ಸರ್ಕಾರದ ವಿರುದ್ಧ ಮತ್ತೆ ತೊಡೆತಟ್ಟಿದ ರಾಜ್ಯಪಾಲರು: ಅಧಿವೇಶನ ಬಳಿಕ ಗಣರಾಜ್ಯೋತ್ಸವ ಭಾಷಣ ಓದಲೂ ಹಿಂದೇಟು! – Kannada News | Karnataka Governor vs Government: Thaawarchand Gehlot Likely to Skip Reading Republic Day Speech
ಬೆಂಗಳೂರು, ಜನವರಿ 24: ಕರ್ನಾಟಕದಲ್ಲಿ (Karnataka) ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷಕ್ಕೆ ವೇದಿಕೆ ಸಿದ್ಧವಾಗುತ್ತಿರುವ ಸೂಚನೆಗಳು ಕಂಡುಬಂದಿವೆ. ಈಗಾಗಲೇ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಉಂಟಾಗಿದ್ದ ಗದ್ದಲದ ಬೆನ್ನಲ್ಲೇ, ಈ ಬಾರಿ ಗಣರಾಜ್ಯೋತ್ಸವದ ಭಾಷಣವೇ ಹೊಸ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಸಂಪ್ರದಾಯದಂತೆ ಗಣರಾಜ್ಯೋತ್ಸವದಂದು ರಾಜ್ಯಪಾಲರು ಓದುವ ಭಾಷಣವನ್ನು ರಾಜ್ಯ ಸರ್ಕಾರವೇ ತಯಾರಿಸಿ ನೀಡುತ್ತದೆ. ಆದರೆ ಈ ಬಾರಿ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರದ ನೀತಿಗಳ ಕುರಿತು ತೀವ್ರ ಟೀಕೆಗಳಿರುವುದು ರಾಜ್ಯಪಾಲರ…