‘45 ಟೈಟಲ್ ಕೊಟ್ಟಿದ್ದು ನಾನು, ಸೌಜನ್ಯಕ್ಕೂ ನನ್ನ ಹೆಸರು ಹೇಳಿಲ್ಲ’; ನಟನ ಬೇಸರ – Kannada News | 45 Movie Title Controversy: Actor Mitra Claims Ownership, Expresses Disappointment

ಅರ್ಜುನ್ ಜನ್ಯ (Arjun Janya) ನಿರ್ದೇಶನದ, ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಕೆಲವರಿಂದ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಒಟಿಟಿಗೂ ಬಂದಿದೆ. ‘45’ ಅನ್ನೋದು ಸಿನಿಮಾದ ಕಥೆಗೆ ಹೆಚ್ಚು ಸೂಕ್ತ. ಹೀಗಾಗಿ, ಈ ಟೈಟಲ್ ಇಡಲಾಗಿದೆ. ಈಗ ಟೈಟಲ್ ವಿಷಯಕ್ಕೆ ಸಂಬಂಧಿಸಿದಂತೆ ಸಿನಿಮಾ ಹಾಗೂ ಕಿರುತೆರೆ ಕಲಾವಿದ ಮಿತ್ರ ಮಾತನಾಡಿದ್ದಾರೆ. ‘ಟೈಟಲ್ ನನ್ನದಾಗಿತ್ತು, ಅವರಿಗೆ ನೀಡಿದ್ದೇನೆ’ ಎಂದಿದ್ದಾರೆ.

ಸಿನಿಮಾ ವೀಕ್ಷಿಸಿದವರಿಗೆ ‘45’ ಎಂಬ ಟೈಟಲ್ ಯಾಕೆ ಇಡಲಾಗಿದೆ ಎಂಬುದು ಮನದಟ್ಟಾಗುತ್ತದೆ. ಈ ಟೈಟಲ್​​ ಇಡೋಣ ಎಂದು ನಿರ್ದೇಶಕರು ಹಾಗೂ ನಿರ್ಮಾಪಕರು ನಿರ್ಧರಿಸಿದಾಗ ನಟ ಮಿತ್ರ ಅವರು ಈ ಶೀರ್ಷಿಕೆ ನೋಂದಣಿ ಮಾಡಿಸಿದ ವಿಷಯ ಗೊತ್ತಾಗಿದೆ. ಹೀಗಾಗಿ, ಟೈಟಲ್​​ನ ಅವರ ಬಳಿ ಕೇಳಿ ಪಡೆದರು ನಿರ್ಮಾಪಕ ರಮೇಶ್ ರೆಡ್ಡಿ. ಸೌಜನ್ಯಕ್ಕೆ ಒಮ್ಮೆ ಹೆಸರನ್ನಾದರೂ ಹೇಳಬಹುದಿತ್ತು ಎಂಬುದು ಮಿತ್ರನ ಅಭಿಪ್ರಾಯ.

ಇದನ್ನೂ ಓದಿ: ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿಗೆ ಚಿತ್ರಮಂದಿರದಲ್ಲೇ ಅರ್ಜುನ್ ಜನ್ಯ ಉತ್ತರ

‘ಕನ್ನಡ ಪಿಚ್ಚರ್​’ಗೆ ನೀಡಿದ ಸಂದರ್ಶನದಲ್ಲಿ ಮಿತ್ರ ಮಾತನಾಡಿದ್ದಾರೆ.  ‘45 ಟೈಟಲ್ ಕೊಟ್ಟಿದ್ದೇ ನಾನು. ನನ್ನ ಬ್ಯಾನರ್ ಅಡಿಯಲ್ಲಿ ಸಿನಿಮಾ ನೋಂದಣಿ ಮಾಡಿಸಿದ್ದೆ. ರಮೇಶ್ ರೆಡ್ಡಿ ಅವರು ಕರೆ ಮಾಡಿದರು. ನಮ್ಮ ಕಥೆಗೆ ಈ ಶೀರ್ಷಿಕೆ ಹೊಂದಾಣಿಕೆ ಆಗುತ್ತಿದೆ, ಟೈಟಲ್ ಬೇಕಿತ್ತು. ಅರ್ಜುನ್ ಜನ್ಯ ನಿರ್ದೇಶನ ಇದೆ ಎಂದು ವಿವರಿಸಿದರು’ ಎಂದಿದ್ದಾರೆ ಮಿತ್ರ.

‘ಹಣ ನೀಡೋಕೆ ಬಂದರು. ನಾನು ಬೇಡ ಎಂದೆ. ಥ್ಯಾಂಕ್ಸ್ ಕಾರ್ಡ್ ಹಾಕ್ತಾರೆ ಅಥವಾ ಸಂದರ್ಶನದಲ್ಲಿ ಹೇಳ್ತಾರೆ ಎಂದುಕೊಂಡಿದ್ದೆ. ಕೊನೆಪಕ್ಷ ಅರ್ಜುನ್ ಜನ್ಯ ನನೆಪಿಸಿಕೊಳ್ಳುತ್ತಾರೆ ಎಂದುಕೊಂಡಿದ್ದೆ. ಆದರೆ, ಏನೂ ಮಾಡಿಲ್ಲ. ಪ್ರೀತಿಯಿಂದ ಟೈಟಲ್ ಬಿಟ್ಟು ಕೊಟ್ಟಿದ್ದೇನೆ, ಹಣ ನಿರೀಕ್ಷಿಸಿಲ್ಲ. ಬ್ಯುಸಿ ಇಂದ ಮರೆತು ಹೋಗಿರಬಹುದು. ಸೇವೆನ ಪರಿಗಣಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ’ ಎನ್ನುತ್ತಾರೆ ಮಿತ್ರ. ‘45’ ಸಿನಿಮಾ ಡಿಸೆಂಬರ್ 25ರಂದು ಥಿಯೇಟರ್​​ಗೆ ಬಂತು. ಈಗ ಜನವರಿ 23ರಂದು ಜೀ 5 ಅಲ್ಲಿ ಪ್ರಸಾರ ಆರಂಭಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಫೋನ್ ಕಾಲ್ ಸ್ವೀಕರಿಸಲೇಬೇಕು! – Kannada News | Government Officials Must Answer Calls from Elected Representatives, Karnataka Chief Secretary Issues Strict Circular

ಸಾಂದರ್ಭಿಕ ಚಿತ್ರ (ಎಡ) ಮತ್ತು ಸುತ್ತೋಲೆಯ ಪ್ರತಿ

ಬೆಂಗಳೂರು, ಜನವರಿ 24: ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ (Karnataka) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು. ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ವ್ಯಸ್ತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿಗಳ ಪತ್ರದಲ್ಲೇನಿದೆ?

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರು ದಿನಾಂಕ 16-12-2025 ರಂದು ಬರೆದ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ನನ್ನ ಗಮನಕ್ಕೆ ಬಂದಿದೆ.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳಾದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಮಾನ್ಯ ಲೋಕಸಭಾ ಹಾಗೂ ಸಭಾ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ತಾವು ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಅವರುಗಳಿಗೆ ತಮ್ಮ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡುವುದರ ಮೂಲಕ ಸೂಕ್ತವಾಗಿ ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ಈ ಮೂಲಕ ಸೂಚನೆಯನ್ನು ನೀಡಿದೆ ಎಂದು ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಮನೆ ಹಂಚಿಕೆಗೆ ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ

ಈ ಸೂಚನೆಯನ್ನು ತಮ್ಮ ಆಪ್ತ ಶಾಖೆ ಸಿಬ್ಬಂದಿಗಳಿಗೂ ನೀಡಬೇಕು ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇತರ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ – Kannada News | Delhi Cafe Shooting: Accused Shares Confession Video, Blames Faizan for Old Grudge

ದೆಹಲಿ, ಜ.24: ಈಶಾನ್ಯ ದೆಹಲಿಯ ಮೌಜ್‌ಪುರದ ಕೆಫೆಯೊಂದರಲ್ಲಿ (Delhi Cafe Shooting) 24 ವರ್ಷದ ಯುವಕನನ್ನು ಗುಂಡಿಕ್ಕಿ ಕೊಂದ ಘಟನೆಯೊಂದು ನಡೆದಿದೆ. ಇದೀಗ ಈ ಕೊಲೆಯ ಬಗ್ಗೆ ಆರೋಪಿ ತಪ್ಪೊಪ್ಪಿಗೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ. ಗುಂಡಿಕ್ಕಿ ಕೊಂದ ನಂತರ ಮನಕಲಕುವ ತಪ್ಪೊಪ್ಪಿಗೆ ಹೇಳಿಕೆಯನ್ನು ನೀಡಿದ್ದಾನೆ. ಗುರುವಾರ (ಜ22) ರಾತ್ರಿ ವೈಯಕ್ತಿಕ ದ್ವೇಷಕ್ಕಾಗಿ 24 ವರ್ಷದ ಫೈಜಾನ್ ಎಂಬ ಯುವಕನನ್ನು ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. @moinqureshiii_’ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲವು ತಿಂಗಳ ಹಿಂದೆ ಫೈಜಾನ್‌ ನನಗೆ ಹೊಡೆದ ಎಂಬ ಕಾರಣಕ್ಕೆ ನಾನು ಅವನನ್ನು ಕೊಲೆ ಮಾಡಿದೆ ಎಂದು ಹೇಳಿದ್ದಾನೆ. ಈ ಕೊಲೆಯಲ್ಲಿ ನನ್ನ ಕುಟುಂಬ ಅಥವಾ ಸ್ನೇಹಿತರ ಯಾವುದೇ ಪಾತ್ರ ಇಲ್ಲ ಎಂದು ಹೇಳಿದ್ದಾನೆ.

ನಾನು ಫೈಜಾನ್‌ನನ್ನು ವೈಯಕ್ತಿಕ ದ್ವೇಷದಿಂದ ಕೊಂದೆ. ಇದರಲ್ಲಿ ನನ್ನ ತಂದೆಯ ಯಾವುದೇ ಪಾತ್ರವಿಲ್ಲ, ನನ್ನ ಕುಟುಂಬ ಅಥವಾ ಸ್ನೇಹಿತರಿಗೆ ಯಾವುದೇ ಸಂಬಂಧವಿಲ್ಲ. ನನ್ನ ಮನೆಯವರ ಮಾತು ಕೇಳಿ ಆತನನ್ನು ಕೊಂದಿಲ್ಲ. ಹಾಗೂ ಈ ಕೊಲೆಯನ್ನು ಹಣಕ್ಕಾಗಿ ಮಾಡಿಲ್ಲ. ನಾಲ್ಕು ತಿಂಗಳ ಹಿಂದೆ ನನಗೆ ಕಪಾಳಮೋಕ್ಷ ಮಾಡಿದ್ದ, ಆ ಕಾರಣಕ್ಕೆ ಕೋಪಗೊಂಡು ನಾನು ಕೊಲೆ ಮಾಡಿದ್ದಾನೆ. ಈ ವಿಷಯವು ಹಣಕ್ಕೆ ಸಂಬಂಧಿಸಿದೆ ಎಂಬ ಫೈಜಾನ್ ಅವರ ಸಹೋದರನ ಹೇಳಿಕೆಯನ್ನು ಸುಳ್ಳು ಎಂದು ಹೇಳಿದ್ದಾನೆ.

ಫೈಜಾನ್​​ ಅಣ್ಣ ಹೇಳಿರುವ ಪ್ರಕಾರ, ನನ್ನ ತಮ್ಮನ್ನು ಹಣಕ್ಕಾಗಿ ಕೊಲೆ ಮಾಡಿದ್ದಾರೆ. ಇದರಲ್ಲಿ ಕೊಲೆಗಾರನ ತಂದೆ, ಸ್ನೇಹಿತರ ಕೈವಾಡ ಇದೆ ಎಂದು ಹೇಳಿದ್ದಾರೆ. ಹಣಕ್ಕಾಗಿ ತನ್ನ ತಮ್ಮ ಜತೆಗೆ ಕೊಲೆಗಾರನ ತಂದೆ ಜಗಳ ಮಾಡಿದ್ದಾರೆ. ಈ ಜಗಳ ನಂತರವೇ ತಮ್ಮನ ಕೊಲೆಯಾಗಿದೆ. ಕೊಲೆಗಾರ ಹಾಗೂ ಆತನ ತಂದೆ ಈಗಲೇ ಬಂಧಿಸಬೇಕು ಎಂದು ಫೈಜಾನ್ ಸಹೋದರ ಸಲ್ಮಾನ್​​ ಹೇಳಿದ್ದಾರೆ. ಫೈಜಾನ್ ಸಾಲ ಪಡೆದಿದ್ದ, ಮರುಪಾವತಿಸಲು ಸಾಧ್ಯವಾಗದಿದ್ದಾಗ, ತಂದೆ ಮತ್ತು ಮಗ ನಮ್ಮ ಮನೆಗೆ ಬಂದು ಜಗಳವಾಡಿದ್ದಾರೆ. ಈ ಬಗ್ಗೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಗುರುವಾರ ರಾತ್ರಿ 10:28 ರ ಸುಮಾರಿಗೆ ಮೌಜ್‌ಪುರದ ಮಿಸ್ಟರ್ ಕಿಂಗ್ ಲೌಂಜ್ ಮತ್ತು ಕೆಫೆಯಲ್ಲಿ ವೆಲ್ಕಮ್ ಪ್ರದೇಶದ ನಿವಾಸಿ ಫೈಜಾನ್ ಅವರನ್ನು ಗುಂಡಿಕ್ಕಿ ದಾಳಿ ನಡೆಸಲಾಗಿತ್ತು.

ಇದನ್ನೂ ಓದಿ: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!

ಗಂಭೀರವಾಗಿ ಗಾಯಗೊಂಡಿದ್ದ ಫೈಜಾನ್ ಅನ್ನು ಗುರು ತೇಗ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಆಸ್ಪತ್ರೆಗೆ ಕರೆದೊಯ್ಯುವಾಗಲೇ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೂರು ಗುಂಡುಗಳು ತನ್ನ ಸಹೋದರನಿಗೆ ತಗುಲಿದೆ. ಒಂದು ಅವನ ತಲೆಗೆ ಹಾಗೂ ಎರಡು ಎದೆಗೆ ಹೊಕ್ಕವು, ಅವನ ಕೈಯಲ್ಲಿ ಗಾಯದ ಗುರುತು ಕೂಡ ಇದೆ ಸಲ್ಮಾನ್​​ ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತಾ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಧಾನಸೌಧದ ಮುಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ! ವ್ಯಕ್ತಿಯ ಸ್ಥಿತಿ ಗಂಭೀರ – Kannada News | Dr. Nagendra Shirur Attempts Suicide at Bengaluru Vidhana Soudha

ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ!

ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (Vidhana Soudha) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 12:31 pm, Sat, 24 January 26

Source link

‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ – Kannada News | Siddaramaiah Wishes Landlord Movie He will Watch Duniya Vijay Movie

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ತಂಡ ಸಿಎಂನ ಭೇಟಿ ಮಾಡಿ ಆಮಂತ್ರಣ ನೀಡಿದ್ದಾರೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಶೋ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್,  ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ! – Kannada News | Rare Ghat Sarpa Stone Idol Discovered in Lakkundi, Sparks Archaeological Curiosity

ಗದಗ, ಜನವರಿ 24: ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಒಂದಡೆ ಉತ್ಖನನದ ನಡೆಯತ್ತಿದ್ದು, ಮತ್ತೊಂದೆಡೆ ಅಪರೂಪದ ಘಟಸರ್ಪ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖ ರವದಿ ಎಂಬುವರ ಜಮೀನಿನಲ್ಲಿ ಈ ಅಪರೂಪದ ಶಿಲಾಮೂರ್ತಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಆಸ್ಥೆಯ ಭಾವನೆ ಮೂಡಿಸಿದೆ. ಪತ್ತೆಯಾದ ಈ ಶಿಲೆ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದೆ ಎನ್ನಲಾಗಿದ್ದು, ಅಲಂಕಾರಿಕ ವಿನ್ಯಾಸ ಹೊಂದಿರುವ ಘಟಸರ್ಪ ಮೂರ್ತಿ ಐತಿಹಾಸಿಕ ಮಹತ್ವ ಪಡೆದಿದೆ. ಇದಕ್ಕೂ ಮುನ್ನ ಲಕ್ಕುಂಡಿಯ ಐತಿಹಾಸಿಕ ಬಾವಿಯೊಳಗೆ ಚಾಲುಕ್ಯರ ಕಾಲದ ಸುಂದರ ಅಲಂಕಾರಿಕ ಶಿಲೆಗಳು ಪತ್ತೆಯಾಗಿದ್ದವು. ಜೊತೆಗೆ ಉತ್ಖನನ ನಡೆಯುತ್ತಿರುವ ಜಾಗದಲ್ಲಿಯೂ ಎರಡು ನಾಗರ ಚಿತ್ರಗಳಿರುವ ಕಲ್ಲುಗಳು ಪತ್ತೆಯಾಗಿದ್ದವು.

ಈಗ ಹೊಸದಾಗಿ ಘಟಸರ್ಪ ನಾಗರಕಲ್ಲು ಪತ್ತೆಯಾಗಿರುವುದರಿಂದ, ‘ಲಕ್ಕುಂಡಿಯ ಪುರಾತನ ಸಂಪತ್ತನ್ನು ಸರ್ಪಗಳು ಕಾಯುತ್ತಿವೆಯೇ’ ಎಂಬ ಪ್ರಶ್ನೆಗಳು ಸ್ತಳೀಯರಲ್ಲಿ ಉದ್ಭವವಾಗಿವೆ.

ಮತ್ತೊಂದೆಡೆ, ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ 9ನೇ ದಿನದಂದು ಹಲವಾರು ವಿಸ್ಮಯಕಾರಿ ಪುರಾತನ ಶಿಲ್ಪಗಳು ಪತ್ತೆಯಾಗಿವೆ. ವಿಶೇಷವಾಗಿ, ಉತ್ಖನನಕಾರರಿಗೆ ಹಳೆಯ ಮನೆಗಳು ಮತ್ತು ತೋಟದ ಮನೆಗಳ ಗೋಡೆಗಳಲ್ಲಿ ಚಾಲುಕ್ಯ ಮತ್ತು ರಾಷ್ಟ್ರಕೂಟರ ಕಾಲದ ಶಿಲೆಗಳು ಗೋಚರಿಸಿವೆ. ಇದು ಲಕ್ಕುಂಡಿಯ ಶ್ರೀಮಂತ ಐತಿಹಾಸಿಕ ಪರಂಪರೆಯನ್ನು ಮತ್ತಷ್ಟು ಎತ್ತಿ ಹಿಡಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು, ನಾಲ್ವರಿಗೆ ಗಾಯ – Kannada News | Hubballi House Distribution Event Marred by Cutout Collapse, Four Hospitalised

ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಅವಘಡ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಅವುಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ, ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಅವು ಕುಸಿದು ಬಿದ್ದಿವೆ. ಈ ಅವಘಡದಲ್ಲಿ ಸರಿಸುಮಾರು ನಾಲ್ಕು ಜನರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ದೊಡ್ಡ ಅವಘಡ ಸಂಭವಿಸಿಲ್ಲ. ಕುಸಿದುಬಿದ್ದ ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾರವಾರ: ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್​ ಪಿಕಳೆ ಕೇಸ್​ನಲ್ಲಿ ಇಬ್ಬರು ಅಂದರ್ – Kannada News | Rajiv Pikale of Pikale Family Dies by Suicide; two Arrested for Viral Expired Medicine Video

ರಾಜೀವ್​ ಪಿಕಳೆ ಕೇಸ್​ನಲ್ಲಿ ಹರಿಶ್ಚಂದ್ರ, ಸುಭಾಷ್ ಅರೆಸ್ಟ್

ಕಾರವಾರ, ಜನವರಿ 24: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ರಾಜೀವ್​ ಪಿಕಳೆ ಆತ್ಮಹತ್ಯೆ (Rajiv Pikale case) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ತನ್ನ ತೇಜೋವಧೆಯಾದ ಕಾರಣ ಪಿಕಳೆ, ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಸಾವಿಗೆ ಶರಣಾಗಿದ್ದರು. ಇದೀಗ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಅವಧಿ ಮೀರಿದ ಮಾತ್ರೆ ನೀಡಿದ್ದ ವೈದ್ಯ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಪಿಕಳೆ ಕುಟುಂಬದ ಹಿರಿಯ ರಾಜೀವ್ ಪಿಕಳೆ ಸಾವನ್ನಪ್ಪಿದ್ದರು. ಆರ್ಥಿಕವಾಗಿ ಗಟ್ಟಿಯಾಗಿಯೇ ಇದ್ದ ಪಿಕಳೆ, ಒಂಟಿಯಾಗಿ ವಾಸಿಸುತ್ತಿದ್ದರು. ಪಿಕಳೆ ಕುಟುಂಬ ಕಾರವಾರದಲ್ಲಿ ಎರಡು ತಲೆಮಾರಿನಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿದೆ. ಕೆಲ ದಿನಗಳ ಹಿಂದೆ ರಾಜೀವ್​ ಪಿಕಳೆ ರೋಗಿಗೆ ಅವಧಿ ಮುಗಿದಿರುವ ಮಾತ್ರೆ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರಿಂದ ಮನನೊಂದ ಪಿಕಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭಾಷ್, ಹರಿಶ್ಚಂದ್ರ ಎನ್ನುವವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿರುವ ಇವರನ್ನು​ ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ ಡಬಲ್​​ ಬ್ಯಾರಲ್​​ ಗನ್​​ನಿಂದ ಶೂಟ್​​ ಮಾಡಿಕೊಂಡು ವ್ಯಕ್ತಿ ಆತ್ಮಹತ್ಯೆ: ಸಾವಿಗೆ ಕಾರಣವಾಗಿದ್ದು ಒಂದು ವಿಡಿಯೋ!

ಜಾಲತಾಣದಲ್ಲಿ ವೀಡಿಯೋ ವೈರಲ್ ಆದ ನಂತರ ಮನನೊಂದಿದ್ದ ರಾಜೀವ್ ಪಿಕಳೆ ಸಾಕಷ್ಟು ನೊಂದಿದ್ದರು. ಇದಲ್ಲದೇ ಅವಧಿ ಮುಗಿದ ಔಷಧ ನೀಡಿದ್ದಕ್ಕೆ ತನ್ನಿಂದ ತಪ್ಪಾಗಿದೆ ಎಂದು ಕ್ಷಮೆಯೂ ಕೇಳಿದ್ದರು. ಆದರೆ ವಿಡಿಯೋ ಹೆಚ್ಚು ವೈರಲ್ ಆಗಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದ ಅವರು, ಡೆತ್ ನೋಟ್​ನಲ್ಲಿ ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದು ಡಬಲ್ ಬ್ಯಾರಲ್​​ ಗನ್​ನಿಂದ ಶೂಟ್​​ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇದು ಟೀಮ್ ಇಂಡಿಯಾ, ಟಿ20 ವಿಶ್ವಕಪ್​ಗೂ ಮುನ್ನ ಇತರೆ ತಂಡಗಳಿಗೆ ಎಚ್ಚರಿಕೆ! – Kannada News | Maybe against India, 300 might be enough to defend: Mitchell Santner

ಭಾರತದ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ನ್ಯೂಝಿಲೆಂಡ್ ತಂಡ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿದೆ. ಅದು ಕೂಡ 209 ರನ್​ಗಳನ್ನು ಕೇವಲ 15.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ 200+ ಸ್ಕೋರ್ ಚೇಸ್ ಮಾಡಿ ಅತ್ಯಧಿಕ ಎಸೆತಗಳನ್ನು ಬಾಕಿಯಿರಿಸಿದ ತಂಡವೆಂಬ ಖ್ಯಾತಿ ಭಾರತದ ಪಾಲಾಗಿದೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

ಈ ಪಂದ್ಯದ ಬಳಿಕ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ನೀಡಿದ ಹೇಳಿಕೆಯು ಇದೀಗ ಇತರೆ ತಂಡಗಳಿಗೆ ಎಚ್ಚರಿಕೆಯಾಗಿ ಪರಿಗಣಿಸಲಾಗುತ್ತಿದೆ. ಏಕೆಂದರೆ ಭಾರತ ತಂಡವನ್ನು ಭಾರತದಲ್ಲಿ ಎದುರಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ಮುಂಬರುವ ಟಿ20 ವಿಶ್ವಕಪ್ ನಡೆಯಲಿರುವುದು ಭಾರತ ಮತ್ತು ಶ್ರೀಲಂಕಾದಲ್ಲಿ.

ಇತ್ತ ಬಹುತೇಕ ಪಂದ್ಯಗಳು ಭಾರತದಲ್ಲೇ ನಡೆಯುವುದರಿಂದ ಟೀಮ್ ಇಂಡಿಯಾವನ್ನು ಎದುರಿಸಲು ಅಲ್ಪ ಸ್ವಲ್ಪ ರನ್​ಗಳಿಸಿದರೆ ಸಾಕಾಗುವುದಿಲ್ಲ ಎಂಬುದಕ್ಕೆ ಮಿಚೆಲ್ ಸ್ಯಾಂಟ್ನರ್ ನೀಡಿರುವ ಹೇಳಿಕೆಯೇ ಸಾಕ್ಷಿ.

ಕಠಿಣ ಗುರಿ ನೀಡಿದರೂ ಗೆಲ್ಲಲಾಗದಿರುವ ಬಗ್ಗೆ ಮಾತನಾಡಿದ ಮಿಚೆಲ್ ಸ್ಯಾಂಟ್ನರ್, ಟೀಮ್ ಇಂಡಿಯಾ ವಿರುದ್ಧ 300 ಆದರೂ ಗಳಿಸಲೇಬೇಕು. ಅಂದರೆ ಮಾತ್ರ ನಾವು ಗೆಲ್ಲುವುದನ್ನು ಎದುರು ನೋಡಬಹುದು ಎಂದಿದ್ದಾರೆ. ಏಕೆಂದರೆ ಭಾರತದ ಬ್ಯಾಟಿಂಗ್ ಲೈನಪ್ ಆಗಿದೆ. ಅವರ ಮುಂದೆ 200 ಅಥವಾ 210 ರನ್​ಗಳು ಸಾಕಾಗುವುದಿಲ್ಲ.

ಟೀಮ್ ಇಂಡಿಯಾ ಬ್ಯಾಟರ್​ಗಳು ಈಗಾಗಲೇ ಟಿ20 ವಿಶ್ವಕಪ್​ಗಾಗಿ ಸಿಡಿಯರಾಂಭಿಸಿದ್ದಾರೆ. ಹೀಗಾಗಿ ಭಾರತದ ವಿರುದ್ಧ ಗೆಲ್ಲಬೇಕಿದ್ದರೆ 300 ರನ್​ ಆದರೂ ಗಳಿಸಲೇಬೇಕು ಎಂದು ಮಿಚೆಲ್ ಸ್ಯಾಂಟ್ನರ್ ಹೇಳಿದ್ದಾರೆ.

ಮಿಚೆಲ್ ಸ್ಯಾಂಟ್ನರ್ ಅವರ ಇಂತಹ ಹೇಳಿಕೆಗೆ ಮುಖ್ಯ ಕಾರಣ ಭಾರತ ತಂಡವು ಕೇವಲ 6 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಆ ಬಳಿಕ ಅಬ್ಬರಿಸಿದ ರೀತಿ. ಅಂದರೆ ಮೊದಲೆರಡು ಓವರ್​ಗಳಲ್ಲಿ ಸ್ಫೋಟಕ ದಾಂಡಿಗರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾರನ್ನು ಔಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ: ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ

ಅದರಲ್ಲೂ ಅಭಿಷೇಕ್ ಶರ್ಮಾ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಆದರೆ ಆ ಬಳಿಕ ಬಂದ ಇಶಾನ್ ಕಿಶನ್ ಸಿಡಿಲಬ್ಬರಕ್ಕೆ ಕಿವೀಸ್ ಬೌಲರ್​ಗಳೇ ದಂಗಾದರು. ಅಲ್ಲದೆ ಇಶಾನ್ ಕಿಶನ್ ಕೇವಲ 32 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 76 ರನ್ ಚಚ್ಚಿದರು. ಇನ್ನು ನಾಯಕ ಸೂರ್ಯಕುಮಾರ್ ಯಾದವ್ ಅಜೇಯ 82 ರನ್​ಗಳಿಸಿದರು. ಅದು ಕೂಡ ಕೇವಲ 37 ಎಸೆತಗಳಲ್ಲಿ.

ಆ ಬಳಿಕ ಬಂದ ಶಿವಂ ದುಬೆ 18 ಎಸೆತಗಳಲ್ಲಿ ಬಾರಿಸಿದ್ದು ಬರೋಬ್ಬರಿ 36 ರನ್​ಗಳು. ಈ ಮೂಲಕ ಭಾರತ ತಂಡವು 28 ಎಸೆತಗಳು ಬಾಕಿಯಿರುವಂತೆಯೇ 209 ರನ್​ಗಳಿಸಿ ಭರ್ಜರಿ ಜಯ ದಾಖಲಿಸಿತ್ತು. ಹೀಗಾಗಿಯೇ ಭಾರತದ ವಿರುದ್ಧ ಗೆಲ್ಲಲು 300 ರನ್​ ಆದರೂ ಗಳಿಸಬೇಕು ಎಂದು ಮಿಚೆಲ್ ಸ್ಯಾಂಟ್ನರ್ ಹೇಳಿದ್ದಾರೆ.

Source link

ಮದುವೆ ಮನೆಗೆ ಸೂತಕ ತಂದ ದಾಳಿಕೋರ: ಆತ್ಮಾಹುತಿ ಬಾಂಬ್ ದಾಳಿಗೆ 7 ಜನ ಸಾವು – Kannada News | Pakistan Wedding Bombing: Khyber Pakhtunkhwa Suicide Attack Kills 7

ಪಾಕಿಸ್ತಾನ , ಜ.24: ಪಾಕಿಸ್ತಾನದ (Pakistan) ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಹತ್ತು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಪಾಕ್​​ನಲ್ಲಿ ನಡೆಯುತ್ತಿದ್ದ ಮದುವೆ ಮನೆಯಲ್ಲಿ ಬಾಂಬ್​​​​​​ ಸ್ಫೋಟಗೊಂಡಿದೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಕುರೇಶಿ ಮೋರ್ ಸಮೀಪವಿರುವ ಶಾಂತಿ ಸಮಿತಿ (Peace Committee) ನಾಯಕ ನೂರ್ ಆಲಂ ಮೆಹ್ಸೂದ್ ಅವರ ಮನೆಯಲ್ಲಿ ಈ ದಾಳಿ ನಡೆದಿದೆ. ಮದುವೆ ಸಮಾರಂಭದಲ್ಲಿದ್ದ ಮನೆಯವರಿಗೆ ಇದು ಬಿಗ್​​ ಶಾಕ್ ನೀಡಿದೆ. ಈ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದ ಸಮಯದಲ್ಲಿ ದಾಳಿಕೋರ ಆತ್ಮಾಹುತಿ ಮಾಡಿಕೊಳ್ಳುವ ಮೂಲಕ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ವರದಿಗಳ ಪ್ರಕಾರ, ಘಟನೆಯಲ್ಲಿ 7 ಜನರು ಮೃತಪಟ್ಟಿದ್ದಾರೆ ಮತ್ತು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆರಂಭದಲ್ಲಿ ಸಾವಿನ ಸಂಖ್ಯೆ 5 ಎಂದು ವರದಿಯಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಸಾವಿನ ಸಂಖ್ಯೆ ಏರಿಕೆಯಾಗಿದೆ.

ಸರ್ಕಾರದ ಪರವಾಗಿರುವ ಶಾಂತಿ ಸಮಿತಿ ನಾಯಕನನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. ಮೃತರಲ್ಲಿ ಶಾಂತಿ ಸಮಿತಿಯ ಮತ್ತೊಬ್ಬ ಪ್ರಮುಖ ನಾಯಕ ವಹೀದುಲ್ಲಾ ಮೆಹ್ಸೂದ್ (ಜಿಗ್ರಿ ಮೆಹ್ಸೂದ್) ಕೂಡ ಸೇರಿದ್ದಾರೆ. ಬಾಂಬ್ ಸ್ಫೋಟದ ತೀವ್ರತೆಗೆ ಮದುವೆ ನಡೆಯುತ್ತಿದ್ದ ಕೊಠಡಿಯ ಛಾವಣಿ ಕುಸಿದು ಬಿದ್ದಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲು ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಹರಸಾಹಸ ಪಟ್ಟಿವೆ.ಇದುವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯು ಅಧಿಕೃತವಾಗಿ ಹೊಣೆ ಹೊತ್ತುಕೊಂಡಿಲ್ಲ. ಆದರೆ, ಈ ಭಾಗದಲ್ಲಿ ಸಕ್ರಿಯವಾಗಿರುವ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ಈ ಕೃತ್ಯದ ಹಿಂದೆ ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಗಾಯಾಳುಗಳನ್ನು ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿ ಇದೆ.ಪಾಕಿಸ್ತಾನದ ಅಧಿಕಾರಿಗಳು ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ಈ ಘಟನೆಯು ಆ ಪ್ರದೇಶದಲ್ಲಿ ಮತ್ತೆ ಭಯೋತ್ಪಾದನೆಯ ಕರಿನೆರಳು ಆವರಿಸಿರುವುದನ್ನು ಸಾಬೀತುಪಡಿಸಿದೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಾದ್ಯಂತ, ವಿಶೇಷವಾಗಿ ಡೇರಾ ಇಸ್ಮಾಯಿಲ್ ಖಾನ್ ಮತ್ತು ಪೇಶಾವರ ನಗರಗಳಲ್ಲಿ ‘ಹೈ ಅಲರ್ಟ್’ ಘೋಷಿಸಲಾಗಿದೆ. ಸಾರ್ವಜನಿಕ ಸಮಾರಂಭಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ: Video: ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ

ಘಟನೆ ನಡೆದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಾಕಿಸ್ತಾನಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ. ದಾಳಿಕೋರನಿಗೆ ನೆರವು ನೀಡಿದವರನ್ನು ಪತ್ತೆಹಚ್ಚಲು ಮನೆ-ಮನೆ ತಪಾಸಣೆ ನಡೆಸಲಾಗುತ್ತಿದೆ. ಅಫ್ಘಾನಿಸ್ತಾನದ ಗಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಟಿಟಿಪಿ (TTP) ಉಗ್ರರು ಗಡಿ ದಾಟಿ ಬರುವ ಸಾಧ್ಯತೆ ಇರುವುದರಿಂದ ಡ್ರೋನ್ ಮೂಲಕ ನಿಗಾ ಇಡಲಾಗುತ್ತಿದೆ.ಸ್ಥಳೀಯ ಆಸ್ಪತ್ರೆಗಳಲ್ಲಿ ‘ಮೆಡಿಕಲ್ ಎಮರ್ಜೆನ್ಸಿ’ ಘೋಷಿಸಲಾಗಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಹೆಚ್ಚಿನ ವೈದ್ಯರನ್ನು ನಿಯೋಜಿಸಲಾಗಿದೆ.

ವಿದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version