SRH vs RR: ವೈಭವ್ ಸೂರ್ಯವಂಶಿ ಸಿಡಿಲಬ್ಬರಕ್ಕೆ ಸೃಷ್ಟಿಯಾದ ದಾಖಲೆಗಳೆಷ್ಟು ನೋಡಿ

Source link

ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More

Source link

ಬಕ್ರೀದ್ ಹಬ್ಬ: ಕುರಿ, ಮೇಕೆಗಳ ವ್ಯಾಪಾರ ಜೋರು; ಮಾರುಕಟ್ಟೆಯಲ್ಲಿ ಅಮೀನಗಡ ಟಗರುಗಳದ್ದೇ ಹವಾ!

ಬೆಂಗಳೂರು, ಮೇ 27: ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್‌ಗೆ (Bakrid) ಕ್ಷಣಗಣನೆ ಶುರುವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಕುರಿ ಮತ್ತು ಮೇಕೆಗಳ ವ್ಯಾಪಾರ ವಹಿವಾಟು ಭರ್ಜರಿಯಾಗಿ ಕಳೆಗಟ್ಟಿದೆ. ಬೆಂಗಳೂರಿನ (bangaluru) ಐತಿಹಾಸಿಕ ಚಾಮರಾಜಪೇಟೆ ಈದ್ಗಾ ಮೈದಾನದ ಮುಖ್ಯರಸ್ತೆಗಳು ಇದೀಗ ಸಂಪೂರ್ಣವಾಗಿ ಕುರಿ ಸಂತೆಯಾಗಿ ಬದಲಾಗಿದೆ. ಹಬ್ಬಕ್ಕೆ ಇನ್ನು ಕೇವಲ ಒಂದು ದಿನ ಮಾತ್ರ ಬಾಕಿ ಇರುವುದರಿಂದ, ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕುರಿ ಮತ್ತು ಮೇಕೆಗಳನ್ನು ಮಾರಾಟಕ್ಕೆ ತರಲಾಗಿದೆ. ವಿಶೇಷವಾಗಿ ಈ ಬಾರಿ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಅಮೀನಗಡ ತಳಿಯ ಟಗರುಗಳು ಗ್ರಾಹಕರನ್ನು ಕೈಬೀಸಿ ಕರೆಯುತ್ತಿದ್ದು, ಪ್ರಮುಖ ಆಕರ್ಷಣೆಯಾಗಿವೆ.

ಮುಖ್ಯಾಂಶಗಳು

  • ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಬಕ್ರೀದ್‌ಗೆ ಕ್ಷಣಗಣನೆ; ರಾಜಧಾನಿಯಲ್ಲಿ ಭರ್ಜರಿ ಸಿದ್ಧತೆ
  • ಚಾಮರಾಜಪೇಟೆ ಈದ್ಗಾ ಮೈದಾನ ರಸ್ತೆಯಲ್ಲಿ ಕುರಿ, ಮೇಕೆಗಳ ವ್ಯಾಪಾರ ವಹಿವಾಟು ಜೋರು
  • ಅಮೀನಗಡದ ಟಗರುಗಳದ್ದೇ ಹವಾ; ಬರೋಬ್ಬರಿ 1.5 ಲಕ್ಷ ರೂ.ವರೆಗೆ ಮಾರಾಟ!

ಇದನ್ನೂ ಓದಿ: ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!

ಇಲ್ಲಿನ ಮುಖ್ಯರಸ್ತೆಯಲ್ಲಿ ವ್ಯಾಪಾರಿಗಳು ಕಳೆದ ಒಂದು ವಾರದಿಂದ ಬೀಡುಬಿಟ್ಟಿದ್ದಾರೆ. ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಇಲ್ಲಿ ವಹಿವಾಟು ಜೋರಾಗಿರುತ್ತೆ. ಅಮೀನಗಡದ ಟಗರುಗಳಿಗೆ ಭಾರೀ ಬೇಡಿಕೆ ಇದೆ. ಬರೋಬ್ಬರಿ ಒಂದೂವರೆ ಲಕ್ಷ ರೂಪಾಯಿವರೆಗೆ ಮಾರಾಟವಾಗುತ್ತಿವೆ.

ಯಾವ ಕುರಿಗೆ ಎಷ್ಟು ಬೆಲೆ?

  • ಬಂಡೂರ್ ಟಗರು- 1 ಲಕ್ಷ ರೂ
  • ಕಿಲಾರಿ ಕುರಿ- 80 ಸಾವಿರ ರೂ
  • ನಾಟಿ ಕುರಿ- 60 ಸಾವಿರ ರೂ
  • ಕರಿ ಕುರಿ-40 ಸಾವಿರ ರೂ
  • ಬಾಗೇವಾಡಿ ಕುರಿ- 1.5 ಲಕ್ಷ ರೂ
  • ಅಮೀನ್​ಗಡ ಕುರಿ- 60 ಸಾವಿರ ರೂ
  • ಮೈಲಾರಿ ಟಗರು- 70 ಸಾವಿರ ರೂ

ಸಂತೆಯಲ್ಲಿ ಬಂಡೂರು, ಶಿರೋಹಿ, ಮೌಳಿ, ಗೆಣಸಿ ಹಾಗೂ ಶಿರಾ ತಳಿಯ ಕುರಿಗಳು ಕೂಡ ಲಭ್ಯವಿವೆ. ಗಾತ್ರ ಮತ್ತು ತೂಕದ ಆಧಾರದ ಮೇಲೆ ಬೆಲೆ ನಿರ್ಧರಿಸಲಾಗುತ್ತದೆ. ಕಳೆದ ಬಾರಿಗಿಂತ ಈ ಬಾರಿ ಕುರಿಗಳಿಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ವ್ಯಾಪಾರಿಗಳ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಒಟ್ಟಿನಲ್ಲಿ ಪವಿತ್ರ ತ್ಯಾಗದ ಹಬ್ಬದ ಅಂಗವಾಗಿ ಮಾರುಕಟ್ಟೆಯಲ್ಲಿ ಲಕ್ಷಾಂತರ ರೂಪಾಯಿ ಹಣದ ಹೊಳೆ ಹರಿಯುತ್ತಿದ್ದು, ತಮಗೆ ಇಷ್ಟವಾದ, ಕೊಬ್ಬಿದ ಕುರಿಗಳನ್ನು ಖರೀದಿಸಲು ಮುಸ್ಲಿಂ ಬಾಂಧವರು ಮುಗಿಬೀಳುತ್ತಿದ್ದಾರೆ.

ವರದಿ: ಅರುಣ್ ಕುಮಾರ್ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತೀಯರು ಆತಂಕಪಡುವ ಅಗತ್ಯವಿಲ್ಲ, ಇಂಧನ ಸಂಗ್ರಹ ಸಾಕಷ್ಟಿದೆ; ರಾಜನಾಥ್ ಸಿಂಗ್ ಸ್ಪಷ್ಟನೆ

ನವದೆಹಲಿ, ಮೇ 27: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಸಿದ್ಧತೆ ಹಾಗೂ ಪ್ರತಿಕ್ರಿಯಾ ಕ್ರಮಗಳ ಕುರಿತು ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ನೇತೃತ್ವದ ಸಚಿವರ ಸಮಿತಿಯು ನವದೆಹಲಿಯ ಕರ್ತವ್ಯ ಭವನದಲ್ಲಿ ಇಂದು ಸಭೆ ನಡೆಸಿತು. ಈ ಸಭೆಯಲ್ಲಿ ಜೆ.ಪಿ. ನಡ್ಡಾ, ಹರ್ದೀಪ್ ಸಿಂಗ್ ಪುರಿ, ಅಶ್ವಿನಿ ವೈಷ್ಣವ್ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗವಹಿಸಿದ್ದರು. ಈ ವೇಳೆ ದೇಶದಲ್ಲಿ ಸದ್ಯಕ್ಕೆ ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ ಉತ್ತಮವಾಗಿದೆ. ಜನರು ಆತಂಕದಿಂದ ಹೆಚ್ಚುವರಿ ಇಂಧನ ಖರೀದಿಸಿ ಸಂಗ್ರಹಿಸಿಟ್ಟುಕೊಳ್ಳುವ ಅಗತ್ಯವಿಲ್ಲ. ದೇಶದಲ್ಲಿ ಬೇಕಾದಷ್ಟು ಇಂಧನದ ಸಂಗ್ರಹವಿದೆ ಎಂದು ಸಚಿವರು ತಿಳಿಸಿದ್ದಾರೆ.

ದೇಶದಲ್ಲಿ ಇಂಧನ ಕೊರತೆ ಇಲ್ಲ:

ಭಾರತವು ವಿಶ್ವದ ನಾಲ್ಕನೇ ಅತಿ ದೊಡ್ಡ ತೈಲ ಶುದ್ಧೀಕರಣ ದೇಶವಾಗಿದ್ದು, ವಾರ್ಷಿಕ 258.1 ಮೆಟ್ರಿಕ್ ಟನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ದೇಶದ ಬಳಕೆಗಿಂತಲೂ ನಮ್ಮ ಸಾಮರ್ಥ್ಯ ಹೆಚ್ಚಾಗಿದ್ದು, ವಾರ್ಷಿಕ 61.5 ಮೆಟ್ರಿಕ್ ಟನ್ ತೈಲ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತಿದೆ. ಹೀಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಸಭೆಯ ಬಳಿಕ ತಿಳಿಸಲಾಗಿದೆ.

ರಾಜನಾಥ್ ಸಿಂಗ್ ಅವರ ಪೋಸ್ಟ್ ಇಲ್ಲಿದೆ:

ಇದನ್ನೂ ಓದಿ: ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ

ಜಾಗತಿಕವಾಗಿ ತೈಲ ಬೆಲೆ ಹೆಚ್ಚಾಗಿದ್ದರೂ, ಅದರ ಭಾರ ಸಾಮಾನ್ಯ ಗ್ರಾಹಕರ ಮೇಲೆ ಬೀಳದಂತೆ ತಡೆಯಲು ಸಾರ್ವಜನಿಕ ವಲಯದ ತೈಲ ಕಂಪನಿಗಳು ದಿನಕ್ಕೆ ಸುಮಾರು 550 ಕೋಟಿ ರೂ.ಗಳ ನಷ್ಟವನ್ನು ತಾವೇ ಭರಿಸುತ್ತಿವೆ. ಆದರೆ, ಕೈಗಾರಿಕೆಗಳು ಮತ್ತು ವಾಣಿಜ್ಯ ಬಳಕೆಯ ಡೀಸೆಲ್ ಬೆಲೆಗಳು ಜಾಗತಿಕ ಮಾರುಕಟ್ಟೆಗೆ ತಕ್ಕಂತೆ ಇರಲಿವೆ. ಕೆಲವರು ವಾಣಿಜ್ಯ ಬಳಕೆಗೆ ಚಿಲ್ಲರೆ ಮಾರಾಟದ ಅಗ್ಗದ ಡೀಸೆಲ್ ಅನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಮತ್ತು ಕಾಳಸಂತೆಯಲ್ಲಿ ಮಾರುತ್ತಿರುವುದು ಕಂಡುಬಂದಿದ್ದು, ಇಂತಹ ವಂಚನೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಎಫೆಕ್ಟ್​​: ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರದ ಕೊರತೆ

ಮುಂಬರುವ ಮುಂಗಾರು (ಖಾರಿಫ್ 2026) ಹಂಗಾಮಿಗೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಅತ್ಯಂತ ತೃಪ್ತಿದಾಯಕವಾಗಿದೆ. ಒಟ್ಟು ಅಗತ್ಯವಿರುವ 390.54 ಲಕ್ಷ ಮೆಟ್ರಿಕ್ ಟನ್ (LMT) ರಸಗೊಬ್ಬರದಲ್ಲಿ ಈಗಾಗಲೇ ಶೇ. 51ಕ್ಕಿಂತ ಹೆಚ್ಚು (ಅಂದರೆ 200.47 ಲಕ್ಷ ಮೆಟ್ರಿಕ್ ಟನ್) ದಾಸ್ತಾನು ಲಭ್ಯವಿದೆ. ಸಾಮಾನ್ಯವಾಗಿ ಈ ಸಮಯದಲ್ಲಿ ಕೇವಲ ಶೇ. 33ರಷ್ಟು ದಾಸ್ತಾನು ಇರುತ್ತಿತ್ತು. ಬಿಕ್ಕಟ್ಟಿನ ನಂತರ ಒಟ್ಟು 122.4 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಪೂರೈಕೆಗೆ ಸೇರಿಸಲಾಗಿದೆ. ಮೇ ಮತ್ತು ಜೂನ್ ತಿಂಗಳಲ್ಲಿ ಭಾರತದ ಬಂದರುಗಳಿಗೆ ಮತ್ತಷ್ಟು ರಸಗೊಬ್ಬರ ಬರಲಿದ್ದು, ರೈತರಿಗೆ ಯಾವುದೇ ಕೊರತೆಯಾಗದಂತೆ ಮತ್ತು ಆಹಾರ ಪದಾರ್ಥಗಳ ಬೆಲೆ ಸ್ಥಿರವಾಗಿರುವಂತೆ ನೋಡಿಕೊಳ್ಳಲು ರಕ್ಷಣಾ ಸಚಿವರು ಸೂಚಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗರ್ಭಾವಸ್ಥೆಯಲ್ಲಿ ಯೂರಿನ್ ಇನ್ಫೆಕ್ಷನ್ ಹೆಚ್ಚಾಗುವುದಕ್ಕೆ ಕಾರಣವೇನು? ಇದನ್ನು ತಡೆಗಟ್ಟಲು ಏನು ಮಾಡಬೇಕು ತಿಳಿದುಕೊಳ್ಳಿ

ಗರ್ಭಾವಸ್ಥೆ ಮಹಿಳೆಯ ಜೀವನದ ಅತ್ಯಂತ ವಿಶೇಷ ಹಂತವಾಗಿದ್ದರೂ, ಈ ಸಮಯದಲ್ಲಿ ದೇಹದಲ್ಲಿ ಹಲವು ಬದಲಾವಣೆಗಳು ಸಂಭವಿಸುತ್ತವೆ. ಅವುಗಳಲ್ಲಿ ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್ (UTI) ಕೂಡ ಒಂದು. ತಜ್ಞರ ಪ್ರಕಾರ, ಗರ್ಭಿಣಿಯರಲ್ಲಿ ಯೂರಿನ್ ಇನ್ಫೆಕ್ಷನ್ ಕಾಣಿಸಿಕೊಳ್ಳುವುದು ಸಾಮಾನ್ಯವಾದರೂ ಅದನ್ನು ನಿರ್ಲಕ್ಷಿಸುವುದು ಅಪಾಯಕಾರಿಯಾಗಿದೆ. ಸರ್ ಗಂಗಾರಾಮ್ ಆಸ್ಪತ್ರೆಯ ತಜ್ಞೆ ಡಾ. ಆಭಾ ಮಜುಂದಾರ್ ಅವರು ಹೇಳುವ ಪ್ರಕಾರ, ಗರ್ಭಧಾರಣೆಯ ಸಮಯದಲ್ಲಿ ದೇಹದಲ್ಲಿ ಪ್ರೊಜೆಸ್ಟೆರೋನ್ ಹಾರ್ಮೋನ್ ಪ್ರಮಾಣ ಹೆಚ್ಚಾಗುತ್ತದೆ. ಇದು ಗರ್ಭಾಶಯದ ಜೊತೆಗೆ ಯೂರಿನರಿ ಸಿಸ್ಟಂನನ್ನೂ ಸಡಿಲಗೊಳಿಸುತ್ತದೆ. ಪರಿಣಾಮವಾಗಿ ಮೂತ್ರವು ಮೂತ್ರಾಶಯದಲ್ಲಿ ಹೆಚ್ಚು ಸಮಯ ಉಳಿಯಬಹುದು ಮತ್ತು ಸಂಪೂರ್ಣವಾಗಿ ಹೊರಬರದೇ ಇರುವ ಸಾಧ್ಯತೆ ಇರುತ್ತದೆ.

ಇದರ ಜೊತೆಗೆ ಗರ್ಭಾಶಯದ ಗಾತ್ರ ಹೆಚ್ಚಾದಂತೆ ಯೂರಿನರಿ ಮಾರ್ಗದ ಮೇಲೆ ಒತ್ತಡ ಹೆಚ್ಚಾಗಿ ಮೂತ್ರದ ಹರಿವು ನಿಧಾನಗೊಳ್ಳುತ್ತದೆ. ಗರ್ಭಿಣಿಯರ ಮೂತ್ರದಲ್ಲಿ ಸಕ್ಕರೆ ಮತ್ತು ಅಮಿನೋ ಆಮ್ಲಗಳ ಪ್ರಮಾಣವೂ ಸ್ವಲ್ಪ ಹೆಚ್ಚಾಗುವುದರಿಂದ ಬ್ಯಾಕ್ಟೀರಿಯಾ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಯೂರಿನ್ ಇನ್ಫೆಕ್ಷನ್ ಅಪಾಯ ಹೆಚ್ಚುತ್ತದೆ.

ಯೂರಿನ್ ಇನ್ಫೆಕ್ಷನ್ ಲಕ್ಷಣಗಳು:

  • ಮೂತ್ರ ವಿಸರ್ಜನೆ ವೇಳೆ ಉರಿ ಅಥವಾ ನೋವು
  • ಪದೇಪದೇ ಮೂತ್ರ ಬರುವುದು
  • ಹೊಟ್ಟೆ ಕೆಳಭಾಗ ಮತ್ತು ಬೆನ್ನು ನೋವು
  • ಗಾಢ ಹಳದಿ ಬಣ್ಣದ ಮೂತ್ರ
  • ದುರ್ವಾಸನೆ
  • ಕೆಲವೊಮ್ಮೆ ಜ್ವರ ಅಥವಾ ನಡುಕ

ಇದನ್ನೂ ಓದಿ: ಯೂರಿನ್ ಇನ್ಫೆಕ್ಷನ್ ಯಾವಾಗ ಅಪಾಯಕಾರಿಯಾಗಬಹುದು ಗೊತ್ತಾ? ಈ ಸೋಂಕಿನಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಗರ್ಭಿಣಿಯರು ಪಾಲಿಸಬೇಕಾದ ಮುನ್ನೆಚ್ಚರಿಕೆಗಳು

  • ಹೆಚ್ಚು ನೀರು ಕುಡಿಯಬೇಕು
  • ಕಲ್ಲಂಗಡಿ, ಖರ್ಬೂಜಾ ಮೊದಲಾದ ನೀರಿನಾಂಶ ಹೆಚ್ಚಿರುವ ಹಣ್ಣುಗಳನ್ನು ಸೇವಿಸಬೇಕು
  • ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು
  • ಸಕ್ಕರೆ ಮತ್ತು ಸಿಹಿ ಪದಾರ್ಥಗಳ ಸೇವನೆ ಕಡಿಮೆ ಮಾಡಬೇಕು
  • ಮೂತ್ರವನ್ನು ಹೆಚ್ಚು ಸಮಯ ತಡೆಹಿಡಿಯಬಾರದು
  • ಪ್ರತಿನಿತ್ಯ ಹತ್ತಿಯ ಬಟ್ಟೆ ಧರಿಸುವುದು ಉತ್ತಮ

ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಯೂರಿನ್ ಇನ್ಫೆಕ್ಷನ್ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ

ದುನಿಯಾ ವಿಜಯ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 3ನೇ ಸಿನಿಮಾ ‘ಸಿಟಿ ಲೈಟ್ಸ್’ (City Lights) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ‘ಸಲಗ’, ‘ಭೀಮ’ ಬಳಿಕ ವಿಜಯ್ ಕುಮಾರ್ ಅವರು ಆ್ಯಕ್ಷನ್-ಕಟ್ ಹೇಳಿರುವ ಸಿನಿಮಾ ಇದು. ಈ ಸಿನಿಮಾದಿಂದ ಇತ್ತೀಚೆಗೆ ‘ಬಾವ ಬಾವ’ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಆ ಮೂಲಕ ‘ಸಿಟಿ ಲೈಟ್ಸ್‌’ ಸಿನಿಮಾದ ಪ್ರಚಾರಕ್ಕೆ ಚುರುಕು ಮುಟ್ಟಿಸಲಾಯಿತು. ಈ ಚಿತ್ರದ ಮೂಲಕ ಪುತ್ರಿ ಮೋನಿಷಾ ವಿಜಯ್‌ ಕುಮಾ‌ರ್ (Monisha Vijay Kumar) ಅವರನ್ನು ಚಿತ್ರರಂಗಕ್ಕೆ ಪರಿಚಯಿಸಲಾಗುತ್ತಿದೆ. ಅವರ ಜೊತೆ ವಿನಯ್ ರಾಜ್​ಕುಮಾರ್ ಅವರು ನಟಿಸುತ್ತಿದ್ದಾರೆ. ಹಳ್ಳಿಯಿಂದ ಬೆಂಗಳೂರಿಗೆ ಬಂದ ಇಬ್ಬರು ಏನೆಲ್ಲ ಕಷ್ಟಗಳನ್ನು ಎದುರಿಸುತ್ತಾರೆ ಎನ್ನುವ ಕಥೆ ಈ ಸಿನಿಮಾದಲ್ಲಿ ಇರಲಿದೆ. ಈ ಸಿನಿಮಾಗೆ ಶಿವಸೇನಾ ಅವರ ಛಾಯಾಗ್ರಹಣ ಇದೆ. ದೀಪು ಎಸ್. ಕುಮಾರ್ ಅವರು ಸಂಕಲನ ಮಾಡುತ್ತಿದ್ದಾರೆ. ಮಾಸ್ತಿ ಅವರು ಸಂಭಾಷಣೆ ಬರೆದಿದ್ದಾರೆ. ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ಚಿತ್ರತಂಡದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಸೆಟ್​ನಲ್ಲಿ ದುನಿಯಾ ವಿಜಯ್ (Duniya Vijay) ಅವರ ನಿರ್ದೇಶನ ಯಾವ ರೀತಿ ಇರುತ್ತದೆ ಎಂಬುದರ ಝಲಕ್ ಈ ವಿಡಿಯೋದಲ್ಲಿ ಕಾಣಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೀವು ಪದೇ ಪದೇ ಎಸಿ ಆನ್, ಆಫ್ ಮಾಡುತ್ತಿದ್ದರೆ ಏನಾಗುತ್ತದೆ?

ನವದೆಹಲಿ, ಮೇ 27: ಈ ಬಾರಿಯ ಬೇಸಿಗೆ ಜೋರಾಗಿದೆ. ಹಲವೆಡೆ ಉಷ್ಣಅಲೆ (Heat Wave)  ಉಂಟಾಗಿದೆ. ಬಿಸಿಲಿನಿಂದಾಗಿ ಜನರು ಪರದಾಡುತ್ತಿದ್ದಾರೆ. ಸೆಖೆಯನ್ನು ಸಹಿಸಲಾಗದೆ ಫ್ಯಾನ್‌ಗಳು, ಕೂಲರ್‌ಗಳು ಮತ್ತು ಎಸಿಗಳನ್ನು (AC) ಬಳಸುತ್ತಿದ್ದಾರೆ. ಫ್ಯಾನ್​ನಲ್ಲೂ ಸೆಖೆ ನೀಗದೆ ಎಸಿ ಬಳಸುತ್ತಿದ್ದಾರೆ. ಆದರೆ, ಕೆಲವರಿಗೆ ರೂಂ ತಂಪಾದಾಗ ಎಸಿ ಆಫ್ ಮಾಡಿ, ಮತ್ತೆ ಸೆಖೆ ಅನಿಸಿದಾಗ ಅದನ್ನು ಆನ್ ಮಾಡುವ ಅಭ್ಯಾಸವಿದೆ. ನಿಮಗೂ ಆ ಅಭ್ಯಾಸವಿದೆಯೇ? ಈ ರೀತಿ ಪದೇ ಪದೇ ಎಸಿ ಆನ್ ಮತ್ತು ಆಫ್ ಮಾಡುವುದರಿಂದ ಗಂಭೀರ ಹಾನಿ ಉಂಟಾಗುತ್ತದೆ ಎಂದು ನಿಮಗೆ ಗೊತ್ತಾ?

ಪದೇಪದೆ ಎಸಿ ಆಫ್ ಮತ್ತು ಆನ್ ಮಾಡುವುದರಿಂದ ಏನಾಗುತ್ತದೆ?:

ವಿದ್ಯುತ್ ಬಿಲ್ ತೀವ್ರವಾಗಿ ಹೆಚ್ಚಾಗುತ್ತದೆ:

ಅನೇಕರು ರೂಮ್ ತಣ್ಣಗಾದ ತಕ್ಷಣ ಏಸಿ ಆಫ್ ಮಾಡಿ, ಮತ್ತೆ ಸೆಖೆಯಾದಾಗ ಆನ್ ಮಾಡುತ್ತಾರೆ. ಹೀಗೆ ಮಾಡುವುದರಿಂದ ಕರೆಂಟ್ ಬಿಲ್ ಉಳಿಯುವುದಿಲ್ಲ, ಬದಲಿಗೆ ಹೆಚ್ಚಾಗುತ್ತದೆ. ಪ್ರತಿ ಬಾರಿ ನಾವು ಎಸಿ ಆಫ್ ಮಾಡಿ ಮತ್ತೆ ಆನ್ ಮಾಡಿದಾಗ, ಎಸಿ ಮೋಟಾರ್ ಮತ್ತೆ ಕೊಠಡಿಯನ್ನು ತಂಪಾಗಿಸಲು ಹೆಚ್ಚಿನ ಶಕ್ತಿಯನ್ನು ಬಳಸಬೇಕಾಗುತ್ತದೆ. ಇದು ವಿದ್ಯುತ್ ಬಳಕೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಮತ್ತು ನಿಮ್ಮ ತಿಂಗಳ ವಿದ್ಯುತ್ ಬಿಲ್ ಅನಿರೀಕ್ಷಿತವಾಗಿ ಹೆಚ್ಚಾಗುತ್ತದೆ.

ಇದನ್ನೂ ಓದಿ: ಹೆಚ್ಚು ಸಮಯ ಎಸಿಯಲ್ಲಿ ಇರುವವರಿಗೆ ಉಸಿರಾಟ ಮತ್ತು ಚರ್ಮದ ಸಮಸ್ಯೆ ಕಂಡುಬರುವುದಕ್ಕೆ ಕಾರಣ ಏನ್ ಗೊತ್ತಾ?

ಕಂಪ್ರೆಸರ್ ಮೇಲೆ ಒತ್ತಡ ಬೀಳುತ್ತದೆ:

ನೀವು ಪದೇ ಪದೇ ಆನ್-ಆಫ್ ಮಾಡಿದಾಗ ಕಂಪ್ರೆಸರ್ ಪ್ರತಿ ಬಾರಿಯೂ ತೀವ್ರ ಪ್ರಮಾಣದ ವಿದ್ಯುತ್ ಬಳಸಿಕೊಳ್ಳುತ್ತದೆ. ಅದೇ ಎಸಿ ಸತತವಾಗಿ ಆನ್ ಆಗಿದ್ದರೆ, ರೂಮ್ ತಾಪಮಾನಕ್ಕೆ ತಕ್ಕಂತೆ ಅದು ಕಡಿಮೆ ಕರೆಂಟ್ ಬಳಸುತ್ತದೆ. ಪದೇ ಪದೇ ಎಸಿ ಆಫ್ ಮಾಡಿ ಆನ್ ಮಾಡುವುದರಿಂದ ಅದರ ಮುಖ್ಯ ಘಟಕವಾದ ಕಂಪ್ರೆಸರ್ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಇದು ಅಧಿಕ ಬಿಸಿಯಾಗಲು ಕಾರಣವಾಗುತ್ತದೆ ಮತ್ತು ಕಂಪ್ರೆಸರ್‌ನ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ.

ಆಂತರಿಕ ಘಟಕಗಳು ಹಾನಿಗೊಳಗಾಗುತ್ತವೆ:

ACಯನ್ನು ಪದೇ ಪದೇ ಆನ್ ಮತ್ತು ಆಫ್ ಮಾಡುವುದರಿಂದ ACಯಲ್ಲಿರುವ ಆಂತರಿಕ ವಿದ್ಯುತ್ ಘಟಕಗಳು, ವೈರಿಂಗ್ ಮತ್ತು ಕೆಪಾಸಿಟರ್‌ಗಳು ಹಾನಿಗೊಳಗಾಗಬಹುದು. ಕೆಲವೊಮ್ಮೆ, ಶಾರ್ಟ್ ಸರ್ಕ್ಯೂಟ್‌ಗಳಿಂದಾಗಿ ಅವು ಸುಟ್ಟುಹೋಗುವ ಅಪಾಯವಿರುತ್ತದೆ.

ರೂಮ್ ಸರಿಯಾಗಿ ತಂಪಾಗುವುದಿಲ್ಲ:

ಎಸಿ ಆನ್ ಮಾಡಿದ ತಕ್ಷಣ ಇಡೀ ರೂಮ್ ತಂಪಾಗುವುದಿಲ್ಲ. ರೂಮಿನಲ್ಲಿರುವ ಗೋಡೆಗಳು, ಪೀಠೋಪಕರಣಗಳು ಎಲ್ಲವೂ ತಣ್ಣಗಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ನೀವು ರೂಮ್ ತಣ್ಣಗಾಗುವ ಮುನ್ನವೇ ಪದೇ ಪದೇ ಆಫ್ ಮಾಡುತ್ತಿದ್ದರೆ, ರೂಮಿನ ತಾಪಮಾನ ಏರುಪೇರಾಗುತ್ತಲೇ ಇರುತ್ತದೆ. ಇದರಿಂದ ನಿಮಗೆ ಸರಿಯಾದ ತಂಪು ವಾತಾವರಣ ಸಿಗುವುದಿಲ್ಲ.

ಇದನ್ನೂ ಓದಿ: ಸೆಖೆ ತಡೆಯಲಾಗದೆ ಎಸಿ ಕೊಡಿಸಿ ಎಂದ ಪತ್ನಿಗೆ ನೋ ಎಂದ ಗಂಡ; ಆಮೇಲಾಗಿದ್ದು ದುರಂತ!

ಆದ್ದರಿಂದ, ಎಸಿಯನ್ನು ಪದೇ ಪದೇ ಆನ್-ಆಫ್ ಮಾಡುವ ಬದಲು, ಒಂದು ನಿರ್ದಿಷ್ಟ ಮತ್ತು ಆರಾಮದಾಯಕ ತಾಪಮಾನಕ್ಕೆ (ಉದಾಹರಣೆಗೆ: 24C ಅಥವಾ 25C) ಸೆಟ್ ಮಾಡಿ ಹಾಗೇ ಬಿಡುವುದು ವಿದ್ಯುತ್ ಉಳಿತಾಯ ಮತ್ತು ಎಸಿಯ ಆಯಸ್ಸಿನ ದೃಷ್ಟಿಯಿಂದ ಅತ್ಯಂತ ಒಳ್ಳೆಯದು.

AC ಬಳಸುವ ಸರಿಯಾದ ವಿಧಾನ:

ಎಸಿಯನ್ನು ಪದೇ ಪದೇ ಆಫ್ ಮಾಡಿ ಆನ್ ಮಾಡುವ ಬದಲು, ಅದನ್ನು ಯಾವಾಗಲೂ 24ರಿಂದ 26 ಡಿಗ್ರಿ ಸೆಲ್ಸಿಯಸ್‌ನ ಸ್ಥಿರ ತಾಪಮಾನದಲ್ಲಿ ಚಲಾಯಿಸುವುದು ಉತ್ತಮ. ಈ ತಾಪಮಾನವು ನಮ್ಮ ದೇಹಕ್ಕೆ ಆರಾಮದಾಯಕವಾಗುವುದಲ್ಲದೆ, ವಿದ್ಯುತ್ ಬಿಲ್ ಅನ್ನು ಸಹ ಕಡಿಮೆ ಮಾಡುತ್ತದೆ. ನಿಮ್ಮ ಎಸಿ ರಿಮೋಟ್‌ನಲ್ಲಿ ಸ್ಲೀಪ್ ಮೋಡ್, ಇಕೋ ಮೋಡ್ ಮತ್ತು ಟೈಮರ್‌ನಂತಹ ವೈಶಿಷ್ಟ್ಯಗಳನ್ನು ಬಳಸುವ ಅಭ್ಯಾಸವನ್ನು ಮಾಡಿಕೊಳ್ಳಿ. ಕೋಣೆಯ ತಾಪಮಾನವನ್ನು ಅವಲಂಬಿಸಿ ಇವು ಸ್ವಯಂಚಾಲಿತವಾಗಿ ವಿದ್ಯುತ್ ಅನ್ನು ಸರಿಹೊಂದಿಸುತ್ತವೆ. ಅಲ್ಲದೆ, ಎಸಿ ಆನ್ ಆಗಿರುವಾಗ ಕೋಣೆಯ ಕಿಟಕಿಗಳು ಮತ್ತು ಬಾಗಿಲುಗಳು ಸಂಪೂರ್ಣವಾಗಿ ಮುಚ್ಚಲು ಮರೆಯಬೇಡಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SRH vs RR: ಅತಿ ಹೆಚ್ಚು ಸಿಕ್ಸರ್; ಕ್ರಿಸ್ ಗೇಲ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಸಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಕೂದಲೆಳೆ ಅಂತರದಲ್ಲಿ ಶತಕ ವಂಚಿತರಾದ ವೈಭವ್ ಕೇವಲ 3 ರನ್‌ಗಳಿಂದ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕವನ್ನು ತಪ್ಪಿಸಿಕೊಂಡರು. ವೈಭವ್ ಈ ಶತಕವನ್ನು ಪೂರೈಸಿದ್ದರೆ, ಅದು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವಾಗುತ್ತಿತ್ತು. ಈ ಮೂಲಕ ವೈಭವ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುತ್ತಿದ್ದರು. 2013 ರ ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿದ್ದರು. ವೈಭವ್ ಕೇವಲ 29 ಎಸೆತಗಳಲ್ಲಿ ಈ ದಾಖಲೆ ಮುರಿಯುವುದರಲ್ಲಿದ್ದರು. ಆದರೆ ಅದು ಆಗಲಿಲ್ಲ. ಆದಾಗ್ಯೂ ಶತಕದ ವಿಚಾರದಲ್ಲಿ ವೈಭವ್, ಗೇಲ್ ಅವರ ದಾಖಲೆ ಮುರಿಯಲು ಸಾಧ್ಯವಾಗದಿದ್ದರೂ, ಸಿಕ್ಸರ್​ಗಳ ವಿಚಾರದಲ್ಲಿ ಗೇಲ್ ಅವರ ದಾಖಲೆ ಮುರಿದರು.

ವಾಸ್ತವವಾಗಿ ಒಂದು ಐಪಿಎಲ್‌ನಲ್ಲಿ ಸೀಸನ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಇದುವರೆಗೆ ಕ್ರಿಸ್ ಗೇಲ್ ಅವರ ಹೆಸರಿನಲ್ಲಿತ್ತು. 2012 ರ ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಬರೋಬ್ಬರಿ 59 ಸಿಕ್ಸರ್‌ಗಳನ್ನು ಬಾರಿಸಿ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು. ಆದರೆ 2026 ರ ಐಪಿಎಲ್‌ನಲ್ಲಿ ವೈಭವ್ 60 ಕ್ಕೂ ಅಧಿಕ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಒಂದು ಆವೃತ್ತಿಯಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಆಟಗಾರನೆಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.

Source link

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಜೂನ್ 1-4ಕ್ಕೆ ಭಾರತದಲ್ಲಿರಲಿದ್ದಾರೆ ಟ್ರಂಪ್ ಆಪ್ತ ಸಲಹೆಗಾರರು

ನವದೆಹಲಿ, ಮೇ 27: ಭಾರತ ಮತ್ತು ಅಮೆರಿಕ ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು (India US free trade agreement) ಅಂತಿಮಗೊಳಿಸುವ ನಿಟ್ಟಿನಲ್ಲಿ ಗಮನಾರ್ಹ ಬೆಳವಣಿಗೆಯೊಂದು ನಡೆಯಲಿದ್ದು, ಟ್ರಂಪ್ ಸರ್ಕಾರದ ಉನ್ನತ ಮಟ್ಟದ ಅಧಕಾರಿಗಳ ತಂಡವೊಂದು ಭಾರತಕ್ಕೆ ಭೇಟಿ ನೀಡಲಿದೆ. ಟ್ರಂಪ್ ಅವರಿಗೆ ಆಪ್ತರಾಗಿರುವ ಅಮೆರಿಕದ ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಸಲಹೆಗಾರರ ತಂಡವು ಭಾರತ-ಅಮೆರಿಕ ದ್ವಿಪಕ್ಷೀಯ ಮುಕ್ತ ವ್ಯಾಪಾರ ಒಪ್ಪಂದದ (Bilateral Trade Agreement) ಕುರಿತು ನಿರ್ಣಾಯಕ ಮಾತುಕತೆ ನಡೆಸಲು ಬರುವ ಸೋಮವಾರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಜೂನ್ 1ರಿಂದ 4ರವರೆಗೆ ಭಾರತದ ತಂಡದೊಂದಿಗೆ ಇದು ಸತತ ಮಾತುಕತೆಗಳಲ್ಲಿ ನಿರತವಾಗಿರಲಿದೆ.

ಭೇಟಿಯ ಪ್ರಮುಖ ಉದ್ದೇಶ ಮತ್ತು ಅಜೆಂಡಾ

ಭಾರತ ಮತ್ತು ಅಮೆರಿಕ ನಡುವೆ ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಸಮಗ್ರ ವ್ಯಾಪಾರ ಒಪ್ಪಂದಕ್ಕೆ ಒಂದು ಅಂತಿಮ ರೂಪ ನೀಡುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ. ಉಭಯ ದೇಶಗಳ ನಡುವಿನ ಸುಂಕ (Tariffs) ಮತ್ತು ರಫ್ತು-ಆಮದು ನಿಯಮಗಳ ಸರಳೀಕರಣದ ಕುರಿತು ಇಲ್ಲಿ ಚರ್ಚೆಯಾಗಲಿದೆ.

ಇದನ್ನೂ ಓದಿ: ಎಚ್​ಡಿಎಫ್​ಸಿಯಿಂದ 45 ಕೋಟಿ ರೂ ಅಕ್ರಮ ಬಡ್ಡಿ ಪಾವತಿ ವಿವಾದ; ಆರೋಪ ನಿರಾಕರಿಸಿದ ಬ್ಯಾಂಕ್

ರಕ್ಷಣೆ (Defence), ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ (AI), ನವೀಕರಿಸಬಹುದಾದ ಇಂಧನ ಹಾಗೂ ತಂತ್ರಜ್ಞಾನ ವಲಯಗಳಲ್ಲಿ ಅಮೆರಿಕದ ಹೂಡಿಕೆಯನ್ನು ಭಾರತದಲ್ಲಿ ಹೆಚ್ಚಿಸುವ ಹಾಗೂ ಭಾರತೀಯ ಕಂಪನಿಗಳಿಗೆ ಅಮೆರಿಕದ ಮಾರುಕಟ್ಟೆಯಲ್ಲಿ ಹೆಚ್ಚಿನ ಮುಕ್ತ ಅವಕಾಶ ಕಲ್ಪಿಸುವ ಬಗ್ಗೆ ಉನ್ನತ ಮಟ್ಟದ ಮಾತುಕತೆ ನಡೆಯಲಿದೆ.

ಡೊನಾಲ್ಡ್ ಟ್ರಂಪ್ ಅವರು “ಅಮೆರಿಕಾ ಫಸ್ಟ್” (America First) ನೀತಿಯನ್ನು ಅನುಸರಿಸುತ್ತಿದ್ದರೂ, ಚೀನಾಕ್ಕೆ ಪರ್ಯಾಯವಾಗಿ ಜಾಗತಿಕ ಪೂರೈಕೆ ಸರಪಳಿಯಲ್ಲಿ (Supply Chain) ಭಾರತವನ್ನು ಅತ್ಯಂತ ವಿಶ್ವಾಸಾರ್ಹ ಪಾಲುದಾರ ರಾಷ್ಟ್ರವನ್ನಾಗಿ ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ದ್ವಿಪಕ್ಷೀಯ ಮಾತುಕತೆ ಜಾಗತಿಕವಾಗಿ ಭಾರಿ ಮಹತ್ವ ಪಡೆದುಕೊಂಡಿದೆ.

ಭಾರತದ ನಿರೀಕ್ಷೆಗಳೇನು?

ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಉನ್ನತ ಅಧಿಕಾರಿಗಳು ಅಮೆರಿಕ ನಿಯೋಗವನ್ನು ಎದುರುಗೊಳ್ಳಲಿದ್ದು, ಭಾರತೀಯ ಉತ್ಪನ್ನಗಳ ಮೇಲಿನ ಸುಂಕ ಕಡಿತಕ್ಕೆ ಒತ್ತಾಯಿಸುವ ಸಾಧ್ಯತೆಯಿದೆ. ವಿಶೇಷವಾಗಿ ಐಟಿ ಸೇವೆಗಳು, ಔಷಧ ಉತ್ಪಾದನೆ (Pharmaceuticals) ಮತ್ತು ಕೃಷಿ ಉತ್ಪನ್ನಗಳ ರಫ್ತಿಗೆ ಅಮೆರಿಕದಲ್ಲಿ ಹೆಚ್ಚಿನ ವಿನಾಯಿತಿಗಳನ್ನು ಪಡೆಯಲು ಭಾರತ ಯೋಜಿಸಿದೆ.

ಇದನ್ನೂ ಓದಿ: ಷೇರುಬಜಾರಲ್ಲಿ ಅದಾನಿ ಪವರ್ ಅಬ್ಬರ; ಮಾರುಕಟ್ಟೆ ಮೌಲ್ಯದಲ್ಲಿ ಇನ್ಫೋಸಿಸ್ ಹಿಂದಿಕ್ಕಿದ್ದು ಹೇಗೆ?

ಸೋಮವಾರ ಆರಂಭವಾಗಲಿರುವ ಈ ಉನ್ನತ ಮಟ್ಟದ ಸಭೆಯು ಮುಂಬರುವ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ನಡೆಯಬಹುದಾದ ಅಧಿಕೃತ ಶೃಂಗಸಭೆಗೆ ದಾರಿಯಾಗಲಿದ್ದು, ಉಭಯ ದೇಶಗಳ ಆರ್ಥಿಕ ಪ್ರಗತಿಗೆ ಹೊಸ ವೇಗ ನೀಡುವ ನಿರೀಕ್ಷೆಯಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಯುವ ಲೇಖಕಿಯ “ದಿ ಮಿಸ್ಟಿಕಲ್ ವೇವ್ಸ್” ಕೃತಿ ಬಿಡುಗಡೆ ಮಾಡಿದ ಸಿ.ಎನ್.ಆರ್.ರಾವ್

ಬೆಂಗಳೂರು, (ಮೇ 27): ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ಪುರಸ್ಕೃತ, ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿ.ಎನ್.ಆರ್. ರಾವ್ (CNR Rao) ಅವರು “ದಿ ಮಿಸ್ಟಿಕಲ್ ವೇವ್ಸ್” ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನ ಗೌರವಾಧ್ಯಕ್ಷರು ಹಾಗೂ ಲೈನಸ್ ಪಾಲಿಂಗ್ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರು ಹಾಗೂ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಗೌರವ ಪ್ರಾಧ್ಯಾಪಕರಾಗಿರುವ ಸಿ.ಎನ್.ಆರ್. ರಾವ್, ಕಿರಿಯ ಲೇಖಕಿ ಅಮನ ಜೆ. ಕುಮಾರ್ ಅವರ ಕಾವ್ಯ ಪ್ರತಿಭೆಯನ್ನು ಶ್ಲಾಘಿಸಿದರು.

ದಿ ಮಿಸ್ಟಿಕಲ್ ವೇವ್ಸ್”  ಬಗ್ಗೆ

ಅಂತರರಾಷ್ಟ್ರೀಯ ಬುಕ್ಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಟಾಕ್ ಅವರು “ದಿ ಮಿಸ್ಟಿಕಲ್ ವೇವ್ಸ್” ಪುಸ್ತಕದ ಮುನ್ನುಡಿಯನ್ನು ಬರೆದಿದ್ದಾರೆ. ದಿ ಮಿಸ್ಟಿಕಲ್ ವೇವ್ಸ್ ಒಬ್ಬ ವ್ಯಕ್ತಿಯ ಜೀವನ ಪಯಣದ ಪ್ರತಿಬಿಂಬದಂತಿದೆ. ಅನುಭವಗಳು, ನಿರೀಕ್ಷೆಗಳು ಮತ್ತು ಅಪಾರ ಆನಂದದ ಸಂಯೋಜನೆಯಾಗಿರುವ ಈ ಕೃತಿ ಬ್ಲ್ಯಾಕ್‌ಔಟ್ ಕವನಗಳು ಮತ್ತು ಸೊನೆಟ್‌ಗಳ ಸಮನ್ವಯವಾಗಿದೆ.

ಕಾವ್ಯದ ಎರಡು ವಿಭಿನ್ನ ಶೈಲಿಗಳ ಅದ್ಭುತ ಸಂಯೋಜನೆಯಾದ ಈ ಕೃತಿ ಓದುಗರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಪ್ರತಿಯೊಂದು ಪದವೂ ತನ್ನೊಳಗೆ ಆಳವಾದ ಅರ್ಥ ಮತ್ತು ಚಿಂತನೆಯ ಸಾಗರವನ್ನು ಹೊಂದಿದ್ದು, ಓದುಗರ ಕಲ್ಪನೆ ಹಾಗೂ ಬುದ್ಧಿವಂತಿಕೆಯಿಂದ ಅನಾವರಣಗೊಳ್ಳುವಂತಹ ವಿಶಿಷ್ಟತೆಯನ್ನು ಹೊಂದಿದೆ. ಕಡಿಮೆ ಪದಗಳಲ್ಲಿ ಹೆಚ್ಚು ಅರ್ಥವನ್ನು ವ್ಯಕ್ತಪಡಿಸುವ ಈ ಕೃತಿ ಅನೇಕ ಕಥೆಗಳ ನೇಯ್ಗೆಯಂತಿದೆ.

ಲೇಖಕಿ ಅಮನ ಜೆ ಕುಮಾರ್ ಬಗ್ಗೆ

ಲೇಖಕಿ ಅಮನ ಜೆ ಕುಮಾರ್ ಅವರು ಇತ್ತೀಚೆಗೆ ಆರ್.ವಿ. ಪಿಯು ಕಾಲೇಜು, ಜಯನಗರದಲ್ಲಿ 12ನೇ ತರಗತಿಯನ್ನು ಪೂರ್ಣಗೊಳಿಸಿದ್ದಾರೆ. ಇನ್ನು ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ಸ್ ಸ್ಕೂಲ್‌ನಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ, 11ನೇ ವಯಸ್ಸಿನಲ್ಲಿಯೇ ಅವರು ಕವನಗಳು ಹಾಗೂ ಪುಸ್ತಕಗಳನ್ನು ಬರೆಯಲು ಪ್ರಾರಂಭಿಸಿದ್ದು , ಇದುವರೆಗೆ ಅವರ ನಾಲ್ಕು ಪುಸ್ತಕಗಳು ಪ್ರಕಟವಾಗಿದ್ದು, ಮೂರು ಇಂಗ್ಲಿಷ್ ಮತ್ತು‌ ಒಂದು ಹಿಂದಿ ಭಾಷೆಯಲ್ಲಿ ಪ್ರಕಟಗೊಂಡಿವೆ.

ಅವರ ಮೊದಲ ಪುಸ್ತಕ “Echoes of Soulful Poems”ಎರಡನೇ ಪುಸ್ತಕ “World Amidst the Words” ಮೂರನೇ ಹಿಂದಿ ಸಾಹಿತ್ಯ ಕೃತಿ “Lafzon Ki Mehphil” ನಾಲ್ಕನೇ ಪುಸ್ತಕ “Galore of Mysteries” . ಅವರ ಅನೇಕ ಲೇಖನಗಳು ಮತ್ತು ಕಥೆಗಳು ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ ಹಾಗೂ ಆನ್‌ಲೈನ್ ಪೋರ್ಟಲ್‌ಗಳಲ್ಲಿ ಪ್ರಕಟವಾಗಿವೆ. ಸಾಹಿತ್ಯದ ಜೊತೆಗೆ ಅವರು ವಿದ್ಯಾಭ್ಯಾಸದಲ್ಲಿಯೂ ಉತ್ತಮ ಸಾಧನೆ ತೋರಿದ್ದಾರೆ.

ಅಮನ ಅವರ ಸಾಧನೆಗಳು

  •  India Book of Records ನಿಂದ “ಭಾರತದ ಅತಿ ಕಿರಿಯ ಕವಯಿತ್ರಿ” ಎಂಬ ಗೌರವ.
  •  Asia Book of Records ನಿಂದ “ಗ್ರ್ಯಾಂಡ್ ಮಾಸ್ಟರ್” ಪ್ರಶಸ್ತಿ.
  •  Kautilya Youngest Poetess of the Year Award — ಗೋವಾ ರಾಜ್ಯಪಾಲರಿಂದ ಪ್ರದಾನ.
  •  Noble Book of World Record ನಿಂದ “ಅತ್ಯಂತ ಹೆಚ್ಚು ಕವನಗಳನ್ನು ರಚಿಸಿದ ಕವಯಿತ್ರಿ” ಎಂಬ ಗೌರವ (ಏಪ್ರಿಲ್ 2020ರಿಂದ ನವೆಂಬರ್ 2021ರವರೆಗೆ 337 ಕವನಗಳು).
  •  World Record University ನಿಂದ “ಅತಿ ಕಿರಿಯ ಕವಯಿತ್ರಿ” ಪ್ರಶಸ್ತಿ.
  •  International Book of World Record ನಿಂದ “ಅತಿ ಕಿರಿಯ ಕವಯಿತ್ರಿ” ಎಂಬ ಮಾನ್ಯತೆ.
  •  Wonder Book of World Record ನಿಂದ “ಅತಿ ಕಿರಿಯ ಲೇಖಕಿ” ಗೌರವ.
  •  Golden Book of World Records ನಿಂದ ಸತತ ವರ್ಷಗಳಲ್ಲಿ ಕವನ ಸಂಕಲನಗಳನ್ನು ಪ್ರಕಟಿಸಿದ ಅತಿ ಕಿರಿಯ ಕವಯಿತ್ರಿ ಎಂಬ ಗೌರವ ಪಡೆದಿರುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version