Kumara Shashti: ಇಂದು ಕುಮಾರ ಷಷ್ಠಿ; ನಾಗಾಂಶ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Kumara Shashti: Understand Nagamsha, its Spiritual Significance and Astrological Remedies

ನಾಗಾಂಶ ಎಂಬುದು ಜ್ಯೋತಿಷ್ಯಶಾಸ್ತ್ರದಲ್ಲಿ ಬಳಸುವ ಒಂದು ವಿಶೇಷ ಪರಿಕಲ್ಪನೆ. ಜಾತಕದಲ್ಲಿ ರಾಹು ಅಥವಾ ಕೇತು ಗ್ರಹಗಳು ಇರುವ ನಕ್ಷತ್ರದ ಪಾದ (ಹಂತ) ಕ್ಕೆ ನಾಗಾಂಶ ಎಂದು ಕರೆಯಲಾಗುತ್ತದೆ. ಸರಳವಾಗಿ ಹೇಳುವುದಾದರೆ, ರಾಹು–ಕೇತುಗಳ ನಕ್ಷತ್ರ ಸ್ಥಿತಿಯಿಂದ ವ್ಯಕ್ತಿಗೆ ಬರುವ ಕರ್ಮಬಂಧ, ಸರ್ಪದೋಷ ಅಥವಾ ಪೂರ್ವಜನ್ಮ ಸಂಬಂಧಿತ ಫಲಗಳನ್ನು ಸೂಚಿಸುವ ಅಂಶವೇ ನಾಗಾಂಶ.

ಜ್ಯೋತಿಷ್ಯದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ರಾಹು ಅಥವಾ ಕೇತು ಆಶ್ಲೇಷಾ, ಜ್ಯೇಷ್ಠಾ ಅಥವಾ ರೇವತಿ ನಕ್ಷತ್ರಗಳ ನಿರ್ದಿಷ್ಟ ಪಾದಗಳಲ್ಲಿ ಇದ್ದರೆ ಅದನ್ನು ನಾಗಾಂಶ ಎಂದು ಗುರುತಿಸಲಾಗುತ್ತದೆ. ಈ ಸ್ಥಿತಿಯು ಇದ್ದರೆ ವ್ಯಕ್ತಿಯ ಜೀವನದಲ್ಲಿ ಅಜ್ಞಾತ ಭಯ, ವಿಳಂಬ, ಸಂಬಂಧ ಸಮಸ್ಯೆಗಳು, ವಿವಾಹ ವಿಳಂಬ, ಸಂತಾನ ಸಮಸ್ಯೆ ಅಥವಾ ಮಾನಸಿಕ ಅಶಾಂತಿ ಕಾಣಿಸಿಕೊಳ್ಳಬಹುದು ಎಂದು ನಂಬಲಾಗುತ್ತದೆ.

ಕುಮಾರ ಷಷ್ಠಿಯಂದು ನಾಗ ಪೂಜೆ:

ದೇಹದಲ್ಲಿರುವ ನಾಗಾಂಶವನ್ನು ಜಾಗೃತಗೊಳಿಸಲು ಸುಬ್ರಹ್ಮಣ್ಯ ಪೂಜೆಯು ಸಹಕಾರಿಯಾಗಿದೆ. ನಾಲಿಗೆ, ಹಣೆಯ ಭಾಗ ಮತ್ತು ಬೆನ್ನುಮೂಳೆಯಲ್ಲಿ ನಾಗಾಂಶವು ಇರುತ್ತದೆ ಎಂದು ನಂಬಲಾಗಿದೆ. ಸುಬ್ರಹ್ಮಣ್ಯ ಪೂಜೆಯಿಂದ ನಾಲಿಗೆ ಶುದ್ಧಿಯಾದಾಗ ವಾಕ್‌ಶಕ್ತಿ ವೃದ್ಧಿಸುತ್ತದೆ. ಹಣೆಯಲ್ಲಿರುವ ನಾಗಾಂಶ ಜಾಗೃತವಾದಾಗ ಜನರಿಂದ ಯಾವುದೇ ತೊಂದರೆಯಾಗುವುದಿಲ್ಲ. ಬೆನ್ನುಮೂಳೆಯಲ್ಲಿರುವ ಸಪ್ತಚಕ್ರಗಳು ಜಾಗೃತಗೊಂಡಾಗ ವ್ಯಕ್ತಿಯು ಉನ್ನತ ಸ್ಥಾನವನ್ನು ಅಲಂಕರಿಸಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ

ಕುಮಾರ ಷಷ್ಠಿಯಂದು ಮನೆಯಲ್ಲಿ ಸಣ್ಣ ಸುಬ್ರಹ್ಮಣ್ಯ ವಿಗ್ರಹವಿದ್ದರೆ ಅದಕ್ಕೆ ಅಭಿಷೇಕ ಮಾಡಬಹುದು. ಪುಟ್ಟ ಮಕ್ಕಳಿಗೆ ಹುತ್ತದ ಮೃತ್ತಿಕೆಯನ್ನು ಹಣೆಗೆ ಹಚ್ಚುವುದರಿಂದ ಸಾಕಷ್ಟು ಶುಭವಾಗುತ್ತದೆ. ಜಗತ್ ಸರ್ವಂ ದೈವಾಧೀನಂ ಎಂಬ ಮಾತಿನಂತೆ, ಎಲ್ಲವೂ ದೇವರ ಅಧೀನದಲ್ಲಿರುವುದರಿಂದ ಶ್ರದ್ಧಾಭಕ್ತಿಗಳಿಂದ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಈ ಪೂಜೆಯನ್ನು ಮಾಡುವುದು ಅತ್ಯಂತ ಫಲಪ್ರದ. ನಾಗಬನ, ನಾಗಬಿಲ, ನಾಗಮೂರ್ತಿ, ನಾಗಬಿಂಬಗಳಿಗೆ ಹಾಲಿನ ಅಭಿಷೇಕ ಮಾಡುವುದರಿಂದ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ. ಕುಮಾರ ಷಷ್ಠಿಯು ಕಷ್ಟಗಳಿಂದ ಮುಕ್ತಿ ಪಡೆಯಲು ಮತ್ತು ಆಸೆಗಳನ್ನು ಈಡೇರಿಸಿಕೊಳ್ಳಲು ಭಗವಂತನ ಮೊರೆ ಹೋಗುವ ಪವಿತ್ರ ದಿನಗಳಲ್ಲಿ ಒಂದಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:33 am, Sat, 24 January 26

Source link

National Girl Child Day 2026: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸವುದರ ಹಿಂದಿನ ಉದ್ದೇಶವೇನು? – Kannada News | National Girl Child Day 2026: What is the purpose behind celebrating National Girl Child Day?

ಇಂದಿಗೂ ಈ ಪುರುಷ ಪ್ರಧಾನ ಸಮಾಜದಲ್ಲಿಹೆಣ್ಣಿನ ಬಗ್ಗೆ ದ್ವಂದ್ವ ಮನೋಭಾವನೆಯಿದೆ. ಸಮಾಜದಲ್ಲಿ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಗುತ್ತಿಲ್ಲ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ತಾತ್ಸಾರ ನಿಂತಿಲ್ಲ. ಒಂದಲ್ಲಾ ಒಂದು ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ, ಅವರಿಗೆ ಸಮಾನ ಅವಕಾಶಗಳು ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು (Girl Child) ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು, ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಪ್ರತಿವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಇತಿಹಾಸವೇನು?

ಹೆಣ್ಣು ಮಕ್ಕಳ ಹಕ್ಕುಗಳು, ಕಲ್ಯಾಣ ಮತ್ತು ಸಬಲೀಕರಣವನ್ನು ಉತ್ತೇಜಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಭಾರತ ಸರ್ಕಾರವು 2008 ರಲ್ಲಿ ಪ್ರಾರಂಭಿಸಿತು. ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಹೆಣ್ಣು ಮಕ್ಕಳ ರಕ್ಷಣೆ, ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸಮಾಜದಲ್ಲಿ ಅವರಿಗೆ ಸಮಾನ ಅವಕಾಶಗಳನ್ನು ಒದಗಿಸುವುದು. ಅಲ್ಲದೆ ಈ ದಿನ ಲಿಂಗ ಅಸಮಾನತೆ, ಬಾಲ್ಯ ವಿವಾಹ, ಹೆಣ್ಣು ಭ್ರೂಣ ಹತ್ಯೆ ಇತ್ಯಾದಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಸವಾಲುಗಳನ್ನು ತೊಡೆದುಹಾಕುವ ಗುರಿಯನ್ನು ಹೊಂದಿದೆ.

ಜನವರಿ 24 ರಂದೇ ಏಕೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ?

ಹೆಣ್ಣು ಮಕ್ಕಳಿಗಾಗಿ ಸಕಾರಾತ್ಮಕ ಮನೋಭಾವ ಮತ್ತು ಸಮಾನ ಅವಕಾಶಗಳನ್ನು ಉತ್ತೇಜಿಸಲು ಭಾರತ ಸರ್ಕಾರವು 2008 ರಲ್ಲಿ  ರಾಷ್ಟ್ರೀಯ ಹೆಣ್ಣು  ಮಕ್ಕಳ ದಿನವನ್ನು ಪ್ರಾರಂಭಿಸಿತು. ಭಾರತದ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಪ್ರಮಾಣವಚನ ಸ್ವೀಕರಿಸಿದ ದಿನದ  ಸ್ಮರಣಾರ್ಥವಾಗಿ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿನ ಆಚರಿಸುವುದರ ಹಿಂದಿದೆ ಕಾರಣ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮಹತ್ವವೇನು?

ಹೆಣ್ಣುಮಕ್ಕಳ ಹಕ್ಕುಗಳ ರಕ್ಷಣೆ: ಹೆಣ್ಣುಮಕ್ಕಳ ಹಕ್ಕುಗಳನ್ನು ರಕ್ಷಿಸಲು ಮತ್ತು ಸಮಾಜದಲ್ಲಿ ಅವರಿಗೆ ಸಮಾನ ಅವಕಾಶಗಳನ್ನು ಒದಗಿಸಲು ಈ ದಿನವನ್ನು ಆಚರಿಸಲಾಗುತ್ತದೆ.

ಹೆಣ್ಣು ಮಕ್ಕಳ ಸಬಲೀಕರಣ: ಈ ದಿನವನ್ನು ಹೆಣ್ಣು ಮಕ್ಕಳ ಸಬಲೀಕರಣ ಮತ್ತು ಅವರ ಕನಸುಗಳನ್ನು ನನಸಾಗಿಸಲು ಪ್ರೇರೇಪಿಸಲು ಆಚರಿಸಲಾಗುತ್ತದೆ.

ಸಮಾನ ಅವಕಾಶ ಒದಗಿಸುವುದು: ಹೆಣ್ಣು ಮಕ್ಕಳಿಗೆ ಶಿಕ್ಷಣ, ಆರೋಗ್ಯ, ಪೋಷಣೆ ಮತ್ತು ಸಾಮಾಜಿಕ ಹಕ್ಕುಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸುವುದು.

ಲಿಂಗ ಆಧಾರಿತ ತಾರತಮ್ಯವನ್ನು ಹೋಗಲಾಡಿಸುವುದು: ಹೆಣ್ಣು ಭ್ರೂಣಹತ್ಯೆ, ಬಾಲ್ಯವಿವಾಹ ಮತ್ತು ತಾರತಮ್ಯವನ್ನು ತಡೆಗಟ್ಟಲು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ಸಾಮಾಜಿಕ ಮನಸ್ಥಿತಿಯನ್ನು ಬದಲಾಯಿಸುವುದು:  ಈ ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ತಾತ್ಸಾ ಮನೋಭಾವವನ್ನು ಹೋಗಲಾಡಿಸುವುದು ಈ ದಿನದ ಉದ್ದೇಶವಾಗಿದೆ. ಇದರಿಂದ ಹೆಣ್ಣುಮಕ್ಕಳಿಗೆ ಗೌರವ, ಭದ್ರತೆ ಮತ್ತು ಸಮಾನ ಅವಕಾಶಗಳು ಸಿಗುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

Source link

ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್ – Kannada News | Zameer Ahmed Khan review Zaid Khan Cult Movie

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ತೆರೆಗೆ ಬಂದಿದೆ. ಈ ಸಿನಿಮಾನ ಝೈದ್ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವೀಕ್ಷಿಸಿದ್ದಾರೆ. ‘ಸಿನಿಮಾ ನೋಡಿದ ಜನರು ವಿಮರ್ಶೆ ತಿಳಿಸಬೇಕು. ನಾನು ತಂದೆಯಾಗಿ ಚೆನ್ನಾಗಿದೆ ಎಂದೇ ಹೇಳುತ್ತೇನೆ. ಆದರೆ, ಸಿನಿಮಾ ನಿಜಕ್ಕೂ ಉತ್ತಮವಾಗಿದೆ. ಬನಾರಸ್ ಚಿತ್ರಕ್ಕೆ ಹೋಲಿಸಿದರೆ ಇದು ಬೇರೆ ರೀತಿ ಇದೆ’ ಎಂದಿದ್ದಾರೆ ಝೈದ್ ಖಾನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ – Kannada News | Chamarajanagar: Leopard That Killed Devotee During MM Hills Foot Pilgrimage Captured

ಚಾಮರಾಜನಗರ, ಜನವರಿ 24: ಚಾಮರಾಜನಗರ (Chamarajanagar) ಜಿಲ್ಲೆ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆ ನೇತೃತ್ವದಲ್ಲಿ ಡ್ರೋನ್ ಕಣ್ಗಾವಲು ನೆರವಿನೊಂದಿಗೆ ಬೋನುಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ಇಳಿಜಾರು ಪ್ರದೇಶದಲ್ಲಿ ಗುರುವಾರ ತಡರಾತ್ರಿ ಚಿರತೆ ಸಿಕ್ಕಿಬಿದ್ದಿದೆ.

ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್ ಅವರ ದುರಂತ ಸಾವಿನ ನಂತರ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬುಧವಾರ ಬೆಳಗಿನ ಜಾವ ಈ ಪ್ರವೀಣ್ ಮೇಲೆ ಚಿರತೆ ದಾಳಿ ನಡೆದಿತ್ತು. ದೇವಾಲಯದಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ದಟ್ಟವಾದ ಕಾಡಿನಲ್ಲಿ ಚಿರತೆ ಅವರ ಮೇಲೆ ದಾಳಿ ಮಾಡಿತ್ತು ಎನ್ನಲಾಗಿದೆ.

ಚಿರತೆ ಸೆರೆಹಿಡಿಯುವ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಚಾಮರಾಜನಗರ ಜಿಲ್ಲಾಡಳಿತವು ಅರಣ್ಯ ಮಾರ್ಗಗಳಲ್ಲಿ ಪಾದಯಾತ್ರೆಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿತ್ತು.

ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಪಾದಯಾತ್ರೆ ನಿಷೇಧ

ಚಿರತೆ ದಾಳಿ ಘಟನೆ ಬೆನ್ನಲ್ಲೇ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೇಲೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಅರಣ್ಯ ಇಲಾಖೆಯು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಯಾತ್ರಿಕರು ಅಧಿಕೃತ ಸಾರಿಗೆ ಸೌಲಭ್ಯಗಳನ್ನು ಬಳಸಬೇಕು ಮತ್ತು ಸಂಚಾರವನ್ನು ಹಗಲಿನ ಸಮಯಕ್ಕೆ ಮಾತ್ರ ಸೀಮಿತಗೊಳಿಸಬೇಕು ಎಂದು ಸೂಚಿಸಲಾಗಿದೆ.

ಪಾದಯಾತ್ರೆ ಮಾಡುತ್ತಿದ್ದ ಭಕ್ತ ಚಿರತೆ ಬಾಯಿಗೆ ಬಿದ್ದಿದ್ಹೇಗೆ?

ಮಂಡ್ಯದ ಚೀರನಹಳ್ಳಿ ಹಾಗೂ ನೆರೆಯ ಗ್ರಾಮಗಳಿಂದ 150ಕ್ಕೂ ಹೆಚ್ಚು ಜನರು ಮಲೆಮಹದೇಶ್ವರ ಬೆಟ್ಟಕ್ಕೆ ಮಾದಪ್ಪನ ದರ್ಶನಕ್ಕಾಗಿ ಪಾದಯಾತ್ರೆ ತೆರಳುತ್ತಿದ್ದರು. ಪ್ರವೀಣ್ ಕುಮಾರ್ ಸಂಜೀವ್ ಸೇರಿ 5 ಜನರು ಪ್ರತ್ಯೇಕ ತಂಡದಲ್ಲಿದ್ದರು. ಜನವರಿ 21ರ ಬುಧವಾರ ಮುಂಜಾನೆ 6ಗಂಟೆ ಸುಮಾರಿಗೆ ರಂಗಸ್ವಾಮಿ ದಿಬ್ಬದ ಬಳಿ ನಡೆದು ಕೊಂಡು ಹೋಗುತ್ತಿದ್ದಾಗ ಏಕಾಏಕಿ ಚಿರತೆ ಎದುರಾಗಿದೆ. ಎಲ್ಲರೂ ಕೂಗಿಕೊಂಡು ಇಳಿಜಾರಿನ ಕಡೆ ಓಡಿದ್ದಾರೆ. ಆದರೆ, ಪ್ರವೀಣ್ ಅವರು ಸಿಕ್ಕಿಬಿದ್ದಿದ್ದಾರೆ. ಅವರ ಮೇಲೆ ಮುಗಿಬಿದ್ದ ಚಿರತೆ ಕತ್ತು ಸೀಳಿ ರಕ್ತ ಹೀರಿ ಬಳಿಕ ಕಾಡಿನೊಳಕ್ಕೆ ಎಳೆದೊಯ್ದಿದೆ.

ಇದನ್ನೂ ಓದಿ: ಹೊಸ ರೂಲ್ಸ್​: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ

ಮೊಬೈಲ್ ನೆಟ್ವರ್ಕ್​ ಇಲ್ಲದ ಕಾರಣ ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲು ಪ್ರವೀಣ್ ಜತೆಯಲ್ಲಿದ್ದವರಿಂದ ಸಾಧ್ಯವಾಗಿರಲಿಲ್ಲ. ನೆಟ್​ವರ್ಕ್ ಸಿಗುವ ಜಾಗಕ್ಕೆ ತೆರಳಿ ಮಾಹಿತಿ ನೀಡಿದ ನಂತರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರವೀಣ್ ಮೃತದೇಹ ಪತ್ತೆ ಮಾಡಿದ್ದರು. ನಂತರ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು! ಡೆಂಗ್ಯೂ–ಕಾಲರಾ ಎದುರಿಸಲು ಎಂಜಿನಿಯರ್ ಸಾಕೆ? – Kannada News | Karnataka Scraps Medical Health Officer Posts; Engineers to Replace MHOs in Karnataka City Corps, Sparks Outcry

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು?

ಮೈಸೂರು, ಜನವರಿ 24: ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ ಎಂಜಿನಿಯರ್ ಅಥವಾ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ವರ್ಗಾಯಿಸುವ ಯೋಜನೆ ರೂಪಿಸಲಾಗಿದೆ. ಈ ಸಂಬಂಧದ ಸರ್ಕಾರದ ಆದೇಶವನ್ನು ಪಾಲಿಕೆ ಆಯುಕ್ತರಿಗೆ ಈಗಾಗಲೇ ತಿಳಿಸಲಾಗಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವ ನಿರೀಕ್ಷೆಯಿದೆ.

ಆಕ್ರೋಶ ಹೊರಹಾಕಿರುವ ಮಾಜಿ ಮೇಯರ್​ಗಳು

ಈ ತೀರ್ಮಾನಕ್ಕೆ ವೈದ್ಯಕೀಯ ವಲಯದಿಂದ ಮಾತ್ರವಲ್ಲದೆ ಹಿರಿಯ ಪಾಲಿಕೆ ಸದಸ್ಯರು ಹಾಗೂ ಮಾಜಿ ಮೇಯರ್‌ಗಳಿಂದಲೂ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ಜವಾಬ್ದಾರಿಯುತ ಹುದ್ದೆಯಿಂದ ವೈದ್ಯಕೀಯ ಅರ್ಹತೆ ಹೊಂದಿದ ಅಧಿಕಾರಿಗಳನ್ನು ದೂರಮಾಡುವುದು ನಗರ ಆರೋಗ್ಯ ಆಡಳಿತಕ್ಕೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾನ್ಯವಾಗಿ ವೈದ್ಯಕೀಯ ಆರೋಗ್ಯಾಧಿಕಾರಿಗಳು ಹೋಟೆಲ್‌, ಲಾಡ್ಜ್‌, ಕಲ್ಯಾಣ ಮಂಟಪಗಳು, ಹಾಸ್ಟೆಲ್‌, ಪಿಜಿ ಹಾಗೂ ಇತರೆ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಪರಿಶೀಲನೆ ಮಾಡುವುದು, ದಂಡ ವಿಧಿಸುವುದು, ಸ್ವಚ್ಛತಾ ಸಿಬ್ಬಂದಿ ನಿರ್ವಹಣೆ ಜೊತೆಗೆ ತ್ಯಾಜ್ಯ ವಿಲೇವಾರಿ ಮೇಲ್ವಿಚಾರಣೆ ಮಾಡುವ ಪ್ರಮುಖ ಹೊಣೆಗಾರಿಕೆ ವಹಿಸುತ್ತಾರೆ. ಇಷ್ಟೆಲ್ಲಾ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಆರೋಗ್ಯಾಧಿಕಾರಿಗಳನ್ನು ಎಕ್ಸಿಕ್ಯುಟಿವ್ ಎಂಜಿನಿಯರ್​ಗಳಿಂದ ಬದಲಿಸುವುದು ಅವೈಜ್ಞಾನಿಕ ನಡೆಯೆಂದು ಹೇಳಲಾಗುತ್ತಿದೆ.

ನಗರಾಭಿವೃದ್ಧಿಯ ಅವೈಜ್ಞಾನಿಕ ನಡೆಗೆ ತೀವ್ರ ವಿರೋಧ

ಕಾಂಗ್ರೆಸ್ ಪಕ್ಷದ ಮಾಜಿ ಮೈಸೂರು ಮೇಯರ್ ಒಬ್ಬರು ಮಾತನಾಡಿ, ಆರೋಗ್ಯಾಧಿಕಾರಿಯ ಪಾತ್ರ ಕೇವಲ ಸ್ವಚ್ಛತೆಗೆ ಸೀಮಿತವಲ್ಲ. ಡೆಂಗ್ಯೂ, ಕಾಲರಾ ಮೊದಲಾದ ರೋಗಗಳು ಜನಜೀವನವನ್ನು ಅಸ್ಥವ್ಯಸ್ಥಗೊಳೀಸುವ ವೇಳೆ ವೈದ್ಯಕೀಯ ಪರಿಣಿತಿ, ಮಾರ್ಗದರ್ಶನ ಮತ್ತು ತ್ವರಿತ ಕ್ರಮ ಅತ್ಯಗತ್ಯ. ಇಂತಹ ಸಂದರ್ಭಗಳಲ್ಲಿ ಎಂಜಿನಿಯರ್‌ಗಳು ವೈದ್ಯರ ಬದಲಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಈ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಬಿಜೆಪಿ ಮಾಜಿ ಕಾರ್ಪೊರೇಟರ್ ಬಿ.ವಿ. ಮಂಜುನಾಥ್ ಪ್ರತಿಕ್ರಿಯಿಸಿ, ಕೊವಿಡ್ ಸಮಯದಲ್ಲಿ ಆರೋಗ್ಯಾಧಿಕಾರಿಗಳು ಜೀವವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ನಿಯಂತ್ರಣ, ಸ್ಯಾನಿಟೈಸೇಶನ್, ಔಷಧ ವಿತರಣೆ ಸೇರಿದಂತೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಗ್ರೇಟರ್ ಮೈಸೂರು ರೂಪುಗೊಳ್ಳುತ್ತಿರುವ ಸಂದರ್ಭದಲ್ಲಿ ವೈದ್ಯರ ಬದಲು ಎನ್ವಿರಾನ್ಮೆಂಟಲ್ ಎಂಜಿನಿಯರ್‌ಗಳನ್ನು ನೇಮಕ ಮಾಡುವುದು ಸರಿಯಲ್ಲ ಎಂದು ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಹಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯಲ್ಲಿಯೂ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಆದೇಶ ಹಿಂಪಡೆಯುವಂತೆ ಹಲವು ಮನವಿಗಳು ಸಲ್ಲಿಕೆಯಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಾನು ಕೇಳಿಕೊಂಡಿದ್ದು ಒಂದೇ ಪ್ರಶ್ನೆ: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು? – Kannada News | IND vs NZ: ishan kishan post match interview

ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಇಶಾನ್ ಕಿಶನ್ ಕೂಡ ಒಬ್ಬರು. ಏಕೆಂದರೆ ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 208 ರನ್​ಗಳು.

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 6 ರನ್​ಗಳಿಸುವಷ್ಟೆರಲ್ಲಿ 2 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಕೇವಲ 32 ಎಸೆತಗಳಲ್ಲಿ 11 ಫೋರ್ ಹಾಗೂ 4 ಸಿಕ್ಸರ್​ಗಳೊಂದಿಗೆ 76 ರನ್ ಚಚ್ಚಿದ್ದರು. ಆ ಬಳಿಕ ಸೂರ್ಯಕುಮಾರ್ ಯಾದವ್ 37 ಎಸೆತಗಳಲ್ಲಿ ಅಜೇಯ 82 ರನ್​ಗಳಿಸುವ ಮೂಲಕ 15.2 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು ಗುರಿ ತಲುಪಿಸಿದರು. ಈ ಮೂಲಕ ಭಾರತ ತಂಡ 7 ವಿಕೆಟ್​ಗಳ ಜಯ ಸಾಧಿಸಿತು.

ಈ ಗೆಲುವಿನಲ್ಲಿ ಪ್ರಧಾನ ಪಾತ್ರವಹಿಸಿದ್ದ ಇಶಾನ್ ಕಿಶನ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಇಶಾನ್, ಈ ಪಂದ್ಯದಲ್ಲಿ ನಾನು ಏನು ಮಾಡಬೇಕು ಎಂಬುದರ ಬಗ್ಗೆ ಸ್ಪಷ್ಟತೆಯಿತ್ತು. ಕೆಲವೊಮ್ಮೆ ನೀವು ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದೀರಿ ಎಂದು ನೀವು ಅರ್ಥಮಾಡಿಕೊಳ್ಳುತ್ತೀರಿ.

ಇದಾಗ್ಯೂ ನಾವು ಅಪಾಯಗಳನ್ನು ತೆಗೆದುಕೊಳ್ಳಬಾರದು, ಕ್ರಾಸ್-ಬ್ಯಾಟಿಂಗ್ ಮಾಡಬಾರದು ಎಂದು ನೋಡುತ್ತಿದ್ದೆವು, ಆದರೆ ನಾನು ಇನ್ನೂ ಪವರ್‌ಪ್ಲೇನಲ್ಲಿ ಸಾಧ್ಯವಾದಷ್ಟು ರನ್‌ಗಳನ್ನು ಗಳಿಸಲು ನೋಡುತ್ತಿದ್ದೆ. ಏಕೆಂದರೆ ನಮ್ಮ ಮುಂದೆ 200 ಕ್ಕೂ ಹೆಚ್ಚಿನ ಟಾರ್ಗೆಟ್ ನೀಡಲಾಗಿತ್ತು.

ಹೀಗಾಗಿ ಪವರ್​ಪ್ಲೇನಲ್ಲಿ ಹೇಗೆಲ್ಲಾ ಸಾಧ್ಯವೊ ಹಾಗೆಲ್ಲ ರನ್​ಗಳಿಸಲೇಬೇಕಿತ್ತು. ಇಂತಹ ಸಂದರ್ಭಗಳಲ್ಲಿ ನೀವು ಹೇಗೆ ಬ್ಯಾಟಿಂಗ್ ಮಾಡುತ್ತಿದ್ದೀರಿ ಎಂಬುದು ಮುಖ್ಯವಾಗುತ್ತದೆ. ನಾನು ಉತ್ತಮ ಹೊಡೆತಗಳನ್ನು ಆಡಿದರೆ, ಚೇಸ್ ಮಾಡಬಹುದು ಎಂಬ ಭಾವನೆ ನನಗಿತ್ತು ಎಂದು ಇಶಾನ್ ಕಿಶನ್ ಹೇಳಿದರು.

ನಾನು ದೇಶೀಯ ಕ್ರಿಕೆಟ್​ನಲ್ಲಿ ಅತ್ಯುತ್ತಮವಾಗಿ ಆಡಿದ್ದೆ. ಈ ವೇಳೆಯೇ ಭಾರತಕ್ಕಾಗಿ ಆಡಲು ಸಮರ್ಥರಾಗಿದ್ದೀರಾ ಎಂಬ ಪ್ರಶ್ನೆಯೊಂದು ನನ್ನಲ್ಲಿ ಮೂಡಿತ್ತು. ನಾನು ನನ್ನಲ್ಲಿ ಕೇಳಿಕೊಂಡ ಒಂದು ಪ್ರಶ್ನೆ ಕಂಬ್ಯಾಕ್ ಸಾಧ್ಯಾನಾ? ನಾನು ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಬಹುದೇ ಅಥವಾ ಇಲ್ಲವೇ?

ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವಂತೆ ದೇಶೀಯ ಟೂರ್ನಿ ಆಡಿದ್ದೆ. ಇದಾಗ್ಯೂ ನನ್ನಲ್ಲಿ ಉತ್ತಮವಾಗಿ ಆಡಬಲ್ಲೆನಾ ಎಂಬ ಪ್ರಶ್ನೆ ಹಾಗೆಯೇ ಉಳಿದಿತ್ತು. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ನಾನು ಎಲ್ಲೋ ರನ್ ಗಳಿಸಬೇಕಾಗಿತ್ತು. ನಾನು ಔಟಾದರೂ, ನಾನು ಉತ್ತಮ ಕ್ರಿಕೆಟ್ ಆಡಬೇಕೆಂದು ಬಯಸಿದ್ದೆ. ಅದರಂತೆ ಇದೀಗ ನ್ಯೂಝಿಲೆಂಡ್ ವಿರುದ್ಧ ಆಡಿದ್ದೇನೆ. ಈ ಮೂಲಕ ನನ್ನ ಬ್ಯಾಟಿಂಗ್​ ಸಾಮರ್ಥ್ಯದ ಬಗ್ಗೆಗಿನ ಎಲ್ಲಾ ಪ್ರಶ್ನೆಗಳಿಗೆ ನಾನೇ ಉತ್ತರ ಕಂಡುಕೊಂಡಿದ್ದೇನೆ ಎಂದು ಇಶಾನ್ ಕಿಶನ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ

ಇಶಾನ್ ಕಿಶನ್ ಅವರ ಈ ಸಿಡಿಲಬ್ಬರಕ್ಕೆ ನಲುಗಿದ ನ್ಯೂಝಿಲೆಂಡ್ ಬೌಲರ್​ಗಳು ಕೊನೆಯವರೆಗೆ ಲಯಕ್ಕೆ ಮರಳಲಿಲ್ಲ ಎಂಬುದು ವಿಶೇಷ. ಇದರ ಸಂಪೂರ್ಣ ಲಾಭ ಪಡೆದ ಟೀಮ್ ಇಂಡಿಯಾ 15.2 ಓವರ್​ಗಳಲ್ಲಿ 209 ರನ್​ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದೆ.

Source link

Bengaluru Air Quality: ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ! – Kannada News | Bangalore Air Pollution Crisis: Ballary have Air quality worse than Bengaluru

ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ

ಬೆಂಗಳೂರು, ಜನವರಿ 24: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ (Bengaluru Air Quality) ಆತಂಕಕಾರಿ ಮಟ್ಟದಲ್ಲಿಯೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟ 165 ಇದ್ದು, ಅನಾರೋಗ್ಯಕಾರಿ ಹಂತದಲ್ಲೇ ಇದೆ. ಆದರೆ ರಾಜಧಾನಿಯನ್ನೂ ಮೀರಿಸುವಷ್ಟು AQI ಹೊಂದಿರುವುದು ಬಳ್ಳಾರಿ. ಕೆಲ ತಿಂಗಳ ಹಿಂದೆಯೂ ಒಮ್ಮೆ ಬಳ್ಳಾರಿಯ ವಾಯ ಗುಣಮಟ್ಟ 200ಕ್ಕೇರಿತ್ತು. ಅದಾದ ಬಳಿಕ ಇಂದು ಮತ್ತೊಮ್ಮೆ ಕಳಪೆ ಮಟ್ಟಕ್ಕೆ ತಲುಪಿದೆ.

200ರ ಗಡಿ ದಾಟಿದ ಬಳ್ಳಾರಿಯ AQI

ಕೆಲ ದಿನಗಳ ಹಿಂದೆ ಬಳ್ಳಾರಿಯ ಗಾಳಿಯ ಗುಣಮಟ್ಟ 150ರ ಆಸುಪಾಸಿನಲ್ಲಿತ್ತು. ಆದರಿಂದು ಏಕಾಏಕಿ 224ಕ್ಕೆ ತಲುಪಿರುವುದು ಆತಂಕ ಸೃಷ್ಟಿಸಿದೆ. ಇದು ಬೆಂಗಳೂರಿಗಿಂತ ಕಳಪೆ ಗುಣಮಟ್ಟದ ಏರ್ ಕ್ವಾಲಿಟಿಯಾಗಿದೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –165
  • ಮಂಗಳೂರು-169
  • ಮೈಸೂರು –172
  • ಬೆಳಗಾವಿ – 104
  • ಕಲಬುರ್ಗಿ-150
  • ಶಿವಮೊಗ್ಗ – 160
  • ಬಳ್ಳಾರಿ – 224
  • ಹುಬ್ಬಳ್ಳಿ- 153
  • ಉಡುಪಿ –158
  • ವಿಜಯಪುರ –53

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

16 ವಿಭಾಗದಲ್ಲಿ ನಾಮನಿರ್ದೇಶನಗೊಂಡ ಹಾರರ್ ಚಿತ್ರ; 3 ಸಾವಿರ ಕೋಟಿ ಕಲೆಕ್ಷನ್ – Kannada News | Sinners: Horror Film Creates History with 16 Oscar Noms and 3255 Cr Box Office

ಪ್ರಪಂಚದಾದ್ಯಂತ ಪ್ರತಿ ದಿನ ಹೊಸ ಹೊಸ ಸಿನಿಮಾಗಳು ಬಿಡುಗಡೆಯಾಗುತ್ತವೆ. ಆದಾಗ್ಯೂ, ಕೆಲವು ಚಲನಚಿತ್ರಗಳ ಕಥೆಯನ್ನು ಪ್ರೇಕ್ಷಕರು ತುಂಬಾ ಇಷ್ಟಪಡುತ್ತಾರೆ, ಪ್ರೇಕ್ಷಕರು ಅದನ್ನು ವೀಕ್ಷಿಸಲು ಬರುತ್ತಾರೆ. ಅಂತಹ ಒಂದು ಹಾರರ್ ಚಿತ್ರವು ಪ್ರೇಕ್ಷಕರಿಗೆ ತುಂಬಾ ಇಷ್ಟವಾಯಿತು. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಕಂಡಿತು. ಈ ಚಿತ್ರವು 3255 ಕೋಟಿ ರೂ. ಗಳಿಸಿದೆ. ಈ ಚಿತ್ರ ಈಗ 16 ಆಸ್ಕರ್ (Oscar) ಪ್ರಶಸ್ತಿಗಳಿಗೆ ನಾಮ ನಿರ್ದೇಶನಗೊಂಡಿದೆ. ಈ ಚಿತ್ರ ಯಾವುದು? ಆ ಬಗ್ಗೆ ಇಲ್ಲಿದೆ ವಿವರ.

ನಾವು ಮಾತನಾಡುತ್ತಿರುವ ಚಿತ್ರ ಬಾಲಿವುಡ್ ಚಿತ್ರವಲ್ಲ, ಬದಲಾಗಿ ಹಾಲಿವುಡ್ ಚಿತ್ರ. ಕಳೆದ ಕೆಲವು ದಿನಗಳಿಂದ ಹಾಲಿವುಡ್ ಹಾರರ್ ಚಿತ್ರಗಳಿಗೆ ಆಸ್ಕರ್‌ನಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದಿಲ್ಲ ಎಂಬುದನ್ನು ನೀವು ಗಮನಿಸಿರಬೇಕು. ಆದಾಗ್ಯೂ, ಈ ವರ್ಷ ಈ ನೀತಿ ಬದಲಾಗುತ್ತಿರುವಂತೆ ತೋರುತ್ತಿದೆ. ಹಾಲಿವುಡ್ ಹಾರರ್ ಚಿತ್ರ ‘ಸಿನ್ನರ್ಸ್’ ಪ್ರಸ್ತುತ ಆಸ್ಕರ್ ರೇಸ್‌ನಲ್ಲಿ ಮುಂಚೂಣಿಯಲ್ಲಿದೆ ಮತ್ತು 98 ನೇ ಅಕಾಡೆಮಿ ಪ್ರಶಸ್ತಿಗಳಿಗೆ 16 ನಾಮನಿರ್ದೇಶನಗಳನ್ನು ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದೆ.

ಇದಕ್ಕೂ ಮೊದಲು, 14 ನಾಮನಿರ್ದೇಶನಗಳ ದಾಖಲೆಯನ್ನು ‘ಆಲ್ ಅಬೌಟ್ ಈವ್’, ‘ಟೈಟಾನಿಕ್’ ಮತ್ತು ‘ಲಾ ಲಾ ಲ್ಯಾಂಡ್’ ಚಿತ್ರಗಳು ಹೊಂದಿದ್ದವು. ಆದಾಗ್ಯೂ, ‘ಸಿನ್ನರ್ಸ್’ ಈ ದಾಖಲೆಯನ್ನು ಮುರಿಯುವ ಮೂಲಕ ಎಲ್ಲಾ ಚಿತ್ರಗಳನ್ನು ಮೀರಿಸಿದೆ. ಪ್ರಸಿದ್ಧ ನಿರ್ದೇಶಕ ರಯಾನ್ ಕೂಗ್ಲರ್ ನಿರ್ದೇಶನದ ಈ ಚಿತ್ರವು ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಚಿತ್ರಕಥೆ ಸೇರಿದಂತೆ ಹಲವು ಪ್ರಮುಖ ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ.

ನೀವು ಈ ಹಾರರ್ ಚಿತ್ರವನ್ನು ದೊಡ್ಡ ಪರದೆಯಲ್ಲಿ ವೀಕ್ಷಿಸಲು ಸಾಧ್ಯವಾಗದಿದ್ದರೆ, ನೀವು ಇನ್ನು ಮುಂದೆ ಚಿಂತಿಸಬೇಕಾಗಿಲ್ಲ. ‘ಸಿನ್ನರ್ಸ್’ ಚಿತ್ರವು OTT ಪ್ಲಾಟ್‌ಫಾರ್ಮ್ ಜಿಯೋ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿದೆ. ಈ ಸಿನಿಮಾ ಕನ್ನಡ, ಹಿಂದಿಯಲ್ಲಿ ಲಭ್ಯವಿಲ್ಲದಿದ್ದರೂ ವೀಕ್ಷಕರು ಇಂಗ್ಲಿಷ್ ಆಡಿಯೋ ಮತ್ತು ಉಪಶೀರ್ಷಿಕೆಗಳ ಸಹಾಯದಿಂದ ಚಿತ್ರವನ್ನು ಆನಂದಿಸಬಹುದು. ‘ಸಿನ್ನರ್ಸ್’ ಚಿತ್ರವು ತನ್ನ ನಟನೆ ಮತ್ತು ನಿರ್ದೇಶನಕ್ಕಾಗಿ ಮಾತ್ರವಲ್ಲದೆ, ತಾಂತ್ರಿಕ ವಿಭಾಗದಲ್ಲೂ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ.

ಇದನ್ನೂ ಓದಿ: ಆಸ್ಕರ್ ನಾಮಿನೇಷನ್ಸ್ ಘೋಷಣೆ: ಭಾರತದ ‘ಹೋಮ್​​ಬೌಂಡ್​’ಗೆ ನಿರಾಸೆ

ಛಾಯಾಗ್ರಹಣ, ಧ್ವನಿ ನಿರ್ಮಾಣ, ನಿರ್ಮಾಣ ವಿನ್ಯಾಸ, ಸಂಕಲನ, ಪಾತ್ರವರ್ಗ, ವೇಷಭೂಷಣ ವಿನ್ಯಾಸ, ಸಂಗೀತ, ಮೇಕಪ್ ಮತ್ತು ಕೇಶ ವಿನ್ಯಾಸ ಮೊದಲಾದ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ರಾಜಾಸಾಬ್’ ಚಿತ್ರದಿಂದ ನಿರ್ಮಾಪಕರಿಗೆ ಆದ ನಷ್ಟ ಎಷ್ಟು? – Kannada News | Prabhas’s Raja Saab Flop: Big Budget Fails, Story Reigns Supreme at Box Office

ದೊಡ್ಡ ಸೂಪರ್‌ಸ್ಟಾರ್ ನಿರ್ಮಾಣಕ್ಕೆ ಸಾಕಷ್ಟು ಹಣ ಖರ್ಚು ಮಾಡಿ ಮಾಡಿದ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗುವುದಿಲ್ಲ. ಕಥೆಯೇ ಚಿತ್ರದ ಮೂಲ ಮತ್ತು ಕಥೆಯ ಬಲದ ಮೇಲೆ ಮಾತ್ರ ಚಿತ್ರ ಸೂಪರ್‌ಹಿಟ್ ಆಗಬಹುದು. ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಬಿಡುಗಡೆಯಾದ ದೊಡ್ಡ ಬಜೆಟ್ ಚಿತ್ರ ಈಗ ಸಂಕಷ್ಟದಲ್ಲಿದೆ. ಅದುವೇ ಪ್ರಭಾಸ್ ಅವರ ‘ದಿ ರಾಜಾ ಸಾಬ್’. ಈ ಚಿತ್ರ ಅತಿದೊಡ್ಡ ಫ್ಲಾಪ್ ಚಿತ್ರವಾಗಿದೆ.

ಪ್ರಭಾಸ್ ಅವರ ಸ್ಟಾರ್‌ಡಮ್ ಕಾರಣಕ್ಕೆ ಸಿನಿಮಾ ಒಳ್ಳೆಯ ಓಪನಿಂಗ್ ಪಡೆಯಿತು. ಆದರೆ ಈ ಆವೇಗವನ್ನು ಕಾಯ್ದುಕೊಳ್ಳಲು ಸಾಧ್ಯವಾಗಲಿಲ್ಲ. ಈಗ, ಬಿಡುಗಡೆಯಾದ ಹನ್ನೆರಡನೇ ದಿನದಂದು, ಕೆಲವು ಲಕ್ಷ ರೂಪಾಯಿಗಳನ್ನು ಗಳಿಸುವುದು ಕಷ್ಟಕರವಾಗಿದೆ. 400 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ನಿರ್ಮಿಸಲಾದ ಈ ಚಿತ್ರವು ಇಲ್ಲಿಯವರೆಗೆ ಶೇಕಡಾ 64ಕ್ಕಿಂತ ಹೆಚ್ಚು ನಷ್ಟವನ್ನು ಕಂಡಿದೆ.

ಪ್ರಭಾಸ್ ಅವರ ‘ದಿ ರಾಜಾ ಸಾಬ್’ ಚಿತ್ರ ನಿರ್ಮಾಪಕರ ಎಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಬಿಡುಗಡೆಗೂ ಮುನ್ನ ಈ ಚಿತ್ರದ ಬಗ್ಗೆ ತುಂಬಾ ಚರ್ಚೆ ನಡೆದಿದ್ದು, ಅದು ಎಲ್ಲಾ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿಯುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಚಿತ್ರ ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ತಕ್ಷಣ ಚಿತ್ರದ ಭವಿಷ್ಯ ಸ್ಪಷ್ಟವಾಯಿತು. ಮೊದಲು, ಚಲನಚಿತ್ರ ವಿಮರ್ಶಕರು ಅದರ ಬಗ್ಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು. ಪ್ರೇಕ್ಷಕರು ಚಿತ್ರವನ್ನು ಇಷ್ಟಪಡಲಿಲ್ಲ. ಚಿತ್ರದ ಕಥೆ ಮತ್ತು ನಿರ್ದೇಶನವನ್ನು ತುಂಬಾ ಟೀಕಿಸಲಾಯಿತು. ನಂತರ ಅನೇಕ ಜನರು ಸಿನಿಮಾ ಬಗ್ಗೆ ಆಸಕ್ತಿ ಕಳೆದುಕೊಂಡರು.

ಇದನ್ನೂ ಓದಿ: ಧಾರುಣವಾಗಿ ಕುಸಿದ ‘ರಾಜಾ ಸಾಬ್’ ಗಳಿಕೆ, ‘ಆದಿಪುರುಷ್’, ‘ಸಾಹೋ’ಗಿಂತಲೂ ಕಳಪೆ

‘ದಿ ರಾಜಾ ಸಾಬ್’ ಮೊದಲ ವಾರದಲ್ಲಿ 130.25 ಕೋಟಿ ರೂ. ಗಳಿಸಿತು. ಅದಾದ ನಂತರ, ಎಂಟನೇ ದಿನ ಕೇವಲ 3.5 ಕೋಟಿ ರೂ., ಒಂಬತ್ತನೇ ದಿನ 3 ಕೋಟಿ ರೂ., ಹನ್ನೊಂದನೇ ದಿನ 2.6 ಕೋಟಿ ರೂ., ಹನ್ನೆರಡನೇ ದಿನ 80 ಲಕ್ಷ ರೂ. ಮತ್ತು ಹದಿಮೂರನೇ ದಿನ 50 ಲಕ್ಷ ರೂ. ಗಳಿಸಿತು. ಕಳೆದ 14 ದಿನಗಳಲ್ಲಿ ‘ದಿ ರಾಜಾ ಸಾಬ್’ ಚಿತ್ರದ ಒಟ್ಟು ಗಳಿಕೆ ಸುಮಾರು 142.71 ಕೋಟಿ ರೂ. ಇದರಿಂದಾಗಿ, ನಿರ್ಮಾಪಕರು ಶೇ. 64.48 ಕ್ಕಿಂತ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಟಾಲಿವುಡ್‌ಗೆ ಇದು ಇತ್ತೀಚಿನ ದಿನಗಳಲ್ಲಿ ಕಂಡ ಅತಿದೊಡ್ಡ ವೈಫಲ್ಯಗಳಲ್ಲಿ ಒಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version