Hindu Rituals: ಸಂಜೆ ಹೊತ್ತು ಮನೆಯಲ್ಲಿ ಕರ್ಪೂರವನ್ನು ಉರಿಸಿ; ಪ್ರಯೋಜನ ಸಾಕಷ್ಟಿವೆ – Kannada News | Camphor benefits evening hindu rituals for prosperity peace and positive energy

ಹಿಂದೂ ಧರ್ಮದಲ್ಲಿ ಕರ್ಪೂರಕ್ಕೆ ವಿಶಿಷ್ಟ ಮತ್ತು ಮಹತ್ವದ ಸ್ಥಾನವಿದೆ. ದೇವರ ಪೂಜೆ, ಆರತಿ ಹಾಗೂ ಇತರ ಧಾರ್ಮಿಕ ಆಚರಣೆಗಳಲ್ಲಿ ಕರ್ಪೂರವನ್ನು ಬಳಸುವುದು ಶುದ್ಧತೆ ಮತ್ತು ತ್ಯಾಗದ ಸಂಕೇತವಾಗಿದೆ. ಕರ್ಪೂರವನ್ನು ಉರಿಸಿದಾಗ ಅದು ಸಂಪೂರ್ಣವಾಗಿ ಕರಗಿಬಿಡುತ್ತದೆ; ಯಾವುದೇ ಅವಶೇಷ ಉಳಿಯದು. ಈ ಕಾರಣದಿಂದಲೇ ಕರ್ಪೂರವನ್ನು ಅಹಂಕಾರ ಮತ್ತು ನಕಾರಾತ್ಮಕತೆಯ ನಾಶದ ಪ್ರತೀಕವಾಗಿ ಪರಿಗಣಿಸಲಾಗುತ್ತದೆ. ಧಾರ್ಮಿಕ ನಂಬಿಕೆಯ ಪ್ರಕಾರ, ಕರ್ಪೂರವನ್ನು ಉರಿಸುವುದರಿಂದ ವಾತಾವರಣದಲ್ಲಿರುವ ನಕಾರಾತ್ಮಕ ಶಕ್ತಿಗಳು ದೂರವಾಗಿ, ಮನೆಗೆ ಸಕಾರಾತ್ಮಕ ಶಕ್ತಿ ಪ್ರವೇಶಿಸುತ್ತದೆ.

ವಿಶೇಷವಾಗಿ ಸಂಜೆ ಸಮಯದಲ್ಲಿ ಕರ್ಪೂರವನ್ನು ಉರಿಸುವುದು ಅತ್ಯಂತ ಶುಭಕರವೆಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಸಂಜೆ ಹೊತ್ತಿನಲ್ಲಿ ಕರ್ಪೂರದ ಹೊಗೆ ಮನೆಯಾದ್ಯಂತ ಹರಡಿದರೆ, ಮನೆಯಲ್ಲಿ ಶಾಂತಿ, ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ ಎನ್ನಲಾಗುತ್ತದೆ. ಹಗಲು ಅಥವಾ ರಾತ್ರಿ ಯಾವ ಸಮಯದಲ್ಲಾದರೂ ಕರ್ಪೂರವನ್ನು ಸುಡುವುದು ಶುಭವೇ ಆದರೂ, ಸಂಜೆ ಸಮಯದಲ್ಲಿ ಇದನ್ನು ಮಾಡಿದರೆ ಅದರ ಫಲ ಇನ್ನಷ್ಟು ಉತ್ತಮವಾಗುತ್ತದೆ ಎಂಬ ನಂಬಿಕೆ ಇದೆ.

ಶಾಸ್ತ್ರಗಳ ಪ್ರಕಾರ, ಸಂಜೆ ಕರ್ಪೂರವನ್ನು ಉರಿಸುವುದರಿಂದ ಲಕ್ಷ್ಮೀ ದೇವಿಯ ಕೃಪೆ ಲಭಿಸುತ್ತದೆ. ಕರ್ಪೂರದ ಸುಗಂಧದಿಂದ ವಾತಾವರಣ ಶುದ್ಧವಾಗುತ್ತದೆ ಮತ್ತು ಶುದ್ಧತೆ ಇರುವ ಮನೆಗೆ ಲಕ್ಷ್ಮೀ ದೇವಿ ಶೀಘ್ರವಾಗಿ ಪ್ರವೇಶಿಸುತ್ತಾಳೆ ಎಂದು ನಂಬಲಾಗುತ್ತದೆ. ಇದರಿಂದ ಮನೆಯಲ್ಲಿರುವ ಆರ್ಥಿಕ ಅಡಚಣೆಗಳು ಕ್ರಮೇಣ ದೂರವಾಗಿ, ಸಮೃದ್ಧಿಯ ದಾರಿಗಳು ತೆರೆದುಕೊಳ್ಳುತ್ತವೆ.

ಆರ್ಥಿಕ ಸಮಸ್ಯೆಗಳು ಮತ್ತು ಬಡತನದಿಂದ ಬಳಲುತ್ತಿರುವವರು ಪ್ರತಿದಿನ ಸಂಜೆ ಪ್ರಾರ್ಥನೆಯ ಸಮಯದಲ್ಲಿ ಕರ್ಪೂರವನ್ನು ಉರಿಸಿ, ಅದರ ಹೊಗೆಯನ್ನು ಮನೆಯಾದ್ಯಂತ ಹರಡುವುದು ಶುಭ ಫಲ ನೀಡುತ್ತದೆ ಎಂದು ಹೇಳಲಾಗುತ್ತದೆ. ಹೀಗೆ ಮಾಡುವುದರಿಂದ ಹಣಕಾಸಿನ ಸ್ಥಿತಿ ಸುಧಾರಿಸಿ, ಸ್ಥಗಿತಗೊಂಡಿರುವ ಪ್ರಗತಿ ಮತ್ತೆ ಚೇತರಿಸಿಕೊಳ್ಳುತ್ತದೆ ಎಂಬ ನಂಬಿಕೆ ಇದೆ.

ವಾಸ್ತು ಶಾಸ್ತ್ರದ ದೃಷ್ಟಿಯಿಂದಲೂ ಕರ್ಪೂರಕ್ಕೆ ಹೆಚ್ಚಿನ ಮಹತ್ವವಿದೆ. ಮನೆಯಲ್ಲಿ ವಾಸ್ತು ದೋಷಗಳಿದ್ದರೆ, ಪ್ರತಿದಿನ ಸಂಜೆ ಕರ್ಪೂರವನ್ನು ಸುಡುವುದರಿಂದ ಅದರ ದುಷ್ಪರಿಣಾಮಗಳು ಕಡಿಮೆಯಾಗುತ್ತವೆ. ಕರ್ಪೂರದ ಧೂಮವು ಮನೆಯನ್ನು ಶುದ್ಧಗೊಳಿಸಿ, ಶಕ್ತಿಸಂತುಲನವನ್ನು ಸರಿಪಡಿಸಲು ಸಹಾಯ ಮಾಡುತ್ತದೆ ಎನ್ನಲಾಗುತ್ತದೆ.

ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ

ಇದಷ್ಟೇ ಅಲ್ಲದೆ, ಶಾಸ್ತ್ರಗಳ ಪ್ರಕಾರ ಸಾಲಬಾಧೆ ಮತ್ತು ಮಾನಸಿಕ ಒತ್ತಡಗಳಿಂದ ಮುಕ್ತಿ ಪಡೆಯಲು ಕೂಡ ಕರ್ಪೂರ ಉಪಯುಕ್ತವಾಗಿದೆ. ಸಂಜೆ ಸಮಯದಲ್ಲಿ ಕರ್ಪೂರವನ್ನು ಉರಿಸುವುದರಿಂದ ಮನೆಯಲ್ಲಿ ಸಕಾರಾತ್ಮಕ ವಾತಾವರಣ ನಿರ್ಮಾಣವಾಗಿ, ಕುಟುಂಬದ ಕಲಹಗಳು, ಅಶಾಂತಿ ಮತ್ತು ಗೃಹ ಕಲಹಗಳು ಕಡಿಮೆಯಾಗುತ್ತವೆ ಎಂದು ನಂಬಲಾಗುತ್ತದೆ.

ಒಟ್ಟಾರೆ, ಸಂಜೆ ಕರ್ಪೂರವನ್ನು ಉರಿಸುವುದು ಧಾರ್ಮಿಕ, ವಾಸ್ತು ಮತ್ತು ಮಾನಸಿಕ ದೃಷ್ಟಿಯಿಂದಲೂ ಶುಭಕರವೆಂದು ಪರಿಗಣಿಸಲಾಗುತ್ತದೆ. ನಿಯಮಿತವಾಗಿ ಮತ್ತು ಭಕ್ತಿಭಾವದಿಂದ ಈ ಆಚರಣೆಯನ್ನು ಪಾಲಿಸಿದರೆ, ಮನೆಗೆ ಶಾಂತಿ, ಸಮೃದ್ಧಿ ಮತ್ತು ಸಕಾರಾತ್ಮಕ ಶಕ್ತಿ ನೆಲೆಸುತ್ತದೆ ಎಂಬ ನಂಬಿಕೆ ಬಹುಕಾಲದಿಂದಲೂ ನಡೆದುಕೊಂಡು ಬಂದಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Week Horoscope: ಮಕರದಲ್ಲಿ 4 ಗ್ರಹಗಳ ಪ್ರಭಾವ, ಪ್ರೀತಿ, ವೃತ್ತಿ, ಹಣಕಾಸು ಭವಿಷ್ಯ! – Kannada News | Weekly Horoscope: Jan 4th Week Predictions Planetary Changes in Capricorn and Your Zodiac Fortunes

ಜನವರಿ ತಿಂಗಳ ನಾಲ್ಕನೇ ವಾರ ನಾಲ್ಕು ಗ್ರಹಗಳು ಮಕರದಲ್ಲಿ ಇರುವರು. ಶನಿ ಸ್ಥಾನದಲ್ಲಿ ಇರುವ ರವಿ ತಂದೆ ಮಕ್ಕಳ‌ ನಡುವೆಯೇ ಕಲಹ, ಸರ್ಕಾರದ ಕಾರ್ಯಗಳು ಬೇಗ ಆಗದೇ ನಾನ ಕಾರಣದಿಂದ ಕುಂಟುತ್ತ ಸಾಗುವುದು. ಪ್ರೇಮಕ್ಕೂ ಕೆಲವೊಮ್ಮೆ ಫಲಿತಾಂಶ ಸಿಗದೇ, ಒದ್ದಾಡುವ ಸ್ಥಿತಿ. ಆದರೂ ನಿಮ್ಮ ಪ್ರಾಮಾಣಿಕ ವಿಶ್ವಾಸವು ಗೆಲ್ಲುವುದು.

ಮೇಷ:

ಆರ್ಥಿಕ ಲಾಭದಾಯಕ ವಾರ. ಕೆಲಸದಲ್ಲಿ ಬಡ್ತಿ ಸಾಧ್ಯತೆ. ಹಠಾತ್ ಧನಲಾಭವಾಗಲಿದೆ. ಆರೋಗ್ಯ ಸುಧಾರಿಸಲಿದ್ದು, ಕುಟುಂಬದೊಂದಿಗೆ ಸಂತೋಷದ ಸಮಯ ಕಳೆಯುವಿರಿ.

​ವೃಷಭ:

ಅಲ್ಪ ಹೂಡಿಕೆಯಲ್ಲಿಯೂ ಲಾಭ. ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಸಂಗಾತಿಯ ಸಹಕಾರ ಸದಾ ಇರುತ್ತದೆ.

​ಮಿಥುನ:

ತಾಳ್ಮೆಯ ಸಂವಹನದಿಂದ ಈ ವಾರ ಯಶಸ್ಸು. ಸಣ್ಣ ಪ್ರವಾಸದ ಯೋಗವಿದೆ. ಸಂಬಂಧಗಳಲ್ಲಿನ ಕಹಿ ಮರೆತು ಒಂದಾಗುವಿರಿ. ಹೊಸ ವಸ್ತುಗಳ ಖರೀದಿಗೆ ಇದು ಶುಭ ಸಮಯ.

​ಕರ್ಕಾಟಕ:

ಆತ್ಮವಿಶ್ವಾಸ ಹೆಚ್ಚಲಿದೆ. ವೃತ್ತಿಜೀವನದಲ್ಲಿ ಅತ್ಯುತ್ತಮ ಪ್ರಗತಿ. ಕಠಿಣ ಶ್ರಮಕ್ಕೆ ತಕ್ಕ ಗೌರವ ಸಿಗಲಿದೆ. ಆಸ್ತಿ ವಿಚಾರದಲ್ಲಿ ಶುಭ ಸುದ್ದಿ ಕೇಳುವಿರಿ.

​ಸಿಂಹ:

ಈ ವಾರ ನಿಮ್ಮ ನಾಯಕತ್ವಕ್ಕೆ ಮನ್ನಣೆ. ಕುಟುಂಬದ ಗೊಂದಲಗಳು ಪರಿಹಾರವಾಗಲಿವೆ. ಹಿರಿಯರ ಆಶೀರ್ವಾದದಿಂದ ಕೆಲಸಗಳು ಸುಗಮವಾಗಲಿವೆ. ಮನಸ್ಸಿಗೆ ಶಾಂತಿ ದೊರೆಯುವುದು.

​ಕನ್ಯಾ:

ಉದ್ಯೋಗ ಬದಲಾವಣೆಗೆ ಸಕಾಲ. ದೀರ್ಘಕಾಲದ ಕನಸುಗಳು ನನಸಾಗಲಿವೆ. ಮಕ್ಕಳಿಂದ ಸಂತಸದ ಸುದ್ದಿ. ಹಳೆಯ ಸ್ನೇಹಿತರ ಭೇಟಿ ಹೊಸ ಚೈತನ್ಯ ನೀಡಲಿದೆ.

​ತುಲಾ:

ಸಾಮಾಜಿಕ ಗೌರವ ವೃದ್ಧಿ. ಹಳೆಯ ಹೂಡಿಕೆಯಿಂದ ಲಾಭ. ಆರೋಗ್ಯದ ಮೇಲೆ ಸ್ವಲ್ಪ ಗಮನವಿರಲಿ. ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಸಂಭ್ರಮದ ವಾತಾವರಣ.

​ವೃಶ್ಚಿಕ:

ಕೆಲಸದ ಒತ್ತಡವಿರಲಿದೆ. ಆದರೂ ಗುಪ್ತ ಮೂಲಗಳಿಂದ ಧನಲಾಭವಾಗಲಿದೆ. ತಾಳ್ಮೆಯಿಂದ ವರ್ತಿಸಿ. ಶತ್ರುಗಳ ಮೇಲೆ ಜಯ ಸಾಧಿಸುವಿರಿ.

​ಧನುಸ್ಸು:

ಆದಾಯ ಹೆಚ್ಚಳಕ್ಕೆ ಕಸರತ್ತು. ಹೊಸ ಉದ್ಯೋಗ ಸಿಗುವ ಸಾಧ್ಯತೆ. ದೈವಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ದೂರದ ಪ್ರಯಾಣ ಲಾಭದಾಯಕವಾಗಿರಲಿದೆ.

​ಮಕರ:

ನಿರ್ಧಾರಗಳಲ್ಲಿ ಜಾಗರೂಕರಾಗಿರಿ. ತಾಳ್ಮೆ ಅಗತ್ಯ. ವಾರದ ಅಂತ್ಯಕ್ಕೆ ಶುಭ ಫಲಗಳು ಸಿಗಲಿವೆ. ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ.

​ಕುಂಭ:

ಬದಲಾವಣೆಗಳಿಗೆ ಒಗ್ಗಿಕೊಳ್ಳುವುದು ಅನಿವಾರ್ಯ. ಹೊಸ ಹವ್ಯಾಸಗಳಿಂದ ಲಾಭ. ಸಂಗಾತಿಯ ಬೆಂಬಲ ಸಿಗಲಿದೆ. ನಿಮ್ಮ ಕ್ರಿಯಾಶೀಲತೆಗೆ ತಕ್ಕ ಪ್ರತಿಫಲ ದೊರೆಯಲಿದೆ.

​ಮೀನ:

ದೈವಿಕ ರಕ್ಷಣೆ ಇರಲಿದೆ. ಶ್ರಮಕ್ಕೆ ತಕ್ಕ ಫಲ ಲಭ್ಯ. ಆಸ್ತಿ ಖರೀದಿಗೆ ಮುನ್ನಡೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

Published On – 5:39 pm, Sat, 24 January 26

Source link

ಶಿಡ್ಲಘಟ್ಟ ಮಹಿಳಾಧಿಕಾರಿಗೆ ಬೆದರಿಕೆ: ರಾಜೀವ್ ಗೌಡನ ಜಾಮೀನು ಅರ್ಜಿ ವಜಾ – Kannada News | Chikkaballapur court Rejects Rajeev Gowda bail Plea in Shidlaghatta commissioner threats And abuse Case

ಚಿಕ್ಕಬಳ್ಳಾಪುರ, (ಜನವರಿ 24): ಬ್ಯಾನರ್ ವಿಚಾರಕ್ಕೆ ಶಿಡ್ಲಘಟ್ಟ (Shidlaghatta) ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡನ (Rajeev Gowda) ಜಾಮೀನು ಅರ್ಜಿ ವಜಾಗೊಂಡಿದೆ. ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಚಿಕ್ಕಬಳ್ಳಾಪುರ (Chikkaballapur) 2ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ.

ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಬೆ ಆಯುಕ್ತೆ ಅಮೃತಾ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದ. ಅಲ್ಲದೇ ಬೆದರಿಕೆ ಸಹ ಹಾಕಿದ್ದು, ಈ ಸಂಬಂಧ ಅಮೃತಾ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ಜಮೀನಿಗಾಗಿ ರಾಜೀವ್ ಗೌಡ ಚಿಕ್ಕಬಳ್ಳಾಪುರ 2ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಆರೋಪಿ ರಾಜೀವ್ ಗೌಡ ಪರ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದ್ದರೆ, ದೂರುದಾರೆ ಪರ ಪಿಪಿ ಸುಮತಿಶಾಂತಾ ಮೇರಿ ವಾದ ಮಂಡಿಸಿದ್ದರು. ಎರಡು ಕಡೆಯಿಂದ ವಾದ ಪ್ರತಿವಾದ ಆಲಿಸಿದ್ದ ಕೋರ್ಟ್​, ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.

ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Source link

IPL 2026: ಐಪಿಎಲ್​ಗೆ ತಯಾರಿ ಶುರು ಮಾಡಿದ ಧೋನಿ; ವಿಡಿಯೋ ಬಿಡುಗಡೆ – Kannada News | MS Dhoni Begins IPL 2026 Preparations in Ranchi: Is This His Last Season for CSK?

2026 ರ ಐಪಿಎಲ್​ಗೆ (IPL 2026) ಅಭಿಮಾನಿಗಳು ಕೌಂಟ್‌ಡೌನ್ ಪ್ರಾರಂಭಿಸಿದ್ದಾರೆ. ಮಾರ್ಚ್​ ತಿಂಗಳಲ್ಲಿ ಈ ಮಿಲಿಯನ್ ಡಾಲರ್​ ಟೂರ್ನಿಗೆ ಚಾಲನೆ ಸಿಗಲಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ಕೂಡ ತಮ್ಮ ತಯಾರಿಯನ್ನು ಆರಂಭಿಸಲು ಸಜ್ಜಾಗಿವೆ. ಕಳೆದ ಕೆಲವು ಆವೃತ್ತಿಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಈ ಬಾರಿ ಯುವ ಪಡೆಯೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಇದರೊಂದಿಗೆ ಕೊನೆಯ ಐಪಿಎಲ್ ಆಡುತ್ತಿರುವ ಎಂಎಸ್ ಧೋನಿ (MS Dhoni) ಕೂಡ ವರ್ಷದ ಬಳಿಕ ಮೈದಾನಕ್ಕೆ ಮರಳಲು ಸಜ್ಜಾಗಿದ್ದು, ತಯಾರಿಯನ್ನು ಶುರು ಮಾಡಿದ್ದಾರೆ. ವಾಸ್ತವವಾಗಿ ಧೋನಿ ತಮ್ಮ ತವರು ರಾಂಚಿಯಲ್ಲಿ 2026 ರ ಐಪಿಎಲ್ ಆವೃತ್ತಿಗೆ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ.

ಕಳೆದ ಕೆಲವು ಆವೃತ್ತಿಗಳಿಂದ, ಧೋನಿ ಐಪಿಎಲ್‌ಗೆ ಮರಳುವ ಬಗ್ಗೆ ನಿರಂತರ ಊಹಾಪೋಹಗಳು ಮತ್ತು ವದಂತಿಗಳು ಹಬ್ಬಿದ್ದವು. ಕಳೆದ ವರ್ಷ ಧೋನಿ ತಂಡದ ನಾಯಕತ್ವ ವಹಿಸಿಕೊಂಡು ಆವೃತ್ತಿಯನ್ನು ಮುಗಿಸಿದಾಗಲೂ ಇದೇ ಪರಿಸ್ಥಿತಿ ಮುಂದುವರಿದಿತ್ತು. ಆದಾಗ್ಯೂ, ಚೆನ್ನೈ ಸೂಪರ್ ಕಿಂಗ್ಸ್ ಅಧಿಕಾರಿಗಳು ಮುಂದಿನ ಆವೃತ್ತಿಯಲ್ಲಿ ಧೋನಿ ಆಡುತ್ತಾರೆ ಎಂದು ಭರವಸೆ ನೀಡಿದ್ದರು. ಅದಕ್ಕೆ ಪೂರಕವಾಗಿ ಇದೀಗ, ಧೋನಿ ಕೂಡ ನೆಟ್ಸ್‌ನಲ್ಲಿ ಬೆವರು ಹರಿಸಲು ಆರಂಭಿಸಿದ್ದಾರೆ.

ಸಹ ಆಟಗಾರರೊಂದಿಗೆ ಧೋನಿ ಅಭ್ಯಾಸ

ಚೆನ್ನೈ ಸೂಪರ್​ ಕಿಂಗ್ಸ್ ಫ್ರಾಂಚೈಸಿ ಇತ್ತೀಚೆಗೆ ತನ್ನ ಎಕ್ಸ್​ ಖಾತೆಯಲ್ಲಿ ರಾಂಚಿ ಕ್ರೀಡಾಂಗಣದ ನೆಟ್ಸ್‌ನಲ್ಲಿ ತೆಗೆದ ವೀಡಿಯೊವನ್ನು ಪೋಸ್ಟ್ ಮಾಡಿದೆ. ವೀಡಿಯೊದಲ್ಲಿ, ಧೋನಿ ಅಭ್ಯಾಸಕ್ಕೆ ಸಿದ್ಧರಾಗುತ್ತಿರುವುದನ್ನು ಕಾಣಬಹುದು. ಧೋನಿ ತಮ್ಮ ಫ್ರಾಂಚೈಸಿ ಸಿಎಸ್‌ಕೆಯ ಹಳದಿ ಪ್ಯಾಡ್‌ಗಳನ್ನು ಧರಿಸಿರುವುದನ್ನು ಕಾಣಬಹುದು. ಧೋನಿ ಜೊತೆ ಜಾರ್ಖಂಡ್ ಕ್ರಿಕೆಟ್‌ನ ತಮ್ಮ ಜೂನಿಯರ್ ಮತ್ತು ಭಾರತದ ಮಾಜಿ ತಂಡದ ಸಹ ಆಟಗಾರ ಸೌರಭ್ ತಿವಾರಿ ಕೂಡ ಅಭ್ಯಾಸಕ್ಕೆ ಸಿದ್ಧರಾಗುತ್ತಿರುವುದನ್ನು ಕಾಣಬಹುದು. ಸೌರಭ್ ತಿವಾರಿ ಈಗ ಜೆಎಸ್‌ಸಿಎಯಲ್ಲಿ ಅಧಿಕಾರಿಯಾಗಿರುವುದು ಗಮನಿಸಬೇಕಾದ ಸಂಗತಿ.

ಧೋನಿಯ ಕೊನೆಯ ಸೀಸನ್?

ಧೋನಿಯ ಆಟವನ್ನು ಮೈದಾನದಲ್ಲಿ ಕಣ್ತುಂಬಿಕೊಳ್ಳಲು ಕೋಟ್ಯಾಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಮೇಲೆ ಹೇಳಿದಂತೆ ಕಳೆದ ಕೆಲವು ಆವೃತ್ತಿಗಳಿಂದ ಪ್ರತಿ ಆವೃತ್ತಿಯ ಆರಂಭಕ್ಕೂ ಮುನ್ನ ಇದು ಧೋನಿಯ ಕೊನೆಯ ಸೀಸನ್ ಎಂಬ ಸುದ್ದಿಗಳು ಹುಟ್ಟಿಕೊಳ್ಳುತ್ತವೆ. ಆದರೆ ಧೋನಿ ಮಾತ್ರ ನನ್ನಲ್ಲಿ ಇನ್ನು ಆಟ ಉಳಿದಿದೆ ಎಂಬುದನ್ನು ಸಾಭೀತುಪಡಿಸುತ್ತಾ ಬಂದಿದ್ದಾರೆ. ಐಪಿಎಲ್‌ನ 19 ನೇ ಸೀಸನ್‌ ಮಾರ್ಚ್ 26 ರಂದು ಪ್ರಾರಂಭವಾಗಿ ಮೇ 31 ರವರೆಗೆ ನಡೆಯಲಿದೆ. ಆದಾಗ್ಯೂ, ಹೊಸ ಸೀಸನ್‌ನ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:18 pm, Sat, 24 January 26

Source link

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ನಯಾ ಪ್ಲ್ಯಾನ್: ಏನದು? – Kannada News | Bengaluru Traffic Crisis: Police new plan to control traffic jam in city

ಬೆಂಗಳೂರು, ಜನವರಿ 24: ವಿಶ್ವದ ಅತಿ ಹೆಚ್ಚು ಟ್ರಾಫಿಕ್ ಹೊಂದಿರುವ ನಗರಗಳಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ ಎಂಬ ಟಾಮ್‌ಟಾಮ್ ವರದಿ ಬೆನ್ನಲ್ಲೇ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಪೊಲೀಸರು ಹೊಸ ಪ್ಲ್ಯಾನ್​​ಗೆ ಮುಂದಾಗಿದ್ದಾರೆ. ಪ್ರಮುಖವಾಗಿ ಕೆ.ಆರ್. ಪುರಂನಿಂದ ಇಬ್ಬಲೂರುವರೆಗಿನ 17 ಕಿ.ಮೀ ವ್ಯಾಪ್ತಿಯಲ್ಲಿರುವ ಸುಮಾರು 500 ಕಂಪನಿಗಳಲ್ಲಿ ಕೆಲಸ ಮಾಡುವ 12 ಲಕ್ಷ ಉದ್ಯೋಗಿಗಳ ಓಡಾಟವನ್ನು ಸಾರ್ವಜನಿಕ ಸಾರಿಗೆಯತ್ತ ತಿರುಗಿಸುವ ಕುರಿತು ಸಭೆ ನಡೆದಿದೆ. ಅಲ್ಲದೆ, ಪೀಕ್ ಅವರ್‌ನಲ್ಲಿ ಓಡಾಡುವ ಸುಮಾರು 35-40 ಸಾವಿರ ಡೆಲಿವರಿ ವಾಹನಗಳಿಗಾಗಿ ಪರ್ಯಾಯ ಮಾರ್ಗಗಳನ್ನು ಗುರುತಿಸಲು ಗೂಗಲ್ ಜೊತೆ ಚರ್ಚಿಸುವ ಆಲೋಚನೆಯೂ ಇದೆ. ರಸ್ತೆ ಅಗೆತದಂತಹ ಮೂಲಭೂತ ಸಮಸ್ಯೆಗಳ ಮೇಲೂ ಗಮನ ಹರಿಸಲು ಸಂಚಾರ ವಿಭಾಗ ಮುಂದಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಧರ್ಮ ಪ್ರಚಾರ ವಾಹನವಾದ ಪಂಚಾಯ್ತಿ ಸ್ವಚ್ಚತಾ ವಾಹನ: ಕಸ ಸಂಗ್ರಹಿಸುತ್ತ ಸಿಬ್ಬಂದಿಯಿಂದ ಕರಪತ್ರ ಹಂಚಿಕೆ – Kannada News | Gram panchayat garbage vehicle And Staff Turns as Christian religion promote at kolar

ಕೋಲಾರ, (ಜನವರಿ 24): ಗ್ರಾಮ ಪಂಚಾಯಿತಿ  (Gram Panchayat ) ಸ್ವಚ್ಛತಾ ವಾಹನ ಇರುವುದು ವಾರ್ಡ್​ ವಾರ್ಡ್​​ಗಳಲ್ಲಿ ಸಂಚರಿಸಿ ಕಸ ಸಂಗ್ರಹಿಸಲು. ಆದ್ರೆ, ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲ್ಲುಕು ಗುಲ್ಲಹಳ್ಳಿ ಗ್ರಾಮದ ಪಂಚಾಯ್ತಿ ಸ್ವಚ್ಛತಾ ವಾಹನ ಧರ್ಮ ಪ್ರಚಾರ ನಡೆಸಿದ ಎನ್ನುವ ಆರೋಪ ಕೇಳಿಬಂದಿದೆ. ಹೌದು…ಗುಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಸ್ಚಚ್ಛತಾ ವಾಹನದಲ್ಲಿ ಕ್ರಿಶ್ಚಿಯನ್ ಧರ್ಮ ಪ್ರಚಾರದ ಕರಪತ್ರಗಳು ಪತ್ತೆಯಾಗಿದ್ದು, ಸಿಬ್ಬಂದಿಗಳೇ ಕಸ ಸಂಗ್ರಹಿಸುತ್ತಾ ಮನೆ ಮನೆಗೆ ಕರಪತ್ರ ಹಂಚಿಕೆ ಮಾಡಿ ಕ್ರಿಶ್ಚಿಯನ್ ಧರ್ಮ ಪ್ರಚಾರ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಚಚ್ಚತಾ ಸಿಬ್ಬಂದಿ ಶಶಿಕಲಾ, ನಾಗವೇಣಿ, ವೆಂಕಟರತ್ನ ವಿರುದ್ಧ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿದ್ದು, ಇವರು ಮನೆ ಮನೆಯ ಕಸ ಸಂಗ್ರಹಿಸಿ ಜತೆ ಕರಪತ್ರ ಹಂಚಿಕೆ ಮಾಡಿದ್ದಾರೆ ಎಂದು ಜನವರು ವಾಹನವನ್ನು ತಡೆದು ತರಾಟಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Republic Day 2026: ಗಣರಾಜ್ಯೋತ್ಸವದಂದು ಮನೆಯಲ್ಲಿ ಮಾಡಿ ತ್ರಿವರ್ಣ ಬಣ್ಣದ ರುಚಿಕರ ಭಕ್ಷ್ಯ – Kannada News | Republic Day 2026: Make tricolor sandwiches and idli for this Republic Day; here’s the recipe

ತ್ರಿವರ್ಣ ಬಣ್ಣದ ಖಾದ್ಯImage Credit source: Pinterest

77ನೇ ಗಣರಾಜ್ಯೋತ್ಸವವನ್ನು (Republic Day) ಆಚರಿಸಲು ದೇಶಾದ್ಯಂತ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಭಾರತದಲ್ಲಿ ಪ್ರಜಾಪ್ರಭುತ್ವ ಉದಯವಾದ ಐತಿಹಾಸಿಕ ದಿನವಾದ ಜನವರಿ  ಜನವರಿ 26 ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನ. ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುವಂತೆ ಗಣರಾಜ್ಯೋತ್ಸವ ದಿನವನ್ನು ಸಹ ದೇಶಾದ್ಯಂತ ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಹೌದು ಶಾಲಾ ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ, ಮುಖ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಐತಿಹಾಸಿಕ ಪರೇಡ್‌ ಕೂಡ ನಡೆಯುತ್ತದೆ. ಈ ಸಂದರ್ಭದಲ್ಲಿ ನೀವು ಕೂಡ ತ್ರಿವರ್ಣ ಬಣ್ಣದ ವಿವಿಧ ಭಕ್ಷ್ಯಗಳನ್ನು ತಯಾರಿಸಿ ಮನೆ ಮಂದಿಗೆಲ್ಲಾ ಬಡಿಸುವ ಮೂಲಕ ಗಣರಾಜ್ಯೋತ್ಸವ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಬಹುದು. ನೀವು ಮನೆಯಲ್ಲಿಯೇ ತಯಾರಿಸಬಹುದಾದ ತ್ರಿವರ್ಣ ಬಣ್ಣದ ಸುಲಭ ರೆಸಿಪಿ ಇಲ್ಲಿವೆ.

ತ್ರಿವರ್ಣ ಬಣ್ಣದ ರುಚಿಕರ ಭಕ್ಷ್ಯಗಳು:

ತ್ರಿವರ್ಣ ಸ್ಯಾಂಡ್‌ವಿಚ್:

ಇದು ಮಕ್ಕಳು ಮತ್ತು ವಯಸ್ಕರಿಗೆ ಇಷ್ಟವಾದ ತಿಂಡಿಯಾಗಿದ್ದು, ಇದನ್ನು ತಯಾರಿಸುವುದು ತುಂಬಾ ಸುಲಭ. ನಿಮಗೆ ಮೂರು ಬ್ರೆಡ್ ಸ್ಲೈಸ್‌ಗಳು ಬೇಕಾಗುತ್ತವೆ. ಸ್ಯಾಂಡ್‌ವಿಚ್ ತಯಾರಿಸಲು, ಮೊದಲು ಬ್ರೆಡ್ ಹೋಳುಗಳ ಅಂಚುಗಳನ್ನು ಕತ್ತರಿಸಿ ಲಘುವಾಗಿ ಬೆಣ್ಣೆ ಹಚ್ಚಿ. ನಂತರ, ತುರಿದ ಕ್ಯಾರೆಟ್ ಅನ್ನು ಸ್ವಲ್ಪ ಚೀಸ್ ನೊಂದಿಗೆ ಬೆರೆಸಿ ಬ್ರೆಡ್‌ನ ಮೊದಲ ಪದರಕ್ಕೆ ಸಮವಾಗಿ ಹಚ್ಚಿ. ನಂತರ, ಮೇಯನೇಸ್ ಮತ್ತು ಬೇಯಿಸಿದ ಆಲೂಗಡ್ಡೆಯ ಪೇಸ್ಟ್ ತಯಾರಿಸಿ ಬ್ರೆಡ್‌ನ ಎರಡನೇ ಪದರಕ್ಕೆ ಹಚ್ಚಿ. ಈಗ, ಮೂರನೇ ಪದರದ ಬ್ರೆಡ್ ಮೇಲೆ ಪಾಲಕ್ ಪ್ಯೂರಿ ಅಥವಾ ಕೊತ್ತಂಬರಿ ಚಟ್ನಿಯನ್ನು ಹರಡಿ.  ಸ್ಯಾಂಡ್‌ವಿಚ್‌ನ ಎಲ್ಲಾ ಮೂರು ಲೇಯರ್‌ಗಳು ಸಿದ್ಧವಾದ ನಂತರ, ಈ ಸ್ಯಾಂಡ್‌ವಿಚ್‌ ಅನ್ನು ಒಂದರ ಮೇಲೊಂದು ತ್ರಿವರ್ಣ ಅನುಕ್ರಮದಲ್ಲಿ ಜೋಡಿಸಿ. ಮನೆ ಮಂದಿಗೆ ಬಡಿಸಿ.

ತ್ರಿವರ್ಣ ಬಣ್ಣದ ಇಡ್ಲಿ:

ತ್ರಿವರ್ಣ ಇಡ್ಲಿ ಉತ್ತಮ ಮತ್ತು ಆರೋಗ್ಯಕರ ಉಪಹಾರ ಆಯ್ಕೆಯಾಗಿದೆ. ಮೊದಲಿಗೆ ಇಡ್ಲಿ ಹಿಟ್ಟನ್ನು ತಯಾರಿಸಿ ಮೂರು ಭಾಗಗಳಾಗಿ ವಿಂಗಡಿಸಿ. ಒಂದು ಭಾಗಕ್ಕೆ ಪಾಲಕ್ ಪ್ಯೂರಿ (ಹಸಿರು) ಸೇರಿಸಿ. ಎರಡನೇ ಭಾಗವನ್ನು ಸಾದಾ (ಬಿಳಿ) ಬಿಡಿ. ಮೂರನೇ ಭಾಗಕ್ಕೆ ತುರಿದ ಕ್ಯಾರೆಟ್ ಅಥವಾ ಕ್ಯಾರೆಟ್‌ ಪ್ಯೂರಿ ಸೇರಿಸಿ. ನಂತರ ಇದನ್ನು ತ್ರಿವರ್ಣ ಪದರದಲ್ಲಿ ಹಾಕಿ ಸ್ಟೀಮರ್‌ನಲ್ಲಿ ಬೇಯಿಸಬಹುದು, ಅಥವಾ ಮೂರು ಬಣ್ಣದ ಇಡ್ಲಿಯನ್ನು ಪ್ರತ್ಯೇಕವಾಗಿಯೂ ಬೇಯಿಸಬಹುದು. ಇದೇ ವಿಧಾನದಲ್ಲಿ ತ್ರಿವರ್ಣ ದೋಸೆಯನ್ನೂ ತಯಾರಿಸಬಹುದು.

ತ್ರಿವರ್ಣ ಪಲಾವ್:

ಗಣರಾಜ್ಯೋತ್ಸವ ದಿನದಂದು ತ್ರಿವರ್ಣ ಬಣ್ಣದ ಪಲಾವ್‌ ತಯಾರಿಸಬಹುದು. ಅದಕ್ಕಾಗಿ ಅನ್ನವನ್ನು ಮೂರು ಪ್ರತ್ಯೇಕ ಪಾತ್ರೆಗಳಲ್ಲಿ ಬೇಯಿಸಿ. ಒಂದು ಭಾಗಕ್ಕೆ ಕೇಸರಿ ಪ್ಯೂರಿ, ಇನ್ನೊಂದು ಭಾಗವನ್ನು ಪಾಲಕ್‌ ಪ್ಯೂರಿಯೊಂದಿಗೆ ಬೇಯಿಸಿ, ಇನ್ನೊಂದು ಭಾಗ ಬಿಳಿಯಾಗಿಯೇ ಇರಲಿ. ಅನ್ನ ಬೆಂದ ನಂತರ ಒಂದರ ಮೇಲೊಂದರೆಂತೆ ಪದರದ ರೀತಿಯಲ್ಲಿ ಹರಡಿದರೆ ತ್ರಿವರ್ಣ ಬಣ್ಣದ ಪಲಾವ್‌ ಸಿದ್ಧ.

ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ 830 ರೂ.ನಲ್ಲಿ 7 ಕಡೆ ಟ್ರಿಪ್​​​ ಹೋಗಬಹುದು!: KSTDC ವಿಶೇಷ ಪ್ಯಾಕೇಜ್

ತ್ರಿವರ್ಣ ಬರ್ಫಿ:

ಯಾವುದೇ ಭಾರತೀಯ ಹಬ್ಬವು ಸಿಹಿತಿಂಡಿಗಳಿಲ್ಲದೆ ಅಪೂರ್ಣ. ಹಾಗಾಗಿ ಗಣರಾಜ್ಯೋತ್ಸವ ದಿನದಂದು ನೀವು ತೆಂಗಿನಕಾಯಿ ಬರ್ಫಿಯನ್ನು ಮಾಡಬಹುದು. ತ್ರಿವರ್ಣ ಬರ್ಫಿ ತಯಾರಿಸಲು, ದಪ್ಪ ತಳವಿರುವ ಬಾಣಲೆಯಲ್ಲಿ ಹಾಲನ್ನು ಕುದಿಸಿ. ಹಾಲು ಕುದಿಯಲು ಪ್ರಾರಂಭಿಸಿದ ನಂತರ, ಖೋಯಾ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ, ಬೇಯಿಸಿ ನಂತರ ಸಕ್ಕರೆ ಸೇರಿಸಿ ಮಿಶ್ರಣ ದಪ್ಪವಾಗುವವರೆಗೆ ಬೇಯಿಸಿ. ತುಪ್ಪ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಮಿಶ್ರಣವು ಸಂಪೂರ್ಣವಾಗಿ ದಪ್ಪ ಹದಕ್ಕೆ ಬಂದ ನಂತರ ಗ್ಯಾಸ್‌ ಆಫ್‌ ಮಾಡಿ ಮೂರು ಭಾಗಗಳಾಗಿ ವಿಂಗಡಿಸಿ, ಮೊದಲ ಭಾಗಕ್ಕೆ ಕೇಸರಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಎರಡನೇ ಭಾಗವನ್ನು ಹಾಗೆಯೇ ಬಿಡಿ. ಮೂರನೇ ಭಾಗಕ್ಕೆ ರುಬ್ಬಿದ ಪಿಸ್ತಾವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಅಚ್ಚು ಅಥವಾ ತಟ್ಟೆಯ ಮೇಲೆ ಈ ಮೂರು ಬಣ್ಣದ ಮಿಶ್ರಣವನ್ನು ಹರಡಿ, ಲಘುವಾಗಿ ಒತ್ತಿದರೆ ಬರ್ಫಿ ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅನ್ಯಜಾತಿ ಯುವತಿಯನ್ನ ಪ್ರೀತಿಸಿ ಮದ್ವೆ: ಯುವಕನಿಗೆ ಜೀವ ಬೆದರಿಕೆ, ಪೊಲೀಸ್ ಮೊರೆ ಹೋದ ಜೋಡಿ – Kannada News | Kalaburagi Inter Caste Marriage: Newlyweds Face Death Threats, Seek Police Protection

ಕಲಬುರಗಿ, ಜನವರಿ 24: ಅನ್ಯಜಾತಿಯವನನ್ನು ಪ್ರೀತಿಸಿ (love) ಮದುವೆಯಾಗಿದ್ದಕ್ಕೆ ಯುವತಿ ಮನೆಯರಿಂದ ಯುವಕನಿಗೆ ಜೀವ ಬೆದರಿಕೆ (Death Threat) ಹಾಲಾಗಿದ್ದು, ಇದೀಗ ನವಜೋಡಿ ಪೊಲೀಸರ ಮೊರೆಹೋಗಿದ್ದಾರೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಭು(23) ಹಾಗೂ ಸಂಗೀತ(19) ಪ್ರೀತಿಸಿ ಮದುವೆಯಾದ ಜೋಡಿ. ಯುವತಿ ಕುಟುಂಬಕ್ಕೆ ಹೆದರಿ ಸದ್ಯ ದಂಪತಿ ಊರು ಬಿಟ್ಟಿದ್ದು, ನಮಗೆ ರಕ್ಷಣೆ ನೀಡಿ ಎಂದು ಎಸ್​ಪಿಗೆ ಮನವಿ‌ ಮಾಡಿದ್ದಾರೆ.

ನಡೆದದ್ದೇನು?

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ಪ್ರಭು ಮತ್ತು ಸಂಗೀತ ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಒಂದು ವಾರದ ಹಿಂದಷ್ಟೇ ರಿಜಿಸ್ಟರ್ ಮದುವೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್​! ನವವಿವಾಹಿತೆ ಗಂಭೀರ ಆರೋಪ

ಪ್ರೀತಿ ವಿಚಾರ ಯುವತಿ ಮನೆಯವರಿಗೆ ತಿಳಿದು ಯುವಕನಿಗೆ ಬೆದರಿಕೆ ಹಾಕಿದ್ದಾರೆ. ಹಲವು ಬಾರಿ ಹಲ್ಲೆಗೆ ಯತ್ನಿಸಿರುವುದಾಗಿಯೂ ಆರೋಪ ಕೇಳಿಬಂದಿದೆ. ಯುವತಿ ಕುಟುಂಬಕ್ಕೆ ಹೆದರಿ ನವ ದಂಪತಿ ಸದ್ಯ ಊರು ಬಿಟ್ಟಿದ್ದು, ರಕ್ಷಣೆ ಕೋರಿ ಪೊಲೀಸ್​​ ಮೆಟ್ಟಿಲೇರಿದ್ದಾರೆ.

ಪ್ರಿಯಕರನಿಂದಲೇ ಪ್ರಿಯತಮೆಯ ಹತ್ಯೆ

ಕೋಲಾರ ಹೊರವಲಯದ ಬಂಗಾರಪೇಟೆ ವೃತ್ತದಲ್ಲಿ ಚಿರಂಜೀವಿ ಎಂಬಾತ ತನ್ನ ಪ್ರಿಯತಮೆ ಸುಜಾತ ಎಂಬಾಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ಇತ್ತೀಚೆಗೆ ನಡೆದಿದೆ. ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಸ್ಟಾಫ್​ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಸುಜಾತ ಕೆಲಸಕ್ಕೆ ಹೋಗಲು ತಮ್ಮೂರು ಬಂಗಾರಪೇಟೆ ತಾಲ್ಲೂಕು ಕತ್ತಹಳ್ಳಿ ಗ್ರಾಮದಿಂದ ಕೋಲಾರಕ್ಕೆ ಬಂದಿದ್ದರು. ಈ ವೇಳೆ ತನ್ನ ಜೊತೆಗೆಯಲ್ಲೇ ಬಂದಿದ್ದ ಬಂಗಾರಪೇಟೆ ತಾಲೂಕಿನ ಯಳಬುರ್ಗಿ ಗ್ರಾಮದ ಚಿರಂಜೀವಿ ಕೋಲಾರದ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಏಕಾಏಕಿ ತನ್ನ ಕೀಚೈನಿನಲ್ಲಿದ್ದ ಚಾಕುವೊಂದನ್ನು ಬಳಸಿ ಸುಜಾತ ಕತ್ತು ಕೊಯ್ದಿದ್ದ, ನೋಡನೋಡುತ್ತಿದ್ದಂತೆ ಸುಜಾತ ಸಾವನ್ನಪ್ಪಿದ್ದರು.

ಇದನ್ನೂ ಓದಿ: Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!

ಇದನ್ನು ನೋಡುತ್ತಿದ್ದ ಸ್ಥಳೀಯರು ಕೊಲೆ ಮಾಡಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರಂಜೀವಿಯನ್ನು ಹಿಡಿದು ತಳಿಸಿದ್ದಾರೆ. ನಂತರ ಕೊಲಾರ ನಗರ ಠಾಣಾ ಪೊಲೀಸರಿಗೆ ಫೋನ್​ ಮಾಡಿ ತಿಳಿಸಿ ಆರೋಪಿಯನ್ನು ಅವರಿಗೆ ಒಪ್ಪಿಸಿದ್ದಾರೆ. ಇನ್ನು ಸ್ಥಳಕ್ಕೆ ಬಂದಿದ್ದ ಕೋಲಾರ ನಗರ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಎಸ್​​ಪಿ ಕನ್ನಿಕಾಸುಕ್ರಿವಾಲ್ ಹಾಗೂ ಸೋಕೋ ಟೀಂ ಪರಿಶೀಲನೆ ನಡೆಸಿ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದೇಶದ ಇತಿಹಾಸದಲ್ಲೇ ದೊಡ್ಡ ಕಾರ್ಯಚರಣೆ: 5 ಮಹಿಳೆಯರು ಸೇರಿಸಿ 17 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ – Kannada News | Operation Meghburu Success: 17 Naxals Eliminated by Forces in Bastar

ಛತ್ತೀಸ್‌ಗಢ, ಜ.24: ನಾರಾಯಣಪುರ-ದಂತೇವಾಡ ಗಡಿಭಾಗದ ಅಬುಜ್‌ಮಡ್ (Abujhmad) ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಬಹುದೊಡ್ಡ ಕಾರ್ಯಚರಣೆಯನ್ನು ಮಾಡಿದೆ. ಇದು ‘ಆಪರೇಷನ್ ಮೇಘಬೂರು’ (Operation Meghburu)ನ ಭಾಗವಾಗಿದ್ದು, ಇದೀಗ ಈ ಮೂಲಕ ನಕ್ಸಲ್ ನಿಗ್ರಹ ಇತಿಹಾಸದಲ್ಲೇ ಅತ್ಯಂತ ದೊಡ್ಡ ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಜಂಟಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಒಟ್ಟು 17 ನಕ್ಸಲರನ್ನು ಹೊಡೆದುರುಳಿಸಿವೆ. ಇದರಲ್ಲಿ 5 ಮಂದಿ ಮಹಿಳಾ ನಕ್ಸಲರು ಸೇರಿದ್ದಾರೆ ಎಂದು ಹೇಳಲಾಗಿದೆ. ಡಿಆರ್‌ಜಿ (DRG), ಎಸ್‌ಟಿಎಫ್ (STF) ಮತ್ತು ಸಿಆರ್‌ಪಿಎಫ್ (CRPF) ನ ಕೋಬ್ರಾ ಘಟಕದ ಸುಮಾರು 1,500 ಕ್ಕೂ ಹೆಚ್ಚು ಜವಾನರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ದಟ್ಟವಾದ ಅರಣ್ಯ ಮತ್ತು ಬೆಟ್ಟಗುಡ್ಡಗಳಿಂದ ಕೂಡಿದ ಅಬುಜ್‌ಮಡ್ ಪ್ರದೇಶ. ಇದು ನಕ್ಸಲರ ಪ್ರಮುಖ ತರಬೇತಿ ಕೇಂದ್ರ ಮತ್ತು ಅಡಗುತಾಣವಾಗಿದೆ.

ಈ ಎನ್​​​ಕೌಂಟರ್​​ ನಡೆದ ಸ್ಥಳದಲ್ಲಿ ಎಕೆ-47 ರೈಫಲ್‌ಗಳು, ಎಸ್‌ಎಲ್‌ಆರ್ (SLR) ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ನಕ್ಸಲ್ ಬರಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತಪಟ್ಟ ನಕ್ಸಲರಲ್ಲಿ ಹಲವರು ಲಕ್ಷಾಂತರ ರೂಪಾಯಿ ಬಹುಮಾನ ಹೊಂದಿದ್ದ ಕುಖ್ಯಾತ ಕಮಾಂಡರ್‌ಗಳಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ದಟ್ಟ ಅರಣ್ಯದಲ್ಲಿ ನಕ್ಸಲರ ಚಲನವಲನ ಪತ್ತೆಹಚ್ಚಲು ಡ್ರೋನ್ ಮತ್ತು ಸುಧಾರಿತ ಸ್ಯಾಟಲೈಟ್ ಮ್ಯಾಪಿಂಗ್ ತಂತ್ರಜ್ಞಾನವನ್ನು ಬಳಸಲಾಗಿದೆ. ಈ ಕಾರ್ಯಾಚರಣೆಯು ಛತ್ತೀಸ್‌ಗಢದ ಬಸ್ತಾರ್ ವಲಯದಲ್ಲಿ ನಕ್ಸಲರ ನೆಟ್‌ವರ್ಕ್‌ಗೆ ದೊಡ್ಡ ಹೊಡೆತ ನೀಡಿದೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಸರಣಿ ಕಾರ್ಯಾಚರಣೆಗಳಲ್ಲಿ ಇದು ಅತಿ ಹೆಚ್ಚು ನಕ್ಸಲರು ಮೃತಪಟ್ಟ ಘಟನೆಯಾಗಿದೆ. ಸರ್ಕಾರವು “ನಕ್ಸಲ್ ಮುಕ್ತ ಭಾರತ” ಗುರಿಯೊಂದಿಗೆ ಇಂತಹ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿದ್ದು, ನಕ್ಸಲರಿಗೆ ಶರಣಾಗಲು ಅವಕಾಶವನ್ನು ಕೂಡ ನೀಡಿದೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಕಾಂಗ್ರೆಸ್​​​​​ ನಿಯಮವನ್ನು ಉಲ್ಲಂಘಿಸಿಲ್ಲ: ಈ ವಿಚಾರದಲ್ಲಿ ಕೇಂದ್ರವನ್ನು ಬೆಂಬಲಿಸುವೆ ಎಂದ ಶಶಿ ತರೂರ್

ಮೃತಪಟ್ಟ ಪ್ರಮುಖ ನಕ್ಸಲ್ ಕಮಾಂಡರ್‌ಗಳು:

ರಾಮ್‌ಲಾಲ್ (DVC ಸದಸ್ಯ): ಇವನು ದಂತೇವಾಡ-ನಾರಾಯಣಪುರ ಡಿವಿಜನಲ್ ಕಮಿಟಿಯ ಪ್ರಭಾವಿ ನಾಯಕನಾಗಿದ್ದು, ಇವನ ಹತ್ಯೆಗೆ 8 ಲಕ್ಷ ರೂ. ಬಹುಮಾನವಿತ್ತು. ಹಲವು ಐಇಡಿ (IED) ಸ್ಫೋಟಗಳ ಮಾಸ್ಟರ್ ಮೈಂಡ್

ಸುಮತಿ (ಮಹಿಳಾ ಕಮಾಂಡರ್): ಐವರು ಮೃತ ಮಹಿಳೆಯರಲ್ಲಿ ಈಕೆ ಪ್ರಮುಖಳು. ಈಕೆ ನಕ್ಸಲರ ಮಹಿಳಾ ಘಟಕದ ತರಬೇತಿ ವಿಭಾಗವನ್ನು ನೋಡಿಕೊಳ್ಳುತ್ತಿದ್ದಳು. ಈಕೆಯ ಹತ್ಯೆಗೆ 5 ಲಕ್ಷ ರೂ. ಬಹುಮಾನವಿತ್ತು.

ಸುಮತಿ (ಮಹಿಳಾ ಕಮಾಂಡರ್): ಐವರು ಮೃತ ಮಹಿಳೆಯರಲ್ಲಿ ಈಕೆ ಪ್ರಮುಖಳು. ಈಕೆ ನಕ್ಸಲರ ಮಹಿಳಾ ಘಟಕದ ತರಬೇತಿ ವಿಭಾಗವನ್ನು ನೋಡಿಕೊಳ್ಳುತ್ತಿದ್ದಳು. ಈಕೆಯ ಮೇಲೆ 5 ಲಕ್ಷ ರೂ. ಬಹುಮಾನವಿತ್ತು.

ಸುರೇಶ್ ಬೋಗಾಮಿ: ಬಸ್ತಾರ್ ವಲಯದ ಪ್ರಮುಖ ಸದಸ್ಯ. ಭದ್ರತಾ ಪಡೆಗಳ ಮೇಲಿನ ಅನಿರೀಕ್ಷಿತ ದಾಳಿಗಳನ್ನು ಸಂಘಟಿಸುವುದರಲ್ಲಿ ಇವನು ನಿಸ್ಸೀಮನಾಗಿದ್ದನು.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಜವಾನರ ಹೆಲ್ಮೆಟ್ ಕ್ಯಾಮೆರಾಗಳಲ್ಲಿ (Bodycam) ಸೆರೆಯಾದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಇದರಲ್ಲಿ ಭೀಕರ ಗುಂಡಿನ ಚಕಮಕಿ ಮತ್ತು ಜವಾನರು ಶತ್ರುಗಳನ್ನು ಸುತ್ತುವರೆಯುವ ತಂತ್ರಗಾರಿಕೆಯನ್ನು ಕಾಣಬಹುದು.ನಕ್ಸಲರು ಅಡಗಿದ್ದ ಬಂಕರ್‌ಗಳನ್ನು ಡ್ರೋನ್ ಮೂಲಕ ಪತ್ತೆಹಚ್ಚಿ ಲೇಸರ್ ಸಹಾಯದಿಂದ ದಾಳಿ ಮಾಡಿರುವುದನ್ನು ವಿಡಿಯೋ ತುಣುಕುಗಳು ತೋರಿಸುತ್ತವೆ. ಕಾರ್ಯಾಚರಣೆ ಮುಗಿಸಿ ಹಿಂತಿರುಗಿದ ಜವಾನರನ್ನು ಸ್ಥಳೀಯ ಗ್ರಾಮಸ್ಥರು ಹೂಮಳೆ ಸುರಿಸುವ ಮೂಲಕ ಬರಮಾಡಿಕೊಂಡ ದೃಶ್ಯಗಳು ಇಂಟರ್ನೆಟ್‌ನಲ್ಲಿ ವೈರಲ್ ಆಗಿವೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Asia Cup 2026: ಮುಂಬರುವ ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ – Kannada News | BCCI Announces India A Women’s Squad for 2026 Asia Cup Rising Stars Tournament

ಫೆಬ್ರವರಿ 13 ರಿಂದ ಆರಂಭವಾಗಲಿರುವ2026 ರ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಮೆಂಟ್​ಗಾಗಿ ಬಿಸಿಸಿಐ ಭಾರತ ಎ ತಂಡವನ್ನು ಪ್ರಕಟಿಸಿದೆ. ಈ ಟೂರ್ನಮೆಂಟ್​ಗಾಗಿ ಆಯ್ಕೆ ಸಮಿತಿಯು 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭಾರತೀಯ ಸೀನಿಯರ್ ತಂಡದ ಆಟಗಾರರ್ತಿಯರಿಗೂ ಆಯ್ಕೆ ಸಮಿತಿ ಅವಕಾಶ ನೀಡಿದೆ. ಮುಂಬೈಕರ್ ರಾಧಾ ಯಾದವ್ ಈ ಟೂರ್ನಮೆಂಟ್​ನಲ್ಲಿ ಭಾರತ ಎ ತಂಡವನ್ನು ಮುನ್ನಡೆಸಲಿದ್ದಾರೆ. ಇವರಲ್ಲದೆ, ತೇಜಲ್ ಹಸನ್ಬಿಸ್, ಮಿನ್ನು ಮಣಿ ಮತ್ತು ಸೈಮಾ ಠಾಕೋರ್ ಅವರಂತಹ ಸೀನಿಯರ್ ತಂಡದ ಆಟಗಾರರ್ತಿಯರು ಕೂಡ ಈ ತಂಡದಲ್ಲಿದ್ದಾರೆ.

ಏಷ್ಯಾಕಪ್ ಬಗ್ಗೆ ಪ್ರಮುಖ ಮಾಹಿತಿ

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಮೆಂಟ್‌ನಲ್ಲಿ ಒಟ್ಟು 8 ತಂಡಗಳು ಸ್ಪರ್ಧಿಸಲಿವೆ. ಈ ಟೂರ್ನಮೆಂಟ್‌ ಫೆಬ್ರವರಿ 13 ರಿಂದ 22 ರವರೆಗೆ ನಡೆಯಲಿದೆ. ಈ 8 ತಂಡಗಳನ್ನು ತಲಾ 4 ರ ಪ್ರಕಾರ ಎ ಮತ್ತು ಬಿ ಎಂಬ 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಟೂರ್ನಮೆಂಟ್‌ನಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಅಲ್ಲದೆ, ಪ್ರತಿ ತಂಡಕ್ಕೆ ಗುಂಪು ಹಂತದಲ್ಲಿ 3 ಪಂದ್ಯಗಳನ್ನು ಆಡುವ ಅವಕಾಶ ಸಿಗುತ್ತದೆ. ಭಾರತ ಎ ತಂಡವನ್ನು ಗುಂಪು ಎ ನಲ್ಲಿ ಸೇರಿಸಲಾಗಿದೆ. ಭಾರತದ ಜೊತೆಗೆ, ಈ ಗುಂಪಿನಲ್ಲಿ ಪಾಕಿಸ್ತಾನ ಮಹಿಳಾ ಎ, ಯುಎಇ ಮತ್ತು ನೇಪಾಳ ಮಹಿಳಾ ತಂಡಗಳು ಸೇರಿವೆ.

ಭಾರತ ಎ ಮಹಿಳಾ ತಂಡದ ವೇಳಾಪಟ್ಟಿ

  • ಫೆಬ್ರವರಿ 13, ಯುಎಇ vs ಭಾರತ
  • ಫೆಬ್ರವರಿ 15, ಪಾಕಿಸ್ತಾನ vs ಭಾರತ
  • ಫೆಬ್ರವರಿ 17, ನೇಪಾಳ vs ಭಾರತ

ಭಾರತ ಎ ತಂಡ: ಹುಮೈರಾ ಕಾಜಿ, ವೃಂದಾ ದಿನೇಶ್, ಅನುಷ್ಕಾ ಶರ್ಮಾ, ದೀಯಾ ಯಾದವ್*, ತೇಜಲ್ ಹಸಬ್ನಿಸ್, ನಂದನಿ ಕಶ್ಯಪ್ [ವಿಕೆಟ್ ಕೀಪರ್], ಮಮತಾ ಎಂ [ವಿಕೆಟ್ ಕೀಪರ್], ರಾಧಾ ಯಾದವ್ [ನಾಯಕಿ], ಸೋನಿಯಾ ಮೆಂಧಿಯಾ, ಮಿನ್ನು ಮಣಿ, ತನುಜಾ ಕನ್ವೆರ್, ಪ್ರೇಮಾ ರಾವತ್, ಸೈಮಾ ಠಾಕೋರ್, ಜಿಂತಾಮಣಿ ಕಲಿತಾ, ನಂದನಿ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version