ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ನಿರ್ಮಾಪಕ – Kannada News | Prabhas starrer The Raja Saab movie producer gave complaint

ಪ್ರಭಾಸ್ (Prabhas), ಭಾರತದ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟ. ಪ್ರಭಾಸ್​​ಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗಷ್ಟೆ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ಸಿನಿಮಾ ಬಳಿಕ ಬಾಕ್ಸ್ ಆಫೀಸ್​​ನಲ್ಲಿ ಧಾರುಣವಾಗಿ ಕುಸಿಯಿತು. ಪ್ರಭಾಸ್ ಅಭಿಮಾನಿಗಳೇ ಸಿನಿಮಾ ಬಗ್ಗೆ ಟ್ರೋಲ್ ಮಾಡಲು ಆರಂಭಿಸಿದರು. ಇದೀಗ ಸಿನಿಮಾದ ನಿರ್ಮಾಪಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

‘ದಿ ರಾಜಾ ಸಾಬ್’ ಸಿನಿಮಾ ಹಾರರ್ ಕಾಮಿಡಿ ಸಿನಿಮಾ ಆಗಿದ್ದು, ಪ್ರಭಾಸ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ದೆವ್ವ, ಭೂತ, ಪಿಶಾಚಿ ಇನ್ನೂ ಏನೇನೋ ತೋರಿಸಲಾಗಿದೆ. ಬಂಗ್ಲೆಯ ಒಳಗೆ ಮೊಸಳೆಯನ್ನು ಸಹ ಸಿನಿಮಾನಲ್ಲಿ ನಿರ್ದೇಶಕರು ತೋರಿಸಿದ್ದು, ಪ್ರಭಾಸ್, ಮೊಸಳೆ ಜೊತೆ ಫೈಟ್ ಮಾಡುವ ದೃಶ್ಯವೂ ಇದೆ. ಒಟ್ಟಾರೆ ನಿರ್ದೇಶಕರು, ತಮ್ಮ ಊಹಗೆ ಬಂದಿದ್ದನ್ನೆಲ್ಲ ಸಿನಿಮಾನಲ್ಲಿ ತೋರಿಸಿದ್ದಾರೆ. ಇದೇ ಕಾರಣಕ್ಕೆ ಸಿನಿಮಾ ಸಖತ್ ಟ್ರೋಲ್ ಸಹ ಆಗುತ್ತಿದೆ. ಇದೀಗ ಈ ಟ್ರೋಲಿಂಗ್ ವಿರುದ್ಧ ಸಿನಿಮಾದ ನಿರ್ಮಾಪಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ನಿನ್ನೆ ಶುಕ್ರವಾರದಂದು ನಿರ್ಮಾಪಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನೂ ಸಹ ಹೊರಡಿಸಿದ್ದಾರೆ. ‘ನಮ್ಮ ‘ದಿ ರಾಜಾ ಸಾಬ್’ ಸಿನಿಮಾದ ದೃಶ್ಯಗಳನ್ನು ಅವಹೇಳನಕಾರಿಯಾಗಿ ಅನುಕರಿಸುವುದು, ಚಿತ್ರ ಮತ್ತು ಅದರ ನಟರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಮತ್ತು ದಾರಿತಪ್ಪಿಸುವ ಹೇಳಿಕೆಗಳನ್ನು ಪೋಸ್ಟ್ ಮಾಡುವುದು, ಇಂತಹ ದುರುದ್ದೇಶಪೂರಿತ ಕೃತ್ಯಗಳು ಗೊಂದಲವನ್ನು ಸೃಷ್ಟಿಸುವ ಮತ್ತು ನಕಾರಾತ್ಮಕತೆಯನ್ನು ಹರಡುವ ಉದ್ದೇಶವನ್ನು ಹೊಂದಿವೆ. ಇಂಥಹಾ ಕೃತ್ಯಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ:ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು?

‘ದಿ ರಾಜಾ ಸಾಬ್’ ಸಿನಿಮಾವನ್ನು ಹಲವರು ಟ್ರೋಲ್ ಮಾಡುತ್ತಿದ್ದಾರೆ. ಸಿನಿಮಾದ ದೃಶ್ಯಗಳು, ದೃಶ್ಯಗಳ ಸ್ಕ್ರೀನ್ ಶಾಟ್​​ಗಳನ್ನು ಬಳಸಿಕೊಂಡು ಮೀಮ್​​ಗಳನ್ನು ಕ್ರಿಯೇಟ್ ಮಾಡಲಾಗುತ್ತಿದೆ. ಅದರಲ್ಲೂ ಸಿನಿಮಾದ ನಿರ್ದೇಶಕ, ನಿರ್ಮಾಪಕರು ಸಂದರ್ಶನಗಳಲ್ಲಿ ಸಿನಿಮಾ ಬಗ್ಗೆ ಆಡಿರುವ ಮಾತುಗಳನ್ನು ಬಳಸಿಕೊಂಡು ಟ್ರೋಲ್ ಮಾಡಲಾಗುತ್ತಿದೆ. ಇದೇ ಕಾರಣಕ್ಕೆ ಇದೀಗ ನಿರ್ಮಾಪಕರು ಟ್ರೋಲರ್​​ಗಳ ವಿರುದ್ಧ ದೂರು ನೀಡಿದ್ದಾರೆ.

‘ದಿ ರಾಜಾ ಸಾಬ್’ ಸಿನಿಮಾವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಪ್ರಭಾಸ್ ಜೊತೆಗೆ ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್ ಮತ್ತು ರಿದ್ಧಿ ಕುಮಾರ್ ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಸಂಜಯ್ ದತ್, ಬೊಮನ್ ಇರಾನಿ ಸಹ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ದ್ವಿಪಾತ್ರದಲ್ಲಿ ನಟಿಸಿಯೂ ಸಹ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನಿರೀಕ್ಷಿತ ಯಸಸ್ಸನ್ನು ಗಳಿಸಲು ವಿಫಲವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

U19 World Cup 2026: ಕಿವೀಸ್ ವಿರುದ್ಧ 81 ಎಸೆತಗಳಲ್ಲಿ ಪಂದ್ಯ ಗೆದ್ದ ಯುವ ಭಾರತ – Kannada News | India U19 Dominates New Zealand, Extends Unbeaten Run in ICC World Cup 2026 Group Stage

ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026 (U19 World Cup 2026) ರಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ನ್ಯೂಜಿಲೆಂಡ್ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ (India vs New Zealand) ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ಮುಂದೆ ಪೆವಿಲಿಯನ್ ಪರೇಡ್ ನಡೆಸಿದರು. ಹೀಗಾಗಿ ಇಡೀ ತಂಡವು 135 ಸ್ಕೋರ್‌ಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತದ ಪರ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಮತ್ತು ನಾಯಕ ಆಯುಷ್ ಮ್ಹಾತ್ರೆ ಬಿರುಗಾಳಿಯ ಇನ್ನಿಂಗ್ಸ್ ಆಡಿ ತಂಡವನ್ನು ಸುಲಭ ಗೆಲುವಿನತ್ತ ಕೊಂಡೊಯ್ದಿತು.

ಬೌಲಿಂಗ್‌ನಲ್ಲಿ ಮಿಂಚಿದ ಅಂಬ್ರಿಸ್

ಬುಲವಾಯೊದಲ್ಲಿ ನಡೆದ ಈ ಪಂದ್ಯವನ್ನು ಮಳೆಯಿಂದಾಗಿ ತಲಾ 37 ಓವರ್‌ಗಳಿಗೆ ಇಳಿಸಲಾಯಿತು. ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಆದರೆ ಮಳೆ ಆಟಕ್ಕೆ ಆರಂಭದಲ್ಲಿಯೇ ಅಡ್ಡಿಪಡಿಸಿದರಿಂದ ಪಂದ್ಯವನ್ನು ತಲಾ ಮೂರು ಓವರ್‌ಗಳಷ್ಟು ಕಡಿಮೆ ಮಾಡಿತು. ಪಂದ್ಯ ಪುನರಾರಂಭವಾದರೂ ಮಳೆ ಮತ್ತೆ ಆಟವನ್ನು ಸ್ಥಗಿತಗೊಳಿಸಲಾಯಿತು. ಹೀಗಾಗಿ ಉಭಯ ತಂಡಗಳಿಗೆ ತಲಾ 10 ಓವರ್‌ಗಳನ್ನು ಕಡಿತಗೊಳಿಸಲಾಯಿತು. ನಂತರ ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ನ್ಯೂಜಿಲೆಂಡ್ ತಂಡವನ್ನು 36.2 ಓವರ್‌ಗಳಲ್ಲಿ 135 ರನ್‌ಗಳಿಗೆ ಆಲೌಟ್ ಮಾಡಿದರು. ನ್ಯೂಜಿಲೆಂಡ್‌ ಪರ ಕ್ಯಾಲಮ್ ಸ್ಯಾಮ್ಸನ್ ಅಜೇಯ 37 ರನ್‌ ಬಾರಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರೆ, ಸೆಲ್ವಿನ್ ಸಂಜಯ 28 ರನ್ ಗಳಿಸಿದರು. ಬೇರೆ ಯಾವುದೇ ಬ್ಯಾಟ್ಸ್‌ಮನ್ 25 ರನ್‌ಗಳ ಗಡಿಯನ್ನು ತಲುಪಲಿಲ್ಲ.

ಭಾರತದ ಪರ ಆರ್.ಎಸ್. ಅಂಬ್ರಿಸ್ ಅದ್ಭುತ ಬೌಲಿಂಗ್ ಮಾಡಿ ನಾಲ್ಕು ವಿಕೆಟ್ ಪಡೆದರೆ, ಹೆನಿಲ್ ಪಟೇಲ್ ಮೂರು ವಿಕೆಟ್ ಪಡೆದರು. ಇತರ ಬೌಲರ್‌ಗಳು ಸಹ ಮಿತವಾಗಿ ಬೌಲಿಂಗ್ ಮಾಡಿ ನ್ಯೂಜಿಲೆಂಡ್ ದೊಡ್ಡ ಮೊತ್ತ ಗಳಿಸದಂತೆ ತಡೆದರು. ಖಿಲನ್ ಪಟೇಲ್, ಮೊಹಮ್ಮದ್ ಇನಾನ್ ಮತ್ತು ಕನಿಷ್ಕ್ ಚೌಹಾಣ್ ತಲಾ ಒಂದು ವಿಕೆಟ್ ಪಡೆದರು.

ವೈಭವ್, ಆಯುಷ್ ಸ್ಫೋಟಕ ಬ್ಯಾಟಿಂಗ್

ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಆಕ್ರಮಣಕಾರಿ ಆರಂಭ ಪಡೆಯಿತು. ಆರನ್ ಜಾರ್ಜ್ 6 ಎಸೆತಗಳಲ್ಲಿ 7 ರನ್‌ಗಳಿಗೆ ಔಟಾದರೂ, ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಮತ್ತು ನಾಯಕ ಆಯುಷ್ ಮ್ಹಾತ್ರೆ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಎರಡನೇ ವಿಕೆಟ್‌ಗೆ ಕೇವಲ 39 ಎಸೆತಗಳಲ್ಲಿ 76 ರನ್‌ಗಳ ಜೊತೆಯಾಟ ನಡೆಸಿ, ಪಂದ್ಯವನ್ನು ಸಂಪೂರ್ಣವಾಗಿ ಭಾರತದ ಪರವಾಗಿ ತಿರುಗಿಸಿದರು.

T20 World Cup 2026: ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿ

ವೈಭವ್ ಸೂರ್ಯವಂಶಿ 23 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಒಳಗೊಂಡಂತೆ 40 ರನ್ ಗಳಿಸಿದರೆ, ಈ ಮಧ್ಯೆ, ನಾಯಕನ ಇನ್ನಿಂಗ್ಸ್ ಆಡಿದ ಆಯುಷ್ ಮ್ಹಾತ್ರೆ 27 ಎಸೆತಗಳಲ್ಲಿ 2 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಒಳಗೊಂಡಂತೆ 53 ರನ್ ಬಾರಿಸಿದರು. ನಂತರ ವಿಹಾನ್ ಮಲ್ಹೋತ್ರಾ ಅಜೇಯ 17 ರನ್ ಮತ್ತು ವೇದಾಂತ್ ತ್ರಿವೇದಿ ಅಜೇಯ 13 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅಂತಿಮವಾಗಿ ಟೀಂಇಂಡಿಯಾ 13.3 ಓವರ್‌ಗಳಲ್ಲಿ (81 ಎಸೆತಗಳು) 3 ವಿಕೆಟ್‌ಗಳ ನಷ್ಟಕ್ಕೆ ಗುರಿ ತಲುಪಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:30 pm, Sat, 24 January 26

Source link

ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಶಾರುಖ್ ಖಾನ್, ಅಭಿಮಾನಿಗಳಿಗೆ ನಿರಾಸೆ – Kannada News | Shah Rukh Khan announce his King movie release date

ಕಳೆದ ಎರಡು ವರ್ಷ (2025) ಶಾರುಖ್ ಖಾನ್ (Shah Rukh Khan) ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಿಲ್ಲ. 2023 ಶಾರುಖ್ ಖಾನ್ ಪಾಲಿಗೆ ಚಿನ್ನದ ವರ್ಷವಾಗಿತ್ತು. ಒಂದೇ ವರ್ಷದಲ್ಲಿ ಶಾರುಖ್ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿ, ಮೂರೂ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆದವು. ಆದರೆ 2024 ಮತ್ತು 2025 ರಲ್ಲಿ ಶಾರುಖ್ ಖಾನ್ ನಟನೆಯ ಯಾವೊಂದು ಸಿನಿಮಾ ಸಹ ಬಿಡುಗಡೆ ಆಗಲಿಲ್ಲ. ಈ ವರ್ಷಾರಂಭದಲ್ಲಿಯೇ ಶಾರುಖ್ ಅವರ ಹೊಸ ಸಿನಿಮಾ ಬಿಡುಗಡೆ ಆಗುವ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದರು, ಆದರೆ ಅದು ಸುಳ್ಳಾಗಿದೆ.

ಶಾರುಖ್ ಖಾನ್ ಪ್ರಸ್ತುತ ‘ಕಿಂಗ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಕೆಲವಾರು ತಿಂಗಳುಗಳು ಕಳೆದಿದ್ದು, ಸಿನಿಮಾದ ಸಣ್ಣ ಟೀಸರ್ ಈಗಾಗಲೇ ಬಿಡುಗಡೆ ಸಹ ಆಗಿದೆ. ‘ಕಿಂಗ್’ ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ ಎಂಬ ನಿರೀಕ್ಷೆಯನ್ನು ಅಭಿಮಾನಿಗಳು ಇರಿಸಿಕೊಂಡಿದ್ದರು. ಆದರೆ ಅದು ಸುಳ್ಳಾಗಿದೆ. ‘ಕಿಂಗ್’ ಸಿನಿಮಾದ ಬಿಡುಗಡೆ ದಿನಾಂಕವನ್ನು ಶಾರುಖ್ ಖಾನ್ ಘೋಷಿಸಿದ್ದು, ಸಿನಿಮಾ ನೋಡಲು ಅಭಿಮಾನಿಗಳು ಇನ್ನೂ ಬಹಳ ಸಮಯ ಕಾಯಬೇಕಿದೆ.

‘ಕಿಂಗ್’ ಸಿನಿಮಾ ಇದೇ ವರ್ಷ ಕ್ರಿಸ್​​ಮಸ್ ಹಬ್ಬಕ್ಕೆ ಬಿಡುಗಡೆ ಆಗಲಿದೆ. ಅಂದರೆ ಡಿಸೆಂಬರ್ 24ಕ್ಕೆ ಸಿನಿಮಾ ತೆರೆಗೆ ಬರಲಿದೆ. ‘ಡಿಸೆಂಬರ್ 24ಕ್ಕೆ ಕಿಂಗ್ ಘರ್ಜಿಸಲಿದ್ದಾನೆ’ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ ನಟ ಶಾರುಖ್ ಖಾನ್. ಹೆಸರೇ ಹೇಳುತ್ತಿರುವಂತೆ ‘ಕಿಂಗ್’ ಪಕ್ಕಾ ಆಕ್ಷನ್ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ದೀಪಿಕಾ ಪಡುಕೋಣೆ ನಾಯಕಿ. ಸಿನಿಮಾನಲ್ಲಿ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಸಹ ನಟಿಸುತ್ತಿದ್ದಾರೆ. ಸಿನಿಮಾವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಸ್ವತಃ ಶಾರುಖ್ ಖಾನ್ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ:ಹೃತಿಕ್ ಆಯ್ತು ಈಗ ಶಾರುಖ್ ಖಾನ್ ಜೊತೆ ನಟಿಸಲಿದ್ದಾರಾ ಜೂ ಎನ್​​ಟಿಆರ್?

2024 ಮತ್ತು 2025 ರಲ್ಲಿ ಶಾರುಖ್ ಖಾನ್ ನಟನೆಯ ಯಾವೊಂದು ಸಿನಿಮಾ ಬಿಡುಗಡೆ ಆಗಿಲ್ಲವಾದರೂ ನಾಲ್ಕು ಡಾಕ್ಯುಮೆಂಟರಿ ಮತ್ತು ಒಂದು ವೆಬ್ ಸರಣಿಯಲ್ಲಿ ಕಾಣಿಸಿಕೊಂಡಿದ್ದಾರೆ. ನಯನತಾರಾ ಅವರ ಮದುವೆಯ ಡಾಕ್ಯುಮೆಂಟರಿ, ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಮತ್ತು ಜಾವೇದ್ ಅಖ್ತರ್ ಅವರ ಕುರಿತಾದ ಡಾಕ್ಯುಮೆಂಟರಿ, ರೋಷನ್ ಕುಟುಂಬದ ಡಾಕ್ಯುಮೆಂಟರಿ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಳಿಕ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ನಿರ್ದೇಶನ ಮಾಡಿರುವ ‘ದಿ ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:17 pm, Sat, 24 January 26

Source link

ದಶಕಗಳ ಕನಸು ನನಸು: ಮೆಜೆಸ್ಟಿಕ್‌ TO ಏರ್‌ಪೋರ್ಟ್‌ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್ – Kannada News | Railways approves Rs 4100 crore suburban rail link to Bengaluru airport from majestic

ಬೆಂಗಳೂರು, (ಜನವರಿ 24): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport)  ಉಪನಗರ ರೈಲು  (suburban railway)ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಹೌದು…ಮೆಜೆಸ್ಟಿಕ್​​​​ನಿಂದ ಬೆಂಗಳೂರು (Bengaluru) ಏರ್​ಪೋರ್ಟ್​ ವರೆಗೆ 4,100 ಕೋಟಿ ರೂಪಾಯಿ ವೆಚ್ಚದ ಸಬ್​ಅರ್ಬನ್ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಇನ್ನುಸುಮಾರು 4,100 ಕೋಟಿ ರೂ.ವೆಚ್ಚದ ಯೋಜನೆಯ ಅಂತಿಮ ವಿನ್ಯಾಸಕ್ಕೂ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಸಮ್ಮತಿ ಸೂಚಿಸಿದೆ. ಒಟ್ಟು 8.5 ಕಿ.ಮೀ ರೈಲು ಮಾರ್ಗವಿದ್ದು, ಈ ಯೋಜನೆ 2030ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಬಹುಮುಖ್ಯವಾಗಿ ಈ ಯೋಜನೆಯಿಂದ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಲಿದೆ.

2030ರ ವೇಳೆಗೆ ಪೂರ್ಣಗೊಳಿಸುವ ಗುರಿ

ಈ ಯೋಜನೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಅನುದಾನ ನೀಡಲು ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಮತ್ತು ಭಾರತೀಯ ರೈಲ್ವೆಯಿಂದ ಈಕ್ವಿಟಿ ಹಣಕಾಸು ಪಡೆಯಲು ಪ್ರಯತ್ನಗಳು ನಡೆಯುತ್ತಿವೆ. ಯೋಜನೆಯ ವರದಿಯನ್ನು ರೈಟ್ಸ್ ಸಂಸ್ಥೆ ಸಿದ್ಧಪಡಿಸಿದ್ದು, ಈ ಸಂಪೂರ್ಣ ಸಂಪಿಗೆ ಲೈನ್ ಮತ್ತು ವಿಮಾನ ನಿಲ್ದಾಣದ ಕೊಂಡಿಯನ್ನು ಮಾರ್ಚ್ 2030ರ ವೇಳೆಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಇದನ್ನೂ ಓದಿ: ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

ಮೆಜೆಸ್ಟಿಕ್ ಟು ಏರ್​​ಪೋರ್ಟ್ ಮಾರ್ಗ

ಈ ಮಾರ್ಗ ಕೆಎಸ್‌ಆರ್ ಬೆಂಗಳೂರು ಸಿಟಿಯಿಂದ ಹೊರಟು ಯಶವಂತಪುರ, ಯಲಹಂಕ ಮೂಲಕ ಸಾಗಿ, ಟ್ರಂಪೆಟ್ ಇಂಟರ್‌ಚೇಂಜ್ ಬಳಿ ತಿರುವು ಪಡೆದು, ಬಿಕೆ ಹಳ್ಳಿ ಮತ್ತು ಏರೋಸ್ಪೇಸ್ ಪಾರ್ಕ್ ಮೂಲಕ ದೇವನಹಳ್ಳಿ ಏರ್‌ಪೋರ್ಟ್ ಟರ್ಮಿನಲ್ ತಲುಪಲಿದೆ.

ಬೆಂಗಳೂರು ಉಪನಗರ ರೈಲು ಯೋಜನೆಯ ಮೊದಲನೇ ಕಾರಿಡಾರ್ ಆದ ‘ಸಂಪಿಗೆ ಲೈನ್’ ಅಡಿಯಲ್ಲಿ ಮೆಜೆಸ್ಟಿಕ್‌ನಿಂದ ದೇವನಹಳ್ಳಿಯವರೆಗೆ ಈ ವಿಮಾನ ನಿಲ್ದಾಣದ ಸಂಪರ್ಕ ಕೊಂಡಿಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಟ್ರಂಪೆಟ್ ಜಂಕ್ಷನ್‌ನಿಂದ ವಿಮಾನ ನಿಲ್ದಾಣದ ಟರ್ಮಿನಲ್‌ವರೆಗೆ ಒಟ್ಟು 8.5 ಕಿ.ಮೀ ಉದ್ದದ ಮಾರ್ಗವನ್ನು ಇದು ಒಳಗೊಂಡಿದೆ. ಈ ಯೋಜನೆಯಲ್ಲಿ 5.5 ಕಿ.ಮೀ ಮಾರ್ಗವು ನೆಲಮಟ್ಟದಲ್ಲಿ ಹಾಗೂ ಉಳಿದ 3.5 ಕಿ.ಮೀ ಮಾರ್ಗವು ವಿಮಾನ ನಿಲ್ದಾಣದ ಸಂಕೀರ್ಣದೊಳಗೆ ಸಂಪೂರ್ಣ ಭೂಗತವಾಗಿ ನಿರ್ಮಾಣವಾಗಲಿದೆ.

ಟ್ರಾಫಿಕ್ ಸಮಸ್ಯೆಗೆ ಮುಕ್ತಿ

ಟ್ರಾಫಿಕ್‌ನಿಂದ ಬಳಲುತ್ತಿರುವ ಬೆಂಗಳೂರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಉಪನಗರ ರೈಲು ಯೋಜನೆ ಮಹತ್ವದ್ದಾಗಿದೆ.   ಪ್ರಸ್ತುತ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳಲ್ಲಿ ಪ್ರತಿದಿನ ಬಹಳಷ್ಟು ವಾಹನಗಳು ಸಂಚರಿಸುತ್ತಿವೆ. ಇದರಿಂದ ಈ ಭಾಗದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈಗ ಈ ರೈಲು ಮಾರ್ಗವು ಕಾರ್ಯಾರಂಭ ಮಾಡಿದರೆ ವಾಹನ ಸಂಚಾರ ದಟ್ಟಣೆಗೆ ಮುಕ್ತಿ ಸಿಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಜಮೀನಿಗೆ ಹಸು ನುಗ್ಗಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿತ: ಮೂವರ ಬಂಧನ – Kannada News | Chamarajanagar: Elderly Woman Tied, Beaten Over Cow Grazing Field; 3 Arrested

ಚಾಮರಾಜನಗರ, ಜನವರಿ 24: ವೃದ್ಧೆಯನ್ನು (Elderly Woman) ಕಂಬಕ್ಕೆ ಕಟ್ಟಿಹಾಕಿ 2 ಗಂಟೆಗಳ ಕಾಲ ಥಳಿಸಿರುವಂತಹ (Beaten) ಅಮಾನವೀಯ ಕೃತ್ಯಯೊಂದು ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ. ಹಸು ಬೇರೆಯವರ ಜಮೀನಿಗೆ ನುಗ್ಗಿ ಪಸಲು ಹಾಳು ಮಾಡಿದಕ್ಕೆ ಕಣ್ಣಮ್ಮ ಎಂಬುವರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆ ಮಾಡಿದ ಅಂಗಮುತ್ತು ಸೇರಿದಂತೆ ಮೂವರು ಮಹಿಳೆಯರನ್ನು ಹನೂರು ಪೊಲೀಸರು ಬಂಧಿಸಿದ್ದು, ಕೇಸ್​ ದಾಖಲಿಸಿ ತನಿಖೆ ನಡೆಸಿದ್ದಾರೆ.

ನಡೆದದ್ದೇನು?

ಅಂಗಮುತ್ತು ಎಂಬುವರ ಜಮೀನಿಗೆ ಕಣ್ಣಮ್ಮ ಹಸು ನುಗ್ಗಿ ಹುರಳಿ ಫಸಲು ಮೇಯ್ದಿತ್ತು. ಹೀಗಾಗಿ ಅಂಗಮುತ್ತು ಮತ್ತು ಕುಟುಂಬ ಸದಸ್ಯರು ಕಣ್ಣಮ್ಮರನ್ನು ಕಂಬಕ್ಕೆ ಕಟ್ಟಿಹಾಕಿ ಸತತ ಎರಡು ಗಂಟೆ ಥಳಿಸಿದ್ದಾರೆ.

ಬೈಕ್​ ಡಿಕ್ಕಿಯಾಗಿ ಶಾಲೆಗೆ ಹೋಗ್ತಿದ್ದ ಐವರು ವಿದ್ಯಾರ್ಥಿನಿಯರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಬಳಿ ಬೈಕ್​ ಡಿಕ್ಕಿಯಾಗಿ ಶಾಲೆಗೆ ಹೋಗುತ್ತಿದ್ದ ಐವರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗಾಯಾಳು ವಿದ್ಯಾರ್ಥಿನಿಯರಿಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ವಿದ್ಯಾರ್ಥಿನಿಯರು ಪಾರಾಗಿದ್ದಾರೆ.

ಇದನ್ನೂ ಓದಿ: ಚಾಲಕ ಸಮೇತ ಅಕ್ಕಿ ಲಾರಿ ಕಿಡ್ನ್ಯಾಪ್ ಮಾಡಿದ್ದ ಅಂತಾರಾಜ್ಯ ದರೋಡೆಕೋರರ ಬಂಧನ: ಲಾಕ್​​ ಆಗಿದ್ದೇಗೆ ಗೊತ್ತಾ?

ಸದ್ಯ ಶಾಲಾ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆದು ವಾಪಸ್​ ತೆರಳಿದ್ದಾರೆ. ಪೊಲೀಸರು ಬೈಕ್ ಜಪ್ತಿ ಮಾಡಿ ಸವಾರನನ್ನು ವಶಕ್ಕೆ ಪಡೆದಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿಯುರಿದ ಎಲೆಕ್ಟ್ರಿಕಲ್ ವಸ್ತುಗಳು: ಮನೆಯವರು ಜಸ್ಟ್​ ಮಿಸ್​

ಶಾರ್ಟ್ ಸರ್ಕ್ಯೂಟ್​ನಿಂದ ಮನೆಯಲ್ಲಿದ್ದ ಟಿವಿ ಹಾಗೂ ಎಲೆಕ್ಟ್ರಿಕಲ್ ವಸ್ತುಗಳು ಹೊತ್ತಿ ಉರಿದಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಬಂಡಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಸದ್ಯ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬಂಡಳ್ಳಿಯ ಜಯಲಕ್ಷ್ಮೀ ಎಂಬುವವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗ್ಗೆ ಎಂದಿನಂತೆ ಎದ್ದು ಟಿವಿ ಆನ್ ಮಾಡಿ ಕೆಲಸದಲ್ಲಿ ನಿರತರಾಗಿದ್ದಾರೆ. ಇದ್ದಕ್ಕಿದ್ದಂತೆ ಶಾರ್ಟ್ ಸರ್ಕ್ಯೂಟ್​ನಿಂದ ಟಿವಿ ಹೊತ್ತಿ ಉರಿದಿದೆ. ಕುಟುಂಬಸ್ಥರು ಗಾಬರಿಯಿಂದ ಮನೆಯಿಂದ ಆಚೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.  ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಏಕಾಂಗಿಯಾಗಿ ಅರ್ಧದಷ್ಟು ತಂಡವನ್ನು ಪೆವಿಲಿಯನ್​ಗಟ್ಟಿದ ಮೊಹಮ್ಮದ್ ಶಮಿ

Source link

ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹೊಸ ರೂಲ್ಸ್: ದರ್ಶನ್ ಸೇರಿದಂತೆ ಇತರೆ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಬ್ರೇಕ್ – Kannada News | First time regulations framed regarding providing food, bedding clothes to the Under Trial And Civil prisoners In Karnataka Jails

ಬೆಂಗಳೂರು, (ಜನವರಿ 24): ಜೈಲಿನಲ್ಲಿರುವ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಸೌಕರ್ಯಗಳ ಕುರಿತು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ಮಹತ್ವದ ಸುತ್ತೋಲೆ ಹೊರಡಿಸಿದ್ದು, ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮವಹಿಸುವಂತೆ ರಾಜ್ಯ ಎಲ್ಲಾ ಜೈಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರಾಗೃಹ ಡಿಜಿಪಿ ಅವರ ಹೊಸ ಆದೇಶದಿಂದಾಗಿ ಕೊಲೆ ಆರೋಪದಲ್ಲಿ ಜೈಲಲ್ಲಿರುವ ದರ್ಶನ್ (Darshan) ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ಮನೆ ಊಟಕ್ಕೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​, ರಾಜ್ಯದ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಮನೆ ಊಟ ಹಾಗೂ ಇತರ ಅಗತ್ಯ ವಸ್ತುಗಳನ್ನು ಪೂರೈಸುವ ಕುರಿತು ಮಾರ್ಗಸೂಚಿಗಳನ್ನು ರೂಪಿಸಲು ಇದು ಸಕಾಲ ಎಂದು ಹೈಕೋರ್ಟ್‌ ಮೌಖಿಕವಾಗಿ ಹೇಳಿತ್ತು. ಇದರ ಬೆನ್ನಲ್ಲೇ ಫುಡ್ ಮತ್ತು ಬೆಡ್ ಬಗ್ಗೆ ಹೊಸ ಆದೇಶ ಹೊರಬಿದ್ದಿದೆ.

ಇದನ್ನೂ ನೋಡಿ: ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಅಲೋಕ್​​ ಕುಮಾರ್​​ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ 

ವಿಚಾರಣಾಧೀನ ಕೈದಿಗಳು ಮತ್ತು ಸಿವಿಲ್ ಕೈದಿಗಳಿಗೆ ಆಹಾರ, ಹಾಸಿಗೆ ಮತ್ತು ಬಟ್ಟೆಗಳನ್ನು ಒದಗಿಸುವ ಬಗ್ಗೆ ಮೊದಲ ಬಾರಿಗೆ ನಿಯಮಗಳನ್ನು ರೂಪಿಸಲಾಗಿದೆ. ನಾವು ಹೊರಗಿನಿಂದ ಯಾವುದೇ ಆಹಾರವನ್ನು ಅನುಮತಿಸುವುದಿಲ್ಲ. ಬೆಂಗಳೂರು ಜೈಲಿನ ಆಹಾರವನ್ನು FSSAI ಪ್ರಮಾಣೀಕರಿಸಿದೆ ಮತ್ತು ಉತ್ತಮ ಗುಣಮಟ್ಟದ್ದಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ಸೂತ್ತೋಲೆಯಲ್ಲೇನಿದೆ?

ವಿಚಾರಣಾಧೀನ ಆರೋಪಿಗೆ ಜೈಲಿನಲ್ಲಿ ಕೊಡುವ ಬ್ಲಾಂಕೆಟ್ ಬಳಸಬೇಕು. ಹೆಚ್ಚುವರಿಯಾಗಿ ಒಂದು ಬ್ಲಾಂಕೆಟ್ ನೀಡಲಾಗುತ್ತೆ. ಯಾವುದೇ ಹಾಸಿಗೆಯ ಸೌಲಭ್ಯ ಇರುವುದಿಲ್ಲ. ಇನ್ನು ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸೂಚಿಸಲಾಗಿದ್ದು, ಜೈಲಿನ ನಿಯಾಮವಳಿ ಪ್ರಕಾರ ಆಹಾರ, ಬಟ್ಟೆ, ಹಾಸಿಗೆ ನೀಡಲಾಗುತ್ತದೆ. ಇನ್ನು ಸಂದರ್ಶನ ವೇಳೆ ಕೈದಿಗಳಿಗೆ ಖಾಸಗಿ ವ್ಯಕ್ತಿಗಳಿಂದ ನಿರ್ದಿಷ್ಟ ಪ್ರಮಾಣದಲ್ಲಿ ಆಹಾರ ಪೂರೈಕೆಗೆ ಸೂಚಿಸಲಾಗಿದೆ.

ನಿರ್ದಿಷ್ಟ ಪ್ರಮಾಣದಲ್ಲಿ ಆಹಾರ ಪೂರೈಕೆ

ನಿರ್ದಿಷ್ಟ ಪ್ರಮಾಣದಲ್ಲಿ ಪ್ಯಾಕ್ ಮಾಡಿರುವ ಆಹಾರ ನೀಡಲು ಅವಕಾಶವಿದ್ದು, ಬಾಳೆಹಣ್ಣು, ಸೇಬು, ಸೀಬೆಹಣ್ಣು, ಸಪೋಟ ಸೇರಿ 2 ಕೆಜಿಯಷ್ಟಿರಬೇಕು. ಡ್ರೈಫ್ರೂಟ್ಸ್, ಬೇಕರಿ ತಿನಿಸು ಸೇರಿದಂತೆ 500 ಗ್ರಾಮ್ ಮೀರುವಂತಿಲ್ಲ. ವಿಚಾರಣಾಧೀನ ಕೈದಿಗಳಿಗೆ 2 ಜೊತೆ ಬಟ್ಟೆ, 2 ಒಳಉಡುಪು ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಜೈಲಿನಲ್ಲಿ ದೈಹಿಕ ತಪಾಸಣೆ, ಸೆಕ್ಯೂರಿಟಿ ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದು, ಅಗತ್ಯವಿದ್ದರೆ ಜೈಲಿನ ಅಧಿಕಾರಿಗಳಿಂದ ಯಾವುದೇ ರೀತಿಯ ತಪಾಸಣೆ ಮಾಡಬಹುದು. ತಕ್ಷಣವೇ ಈ ನಿಯಮ ಜಾರಿಮಾಡುವಂತೆ ರಾಜ್ಯ ಎಲ್ಲಾ ಜೈಲಾಧಿಕಾರಿಗಳಿಗೆ ಕಾರಾಗೃಹ ಡಿಜಿಪಿ ಸುತ್ತೋಲೆ ಹೊರಡಿಸಿದ್ದಾರೆ.

  • ಕರ್ನಾಟಕ ಕಾರಾಗೃಹ ಕಾಯ್ದೆ, 1963 ರ ಸೆಕ್ಷನ್ 30, ವಿಚಾರಣಾಧೀನ ಕೈದಿಗಳು ಮತ್ತು ಶಿಕ್ಷೆಗೊಳಗಾಗದ ಕ್ರಿಮಿನಲ್ ಕೈದಿಗಳು, ಖಾಸಗಿ ಮೂಲಗಳಿಂದ ಆಹಾರ, ಬಟ್ಟೆ, ಹಾಸಿಗೆ ಅಥವಾ ಇತರ ಅಗತ್ಯ ವಸ್ತುಗಳನ್ನು ಸರಿಯಾದ ಸಮಯದಲ್ಲಿ, ಪರೀಕ್ಷೆಗೆ ಒಳಪಟ್ಟು ಮತ್ತು ಇನ್ಸ್‌ಪೆಕ್ಟರ್ ಜನರಲ್ ಅನುಮೋದಿಸಬಹುದಾದ ನಿಯಮಗಳಿಗೆ ಅನುಸಾರವಾಗಿ ಖರೀದಿಸುವ ಅಥವಾ ಸ್ವೀಕರಿಸುವ ಮೂಲಕ ತಮ್ಮನ್ನು ತಾವು ನಿರ್ವಹಿಸಲು ಅನುಮತಿಸುತ್ತದೆ.
  • ಕೈದಿಗಳು ಮತ್ತು ಶಿಕ್ಷೆಗೊಳಗಾಗದ ಕ್ರಿಮಿನಲ್ (ವಿಚಾರಣೆಯಲ್ಲಿರುವ) ಕೈದಿಗಳು ಸೇರಿದಂತೆ ಎಲ್ಲಾ ಕೈದಿಗಳಿಗೆ ಕರ್ನಾಟಕ ಕಾರಾಗೃಹ ಕಾಯ್ದೆ, 1963, ಕರ್ನಾಟಕ ಕಾರಾಗೃಹ ನಿಯಮಗಳು, 1974 ಮತ್ತು ಕರ್ನಾಟಕ ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಕೈಪಿಡಿ, 2021 ರ ಪ್ರಕಾರ ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಇಲಾಖೆಯು ಈಗಾಗಲೇ ಸಾಕಷ್ಟು ಆಹಾರ, ಬಟ್ಟೆ ಮತ್ತು ಹಾಸಿಗೆಗಳನ್ನು ಒದಗಿಸುತ್ತಿದೆ.
  • ಜೈಲು ಭದ್ರತೆ, ಸುರಕ್ಷತೆ, ಸಿಬ್ಬಂದಿ ಕೊರತೆ, ಜನದಟ್ಟಣೆ, ಆಡಳಿತಾತ್ಮಕ ಕಾರ್ಯಸಾಧ್ಯತೆ ಮತ್ತು ಆರೋಗ್ಯ ಕಾಳಜಿಗಳ ಸಮಸ್ಯೆಗಳನ್ನು ಪರಿಗಣಿಸಿ, ಖಾಸಗಿ ಮೂಲಗಳಿಂದ ಆಹಾರ, ಬಟ್ಟೆ ಮತ್ತು ಹಾಸಿಗೆಗಳ ಸ್ವೀಕೃತಿಯನ್ನು ನಿಯಂತ್ರಿಸುವುದು ಮತ್ತು ನಿರ್ಬಂಧಿಸುವುದು ಅಗತ್ಯವಾಗಿದೆ.

ಹೈಕೋರ್ಟ್ ಆದೇಶ ಸ್ವಾಗತಿಸಿದ್ದ ಅಲೋಕ್ ಕುಮಾರ್

ಪವಿತ್ರಗೌಡಗೆ ಮನೆಯೂಟಕ್ಕೆ ಹೈಕೋರ್ಟ್ ನಿಷೇಧ ಹೇರಿದ ಬಗ್ಗೆ ಪ್ರತಿಕ್ರಿಯಿಸಿದ್ದ ಅಲೋಕ್ ಕುಮಾರ್, ಪವಿತ್ರಗೌಡಗೆ (Pavitra Gowda) ಮನೆ ಊಟ ಕೊಡದೇ ಇರೋದು ಒಳ್ಳೆಯದು. ನಾವು ಕಾರಾಗೃಹದಲ್ಲಿ ಒಳ್ಳೆಯ ಊಟ ನೀಡುತ್ತಿದ್ದೇವೆ. ಮನೆಯಿಂದ ತರುವ ಊಟಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾರಾಗೃಹದಲ್ಲಿ ತಯಾರಿಸುವ ಊಟದ ಗುಣಮಟ್ಟವನ್ನು ಎಫ್ಎಸ್ಐಎಲ್‌ಗೆ ಪರೀಕ್ಷೆಗೆ ಕಳುಹಿಸಿ ಸರ್ಟಿಪೈಟ್ ಪಡೆದ ಬಳಿಕ ಕೈದಿಗಳಿಗೆ ನೀಡುತ್ತಿದ್ದೇವೆ ಎಂದಿದ್ದಾರೆ.

ಜೈಲಿನಲ್ಲಿರುವ ಕೈದಿಗಳಲ್ಲಿ ಪ್ರಭಾವಶಾಲಿ ಯಾರು, ಕೆಳಮಟ್ಟದಲ್ಲಿರೋರು ಯಾರು ಎಂದು ನೋಡಲು ಸಾಧ್ಯವಿಲ್ಲ. ಸೆಕ್ಷನ್ 30 ಕರ್ನಾಟಕ ಪ್ರಿಜನರ್ಸ್‌ ಆಕ್ಟ್ 1963 ಪ್ರಕಾರ ಕೈದಿಗಳಿಗೆ ಊಟ, ಬಟ್ಟೆ ಪುಸ್ತಕ ಕೂಡಬೇಕು. ಈ ನಿಯಮದ ಅಡಿ ತೀರ್ಮಾನ ಮಾಡಲಾಗುತ್ತದೆ. ಕಾರಗೃಹದ ಕೈದಿಗಳಿಗೆ ನಾವು ನೀಡುತ್ತಿರುವ ಊಟ ಸರ್ಟಿಫೈಡ್ ಆಗಿರುವುದರಿಂದ ಒಬ್ಬರಿಗೆ ಮನೆಯಿಂದ ಊಟ ನೀಡಿದ್ರೆ, ಮುಂದೆ ಸಾವಿರಾರು ಜನ ಇದೇ ರೀತಿ ಕೇಳುತ್ತಾರೆ. ಇದರಿಂದ ಪವಿತ್ರಗೌಡಗೆ ಮನೆ ಊಟ ನೀಡಲು ನಿರಾಕರಿಸಿರುವುದು ಒಳ್ಳೆಯದು ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ, ಜನವರಿ 24: ವೀರಪ್ಪನ್​ ಹಿಡಿಯಲು ಹೋಗಿದ್ದ ಪೊಲೀಸರಿಗೆ ರಾಜ್ಯದ ಇತಿಹಾಸದಲ್ಲಿ ದೇವೇಗೌಡರು ಉಡುಗೊರೆ ಕೊಟ್ಟಿದ್ದರು. ಆದರೆ ಇದೀಗ ಯಾವುದೋ ಅಧಿಕಾರಿಗಳಿಗೆ 30 ಲಕ್ಷ ರೂ ಉಡುಗೊರೆ ಕೊಟ್ಟಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಎಸ್​ಐಟಿ ಅಧಿಕಾರಿಗಳಿಗೆ ನೀಡಿರುವ ಬಹುಮಾನದ ಬಗ್ಗೆ ಪರೋಕ್ಷವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಹಾಸನದ JDS ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳಬೇಕು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

37 ವರ್ಷದ ಹಿಂದೆ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆ ಆಗುತ್ತಿದೆ ರಜನೀಕಾಂತ್ ಸಿನಿಮಾ – Kannada News | Rajinikanth’s movie releasing after 37 year after completing its shooting

ರಜನೀಕಾಂತ್ (Rajinikanth) ಭಾರತದ ಸೂಪರ್ ಸ್ಟಾರ್ ನಟ. ಭಾರತದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಒಬ್ಬರ ರಜನೀಕಾಂತ್. ಈಗಲೂ ಸಹ ರಜನೀಕಾಂತ್ ಅವರ ಕಾಲ್​​ಶೀಟ್​​ಗಾಗಿ ನಿರ್ಮಾಪಕರು ಕಾದು ನಿಂತಿದ್ದಾರೆ. ಆದರೆ 37 ವರ್ಷಗಳ ಹಿಂದೆ ರಜನೀಕಾಂತ್ ಮಾತ್ರವಲ್ಲ ಇನ್ನೂ ಕೆಲವು ದೊಡ್ಡ ಸ್ಟಾರ್ ನಟರುಗಳನ್ನು ಹಾಕಿಕೊಂಡು ಭಾರಿ ಬಜೆಟ್​​ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿತ್ತು, ಆದರೆ ಆ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಆದರೆ ಇದೀಗ 37 ವರ್ಷಗಳ ಬಳಿಕ ಸಿನಿಮಾ ಕೊನೆಗೂ ಬಿಡುಗಡೆ ಕಾಣುತ್ತಿದೆ.

ನಟಿ ರೀನಾ ರಾಯ್ ಅವರ ಸಹೋದರ ರಾಜಾ ರಾಯ್ ಅವರು 1989 ರಲ್ಲಿ ನಿರ್ಮಾಣ ಮಾಡಿದ್ದ ಸಿನಿಮಾ ‘ಹಮ್ ಮೇ ಶೆಹೆನ್ಶಾ ಕೌನ್’ ಇದೀಗ ಸುಮಾರು ನಾಲ್ಕು ದಶಕಗಳ ಬಳಿಕ ಬಿಡುಗಡೆ ಆಗುತ್ತಿದೆ. ರಜನೀಕಾಂತ್ ಮಾತ್ರವೇ ಅಲ್ಲದೆ ಆಗ ಸೂಪರ್ ಸ್ಟಾರ್ ಬಾಲಿವುಡ್​ ನಟ ಶತೃಘ್ನ ಸಿನ್ಹಾ, ಸ್ಟಾರ್ ನಟಿ ಹೇಮಾ ಮಾಲಿನಿ, ಖ್ಯಾತ ವಿಲನ್ ಅಮರೀಶ್ ಪುರಿ, ಪ್ರೇಮ್ ಚೋಪ್ರಾ ಇನ್ನೂ ಹಲವರು ಸಿನಿಮಾನಲ್ಲಿ ನಟಿಸಿದ್ದರು.

‘ಹಮ್ ಮೇ ಶೆಹೆನ್ಶಾ ಕೌನ್’ ಸಿನಿಮಾವನ್ನು ಆಗಿನ ಜನಪ್ರಿಯ ನಿರ್ದೇಶಕ ಹರ್ಮೇಶ್ ಮಲ್ಹೋತ್ರಾ ನಿರ್ದೇಶನ ಮಾಡಿದ್ದರು. ಸಿನಿಮಾಕ್ಕೆ ಸಂಗೀತ ನೀಡಿದ್ದಿದ್ದು ಲಕ್ಷ್ಮಿಕಾಂತ್ ಪ್ಯಾರೇಲಾಲ್, ಸಿನಿಮಾಕ್ಕೆ ಡೈಲಾಗ್ ಬರೆದಿದ್ದು ಸಲ್ಮಾನ್ ಖಾನ್ ತಂದೆ ಸಲೀಂ, ಸರೋಜ್ ಖಾನ್ ನೃತ್ಯ ನಿರ್ದೇಶಕಿ. ಅದ್ಧೂರಿ ತಾರಾಗಾಣ, ಅದ್ದೂರಿ ಸೆಟ್​​ಗಳನ್ನು ಹಾಕಿ ಬಲು ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದ್ದ ಸಿನಿಮಾವು ಅನಿವಾರ್ಯ ಕಾರಣಗಳಿಂದ ಪೂರ್ಣಗೊಂಡಿರಲಿಲ್ಲ. ಆದರೆ ಇದೀಗ ಎಐ ಬಳಸಿ ಸಿನಿಮಾವನ್ನು ಪೂರ್ತಿ ಮಾಡಲಾಗಿದ್ದು, ಬಿಡುಗಡೆಗೆ ಸಜ್ಜು ಮಾಡಲಾಗಿದೆ.

ಇದನ್ನೂ ಓದಿ:ರಜನೀಕಾಂತ್ ಮತ್ತು ಗಿಲ್ಲಿ: ಒಂದು ಬಿರಿಯಾನಿಯ ಕತೆ

ಇದೀಗ ಸಿನಿಮಾ ಬಿಡುಗಡೆ ಬಗ್ಗೆ ಘೋಷಿಸಿರುವ ನಿರ್ಮಾಪಕ ಮತ್ತು ಸಹ ನಿರ್ಮಾಪಕರು, ಸಿನಿಮಾವನ್ನು ನಾವು ಪೂರ್ಣ ಮಾಡಿದ್ದೆವು, ಆದರೆ ಈಗ ಎಐ ಮತ್ತು ಇತರೆ ತಂತ್ರಜ್ಞಾನಗಳನ್ನು ಬಳಸಿ, ಈಗಿನ ತಂತ್ರಜ್ಞಾನಕ್ಕೆ ತಕ್ಕಂತೆ ಸಿನಿಮಾವನ್ನು ಅಪ್​​ಡೇಟ್ ಮಾಡಲಾಗಿದೆ. ದೃಶ್ಯಗಳನ್ನು ಇನ್ನಷ್ಟು ಪರಿಣಾಮಕಾರಿ ಗೊಳಿಸಲು ನಾವು ಎಐ ಅನ್ನು ಬಳಸಿದ್ದೇವೆ ಎಂದಿದ್ದಾರೆ. ಸಿನಿಮಾವನ್ನು 4ಕ ಫಾರ್ಮ್ಯಾಟ್​​ಗೆ ಬದಲಾಯಿಸಲಾಗಿದ್ದು, 5.1 ಸರೌಂಡ್ ಸೌಂಡ್ ಅನ್ನು ಅಳವಡಿಸಲಾಗಿದೆ.

‘ಹಮ್ ಮೇ ಶೆಹೆನ್ಶಾ ಕೌನ್’ ಸಿನಿಮಾವನ್ನು ಆಗ 35 ಎಂಎಂ ಈಸ್ಟಮನ್​​ ಕಲರ್​​ನಲ್ಲಿ ಚಿತ್ರೀಕರಣ ಮಾಡಲಾಗಿತ್ತಂತೆ. ಸಿನಿಮಾದ ಚಿತ್ರೀಕರಣ ಆಗಲೇ ಪೂರ್ಣಗೊಂಡಿದ್ದರೂ ಸಹ ಕೆಲವು ಕಾರಣಗಳಿಂದಾಗಿ ಸೆನ್ಸಾರ್ ಸರ್ಟಿಫಿಕೇಟ್​​ಗೆ ಸಿನಿಮಾವನ್ನು ಸಲ್ಲಿಸಲಾಗಿರಲಿಲ್ಲ. ಆದರೆ ಈಗ ಮತ್ತೊಮ್ಮೆ ಸಿನಿಮಾಕ್ಕೆ ಅಂತಿಮ ಸ್ಪರ್ಷ ನೀಡಿದ್ದು, ಸಿನಿಮಾವನ್ನು ಸೆನ್ಸಾರ್​​ಗೆ ಕಳಿಸಿ ಬಿಡುಗಡೆ ಮಾಡಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್? – Kannada News | 2026 T20 World Cup: Pakistan’s Participation Doubtful After Bangladesh’s Exclusion

2026 ರ ಐಸಿಸಿ ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ತಂಡ ಭಾಗವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಬಾಂಗ್ಲಾದೇಶ ಈಗಾಗಲೇ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಮ್ಮ ತಂಡದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದು, ಪಾಕಿಸ್ತಾನ ಪಂದ್ಯಾವಳಿಯಲ್ಲಿ ಭಾಗವಹಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದಿದ್ದಾರೆ.

ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶವನ್ನು ಪಂದ್ಯಾವಳಿಯಿಂದ ಹೊರಗಿಟ್ಟ ನಂತರ ಪಾಕ್ ಮಂಡಳಿ ಅಧ್ಯಕ್ಷನಿಂದ ಈ ಹೇಳಿಕೆ ಬಂದಿದೆ. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಪಂದ್ಯಗಳನ್ನು ಆಡದಿರಲು ನಿರ್ಧರಿಸಿತ್ತು. ಬಿಸಿಬಿ ತನ್ನ ಪಂದ್ಯಗಳನ್ನು ಭಾರತದ ಹೊರಗೆ ಸ್ಥಳಾಂತರಿಸುವಂತೆ ಐಸಿಸಿಯನ್ನು ವಿನಂತಿಸಿತು, ಆದರೆ ಜನವರಿ 21 ರಂದು ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಈ ಪ್ರಸ್ತಾಪವನ್ನು ತಿರಸ್ಕರಿಸಲಾಯಿತು. ಇದರ ನಂತರ, ಐಸಿಸಿ ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಆಡುವ ಅವಕಾಶ ನೀಡಿದೆ.

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆಯ ಬಗ್ಗೆ ನಿರ್ಧಾರವನ್ನು ಪಾಕಿಸ್ತಾನ ಸರ್ಕಾರ ತೆಗೆದುಕೊಳ್ಳುತ್ತದೆ. ಪ್ರಧಾನಿ ದೇಶಕ್ಕೆ ಮರಳಲು ನಾವು ಕಾಯುತ್ತಿದ್ದೇವೆ. ಬಾಂಗ್ಲಾದೇಶಕ್ಕೆ ಅನ್ಯಾಯ ಮಾಡಲಾಗಿದೆ. ಪಾಕಿಸ್ತಾನ ಸರ್ಕಾರ ಪಂದ್ಯಾವಳಿಯನ್ನು ಬಹಿಷ್ಕರಿಸುವಂತೆ ಕೇಳಿದರೆ, ಐಸಿಸಿ 22 ನೇ ತಂಡವನ್ನು ಸೇರಿಸಿಕೊಳ್ಳಬಹುದು. ಅದು ನಮಗೆ ಮುಖ್ಯವಲ್ಲ. ಬಾಂಗ್ಲಾದೇಶವನ್ನು ಅನ್ಯಾಯಕ್ಕೆ ಬಲಿಪಶುವನ್ನಾಗಿ ಮಾಡಬಾರದು. ಅವರು ಕೂಡ ಪ್ರಮುಖ ಸದಸ್ಯರಾಗಿದ್ದಾರೆ ಎಂದು ಮೊಹ್ಸಿನ್ ನಖ್ವಿ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version