ಗುಂಡಿನ ದಾಳಿ ಪ್ರಕರಣ; ಬಾಲಿವುಡ್ ಹೀರೋ ಬಂಧನ – Kannada News | KRK Arrested: Mumbai Firing Case; Kamal R Khan Admits Using Licensed Gun

ಮುಂಬೈ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಓಶಿವಾರಾ ಪೊಲೀಸರು  ಬಾಲಿವುಡ್​ ನಟ (Bollywood) ಮತ್ತು ಸ್ವಯಂ ಘೋಷಿತ ಚಲನಚಿತ್ರ ವಿಮರ್ಶಕ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್‌ಕೆ ಅವರನ್ನು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಓಶಿವಾರಾದ ವಸತಿ ಕಟ್ಟಡದಲ್ಲಿ ಗುಂಡು ಹಾರಿಸಲು ಬಳಸಲಾದ ಬಂದೂಕು ಕಮಲ್ ಆರ್. ಖಾನ್ ಒಡೆತನದ ಪರವಾನಗಿ ಪಡೆದ ಬಂದೂಕಿನಿಂದ ಬಂದಿದ್ದು ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಅವರೇ ಪ್ರಮುಖ ಶಂಕಿತರಾಗಿದ್ದಾರೆ.

ಶುಕ್ರವಾರ ಸಂಜೆ ಕೆಆರ್‌ಕೆ ಅವರನ್ನು ಓಶಿವಾರಾ ಪೊಲೀಸ್ ಠಾಣೆಗೆ ಕರೆತರಲಾಯಿತು. ತಮ್ಮ ಹೇಳಿಕೆಯಲ್ಲಿ, ಕೆಆರ್‌ಕೆ ಗುಂಡು ಹಾರಿಸಿದ್ದಾಗಿ ಒಪ್ಪಿಕೊಂಡರು ಮತ್ತು ಅವರು ಪರವಾನಗಿ ಪಡೆದ ಬಂದೂಕನ್ನು ಬಳಸಿರುವುದಾಗಿ ಹೇಳಿದ್ದಾರೆ. ಆದಾಗ್ಯೂ, ಯಾರಿಗೂ ಹಾನಿ ಮಾಡುವ ಉದ್ದೇಶವಿಲ್ಲ ಎಂದು ಅವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಆರ್‌ಕೆ ಅವರ ಬಂದೂಕನ್ನು ವಶಪಡಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮಕ್ಕಾಗಿ ದಾಖಲೆಗಳನ್ನು ಪ್ರಕ್ರಿಯೆಗೊಳಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ, ಜನವರಿ 18 ರಂದು ಅಂಧೇರಿಯ ಓಶಿವಾರಾದಲ್ಲಿರುವ ವಸತಿ ಕಟ್ಟಡದ ಮೇಲೆ ಎರಡು ಗುಂಡುಗಳು ಹಾರಿದ ಘಟನೆ ನಡೆದಿದೆ. ಅಂತಹ ಎರಡು ಗುಂಡುಗಳನ್ನು ನಳಂದ ಸೊಸೈಟಿಯ ಎರಡನೇ ಮಹಡಿಯಿಂದ ಮತ್ತು ಇನ್ನೊಂದು ನಾಲ್ಕನೇ ಮಹಡಿಯಿಂದ ವಶಪಡಿಸಿಕೊಳ್ಳಲಾಗಿದೆ. ಒಂದು ಫ್ಲಾಟ್ ಬರಹಗಾರ-ನಿರ್ದೇಶಕರಿಗೆ ಸೇರಿದ್ದು, ಇನ್ನೊಂದು ಮಾಡೆಲ್‌ಗೆ ಸೇರಿದೆ.

ಮೂಲಗಳ ಪ್ರಕಾರ, ನಳಂದ ಸೊಸೈಟಿಯ ಎರಡನೇ ಮಹಡಿಯಲ್ಲಿ ವಾಸಿಸುವ ನೀರಜ್ ಕುಮಾರ್ ಮಿಶ್ರಾ (45) ವೃತ್ತಿಯಲ್ಲಿ ಬರಹಗಾರ ಮತ್ತು ನಿರ್ದೇಶಕರಾಗಿದ್ದರೆ. ನಾಲ್ಕನೇ ಮಹಡಿಯಲ್ಲಿ ವಾಸಿಸುವ ಪ್ರತೀಕ್ ಬೈದ್ ಮಾಡೆಲ್ . ಗುಂಡಿನ ದಾಳಿಯ ನಂತರ, ಎರಡನೇ ಮತ್ತು ನಾಲ್ಕನೇ ಮಹಡಿಯಲ್ಲಿರುವ ಫ್ಲಾಟ್‌ಗಳಲ್ಲಿ ಗುಂಡುಗಳ ಗುರುತುಗಳು ಕಂಡುಬಂದಿವೆ.

ಇದನ್ನೂ ಓದಿ: ಏಕ್ತಾ ಕಪೂರ್ ನಿರ್ಮಾಣ ಮಾಡಿರೋ ಈ ಚಿತ್ರಗಳನ್ನು ವೀಕ್ಷಿಸಿದ್ದೀರಾ? ಮಿಸ್ ಮಾಡಲೇಬೇಡಿ

ಅಪರಾಧ ವಿಭಾಗದ ಹಲವಾರು ತಂಡಗಳು ಪ್ರಕರಣದ ತನಿಖೆ ನಡೆಸುತ್ತಿದ್ದವು. ಆದಾಗ್ಯೂ, ಆರಂಭದಲ್ಲಿ, ಸಿಸಿಟಿವಿ ದೃಶ್ಯಾವಳಿಗಳ ಕೊರತೆಯಿಂದಾಗಿ ಪೊಲೀಸರಿಗೆ ಯಾವುದೇ ಪುರಾವೆಗಳು ಸಿಗಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳ ಕೊರತೆಯಿಂದಾಗಿ ಪೊಲೀಸರಿಗೆ ಯಾವುದೇ ಪುರಾವೆಗಳು ಸಿಗಲಿಲ್ಲ. ಆದಾಗ್ಯೂ, ಕಮಲ್ ಆರ್. ಖಾನ್ ಅವರ ಬಂದೂಕಿನಿಂದ ಗುಂಡುಗಳು ಹಾರಿರುವ ಸಾಧ್ಯತೆಯಿದೆ ಎಂದು ಪೊಲೀಸರು ವಿಧಿವಿಜ್ಞಾನ ತಂಡದ ಸಹಾಯದಿಂದ ದೃಢಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಾಕಿಸ್ತಾನ್ ಟಿ20 ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್ – Kannada News | Pakistan squad for Australia series

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಜ್ಯಾಕ್ ಎಡ್ವರ್ಡ್ಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪಿ, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

Source link

‘ಟ್ರಾಫಿಕ್​​​ ಕಾರಣದಿಂದ ನಾನು ಹುಟ್ಟಿ ಬೆಳೆದ ಬೆಂಗಳೂರನ್ನು ಬಿಡುತ್ತಿದ್ದೇನೆ’: ಮಂಗಳೂರಿಗೆ ಹೋಗುವ ನಿರ್ಧಾರ ಮಾಡಿದ ಉದ್ಯಮಿ – Kannada News | Bangalore’s Decline: Traffic, Pollution Drive Residents Away. Is It Time to Leave?

ಬೆಂಗಳೂರು, ಜ.24: ಬೆಂಗಳೂರು (Bangalore) ಜೀವನದಿಂದ ಹೊರಗೆ ಬರುವುದು ಸುಲಭದ ಮಾತಲ್ಲ, ಅಲ್ಲಿನ ಜೀವನಕ್ಕೆ ಹೊಂದಿಕೊಂಡ ನಂತರ, ಬೇರೊಂದು ಕಡೆ ಸುಲಭವಾಗಿ ಜೀವನ ನಡೆಸಲು ತಕ್ಷಣದಲ್ಲಿ ಸಾಧ್ಯವಿಲ್ಲ. ಅದರಲ್ಲೂ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದವರಿಗೆ ಈ ನಗರವನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ, ಆದರೆ ಇಂದಿನ ಬೆಂಗಳೂರಿನ ಪರಿಸ್ಥಿತಿಯನ್ನು ನೋಡಿ. ಅನೇಕರು ಬೆಂಗಳೂರು ತೊರೆಯುವ ಮಾತುಗಳನ್ನು ಹಾಡುತ್ತಿದ್ದಾರೆ. ಇದಕ್ಕೆ ಕಾರಣ, ಇಲ್ಲಿನ ಕೆಟ್ಟ ವಾತಾವರಣ ಹಾಗೂ ಟ್ರಾಫಿಕ್​, ಜನರು ಈ ಟ್ರಾಫಿಕ್​​ಗೆ ಹೈರಾಣು ಆಗಿದ್ದಾರೆ. ಈ ಕಾರಣಕ್ಕೆ ಜಗತ್ತಿನ ಅತ್ಯಂತ ಜನದಟ್ಟಣೆ ಇರುವ ನಗರಗಳಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ಇದೀಗ ಉದ್ಯಮಿಯೊಬ್ಬರು ಇಲ್ಲಿನ ಟ್ರಾಫಿಕ್​​ ಹಾಗೂ ವಾತವರಣಕ್ಕೆ ಬೇಸತ್ತು ರಾಜಧಾನಿಯನ್ನು ಬಿಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 41 ವರ್ಷದ ಉದ್ಯಮಿಯೊಬ್ಬರನ್ನು ಸಂಚಾರ ದಟ್ಟಣೆ ಕಂಗೆಡಿಸಿದೆ.

ಕಳೆದ ಒಂದು ವರ್ಷದಿಂದ ಹೆಚ್ಚಾಗುತ್ತಿರುವ ಟ್ರಾಫಿಕ್ ಜಾಮ್‌ಗಳು ಮತ್ತು ಧೂಳು ಮಾಲಿನ್ಯ ತನ್ನ ಆರೋಗ್ಯ ಮತ್ತು ಮನಶಾಂತಿಗೆ ಹಾನಿ ಮಾಡುತ್ತಿವೆ ಎಂದು ಅವರು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕುಟುಂಬದೊಂದಿಗೆ ನೆಮ್ಮದಿಯ ಜೀವನಕ್ಕೆ ಅವರು ನಗರವನ್ನು ಬಿಟ್ಟು ಹೊರಗೆ ಹೋಗುವ ಪ್ಲಾನ್​ ಮಾಡಿಕೊಂಡಿದ್ದಾರೆ. ನಾನು ಹುಟ್ಟಿ ಬೆಳೆದ ಬೆಂಗಳೂರಿಗೆ ಈಗ ವಿದಾಯ ಹೇಳುವ ಸಮಯ ಬಂದಿದೆ. ನಾನು 41 ವರ್ಷದವನಾಗಿದ್ದು, ನನ್ನ ಸ್ವಂತ ವ್ಯವಹಾರ ನಡೆಸುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಬೆಂಗಳೂರಿನ ಟ್ರಾಫಿಕ್, ಧೂಳು ಮಾಲಿನ್ಯ ಮತ್ತು ಒತ್ತಡದ ಮಟ್ಟಗಳು ನನ್ನನ್ನು ತುಂಬಾ ಕಾಡುತ್ತಿವೆ. ಹೆಚ್ಚುತ್ತಿರುವ ಟ್ರಾಫಿಕ್ ಜಾಮ್‌ಗಳಲ್ಲಿ ಗಂಟೆಗಟ್ಟಲೆ ಪ್ರಯಾಣ ಮಾಡಬೇಕಾದ ನಿಷ್ಠಾವಂತ ತೆರಿಗೆದಾರರು ಮತ್ತು ಉದ್ಯೋಗಿಗಳ ಸ್ಥಿತಿ ನೋಡಿ ಬೇಸರವಾಗುತ್ತದೆ. ಕುಟುಂಬದೊಂದಿಗೆ ಬೇರೆ ಕಡೆ ಹೋಗಲು ಯೋಚನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ!

ಇಲ್ಲಿದೆ ನೋಡಿ ಪೋಸ್ಟ್​​:

ಈ ಪೋಸ್ಟ್​​ ಮೂಲಕ ನಾನು ಬೆಂಗಳೂರನ್ನು ದ್ವೇಷ ಮಾಡುತ್ತೇನೆ ಎಂದಲ್ಲ. ಬೆಂಗಳೂರಿನ ಜನ ಈ ಟ್ರಾಫಿಕ್​​ನಿಂದ ಬೇಸತ್ತು ಬೇರೆ ಬೇರೆ ಕಡೆ ಹೋಗುತ್ತಿದ್ದಾರೆ ಎಂಬುದು ನಮ್ಮ ಸರ್ಕಾರ ತಿಳಿಯಬೇಕು. ಈಗ ನಾನು ತೆಗೆದುಕೊಂಡ ನಿರ್ಧಾರ ಸರ್ಕಾರಕ್ಕೆ ಎಚ್ಚರಿಕೆ. ಈ ಪೋಸ್ಟ್‌ಗೆ ಅನೇಕ ನೆಟ್ಟಿಗರು ಸಹಮತ ವ್ಯಕ್ತಪಡಿಸಿದ್ದು, ಬೆಂಗಳೂರನ್ನು ತೊರೆಯುವ ಬಗ್ಗೆ ತಮ್ಮದೇ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಒಬ್ಬರು ನಾನು ಕೂಡ ಈ ಯೋಚನೆಯನ್ನು ಮಾಡಿದ್ದೇನೆ, ಬೆಂಗಳೂರಿನಿಂದ ಮೈಸೂರು ಹೋಗುವ ಯೋಜನೆ ಹಾಕಿಕೊಂಡಿದ್ದೇನೆ. . ನನ್ನ ಕೆಲ ಸಹೋದ್ಯೋಗಿಗಳು ಮತ್ತು ಕುಟುಂಬದವರು ಈಗಾಗಲೇ ಅದೇ ಕಾರಣಕ್ಕೆ ಅಲ್ಲಿಗೆ ಸ್ಥಳಾಂತರವಾಗಿದ್ದಾರೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಟ್ರಾಫಿಕ್‌ ಅನ್ನು ಬೇಕಾದರೂ ಸಹಿಸಿಕೊಳ್ಳಬಹುದು. ಆದರೆ ಧೂಳು, ಕಸ, ಮಣ್ಣು ನನಗೆ ತುಂಬಾ ಕಾಡುತ್ತಿದೆ. ನಗರ ಇಷ್ಟು ಅಸಮರ್ಪಕವಾಗಿ ಮತ್ತು ನಿರ್ಲಕ್ಷ್ಯದಿಂದ ಎಂದಿಗೂ ಕಾಣಿಸಿಕೊಂಡಿರಲಿಲ್ಲ. ಪಾನ್/ಗುಟ್ಕಾ ಕಲೆಗಳ ಸಮಸ್ಯೆಯೂ ಇಷ್ಟು ಗಂಭೀರವಾಗಿರಲಿಲ್ಲ ಎಂದು ಹೇಳಿದ್ದಾರೆ. ಇನ್ನು ಈ ಎಲ್ಲ ಕಮೆಂಟ್​​​ ನೋಡಿ ಈ ಉದ್ಯಮಿ ನಾನು ಮಂಗಳೂರು ಬೆಸ್​ಟ್​​​ ಎಂದು ಆಯ್ಕೆ ಮಾಡಿಕೊಂಡಿದ್ದೇನೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಂದುಕೊಂಡಿದ್ದಕ್ಕಿಂತ ಡಬಲ್ ಸಂಪಾದಿಸಿದ ಗಿಲ್ಲಿ ನಟ – Kannada News | Gilli’s Bigg Boss Fame: 2 Million Instagram Followers and Unprecedented Popularity Record

ಒಂದು ಶೋ ಎಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ತಂದುಕೊಡಬಹುದು ಎಂಬುದಕ್ಕೆ ಬಿಗ್ ಬಾಸ್ (Bigg Boss) ಶೋ ಉತ್ತಮ ಉದಾಹರಣೆ. ಗಿಲ್ಲಿ ನಟ ಅವರು ಅಪಾರವಾದ ಜನಪ್ರಿಯತೆ ಸಂಪಾದಿಸಿದ್ದಾರೆ. ಹೋದಲ್ಲಿ ಬಂದಲ್ಲಿ ಜನರು ಮುತ್ತಿಕೊಳ್ಳುತ್ತಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಚಿನ್ನದ ಅಂಗಡಿ ಉದ್ಘಾಟನೆಗೆ ಹೋದಾಗ ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಇಷ್ಟೆಲ್ಲ ಜನಪ್ರಿಯತೆ ಮಧ್ಯೆ ಗಿಲ್ಲಿ ನಟ ಅವರು ಅಂದುಕೊಂಡಿದ್ದಕ್ಕಿಂತ ದುಪ್ಪಟ್ಟು ಸಂಪಾದನೆ ಮಾಡಿದ್ದಾರೆ.

ಗಿಲ್ಲಿ ಅವರು ಹಲವು ರಿಯಾಲಿಟಿ ಶೋಗಳನ್ನು ಮಾಡಿ ಬಂದವರು. ಅವರು 5-6 ಶೋ ಮಾಡಿದ್ದಾಗಿ ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡಿದ್ದರು. ಯಾವ ಶೋನಲ್ಲೂ ವಿನ್ನರ್ ಆಗೋಕೆ ಅವರಿಂದ ಸಾಧ್ಯವೇ ಆಗಿಲ್ಲ. ಜೊತೆಗೆ ಅಂದುಕೊಂಡ ರೀತಿಯಲ್ಲಿ ಹಿಂಬಾಲಕರನ್ನು ಸಂಪಾದಿಸಲು ಅವರ ಬಳಿ ಸಾಧ್ಯವಾಗಿರಲಿಲ್ಲ. ಆದರೆ, ಬಿಗ್ ಬಾಸ್ ಶೋ ಎಲ್ಲವನ್ನೂ ಬದಲಿಸಿತು.

ಬಿಗ್ ಬಾಸ್​​ಗೆ ಹೋಗುವಾಗ ಗಿಲ್ಲಿ ನಟನಿಗೆ ಇನ್​​​ಸ್ಟಾಗ್ರಾಮ್​​ನಲ್ಲಿ ಇದ್ದಿದ್ದು ಕೇವಲ 1 ಲಕ್ಷ ಹಿಂಬಾಲಕರು. ಬಿಗ್ ಬಾಸ್ ಶೋ ಮುಗಿಯಲು ಇನ್ನೇನು ತಿಂಗಳು ಬಾಕಿ ಇದೆ ಎಂದಾಗ ಗಿಲ್ಲಿ ಒಂದು ಮಾತನ್ನು ಹೇಳಿದ್ದರು. ‘ಕಾವು (ಕಾವ್ಯಾ) ಇನ್​​ಸ್ಟಾದಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಆದ್ರೆ ಸಾಕಿತ್ತು’ ಎಂದಿದ್ದರು. ಇದಾದ ಬಳಿಕ ಗಿಲ್ಲಿಯ ಹಿಂಬಾಲಕರ ಸಂಖ್ಯೆ ಮಿತಿಮೀರಿ ಏರಿಕೆ ಆಯಿತು.

ಗಿಲ್ಲಿನ ಇನ್​​ಸ್ಟಾದಲ್ಲಿ ಫಾಲೋ ಮಾಡುವಂತೆ ಫ್ಯಾನ್ಸ್ ಕರೆಕೊಟ್ಟರು. ಇದಾದ ಬಳಿಕ ಅವರ ಇನ್​​ಸ್ಟಾ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಾ ಹೋದವು. ಫಿನಾಲೆ ದಿನ ಎನ್ನುವಾಗ 1.2 ಮಿಲಿಯನ್ ಹಿಂಬಾಲಕರನ್ನು ಅವರು ಸಂಪಾದಿಸಿದ್ದರು. ಈಗ ಆ ಸಂಖ್ಯೆ 2 ಮಿಲಿಯನ್ ತಲುಪಿದೆ. 20 ಲಕ್ಷ ಹಿಂಬಾಲಕರನ್ನು ಸಂಪಾದಿಸಿ ಅವರು ದಾಖಲೆ ಬರೆದಿದ್ದಾರೆ. ಅವರು ಅಂದುಕೊಂಡಿದ್ದು 10 ಲಕ್ಷ, ಸಿಕ್ಕಿದ್ದು ಮಾತ್ರ 20 ಲಕ್ಷ.

ಇದನ್ನೂ ಓದಿ: ಗಿಲ್ಲಿ ಬಳಿಯೇ ಉಳೀತಾ ಚಿನ್ನದ ಚೈನ್, ಉಂಗುರ? ವಿವರಿಸಿದ ನಟ

ಕನ್ನಡ ಬಿಗ್ ಬಾಸ್​ಗೆ ಸ್ಪರ್ಧಿಸಿದವರ ಪೈಕಿ ನಿವೇದಿತಾ ಗೌಡ (2.1 ಮಿಲಿಯನ್) ಹೆಚ್ಚು ಹಿಂಬಾಲಕರನ್ನು ಹೊಂದಿದ್ದಾರೆ. ಅವರನ್ನು ಗಿಲ್ಲಿ ಹಿಂದಿಕ್ಕೋ ಸಾಧ್ಯತೆ ದಟ್ಟವಾಗಿದೆ. ಗಿಲ್ಲಿಗೆ ಇನ್ನೂ ಈ ಜನಪ್ರಿಯತೆಯನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅವರು ರಿಯಾಲಿಟಿನ ಒಪ್ಪಿಕೊಳ್ಳಲು ಸಾಕಷ್ಟು ಕಷ್ಟಪಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Namma Metro: ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್? – Kannada News | Dollars Colony Flyover Demolition for Bengaluru Orange Line Metro

ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್?

ಬೆಂಗಳೂರು, ಜನವರಿ 24: ಜೆಪಿ ನಗರದ ಸುತ್ತಮುತ್ತಲಿನ ಡಾಲರ್ಸ್ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಡಾಲರ್ಸ್ ಕಾಲೋನಿ ಜಂಕ್ಷನ್ ಫ್ಲೈಓವರ್ ಅನ್ನು ಡೆಮಾಲಿಷನ್ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಟೆಂಡರ್ ಕರೆದಿದೆ. ಜಯದೇವ ಫ್ಲೈಓವರ್ ತೆರವು ಬಳಿಕ ಈಗ ಮತ್ತೊಂದು ಮೇಲ್ಸುತುವೆ ತೆರವಿಗೆ ಮುಂದಾಗಿರುವುದು ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ತೀವ್ರ ಬೇಸರಕ್ಕೆ ಕಾರಣವಾಗಿದೆ.

ಒಂದು ಕೀಮೀ ಉದ್ದದ ಮೇಲ್ಸೇತುವೆ ತೆರವು!

ಜೆಪಿ ನಗರದ ನಾಲ್ಕನೇ ಹಂತದಿಂದ ಕೆಂಪಾಪುರವರೆಗಿನ ಆರೆಂಜ್ ಲೈನ್ ಮೆಟ್ರೋ ಕಾಮಗಾರಿಯ ಹಿನ್ನೆಲೆಯಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. 2018ರಲ್ಲಿ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಂಡಿದ್ದ ಈ ಫ್ಲೈಓವರ್, ಬನ್ನೇರುಘಟ್ಟ ರಸ್ತೆ, ಮೈಸೂರು ರಸ್ತೆ ಹಾಗೂ ಜಯನಗರ ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಮಹತ್ವದ ನೆರವಾಗಿತ್ತು. ಸುಮಾರು ಒಂದು ಕಿಲೋಮೀಟರ್ ಉದ್ದದ ಈ ಮೇಲ್ಸುತುವೆ ತೆರವುಗೊಳ್ಳಲಿರುವುದರಿಂದ ದಿನನಿತ್ಯದ ಸಂಚಾರಕ್ಕೆ ಅಡಚಣೆ ಉಂಟಾಗಲಿದೆ ಎಂದು ವಾಹನ ಸವಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದು ಟ್ರಾಫಿಕ್​​​ನಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಗುಡ್​ನ್ಯೂಸ್, ಕೇಂದ್ರದತ್ತ ಎಲ್ಲರ ಚಿತ್ತ

ಕಾಮಗಾರಿ ಮುಗಿಯುವ ತನಕ ಟ್ರಾಫಿಕ್ ಸಮಸ್ಯೆ

ಬಿಎಂಆರ್ಸಿಎಲ್ ಆರೆಂಜ್ ಲೈನ್ ಮೆಟ್ರೋ ಯೋಜನೆಯಡಿ ಡಬಲ್ ಡೆಕ್ಕರ್ ಫ್ಲೈಓವರ್ ಜೊತೆಗೆ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಇತ್ತೀಚೆಗೆ ಸಿವಿಲ್ ಕಾಮಗಾರಿಗೆ ಟೆಂಡರ್ ಆಹ್ವಾನಿಸಿದೆ. ಮೂರನೇ ಹಂತದ ಮೆಟ್ರೋ ಯೋಜನೆಯಾದ ಆರೆಂಜ್ ಲೈನ್ ಒಟ್ಟು 44.65 ಕಿಮೀ ವಿಸ್ತೀರ್ಣ ಹೊಂದಿದ್ದು, ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಮೊದಲ ಕಾರಿಡಾರ್ ಹಾಗೂ ಹೊಸಹಳ್ಳಿ ಮೆಟ್ರೋ ನಿಲ್ದಾಣದಿಂದ ಕಡಬಗೆರೆವರೆಗೆ ಎರಡನೇ ಕಾರಿಡಾರ್ ಒಳಗೊಂಡಿದೆ. ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಮೆಟ್ರೋ ಕಾಮಗಾರಿ ಸ್ವಾಗತಾರ್ಹವಾದರೂ, ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣ ಪೂರ್ಣಗೊಳ್ಳುವವರೆಗೆ ಸಂಚಾರ ಸಮಸ್ಯೆ ಇದ್ದೇ ಇರುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Kumara Shashti: ಇಂದು ಕುಮಾರ ಷಷ್ಠಿ; ನಾಗಾಂಶ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Kumara Shashti: Understand Nagamsha, its Spiritual Significance and Astrological Remedies

ನಾಗಾಂಶ ಎಂಬುದು ಜ್ಯೋತಿಷ್ಯಶಾಸ್ತ್ರದಲ್ಲಿ ಬಳಸುವ ಒಂದು ವಿಶೇಷ ಪರಿಕಲ್ಪನೆ. ಜಾತಕದಲ್ಲಿ ರಾಹು ಅಥವಾ ಕೇತು ಗ್ರಹಗಳು ಇರುವ ನಕ್ಷತ್ರದ ಪಾದ (ಹಂತ) ಕ್ಕೆ ನಾಗಾಂಶ ಎಂದು ಕರೆಯಲಾಗುತ್ತದೆ. ಸರಳವಾಗಿ ಹೇಳುವುದಾದರೆ, ರಾಹು–ಕೇತುಗಳ ನಕ್ಷತ್ರ ಸ್ಥಿತಿಯಿಂದ ವ್ಯಕ್ತಿಗೆ ಬರುವ ಕರ್ಮಬಂಧ, ಸರ್ಪದೋಷ ಅಥವಾ ಪೂರ್ವಜನ್ಮ ಸಂಬಂಧಿತ ಫಲಗಳನ್ನು ಸೂಚಿಸುವ ಅಂಶವೇ ನಾಗಾಂಶ.

ಜ್ಯೋತಿಷ್ಯದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ರಾಹು ಅಥವಾ ಕೇತು ಆಶ್ಲೇಷಾ, ಜ್ಯೇಷ್ಠಾ ಅಥವಾ ರೇವತಿ ನಕ್ಷತ್ರಗಳ ನಿರ್ದಿಷ್ಟ ಪಾದಗಳಲ್ಲಿ ಇದ್ದರೆ ಅದನ್ನು ನಾಗಾಂಶ ಎಂದು ಗುರುತಿಸಲಾಗುತ್ತದೆ. ಈ ಸ್ಥಿತಿಯು ಇದ್ದರೆ ವ್ಯಕ್ತಿಯ ಜೀವನದಲ್ಲಿ ಅಜ್ಞಾತ ಭಯ, ವಿಳಂಬ, ಸಂಬಂಧ ಸಮಸ್ಯೆಗಳು, ವಿವಾಹ ವಿಳಂಬ, ಸಂತಾನ ಸಮಸ್ಯೆ ಅಥವಾ ಮಾನಸಿಕ ಅಶಾಂತಿ ಕಾಣಿಸಿಕೊಳ್ಳಬಹುದು ಎಂದು ನಂಬಲಾಗುತ್ತದೆ.

ಕುಮಾರ ಷಷ್ಠಿಯಂದು ನಾಗ ಪೂಜೆ:

ದೇಹದಲ್ಲಿರುವ ನಾಗಾಂಶವನ್ನು ಜಾಗೃತಗೊಳಿಸಲು ಸುಬ್ರಹ್ಮಣ್ಯ ಪೂಜೆಯು ಸಹಕಾರಿಯಾಗಿದೆ. ನಾಲಿಗೆ, ಹಣೆಯ ಭಾಗ ಮತ್ತು ಬೆನ್ನುಮೂಳೆಯಲ್ಲಿ ನಾಗಾಂಶವು ಇರುತ್ತದೆ ಎಂದು ನಂಬಲಾಗಿದೆ. ಸುಬ್ರಹ್ಮಣ್ಯ ಪೂಜೆಯಿಂದ ನಾಲಿಗೆ ಶುದ್ಧಿಯಾದಾಗ ವಾಕ್‌ಶಕ್ತಿ ವೃದ್ಧಿಸುತ್ತದೆ. ಹಣೆಯಲ್ಲಿರುವ ನಾಗಾಂಶ ಜಾಗೃತವಾದಾಗ ಜನರಿಂದ ಯಾವುದೇ ತೊಂದರೆಯಾಗುವುದಿಲ್ಲ. ಬೆನ್ನುಮೂಳೆಯಲ್ಲಿರುವ ಸಪ್ತಚಕ್ರಗಳು ಜಾಗೃತಗೊಂಡಾಗ ವ್ಯಕ್ತಿಯು ಉನ್ನತ ಸ್ಥಾನವನ್ನು ಅಲಂಕರಿಸಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ

ಕುಮಾರ ಷಷ್ಠಿಯಂದು ಮನೆಯಲ್ಲಿ ಸಣ್ಣ ಸುಬ್ರಹ್ಮಣ್ಯ ವಿಗ್ರಹವಿದ್ದರೆ ಅದಕ್ಕೆ ಅಭಿಷೇಕ ಮಾಡಬಹುದು. ಪುಟ್ಟ ಮಕ್ಕಳಿಗೆ ಹುತ್ತದ ಮೃತ್ತಿಕೆಯನ್ನು ಹಣೆಗೆ ಹಚ್ಚುವುದರಿಂದ ಸಾಕಷ್ಟು ಶುಭವಾಗುತ್ತದೆ. ಜಗತ್ ಸರ್ವಂ ದೈವಾಧೀನಂ ಎಂಬ ಮಾತಿನಂತೆ, ಎಲ್ಲವೂ ದೇವರ ಅಧೀನದಲ್ಲಿರುವುದರಿಂದ ಶ್ರದ್ಧಾಭಕ್ತಿಗಳಿಂದ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಈ ಪೂಜೆಯನ್ನು ಮಾಡುವುದು ಅತ್ಯಂತ ಫಲಪ್ರದ. ನಾಗಬನ, ನಾಗಬಿಲ, ನಾಗಮೂರ್ತಿ, ನಾಗಬಿಂಬಗಳಿಗೆ ಹಾಲಿನ ಅಭಿಷೇಕ ಮಾಡುವುದರಿಂದ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ. ಕುಮಾರ ಷಷ್ಠಿಯು ಕಷ್ಟಗಳಿಂದ ಮುಕ್ತಿ ಪಡೆಯಲು ಮತ್ತು ಆಸೆಗಳನ್ನು ಈಡೇರಿಸಿಕೊಳ್ಳಲು ಭಗವಂತನ ಮೊರೆ ಹೋಗುವ ಪವಿತ್ರ ದಿನಗಳಲ್ಲಿ ಒಂದಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:33 am, Sat, 24 January 26

Source link

National Girl Child Day 2026: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸವುದರ ಹಿಂದಿನ ಉದ್ದೇಶವೇನು? – Kannada News | National Girl Child Day 2026: What is the purpose behind celebrating National Girl Child Day?

ಇಂದಿಗೂ ಈ ಪುರುಷ ಪ್ರಧಾನ ಸಮಾಜದಲ್ಲಿಹೆಣ್ಣಿನ ಬಗ್ಗೆ ದ್ವಂದ್ವ ಮನೋಭಾವನೆಯಿದೆ. ಸಮಾಜದಲ್ಲಿ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಗುತ್ತಿಲ್ಲ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ತಾತ್ಸಾರ ನಿಂತಿಲ್ಲ. ಒಂದಲ್ಲಾ ಒಂದು ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ, ಅವರಿಗೆ ಸಮಾನ ಅವಕಾಶಗಳು ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು (Girl Child) ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು, ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಪ್ರತಿವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಇತಿಹಾಸವೇನು?

ಹೆಣ್ಣು ಮಕ್ಕಳ ಹಕ್ಕುಗಳು, ಕಲ್ಯಾಣ ಮತ್ತು ಸಬಲೀಕರಣವನ್ನು ಉತ್ತೇಜಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಭಾರತ ಸರ್ಕಾರವು 2008 ರಲ್ಲಿ ಪ್ರಾರಂಭಿಸಿತು. ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಹೆಣ್ಣು ಮಕ್ಕಳ ರಕ್ಷಣೆ, ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸಮಾಜದಲ್ಲಿ ಅವರಿಗೆ ಸಮಾನ ಅವಕಾಶಗಳನ್ನು ಒದಗಿಸುವುದು. ಅಲ್ಲದೆ ಈ ದಿನ ಲಿಂಗ ಅಸಮಾನತೆ, ಬಾಲ್ಯ ವಿವಾಹ, ಹೆಣ್ಣು ಭ್ರೂಣ ಹತ್ಯೆ ಇತ್ಯಾದಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಸವಾಲುಗಳನ್ನು ತೊಡೆದುಹಾಕುವ ಗುರಿಯನ್ನು ಹೊಂದಿದೆ.

ಜನವರಿ 24 ರಂದೇ ಏಕೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ?

ಹೆಣ್ಣು ಮಕ್ಕಳಿಗಾಗಿ ಸಕಾರಾತ್ಮಕ ಮನೋಭಾವ ಮತ್ತು ಸಮಾನ ಅವಕಾಶಗಳನ್ನು ಉತ್ತೇಜಿಸಲು ಭಾರತ ಸರ್ಕಾರವು 2008 ರಲ್ಲಿ  ರಾಷ್ಟ್ರೀಯ ಹೆಣ್ಣು  ಮಕ್ಕಳ ದಿನವನ್ನು ಪ್ರಾರಂಭಿಸಿತು. ಭಾರತದ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಪ್ರಮಾಣವಚನ ಸ್ವೀಕರಿಸಿದ ದಿನದ  ಸ್ಮರಣಾರ್ಥವಾಗಿ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿನ ಆಚರಿಸುವುದರ ಹಿಂದಿದೆ ಕಾರಣ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮಹತ್ವವೇನು?

ಹೆಣ್ಣುಮಕ್ಕಳ ಹಕ್ಕುಗಳ ರಕ್ಷಣೆ: ಹೆಣ್ಣುಮಕ್ಕಳ ಹಕ್ಕುಗಳನ್ನು ರಕ್ಷಿಸಲು ಮತ್ತು ಸಮಾಜದಲ್ಲಿ ಅವರಿಗೆ ಸಮಾನ ಅವಕಾಶಗಳನ್ನು ಒದಗಿಸಲು ಈ ದಿನವನ್ನು ಆಚರಿಸಲಾಗುತ್ತದೆ.

ಹೆಣ್ಣು ಮಕ್ಕಳ ಸಬಲೀಕರಣ: ಈ ದಿನವನ್ನು ಹೆಣ್ಣು ಮಕ್ಕಳ ಸಬಲೀಕರಣ ಮತ್ತು ಅವರ ಕನಸುಗಳನ್ನು ನನಸಾಗಿಸಲು ಪ್ರೇರೇಪಿಸಲು ಆಚರಿಸಲಾಗುತ್ತದೆ.

ಸಮಾನ ಅವಕಾಶ ಒದಗಿಸುವುದು: ಹೆಣ್ಣು ಮಕ್ಕಳಿಗೆ ಶಿಕ್ಷಣ, ಆರೋಗ್ಯ, ಪೋಷಣೆ ಮತ್ತು ಸಾಮಾಜಿಕ ಹಕ್ಕುಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸುವುದು.

ಲಿಂಗ ಆಧಾರಿತ ತಾರತಮ್ಯವನ್ನು ಹೋಗಲಾಡಿಸುವುದು: ಹೆಣ್ಣು ಭ್ರೂಣಹತ್ಯೆ, ಬಾಲ್ಯವಿವಾಹ ಮತ್ತು ತಾರತಮ್ಯವನ್ನು ತಡೆಗಟ್ಟಲು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ಸಾಮಾಜಿಕ ಮನಸ್ಥಿತಿಯನ್ನು ಬದಲಾಯಿಸುವುದು:  ಈ ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ತಾತ್ಸಾ ಮನೋಭಾವವನ್ನು ಹೋಗಲಾಡಿಸುವುದು ಈ ದಿನದ ಉದ್ದೇಶವಾಗಿದೆ. ಇದರಿಂದ ಹೆಣ್ಣುಮಕ್ಕಳಿಗೆ ಗೌರವ, ಭದ್ರತೆ ಮತ್ತು ಸಮಾನ ಅವಕಾಶಗಳು ಸಿಗುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

Source link

ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್ – Kannada News | Zameer Ahmed Khan review Zaid Khan Cult Movie

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ತೆರೆಗೆ ಬಂದಿದೆ. ಈ ಸಿನಿಮಾನ ಝೈದ್ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವೀಕ್ಷಿಸಿದ್ದಾರೆ. ‘ಸಿನಿಮಾ ನೋಡಿದ ಜನರು ವಿಮರ್ಶೆ ತಿಳಿಸಬೇಕು. ನಾನು ತಂದೆಯಾಗಿ ಚೆನ್ನಾಗಿದೆ ಎಂದೇ ಹೇಳುತ್ತೇನೆ. ಆದರೆ, ಸಿನಿಮಾ ನಿಜಕ್ಕೂ ಉತ್ತಮವಾಗಿದೆ. ಬನಾರಸ್ ಚಿತ್ರಕ್ಕೆ ಹೋಲಿಸಿದರೆ ಇದು ಬೇರೆ ರೀತಿ ಇದೆ’ ಎಂದಿದ್ದಾರೆ ಝೈದ್ ಖಾನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ – Kannada News | Chamarajanagar: Leopard That Killed Devotee During MM Hills Foot Pilgrimage Captured

ಚಾಮರಾಜನಗರ, ಜನವರಿ 24: ಚಾಮರಾಜನಗರ (Chamarajanagar) ಜಿಲ್ಲೆ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆ ನೇತೃತ್ವದಲ್ಲಿ ಡ್ರೋನ್ ಕಣ್ಗಾವಲು ನೆರವಿನೊಂದಿಗೆ ಬೋನುಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ಇಳಿಜಾರು ಪ್ರದೇಶದಲ್ಲಿ ಗುರುವಾರ ತಡರಾತ್ರಿ ಚಿರತೆ ಸಿಕ್ಕಿಬಿದ್ದಿದೆ.

ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್ ಅವರ ದುರಂತ ಸಾವಿನ ನಂತರ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬುಧವಾರ ಬೆಳಗಿನ ಜಾವ ಈ ಪ್ರವೀಣ್ ಮೇಲೆ ಚಿರತೆ ದಾಳಿ ನಡೆದಿತ್ತು. ದೇವಾಲಯದಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ದಟ್ಟವಾದ ಕಾಡಿನಲ್ಲಿ ಚಿರತೆ ಅವರ ಮೇಲೆ ದಾಳಿ ಮಾಡಿತ್ತು ಎನ್ನಲಾಗಿದೆ.

ಚಿರತೆ ಸೆರೆಹಿಡಿಯುವ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಚಾಮರಾಜನಗರ ಜಿಲ್ಲಾಡಳಿತವು ಅರಣ್ಯ ಮಾರ್ಗಗಳಲ್ಲಿ ಪಾದಯಾತ್ರೆಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿತ್ತು.

ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಪಾದಯಾತ್ರೆ ನಿಷೇಧ

ಚಿರತೆ ದಾಳಿ ಘಟನೆ ಬೆನ್ನಲ್ಲೇ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೇಲೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಅರಣ್ಯ ಇಲಾಖೆಯು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಯಾತ್ರಿಕರು ಅಧಿಕೃತ ಸಾರಿಗೆ ಸೌಲಭ್ಯಗಳನ್ನು ಬಳಸಬೇಕು ಮತ್ತು ಸಂಚಾರವನ್ನು ಹಗಲಿನ ಸಮಯಕ್ಕೆ ಮಾತ್ರ ಸೀಮಿತಗೊಳಿಸಬೇಕು ಎಂದು ಸೂಚಿಸಲಾಗಿದೆ.

ಪಾದಯಾತ್ರೆ ಮಾಡುತ್ತಿದ್ದ ಭಕ್ತ ಚಿರತೆ ಬಾಯಿಗೆ ಬಿದ್ದಿದ್ಹೇಗೆ?

ಮಂಡ್ಯದ ಚೀರನಹಳ್ಳಿ ಹಾಗೂ ನೆರೆಯ ಗ್ರಾಮಗಳಿಂದ 150ಕ್ಕೂ ಹೆಚ್ಚು ಜನರು ಮಲೆಮಹದೇಶ್ವರ ಬೆಟ್ಟಕ್ಕೆ ಮಾದಪ್ಪನ ದರ್ಶನಕ್ಕಾಗಿ ಪಾದಯಾತ್ರೆ ತೆರಳುತ್ತಿದ್ದರು. ಪ್ರವೀಣ್ ಕುಮಾರ್ ಸಂಜೀವ್ ಸೇರಿ 5 ಜನರು ಪ್ರತ್ಯೇಕ ತಂಡದಲ್ಲಿದ್ದರು. ಜನವರಿ 21ರ ಬುಧವಾರ ಮುಂಜಾನೆ 6ಗಂಟೆ ಸುಮಾರಿಗೆ ರಂಗಸ್ವಾಮಿ ದಿಬ್ಬದ ಬಳಿ ನಡೆದು ಕೊಂಡು ಹೋಗುತ್ತಿದ್ದಾಗ ಏಕಾಏಕಿ ಚಿರತೆ ಎದುರಾಗಿದೆ. ಎಲ್ಲರೂ ಕೂಗಿಕೊಂಡು ಇಳಿಜಾರಿನ ಕಡೆ ಓಡಿದ್ದಾರೆ. ಆದರೆ, ಪ್ರವೀಣ್ ಅವರು ಸಿಕ್ಕಿಬಿದ್ದಿದ್ದಾರೆ. ಅವರ ಮೇಲೆ ಮುಗಿಬಿದ್ದ ಚಿರತೆ ಕತ್ತು ಸೀಳಿ ರಕ್ತ ಹೀರಿ ಬಳಿಕ ಕಾಡಿನೊಳಕ್ಕೆ ಎಳೆದೊಯ್ದಿದೆ.

ಇದನ್ನೂ ಓದಿ: ಹೊಸ ರೂಲ್ಸ್​: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ

ಮೊಬೈಲ್ ನೆಟ್ವರ್ಕ್​ ಇಲ್ಲದ ಕಾರಣ ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲು ಪ್ರವೀಣ್ ಜತೆಯಲ್ಲಿದ್ದವರಿಂದ ಸಾಧ್ಯವಾಗಿರಲಿಲ್ಲ. ನೆಟ್​ವರ್ಕ್ ಸಿಗುವ ಜಾಗಕ್ಕೆ ತೆರಳಿ ಮಾಹಿತಿ ನೀಡಿದ ನಂತರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರವೀಣ್ ಮೃತದೇಹ ಪತ್ತೆ ಮಾಡಿದ್ದರು. ನಂತರ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version