‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಡಿಸೆಂಬರ್ನಲ್ಲಿ ತಮ್ಮ ಮೊದಲ ಚಿತ್ರದೊಂದಿಗೆ ಆದಿತ್ಯ ಧರ್ 1,300 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದರು. ಕೆಲವೇ ತಿಂಗಳುಗಳ ನಂತರ, 1,000 ಕೋಟಿ ಕ್ಲಬ್ಗೆ ಪ್ರವೇಶಿಸುವ ಮೂಲಕ ಅವರು ಮತ್ತೊಮ್ಮೆ ಸುದ್ದಿ ಆಗಿದ್ದಾರೆ. ‘ಧುರಂಧರ್ 2’ ಚಿತ್ರವು ಕೇವಲ 12 ದಿನಗಳಲ್ಲಿ ಇಡೀ ಬಾಕ್ಸ್ ಆಫೀಸ್ ಅನ್ನು ಅಲುಗಾಡಿಸಿದೆ. ಎರಡನೇ ಶನಿವಾರ ಮತ್ತು ಭಾನುವಾರದಂದು ನಡೆದ ಕಲೆಕ್ಷನ್ಗೆ ಹೋಲಿಸಿದರೆ ಎರಡನೇ ಸೋಮವಾರ ಚಿತ್ರದ ಗಳಿಕೆ ಗಮನಾರ್ಹವಾಗಿ ಕುಸಿದಿದೆ.
‘ಧುರಂಧರ್ 2’ ಚಿತ್ರವು ತನ್ನ 12ನೇ ದಿನದಂದು ಭಾರತೀಯ ಬಾಕ್ಸ್ ಆಫೀಸ್ನಲ್ಲಿ ತುಂಬಾ ಕಡಿಮೆ ಗಳಿಕೆ ಮಾಡಿದೆ. ‘ಧುರಂಧರ್ 2’ ಚಿತ್ರ ಸೋಮವಾರ 25 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ತವಾಗಿದೆ. ಈ ಚಿತ್ರ 2 ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವುದು ಅನುಮಾನ ಎನ್ನಲಾಗುತ್ತಿದೆ. 12 ನೇ ದಿನದ ಆಕ್ಯುಪೆನ್ಸಿ ಶೇಕಡಾ 23.4 ರಷ್ಟಿತ್ತು. ಚಿತ್ರದ ಭಾನುವಾರದ ಗಳಿಕೆಗೆ ಹೋಲಿಕೆ ಮಾಡಿದರೆ (68 ಕೋಟಿ ರೂಪಾಯಿ) ಸೋಮವಾರದ ಕಲೆಕ್ಷನ್ ಭಾರೀ ಹಿನ್ನಡೆ ಆಗಿದೆ.
‘ಧುರಂಧರ್ 2’ ಚಿತ್ರದ ಒಟ್ಟು ಗಳಿಕೆ 875.17 ಕೋಟಿ ಆದರೆ, ಗ್ರಾಸ್ ಕಲೆಕ್ಷನ್ ಸಾವಿರ ಕೋಟಿ ರೂಪಾಯಿ ದಾಟಿದೆ. ವಿಶ್ವ ಮಟ್ಟದಲ್ಲಿ ಸಿನಿಮಾ 1392 ಕೋಟಿ ಗಳಿಸಿದೆ. ವಿದೇಶದಿಂದ ಸಿನಿಮಾಗೆ 300ಕ್ಕೂ ಅಧಿಕ ಕೋಟಿ ರೂಪಾಯಿ ಹರಿದು ಬಂದಿದೆ. ಏತನ್ಮಧ್ಯೆ, 12ನೇ ದಿನ ಅತಿ ಹೆಚ್ಚು ಗಳಿಕೆ ಮಾಡಿದ ಹಿಂದಿ ಚಲನಚಿತ್ರಗಳ ಪಟ್ಟಿಯಲ್ಲಿ ‘ಧುರಂಧರ್ 2’ ಮೂರನೇ ಸ್ಥಾನದಲ್ಲಿದೆ.
‘ಧುರಂಧರ್ 2’ ವಿಶ್ವ ಮಟ್ಟದ ಗಳಿಕ 1400 ಕೋಟಿ ರೂಪಾಯಿ ಆಸುಪಾಸಿನಲ್ಲಿದೆ. ಈ ಚಿತ್ರದ ಗಳಿಕೆ ನಿಧಾನಗತಿ ಅನುಸರಿಸಿದ್ದರಿಂದ 2 ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವುದು ಚಿತ್ರಕ್ಕೆ ಕಷ್ಟ ಆಗಬಹುದು ಎಂದು ಹೇಳಲಾಗುತ್ತಾ ಇದೆ. ದಂಗಲ್ ಸಿನಿಮಾದ ಗಳಿಕೆ 2 ಸಾವಿರ ಕೋಟಿ ರೂಪಾಯಿ ಇದೆ. ಈ ದಾಖಲೆಯನ್ನು ಸಿನಿಮಾ ಮುರಿಯುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.
ಬೆಂಗಳೂರು, ಮಾರ್ಚ್ 31: ಕರ್ನಾಟಕ ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2026ನೇ ಸಾಲಿನ ಪ್ರಥಮ ಪಿಯುಸಿ (1st PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ಇದೇ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಫಲಿತಾಂಶ ಪ್ರಕಟಣೆಯಲ್ಲಿ ಕೊಂಚ ಬದಲಾವಣೆ
ಈ ಬಾರಿ ಫಲಿತಾಂಶ ಪ್ರಕಟಿಸುವ ವಿಧಾನದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಒಂದೇ ವೇಳೆ ಫಲಿತಾಂಶ ಲಭ್ಯವಾಗಿಲ್ಲ. ಹಂತ ಹಂತವಾಗಿ ಫಲಿತಾಂಶಗಳನ್ನು ಬಿಡುಗಡೆ ಮಾಡುವ ಕ್ರಮವನ್ನು ಮಂಡಳಿ ಅನುಸರಿಸಿದೆ. ಇದರ ಪರಿಣಾಮವಾಗಿ, ಕೆಲವು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮೊದಲು ಫಲಿತಾಂಶ ಲಭ್ಯವಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳ ಕಾಲೇಜುಗಳಿಗೆ ಮೊದಲ ಹಂತದಲ್ಲೇ ಫಲಿತಾಂಶ ತಲುಪುವ ಸಾಧ್ಯತೆ ಇದ್ದು, ಇತರ ಪ್ರದೇಶಗಳ ವಿದ್ಯಾರ್ಥಿಗಳು ಸ್ವಲ್ಪ ಸಮಯ ಕಾಯಬೇಕಾಗಬಹುದು.
ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2026: ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ?
ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಲು ಈ ಸರಳ ಹಂತಗಳನ್ನು ಅನುಸರಿಸಿ;
ಹಂತ 1: ಮೊದಲಿಗೆ ಕರ್ನಾಟಕ ಪರೀಕ್ಷಾ ಫಲಿತಾಂಶದ ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಕಾಣಿಸುವ ‘1st PUC Annual Exam Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3: ಈಗ ಹೊಸ ಪುಟ ತೆರೆಯುತ್ತದೆ, ಅಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು (Registration Number) ನಮೂದಿಸಿ.
ಹಂತ 4: ನಿಮ್ಮ ವಿಷಯದ ಸ್ಟ್ರೀಮ್ (Science/Arts/Commerce) ಅನ್ನು ಆಯ್ಕೆ ಮಾಡಿ.
ಹಂತ 5: ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ 6: ನಿಮ್ಮ ಫಲಿತಾಂಶವು ಪರದೆಯ ಮೇಲೆ ಕಾಣಿಸುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಇದನ್ನು ಡೌನ್ಲೋಡ್ ಮಾಡಿಕೊಳ್ಳಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ.
kseab.karnataka.gov.in
ಈ ಎರಡು ವೆಬ್ಸೈಟ್ಗಳಲ್ಲಿ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.
ವೆಬ್ಸೈಟ್ ಮೇಲೆ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಫಲಿತಾಂಶ ಪ್ರಕಟಣೆಯಲ್ಲಿ ಕೊಂಚ ಬದಲಾವಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಮಂಡಳಿ ಸೂಚಿಸಿದ್ದು, ದಿನದ ಅವಧಿಯಲ್ಲಿ ಎಲ್ಲರಿಗೂ ಫಲಿತಾಂಶ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದೆ.
ಬೀಜಿಂಗ್, ಮಾರ್ಚ್ 31: ಡ್ಯಾನ್ಸ್ ಮಾಡುತ್ತಾ ಬಂದು ರೋಬೋಟ್ ಬಾಲಕನ ಕೆನ್ನೆಗೆ ಹೊಡೆದಿರುವ ಘಟನೆ ಚೀನಾದಲ್ಲಿ ನಡೆದಿದೆ. ಮಾರ್ಚ್ 21ರಂದು ಚೀನಾದ ಶಾಂಕ್ಸಿಯಲ್ಲಿ ನಡೆದ ತಂತ್ರಜ್ಞಾನ ಪ್ರದರ್ಶನದಲ್ಲಿ ಈ ಘಟನೆ ನಡೆದಿದೆ.ರೋಬೋಟ್ ಯುನಿಟ್ರೀ ರೊಬೊಟಿಕ್ಸ್ ಅಭಿವೃದ್ಧಿಪಡಿಸಿದ G1 ಹ್ಯೂಮನಾಯ್ಡ್ ಮಾದರಿ ಎಂದು ಹೇಳಲಾಗುತ್ತಿದೆ. ಸುಮಾರು 35 ಕಿಲೋಗ್ರಾಂಗಳಷ್ಟು ತೂಕ ಮತ್ತು ಸುಮಾರು 13,500 ಡಾಲರ್ ಬೆಲೆಯ ಈ ಯಂತ್ರವನ್ನು ಪ್ರಾಥಮಿಕವಾಗಿ ಸಂಶೋಧನೆ, ಶೈಕ್ಷಣಿಕ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ.
ಭಾರತೀಯ ಸಂಸ್ಕೃತಿಯಲ್ಲಿ ಹನುಮ ಜಯಂತಿಯು ಕೇವಲ ಒಂದು ಹಬ್ಬವಲ್ಲ; ಅದು ಅಚಲ ಭಕ್ತಿ ಮತ್ತು ಅಪ್ರತಿಮ ಸಾಹಸದ ಸಂಕೇತ. ಹನುಮಂತನನ್ನು ಭಕ್ತಿ, ಶಕ್ತಿ, ಧೈರ್ಯ ಮತ್ತು ಕರ್ಮ ಜ್ಞಾನದ ಮೂರ್ತರೂಪವೆಂದು ಪೂಜಿಸಲಾಗುತ್ತದೆ. ವಾಯುದೇವನ ಮಗನಾದ್ದರಿಂದ ಅವನನ್ನು “ಮಾರುತಿ”, “ಆಂಜನೇಯ” ಮತ್ತು “ಪವನಸುತ” ಎಂಬ ದಿವ್ಯ ನಾಮಗಳಿಂದ ಕರೆಯಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚೈತ್ರ ಮಾಸದ ಹುಣ್ಣಿಮೆ ತಿಥಿಯು ಏಪ್ರಿಲ್ 1 ರ ಬೆಳಗ್ಗೆ7.06 ರಿಂದ ಶುರುವಾಗಿ ಏಪ್ರಿಲ್ 2 ರ ಬೆಳಗ್ಗೆ 7. 41ಕ್ಕೆ ಕೊನೆಗೊಳ್ಳುವುದು. ಆದ್ದರಿಂದ ಈ ಪವಿತ್ರ ಹಬ್ಬವನ್ನು ಏಪ್ರಿಲ್ 2 ರಂದು ಭಕ್ತಿ ಸಡಗರದಿಂದ ಆಚರಿಸಲಾಗುತ್ತಿದೆ.
ಹನುಮಂತನ ಜನ್ಮದ ಹಿಂದೆ ಒಂದು ರೋಚಕ ಕಥೆಯಿದೆ. ಅಂಜನಾದೇವಿ ಮತ್ತು ಕೇಸರಿ ದಂಪತಿಗಳು ಪುತ್ರ ಸಂತಾನಕ್ಕಾಗಿ ಶಿವನನ್ನು ಕುರಿತು ಕಠಿಣ ತಪಸ್ಸು ಮಾಡುತ್ತಾರೆ. ಅಂಜನಾದೇವಿಯ ಭಕ್ತಿಗೆ ಮೆಚ್ಚಿದ ಪರಶಿವನು ತನ್ನ ಅಂಶವನ್ನೇ ಮಗನಾಗಿ ನೀಡಲು ಅನುಗ್ರಹಿಸುತ್ತಾನೆ. ವಾಯುದೇವನು ಶಿವನ ದಿವ್ಯ ಶಕ್ತಿಯನ್ನು ಹೊತ್ತು ತಂದು ಅಂಜನಾದೇವಿಗೆ ತಲುಪಿಸಿದ ಕಾರಣ, ಹನುಮಂತನು ವಾಯುಪುತ್ರನಾಗಿ ಜನಿಸುತ್ತಾನೆ. ಈ ದಿನವನ್ನು ನಾವು ಹನುಮ ಜಯಂತಿಯನ್ನಾಗಿ ಆಚರಿಸಿ, ಆ ಮಹಾಶಕ್ತಿಯನ್ನು ಸ್ಮರಿಸುತ್ತೇವೆ.
ಹನುಮಂತನ ಜೀವನವು ನಮಗೆ “ಭಕ್ತಿ”ಯ ನಿಜವಾದ ಅರ್ಥವನ್ನು ಕಲಿಸುತ್ತದೆ. ಶ್ರೀರಾಮನ ಪರಮ ಭಕ್ತನಾಗಿ, ಅವನು ತನ್ನ ಸಂಪೂರ್ಣ ಅಸ್ತಿತ್ವವನ್ನೇ ದೈವಸೇವೆಗೆ ಸಮರ್ಪಿಸಿದವನು. ಹನುಮಂತನನ್ನು ಪೂಜಿಸುವುದರಿಂದ ಭಕ್ತರಲ್ಲಿ ಪ್ರಾಮಾಣಿಕತೆ ಮೂಡುತ್ತದೆ ಮತ್ತು ಕಷ್ಟದ ಸಮಯದಲ್ಲಿ ಮನಸ್ಸು ಹಾಗೂ ದೇಹದ ಸಮರ್ಪಣೆಯಿಂದ ಪ್ರಾರ್ಥಿಸಿದರೆ ಎಂತಹ ಸಂಕಷ್ಟಗಳಿಂದಲೂ ರಕ್ಷಣೆ ಸಿಗುತ್ತದೆ ಎಂಬುದು ಭಕ್ತರ ಅಚಲ ನಂಬಿಕೆ. ಅವನು ಪ್ರತಿ ಭಕ್ತನಿಗೂ ಒಂದು ಆದರ್ಶ ಮಾರ್ಗದರ್ಶಕನಾಗಿದ್ದಾನೆ.
ದೈಹಿಕ ಮತ್ತು ಮಾನಸಿಕ “ಶಕ್ತಿ”ಯ ವಿಚಾರಕ್ಕೆ ಬಂದರೆ ಹನುಮಂತನೇ ಸರ್ವೋಚ್ಚ. ಧೈರ್ಯ, ಸಾಹಸ ಮತ್ತು ಬದ್ಧತೆಯ ಸಾಕಾರ ರೂಪ ಆತ. ಹನುಮಂತನ ಆರಾಧನೆಯು ಭಕ್ತರಲ್ಲಿ ಆತ್ಮವಿಶ್ವಾಸ ಮತ್ತು ಇಚ್ಛಾಶಕ್ತಿಯನ್ನು ತುಂಬುತ್ತದೆ. ಅಹಂಕಾರ ಮತ್ತು ದುರಾಸೆಯಿಂದ ಮುಕ್ತವಾದ “ಕರ್ಮ” ಹನುಮಂತನ ಮತ್ತೊಂದು ವಿಶೇಷತೆ. ತನ್ನಲ್ಲಿ ಅಪಾರ ಶಕ್ತಿಯಿದ್ದರೂ ಅದನ್ನು ಸ್ವಂತಕ್ಕಲ್ಲದೆ, ಕೇವಲ ಪರಮಾತ್ಮನ ಮತ್ತು ಧರ್ಮದ ಸೇವೆಗಾಗಿ ಬಳಸಿದ ಮಹಾನುಭಾವ ಈತ.
ಈ ಪವಿತ್ರ ದಿನದಂದು ಭಕ್ತರು ಸೂರ್ಯೋದಯಕ್ಕೂ ಮುನ್ನವೇ ಎದ್ದು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಹನುಮಾನ್ ಚಾಲೀಸಾದ ಪಠಣವು ವಾತಾವರಣದಲ್ಲಿ ಆಧ್ಯಾತ್ಮಿಕ ಕಂಪನವನ್ನು ಸೃಷ್ಟಿಸುತ್ತದೆ. ಅನೇಕರು ಉಪವಾಸ ವ್ರತವನ್ನು ಆಚರಿಸುವ ಮೂಲಕ ಶಾಂತಿ ಮತ್ತು ಆರೋಗ್ಯವನ್ನು ವೃದ್ಧಿಸಿಕೊಳ್ಳುತ್ತಾರೆ. ಮೂರ್ತಿಯನ್ನು ಹೂವು, ಹಣ್ಣು ಮತ್ತು ಪಂಚಾಮೃತಗಳಿಂದ ಪೂಜಿಸಿ, ಧ್ಯಾನ ಮತ್ತು ಜಪದ ಮೂಲಕ ಹನುಮಂತನ ಮಹಿಮೆಯನ್ನು ಕೊಂಡಾಡಲಾಗುತ್ತದೆ.
ಹನುಮ ಜಯಂತಿಯ ಆಚರಣೆಯು ಕೇವಲ ಧಾರ್ಮಿಕ ವಿಧಿಯಲ್ಲ, ಅದು ಭಕ್ತರ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತರುತ್ತದೆ. ಇದು ಮನಸ್ಸಿನ ಭಯ ಮತ್ತು ಆತಂಕಗಳನ್ನು ದೂರಮಾಡಿ, ದೈಹಿಕ ಹಾಗೂ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೀವನದ ಕಠಿಣ ಪರಿಸ್ಥಿತಿಗಳಲ್ಲಿ ತಾಳ್ಮೆ ಮತ್ತು ಧೈರ್ಯದಿಂದ ವರ್ತಿಸುವ ಕಲೆಯನ್ನು ಇದು ಕಲಿಸುತ್ತದೆ. ಅಂತಿಮವಾಗಿ, ಶ್ರೀರಾಮನ ಮೇಲಿನ ಭಕ್ತಿಯ ಮೂಲಕ ಧರ್ಮಮಾರ್ಗದಲ್ಲಿ ನಡೆಯಲು ಹನುಮಂತನು ನಮಗೆ ದಾರಿದೀಪವಾಗುತ್ತಾನೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 31: ಮುಂಬರುವ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಉಪಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿದ್ದು, ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಶ್ರೀನಿವಾಸ್ ದಾಸ್ ಕರಿಯಪ್ಪ ಪರವಾಗಿ ಮತ್ತು ಬಾಗಲಕೋಟೆಯಲ್ಲಿ ವೀರಣ್ಣ ಚಾರಂತಿಮಠ್ ಪರವಾಗಿ ಪ್ರಚಾರಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಅವರು ಮಾತನಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಪ್ರಸ್ತುತ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದ ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಹಿತವನ್ನು ಸಂಪೂರ್ಣವಾಗಿ ಮರೆತು ‘ತುಘಲಕ್ ದರ್ಬಾರ್’ ನಡೆಸುತ್ತಿದೆ ಎಂದು ಟೀಕಿಸಿದರು. ಮತ್ತೊಮ್ಮೆ ಕಾಂಗ್ರೆಸ್ ಗೆದ್ದರೆ ಅದು ಭ್ರಷ್ಟಾಚಾರಕ್ಕೆ ಇನ್ನಷ್ಟು ಉತ್ತೇಜನ ನೀಡಿದಂತಾಗುತ್ತದೆ ಎಂದು ಎಚ್ಚರಿಸಿದ ಅವರು, ಎರಡೂ ಕ್ಷೇತ್ರದ ಮತದಾರರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಬೇಕು ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಆ ಮೂಲಕ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು 2024ರ ಅಕ್ಟೋಬರ್ನಲ್ಲಿ ಹೆಣ್ಣು ಮಗುವನ್ನು ಬರಮಾಡಿಕೊಂಡರು. ಮಗುವಿಗೆ ತ್ರಿದೇವಿ ಎಂದು ಹೆಸರು ಇಟ್ಟಿದ್ದರು. ಈಗ ಇವರು ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ.
ಪ್ಯಾರಿಸ್ ಐಫಿಲ್ ಟವರ್ ಎದುರು ನಿಂತು ಹರ್ಷಿಕಾ ಹಾಗೂ ಭುವನ್ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮೊದಲ ಮಗಳು ಕೂಡ ಇದ್ದಾಳೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಹರ್ಷಿಕಾ-ಭುವನ್ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.
‘ಈ ಸೆಪ್ಟೆಂಬರ್ನಲ್ಲಿ ನಮ್ಮ ತಾರಾಗಣಕ್ಕೆ ಹೊಸ ಪುಟ್ಟ ತಾರೆ ಸೇರ್ಪಡೆಯಾಗಲಿದೆ ಎಂದು ಘೋಷಿಸಲು ನಮಗೆ ತುಂಬಾ ಸಂತೋಷವಾಗಿದೆ. ನಮ್ಮ ಮನಸ್ಸು ತುಂಬಿವೆ ಮತ್ತು ಸ್ಕ್ರಿಪ್ಟ್ ಪರಿಪೂರ್ಣವಾಗಿ ಕಾಣುತ್ತದೆ. ಧನ್ಯವಾದಗಳು’ ಎಂದು ಭುವನ್ ಬರೆದುಕೊಂಡಿದ್ದಾರೆ.
ಭುವನ್ ಹಾಗೂ ಹರ್ಷಿಕಾಗೆ ದೇವರ ಮೇಲೆ ಅಪಾರ ಭಕ್ತಿ. ಅವರು ಆಗಾಗ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಾರೆ. ಅವರು ಈಗ ಮತ್ತಷ್ಟು ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ಹರ್ಷಿಕಾ ಹಾಗೂ ಭುವನ್ ಇಬ್ಬರೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಹರ್ಷಿಕಾ ‘ಚಿ. ಸೌಜನ್ಯ’ ಹೆಸರಿನ ಸಿನಿಮಾ ಅನೌನ್ಸ್ ಮಾಡಿದ್ದರು. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ ಇದೆ. ಈ ಸಿನಿಮಾ ಯಾವ ಹಂತದಲ್ಲಿದೆ ಎಂಬ ಕುತೂಹಲ ಮೂಡಿದೆ.
ಸನಾತನ ಹಿಂದೂ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದಲೂ ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ಕೃತಯುಗ, ತ್ರೇತಾಯುಗ, ದ್ವಾಪರಯುಗ ಮತ್ತು ಇಂದಿನ ಯುಗದಲ್ಲೂ ಸೌಂದರ್ಯವು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಈ ಸೌಂದರ್ಯದ ಒಂದು ಭಾಗವೇ ಉಗುರುಗಳಿಗೆ ಬಣ್ಣ ಹಚ್ಚುವುದು, ಇದನ್ನು ನಾವು ನೈಲ್ ಪಾಲಿಶ್ ಎಂದು ಕರೆಯುತ್ತೇವೆ. ಈ ಅಭ್ಯಾಸವು ಮುಖ್ಯವಾಗಿ ಮಹಿಳೆಯರಲ್ಲಿ ಹೆಚ್ಚು ಪ್ರಚಲಿತವಿದ್ದರೂ, ಕೆಲವೊಮ್ಮೆ ಪುರುಷರೂ ಇದನ್ನು ಬಳಸುವುದನ್ನು ಕಾಣಬಹುದು. ಆದರೆ, ಇದು ಕೇವಲ ಸೌಂದರ್ಯಕ್ಕೆ ಸೀಮಿತವಲ್ಲ, ನಮ್ಮ ಜ್ಯೋತಿಷ್ಯ ಶಾಸ್ತ್ರ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ, ಉಗುರು ಬಣ್ಣಗಳು ನಮ್ಮ ಜೀವನದ ಮೇಲೆ, ವಿಶೇಷವಾಗಿ ಮಾನಸಿಕ ಸ್ಥಿತಿ ಮತ್ತು ಶುಭ ಫಲಗಳ ಮೇಲೆ ಮಹತ್ವದ ಪರಿಣಾಮ ಬೀರುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.
ಉಗುರುಗಳಿಗೆ ಬಣ್ಣ ಹಚ್ಚುವುದರಿಂದ ಮಾನಸಿಕವಾಗಿ ಪರಿವರ್ತನೆ ಸಾಧ್ಯವೇ? ಯಾವ ಬಣ್ಣ ಶುಭ, ಯಾವುದು ಅಶುಭ? ಎಂಬ ಹಲವಾರು ಪ್ರಶ್ನೆಗಳಿಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ. ವಿವಿಧ ಬಣ್ಣಗಳು ಮನಸ್ಸಿನ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬುದನ್ನು ಶಾಸ್ತ್ರೋಕ್ತವಾಗಿ ವಿವರಿಸಲಾಗಿದೆ.
ಬಣ್ಣಗಳ ಪ್ರಭಾವ ಮತ್ತು ಅವುಗಳ ಅರ್ಥ:
ಕೆಂಪು ಬಣ್ಣ:
ಕೆಂಪು ಬಣ್ಣವು ಮಂಗಳನ ಪ್ರತೀಕವಾಗಿದೆ. ಇದು ಕೋಪ, ಆವೇಶ, ಮತ್ತು ತಾಪವನ್ನು ಹೆಚ್ಚಿಸುವ ಗುಣವನ್ನು ಹೊಂದಿದೆ. ಇದು ತಕ್ಷಣದ ಪ್ರತಿಕ್ರಿಯೆಗಳನ್ನು ಪ್ರಚೋದಿಸುತ್ತದೆ ಮತ್ತು ಕೆಲವೊಮ್ಮೆ ಅಹಂಕಾರ ಮತ್ತು ಹೋಲಿಕೆ ಭಾವನೆಗಳಿಗೆ ಕಾರಣವಾಗಬಹುದು. ಹಾಗಾಗಿ, ಸಂಪೂರ್ಣ ಗಾಢ ಕೆಂಪು ಬಣ್ಣಕ್ಕಿಂತ ತಿಳಿ ಕೆಂಪು ಅಥವಾ ಗುಲಾಬಿ ಬಣ್ಣದ ಛಾಯೆಗಳನ್ನು ಬಳಸುವುದರಿಂದ ನಕಾರಾತ್ಮಕ ಪರಿಣಾಮಗಳನ್ನು ಕಡಿಮೆ ಮಾಡಬಹುದು.
ಹಳದಿ ಬಣ್ಣ:
ಇದು ಗುರುವಿನ ಪ್ರತೀಕವಾಗಿದ್ದು, ಅತ್ಯಂತ ಶುಭಕರವಾಗಿದೆ. ಹಳದಿ ಬಣ್ಣವು ಮನಸ್ಸಿಗೆ ಶಾಂತಿ, ಸಹನೆ ಮತ್ತು ಜ್ಞಾನದ ಆಸಕ್ತಿಯನ್ನು ತರುತ್ತದೆ. ವಿಷಯಗಳನ್ನು ತಿಳಿದುಕೊಳ್ಳುವ ಮನೋಭಾವವನ್ನು ಹೆಚ್ಚಿಸುತ್ತದೆ. ವಿವಾಹಿತರು ಮತ್ತು ವಿವಾಹವಾಗದವರಿಗೂ ಇದು ಶುಭ ಫಲಗಳನ್ನು ನೀಡುತ್ತದೆ. ಸಕಾರಾತ್ಮಕ ಸ್ಪಂದನೆಗೆ ಹಳದಿ ಬಣ್ಣ ಸಹಕಾರಿ.
ಗುಲಾಬಿ ಮತ್ತು ಬಿಳಿ ಬಣ್ಣ:
ಶುಕ್ರನ ಪ್ರತೀಕವಾದ ಗುಲಾಬಿ ಬಣ್ಣವು ಆಕರ್ಷಣೆಯನ್ನು ಹೆಚ್ಚಿಸುತ್ತದೆ. ನಿಮ್ಮ ಮಾತು ಮತ್ತು ಕೃತಿಗಳಲ್ಲಿ ಸೌಮ್ಯತೆಯನ್ನು ತರುತ್ತದೆ, ಇದರಿಂದ ಇತರರು ನಿಮ್ಮ ಕಡೆಗೆ ಆಕರ್ಷಿತರಾಗುತ್ತಾರೆ. ಬಿಳಿ ಬಣ್ಣವು ಸ್ಪಷ್ಟತೆ ಮತ್ತು ಮಾನಸಿಕ ನೆಮ್ಮದಿಯನ್ನು ಸೂಚಿಸುತ್ತದೆ. ಇದು ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ ಮತ್ತು ಅತ್ಯಂತ ಸೂಕ್ಷ್ಮವಾದ ಬಣ್ಣವಾಗಿದೆ.
ಹಸಿರು ಬಣ್ಣ:
ಹಸಿರು ಬಣ್ಣವು ವ್ಯಾಪಾರ, ವಿಷಯ ಮಂಡನೆ, ಶಿಕ್ಷಣ ಕ್ಷೇತ್ರ, ಮತ್ತು ನಿರೂಪಕರಿಗೆ ಶುಭ ಫಲಗಳನ್ನು ನೀಡುತ್ತದೆ. ಇದು ಸ್ಪಷ್ಟ ಸಂವಹನ ಮತ್ತು ವ್ಯವಹಾರ ಮನೋಭಾವಕ್ಕೆ ಸಹಕಾರಿ. ಆದರೆ, ಬಟ್ಟೆಗೆ ಅನುಗುಣವಾಗಿ ನೈಲ್ ಪಾಲಿಷ್ ಹಚ್ಚುವುದು ಯಾವಾಗಲೂ ಶುಭಕರವಲ್ಲ.
ನೀಲಿ ಬಣ್ಣ:
ನೀಲಿ ಬಣ್ಣವನ್ನು ಹಚ್ಚಿದಾಗ ಕೋಪ, ಆವೇಶಗಳು ಹೆಚ್ಚಾಗುತ್ತವೆ. ನಿರ್ಧಾರಗಳು ಸರಿಯಾಗಿರುವುದಿಲ್ಲ, ಮತ್ತು ತಪ್ಪುಗಳನ್ನು ಬೇಗನೆ ಕಂಡುಹಿಡಿಯುವ ಗುಣ ಬರುತ್ತದೆ. ನೇರವಾಗಿ ಮಾತನಾಡುವ ಮತ್ತು ಮುಲಾಜು ಇಡದ ಸ್ವಭಾವ ಹೆಚ್ಚುತ್ತದೆ. ಇದು ಅಷ್ಟು ಶ್ರೇಯಸ್ಕರವಲ್ಲ.
ಕಪ್ಪು ಬಣ್ಣ:
ಕಪ್ಪು ಬಣ್ಣವನ್ನು ಸಾಮಾನ್ಯವಾಗಿ ಕಡಿಮೆ ಜನರು ಬಳಸುತ್ತಾರೆ. ಇದನ್ನು ಹಚ್ಚಿದಾಗ ಆರೋಗ್ಯದಲ್ಲಿ ಏರುಪೇರು, ವಿಕೃತ ಭಾವನೆಗಳು ಮತ್ತು ಕೆಟ್ಟ ಆಲೋಚನೆಗಳು ಬರುವ ಸಾಧ್ಯತೆ ಇರುತ್ತದೆ. ನಿರ್ಧಾರಗಳು ಸರಿಯಾಗಿ ಇರುವುದಿಲ್ಲ. ಇದಲ್ಲದೇ ಕಾಫಿ ಬಣ್ಣದ ನೈಲ್ ಪಾಲಿಶ್ ಕಲಹಗಳು, ಅಪವಾದಗಳು ಮತ್ತು ಅನುಮಾನಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ.
ಜ್ಯೋತಿಷ್ಯದ ಪ್ರಕಾರ, ಮಂಗಳವಾರ ಮತ್ತು ಶನಿವಾರಗಳಂದು ನೈಲ್ ಪಾಲಿಶ್ ಹಚ್ಚುವುದನ್ನು ತಪ್ಪಿಸಬೇಕು. ಸೋಮವಾರ, ಬುಧವಾರ, ಗುರುವಾರ ಮತ್ತು ಶುಕ್ರವಾರಗಳು ನೈಲ್ ಪಾಲಿಶ್ ಹಚ್ಚಲು ಶ್ರೇಯಸ್ಕರವಾದ ದಿನಗಳಾಗಿವೆ. ಭಾನುವಾರ ಮಧ್ಯಮ ಫಲವನ್ನು ನೀಡುತ್ತದೆ.
ಹೀಗೆ, ಸೌಂದರ್ಯಕ್ಕಾಗಿ ಬಳಸುವ ನೈಲ್ ಪಾಲಿಶ್ ಬಣ್ಣಗಳು ನಮ್ಮ ಮನಸ್ಸು ಮತ್ತು ಜೀವನದ ಮೇಲೆ ಅಗಾಧ ಪ್ರಭಾವ ಬೀರುವುದರಿಂದ, ಶಾಸ್ತ್ರೋಕ್ತವಾಗಿ ಸೂಕ್ತ ಬಣ್ಣಗಳನ್ನು ಆಯ್ಕೆ ಮಾಡಿಕೊಳ್ಳುವುದು ನಮ್ಮ ಯೋಗಕ್ಷೇಮಕ್ಕೆ ಸಹಕಾರಿ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮಾರ್ಚ್ 31: ಬೆಂಗಳೂರಿನ ಅತ್ಯಂತ ಹಳೆಯ ಮತ್ತು ಸಾಂಪ್ರದಾಯಿಕ ಉತ್ಸವವಾದ ‘ಬೆಂಗಳೂರು ಕರಗ ಶಕ್ತ್ಯೋತ್ಸವ’ಕ್ಕೆ (Karaga Shaktyotsava) ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಕರಗದ ಪೌರಾಣಿಕ ಹಿನ್ನೆಲೆ ಮತ್ತು ವೀರಕುಮಾರರ ಆಚರಣೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಏನಿದು ಅಲಗು ಸೇವೆ? ಇದರ ಹಿನ್ನೆಲೆ ಏನು?
ಪೌರಾಣಿಕ ನಂಬಿಕೆಯಂತೆ, ಚೈತ್ರ ಪೂರ್ಣಿಮೆಯ ಮೂರು ದಿನಗಳ ಮೊದಲು ತಾಯಿ ದ್ರೌಪದಿ ದೇವಿ ಭೂಮಿಗೆ ಬರುತ್ತಾಳೆ ಎಂಬ ನಂಬಿಕೆಯಿದೆ. ಪಾಂಡವರ ಸ್ವರ್ಗಾರೋಹಣದ ಸಂದರ್ಭದಲ್ಲಿ ದ್ರೌಪದಿ ದೇವಿ ಮೂರ್ಛೆ ಹೋದಾಗ, ಅವಳ ಮುಂದೆ ತಿಮಿರಾಸುರ ಎಂಬ ರಾಕ್ಷಸ ಪ್ರತ್ಯಕ್ಷನಾಗುತ್ತಾನೆ. ಆ ರಾಕ್ಷಸನ ಸಂಹಾರಕ್ಕಾಗಿ ದ್ರೌಪದಿ ದೇವಿ ತನ್ನ ಶಕ್ತಿಯಿಂದ ‘ವೀರಕುಮಾರರನ್ನು’ ಸೃಷ್ಟಿಸುತ್ತಾಳೆ.
ರಾಕ್ಷಸ ಸಂಹಾರದ ನಂತರ ಗೋವಿಂದನ ದರ್ಶನ ಪಡೆದಾಗ ತಾಯಿ ದ್ರೌಪದಿ ದೇವಿ ಅದೃಶ್ಯಳಾಗುತ್ತಾಳೆ. ಈ ವೇಳೆ ತಮ್ಮನ್ನು ಅಗಲಿದ ತಾಯಿಯನ್ನು ಮತ್ತೆ ನೆನೆದು, ಭಕ್ತಿಯ ಪರವಶತೆಯಲ್ಲಿ ವೀರಕುಮಾರರು ತಮ್ಮಲ್ಲಿದ್ದ ಖಡ್ಗದಿಂದ ಎದೆಗೆ ಬಡಿದುಕೊಳ್ಳುತ್ತಾರೆ. ಇದನ್ನೇ ಇಂದಿಗೂ ‘ಅಲಗು ಸೇವೆ’ ಎಂದು ಕರೆಯಲಾಗುತ್ತದೆ. ತಾಯಿ ನಮ್ಮನ್ನು ಬಿಟ್ಟು ಹೋಗಬೇಡ, ನಮ್ಮನ್ನು ರಕ್ಷಿಸು ಎಂದು ಬೇಡುವ ಸಂಕೇತವಾಗಿ ಈ ಸೇವೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಟ್ಟುನಿಟ್ಟಿನ ವ್ರತ ಆಚರಿಸುವ ವೀರಕುಮಾರರು
ಕರಗ ಉತ್ಸವದ 11 ದಿನಗಳ ಕಾಲ ವೀರಕುಮಾರರು ಅತ್ಯಂತ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತಾರೆ. ಅವರು ಬರಿಗಾಲಿನಲ್ಲಿ ನಡೆಯುತ್ತಾರೆ, ಹೊರಗಡೆ ಎಲ್ಲೂ ಊಟ ಮಾಡುವುದಿಲ್ಲ ಮತ್ತು ದಿನವಿಡೀ ಉಪವಾಸವಿದ್ದು ದೇವಸ್ಥಾನದ ಪ್ರಸಾದವನ್ನು ಮಾತ್ರ ಸೇವಿಸುತ್ತಾರೆ. ಈ ಭಕ್ತಿ ಮತ್ತು ಶಿಸ್ತಿನ ಆಚರಣೆಯೇ ಬೆಂಗಳೂರು ಕರಗದ ವೈಶಿಷ್ಟ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಲಾಸ್ ಏಂಜಲೀಸ್, ಮಾರ್ಚ್ 31: ಎಂಥಾ ನೀಚ ಕೃತ್ಯ, ಸಾರ್ವಜನಿಕ ಸ್ಥಳಗಳಲ್ಲೇ ಎಲ್ಲರೆದುರೇ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಲಾಸ್ ಏಂಜಲೀಸ್ನ ಸೂಪರ್ ಮಾರ್ಕೆಟ್ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ(Physical Harassment) ನೀಡಿರುವ ಘಟನೆ ವರದಿಯಾಗಿದೆ. ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸೂಪರ್ ಮಾರ್ಕೆಟ್ನಲ್ಲಿ ವ್ಯಕ್ತಿಯೊಬ್ಬ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ಘಟನೆ ಇದಾಗಿದೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ ಫುಡ್ಸ್ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಯುವತಿಯೊಬ್ಬಳು ಮಾರ್ಕೆಟ್ನಲ್ಲಿ ಮನೆಗೆ ಬೇಕಾದ ವಸ್ತುಗಳನ್ನು ಹುಡುಕುತ್ತಿದ್ದಾಗ ಆ ವ್ಯಕ್ತಿ ಆಕೆಯ ಹಿಂದೆ ಬಂದು ನಿಂತು ಅನುಚಿತವಾಗಿ ವರ್ತಿಸಿದ್ದಾನೆ.
ಅಷ್ಟೇ ಅಲ್ಲದೆ ಪ್ಯಾಂಟ್ ಜಿಪ್ ತೆರೆದು ಆಕೆಯ ಕಿವಿಗೆ ಗುಪ್ತಾಂಗವನ್ನು ತಾಕಿಸಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಯುವತಿ ಅಲ್ಲಿಂದ ಓಡಿ ಹೋಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಅಧಿಕಾರಿಗಳು ಬರುವಷ್ಟರಲ್ಲಿ ಆತ ಅಲ್ಲಿಂದ ಕಾಲ್ಕಿತ್ತಿದ್ದ. ಆ ಕೃತ್ಯ ಆತ ಎಸಗುವ ಸಮಯದಲ್ಲಿ ಆತನ ಕೈಯಲ್ಲಿ ಫೋನ್ ಕೂಡ ಇತ್ತು ಎಂದು ಆಕೆ ತಿಳಿಸಿದ್ದಾಳೆ.
A man was caught on camera inside a Southern California Whole Foods allegedly pulling down his pants and pressing his genitals against a woman’s ear.
ಈ ಘಟನೆ ಮಾರ್ಚ್ 23 ರಂದು ನಡೆದಿದ್ದು, ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ವಿಡಿಯೋ ಸೆರೆಯಾಗಿದೆ. ಆ ವ್ಯಕ್ತಿಯ ವಯಸ್ಸು 30ರ ಆಸುಪಾಸಿರಬಹುದು ಎಂದು ಅಂದಾಜಿಸಲಾಗಿದೆ. ಗಡ್ಡ, ನೀಲಿ ಬಣ್ಣದ ಶರ್ಟ್ ಹರಿದ ಜೀನ್ಸ್ ತೊಟ್ಟಿದ್ದ.ದೃಶ್ಯಾವಳಿಗಳು ಮತ್ತು ಲಭ್ಯವಿರುವ ಇತರ ಸುಳಿವುಗಳನ್ನು ಬಳಸಿಕೊಂಡು ಆರೋಪಿಯನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಅಧಿಕಾರಿಗಳು ಈಗ ಕೆಲಸ ಮಾಡುತ್ತಿದ್ದಾರೆ. ಅಂಗಡಿಯ ಆಡಳಿತ ಮಂಡಳಿಯು ತನಿಖೆಗೆ ಸಹಕರಿಸಿದೆ.
ನಟಿ ರಂಭಾ ಅವರು ಈಗ ವಿದೇಶದಲ್ಲಿ ಸೆಟಲ್ ಆಗಿದ್ದಾರೆ. 90ರ ದಶಕದಲ್ಲಿ ಮಿಂಚಿದ್ದ ಅವರು ಈಗ ಚಿತ್ರರಂಗದಿಂದ ಸಂಪೂರ್ಣವಾಗಿ ಹಿಂದೆ ಸರಿದಿದ್ದಾರೆ. ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳಬೇಕು ಎಂದು ಕನಸು ಕಾಣುತ್ತಿದ್ದಾರೆ. ಹಾಗಾದರೆ ರಂಭಾ ಅವರು ಯಾರು? ಅವರ ನಿಜವಾದ ಹೆಸರು ಏನು? ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ಉತ್ತರ.
ರಂಭಾ ಅವರ ನಿಜವಾದ ಹೆಸರು ವಿಜಯಲಕ್ಷ್ಮಿ. ಸಿನಿಮಾ ರಂಗಕ್ಕೆ ಕಾಲಿಟ್ಟ ಬಳಿಕ ಅವರು ಹೆಸರನ್ನು ರಂಭಾ ಎಂದು ಬದಲಿಸಿಕೊಂಡರು. ರಂಭಾ ಕನ್ನಡದಲ್ಲಿ ರವಿಚಂದ್ರನ್ ಜೊತೆ ನಟಿಸಿದ್ದಾರೆ. ಇಷ್ಟೇ ಅಲ್ಲದೆ ತೆಲುಗು, ತಮಿಳು, ಹಿಂದಿ, ಮಲಯಾಳ, ಬೆಂಗಾಳಿ, ಭೋಜ್ಪುರಿ ಹಾಗೂ ಇಂಗ್ಲಿಷ್ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ರಂಭಾ ಅವರಿಗೆ ಇದೆ.
ಮಲಯಾಳಂ ಸಿನಿಮಾ ‘ಸರ್ಗಂ’ (1992) ಮೂಲಕ ರಂಭಾ ಬಣ್ಣದ ಬದುಕು ಆರಂಭಿಸಿದರು. ಅದೇ ವರ್ಷ ತೆರೆಗೆ ಬಂದ ಅವರ ನಟನೆಯ ತೆಲುಗಿನ ‘ಆ ಒಕ್ಕಟಿ ಅಡಕ್ಕು’ ಅವರ ಬಣ್ಣದ ಬದುಕಿಗೆ ಭದ್ರ ಬುನಾದಿ ಹಾಕಿ ಕೊಟ್ಟಿತು. ಈ ಚಿತ್ರದಲ್ಲಿ ರಂಭಾ ಹೆಸರಿನ ಪಾತ್ರ ಮಾಡಿದ್ದರು. ಆ ಬಳಿಕ ಅವರು ರಂಭಾ ಅಂತಲೇ ಫೇಮಸ್ ಆದರು. 1993ರಲ್ಲಿ ರಂಭಾಗೆ ಕನ್ನಡದಿಂದ ಆಫರ್ ಬಂತು. ಜಗ್ಗೇಶ್ ನಟನೆಯ ‘ಸರ್ವರ್ ಸೋಮಣ್ಣ’ ಅವರ ಕನ್ನಡದ ಮೊದಲ ಸಿನಿಮಾ.
1999ರಲ್ಲಿ ರವಿಚಂದ್ರನ್ ಜೊತೆ ‘ಓ ಪ್ರೇಮವೇ’ ಸಿನಿಮಾ ಮಾಡಿದರು. ಇಬ್ಬರ ಕೆಮಿಸ್ಟ್ರಿ ಜನರಿಗೆ ಸಖತ್ ಇಷ್ಟ ಆಯಿತು. ಅವರು ಕನ್ನಡದಲ್ಲಿ ನಟಿಸಿದ ಕೊನೆಯ ಸಿನಿಮಾ ಎಂದರೆ ಅದು ‘ಅನಾಥರು’. ಆ ಬಳಿಕ ಅವರು ಕನ್ನಡದಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಅವರ ನಟನೆ ಹಾಗೂ ಅದ್ಭುತ ಡ್ಯಾನ್ಸ್ ಅವರನ್ನು ಟಾಪ್ ಹೀರೋಯಿನ್ಗಳ ಸಾಲಿನಲ್ಲಿ ನಿಲ್ಲಿಸಿತು.
ಚಿತ್ರರಂಗದಲ್ಲಿ ಹೆಸರು ಮಾಡಿದ ಅವರು ನಂತರ ಅದನ್ನು ತೊರೆಯಲು ನಿರ್ಧರಿಸಿದರು. 2010ರಲ್ಲಿ ಇಂದ್ರಕುಮಾರ್ ಪದ್ಮನಾಥ್ ಅವರನ್ನು ವಿವಾಹ ಆದರು. ಆ ಬಳಿಕ ಅವರು ಚಿತ್ರರಂಗದ ಕಡೆ ಮುಖ ಮಾಡಿಲ್ಲ. ಅವರು ಇತ್ತೀಚೆಗೆ ‘ಜೋಡಿ ಆರ್ ಯೂ ರೆಡಿ ಸೀಸನ್ 2’ ರಿಯಾಲಿಟಿ ಶೋಗೆ ಜಡ್ಜ್ ಆದರು. ರಂಭಾಗೆ ಮೂವರು ಮಕ್ಕಳು. ರಂಭಾ ಸದ್ಯ ಕೆನಡಾದಲ್ಲಿ ಸೆಟಲ್ ಆಗಿದ್ದಾರೆ.
‘ಮ್ಯಾಕ್ಸ್’ ನಿರ್ಮಾಪಕ ಕಲೈಪುಲಿ ಧಾನು ಅವರು ಮಾತನಾಡುವಾಗ ಒಂದು ವಿಷಯ ಹೇಳಿದ್ದರು. ‘ರಂಭಾ ಅವರ ಆಸ್ತಿ ಸುಮಾರು 2 ಸಾವಿರ ಕೋಟಿ ರೂಪಾಯಿ. ಅವರ ಗಂಡ ನನಗೆ ಕರೆ ಮಾಡಿದ್ದರು. ಪತ್ನಿಗೆ ಒಂದು ಚಾನ್ಸ್ ಕೊಡಿ ಎಂದು ಕೇಳಿದರು. ಒಳ್ಳೆಯ ಪ್ರಾಜೆಕ್ಟ್ನ ಹುಡುಕಿ ಕೊಡುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದೇನೆ’ ಎಂಬುದಾಗಿ ಕಲೈಪುಲಿ ವಿವರಿಸಿದ್ದರು.