Headlines

Siddaramaiah Political Life: ಪಕ್ಷೇತರ ಶಾಸಕನಿಂದ ಎರಡು ಬಾರಿ ಸಿಎಂ ಹುದ್ದೆಯವರೆಗೆ; ಸಿದ್ದರಾಮಯ್ಯನವರ ಸುದೀರ್ಘ ರಾಜಕಾರಣದ ಹಾದಿ ಇಲ್ಲಿದೆ

ಬೆಂಗಳೂರು, ಮೇ 28: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಎರಡನೇ ಅವಧಿಗೆ ಸಿಎಂ ಆಗಿದ್ದ ಸಿದದ್ದರಾಮಯ್ಯ ಒಟ್ಟು 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿರುವ ದಾಖಲೆ ಬರೆದಿದ್ದಾರೆ. 1983ರಲ್ಲಿ ವಿಧಾನಸಭೆಗೆ ಪ್ರವೇಶಿಸಿದ್ದ ಇವರು, ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಸಮಾಜವಾದಿ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯ ‘ಅಹಿಂದ’ ವರ್ಗಗಳ ಪ್ರಮುಖ ನಾಯಕರಾಗಿ ಗುರುತಿಸಿಕೊಂಡವರು. ಸಿದ್ದರಾಮಯ್ಯ ರಾಜಕೀಯದ ಹಾದಿ ಮೈಸೂರಿನ ಸಿದ್ದರಾಮನಹುಂಡಿಯವರಾದ ಸಿದ್ದರಾಮಯ್ಯನವರು, 1983ರಲ್ಲಿ ಮೊದಲ ಬಾರಿಗೆ…

Read More

RR vs GT: ರಾಜಸ್ಥಾನ್- ಗುಜರಾತ್ ನಡುವೆ ಕ್ವಾಲಿಫೈಯರ್ 2 ಫೈಟ್; ಪಂದ್ಯ ಎಷ್ಟು ಗಂಟೆಗೆ ಆರಂಭ?

ರಾಜಸ್ಥಾನ ರಾಯಲ್ಸ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ 2026 ರ ಐಪಿಎಲ್‌ನ ಕ್ವಾಲಿಫೈಯರ್ 2 (IPL Qualifier 2) ಪ್ರವೇಶಿಸುವ ಮೂಲಕ ಟ್ರೋಫಿಯತ್ತ ಹೆಜ್ಜೆ ಇಟ್ಟಿದೆ. ವೈಭವ್ ಸೂರ್ಯವಂಶಿ ಮತ್ತು ಧ್ರುವ್ ಜುರೆಲ್ ಅವರ ಸ್ಫೋಟಕ ಇನ್ನಿಂಗ್ಸ್‌ನ ಬಲದಿಂದ ರಾಜಸ್ಥಾನ ರಾಯಲ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್​ಗೆ 244 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಹೈದರಾಬಾದ್ 20 ಓವರ್‌ಗಳನ್ನು ಸಹ ಆಡಲು ಸಾಧ್ಯವಾಗದೆ 19.2 ಓವರ್‌ಗಳಲ್ಲಿ 196 ರನ್‌ಗಳಿಗೆ…

Read More

‘ಕಬ್ಜ 2’ ಅಲ್ಲ, ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಲಿದ್ದಾರೆ ಆರ್​. ಚಂದ್ರು

ಶಿವರಾಜ್​ಕುಮಾರ್ ಅವರು (Shivarajkumar) ಕನ್ನಡದ ಬ್ಯುಸಿ ಹೀರೋಗಳಲ್ಲಿ ಒಬ್ಬರು. ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬ್ಯುಸಿ ಆಗಿದ್ದಾರೆ. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಇದಕ್ಕೆ ಈಗ ಹೊಸ ಸೇರ್ಪಡೆಯೊಂದು ಆಗುತ್ತಿದೆ. ಆರ್​. ಚಂದ್ರು ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ವಿಷಯ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶಿವರಾಜ್​​ಕುಮಾರ್ ಹಾಗೂ ಆರ್​​. ಚಂದ್ರು ಬಾಂಧವ್ಯ ಹಳೆಯದು. 2010ರಲ್ಲಿ ರಿಲೀಸ್ ಆದ ಶಿವರಾಜ್​​ಕುಮಾರ್ ನಟನೆಯ ‘ಮೈಲಾರಿ’ ಚಿತ್ರವನ್ನು ಚಂದ್ರು ಅವರೇ ನಿರ್ದೇಶನ ಮಾಡಿದ್ದರು….

Read More

Siddaramaiah Resigns: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು, ಮೇ 28: ಹೈಕಮಾಂಡ್​ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ (Chief Minister) ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ಆ ಮೂಲಕ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ವರ್ಷಗಳಿಂದಲೂ ಊಹಾಪೋಹಗಳಿಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ವಿಚಾರಕ್ಕೆ ಅಂತಿಮ ತೆರೆ ಬಿದ್ದಿದೆ. ಮುಖ್ಯಾಂಶಗಳು ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ…

Read More

ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು, (ಮೇ 28): ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನಿಡುವುದಾಗಿ ಘೋಷಿಸಿದ್ದು, ಮುಂದಿನ ಮುಖ್ಯಮುಂತ್ರಿ ಡಿಕೆ ಶಿವಕುಮಾರ್ (DK Shivakumar) ಆಗಲಿದ್ದಾರೆ. ಆದ್ರೆ, ಸಿದ್ದರಾಮಯ್ಯನವರ ಪದತ್ಯಾಗಕ್ಕೂ ಮುನ್ನವೇ ಅವರ ಆಪ್ತ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ. ಹೌದು… ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ  ಅವರನ್ನ ವರ್ಗಾವಣೆ ಮಾಡಲಾಗಿದೆ. ಮುಖ್ಯಾಂಶಗಳು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಪದತ್ಯಾಗಕ್ಕೂ…

Read More

ದೇಶದಲ್ಲೇ ಮೊದಲು: AI ಬಳಸಿ ಅನುವಾದಗೊಂಡ ಕನ್ನಡ ಪುಸ್ತಕ ಮೈಸೂರಿನಲ್ಲಿ ಬಿಡುಗಡೆ!

ಬೆಂಗಳೂರು, ಮೇ 28: ಸಂಸ್ಕೃತಿ ಮತ್ತು ತಂತ್ರಜ್ಞಾನದ ಅಪೂರ್ವ ಸಮ್ಮಿಲನಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಾಕ್ಷಿಯಾಗುತ್ತಿದ್ದು, ದೇಶದಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಸಹಾಯದೊಂದಿಗೆ ಸಂಪೂರ್ಣವಾಗಿ ಕನ್ನಡಕ್ಕೆ ಅನುವಾದಗೊಂಡಿರುವ ಇತಿಹಾಸ ಆಧಾರಿತ ಕಾದಂಬರಿ (Non-fiction Book) ಬಿಡುಗಡೆಗೆ ಸಜ್ಜಾಗಿದೆ. ಮುಖ್ಯಾಂಶಗಳು ದೇಶದಲ್ಲೇ ಮೊದಲ ಬಾರಿಗೆ ಎಐ ತಂತ್ರಜ್ಞಾನ ಬಳಸಿ ಕನ್ನಡ ಪುಸ್ತಕ ಅನುವಾದಿಸಲಾಗಿದೆ. ಮೈಸೂರಿನಲ್ಲಿ ಇತಿಹಾಸಕಾರ ವಿಕ್ರಮ್ ಸಂಪತ್ ಬರೆದ ಗೌಹರ್ ಜಾನ್ ಕೃತಿ ಬಿಡುಗಡೆಯಾಗಲಿದೆ. ಸಂಸದ ಯದುವೀರ್ ಒಡೆಯರ್ ಈ ಐತಿಹಾಸಿಕ ಕೃತಿಯನ್ನು…

Read More

ವಿಜಯ್ ಕೊನೆಯ ಸಿನಿಮಾ ಆಗಬೇಕಿದ್ದು ‘ಜನ ನಾಯಗನ್’ ಅಲ್ಲ, ಮತ್ಯಾವುದು?

ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಚುನಾವಣೆಗೆ ಮುಂಚೆ ಅವರ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆ ಆಗಬೇಕಿತ್ತು, ಆದರೆ ಇನ್ನೂ ಅದೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್’ ಸಿನಿಮಾದ ಚಿತ್ರೀಕರಣಕ್ಕೆ ಮುಂಚೆಯೇ ವಿಜಯ್ ಅವರು, ‘ಇದು ನನ್ನ ಕೊನೆಯ ಸಿನಿಮಾ’ ಎಂದು ಘೋಷಿಸಿದ್ದರು. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ತಮಿಳು ಚಿತ್ರರಂಗದ ನಿರ್ದೇಶಕ ಅಸಲಿಗೆ ‘ಜನ ನಾಯಗನ್’ ಅಲ್ಲ ವಿಜಯ್ ಅವರ ಕೊನೆಯ ಸಿನಿಮಾ ಆಗಬೇಕಿದ್ದಿದ್ದು ‘ಕರುಪ್ಪು’ ಎಂದಿದ್ದಾರೆ. ಸೂರ್ಯ…

Read More

ಮಾರುಕಟ್ಟೆ ಕುಸಿದಾಗ ಹೆದರಿಬಿಟ್ಟರೆ ಲಕ್ಷ್ಮೀಕಟಾಕ್ಷ ತಪ್ಪಿ ಹೋದೀತು ಜೋಕೆ..! ಶೆಲ್ಬಿ ಡೇವಿಸ್ ಸಲಹೆ ಕೇಳಿ

ಕಳೆದ ಎರಡು ವರ್ಷದಿಂದ ಭಾರತದ ಷೇರು ಮಾರುಕಟ್ಟೆ (Stock Market) ಸಾಕಷ್ಟು ಏರುಪೇರು, ಏರಿಳಿತಗಳನ್ನು ಕಾಣುತ್ತಾ ಬಂದಿದೆ. ಎರಡು ವರ್ಷದ ಹಿಂದೆ ಯಾರಾದರೂ ಹೂಡಿಕೆ ಆರಂಭಿಸಿದ್ದರೆ ಇವತ್ತು ಅವರ ಗಳಿಕೆ ಮೈನಸ್​ನಲ್ಲಿ ಇರುತ್ತದೆ. ಹೊಸಬರು ಈ ಬೇರ್ ಮಾರ್ಕೆಟ್​ನಿಂದ (Bear Market) ಭ್ರಮನಿರಸನಗೊಂಡು ಮಾರುಕಟ್ಟೆ ಬಿಟ್ಟು ಹೋಗೋ ಸಾಧ್ಯತೆ ಹೆಚ್ಚು. ಆದರೆ, ಅನುಭವಿಗಳಿಗೆ ಮತ್ತು ಪೇಟೆ ವರ್ತನೆ ತಿಳಿದಿರುವವರಿಗೆ ಈ ಕರಡಿ ಘಳಿಗೆಯೇ ಶ್ರೇಷ್ಠವಾಗಿದೆ. ನಿಮ್ಮ ಸಂಪತ್ತು ಹೆಚ್ಚಿಸಲು ಸಾಧ್ಯವಾಗಿಸುತ್ತದೆ ಎಂದು ಬೇರ್ ಮಾರ್ಕೆಟ್. ಈ ಸಂಕಷ್ಟ…

Read More

Viral Post: ಬೆಂಗಳೂರಿನ ಇಸ್ತ್ರಿ ದರ ಕೇಳಿ ಬೆಚ್ಚಿಬಿದ್ದ ನೋಯ್ಡಾ ನಿವಾಸಿ; ವೈರಲ್ ಆಯ್ತು ಪೋಸ್ಟ್

ಬೆಂಗಳೂರಿನ ಇಸ್ತ್ರಿ ದರ ಕೇಳಿ ಬೆಚ್ಚಿಬಿದ್ದ ನೋಯ್ಡಾ ನಿವಾಸಿImage Credit source: Twitter/@sajithpai ಬೆಂಗಳೂರು: ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಜೀವನ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮನೆ ಬಾಡಿಗೆ, ದಿನಸಿ, ಪ್ರಯಾಣ ಮಾತ್ರವಲ್ಲದೆ ಸಾಮಾನ್ಯ ಸೇವೆಗಳ ದರವೂ ಜನರನ್ನು ಅಚ್ಚರಿಗೊಳಿಸುತ್ತಿದೆ. ಇದೀಗ ಬೆಂಗಳೂರಿನ ಇಸ್ತ್ರಿ ದರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಡೆದ ಚರ್ಚೆ ಭಾರೀ ವೈರಲ್ ಆಗಿದೆ. ನೋಯ್ಡಾದಿಂದ ಇತ್ತೀಚೆಗಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಶಿಫ್ಟ್ ಆದ ‘ಸಜಿತ್ ಪೈ’ (Sajith Pai) ಎಂಬ ಸಾಹಸೋದ್ಯಮ…

Read More

‘ನಿನ್ನನ್ನು ಇದೇ ನಾಶ ಮಾಡುತ್ತೆ’; ಹನಿ ಸಿಂಗ್ ಬಾಳಲ್ಲಿ ನಿಜವಾಯ್ತು ಶಾರುಖ್ ಭವಿಷ್ಯ

ಖ್ಯಾತ ರಾಪರ್ ಮತ್ತು ಗಾಯಕ ಯೋಯೋ ಹನಿ ಸಿಂಗ್ ಹಾಡುಗಳು ಈಗ ಮೊದಲಿನಷ್ಟು ಹಿಟ್ ಆಗುತ್ತಿಲ್ಲ. ಅವರು ಹಲವು ಸಂದರ್ಶನಗಳನ್ನು ನೀಡುತ್ತಿದ್ದಾರೆ. ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ತಾವೆದುರಿಸಿದ ಮಾನಸಿಕ ಆರೋಗ್ಯದ ಸಮಸ್ಯೆಗಳು ಹಾಗೂ ಚಿತ್ರರಂಗದಿಂದ ದಿಢೀರ್ ದೂರ ಸರಿದಿದ್ದರ ಹಿಂದಿನ ಅಸಲಿ ಕಾರಣಗಳನ್ನು ಅವರು ಇತ್ತೀಚೆಗೆ ಬಿಚ್ಚಿಟ್ಟಿದ್ದಾರೆ. ವಿಶೇಷವೆಂದರೆ, ತಾವಾಗಿಯೇ ತಂದುಕೊಂಡ ಈ ಕಷ್ಟದ ದಿನಗಳ ಬಗ್ಗೆ ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಅವರು ಮೊದಲೇ ಎಚ್ಚರಿಸಿದ್ದರು ಎಂದು ಹನಿ ಸಿಂಗ್ (Honey Singh)…

Read More