ಗುಜರಾತ್​ನಲ್ಲಿ 3,300 ಕೋಟಿ ರೂ ವೆಚ್ಚದ ಕೇನ್ಸ್ ಸಮಿಕಾನ್ ಘಟಕ ಉದ್ಘಾಟನೆ ಮಾಡಿದ ನರೇಂದ್ರ ಮೋದಿ

ಗುಜರಾತ್​ನಲ್ಲಿ 3,300 ಕೋಟಿ ರೂ ವೆಚ್ಚದ ಕೇನ್ಸ್ ಸಮಿಕಾನ್ ಘಟಕ ಉದ್ಘಾಟನೆ ಮಾಡಿದ ನರೇಂದ್ರ ಮೋದಿ

ಅಹ್ಮದಾಬಾದ್, ಮಾರ್ಚ್ 31: ಇಲ್ಲಿಗೆ ಸಮೀಪದ ಸಾನಂದ್​ನಲ್ಲಿ ಕೇನ್ಸ್ ಸಮಿಕಾನ್​ನ ಒಸಾಟ್ (OSAT- Outsourced Semiconductor Assembly and Test) ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇದು 3,300 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ ಫೆಸಿಲಿಟಿ ಆಗಿದೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಶುರುವಾಗಿರುವ ಎರಡನೇ ಚಿಪ್ ಮ್ಯಾನುಫ್ಯಾಕ್ಚರಿಂಗ್ ಘಟಕ ಇದಾಗಿದೆ. ಇದೇ ತಿಂಗಳು ಗುಜರಾತ್​ನಲ್ಲೇ ಅಮೆರಿಕ ಮೂಲದ ಮೈಕ್ರಾನ್ ಟೆಕ್ನಾಲಜಿಯಿಂದ ಭಾರತದ ಮೊದಲ ಸೆಮಿಕಂಡಕ್ಟರ್ ತಯಾರಕ ಘಟಕ ಶುರುವಾಗಿತ್ತು.

ಕೇನ್ಸ್ ಸಮಿಕಾನ್ ಮೈಸೂರಿನ ಕೇನ್ಸ್ ಟೆಕ್ನಾಲಜಿ ಸಂಸ್ಥೆಯಿಂದ ಶುರುವಾಗಿರುವ ಸೆಮಿಕಂಡಕ್ಟರ್ ಚಿಪ್ ತಯಾರಕ ಘಟಕವಾಗಿದೆ. ಉದ್ಘಾಟನೆಗೆ ಮುಂಚೆಯೇ ಇಲ್ಲಿ ಕಮರ್ಷಿಯಲ್ ಉತ್ಪಾದನೆ ಆರಂಭವಾಗಿದೆ. ಆಟೊಮೋಟಿವ್ ಮತ್ತು ಔದ್ಯಮಿಕ ಅಪ್ಲಿಕೇಶನ್​ಗಳಿಗೆ ಬಳಸಲಾಗುವ ಇಂಟೆಲಿಜೆಂಟ್ ಪವರ್ ಮಾಡ್ಯೂಲ್​ಗಳನ್ನು (ಐಪಿಎಂ) ತಯಾರಿಸುವ ಕಾರ್ಯ ನಡೆಯುತ್ತಿದೆ. ಈ ಒಂದೊಂದು ಮಾಡ್ಯೂಲ್​ನಲ್ಲಿ 17 ಚಿಪ್​ಗಳನ್ನು ಜೋಡಿಸಲಾಗಿರುತ್ತದೆ. ಸುಮಾರು 900 ಮಲ್ಟಿಚಿಪ್ ಮಾಡ್ಯೂಲ್​ಗಳನ್ನು ತಯಾರಿಸಿ ಹೊರಕಳುಹಿಸಲಾಗಿದೆ.

ಇದನ್ನೂ ಓದಿ: ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ಈ ಘಟಕ ಪೂರ್ಣ ಶಕ್ತಿಯಿಂದ ಕಾರ್ಯಾರಂಭಿಸಿದರೆ ಒಂದು ದಿನಕ್ಕೆ 60 ಲಕ್ಷ ಚಿಪ್ ಯುನಿಟ್​ಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ.

ಭಾರತದಲ್ಲಿ ಇನ್ನೂ ಹಲವು ಚಿಪ್ ಮ್ಯಾನುಫ್ಯಾಕ್ಚರಿಂಗ್ ಘಟಕಗಳು ಬರಲಿವೆ

ಸರ್ಕಾರವು ಸೆಮಿಕಂಡಕ್ಟರ್ ಮಿಷನ್ ಅನ್ನು ಗಂಭೀರವಾಗಿ ಪರಿಗಣಿಸಿದ್ದು, ಹಲವಾರು ಘಟಕಗಳಿಗೆ ಅನುಮೋದನೆ ಕೊಟ್ಟಿದೆ. ಸದ್ಯಕ್ಕೆ ಅಮೆರಿಕದ ಮೈಕ್ರಾನ್ ಮತ್ತು ಮೈಸೂರಿನ ಕೇನ್ಸ್ ಟೆಕ್ನಾಲಜಿ ಕಂಪನಿಗಳು ಗುಜರಾತ್​ನ ಸಾನಂದ್​ನಲ್ಲಿ ಚಿಪ್ ತಯಾರಿಸುವ ಘಟಕ ಆರಂಭಿಸಿವೆ. ತೈವಾನ್​ನ ಪಿಎಸ್​ಎಂಸಿ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ಮೊದಲಾದ ಸಂಸ್ಥೆಗಳಿಂದಲೂ ಸೆಮಿಕಂಡಕ್ಟರ್ ಘಟಕಗಳು ಶುರುವಾಗಲಿವೆ. ಅನುಮೋದನೆಗೊಂಡಿರುವ ಐದು ಸೆಮಿಕಂಡಕ್ಟರ್ ಘಟಕಗಳು ಇಂತಿವೆ:

  1. ಮೈಕ್ರಾನ್ ಟೆಕ್ನಾಲಜಿ: ಗುಜರಾತ್​ನ ಸಾನಂದ್​ನಲ್ಲಿ
  2. ಕೇನ್ಸ್ ಸೆಮಿಕಾನ್: ಗುಜರಾತ್​ನ ಸಾನಂದ್​ನಲ್ಲಿ
  3. ಟಿಎಸ್​ಎಟಿ (ಟಾಟಾ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್) ಘಟಕ: ಅಸ್ಸಾಮ್​ನಲ್ಲಿ
  4. ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈ ಲಿ (ಟಿಇಪಿಎಲ್) ಫ್ಯಾಬ್ ಘಟಕ: ಗುಜರಾತ್​ನ ಧುಲೆರಾದಲ್ಲಿ
  5. ಸಿಜಿ ಪವರ್ ರೆನಿಸಾಸ್ ಘಟಕ: ಗುಜರಾತ್​ನಲ್ಲಿ

ಇದನ್ನೂ ಓದಿ: ವಿವಿಧ ಪೋಸ್ಟ್ ಆಫೀಸ್ ಸ್ಕೀಮ್ಸ್; ಏಪ್ರಿಲ್-ಜೂನ್ ಕ್ವಾರ್ಟರ್​ಗೆ ಬಡ್ಡಿದರ ಘೋಷಣೆ; ಇಲ್ಲಿದೆ ಪಟ್ಟಿ

ಇಲ್ಲಿ ಸಿಜಿ ಪವರ್ ರೆನಿಸಾಸ್ ಘಟಕವು ಭಾರತ, ಜಪಾನ್ ಮತ್ತು ಥಾಯ್ಲೆಂಡ್ ಕಂಪನಿಗಳ ಜಂಟಿ ಯೋಜನೆಯಾಗಿದೆ. ಜಪಾನ್​ನ ರೆನಿಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಶನ್, ಥಾಯ್ಲೆಂಡ್​ನ ಸ್ಟಾರ್ಸ್ ಮೈಕ್ರೋಎಲೆಕ್ಟ್ರಾನಿಕ್ಸ್ ಮತ್ತು ಭಾರತದ ಸಿಜಿ ಪವರ್ ಸಂಸ್ಥೆಗಳು ಸೇರಿ ಸಿಜಿ ಪವರ್ ರೆನಿಸಾಸ್ ಘಟಕವನ್ನು ನಿರ್ಮಿಸುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ದಾವಣಗೆರೆ/ಬಾಗಲಕೋಟೆ, (ಮಾರ್ಚ್ 31): ದಾವಣಗೆರೆ ದಕ್ಷಿಣ ಕ್ಷೇತ್ರದಿಂದ (Davanagere South By Election)  ಮುಸ್ಲಿಂ ಮುಖಂಡ ಸಾದಿಕ್​ ಪೈಲ್ವಾನ್​​ ಅವರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹಮ್ಮದ್ ಖಾನ್ (zameer ahmed khan )ಬಿಗಿಪಟ್ಟು ಹಿಡಿದಿದ್ದರು. ಈ ಸಂಬಂಧ ಸಚಿವ ಎಸ್​​ಎಸ್​ ಮಲ್ಲಿಕಾರ್ಜುನ ಆಕ್ಷೇಪ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಜಮೀರ್ ಅಹಮ್ಮದ್ ಖಾನ್​​ಗೆ ಏಕವಚಲನದಲ್ಲಿ ನಿಂದಿಸಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದರಿಂದ ಜಮೀರ್ ಅಸಮಾಧಾನಗೊಂಡಿದ್ದು, ಚುನಾವಣಾ ಪ್ರಚಾರದಿಂದ ದೂರ ಇದ್ದಾರೆ. ಇನ್ನೊಂದೆಡೆ ಅವರ ಅಭಿಮಾನಿಗಳು ಹಾಗೂ ಮುಸ್ಲಿಂ ಸಮಯದಾಯದವರು ಪ್ರಚಾರಕ್ಕೆ ಜಮೀರ್ ಅಹಮ್ಮದ್ ಖಾನ್ ಅವರನ್ನು ಕರೆಯಿಸಿ ಎಂದು ಆಗ್ರಹಿಸಿಸುತ್ತಿದ್ದಾರೆ.

ಮಲ್ಲಿಕಾರ್ಜುನ-ಜಮೀರ್ ನಡುವೆ ತಿಕ್ಕಾಟ

ಉಪಚುನಾವಣೆ ಘೋಷಣೆಯಾದಾಗಿನಿಂದ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ವಸತಿ ಮತ್ತು ವಕ್ಸ್ ಸಚಿವ ಜಮೀರ್ ಅಹ್ಮದ್ ನಡುವಿನ ತಿಕ್ಕಾಟ ಮುಂದುವರೆದಿದ್ದು, ‘ಸ್ವಾಭಿಮಾನ’ ಮಾತುಗಳನ್ನು ಉಭಯ ನಾಯಕರು ಆಡಿದ್ದಾರೆ. ಪುತ್ರ ಸಮರ್ಥ್‌ಗೆ ಟಿಕೆಟ್‌ ನೀಡ ಬೇಕೆಂದು ಸಚಿವ ಮಲ್ಲಿಕಾರ್ಜುನ ಹಾಗೂ ಸಾದಿಕ್ ಪೈಲ್ವಾನ್‌ಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಅಂತಿಮವಾಗಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಕೊಡಲು ಹೈಕಮಾಂಡ್ ತೀರ್ಮಾನಿಸಿದ್ದರೂ ಜಮೀರ್ ಇದನ್ನು ವಿರೋಧಿಸಿಕೊಂಡೇ ಬಂದಿದ್ದರು. ಸಾದಿಕ್ ಬಂಡಾಯವಾಗಿ ಸ್ಪರ್ಧಿಸಲು ಜಮೀರ್ ಕಾರಣ ಎನ್ನುವ ಮಾತುಗಳು ಕೇಳಿಬಂದಿತ್ತು. ಈ ಎಲ್ಲ ಗೊಂದಲಗಳ ಹೊರತಾಗಿಯೂ ಸಿಎಂ ಸಿದ್ದರಾಮಯ್ಯ ಮಧ್ಯಸ್ಥಿಕೆಯಲ್ಲಿ ಜಮೀರ್ ಸಮರ್ಥ್ ಪರವಾಗಿ ಪ್ರಚಾರ ಕೈಗೊಳ್ಳಲು ಮುಂದಾಗಿದ್ದರು. ಬೂದಿ ಮುಚ್ಚಿದ ಕೆಂಡದಂತಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯಕ್ಕೆ ಸಚಿವ ಮಲ್ಲಿಕಾರ್ಜುನ್ ಅವರ ‘ಜಮೀರ್ ಬರುವುದಕ್ಕಿಂತ ಬಾರದಿರುವುದೇ ಒಳ್ಳೆಯದು’ ಎನ್ನುವ ಹೇಳಿಕೆ ಮತ್ತೆ ಕಿಡಿ ಹೊತ್ತಿಸಿದೆ.

ಇದನ್ನೂ ಓದಿ: ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​​ನ ಆಪರೇಷನ್ ಮುಸ್ಲಿಂ ಕ್ಯಾಂಡಿಡೇಟ್ ಕಾರ್ಯಾಚರಣೆ ಫೇಲ್

ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡ ಜಮೀರ್

ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿರುವ (ಸುಮಾರರು 80 ಸಾವಿರ) ದಾವಣಗೆರೆ ಕ್ಷೇತ್ರದಲ್ಲಿ ಮುಸ್ಲೀಮರಿಗೆ ಟಿಕೆಟ್ ಕೊಡಿಸಲು ಸಚಿವ ಜಮೀರ್ ಇನ್ನಿಲ್ಲದಂತೆ ಸರ್ಕಸ್ ಮಾಡಿದ್ದರು. ಮುಸ್ಲಿಂ ಮುಖಂಡ ಸಾದಿಕ್​ಗೆ ಟಿಕೆಟ್ ಕೊಡಿ. ಗೆಲ್ಲಿಸಿಕೊಂಡು ಬರುತ್ತೇನೆಂದು ಜಮೀರ್ ಸುರ್ಜೇವಾಲ ಸಭೆಯಲ್ಲೂ ಭರವಸೆ ನೀಡಿದ್ದರು. ಆದ್ರೆ ಹೈಕಮಾಂಡ್ ಶಾಮನೂರು ಮೊಮ್ಮಗ ಸಮರ್ಥ್​ಗೆ ಟಿಕೆಟ್ ಕೊಟ್ಟಿದೆ. ಇನ್ನೊಂದೆಡೆ ಎಸ್​​ಎಸ್​ ಮಲ್ಲಿಕಾರ್ಜುನ ಆಡಿದ ಮಾತುಗಳಿಂದ ಸಹ ಸಿಎಂ ಸಿದ್ದರಾಮಯ್ಯ ಆಪ್ತ, ಸಚಿವ ಜಮೀರ್ ಮುನಿಸಿಕೊಂಡಿದ್ದು, ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಸಹ ಪ್ರಚಾರದಿಂದ ದೂರ ಉಳಿದಿದ್ದಾರೆ. ಕೇರಳ ಚುನಾವಣೆಗೆ ಪ್ರಚಾರ ಮಾಡಲು ಅಲ್ಲೇ ಠಿಕಾಣಿ ಹೂಡಿರುವ ಜಮೀರ್ ಅಹ್ಮದ್, ದಾವಣಗೆರೆ ದಕ್ಷಿಣ ಕ್ಷೇತ್ರದತ್ತ ಮುಖ ಹಾಕಿಯೂ ನೋಡುತ್ತಿಲ್ಲ.

ಜಮೀರ್​​ಗೆ ಫುಲ್ ಡಿಮ್ಯಾಂಡ್

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ಮಧ್ಯೆ ಅಲ್ಪಸಂಖ್ಯಾತ ಮುಖಂಡರು ಹಾಗೂ ಕಾರ್ಯಕರ್ತರು ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಪ್ರಚಾರಕ್ಕೆ ಕಳುಹಿಸುವಂತೆ ನಾಯಕರಿಗೆ ಬಿಗಿ ಪಟ್ಟು ಹಿಡಿದಿದ್ದಾರೆ. ನಿನ್ನೆ (ಮಾರ್ಚ್ 30) ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ಸಹ ಮುಸ್ಲಿಮರು, ಜಮೀರ್ ಅವರನ್ನ ಪ್ರಚಾರಕ್ಕೆ ಕಳುಹಿಸುವಂತೆ ಆಗ್ರಹಿಸಿದ್ದಾರೆ.

ಇನ್ನೊಂದೆಡೆ ಇಂದು (ಮಾರ್ಚ್ 31) ದಾವಣಗೆರೆಗೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್​​ ಅವರಿಗೂ ಸಹ ಜಮೀರ್ ಅಭಿಮಾನಿಯೊಬ್ಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪೋಟೋ ಹಿಡಿದ ಹೆಲಿಪ್ಯಾಡ್ ಆಗಮಿಸಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಎದರು ಜಮೀರ್ ಅಹಮ್ಮದ್ ಖಾನ್ ಪೋಟೋ ಹಿಡಿದು ಘೋಷಣೆ ಕೂಗಿದ್ದಾನೆ. ಅಲ್ಲದೇ ಚುನಾವಣೆ ಪ್ರಚಾರಕ್ಕೆ ಜಮೀರ್ ಅವರನ್ನು ಕರೆಸಬೇಕು. ಅವರು ಬರದಿದ್ದರೆ ನಾವು ಬರಲ್ಲ. ಜಮೀದ್ ಅಹಮ್ಮದ್ ಖಾನ್ ಬಂದರೆ ಕಾಂಗ್ರೆಸ್ ಗೆಲ್ಲುತ್ತೆ. ಇಲ್ಲವಾದರೆ ಕಾಂಗ್ರೆಸ್ ಗೆಲುವು ಕಷ್ಟ ಎಂದು ಜಮೀರ್ ಅಭಿಮಾನಿ ಆಸೀಫ್ ಅಲಿ ಬಿಗಿಪಟ್ಟು ಹಿಡಿದಿದ್ದು, ಕೊನೆಗೆ ಮೊಹಮ್ಮದ್ ನಲಪಾಡ್ ಆಸೀಫ್ ಅಲಿಯನ್ನು ಪಕ್ಕಕ್ಕೆ ಕರೆದೊಯ್ದು ಸಮಧಾನಪಡಿಸಿದ್ದಾರೆ.

ಒಬ್ಬರಿಂದ ಪಕ್ಷ ನಡೆಯಲ್ಲ ಎಂದ ಡಿಕೆಶಿ

ಇನ್ನು ದಾವಣಗೆರೆಯಲ್ಲಿ ಮಾತನಾಡಿದ ಡಿಕೆಶಿ, ಶೇ. 79ರಷ್ಟು ಜನ ಕಾಂಗ್ರೆಸ್ ಅಭ್ಯರ್ಥಿ ಪರ ಒಲವು ಹೊಂದಿದ್ದಾರೆ. ಶಾಮನೂರು ಶಿಕ್ಷಣ ಸಂಸ್ಥೆಯಲ್ಲಿ ಲಕ್ಷಾಂತರ ಜನ ಶಿಕ್ಷಣ ಪಡೆದಿದ್ದಾರೆ. ಸಚಿವ ಜಮೀರ್ ಕೇರಳದಲ್ಲಿ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡ್ತಿದ್ದಾರೆ.ಮುಗಿಸಿಕೊಂಡು ಬಂದ ಮೇಲೆ ಎಲ್ಲಿಗೆ ಕಳುಹಿಸಬೇಕು ಬಗ್ಗೆ ಚರ್ಚಿಸುತ್ತೇವೆ. ಒಬ್ಬರಿಂದ ಪಕ್ಷ ನಡೆಯಲ್ಲ. ಅದು ಡಿಕೆ, ಸಿಎಂ, ಜಮೀರ್ ಆಗಬಹುದು. 16 ನಿಗಮ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅಧ್ಯಕ್ಷ ಸ್ಥಾನ ನೀಡಿದ್ದೇವೆ. ಅಬ್ದುಲ್ ಜಬ್ಬಾರ್​ಗೆ 3 ಬಾರಿ ಪರಿಷತ್ ಸದಸ್ಯ ಸ್ಥಾನ ನೀಡಿದ್ದೇವೆ. ಕಣದಲ್ಲಿ ಮುಸ್ಲಿಂ ಅಭ್ಯರ್ಥಿಗಳು ಇದ್ದಾರೆ. ಅದರಿಂದ ತೊಂದರೆ ಆಗಲ್ಲ ಎಂದರು. ಅಲ್ಲದೇ ಒಬ್ಬರಿಂದ ಪಕ್ಷ ನಡೆಯಲ್ಲ ಎಂದು ಹೇಳುವ ಮೂಲಕ ಜಮೀರ್ ಅಹಮ್ಮದ್ ಖಾನ್​​ಗೆ ಪರೋಕ್ಷ ಟಾಂಗ್ ಕೊಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?

‘ಆರ್​​ಆರ್​​ಆರ್’ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ನಟನೆಯ ಸತತ ಎರಡು ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಗಿವೆ. ‘ಗೇಮ್ ಚೇಂಜರ್’ ಮತ್ತು ‘ಆಚಾರ್ಯ’ ಎರಡೂ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಇದೀಗ ರಾಮ್ ಚರಣ್ ಅವರು ಗೆಲುವಿನ ಹುಡುಕಾಟದಲ್ಲಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಬಹುತೇಕ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ನಿರ್ಮಾಪಕರೊಬ್ಬರು ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿರುವ ಬಗ್ಗೆ ಸುಳಿವು ನೀಡಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಅಸಲಿಗೆ ‘ಪೆದ್ದಿ’ ಸಿನಿಮಾ ಮಾರ್ಚ್ 27ರಂದೇ ಬಿಡುಗಡೆ ಆಗಬೇಕಿತ್ತು. ಆದರೆ ರಾಮ್ ಚರಣ್ ಅವರ ಚಿಕ್ಕಪ್ಪ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಮಾರ್ಚ್ 26ಕ್ಕೆ ಬಿಡುಗಡೆ ಮಾಡುವುದಾಗಿ ಘೋಷಣೆ ಆಗಿತ್ತು. ಹಾಗಾಗಿ ಸಿನಿಮಾದ ಬಿಡುಗಡೆಯನ್ನು ಏಪ್ರಿಲ್ 30ಕ್ಕೆ ಮುಂದೂಡಲಾಯ್ತು. ಆದರೆ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆ ಆಯ್ತು. ಆದರೆ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಈಗ ಏಪ್ರಿಲ್ 30ರ ಬದಲಾಗಿ ಜೂನ್​​ನಲ್ಲಿ ಆಗಲಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಹರಡಲು ಮುಖ್ಯ ಕಾರಣ ನಿರ್ಮಾಪಕ ಎಸ್​​ಕೆನ್. ಇತ್ತೀಚೆಗೆ ಅವರು ‘ಚೆನ್ನೈ ಲವ್​​ಸ್ಟೋರಿ’ ಹೆಸರಿನ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ತಮ್ಮ ‘ಚೆನ್ನೈ ಲವ್​​ಸ್ಟೋರಿ’ ಸಿನಿಮಾ ಬಗ್ಗೆ ಮಾತನಾಡುತ್ತಾ, ನಾವು ಮೊದಲಿಗೆ ಸಿನಿಮಾವನ್ನು ಜೂನ್ 26ಕ್ಕೆ ಬಿಡುಗಡೆ ಮಾಡೋಣ ಎಂದುಕೊಂಡಿದ್ದೆವು, ಆದರೆ ಆಗ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗುತ್ತದೆ ಎಂದು ಕೆಲವರು ಮಾಹಿತಿ ನೀಡಿದರು. ಹೀಗಾಗಿ ಸಿನಿಮಾದ ಬಿಡುಗಡೆಯನ್ನು ನಾವು ಬದಲಾಯಿಸಿಕೊಂಡೆವು’ ಎಂದಿದ್ದರು.

ಇದನ್ನೂ ಓದಿ;ಚಿರಂಜೀವಿ, ರಾಮ್ ಚರಣ್ ಮನೆಯಲ್ಲಿ ಹೀಗಿತ್ತು ರಾಮ ನವಮಿ

ಎಸ್​​ಕೆಎನ್ ಅವರ ಈ ಮಾತುಗಳು ರಾಮ್ ಚರಣ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ‘ಪೆದ್ದಿ’ ಸಿನಿಮಾದ ಬಿಡುಗಡೆ ಜೂನ್ ತಿಂಗಳಲ್ಲಿ ಆಗಲಿದೆಯೇ ಎಂಬ ಅನುಮಾನ ಮೂಡಿಸಿದೆ. ಇತ್ತೀಚೆಗಷ್ಟೆ ‘ಪೆದ್ದಿ’ ಸಿನಿಮಾದ ಚಿತ್ರೀಕರಣದ ವೇಳೆ ರಾಮ್ ಚರಣ್ ಗೆ ಗಾಯ ಸಹ ಆಗಿದ್ದು, ಸಣ್ಣ ಆಪರೇಷನ್ ಸಹ ಆಗಿದೆ. ಇದರಿಂದ ಚಿತ್ರೀಕರಣ ತಡವಾಗಿ ಸಿನಿಮಾದ ಬಿಡುಗಡೆ ಏಪ್ರಿಲ್​​ನಿಂದ ಜೂನ್​​ಗೆ ವರ್ಗಾವಣೆ ಆಗಿರಬಹುದು ಎಂಬ ಅನುಮಾನ ಮೂಡಿದೆ. ಚಿತ್ರತಂಡದವರು ಸಹ ಯಾವುದೇ ಸ್ಪಷ್ಟನೆ, ಹೇಳಿಕೆ ನೀಡದೇ ಇರುವುದು ರಿಲೀಸ್ ಮುಂದೂಡಿಕೆ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿದೆ.

‘ಪೆದ್ದಿ’ ಸಿನಿಮಾ ಗ್ರಾಮೀಣ ಆಕ್ಷನ್ ಕತೆಯನ್ನು ಹೊಂದಿದೆ. ಸಿನಿಮಾದ ನಾಯಕ ರಾಮ್ ಚರಣ್ ಕ್ರಿಕೆಟ್ ಆಟಗಾರ ಮತ್ತು ಕುಸ್ತಿ ಪೈಲ್ವಾನನ ಪಾತ್ರದಲ್ಲಿ ಮಿಂಚಿದ್ದಾರೆ. ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಅವರು ನಾಯಕನ ಗುರುವಿನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ನಾಯಕಿಯಾಗಿ ಜಾನ್ಹವಿ ಕಪೂರ್ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಬುಚ್ಚಿಬಾಬು ಸನಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಯನ್ ಹಾಗೂ ಕುಟುಂಬದ ಜೊತೆ ಸಮ್ಮರ್ ವೆಕೇಶನ್ ತೆರಳಿದ ಮೇಘನಾ ರಾಜ್

Source link

ಪಾಕಿಸ್ತಾನ್ ವೇಗಿ ನಸೀಮ್ ಶಾಗೆ 2 ಕೋಟಿ ರೂ. ದಂಡ..!

ಪಾಕಿಸ್ತಾನದ ವೇಗಿ ನಸೀಮ್ ಶಾ (Naseem Shah) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ (PCB) ಸುಮಾರು 2 ಕೋಟಿ ರೂಪಾಯಿ (PKR) ಭಾರಿ ದಂಡ ವಿಧಿಸಿದೆ. ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ಇದು ಒಬ್ಬ ಆಟಗಾರನಿಗೆ ವಿಧಿಸಲಾದ ಅತಿ ದೊಡ್ಡ ಮೊತ್ತದ ದಂಡ ಎಂಬುದು ವಿಶೇಷ.

ದಂಡ ವಿಧಿಸಲು ಕಾರಣವೇನು?

ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಝ್ ಅವರನ್ನು ಟೀಕಿಸಿ ನಸೀಮ್ ಶಾ ಅವರ ಎಕ್ಸ್ (ಟ್ವಿಟರ್) ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು.

ಪಾಕಿಸ್ತಾನ್ ಸೂಪರ್ ಲೀಗ್​ನ (PSL 2026) ಪಂದ್ಯವೊಂದರ ವೇಳೆ ಮರಿಯಮ್ ನವಾಝ್ ಅವರಿಗೆ ನೀಡಲಾಗಿದ್ದ ವಿಶೇಷ ಗೌರವವನ್ನು ಪ್ರಶ್ನಿಸಿ, “ಅವರನ್ನು ಲಾರ್ಡ್ಸ್ ಮೈದಾನದ ರಾಣಿಯಂತೆ ಏಕೆ ನಡೆಸಿಕೊಳ್ಳಲಾಗುತ್ತಿದೆ?” ಎಂದು ವ್ಯಂಗ್ಯವಾಡಿದ್ದರು.

ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದ ಈ ಪೋಸ್ಟ್ ವಿವಾದಕ್ಕೆ ಕಾರಣಗಾಗುತ್ತಿದ್ದಂತೆ ನಸೀಮ್ ಶಾ ಅದನ್ನು ಡಿಲೀಟ್ ಮಾಡಿದ್ದರು. ಅಲ್ಲದೆ, ತಮ್ಮ ಸೋಶಿಯಲ್ ಮೀಡಿಯಾ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು ಎಂದು ಅವರು ಸ್ಪಷ್ಟನೆ ನೀಡಿದ್ದರು.

ಪಿಸಿಬಿ ಕ್ರಮ:

ನಸೀಮ್ ಶಾ ಅವರ ‘ಹ್ಯಾಕಿಂಗ್’ ವಾದವನ್ನು ತಳ್ಳಿಹಾಕಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಶಿಸ್ತು ಸಮಿತಿ, ಇದು ಕೇಂದ್ರ ಒಪ್ಪಂದದ ಉಲ್ಲಂಘನೆ ಎಂದು ಪರಿಗಣಿಸಿದೆ.

ಅಲ್ಲದೆ ಯುವ ವೇಗಿಯನ್ನು ಎರಡು ವರ್ಷಗಳ ಕಾಲ ನಿಷೇಧಿಸುವ ಬಗ್ಗೆ ಚರ್ಚಿಸಲಾಗಿತ್ತು. ಆದರೆ, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ಹಸ್ತಕ್ಷೇಪದಿಂದಾಗಿ ಕೇವಲ ಆರ್ಥಿಕ ದಂಡಕ್ಕೆ ಸೀಮಿತಗೊಳಿಸಲಾಯಿತು.

ಅದರಂತೆ ಇದೀಗ ನಸೀಮ್ ಶಾಗೆ ಬರೋಬ್ಬರಿ 2 ಕೋಟಿ ರೂ. (PKR) ದಂಡ ವಿಧಿಸಲಾಗಿದೆ. ಇನ್ನು ತಾನು ಮಾಡಿರುವ ಪ್ರಮಾದಕ್ಕೆ ಪಾಕ್ ವೇಗಿ, ಮಂಡಳಿಯ ಮುಂದೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಮ್ಯಾನೇಜರ್​ಗೆ ಗೇಟ್ ಪಾಸ್:

ಈ ಘಟನೆಯ ನಂತರ ನಸೀಮ್ ಶಾ ಅವರು ತಮ್ಮ ಸೋಶಿಯಲ್ ಮೀಡಿಯಾ ಮ್ಯಾನೇಜರ್ ಅನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಪಿಸಿಬಿ ಕೂಡ ಆ ಮ್ಯಾನೇಜರ್ ಅನ್ನು ಕಪ್ಪುಪಟ್ಟಿಗೆ ಸೇರಿಸಿದೆ.

ಇದನ್ನೂ ಓದಿ: 19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

ಸದ್ಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ತೊಡಗಿಸಿಕೊಂಡಿರುವ ನಸೀಮ್ ಶಾ ರಾವಲ್ಪಿಂಡಿಸ್ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ. ಪಿಂಡಿಸ್ ಫ್ರಾಂಚೈಸಿ ಪರ ಕಣಕ್ಕಿಳಿಯುತ್ತಿರುವ ನಸೀಮ್​ಗೆ ಈ ಬಾರಿ ಸಿಗುವ ವೇತನ 8.65 ಕೋಟಿ ರೂ. (PKR). ಇದರಲ್ಲಿ ಇದೀಗ 2 ಕೋಟಿ ರೂ. ದಂಡ ಪಾವತಿಸಬೇಕಾಗಿ ಬಂದಿದೆ.

 

Source link

ದೇವನಹಳ್ಳಿ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಲಿಸುತ್ತಿದ್ದ ವಾಹನದಲ್ಲಿ ದಿಢೀರ್ ಬೆಂಕಿ, ಪ್ರಯಾಣಿಕರು ಪಾರು!

ದೇವನಹಳ್ಳಿ,ಮಾ.31: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳವಾರ (ಮಾ.31) ನಡೆದಿದೆ. ಕಾರು ಹೆದ್ದಾರಿಯಲ್ಲಿ ವೇ ಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ. ಇನ್ನು ಇದನ್ನು ಗಮನಿಸಿದ ಕಾರು ಚಾಲಕ ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ತೆಲಂಗಾಣದ ಯುವ ದಂಪತಿ ಸಾವು; ಪತಿಯ ಶವ ಕಂಡು 17ನೇ ಮಹಡಿಯಿಂದ ಜಿಗಿದ ಪತ್ನಿ!

ಬೆಂಗಳೂರು, ಮಾರ್ಚ್​ 31: ಕೌಟುಂಬಿಕ ಕಲಹದ ಹಿನ್ನೆಲೆ ತೆಲಂಗಾಣ ಮೂಲದ ಯುವ ಐಟಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪತಿಯ ಆತ್ಮಹತ್ಯೆ ನಂತರ ಪತ್ನಿ ಸಹ 17ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ.

ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ದಂಪತಿ

ತೆಲಂಗಾಣದ ಸಿದ್ದಿಪೇಟ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ ಕುಂಟಾ ತಮ್ಮ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಬಿಬಿ ಶಾಜಿಯಾ ಸಿರಾಜ್ (31) ಪತಿಯ ಶವವನ್ನು ಕಂಡು ಆಘಾತಕ್ಕೊಳಗಾಗಿ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದಂಪತಿ ಖಾಸಗಿ ಕಂಪನಿಗಳಲ್ಲಿ ಟೆಕ್ಕಿಗಳಾಗಿ ಕೆಲಸ ಮಾಡುತ್ತಿದ್ದರು. ದಂಪತಿಯ ನಡುವೆ ಆಗಾಗ್ಗೆ ಕಲಹಗಳು ನಡೆಯುತ್ತಿದ್ದವು ಎಂದು ತಿಳಿದುಬಂದಿದೆ. ಇತ್ತೀಚೆಗೆ ಕೂಡ ಇಬ್ಬರ ನಡುವೆ ಜಗಳ ನಡೆದಿದ್ದು, ಮಾನಸಿಕ ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.

ಪೋಸ್ಟ್‌ಮಾರ್ಟಂ ವರದಿ ಬಂದ ಮೇಲೆ ಕಾರಣ ಬಯಲು

ಸೋಮವಾರ ಪತ್ನಿ ಮನೆಯಲ್ಲಿ ಇಲ್ಲದ ವೇಳೆ ಭಾನು ಚಂದ್ರ ರೆಡ್ಡಿ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ನಂತರ ಮನೆಗೆ ಬಂದ ಶಾಜಿಯಾ ಕೊಠಡಿಯ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಗಮನಿಸಿದ್ದು, ಹಲವು ಬಾರಿ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗದ ಕಾರಣ ಭದ್ರತಾ ಸಿಬ್ಬಂದಿ ಹಾಗೂ ನೆರೆಹೊರೆಯವರ ಸಹಾಯ ಕೇಳಿದ್ದಾರೆ.

ಇದನ್ನೂ ಓದಿ ಕ್ರೀಡಾಂಗಣ ಮಾತ್ರವಲ್ಲದೆ ಮೆಟ್ರೋ, ಬಸ್ ನಿಲ್ದಾಣಗಳಲ್ಲೂ ಮೊಬೈಲ್ ಕಳ್ಳತನ! 21 ಫೋನ್​ಗಳನ್ನು ವಶಕ್ಕೆ ಪಡೆದ ಪೊಲೀಸರು

ಬಾಗಿಲು ಬಲವಂತವಾಗಿ ತೆರೆಯುತ್ತಿದ್ದಂತೆ ಭಾನು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ದೃಶ್ಯದಿಂದ ಬೆಚ್ಚಿಬಿದ್ದ ಶಾಜಿಯಾ ಕೆಲವೇ ನಿಮಿಷಗಳಲ್ಲಿ ಅದೇ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕುಟುಂಬದವರ ದೂರಿನ ಆಧಾರದ ಮೇಲೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣಗಳನ್ನು ದಾಖಲಿಸಲಾಗಿದೆ. ದಂಪತಿಯ ಸಾವಿಗೆ ಕಾರಣವೇನು ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಂಪತಿಯ ಸಾವಿಗೆ ನಿಖರ ಕಾರಣ ಏನು ಎಂಬುದು ಪೋಸ್ಟ್‌ಮಾರ್ಟಂ ವರದಿ ಬಳಿಕ ತಿಳಿಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

April Festival List 2026: ಏಪ್ರಿಲ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳ ಪಟ್ಟಿ ಇಲ್ಲಿದೆ

ಹಬ್ಬ ಹರಿದಿನಗಳನ್ನು ಎಲ್ಲರೂ ಸಂಭ್ರಮಿಸುವವರೇ. ಈ ಹಿಂದೂ ಧರ್ಮದಲ್ಲಿ ವರ್ಷಪೂರ್ತಿ ವಿವಿಧ ಹಬ್ಬಗಳು (festivals), ಆಚರಣೆಗಳಿವೆ. ಏಪ್ರಿಲ್ ತಿಂಗಳಲ್ಲಿ ಹಲವು ಹಬ್ಬಗಳಿವೆ. ನಾವೀಗ ವರ್ಷದ ಮೂರನೇ ತಿಂಗಳಾದ ಮಾರ್ಚ್ ಕಳೆದು ಏಪ್ರಿಲ್ ತಿಂಗಳಿಗೆ ಕಾಲಿಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದಕ್ಕೂ ಮುನ್ನ ಏಪ್ರಿಲ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳು, ವ್ರತಾಚರಣೆಗಳ ಬಗ್ಗೆ  ನೀವು ತಿಳಿದುಕೊಳ್ಳಿ.

ಏಪ್ರಿಲ್ ತಿಂಗಳಲ್ಲಿ ಆಚರಿಸುವ ಹಬ್ಬಗಳ ಪಟ್ಟಿ ಇಲ್ಲಿದೆ;

  • ಏಪ್ರಿಲ್ 02 – ಹನುಮಜಯಂತಿ
  • ಏಪ್ರಿಲ್ 02 – ಪೂರ್ಣಿಮಾ
  • ಏಪ್ರಿಲ್ 03- ಗುಡ್ ಫ್ರೈಡೇ
  • ಏಪ್ರಿಲ್ 03- ಚೈತ್ರ ಕೃಷ್ಣ ಪಕ್ಷ
  • ಏಪ್ರಿಲ್ 04 – ಈಸ್ಟರ್ ಶನಿವಾರ
  • ಏಪ್ರಿಲ್ 05 – ಸಂಕಷ್ಟಹರ ಚತುರ್ಥಿ
  • ಏಪ್ರಿಲ್ 11 – ವೃಷಭ ಜಯಂತಿ
  • ಏಪ್ರಿಲ್ 13 – ವಲ್ಲಭಾಚಾರ್ಯ ಜಯಂತಿ
  • ಏಪ್ರಿಲ್ 13 – ಸರ್ವೈಕಾದಶಿ ವರೂಥಿನಿ
  • ಏಪ್ರಿಲ್ 14 – ಮೇಷ ಸಂಕ್ರಮಣ
  • ಏಪ್ರಿಲ್ 15 – ಸೌರಯುಗಾದಿ (ವಿಷು)
  • ಏಪ್ರಿಲ್ 15 – ಪ್ರದೋಷ
  • ಏಪ್ರಿಲ್ 15 – ಮಾಸ ಶಿವರಾತ್ರಿ
  • ಏಪ್ರಿಲ್ 17 – ಅಮಾವಾಸ್ಯಾ
  • ಏಪ್ರಿಲ್ 18 – ವೈಶಾಖ ಶುಕ್ಲಪಕ್ಷ
  • ಏಪ್ರಿಲ್ 19 – ಪರಶುರಾಮ ಜಯಂತಿ
  • ಏಪ್ರಿಲ್ 20 – ಬಸವೇಶ್ವರ ಜಯಂತಿ
  • ಏಪ್ರಿಲ್ 20 – ಅಕ್ಷಯ ತೃತೀಯ
  • ಏಪ್ರಿಲ್ 21- ಶಂಕರಾಚಾರ್ಯ ಜಯಂತಿ
  • ಏಪ್ರಿಲ್ 21 – ವಿಜಯ ಧ್ವಜಾಚಾರ್ಯ ಪುಣ್ಯತಿಥಿ
  • ಏಪ್ರಿಲ್ 22 – ರಾಮಾನುಜಾಚಾರ್ಯ ಜಯಂತಿ
  • ಏಪ್ರಿಲ್ 23 – ಗಂಗೋತ್ಪತ್ತಿ
  • ಏಪ್ರಿಲ್ 27 – ಮಹಾನಕ್ಷತ್ರ ಭರಣಿ
  • ಏಪ್ರಿಲ್ 27 – ಸರ್ವೈಕಾದಶಿ ಮೋಹಿನಿ
  • ಏಪ್ರಿಲ್ 28 – ವೇದ ವ್ಯಾಸ ಜಯಂತಿ
  • ಏಪ್ರಿಲ್ 28 – ಪ್ರದೋಷ
  • ಏಪ್ರಿಲ್ 30 – ನರಸಿಂಹ ಜಯಂತಿ

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

19 ವರ್ಷಗಳಲ್ಲೇ ಮೊದಲ ಬಾರಿ… CSK ಪಾಲಿಗೆ ಇದು ಅಂತಿಂಥ ಸೋಲಲ್ಲ!

Source link

KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ನೇಮಕಾತಿ; ಪದವೀಧರರು ಅರ್ಹರು

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಉದ್ಯೋಗಾವಕಾಶಗಳನ್ನು ಘೋಷಿಸಿದೆ. ರಾಜ್ಯದ ಚಾಮರಾಜನಗರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 18 ಕ್ಷೇತ್ರ ತನಿಖಾಧಿಕಾರಿ (Field Investigator) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸುವುದು ಅಗತ್ಯ. ಏಕೆಂದರೆ ಇಂದೇ (ಮಾರ್ಚ್ 31) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ಮಾನದಂಡಗಳ ಪ್ರಕಾರ ಆಕರ್ಷಕ ವೇತನವನ್ನು ನೀಡಲಾಗುವುದು. ವಯೋಮಿತಿಯಲ್ಲಿನ ಸಡಿಲಿಕೆಯು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ನ ನಿಯಮಾವಳಿಗಳಿಗೆ ಅನುಗುಣವಾಗಿರಲಿದೆ. ವಿಶೇಷವೆಂದರೆ, ಈ ನೇಮಕಾತಿ ಪ್ರಕ್ರಿಯೆಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ, ಇದು ಎಲ್ಲಾ ವರ್ಗದ ಅರ್ಹ ಅಭ್ಯರ್ಥಿಗಳಿಗೆ ಮುಕ್ತವಾಗಿ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ನೇಮಕಾತಿ ಪ್ರಕ್ರಿಯೆಯು ಪ್ರಮುಖವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತರು ಮೊದಲು ಅಧಿಕೃತ ಅಧಿಸೂಚನೆಯನ್ನು ಕೂಲಂಕಷವಾಗಿ ಓದಿ, ತಾವು ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೇ ಎಂದು ಖಚಿತಪಡಿಸಿಕೊಳ್ಳಬೇಕು.

ಅರ್ಜಿ ಸಲ್ಲಿಸಲು ಇಚ್ಛಿಸುವವರು ಕೆಎಚ್‌ಪಿಟಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‌ಲೈನ್ ಫಾರ್ಮ್ ಅನ್ನು ಭರ್ತಿ ಮಾಡಬೇಕು. ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ, ಸ್ಕ್ಯಾನ್ ಮಾಡಿದ ದಾಖಲೆಗಳು ಮತ್ತು ಇತ್ತೀಚಿನ ಫೋಟೋವನ್ನು ಅಪ್‌ಲೋಡ್ ಮಾಡುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಅರ್ಜಿ ಸಲ್ಲಿಸಿದ ನಂತರ, ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ಸ್ವೀಕೃತಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳುವುದು ಸೂಕ್ತ. ನೆನಪಿಡಿ, ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ, ಹಾಗಾಗಿ ವಿಳಂಬ ಮಾಡದೆ ತಕ್ಷಣವೇ ಅರ್ಜಿ ಸಲ್ಲಿಸಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version