Headlines

1.8 ಕೋಟಿ ರೂ. ಬಾಕಿ ಉಳಿಸಿಕೊಂಡ ಆರೋಪ; ನಟ ಆರ್ಯ ವಿರುದ್ಧ ಕೇಸ್ – Kannada News | Actor Arya Faces Fraud Case: Unpaid Film Equipment Rentals, Hyderabad Police Probe

ತಮಿಳು ಚಿತ್ರರಂಗದ ಪ್ರಸಿದ್ಧ ನಟ ಆರ್ಯ ವಿರುದ್ಧ ಹೈದರಾಬಾದ್‌ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಶೂಟಿಂಗ್ ಉಪಕರಣಗಳನ್ನು ಬಾಡಿಗೆಗೆ ಪಡೆದು ಹಣ ಪಾವತಿಸದ ಆರೋಪ ಇವರ ಮೇಲಿದೆ. ಹೈದರಾಬಾದ್ ಮೂಲದ ಸಂಸ್ಥೆಯೊಂದಕ್ಕೆ 1.8 ಕೋಟಿ ರೂಪಾಯಿಗೂ ಅಧಿಕ ಬಾಕಿ ಹಣ ನೀಡಬೇಕಾಗಿದೆ. ಈ ಸಂಬಂಧ ಸಂಸ್ಥೆಯು ಪೊಲೀಸರಿಗೆ ದೂರು ನೀಡಿದೆ. ಭರವಸೆ ನೀಡಿದ್ದ ಆರ್ಯ ‘ತಾಹರ್ ಸಿನಿ ಟೆಕ್ನಿಕ್’ ಸಂಸ್ಥೆಯು ಜುಲೈ 10 ರಂದು ಪೊಲೀಸರಿಗೆ ಈ ದೂರು ನೀಡಿದೆ. ಆರ್ಯ ನಟನೆಯ ‘ಅನಂತನ್ ಕಾಡು’ ಸಿನಿಮಾದ ಶೂಟಿಂಗ್‌ಗಾಗಿ…

Read More

Horoscope Today: ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 25​, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಮೃಗಶಿರಾ ನಕ್ಷತ್ರ, ಸೌಭಾಗ್ಯ ಯೋಗ, ವಣಿಕ ಕರಣಗಳನ್ನು ಒಳಗೊಂಡಿದೆ. ಇಂದು ರವಿ ಮೀನ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾರೆ. ಸಂತಾನ ಸಪ್ತಮಿ, ಸೂರ್ಯ ದವನಾರ್ಪಣೆ, ಹಾಗೂ ನವಿಲೆ ಆಂಜನೇಯ…

Read More

Army Recruitment 2026: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ: 3,806 ಟೆರಿಟೋರಿಯಲ್ ಆರ್ಮಿ ಹುದ್ದೆಗೆ ನೇಮಕಾತಿ

ದೇಶಸೇವೆಯ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ಟೆರಿಟೋರಿಯಲ್ ಆರ್ಮಿ (ಪ್ರಾದೇಶಿಕ ಸೇನೆ) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಒಟ್ಟು 3,806 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದು ಸೇನೆಗೆ ಸೇರಲು ಬಯಸುವವರಿಗೆ ಒಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯು ಪ್ರಮುಖವಾಗಿ ನೇರ ರ್ಯಾಲಿಗಳ ಮೂಲಕ ನಡೆಯಲಿದ್ದು, ಮಾರ್ಚ್ 2026 ರಿಂದಲೇ ವಿವಿಧ ರಾಜ್ಯಗಳಲ್ಲಿ ಈ ಪ್ರಕ್ರಿಯೆ ಚಾಲನೆ ಪಡೆದಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಆಫ್‌ಲೈನ್ ಅರ್ಜಿಗಳ ಮೂಲಕ ನಡೆಯಲಿದ್ದು,…

Read More

Video: ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ, ಓಡಿಹೋಗಲು ಗಾಡಿಯಲ್ಲಿ ಪೆಟ್ರೋಲ್ ಇಲ್ಲದೆ ಸಿಕ್ಕಾಕ್ಕೊಂಡ

ವೆನ್ನಪ್ಪುವಾ, ಮಾರ್ಚ್​ 11: ಬೈಕ್​​ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಘಟನೆಯನ್ನು ಸೆರೆಹಿಡಿದಿದೆ.ಆರೋಪಿಯು ಬೈಕ್​ನಲ್ಲಿ ಬಂದು ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಆಕೆಯನ್ನು ಬೀಳಿಸಿ ಸರ ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಬೈಕ್​​ನಲ್ಲಿ ಪೆಟ್ರೋಲ್ ಇಲ್ಲದ ಕಾರಣ ಸಾರ್ವಜನಿಕರ ಕೈಗೆ ಸಿಕ್ಕಿ ಒದೆ ತಿಂದಿದ್ದಾನೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು? – Kannada News | SC internal reservation discussion incomplete In Karnataka Cabinet Meeting

ಬೆಂಗಳೂರು, ಮಾರ್ಚ್ 05): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಒಳ ಮೀಸಲಾತಿ (internal reservation ) ಗೊಂದಲ ಜೋರಾಗಿದ್ದು, ಕಾಂಗ್ರೆಸ್ ನಾಯಕರುಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಸಂಬಂಧ ಇಂದು (ಮಾರ್ಚ್ 05) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲೂ ಸಹ ಒಳ ಮೀಸಲಾತಿ ವಿಚಾರವಾಗಿ ಭಾರೀ ಚರ್ಚೆಯಾಗಿದೆ. ಆದ್ರೆ, ಸಂಪುಟದಲ್ಲಿ ಸಹಮತ ಮೂಡದ ಕಾರಣ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸಂಪುಟ ಸಭೆ ಸೇರಿ ತೀರ್ಮಾನಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮತ್ತೊಂದು…

Read More

ನಿಮ್ಮನೆಯಲ್ಲೂ ನೊಣಗಳ ಕಾಟ ಹೆಚ್ಚಿದ್ಯಾ? ಇವುಗಳನ್ನು ತೊಡೆದು ಹಾಕಲು ಇಲ್ಲಿದೆ ಸುಲಭ ಪರಿಹಾರ – Kannada News | Home remedies that help keep away houseflies from home

ಮಾನ್ಸೂಸ್‌ ಸೀಸನ್‌ನಲ್ಲಿ ಮಳೆಯೊಂದಿಗೆ ಹಾವು, ಸೊಳ್ಳೆಗಳ ಕಾಟವೂ ಹೆಚ್ಚಿರುತ್ತದೆ. ನೊಣಗಳು (houseflies) ಇದಕ್ಕೆ ಹೊರತಿಲ್ಲ. ಹೌದು ಮಳೆಗಾಲ ಆರಂಭವಾಗುತ್ತಿದ್ದಂತೆ ಮನೆಗಳಲ್ಲಿ ನೊಣಗಳ ಹಾವಳಿ ಕೂಡ ಹೆಚ್ಚಾಗುತ್ತದೆ. ತೇವಾಂಶವುಳ್ಳ ಪ್ರದೇಶಗಳಲ್ಲಿ ನೊಣಗಳು ಹೆಚ್ಚಾಗಿ ಬೆಳೆಯುತ್ತವೆ. ಮಳೆಗಾಲದಲ್ಲಿ ಅವುಗಳ ಸಂಖ್ಯೆ ಹೆಚ್ಚಾಗುತ್ತದೆ. ಇವು ಆಹಾರ ಮತ್ತು ಪಾನೀಯಗಳನ್ನು ಕಲುಷಿತಗೊಳಿಸಿ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ  ಅನೇಕರಿಗೆ ಮನೆಯಲ್ಲಿ ಹಾವಳಿಯಿಡುವ ಈ ನೊಣಗಳನ್ನು ತೊಡೆದುಹಾಕುವುದು ತುಂಬಾನೇ ಕಷ್ಟ. ಹೀಗಿರುವಾಗ ಕೆಲವೊಂದು ಮನೆಮದ್ದುಗಳ ಸಹಾಯದಿಂದ ನೊಣಗಳನ್ನು ಸಂಪೂರ್ಣವಾಗಿ ತೊಡೆದುಹಾಕಬಹುದು. ಈ ಕುರಿತ ಸಂಪೂರ್ಣ…

Read More

ಪುಟ್ಟ ಮನೆಯಲ್ಲಿ ಸಾಧನೆಯ ಭಂಡಾರ: ಹೇಗಿದೆ ನೋಡಿ ಗಿಲ್ಲಿಯ ಸಣ್ಣ ಸೂರು – Kannada News | Gillis Triumphant Return: Dadadapura Village Celebrates BBK12 Winners Success Story

ಬಿಗ್​​​ಬಾಸ್​​​​​ ಕನ್ನಡ 12 ವಿಜೇತ ಗಿಲ್ಲಿ ಅವರ ಯಶಸ್ಸನ್ನು ಅವರ ಹುಟ್ಟೂರು ದಡದಪುರ ಅದ್ಧೂರಿಯಾಗಿ ಆಚರಿಸುತ್ತಿದೆ. ದಡದಪುರದಲ್ಲಿರುವ ಗಿಲ್ಲಿ ಅವರ ಮನೆಯಲ್ಲಿ ಅವರನ್ನು ಭೇಟಿಯಾಗಲು ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಗಿಲ್ಲಿ ತುಂಬಾ ಬಡತನದ ಮನೆಯಿಂದ ಬಂದವರು, ಹಲವಾರು ಶೋಗಳಲ್ಲಿ ಭಾಗವಹಿಸಿದ್ದಾರೆ. ಒಂದಿಷ್ಟು ಹಣವನ್ನು ಸಂಪಾದಿಸಿದ್ದಾರೆ. ಅದರೂ ಅವರು ಇಂದಿಗೂ ಪುಟ್ಟ ಮನೆಯಲ್ಲೇ ವಾಸವಾಗಿದ್ದಾರೆ. ಅವರ ಮನೆ ಹೇಗಿದೆ ಎಂಬುದನ್ನು ಟಿವಿ9 ಕನ್ನಡ ತೋರಿಸಿದೆ ನೋಡಿ. ಇದು ಗಿಲ್ಲಿ ಆಡಿ ಬೆಳೆದ ಪುಟ್ಟ ಮನೆ. ಬಡತನದ ಹಿನ್ನೆಲೆಯಿಂದ…

Read More

ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ಎದ್ದು ದಾಳಿ ಮಾಡಿದ ಹುಲಿ! ಆಮೇಲಾಗಿದ್ದೇ ಬೇರೆ

ಚಾಮರಾಜನಗರ, ಮಾರ್ಚ್ 24: ಹುಲಿ ಸೆರೆಗೆ ಹಮ್ಮಿಕೊಳ್ಳಲಾಗಿದ್ದ ‘ಆಪರೇಷನ್ ಬೀಸ್ಟ್ (Operation Beast)’ ಕಾರ್ಯಾಚರಣೆಯ ಎರಡನೇ ಹಂತ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅವಘಡವೊಂದು ಸಂಭವಿಸಿರುವುದು ಬೆಳಕಿಗೆ ಬಂದಿದೆ. ಚಾಮರಾಜನಗರ (Chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನ ಬೀಡು ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯ ವೇಳೆ, ಬಂಡೀಪುರ (Bandipur) ಅರಣ್ಯ ಸಿಬ್ಬಂದಿ ಕೂಂಬಿಂಗ್ ವೇಳೆ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸದೇ ಇರುವುದು ಗೊತ್ತಾಗಿದೆ. ಇದರಿಂದ ಸಿಬ್ಬಂದಿಯೊಬ್ಬರ ಪ್ರಾಣಕ್ಕೆ ಸಂಚಕಾರ ಎದುರಾಗಿದ್ದು, ಅದೃಷ್ಟವಶಾತ್ ಅನಾಹುತವೊಂದು ತಪ್ಪಿದೆ. ಹುಲಿ ಸೆರೆ…

Read More

ತಮಿಳುನಾಡಿನಲ್ಲಿ ಇನ್ನು ಮುಂದೆ ದಳಪತಿ ವಿಜಯ್ ಅಬ್ಬರ ಶುರು! – Kannada News | Thalapathy Vijay Takes Oath as Tamil Nadu CM: TVK Ends Decades of Dravidian Duopoly

ತಮಿಳುನಾಡಿನಲ್ಲಿ ಇನ್ನು ಮುಂದೆ ವಿಜಯ್ ಅಬ್ಬರ ಶುರು! ಚೆನ್ನೈ, ಮೇ 10: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಆಳಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ದ್ವಿಪಕ್ಷೀಯ ಪ್ರಭುತ್ವವನ್ನು ಅಂತ್ಯಗೊಳಿಸಿ, ನಟ ದಳಪತಿ ವಿಜಯ್ (Thalapathy Vijay) ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದು ಕೇವಲ ಅಧಿಕಾರ ಬದಲಾವಣೆಯಲ್ಲ, ಒಂದು ಹೊಸ ರಾಜಕೀಯ ಯುಗದ ಆರಂಭವಾಗಿದೆ. ಮುಖ್ಯಾಂಶಗಳು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್ ಇಂದು ಪ್ರಮಾಣವಚನ…

Read More

ಕೈ ಮುರಿದು, ಕಣ್ಣಿಗೆ ಚಾಕು ಇರಿದ ಪತ್ನಿ: ಪೊಲೀಸ್​​ ಠಾಣೆಗೆ ಓಡೋಡಿ ಬಂದ ರೌಡಿಶೀಟರ್​​ – Kannada News | Notorious Rowdy Syed Asgar Attacked by Wife: Hand Broken, Eye Stabbed in Bengaluru

ರೌಡಿಶೀಟರ್​​ ಮೇಲೆ ಪತ್ನಿಯಿಂದ ಹಲ್ಲೆ ಬೆಂಗಳೂರು, ಜನವರಿ 06: ಖಾಕಿ ಭಯವಿಲ್ಲದೆ ರೌಡಿಶೀಟರ್​​ಗಳು ಮೇಲಿಂದ ಮೇಲೆ ಅಟ್ಟಹಾಸ ಮೆರೆಯೋದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಬಂದರೂ ಕೆಲವರು ಮಾತ್ರ ಬುದ್ಧಿ ಕಲಿಯಲ್ಲ. ಕಾರಾಗೃಹದಿಂದ ಹೊರಬಂದ ಬಳಿಕವೂ ಮತ್ತದೇ ತಮ್ಮ ಹಳೇ ಚಾಳಿ ಮುಂದುವರಿಸುತ್ತಾರೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೂ ಯಾಮಾರಿಸಿ ಓಡಾಡಿಕೊಂಡು ಇರ್ತಾರೆ. ಇಂತಹುದ್ದೇ ಸಾಲಿಗೆ ಸೇರುವ ರೌಡಿಶೀಟರ್​​ ಸೈಯದ್ ಅಸ್ಗರ್ ಈಗ ತಾನಾಗಿಯೇ ಪೊಲೀಸರ ಬಳಿ ಓಡೋಡಿ ಬಂದಿದ್ದಾನೆ. ಇದಕ್ಕೆಲ್ಲ ಕಾರಣ ಆತನ…

Read More