Headlines

ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಹಿಂದೂ ಸಂಘಟನೆಗಳಿಂದ ಪ್ರತಿಭಟನೆImage Credit source: tv9 kannada ಬಾಗಲಕೋಟೆ, ಮೇ 27: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್ (Bakrid) ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್​​ಗೆ ಒತ್ತಾಯಿಸಿದ್ದಾರೆ….

Read More

‘ನನಗೆ ಹಲವು ಸಂಗಾತಿಗಳಿದ್ದಾರೆ’: ಮುಚ್ಚುಮರೆ ಇಲ್ಲದೇ ಎಲ್ಲವನ್ನೂ ಹೇಳಿದ ನಟಿ ಶಹನಾ ಗೋಸ್ವಾಮಿ

‘ರಾಕ್ ಆನ್’, ‘ಹೀರೋಯಿನ್’ ಮುಂತಾದ ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ ಬಾಲಿವುಡ್ (Bollywood) ನಟಿ ಶಹನಾ ಗೋಸ್ವಾಮಿ (Shahana Goswami) ಪ್ರೀತಿ ಮತ್ತು ಸಂಬಂಧಗಳ ಕುರಿತಾದ ತಮ್ಮ ವಿಭಿನ್ನ ದೃಷ್ಟಿಕೋನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಖ್ಯಾತ ನಿರೂಪಕ ಸಿದ್ಧಾರ್ಥ್ ಕಣ್ಣನ್ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಅವರು, ತಾವು ಈಗ ಓಪನ್ ರಿಲೇಶನ್‌ಶಿಪ್​ನಲ್ಲಿ (Open Relationship) ಇರುವುದಾಗಿ ಒಪ್ಪಿಕೊಂಡಿದ್ದಾರೆ. ತಮ್ಮ ಜೀವನದಲ್ಲಿ ಹಲವು ಸಂಗಾತಿಗಳು ಇದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಿದ್ದಾರೆ. ಸಾಂಪ್ರದಾಯಿಕ ಸಂಬಂಧಗಳು ತಮಗೆ ಎಂದಿಗೂ ಸರಿಹೊಂದುವುದಿಲ್ಲ ಎಂದು…

Read More

SRH vs RR: ಶಹಬ್ಬಾಸ್ ಸೂರ್ಯವಂಶಿ; ಶತಕ ವಂಚಿತರಾದ್ರೂ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದ ವೈಭವ್

ವೈಭವ್ ಸೂರ್ಯವಂಶಿ (Vaibhav Sooryavanshi).. ತಾನು ಕ್ರೀಸ್​ನಲ್ಲಿ ಇರುವವರೆಗೂ ಎದುರಾಳಿಗಳ ಗುಂಡಿಗೆಯ ಬಡಿತ ಹೆಚ್ಚಿಸುವ ಹದಿನೈದೇ ವರ್ಷದ ಹಾಲ್ಗೆನ್ನೆಯ ಯುವಕ. ಬರೀ ಹೊಡಿಬಡಿ ಆಟವನ್ನೇ ಕೇಳುವ ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದ ಆಟಗಾರನೆನಿಸಿಕೊಂಡಿರುವ ವೈಭವ್, ಐಪಿಎಲ್ 2026 (IPL 2026) ರ ಎಲಿಮಿನೇಟರ್ ಪಂದ್ಯದಲ್ಲೂ ಅದೇ ಆಟವನ್ನು ಪ್ರದರ್ಶಿಸಿದರು. ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಸನ್‌ರೈಸರ್ಸ್, ಪಂದ್ಯ ಆರಂಭಕ್ಕೂ ಮುನ್ನವೇ ವೈಭವ್ ಸೂರ್ಯವಂಶಿಯನ್ನು ಕಟ್ಟಿಹಾಕಲು ನಾನಾ ರಣತಂತ್ರವನ್ನು ಹೆಣೆದುಕೊಂಡು ಮೈದಾನಕ್ಕಿಳಿದಿತ್ತು….

Read More

ಆನ್​ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್; ಶೇ 28 ಜಿಎಸ್​ಟಿ ಪೂರ್ವಾನ್ವಯ ತೆರಿಗೆ ಸಿಂಧು ಎಂದು ಕೋರ್ಟ್ ತೀರ್ಪು

ನವದೆಹಲಿ, ಮೇ 27: ಭಾರತದ ಆನ್‌ಲೈನ್ ಗೇಮಿಂಗ್ (Online Gaming) ಕಂಪನಿಗಳಿಗೆ ಸುಪ್ರೀಂ ಕೋರ್ಟ್ ಬುಧವಾರದಂದು (ಮೇ 27, 2026) ಬಿಗ್ ಶಾಕ್ ನೀಡಿದೆ. ಆನ್‌ಲೈನ್ ಗೇಮಿಂಗ್ ಮೇಲಿನ ಶೇ. 28 ರಷ್ಟು ಜಿಎಸ್‌ಟಿ (GST) ವಿಧಿಸುವ ಸರ್ಕಾರದ ತೀರ್ಮಾನದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಒಂದೂವರೆ ಲಕ್ಷ ಕೋಟಿ ರೂ ಮೊತ್ತವಾಗುವ ಪೂರ್ವಾನ್ವಯ ತೆರಿಗೆ (Retrospective Tax) ಪಾವತಿಸುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಗೇಮಿಂಗ್ ಕಂಪನಿಗಳ ತೀವ್ರ…

Read More

ಗುಜರಾತ್‌ನಲ್ಲಿ ಎಬೋಲಾ ಭೀತಿ; ಕಾಂಗೋದಿಂದ ಬಂದ ವ್ಯಕ್ತಿ ಅಹಮದಾಬಾದ್‌ನಲ್ಲಿ ಕ್ವಾರಂಟೈನ್

ಅಹಮದಾಬಾದ್, ಮೇ 27: ಇಡೀ ಜಗತ್ತನ್ನು ಆತಂಕಕ್ಕೆ ದೂಡಿರುವ ಎಬೋಲಾ (Ebola)  ವೈರಸ್ ಭಾರತಕ್ಕೂ ಎಂಟ್ರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಆಫ್ರಿಕಾದ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಿಂದ ಗುಜರಾತ್‌ಗೆ ಮರಳಿದ್ದ 37 ವರ್ಷದ ಬ್ಯಾಂಕರ್ ಒಬ್ಬರಲ್ಲಿ ಎಬೋಲಾ ರೋಗದ ಲಕ್ಷಣಗಳು ಕಂಡುಬಂದಿವೆ. ಇದು ಗುಜರಾತ್ ರಾಜ್ಯದಲ್ಲೇ ವರದಿಯಾಗಿರುವ ಮೊದಲ ಶಂಕಿತ ಪ್ರಕರಣವಾಗಿದೆ. ಈ ವ್ಯಕ್ತಿ ಕಾಂಗೋದಿಂದ ಮುಂಬೈ ಮಾರ್ಗವಾಗಿ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ವಡೋದರಾದಲ್ಲಿದ್ದಾಗ ಅವರಿಗೆ ತೀವ್ರ ಜ್ವರ ಸೇರಿದಂತೆ ಎಬೋಲಾ ಮಾದರಿಯ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣವೇ…

Read More

ಎಚ್​ಡಿಎಫ್​ಸಿಯಿಂದ 45 ಕೋಟಿ ರೂ ಅಕ್ರಮ ಬಡ್ಡಿ ಪಾವತಿ ವಿವಾದ; ಆರೋಪ ನಿರಾಕರಿಸಿದ ಬ್ಯಾಂಕ್

ಎಚ್‌ಡಿಎಫ್‌ಸಿ ಬ್ಯಾಂಕ್Image Credit source: Getty Images ಮುಂಬೈ, ಮೇ 27: ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ (MSRDC) ಸಂಬಂಧಿಸಿದ 45 ಕೋಟಿ ರೂ ಬಡ್ಡಿ ಪಾವತಿಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಭಾರತದ ಅತಿ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank) ಇಂದು ಷೇರು ಬಜಾರಿನಲ್ಲಿ ಶೇ. 2.54ರಷ್ಟು (19 ರೂ) ಹಿನ್ನಡೆ ಅನುಭವಿಸಿದೆ. ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಬ್ಯಾಂಕು ತಳ್ಳಿಹಾಕಿದರೂ, ಷೇರು ಕುಸಿತ…

Read More

IPL 2026 Eliminator SRH vs RR Live: ಶತಕ ವಂಚಿತ ವೈಭವ್

27 May 2026 08:20 PM (IST) IPL 2026 Eliminator Live: 100 ರನ್ ದಾಟಿದ ರಾಜಸ್ಥಾನ ರಾಜಸ್ಥಾನ್ ರಾಯಲ್ಸ್ ತಂಡವು 7.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 100 ರನ್‌ಗಳ ಗಡಿ ದಾಟಿತು. ವೈಭವ್ ಸೂರ್ಯವಂಶಿ 77 ರನ್ ಗಳಿಸಿ ಶತಕದ ಸಮೀಪದಲ್ಲಿದ್ದಾರೆ. 27 May 2026 08:04 PM (IST) IPL 2026 Eliminator Live: ಸೂರ್ಯವಂಶಿ ಅರ್ಧಶತಕ ವೈಭವ್ ಸೂರ್ಯವಂಶಿ ಕೇವಲ 16 ಎಸೆತಗಳಲ್ಲಿ ಎಂಟು ಸಿಕ್ಸರ್‌ಗಳನ್ನು ಬಾರಿಸಿ ಅರ್ಧಶತಕ ಪೂರೈಸಿದರು. ಇದರೊಂದಿಗೆ,…

Read More

ಪಿರಿಯಡ್ಸ್ ಸಮಯದಲ್ಲಿ ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಎಷ್ಟು ಮುಖ್ಯ ಗೊತ್ತಾ?

ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಪಿರಿಯಡ್ಸ್ (Periods) ಹೈಜೀನ್ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಈಗ ಮಹಿಳೆಯರು ತಾವು ಬಳಸುವ ಪ್ಯಾಡ್‌ನ ಗುಣಮಟ್ಟ ಮತ್ತು ಅದು ಚರ್ಮದ ಮೇಲೆ ಬೀರುವ ಪರಿಣಾಮಗಳತ್ತವೂ ಹೆಚ್ಚು ಗಮನ ಹರಿಸುತ್ತಿದ್ದಾರೆ. ತಜ್ಞರ ಪ್ರಕಾರ, ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡದಿದ್ದರೆ ಚರ್ಮದ ಸಮಸ್ಯೆಗಳು ಮತ್ತು ಸೋಂಕಿನ ಅಪಾಯ ಹೆಚ್ಚಾಗಬಹುದು. ವೈದ್ಯರು ನೀಡುವ ಮಾಹಿತಿ ಪ್ರಕಾರ, ಸ್ಯಾನಿಟರಿ ಪ್ಯಾಡ್‌ನ ಮೇಲಿನ ಪದರ ದೇಹದ ಸೂಕ್ಷ್ಮ ಭಾಗದೊಂದಿಗೆ ನೇರ ಸಂಪರ್ಕದಲ್ಲಿರುತ್ತದೆ. ಪ್ಯಾಡ್‌ನಲ್ಲಿ ಹೆಚ್ಚು ಸುಗಂಧ ದ್ರವ್ಯಗಳು ಅಥವಾ…

Read More

ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಬೆಂಗಳೂರು, ಮೇ 27: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ದಟ್ಟವಾಗುತ್ತಿದ್ದಂತೆ, ಅವರ ಬೆಂಬಲಿಗರು ಮತ್ತು ಅಹಿಂದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ನಿರ್ಧಾರದ ವಿರುದ್ಧ ನಿಗಿ ನಿಗಿ ಎನ್ನುತ್ತಿರುವ ಅಭಿಮಾನಿಗಳು ಸಿದ್ದರಾಮಯ್ಯನವರ ನಿವಾಸದ ಮುಂದೆ ಜಮಾಯಿಸಿ ಪ್ರತಿಭಟಿಸಿದರು. ‘ಯಾವನು ಹೈಕಮಾಂಡ್’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಕಾಂಗ್ರೆಸ್ ಪಕ್ಷ ಸರ್ವನಾಶವಾಗುತ್ತದೆ ಎಂದು ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಸಿದ್ದರಾಮಯ್ಯ ಜೆಡಿಎಸ್ ತೊರೆದ ನಂತರ ಆ ಪಕ್ಷಕ್ಕೆ…

Read More

ದೆಹಲಿಯಲ್ಲಿ ನಕಲಿ ಕೆವೈಸಿ ಮೂಲಕ ಚಹಾ ವ್ಯಾಪಾರಿಗೆ 90,000 ರೂ. ವಂಚನೆ; ಮೂವರ ಬಂಧನ

ನವದೆಹಲಿ, ಮೇ 27: ಮೊಬೈಲ್ ಆಪ್‌ಗಳಲ್ಲಿ ಕೆವೈಸಿ (KYC) ಅಪ್‌ಡೇಟ್ ಮಾಡುವ ನೆಪದಲ್ಲಿ ಚಹಾ ವ್ಯಾಪಾರಿಯೊಬ್ಬರಿಂದ 90,000 ರೂ. ಹಣ ದೋಚಿದ್ದ ಅಂತಾರಾಜ್ಯ ಸೈಬರ್ ವಂಚಕರ ಜಾಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚಕನೊಬ್ಬ ತಾನು ಪ್ರಮುಖ ಡಿಜಿಟಲ್ ಪೇಮೆಂಟ್ ಕಂಪನಿಯೊಂದರ ಉದ್ಯೋಗಿ ಎಂದು ಪರಿಚಯಿಸಿಕೊಂಡು ಚಹಾ ಅಂಗಡಿಗೆ ಬಂದಿದ್ದ. ಆತ ವ್ಯಾಪಾರಿಯ ಮೊಬೈಲ್‌ನಲ್ಲಿ ಪೇಮೆಂಟ್ ಆಪ್‌ನ…

Read More