Headlines

ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌

ಭಾವನಾ ರಾಮಣ್ಣ, ನಿಕೇತ್ ರಾಜ್ ಮೌರ್ಯ ಬೆಂಗಳೂರು, (ಮೇ 27):‌ ಕರ್ನಾಟಕ ಕಾಂಗ್ರೆಸ್ (Karnataka Congress) ನಾಯಕತ್ವ ಬದಲಾವಣೆ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ (ಮೇ 28) ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಲೋಕಭವನದ ಸಮಯ‌‌ ಕೇಳಿದ್ದಾರೆ. ಈ ಎಲ್ಲಾ ಮಹತ್ವದ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) , ಕೆಪಿಸಿಸಿ ವಕ್ತಾರ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ…

Read More

ಜೀವನದಲ್ಲಿ ಸಂತೋಷವಾಗಿರಲು ಬಯಸಿದರೆ ಇಂತಹ ಜನಗಳಿಂದ ಆದಷ್ಟು ದೂರವಿರಿ

ನಮ್ಮ ಸುತ್ತಮುತ್ತಲಿನ ಜನರು ನಮ್ಮ ಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಾರೆ. ಹೌದು ಕೆಟ್ಟ ಸಹವಾಸವು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ, ಅದೇ ಒಳ್ಳೆಯ ಜನರ ಸಹವಾಸವು ಉತ್ತಮ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಅದೇ ರೀತಿ ಈ ಕೆಲವೊಂದಿಷ್ಟು ಜನರಿಂದ ಜೀವನದ ಸಂತೋಷವೆಲ್ಲಾ (happiness) ಹಾಳಾಗಿಬಿಡುತ್ತದೆ. ಈ ಜನರು ಜೀವನದಲ್ಲಿ ನಕಾರಾತ್ಮಕತೆಯನ್ನು ತರುತ್ತಾರೆ ಮತ್ತು ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾರೆ. ಅಲ್ಲದೆ ಇಂತಹ ಜನರು ಗೆದ್ದಲುಗಳಂತೆ, ನಮ್ಮ ಜೀವನದ ಶಾಂತಿ ಮತ್ತು ಸಂತೋಷವನ್ನು ಮೌನವಾಗಿ…

Read More

ಔಷಧಿ ತೆಗೆದುಕೊಳ್ಳುವಾಗ ಮಾಡುವ ಈ 3 ತಪ್ಪುಗಳು ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಚ್ಚರ!

ಅನಾರೋಗ್ಯ ಬಂದಾಗ ಔಷಧಿ (Medicine) ನಮ್ಮ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಔಷಧಿ ಸೇವಿಸುವ ವಿಧಾನದಲ್ಲಿ ಮಾಡುವ ಕೆಲವು ಸಾಮಾನ್ಯ ತಪ್ಪುಗಳು ಆರೋಗ್ಯಕ್ಕೆ ಹಾನಿ ಉಂಟುಮಾಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಸ್ವಯಂ ಔಷಧಿ ಸೇವನೆ, ಡೋಸ್ ಮಧ್ಯದಲ್ಲಿ ನಿಲ್ಲಿಸುವುದು ಮತ್ತು ವೈದ್ಯರ ಸಲಹೆ ಇಲ್ಲದೆ ಔಷಧಿ ಬದಲಾಯಿಸುವುದು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು. ಹೌದು, ಇದನ್ನು ನಾವು ಸಾಮಾನ್ಯ ಎಂದು ನಿರ್ಲಕ್ಷ್ಯ ಮಾಡುತ್ತೇವೆ ಆದರೆ ಘಾಜಿಯಾಬಾದ್ ಜಿಲ್ಲಾ ಆಸ್ಪತ್ರೆಯ ಫಾರ್ಮಾಸಿಸ್ಟ್…

Read More

Karnataka Weather Forecast: ರಾಜ್ಯದ 9 ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​, ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ

ಬೆಂಗಳೂರು, ಮೇ 27: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ (ಮೇ 28) ಗುಡುಗು ಸಹಿತ ಭಾರೀ ಮಳೆಯಾಗಬಹುದೆಂಬ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಕರ್ನಾಟಕ ಭಾಗಗಳಲ್ಲಿ ಮಳೆ ಅಬ್ಬರಿಸಲಿದ್ದು, ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೊಷಿಸಲಾಗಿದೆ. ಅರಬ್ಬಿ ಸಮುದ್ರದಿಂದ ತೇವಾಂಶಯುಕ್ತ ಗಾಳಿಯ ಪ್ರವಾಹ ಬಲವಾಗುತ್ತಿರುವುದು ಹಾಗೂ ನೈಋತ್ಯ ಮುಂಗಾರು ಮುನ್ನ ಹವಾಮಾನದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದೆ…

Read More

ರಶ್ಮಿಕಾ ಮಾತ್ರವಲ್ಲ ವಿಜಯ್ ದೇವರಕೊಂಡ ಸಹ ‘ತಾಳಿ’ ಕಟ್ಟಿಕೊಂಡಿದ್ದಾರಾ?

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇದೇ ಫೆಬ್ರವರಿ 26 ರಂದು ಬಲು ಅದ್ಧೂರಿಯಾಗಿ ಮದುವೆಯಾದರು. ಇವರ ಮದುವೆಯ ಚಿತ್ರಗಳು ಇನ್​​ಸ್ಟಾಗ್ರಾಂನಲ್ಲಿ ದಾಖಲೆಯನ್ನೇ ಬರೆದವು. ಅವರ ಉಡುಗೆ, ಧರಿಸಿದ್ದ ಆಭರಣಗಳು ಹೊಸ ಟ್ರೆಂಡ್ ಸೃಷ್ಟಿ ಮಾಡಿದವು. ಆಧುನಿಕತೆಯ ಜೊತೆಗೆ ಸಂಪ್ರದಾಯವನ್ನು ಬೆರೆಸಿದ್ದ ಅವರ ಮದುವೆಯ ಚರ್ಚೆಗಳು ವಾರಗಳ ಗಟ್ಟಲೆ ನಡೆದವು. ಇದೀಗ ವಿಜಯ್ ತಮ್ಮ ಪತ್ನಿಯನ್ನು ಅದೆಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಸಾಕ್ಷಿಯನ್ನು ನೆಟ್ಟಿಗರು ಹುಡುಕಿದ್ದಾರೆ. ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ವಿಮಾನ ನಿಲ್ದಾಣವೊಂದರಿಂದ ಹೊರಗೆ…

Read More

IPL: ಅತಿ ಹೆಚ್ಚು ಬಾರಿ ಐಪಿಎಲ್ ಫೈನಲ್ಸ್ ಆಡಿದ ತಂಡ ಯಾವುದು? ಆರ್​ಸಿಬಿಗೆ ಎಷ್ಟನೇ ಸ್ಥಾನ?

ಐಪಿಎಲ್ 2026 ರಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳ ಭಾರಿ ಅಂತರದಿಂದ ಸೋಲಿಸಿತು. ಈ ಅದ್ಭುತ ಗೆಲುವಿನೊಂದಿಗೆ ಆರ್​ಸಿಬಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಹಾಗಿದ್ದರೆ 19 ವರ್ಷಗಳ ಐಪಿಎಲ್‌ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಫೈನಲ್​ಗೇರಿದ ತಂಡಗಳು ಯಾವುವು ಎಂಬುದನ್ನು ನೋಡುವುದಾದರೆ (PC- PTI).. ಐಪಿಎಲ್ 2026 ಕ್ವಾಲಿಫೈಯರ್ 1…

Read More

ಬಾತ್‌ರೂಮ್‌ ಕ್ಲೀನ್‌ ಮಾಡಲು ಉಪ್ಪಿನ ಜೊತೆಗೆ ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಸಾಕು

ತೇವಾಂಶದ ಕಾರಣದಿಂದಾಗಿ ಬಾತ್‌ರೂಮ್‌ನಲ್ಲಿ (bathroom) ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳು ಸುಲಭವಾಗಿ ವೃದ್ಧಿಯಾಗುತ್ತವೆ. ಈ ಬ್ಯಾಕ್ಟೀರಿಯಾಗಳು ಸೋಂಕು ಮತ್ತು ವಾಸನೆಯ ಅಪಾಯವನ್ನು ಹೆಚ್ಚಿಸುತ್ತವೆ. ಆದ್ದರಿಂದ ಸ್ನಾನಗೃಹವನ್ನು ಎಷ್ಟು ಸ್ವಚ್ಛಗೊಳಿಸಿದರೂ ಕಮ್ಮಿಯೇ. ಸಾಮಾನ್ಯವಾಗಿ ಹೆಚ್ಚಿನವರು ಬಾತ್‌ರೂಮ್‌ನ ಕಲೆ, ಕೊಳೆ, ವಾಸನೆಯನ್ನು ತೊಡೆದುಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುತ್ತಾರೆ. ಈ ದುಬಾರಿ ಉತ್ಪನ್ನಗಳ ಬದಲು ಉಪ್ಪಿನ ಜೊತೆಗೆ ಅಡುಗೆಮನೆಯಲ್ಲಿರುವ ಈ ಕೆಲವು ವಸ್ತುಗಳ ಸಹಾಯದಿಂದ ಸ್ನಾನಗೃಹವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಬಹುದು. ಉಪ್ಪಿನ ಸಹಾಯದಿಂದ ಸ್ನಾನಗೃಹವನ್ನು ಸುಲಭವಾಗಿ ಸ್ವಚ್ಛಗೊಳಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಉಪ್ಪಿನ…

Read More

ಸನ್‌ರೈಸರ್ಸ್- ರಾಜಸ್ಥಾನ್ ನಡುವೆ ಎಲಿಮಿನೇಟರ್; ಯಾರಿಗೆ ಸಿಗಲಿದೆ ಕ್ವಾಲಿಫೈಯರ್ 2 ಟಿಕೆಟ್?

ಮೇ 26 ರ ಮಂಗಳವಾರ ನಡೆದ ಐಪಿಎಲ್ 2026 (IPL 2026) ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ. ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ತಂಡವು ಸೋಲಿನ ಹೊರತಾಗಿಯೂ ಫೈನಲ್ ತಲುಪಲು ಇನ್ನೊಂದು ಅವಕಾಶವನ್ನು ಪಡೆದಿದೆ. ಅದಕ್ಕಾಗಿ ಗುಜರಾತ್ ಕ್ವಾಲಿಫೈಯರ್ 2 ಪಂದ್ಯವನ್ನು ಆಡಬೇಕಾಗುತ್ತದೆ. ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್​ಗೆ ಯಾರು ಎದುರಾಗುತ್ತಾರೆ ಎಂಬುದು ಇಂದು ಅಂದರೆ ಮೇ 27 ರಂದು…

Read More

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ರಸ್ತೆಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿದ ಪೊಲೀಸರು!

ಕೊಲ್ಕತ್ತಾ, ಮೇ 27: ಪಶ್ಚಿಮ ಬಂಗಾಳದಲ್ಲಿ (West Bengal) ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಅತ್ಯಂತ ಆಘಾತಕಾರಿ ಮತ್ತು ವಿವಾದಾತ್ಮಕ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಅಲ್ಲಿನ ಪೊಲೀಸರು ಬಂಧಿತ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರ ತಲೆ ಬೋಳಿಸಿ, ಕೈಗಳಿಗೆ ಕೋಳ ತೊಡಿಸಿ, ಕೇವಲ ಒಳ ಉಡುಪುಗಳಲ್ಲಿ ಸಾರ್ವಜನಿಕವಾಗಿ ಮೆರವಣಿಗೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ನಿರ್ದಿಷ್ಟ ಪ್ರದೇಶವೊಂದರಲ್ಲಿ ಟಿಎಂಸಿ ಪಕ್ಷಕ್ಕೆ ಸೇರಿದ ಕೆಲವು ಸ್ಥಳೀಯ ಗೂಂಡಾಗಳು ಮತ್ತು ಕಾರ್ಯಕರ್ತರು ಸಾರ್ವಜನಿಕ ಶಾಂತಿ ಕದಡಿದ, ಹಿಂಸಾಚಾರ ನಡೆಸಿದ ಹಾಗೂ ಪೊಲೀಸರ ಮೇಲೆಯೇ…

Read More

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

ರಣದೀಪ್​​ ಸುರ್ಜೇವಾಲImage Credit source: Tv9 Kannada ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್​​ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್…

Read More