ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ – Kannada News | Siddaramaiahs Silence on Internal Party Conspiracy Draws KN Rajannas Criticism.

ಬೆಂಗಳೂರು, ಏ,17: ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್. ರಾಜಣ್ಣ ಅವರು ಪಕ್ಷದಲ್ಲಿ ನಿಷ್ಠೆಯಿಂದ ಇರುವವರನ್ನು ಗುರಿಯಾಗಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳು ಪಕ್ಷ ನಿಷ್ಠರ ವಿರುದ್ಧ ಹುನ್ನಾರ ನಡೆಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಣ್ಣ, ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಜಮೀರ್ ಅಹಮದ್ ಮತ್ತು ಅವರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದರು. ಹಿಂದೆ ವಾಲ್ಮೀಕಿ ಸಮುದಾಯವನ್ನು ಗುರಿಯಾಗಿಸಲಾಗಿತ್ತು, ಈಗ ಅಲ್ಪಸಂಖ್ಯಾತ ಸಮುದಾಯದವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧವಾಗಿ ತಾವು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.ಪಕ್ಷಕ್ಕೆ ನಿಷ್ಠರಾಗಿರುವ, ಕಾಂಗ್ರೆಸ್ ಪಕ್ಷ ಬೆಳೆಯಬೇಕು, ಮತ್ತು ಅದರ ಮೂಲಕ ಬಡವರಿಗೆ ಅನುಕೂಲವಾಗಬೇಕು ಎಂದು ನಿರೀಕ್ಷಿಸುವವರ ಮೇಲೆ ಪಕ್ಷದಲ್ಲಿರುವ ಪಟ್ಟಭದ್ರ ಹಿತಾಸಕ್ತಿಗಳು ಹುನ್ನಾರಗಳನ್ನು ನಡೆಸುತ್ತಿವೆ ಎಂದು ರಾಜಣ್ಣ ಸ್ಪಷ್ಟಪಡಿಸಿದರು. ಇಂತಹ ಸನ್ನಿವೇಶಗಳು ಬಂದಾಗ ಮುಖ್ಯಮಂತ್ರಿಗಳು ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ ಎಂಬುದು ತಮಗೆ ಬೇಸರ ತರಿಸಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಇಂದ ಅಂತಹ ದೃಢ ನಿಲುವನ್ನು ರಾಜಣ್ಣ ನಿರೀಕ್ಷಿಸಿದ್ದರು. “ಸಿದ್ದರಾಮಯ್ಯನವರು ಏನಾದ್ರೂ ಕಟ್ಟ ಹಾಕಿದ್ದಾರಾ? ನಾವು ಸಿದ್ದರಾಮಯ್ಯನವರಿಂದ ಈ ರೀತಿ ಅಸಹಾಯಕ ಪರಿಸ್ಥಿತಿಯನ್ನು ನಿರೀಕ್ಷಿಸಿರಲಿಲ್ಲ” ಎಂದು ಅವರು ಪ್ರಶ್ನಿಸಿದರು. ಎಲ್ಲಾ ಪಕ್ಷಗಳಲ್ಲೂ ಪಟ್ಟಭದ್ರ ಹಿತಾಸಕ್ತಿಗಳು ಇರುತ್ತವೆ, ಕಾಂಗ್ರೆಸ್‌ನಲ್ಲೂ ಇವೆ ಎಂದು ಅವರು ಒಪ್ಪಿಕೊಂಡರು. ಆದರೆ ಸಿದ್ದರಾಮಯ್ಯನವರನ್ನು ಅಸಹಾಯಕರನ್ನಾಗಿಸಿದ ಆ ಶಕ್ತಿ ಅಥವಾ ವ್ಯಕ್ತಿ ಯಾರೆಂದು ನೇರವಾಗಿ ಹೇಳಲು ಅವರು ನಿರಾಕರಿಸಿದರು, “ನೀವೇ ಅರ್ಥ ಮಾಡಿಕೊಳ್ಳಿ” ಎಂದು ಹೇಳಿದರು. ಸಿದ್ದರಾಮಯ್ಯನವರು ತಮ್ಮ ಮೌನ ಮುರಿಯಬೇಕು ಎಂದು ಒತ್ತಾಯಿಸಿದ ರಾಜಣ್ಣ, ಮುಖ್ಯಮಂತ್ರಿಗಳ ಮೇಲೆ ಯಾವ ರೀತಿಯ ನಿರ್ಬಂಧಗಳು ಅಥವಾ ಕಂಪಲ್ಷನ್ಸ್ ಇವೆಯೋ ತಮಗೆ ತಿಳಿದಿಲ್ಲ ಎಂದರು. ಯಾವ ಒತ್ತಡದಿಂದ ಅವರು ಇಂತಹ ತಟಸ್ಥ ಧೋರಣೆ ತಳೆದಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ. ನಿಷ್ಠಾವಂತ ಕಾರ್ಯಕರ್ತರನ್ನು ರಕ್ಷಿಸಲು ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಬೇಕು ಎಂಬುದು ರಾಜಣ್ಣ ಅವರ ಆಶಯವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಂಕೋಲಾ: ಮನೆಯೊಳಗೆ ಅವಿತು ಕುಳಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ ನೋಡಿ – Kannada News | Massive 16 Foot King Cobra Rescued from House in Ankola: Brave Rescue Operation by Snake Experts in Halavalli

ಕಾರವಾರ, ಏಪ್ರಿಲ್ 17: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮನೆಯೊಂದರೊಳಗೆ ಸುಮಾರು 16 ಅಡಿ ಉದ್ದದ ಈ ಕಾಳಿಂಗ ಸರ್ಪ ಅವಿತು ಕುಳಿತಿದ್ದನ್ನು ಕಂಡು ಮನೆಯವರು ಮತ್ತು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ವಿಷಯ ತಿಳಿದ ತಕ್ಷಣವೇ ಸ್ಥಳೀಯರು ಉರಗ ಪ್ರೇಮಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಉರಗ ತಜ್ಞರಾದ ಸೂರಜ್ ಶೆಟ್ಟಿ ಅರಬೈಲ್ ಹಾಗೂ ಹರೀಶ್ ಮಡಿವಾಳ ಅವರು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದೊಂದಿಗೆ ಕಾರ್ಯಾಚರಣೆ ಆರಂಭಿಸಿದರು. ಮನೆಯ ಕಿರಿದಾದ ಜಾಗದಲ್ಲಿ ಸೇರಿಕೊಂಡಿದ್ದ ಹಾವನ್ನು ಅತ್ಯಂತ ಎಚ್ಚರಿಕೆಯಿಂದ, ಯಾರಿಗೂ ತೊಂದರೆಯಾಗದಂತೆ ಸೆರೆಹಿಡಿದರು.

ಸೆರೆಹಿಡಿದ 16 ಅಡಿ ಉದ್ದದ ಈ ಸರ್ಪವನ್ನು ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಜನವಸತಿ ಇಲ್ಲದ ದಟ್ಟ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ. ಹಾವನ್ನು ಸುರಕ್ಷಿತವಾಗಿ ರಕ್ಷಿಸಿ, ಕಾಡಿಗೆ ಬಿಟ್ಟ ಸೂರಜ್ ಶೆಟ್ಟಿ ಮತ್ತು ತಂಡದ ಕಾರ್ಯಕ್ಕೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಇತ್ತೀಚೆಗೆ ಬಿಸಿಲಿನ ತಾಪ ಹೆಚ್ಚಾಗುತ್ತಿರುವುದರಿಂದ ತಂಪಾದ ಜಾಗ ಹುಡುಕಿಕೊಂಡು ಹಾವುಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ – Kannada News | 6 Burnt Alive In Car Bus Crash In Yadgir, here Video After Incident

ಯಾದಗಿರಿ, (ಏಪ್ರಿಲ್ 17): ಜಿಲ್ಲೆಯ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುವಂತಿದೆ. ಇನ್ನು ಅಪಘಾತ ಅದೆಷ್ಟು ಭಯಾನಕವಾಗಿತ್ತು ಎನ್ನುವುದನ್ನ ವಿಡಿಯೋನಲ್ಲಿ ನೋಡಿ.

ಇದನ್ನೂ ಓದಿ: ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು

Source link

ರಿಷಬ್ ಶೆಟ್ಟಿಗೆ ಐಎನ್​​ಸಿಎ ಅವಾರ್ಡ್: ಧನ್ಯವಾದ ಹೇಳಿದ್ದು ಯಾರಿಗೆ? – Kannada News | Rishab Shetty got three INCA awards for Kantaran Chapter 1

‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾಗಳು ರಿಷಬ್ ಶೆಟ್ಟಿಯನ್ನು (Rishab Shetty) ಪ್ಯಾನ್ ಇಂಡಿಯಾ ಸ್ಟಾರ್ ನಟ ಮತ್ತು ನಿರ್ದೇಶಕರನ್ನಾಗಿ ಮಾಡಿವೆ. ಈ ಎರಡು ಸಿನಿಮಾಗಳು ರಿಷಬ್ ಅವರಿಗೆ ಹಲವು ವೇದಿಕೆಗಳಲ್ಲಿ ಗೌರವ ಪ್ರಾಪ್ತವಾಗುವಂತೆ ಮಾಡಿದೆ. ‘ಕಾಂತಾರ’ ಮತ್ತು ‘ಕಾಂತಾರ 1’ ಸಿನಿಮಾಗಳಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಐಎನ್​​ಸಿಎ ಪ್ರಶಸ್ತಿ ಸಹ ಲಭಿಸಿದೆ. ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ, ಅತ್ಯುತ್ತಮ ನಿರ್ದೇಶಕ ಮತ್ತು ‘ಕಾಂತಾರ 1’ ಸಿನಿಮಾಕ್ಕೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಲಭಿಸಿದೆ.

ರಾಣಾ ದಗ್ಗುಬಾಟಿ ಮತ್ತು ಕರಣ್ ಜೋಹರ್ ನಿರೂಪಣೆ ಮಾಡಿದ ಈ ಶೋ ಇತ್ತೀಚೆಗಷ್ಟೆ ನಡೆದಿದ್ದು, ರಿಷಬ್ ಶೆಟ್ಟಿ ಅವರು ಒಟ್ಟಿಗೆ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡರು. ಈ ವೇಳೆ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ’ ಎರಡೂ ಸಿನಿಮಾಗಳು ಸೇರಿ ನಾಲ್ಕು ವರ್ಷದ ಶ್ರಮ. ಇದು ನನ್ನೊಬ್ಬನ ಶ್ರಮ ಮಾತ್ರವೇ ಅಲ್ಲ. ನನ್ನ ಇಡೀ ತಂಡದ ಶ್ರಮ. ಅದಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಪ್ರಗತಿ ಶೆಟ್ಟಿ, ನನ್ನ ಶಕ್ತಿಯಾಗಿ ನಿಂತು ಈ ಸಿನಿಮಾ ಮಾಡಲು ನನಗೆ ಸ್ಪೂರ್ತಿ ನೀಡಿದ್ದಾರೆ ಅವರಿಗೆ ವಿಶೇಷ ಧನ್ಯವಾದ. ಈ ಸಿನಿಮಾವನ್ನು ಕನ್ನಡ ಸಿನಿಮಾ ಪ್ರೇಕ್ಷಕರು ಮತ್ತು ನಾನು ನಂಬುವ ದೈವಕ್ಕೆ ಡೆಡಿಕೇಟ್ ಮಾಡುವೆ’ ಎಂದಿದ್ದಾರೆ ರಿಷಬ್ ಶೆಟ್ಟಿ.

‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ ಸಿನಿಮಾಕ್ಕೆ ಬಂಡವಾಳ ಹೂಡಿದ್ದು ಹೊಂಬಾಳೆ ಫಿಲಮ್ಸ್. ಆದರೆ ಇತ್ತೀಚೆಗೆ ರಿಷಬ್ ಮತ್ತು ಹೊಂಬಾಳೆ ನಡುವೆ ಎಲ್ಲವೂ ಸರಿ ಇಲ್ಲ ಎನ್ನಲಾಗುತ್ತಿದೆ. ಅದರ ಬೆನ್ನಲ್ಲೆ ಇದೀಗ ಐಎನ್​​ಸಿಎ ಪ್ರಶಸ್ತಿ ಸ್ವೀಕಾರ ಮಾಡಿದ ರಿಷಬ್ ಶೆಟ್ಟಿ ಅವರು ಹೊಂಬಾಳೆಗಾಗಲಿ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗಾಗಲಿ ಧನ್ಯವಾದ ಹೇಳಿಲ್ಲ. ಸಿನಿಮಾದ ಎಲ್ಲ ತಂತ್ರಜ್ಞರಿಗೆ ಧನ್ಯವಾದ ಹೇಳಿದ್ದಾರಾದರೂ ಸಿನಿಮಾದ ಬೆನ್ನೆಲುಬು ನಿರ್ಮಾಪಕರನ್ನೇ ಮರೆತಿದ್ದಾರೆ. ಆದರೆ ಕೇವಲ ಮರೆವೆ ಅಥವಾ ಉದ್ದೇಶಪೂರ್ವಕವೇ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್​ಡೇ ವಿಡಿಯೋ ನೋಡಿ..

ಇತ್ತೀಚೆಗೆ ಹೊಂಬಾಳೆ ಫಿಲಮ್ಸ್ ಮತ್ತು ರಿಷಬ್ ಶೆಟ್ಟಿ ನಡುವೆ ತುಸು ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗುತ್ತಿದೆ. ರಿಷಬ್ ಶೆಟ್ಟಿ ಅವರು ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣದಲ್ಲಿ ಹೊಂಬಾಳೆ ಫಿಲಮ್ಸ್ ಅನ್ನು ಅನ್​​ಫಾಲೋ ಮಾಡಿದ್ದಾರೆ. ಈಗ ಅವಾರ್ಡ್ ಫಂಕ್ಷನ್​​ನಲ್ಲಿ ಹೊಂಬಾಳೆಯ ಹೆಸರು ಹೇಳದೇ ಇರುವುದು ಅನುಮಾನಗಳಿಗೆ ಇನ್ನಷ್ಟು ಪುಷ್ಠಿ ನೀಡಿದೆ.

ರಿಷಬ್ ಶೆಟ್ಟಿ ಇದೀಗ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ ‘ಜೈ ಹನುಮಾನ್’ನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಪ್ರಶಾಂತ್ ವರ್ಮಾ ನಿರ್ದೇಶಿಸುತ್ತಿದ್ದು, ರಾಣಾ ದಗ್ಗುಬಾಟಿ ಸಹ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ರಿಷಬ್ ಶೆಟ್ಟಿ ಅವರು ತಮ್ಮದೇ ನಿರ್ಮಾಣ ಸಂಸ್ಥೆಯಿಂದ ಹೊಸದೊಂದು ಸಿನಿಮಾದ ಘೋಷಣೆ ಸಹ ಮಾಡಿದ್ದಾರೆ. ಆ ಸಿನಿಮಾದ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇದು ಧುರಂಧರ್ 3: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾನ್ನು ಹೇಗೆ ಕೊಂದ್ರು ನೋಡಿ? ವಿಡಿಯೋ ವೈರಲ್

ಲಾಹೋರ್, ಏ.17: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ನಾಯಕ ಅಮೀರ್ ಹಮ್ಜಾ ಪಾಕಿಸ್ತಾನದ ಲಾಹೋರ್‌ನಲ್ಲಿ ಹತ್ಯೆಯಾಗಿದ್ದಾನೆ. ಮೋಟಾರ್ ಸೈಕಲ್‌ನಲ್ಲಿ ಬಂದ ಅಜ್ಞಾತ ಬಂದೂಕುಧಾರಿಗಳು ಹಮ್ಜಾನನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಲಾಹೋರ್‌ನ ಲಖ್ಪತ್ ಜಿಲ್ಲೆಯ ಸಮೀಪ ಈ ಘಟನೆ ನಡೆದಿದೆ. ಹಮ್ಜಾ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಂಧಾಭಿಮಾನಿಯಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಹಮ್ಜಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ವೇಳೆ ಆತನ ಪತ್ನಿ ಮತ್ತು ಮಗಳಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ. ಅಮೀರ್ ಹಮ್ಜಾ 2012ರ ಸುನಿತಾ ವಿಲಿಯಮ್ಸ್ ಭೇಟಿಯ ವೇಳೆ ಮುಂಬೈ ಮತ್ತು ಜಮ್ಮು-ಕಾಶ್ಮೀರದಲ್ಲಿ ನಡೆದ ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಈತನನ್ನು ಅಮೆರಿಕವು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SSLC ಪರೀಕ್ಷೆ: ಹಿಂದಿ ಭಾಷೆಗೆ ಸಿಗುತ್ತಾ ಗ್ರೇಸ್ ಮಾರ್ಕ್ಸ್? ಖಾಸಗಿ ಶಾಲೆಗಳ ಒಕ್ಕೂಟ ಮನವಿ – Kannada News | SSLC Exam Update: KAMS Urges Karnataka Govt to Give 8 Grace Marks for Hindi After High Court Quashes Grade System

ಬೆಂಗಳೂರು, ಏಪ್ರಿಲ್ 17: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಹಿಂದಿಗೆ 8 ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡುವಂತೆ ಮನವಿ ಮಾಡಿ ಖಾಸಗಿ ಶಾಲೆಗಳ ಒಕ್ಕೂಟವು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದೆ. ಈ ಕ್ರಮವು ಹಿಂದಿ ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಒಕ್ಕೂಟ ಹೇಳಿದೆ. ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಸರ್ಕಾರ ತೃತೀಯ ಭಾಷೆಗೆ ಗ್ರೇಡ್ ನೀಡುವುದಾಗಿ ತಿಳಿಸಿತ್ತು. ಆದರೆ, ನ್ಯಾಯಾಲಯವು ಈ ನಿರ್ಧಾರವನ್ನು ರದ್ದುಗೊಳಿಸಿ, ಗ್ರೇಡ್‌ಗಳ ಬದಲಿಗೆ ವಿದ್ಯಾರ್ಥಿಗಳಿಗೆ ಅಂಕಗಳನ್ನೇ ನೀಡಬೇಕು ಎಂದು ಸೂಚಿಸಿತ್ತು. ಆದರೆ, ಸರ್ಕಾರದ ಗ್ರೇಡ್ ನಿರ್ಧಾರದ ಘೋಷಣೆ ನಂತರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೃತೀಯ ಭಾಷೆಯನ್ನು ಗಂಭೀರವಾಗಿ ಪರಿಗಣಿಸಿದ ಕಾರಣ ಈಗ ಫಲಿತಾಂಶ ಕುಸಿತದ ಭೀತಿ ಎದುರಾಗಿದೆ. ಹೀಗಾಗಿ ನಿರ್ದಿಷ್ಟವಾಗಿ ಹಿಂದಿ ಭಾಷೆಗೆ 8 ಗ್ರೇಸ್ ಮಾರ್ಕ್ಸ್ ನೀಡಬೇಕೆಂದು ಒತ್ತಾಯಿಸುತ್ತಿದೆ.

ಈ ಮನವಿಯಿಂದಾಗಿ ಹಿಂದಿ ವಿಷಯದಲ್ಲಿ ಉತ್ತೀರ್ಣರಾಗಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ – Kannada News | Tamannaah Bhatia’s Rs 1 Cr Claim Against Soap Co. Dismissed by Madras HC: 16 Year Legal Battle Ends

ನಟಿ ತಮನ್ನಾ ಭಾಟಿಯಾ ಅವರಿಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಖಾಸಗಿ ಸೋಪ್ ಕಂಪನಿಯ ವಿರುದ್ಧ ಅವರು ಸಲ್ಲಿಸಿದ್ದ 1 ಕೋಟಿ ರೂ. ಪರಿಹಾರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಪ್ರಕರಣ ಸುಮಾರು 16 ವರ್ಷಗಳ ಹಿಂದಿನದು ಎಂದೆ ನೀವು ನಂಬಲೇಬೇಕು. ಹಾಗಾದರೆ ಏನಿದು ಪ್ರಕರಣ? ಅವರ ವಾದವೇನು? ಆ ಬಗ್ಗೆ ಇಲ್ಲಿದೆ ವಿವರ.

ಅಕ್ಟೋಬರ್ 2008ರಲ್ಲಿ, ತಮನ್ನಾ ಸೋಪ್ ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಒಪ್ಪಂದದ ಪ್ರಕಾರ, ಅವರು ಒಂದು ವರ್ಷದ ಅವಧಿಗೆ (ಅಕ್ಟೋಬರ್ 2009 ರವರೆಗೆ) ಕಂಪನಿಯ ಉತ್ಪನ್ನಗಳಿಗೆ ಬ್ರಾಂಡ್ ರಾಯಭಾರಿಯಾಗಿ ಕಾರ್ಯನಿರ್ವಹಿಸಬೇಕಾಗಿತ್ತು. ಒಪ್ಪಂದದ ಅವಧಿ ಮುಗಿದ ನಂತರವೂ, ಕಂಪನಿಯು ತನ್ನ ಫೋಟೋಗಳನ್ನು ಜಾಹೀರಾತುಗಳಲ್ಲಿ ಮತ್ತು ಸೋಪ್ ಪ್ಯಾಕೇಜಿಂಗ್‌ನಲ್ಲಿ ಬಳಸುತ್ತಿದೆ ಎಂದು ತಮನ್ನಾ ಆರೋಪಿಸಿದರು.

2010 ಮತ್ತು 2011ರ ಅವಧಿಯಲ್ಲಿ ಅನುಮತಿಯಿಲ್ಲದೆ ತಮ್ಮ ಫೋಟೋಗಳನ್ನು ಬಳಸುವುದರಿಂದ ಆರ್ಥಿಕವಾಗಿ ಹಾನಿಯಾಗಿದೆ ಮತ್ತು ಮಾರುಕಟ್ಟೆ ಮೌಲ್ಯವನ್ನು ಕಡಿಮೆ ಮಾಡಿದೆ ಎಂದು ಅವರು ವಾದಿಸಿದರು. 1 ಕೋಟಿ ರೂ. ಪರಿಹಾರವನ್ನು ಕೋರಿ ಅವರು ನ್ಯಾಯಾಲಯವನ್ನು ಸಹ ಸಂಪರ್ಕಿಸಿದರು.

ಆರಂಭದಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠವು, ತಮನ್ನಾ ಅವರು ಒದಗಿಸಿದ ಸಾಕ್ಷ್ಯಗಳು ಸರಿಯಾಗಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು. ಅವರು ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದರು. ಏಪ್ರಿಲ್ 16, 2026ರಂದು, ಮೇಲ್ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಪಿ. ವೇಲ್ಮುರುಗನ್ ಮತ್ತು ನ್ಯಾಯಮೂರ್ತಿ ಕೆ. ಗೋವಿಂದರಾಜನ್ ತಿಲಕಾವತಿ ಅವರ ಪೀಠವು ತಮನ್ನಾ ಅವರ ವಾದವನ್ನು ತಿರಸ್ಕರಿಸಿದೆ.

ಇದನ್ನೂ ಓದಿ: ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ

ಒಪ್ಪಂದದ ಅವಧಿಯ ನಂತರ ಜಾಹೀರಾತುಗಳನ್ನು ಪ್ರಸಾರ ಮಾಡಲಾಗಿದೆ ಎಂದು ತೋರಿಸಲು ಯಾವುದೇ ಪುರಾವೆಗಳಿಲ್ಲ ಎಂದು ಪೀಠ ಹೇಳಿದೆ. ಏಕ ನ್ಯಾಯಾಧೀಶರ ಹಿಂದಿನ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ ಎಂದು ಹೇಳಿ ಮೇಲ್ಮನವಿಯನ್ನು ವಜಾಗೊಳಿಸಿತು. ಈ ತೀರ್ಪು ದೀರ್ಘಕಾಲದ ಕಾನೂನು ಹೋರಾಟವನ್ನು ಕೊನೆಗೊಳಿಸಿದಂತೆ ತೋರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೈದರಾಬಾದ್‌ನಲ್ಲಿ ‘ಸೀನಿಯರ್ ಮ್ಯಾನೇಜರ್’, ಬೆಂಗಳೂರಿನಲ್ಲಿ ‘ಮ್ಯಾನೇಜರ್’!; ಎರಡು ಹುದ್ದೆಗೂ ಒಂದೇ ಸಂಬಳ: ಈಗ ನಗರ ಮುಖ್ಯವೋ ಅಥವಾ ಹುದ್ದೆಯೋ? – Kannada News | MNC Job Offer: Bengaluru Manager or Hyd Senior Manager? IT Pros Debate Career vs. City

ಬೆಂಗಳೂರು, ಏ.17: ಸೋಶಿಯಲ್​ ಮೀಡಿಯಾದಲ್ಲಿ ಈ ಐಟಿ ಕಂಪನಿಗಳು ಉದ್ಯೋಗಿಗಳ ಗೋಳು ಮುಗಿಯುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಇಂತಹ ಪೋಸ್ಟ್​​​ಗಳು ವೈರಲ್​ ಆಗುತ್ತ ಇರುತ್ತದ. ಸಾಫ್ಟ್‌ವೇರ್ ಮತ್ತು ಕಾರ್ಪೊರೇಟ್ ಲೋಕದಲ್ಲಿ ‘ಹುದ್ದೆಯ ಹೆಸರು’ (Title) ಮುಖ್ಯವೋ ಅಥವಾ ‘ವಾಸಿಸುವ ನಗರ’ (Location) ಮುಖ್ಯವೋ? ರೆಡ್ಡಿಟ್ (Reddit) ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ಒಂದು ಪೋಸ್ಟ್ ಈಗ ಐಟಿ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.

ಎಂಟು ವರ್ಷಗಳ ಅನುಭವವಿರುವ ಅಭ್ಯರ್ಥಿಯೊಬ್ಬರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ (MNC) ‘ಸೀನಿಯರ್ ಮ್ಯಾನೇಜರ್’ ಹುದ್ದೆಗೆ ಸಂದರ್ಶನ ನೀಡಿದ್ದರು. ಅಭ್ಯರ್ಥಿಯು ವೈಯಕ್ತಿಕ ಕಾರಣಗಳಿಂದಾಗಿ ಬೆಂಗಳೂರಿನಲ್ಲೇ ಇರಲು ಬಯಸಿದ್ದರು. ಆದರೆ, ಕಂಪನಿಯು ಅವರ ಮುಂದೆ ಎರಡು ವಿಚಿತ್ರ ಆಯ್ಕೆಗಳನ್ನು ಇಟ್ಟಿದೆ. ಒಂದು ಹೈದರಾಬಾದ್‌ನಲ್ಲಿ ‘ಸೀನಿಯರ್ ಮ್ಯಾನೇಜರ್’ ಹುದ್ದೆ, ಎರಡನೇಯದ್ದು, ಬೆಂಗಳೂರಿನಲ್ಲೇ ಇರಬೇಕೆಂದರೆ ‘ಮ್ಯಾನೇಜರ್’ ಹುದ್ದೆ. ಈಗ ಈ ವ್ಯಕ್ತಿ ವಿಚಿತ್ರ ಸಂಕಷ್ಟಕ್ಕೆ ಸಿಲುಕಿದ್ದೇನೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಎರಡೂ ಆಯ್ಕೆಗಳಲ್ಲಿ ಸಂಬಳ (CTC) ಒಂದೇ ಆಗಿರುತ್ತದೆ! ಕಂಪನಿಯ ಪ್ರಕಾರ, ಎರಡೂ ಕೆಲಸಗಳು ಒಂದೇ ರೀತಿಯದ್ದಾಗಿದ್ದರೂ, ಬೆಂಗಳೂರಿನಲ್ಲಿ ಸದ್ಯಕ್ಕೆ ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇಲ್ಲದ ಕಾರಣ ಈ ‘ಟೈಟಲ್ ಹಿಟ್’ (Title Hit) ಅನಿವಾರ್ಯ ಎಂದಿದೆ.ಈ ಗೊಂದಲಕ್ಕೆ ನೆಟ್ಟಿಗರು ಭಿನ್ನ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಪುಣೆಗೆ ಬರುತ್ತಿದೆ ‘ವಂದೇ ಭಾರತ್ ಸ್ಲೀಪರ್’: 18 ಗಂಟೆಯ ಪ್ರಯಾಣ ಇನ್ಮುಂದೆ ಕೇವಲ 13 ಗಂಟೆ!

“ಹೈದರಾಬಾದ್‌ಗೆ ತೆರಳುವುದು ಉತ್ತಮ. ಬೆಂಗಳೂರಿನ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಮುಂದಿನ ಹತ್ತು ವರ್ಷ ಅಲ್ಲಿ ಯಾವುದೇ ಭರವಸೆ ಇಲ್ಲ. ಉತ್ತಮ ಜೀವನ ಗುಣಮಟ್ಟಕ್ಕಾಗಿ ಹೈದರಾಬಾದ್ ಆರಿಸಿಕೊಳ್ಳಿ” ಎಂದು ಒಬ್ಬರು ಸಲಹೆ ನೀಡಿದ್ದಾರೆ. ಮುಂದಿನ ಕೆಲಸದ ಸಂದರ್ಶನಗಳಲ್ಲಿ ಹುದ್ದೆಯ ಹೆಸರು ಮುಖ್ಯವಾಗುತ್ತದೆ. ಒಂದು ವೇಳೆ ಬೆಂಗಳೂರನ್ನೇ ಆರಿಸಿಕೊಂಡರೆ, ಸಂಬಳ ಮತ್ತು ಜವಾಬ್ದಾರಿ ಒಂದೇ ಆಗಿದ್ದರೂ ಟೈಟಲ್ ಮಾತ್ರ ಬದಲಾಗಿದೆ ಎಂಬ ಬಗ್ಗೆ ಕಂಪನಿಯಿಂದ ಲಿಖಿತ ದಾಖಲೆ ಪಡೆದುಕೊಳ್ಳಿ” ಎಂದಿದ್ದಾರೆ. “ಕೇವಲ ಹುದ್ದೆಯ ಹೆಸರಿಗಾಗಿ ಚೆನ್ನಾಗಿರುವ ಜೀವನಶೈಲಿಯನ್ನು ಹಾಳು ಮಾಡಿಕೊಳ್ಳಬೇಡಿ. ಸಂಬಳ ಒಂದೇ ಇರುವಾಗ ನಿಮಗೆ ಇಷ್ಟವಾದ ನಗರದಲ್ಲೇ ಇರಿ” ಎಂದು ಇನ್ನು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕೆಲವರು, “ಕೇವಲ 8 ವರ್ಷದ ಅನುಭವಕ್ಕೆ ಸೀನಿಯರ್ ಮ್ಯಾನೇಜರ್ ಹುದ್ದೆ ಸಿಗುತ್ತದೆಯೇ? ಮತ್ತು ಮ್ಯಾನೇಜರ್ ಆಗಿ ಒಬ್ಬರೇ ಕೆಲಸ ಮಾಡುವ (IC Role) ಜವಾಬ್ದಾರಿ ಏಕೆ?” ಎಂಬ ಕುತೂಹಲಕಾರಿ ಪ್ರಶ್ನೆಗಳನ್ನೂ ಎತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಏಷ್ಯಾದ ನಂ. 1 ಶ್ರೀಮಂತ ಅಂಬಾನಿಯಲ್ಲ, ಅದಾನಿ; ಟಾಪ್-20ಯಲ್ಲಿ ಅಮೆರಿಕನ್ನರನ್ನು ಬಿಟ್ಟರೆ ಭಾರತೀಯರೇ ಹೆಚ್ಚು – Kannada News | Gautam Adani overtakes Mukesh Ambani as Asia’s richest man as per Bloomberg billionaires index

ನವದೆಹಲಿ, ಏಪ್ರಿಲ್ 17: ಭಾರತದ ಇಬ್ಬರು ದಿಗ್ಗಜ ಉದ್ಯಮಿಗಳ ನಡುವೆ ಯಾರು ನಂಬರ್ ಒನ್ ಎನ್ನುವ ರೇಸ್ ನಡೆದಿದೆ. ಹೆಚ್ಚು ಆಸ್ತಿವಂತಿಕೆಯಲ್ಲಿ ಮುಕೇಶ್ ಅಂಬಾನಿ ಅವರನ್ನು ಗೌತಮ್ ಅದಾನಿ (Gautam Adani) ಹಿಂದಿಕ್ಕಿದ್ದಾರೆ. ಬ್ಲೂಮ್​ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ (Bloomberg Billionaires Index) ಪಟ್ಟಿಯಲ್ಲಿ ಅದಾನಿ 19ನೇ ಸ್ಥಾನಕ್ಕೇರಿದರೆ, ಮುಕೇಶ್ ಅಂಬಾನಿ 20ನೇ ಸ್ಥಾನದಲ್ಲಿದ್ದಾರೆ. ಅದಾನಿ ನಿವ್ವಳ ಆಸ್ತಿ ಮೌಲ್ಯ 3.56 ಬಿಲಿಯನ್ ಡಾಲರ್​ನಷ್ಟು ಏರಿಕೆಯಾಗಿ 92.6 ಬಿಲಿಯನ್ ಡಾಲರ್ ಆಗಿದೆ. ಇದೇ ವೇಳೆ, ಮುಕೇಶ್ ಅಂಬಾನಿ ಅವರ ನಿವ್ವಳ ಆಸ್ತಿಮೌಲ್ಯ 90.8 ಬಿಲಿಯನ್ ಡಾಲರ್ ಇದೆ.

2022ರಲ್ಲಿ ಹಿಂಡನ್ಬರ್ಗ್ ವರದಿ ಬಿಡುಗಡೆಗೆ ಮುನ್ನ ಗೌತಮ್ ಅದಾನಿ ಅವರು ಮುಕೇಶ್ ಅಂಬಾನಿಯನ್ನು ಶ್ರೀಮಂತಿಕೆಯಲ್ಲಿ ಹಿಂದಿಕ್ಕಿದ್ದರು. ಆ ಬಳಿಕ ಅದಾನಿ ಗ್ರೂಪ್​ನ ವಿವಿಧ ಷೇರುಗಳು ಕುಸಿದ ಪರಿಣಾಮ ಅವರ ಆಸ್ತಿಮೌಲ್ಯ ತುಸು ಕ್ಷೀಣಿಸಿತ್ತು. ಈಗ ಮತ್ತೆ ಅವರು ಪುಟಿದೆದಿದ್ದಾರೆ. ಭಾರತದ ನಂಬರ್ ಒನ್ ಮಾತ್ರವಲ್ಲ, ಏಷ್ಯಾದ ನಂಬರ್ ಒನ್ ಶ್ರೀಮಂತ ಎನಿಸಿದ್ದಾರೆ.

ಟಾಪ್-20ಯಲ್ಲಿ ಅಮೆರಿಕ ಕಾರುಬಾರು

ಬ್ಲೂಮ್​ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್​ನಲ್ಲಿ ವಿಶ್ವದ ಅತೀ ಶ್ರೀಮಂತರಾದ 500 ಮಂದಿಯ ಪಟ್ಟಿ ಇದೆ. ಇದರಲ್ಲಿ ಟಾಪ್-20ಯಲ್ಲಿ 15 ಮಂದಿ ಅಮೆರಿಕನ್ನರೇ ಇದ್ದಾರೆ. ಫ್ರಾನ್ಸ್, ಮೆಕ್ಸಿಕೋ ಮತ್ತು ಸ್ಪೇನ್ ದೇಶದ ಒಬ್ಬೊಬ್ಬರು ಈ ಪಟ್ಟಿಯಲ್ಲಿದ್ದಾರೆ. ಭಾರತದವರು ಇಬ್ಬರಿದ್ದಾರೆ.

ಇದನ್ನೂ ಓದಿ: ಅಮೆರಿಕದ ನಿಷೇಧದ ನಡುವೆಯೂ ರಷ್ಯನ್ ತೈಲ ಖರೀದಿ ಮುಂದುವರಿಸಲಿರುವ ಭಾರತ

ಇಲಾನ್ ಮಸ್ಕ್ 656 ಬಿಲಿಯನ್ ಡಾಲರ್​ನೊಂದಿಗೆ ವಿಶ್ವದ ನಂಬರ್ ಒನ್ ಶ್ರೀಮಂತನೆಂಬ ದಾಖಲೆ ಮುಂದುವರಿಸಿದ್ದಾರೆ. ಲ್ಯಾರಿ ಪೇಜ್​ನಿಂದ ಹಿಡಿದು ಲ್ಯಾರಿ ಎಲಿಸನ್​ವರೆಗೆ ಐವರು ಶ್ರೀಮಂತರು 200 ಬಿಲಿಯನ್ ಡಾಲರ್​ಗೂ ಹೆಚ್ಚಿನ ನಿವ್ವಳ ಆಸ್ತಿ ಹೊಂದಿದ್ದಾರೆ.

ಬ್ಲೂಮ್​ಬರ್ಗ್ ಇಂಡೆಕ್ಸ್; ವಿಶ್ವದ ಟಾಪ್-10 ಶ್ರೀಮಂತರು

  1. ಇಲಾನ್ ಮಸ್ಕ್: 656 ಬಿಲಿಯನ್ ಡಾಲರ್
  2. ಲ್ಯಾರಿ ಪೇಜ್: 286 ಬಿಲಿಯನ್ ಡಾಲರ್
  3. ಜೆಫ್ ಬೇಜೋಸ್: 269 ಬಿಲಿಯನ್ ಡಾಲರ್
  4. ಸೆರ್ಗೇ ಬ್ರಿನ್: 266 ಬಿಲಿಯನ್ ಡಾಲರ್
  5. ಮಾರ್ಕ್ ಜುಕರ್ಬರ್ಗ್: 239 ಬಿಲಿಯನ್ ಡಾಲರ್
  6. ಲ್ಯಾರಿ ಎಲಿಸನ್: 230 ಬಿಲಿಯನ್ ಡಾಲರ್
  7. ಮೈಕೇಲ್ ಡೆಲ್: 170 ಬಿಲಿಯನ್ ಡಾಲರ್
  8. ಜೆನ್ಸೆನ್ ಹುವಾಂಗ್: 164 ಬಿಲಿಯನ್ ಡಾಲರ್
  9. ಬರ್ನಾರ್ಡ್ ಆರ್ನಾಲ್ಟ್: 164 ಬಿಲಿಯನ್ ಡಾಲರ್
  10. ಜಿಮ್ ವಾಲ್ಟನ್: 150 ಬಿಲಿಯನ್ ಡಾಲರ್

ಇದನ್ನೂ ಓದಿ: ಜಾಗತಿಕ ರಾಜಕೀಯದಲ್ಲಿ ಬದಲಾದ ಲೆಕ್ಕಾಚಾರ, ಪಾಕಿಸ್ತಾನ ಭೇಟಿಗೆ ಇರಾನ್ ಒಪ್ಪಂದದ ಷರತ್ತು ವಿಧಿಸಿದ ಟ್ರಂಪ್

ಬ್ಲೂಮ್​ಬರ್ಗ್ ಇಂಡೆಕ್ಸ್​ನಲ್ಲಿ 23 ಮಂದಿ ಭಾರತೀಯರು

  1. ಗೌತಮ್ ಅದಾನಿ: 19ನೇ ಸ್ಥಾನ
  2. ಮುಕೇಶ್ ಅಂಬಾನಿ: 20ನೇ ಸ್ಥಾನ
  3. ಲಕ್ಷ್ಮೀ ಮಿಟ್ಟಲ್: 62ನೇ ಸ್ಥಾನ
  4. ಶಿವ ನಾದರ್: 70ನೇ ಸ್ಥಾನ
  5. ಶಾಪೂರ್ ಮಿಸ್ತ್ರಿ ಕುಟುಂಬ: 71ನೇ ಸ್ಥಾನ
  6. ಸಾವಿತ್ರಿ ಜಿಂದಾಲ್: 73ನೇ ಸ್ಥಾನ
  7. ಸುನಿಲ್ ಮಿಟ್ಟಲ್ ಕುಟುಂಬ: 101ನೇ ಸ್ಥಾನ
  8. ದಿಲೀಪ್ ಶಾಂಘವಿ: 107ನೇ ಸ್ಥಾನ
  9. ಅಜೀಮ್ ಪ್ರೇಮ್​ಜಿ: 119ನೇ ಸ್ಥಾನ
  10. ಕುಮಾರ್ ಬಿರ್ಲಾ: 120ನೇ ಸ್ಥಾನ
  11. ರಾಧಾಕೃಷ್ಣ ದಮಾನಿ: 147ನೇ ಸ್ಥಾನ
  12. ಉದಯ್ ಕೋಟಕ್: 219ನೇ ಸ್ಥಾನ
  13. ಸೈರಸ್ ಪೂನಾವಾಲ: 232ನೇ ಸ್ಥಾನ
  14. ಕೆಪಿ ಸಿಂಗ್: 281ನೇ ಸ್ಥಾನ
  15. ವಿಕ್ರಮ್ ಲಾಲ್: 282ನೇ ಸ್ಥಾನ
  16. ರವಿ ಜೈಪುರಿಯಾ: 293ನೇ ಸ್ಥಾನ
  17. ಮುರಳಿ ದಿವಿ: 370ನೇ ಸ್ಥಾನ
  18. ನುಸ್ಲಿ ವಾಡಿಯಾ: 386ನೇ ಸ್ಥಾನ
  19. ಸಮೀರ್ ಮೆಹತಾ: 433ನೇ ಸ್ಥಾನ
  20. ಪಂಕಜ್ ಪಟೇಲ್: 447ನೇ ಸ್ಥಾನ
  21. ರಾಹುಲ್ ಭಾಟಿಯಾ: 451ನೇ ಸ್ಥಾನ
  22. ಸುಧೀರ್ ಮೆಹತಾ: 456ನೇ ಸ್ಥಾನ
  23. ಇಂದರ್ ಜೈಸಿಂಘಾನಿ: 466ನೇ ಸ್ಥಾನ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 1:34 pm, Fri, 17 April 26

Source link

ಸಚಿವ ಸತೀಶ್​​ ಜಾರಕಿಹೊಳಿ ಜೊತೆಗಿನ ಮೀಟಿಂಗ್​​ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್​​ – Kannada News | DkShivakumars Reaction to Satish Jarakiholi Meeting: Focusing on Congress Growth and City Traffic Solutions

ಬೆಂಗಳೂರು, ಏಪ್ರಿಲ್​​ 17: ಸಚಿವ ಸತೀಶ್ ಜಾರಕಿಹೊಳಿ ತಮ್ಮನ್ನು ಭೇಟಿ ಮಾಡಿರುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ರೋಡ್ ಬಗ್ಗೆ ಮಾತಾಡಿದ್ದು, ನೆಲ ಮಂಗಲದಲ್ಲಿ ಸಮಸ್ಯೆ ಆಗ್ತಿದೆ ಎಂದಿದ್ದಾರೆ. ಎರಡನೇದಾಗಿ ರಾಜಕಾರಣ ದ ಬಗ್ಗೆ ಮಾತಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಪಕ್ಷದ ಅಭಿವೃದ್ಧಿಗೆ ಏನು ಬೇಕು ಎನ್ನುಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್​ ಮುಸ್ಲಿಂ ನಾಯಕರ ವಿರುದ್ಧ ಹೈಕಮಾಂಡ್ ಕ್ರಮ ಸಂಬಂಧವೂ ಪ್ರತಿಕ್ರಿಯಿಸಿದ ಅವರು, ನನ್ನ ವೈಯಕ್ತಿಕ ವಿಚಾರ ಯಾವುದೂ ಇಲ್ಲ. ಎಲ್ಲವೂ ಪಾರ್ಟಿ ನಿರ್ಧಾರ, ಪಾರ್ಟಿಗೆ ತನ್ನದೇ ಆದ ವರದಿ ಇದೆ. ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಎಲ್ಲರೂ ನನ್ನ ಮೇಲೆ ಹೇಳಬಹುದು, ಅದರ ಬಗ್ಗೆ ನನಗೆ ಚಿಂತೆ ಇಲ್ಲ. ಪಕ್ಷದ ಶಿಸ್ತಲ್ಲಿ ನಾವು ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ವರ್ಗಕ್ಕೆ ನ್ಯಾಯ ಕೊಡುವುದಕ್ಕೆ ಇರೋದೆ ಕಾಂಗ್ರೆಸ್ ಪಕ್ಷ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version