾರೆ. ಇನ್ನೊಬ್ಬರು, ಪ್ರತಿಯೊಬ್ಬ ಫೇಸ್ ರಿಯಾಕ್ಷನ್ ನೋಡಲು ಖುಷಿಯೆನಿಸುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಂಗನಾ ರಣಾವತ್ ನಟನೆಯ ‘ಭಾರತ್ ಭಾಗ್ಯ ವಿಧಾತಾ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ

ಬಾಲಿವುಡ್‌ನ ವಿವಾದಾತ್ಮಕ ಹಾಗೂ ಪ್ರತಿಭಾವಂತ ನಟಿ ಕಂಗನಾ ರಣಾವತ್ ಸದ್ಯ ತಮ್ಮ ಹೊಸ ಸಿನಿಮಾ ‘ಭಾರತ್ ಭಾಗ್ಯ ವಿಧಾತಾ’ (Bharat Bhagya Vidhata) ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಗುರುವಾರ (ಮೇ 28) ಈ ಚಿತ್ರದಲ್ಲಿನ ತಮ್ಮ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಕಂಗನಾ (Kangana Ranaut) ಅನಾವರಣಗೊಳಿಸಿದ್ದಾರೆ. ಚಿತ್ರದಲ್ಲಿ ಅವರು ನರ್ಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಹಿಂಸಾಚಾರದ ನಡುವೆಯೂ ಆಸ್ಪತ್ರೆಯ ಸಿಬ್ಬಂದಿ ಕರ್ತವ್ಯ ಪ್ರಜ್ಞೆ ಮೆರೆದು ಒಟ್ಟಾಗಿ ನಿಲ್ಲುವ ಕಥಾಹಂದರವನ್ನು ಈ ಪೋಸ್ಟರ್ ಸೂಚಿಸುತ್ತಿದೆ.

ಮೋಷನ್ ಪೋಸ್ಟರ್ ಮೂಲಕ ಕಂಗನಾ ಅವರು ಫಸ್ಟ್ ಲುಕ್ ಹಂಚಿಕೊಂಡಿದ್ದಾರೆ. ಮುಖದ ಮೇಲೆ ಗಾಯದ ಗುರುತುಗಳು ಹಾಗೂ ಕೆನ್ನೆಯ ಮೇಲೆ ರಕ್ತದ ಕಲೆಗಳೊಂದಿಗೆ, ಉರಿಯುತ್ತಿರುವ ಬೆಂಕಿಯ ನಡುವೆ ಕಂಗನಾ ನಡೆದು ಬರುತ್ತಿರುವುದನ್ನು ಇದರಲ್ಲಿ ಕಾಣಬಹುದು. ನರ್ಸ್ ಸಮಸ್ತ್ರ ಧರಿಸಿರುವ ಕಂಗನಾ, ರೋಗಿಯೊಬ್ಬರಿಗೆ ಸಹಾಯ ಮಾಡುತ್ತಿರುವಂತೆ ಪೋಸ್ಟರ್ ವಿನ್ಯಾಸಗೊಳಿಸಲಾಗಿದೆ.

ಈ ಹಿಂದೆ ಚಿತ್ರತಂಡವು ಮೊದಲ ಪೋಸ್ಟರ್ ಬಿಡುಗಡೆ ಮಾಡಿ, ಜೂನ್ 12ರಂದು ಸಿನಿಮಾ ವಿಶ್ವದಾದ್ಯಂತ ತೆರೆಗೆ ಬರಲಿದೆ ಎಂದು ಘೋಷಿಸಿತ್ತು. ಆದರೆ, ಚಿತ್ರಮಂದಿರಗಳಲ್ಲಿ ಪೈಪೋಟಿ ಜೋರಾಗಲಿದೆ. ಜೂನ್ 12ರಂದೇ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿರುವುದರಿಂದ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಕ್ಲ್ಯಾಶ್ ಏರ್ಪಡಲಿದೆ. ಇಮ್ತಿಯಾಜ್ ಅಲಿ ನಿರ್ದೇಶನದ ‘ಮೈ ವಾಪಸ್ ಆವುಂಗಾ’, ಮನೋಜ್ ಬಾಜಪೇಯಿ ನಟನೆಯ ‘ಗವರ್ನರ್: ದಿ ಸೈಲೆಂಟ್ ಸೇವಿಯರ್’ ಮತ್ತು ವಿಕ್ರಮ್ ಭಟ್ ನಿರ್ದೇಶನದ ‘ಹಾಂಟೆಡ್ 3ಡಿ: ಎಕೋಸ್ ಆಫ್ ದಿ ಪಾಸ್ಟ್’ ಚಿತ್ರಗಳು ಅದೇ ದಿನ ತೆರೆ ಕಾಣುತ್ತಿವೆ.

‘ಭಾರತ್ ಭಾಗ್ಯ ವಿಧಾತಾ’ ಸಿನಿಮಾ ಫಸ್ಟ್ ಲುಕ್:

‘ಭಾರತ್ ಭಾಗ್ಯ ವಿಧಾತಾ’ ಸಿನಿಮಾವು ನೈಜ ಘಟನೆಗಳನ್ನು ಆಧರಿಸಿದೆ. ಮುಂಬೈನ 26/11 ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಆಸ್ಪತ್ರೆಯೊಂದರ ಸಿಬ್ಬಂದಿಯು ಪ್ರಾಣದ ಹಂಗು ತೊರೆದು 400 ರೋಗಿಗಳನ್ನು ಹೇಗೆ ರಕ್ಷಿಸಿದರು ಎಂಬ ರೋಚಕ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಆ ಕಾರಣದಿಂದಾಗಿ ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ‘ನಾನು ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಸೀಕ್ರೆಟ್ ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ

ಚಿತ್ರದ ಕುರಿತು ‘ವೆರೈಟಿ ಇಂಡಿಯಾ’ ಜೊತೆ ಮಾತನಾಡಿದ ಕಂಗನಾ, ‘ನಾವು ಯಾವಾಗಲೂ ಅಬ್ಬರದ ದೇಶಭಕ್ತಿಯನ್ನು ಆಚರಿಸುತ್ತೇವೆ. ಆದರೆ ನಿಜವಾದ ಧೈರ್ಯವು ಅತ್ಯಂತ ಮೌನವಾಗಿರುತ್ತದೆ. ಅದು ಜವಾಬ್ದಾರಿಯನ್ನು ಹೊತ್ತುಕೊಂಡು ಮುನ್ನಡೆಯುತ್ತದೆ. ಭಾರತ್ ಭಾಗ್ಯ ವಿಧಾತಾ ಎಂಬುದು ಧೈರ್ಯ, ತ್ಯಾಗ, ಮಾನವೀಯತೆ ಮತ್ತು ಏಕತೆಯ ಕಥೆ. ಭಯೋತ್ಪಾದನೆ ಮತ್ತು ಅಮಾಯಕರ ಜೀವನದ ನಡುವೆ ಗೋಡೆಯಾಗಿ ನಿಂತ ಸಾಮಾನ್ಯ ಜನರ ಕಥೆಯಿದು. ಇದು ಶುದ್ಧ ರೂಪದ ದೇಶಭಕ್ತಿ. ಕಠಿಣ ಪರಿಸ್ಥಿತಿಯಲ್ಲಿ ಮುಂಬೈ ನಗರವನ್ನು ಒಟ್ಟಾಗಿ ಹಿಡಿದಿಟ್ಟ ಜೀವಗಳಿಗೆ ನಮನ ಸಲ್ಲಿಸುವ ಈ ಸಿನಿಮಾದ ಭಾಗವಾಗಲು ಹೆಮ್ಮೆಯಾಗುತ್ತಿದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮುಂದಿನ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು, ಮೇ 28: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮತ್ತು ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು, ತಮಗೆ ಹೈಕಮಾಂಡ್‌ನಿಂದ ರಾಜ್ಯಸಭಾ ಸ್ಥಾನದ ಆಫರ್ ಬಂದಿದ್ದರೂ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲದ ಕಾರಣ ಅದನ್ನು ವಿನಮ್ರವಾಗಿ ನಿರಾಕರಿಸಿರೋದಾಗಿ ತಿಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ. ಜನ ನನ್ನನ್ನು ಐದು ವರ್ಷಕ್ಕೆ ಆಯ್ಕೆ ಮಾಡಿದ್ದಾರೆ, ಇನ್ನೆರಡು ವರ್ಷಗಳು ಬಾಕಿ ಇವೆ. ಅಲ್ಲಿಯವರೆಗೂ ಕರ್ನಾಟಕದ ಜನತೆ ಮತ್ತು ನನ್ನ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದವರು ಹೇಳಿದ್ದಾರೆ.

ತಮ್ಮ ರಾಜೀನಾಮೆ ಕುರಿತು ಮಾತನಾಡಿದ ಅವರು, ಹೈಕಮಾಂಡ್ ಯಾವಾಗ ಹೇಳುತ್ತದೋ ಆಗ ರಾಜೀನಾಮೆ ನೀಡುತ್ತೇನೆ ಎಂದು ಮೊದಲಿನಿಂದಲೂ ಹೇಳುತ್ತಿದ್ದೆ. ಯಾವುದೇ ಒತ್ತಡವಿಲ್ಲದೆ, ಹೈಕಮಾಂಡ್ ಸೂಚನೆ ನೀಡಿದ ತಕ್ಷಣ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ರಾಮಯ್ಯ, ಆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಶಾಸಕಾಂಗ ಪಕ್ಷದ ನಿರ್ಧಾರ ಮತ್ತು ಹೈಕಮಾಂಡ್ ನಿರ್ಧಾರದಂತೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಅಂತಿಮವಾಗಲಿದೆ ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

RR vs GT: ಕ್ವಾಲಿಫೈಯರ್ 2 ರದ್ದಾದರೆ ಯಾರಿಗೆ ಫೈನಲ್‌ ಟಿಕೆಟ್?

2026 ರ ಐಪಿಎಲ್ (IPL 2026) ಇದೀಗ ಅಂತಿಮ ಹಂತವನ್ನು ತಲುಪಿದೆ. ಈ ವರ್ಷದ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಯಾರು ಎದುರಿಸುತ್ತಾರೆ ಎಂಬುದು ಕ್ವಾಲಿಫೈಯರ್ 2 ಪಂದ್ಯ ಮುಗಿದ ಬಳಿಕ ಗೊತ್ತಾಗಲಿದೆ. ಅದರಂತೆ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇತ್ತ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಆದರೆ ಈ ಪಂದ್ಯ ಮಳೆಯಿಂದಾಗಿ ಅಥವಾ ಇನ್ನೀತರೆ ಕಾರಣಗಳಿಂದ ರದ್ದಾದರೆ, ಯಾವ ತಂಡ ಫೈನಲ್‌ ಟಿಕೆಟ್ ಸಿಗುತ್ತದೆ ಎಂಬುದು ಪ್ರಶ್ನೆಯಾಗಿದೆ.

ಪಂದ್ಯ ರದ್ದಾದರೆ, ಯಾರಿಗೆ ಫೈನಲ್‌ ಟಿಕೆಟ್?

ಐಪಿಎಲ್ ಫೈನಲ್ ಪಂದ್ಯವು ಮೇ 31 ರ ಭಾನುವಾರ ನಡೆಯಲಿದ್ದು, ಬೆಂಗಳೂರು ತಂಡವು ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು ನೋಡುತ್ತಿದೆ. ಗುಜರಾತ್ ಹಾಗೂ ರಾಜಸ್ಥಾನ ತಂಡಗಳು ಫೈನಲ್ ಟಿಕೆಟ್​ಗಾಗಿ ಮೇ 29 ರಂದು ಕ್ವಾಲಿಫೈಯರ್ 2 ರಲ್ಲಿ ಮುಖಾಮುಖಿಯಾಗಲಿವೆ. ಮಳೆ ಅಥವಾ ಯಾವುದೇ ಇತರ ಕಾರಣದಿಂದಾಗಿ ಪಂದ್ಯ ರದ್ದಾದರೆ, ಯಾವುದೇ ಮೀಸಲು ದಿನವಿರುವುದಿಲ್ಲ. ಅಂತಹ ಸಂದರ್ಭದಲ್ಲಿ, ಐಪಿಎಲ್ ನಿಯಮಗಳ ಆಧಾರದ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತದೆ.

ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳಲ್ಲಿ ಮಳೆ ಬಂದರೆ, ಅದೇ ದಿನ ಪಂದ್ಯವನ್ನು ಮುಗಿಸಲು ಪ್ರಯತ್ನಿಸಲಾಗುತ್ತದೆ. ಪಂದ್ಯದ ಆರಂಭ ವಿಳಂಬವಾದರೆ, ಕನಿಷ್ಠ ಐದು ಓವರ್‌ಗಳ ಪಂದ್ಯವನ್ನು ಆಡಿಸಲು ಪ್ರಯತ್ನಿಸಲಾಗುತ್ತದೆ. ಇದಕ್ಕಾಗಿ, 120 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. ಆದರೆ ಹೆಚ್ಚುವರಿ ಸಮಯದ 120 ನಿಮಿಷಗಳಲ್ಲೂ ಪಂದ್ಯ ಮುಗಿಯದಿದ್ದರೆ, ಆಗ ಪಾಯಿಂಟ್‌ ಪಟ್ಟಿ ಪ್ರಮುಖ ಪಾತ್ರವಹಿಸುತ್ತದೆ. ಅಂದರೆ ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡ ಮೇಲುಗೈ ಸಾಧಿಸಿರುತ್ತದೋ ಆ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಇದರರ್ಥ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರವ ಗುಜರಾತ್ ಟೈಟಾನ್ಸ್ ಫೈನಲ್‌ಗೆ ಅರ್ಹತೆ ಪಡೆಯುತ್ತದೆ.

IPL: ಅತಿ ಹೆಚ್ಚು ಬಾರಿ ಐಪಿಎಲ್ ಫೈನಲ್ಸ್ ಆಡಿದ ತಂಡ ಯಾವುದು? ಆರ್​ಸಿಬಿಗೆ ಎಷ್ಟನೇ ಸ್ಥಾನ?

ಚಂಡೀಗಢದ ಹವಾಮಾನ ಹೇಗಿರಲಿದೆ?

ಮೇ 28, ಗುರುವಾರ ಮತ್ತು ಮೇ 29, ಶುಕ್ರವಾರ ಬೆಳಿಗ್ಗೆ ನಡುವೆ ಚಂಡೀಗಢ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕಾಗಿ ಆರೆಂಜ್ ಅಲರ್ಟ್​ ನೀಡಲಾಗಿದೆ. ಆದಾಗ್ಯೂ, ಶುಕ್ರವಾರ ಸಂಜೆ ವೇಳೆ ಮಳೆಯ ನಿರೀಕ್ಷೆಯಿಲ್ಲ. ಹೀಗಾಗಿ ಅಭಿಮಾನಿಗಳು ಯಾವುದೇ ಆತಂಕವಲ್ಲಿದೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version