ಅಥಣಿಯಲ್ಲಿ ಭೀಕರ ದುರಂತ: ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು – Kannada News | Two Workers death After House Collapses During Repair Work
ಬೆಳಗಾವಿ, ಜುಲೈ 12: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ (rain) ಸುರಿಯುತ್ತಿದೆ. ಹೀಗಾಗಿ ಅವಾಂತರಗಳು ಸಂಭವಿಸಿವೆ. ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಸೋರುತ್ತಿದ್ದ ಮನೆ ದುರಸ್ತಿ ವೇಳೆ ಕುಸಿದುಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ನಡೆದಿದೆ. ಮಾದೇವ್ ಕೃಷ್ಣಪ್ಪ ಬಡಿಗೇರ್(48) ಮತ್ತು ಸೈಯದ್ ಕೆಂಪವಾಡಿ(32) ಮೃತರು. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೊಟ್ಟಲಗಿ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ನಂದಗೊಂಡ ಎಂಬುವರಿಗೆ ಸೇರಿದ ಮನೆ…