Headlines

IPL 2026: ಸ್ಟಾರ್ ವೇಗಿಗಳಿಗೆ ಇಂಜುರಿ; ಥಂಡಾ ಹೊಡೆದ ತಂಡಗಳು

ಐಪಿಎಲ್ (IPL 2026) ಆರಂಭಕ್ಕೆ ಇನ್ನು ಹೆಚ್ಚು ದಿನಗಳು ಉಳಿದಿಲ್ಲ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ತಯಾರಿಯಲ್ಲಿ ತೊಡಗಿದ್ದು, ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ತಂತ್ರ ರೂಪಿಸುತ್ತಿವೆ. ಆದಾಗ್ಯೂ ಕೆಲವು ತಂಡಗಳಿಗೆ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಸ್ಟಾರ್ ವೇಗಿಗಳೇ ಗಾಯದಿಂದ ಬಳಲುತ್ತಿರುವುದು ತಂಡಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬೌಲರ್​ಗಳ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ತಂಡಗಳ ಪಟ್ಟಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH), ಕೋಲ್ಕತ್ತಾ ನೈಟ್ ರೈಡರ್ಸ್ (KKR)…

Read More

Daily Devotional: ನಮ್ಮ ನೆರಳನ್ನ ನಾವೇ ತುಳಿದರೆ ತಪ್ಪಿದ್ದಲ್ಲ ಕಂಟಕ!

ಬೆಂಗಳೂರು, ಮಾರ್ಚ್​​ 08​​​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಮ್ಮ ನೆರಳನ್ನ ನಾವೇ ತುಳಿಯಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ.ನೆರಳು ನಮ್ಮನ್ನು ಸದಾ ಹಿಂಬಾಲಿಸುತ್ತದೆ ಮತ್ತು ನಮ್ಮ ಒಳ್ಳೆಯ ಹಾಗೂ ಕೆಟ್ಟ ಕಾರ್ಯಗಳನ್ನು ದಾಖಲಿಸುತ್ತದೆ. ನಂಬಿಕೆಯ ಪ್ರಕಾರ, ನಮ್ಮ ನೆರಳು ಮೃತ್ಯುವಿನ ತನಕ ನಮ್ಮ ಜೊತೆಗಿದ್ದು, ಯಮನಿಗೆ ನಮ್ಮ ಲೆಕ್ಕಾಚಾರಗಳನ್ನು ತಲುಪಿಸುತ್ತದೆ. ಅಕಸ್ಮಿಕ ಕಂಟಕಗಳು ಬರುವಾಗ ನೆರಳು ಸೂಕ್ಷ್ಮ ಸೂಚನೆಗಳನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಧನಾತ್ಮಕ ಜೀವನ ನಡೆಸುವ ಮೂಲಕ, ಪಾಪ ಭೀತಿ ಮತ್ತು ಧರ್ಮ…

Read More

Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್ – Kannada News | Bigg Boss Kannada Season 12 Gilli Nata Interview And Special Live Video

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಿಗ್​​ಬಾಸ್: ಗಿಲ್ಲಿಯ ಗುಟ್ಟು ರಟ್ಟು ಮಾಡಿದ ಸುದೀಪ್ – Kannada News | Bigg Boss Kannada: Gilli inspired by Hanumanthu and Drone Prathap

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ 98 ದಿನಗಳು ಪೂರ್ಣವಾಗಿವೆ. ಪ್ರಸ್ತುತ ಬಿಗ್​​ಬಾಸ್ ಮನೆಯಲ್ಲಿ ಉಳಿದಿರುವ ಜನರೂ ಕಡಿಮೆ. ಉಳಿದಿರುವವರಲ್ಲಿ ಗಿಲ್ಲಿ ಈ ಬಾರಿಯ ವಿಜೇತ ಎನ್ನಲಾಗುತ್ತಿದೆ. ಪಕ್ಕಾ ಫಿನಾಲೆಗೆ ಬರುವ ಸ್ಪರ್ಧಿ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಗಿಲ್ಲಿ ಅದು ಹೇಗೆ ಇಷ್ಟು ಚೆನ್ನಾಗಿ ಆಡುತ್ತಿದ್ದಾರೆ. ಅದಕ್ಕಾಗಿ ಏನಾದರೂ ವಿಶೇಷ ತಯಾರಿ ಮಾಡಿಕೊಂಡು ಬಂದಿದ್ದಾರಾ? ಈ ಗುಟ್ಟನ್ನು ರಟ್ಟು ಮಾಡಿದ್ದಾರೆ ಸುದೀಪ್. ಕಳೆದ…

Read More

ತೀವ್ರಗೊಂಡ ಕುಡಿಯುವ ನೀರಿನ ಅಭಾವ: ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಸಿಎಂ ಸೂಚನೆ, ಡಿಸಿಗಳಿಗೂ ಖಡಕ್ ಎಚ್ಚರಿಕೆ – Kannada News | Karnataka Water Crisis: CM Siddaramaiah Warns DCs, Allocates Rs 419 Crore for Drinking Water Supply

ಬೆಂಗಳೂರು, ಏಪ್ರಿಲ್ 25: ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ಜೊತೆಗೆ ಕುಡಿಯುವ ನೀರಿನ (Drinking Water) ಸಮಸ್ಯೆ ಉಲ್ಬಣಿಸುತ್ತಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಸಿಎಂ ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ಸರ್ಕಾರ 419.50 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಜಿಲ್ಲಾಧಿಕಾರಿಗಳ ವರದಿಯ ಆಧಾರದ ಮೇಲೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು…

Read More

ಸಿನೆಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​! – Kannada News | Vijayapura Police Crack Raju Khari Murder: Property Dispute Behind Brutal Cinema Style Killing

ವಿಜಯಪುರ, ಏಪ್ರಿಲ್​​ 24: ಅಲಿಯಾಬಾದ್ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಾಜು ಖರಿ (48) ಏಪ್ರಿಲ್ 14ರಂದು ಭೀಕರವಾಗಿ ಕೊಲೆಯಾಗಿದ್ದರು. ಅಲಿಯಾಬಾದ್ ಬಳಿಯ ಕೈಗಾರಿಕಾ ಪ್ರದೇಶದ ಬಳಿ ಸಿನಿಮಾ ಸ್ಟೈಲ್​​ನಲ್ಲಿ ದಾಳಿ ನಡೆಸಿದ್ದ ಆರೋಪಿಗಳು ರಾಜು ಅವರನ್ನು ಬರ್ಬರವಾಗಿ ಕೊಂದಿದ್ದರು. ಪ್ರಕರಣ ಸಂಬಂಧ ಆರೋಪಿಗಳ ಕೈಗೆ ಕೋಳ ತೊಡಿಸಿರುವ ಪೊಲೀಸರು, ಆಸ್ತಿ ವಿವಾದವೇ ಡೆಡ್ಲಿ ಮರ್ಡರ್​​ಗೆ ಕಾರಣ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತಿಯ ಮಾಜಿ ಸದಸ್ಯನ ಕೊಲೆಗೆ ಅಸಲಿ ಕಾರಣ ಏನೆಂಬುದು ಬಹಿರಂಗಗೊಂಡಿದೆ. ತಮ್ಮ…

Read More

ಅಶ್ಲೀಲ ಹಾಡು: ‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ

ಧ್ರುವ ಸರ್ಜಾ, ಸಂಜಯ್ ದತ್, ನೋರಾ ಫತೇಹಿ ಮುಂತಾದವರು ನಟಿಸಿರುವ ‘ಕೆಡಿ’ (KD Movie) ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಗುರಿ ಆಗಿದೆ. ಅಶ್ಲೀಲ ಸಾಹಿತ್ಯ ಹೊಂದಿರುವ ಕಾರಣಕ್ಕೆ ಈ ಹಾಡನ್ನು ವಿರೋಧಿಸಲಾಗುತ್ತಿದೆ. ‘ಕೆಡಿ’ ಚಿತ್ರತಂಡಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅನೇಕ ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (Nagalakshmi Choudhary) ಅವರು ಮಾತನಾಡಿದ್ದಾರೆ. ‘ಹೆಣ್ಮಕ್ಕಳು ಅನುಭವಿಸುತ್ತಿರುವ ಪರಿಸ್ಥಿತಿ ಬಹಳ ಕಷ್ಟ ಇದೆ. ಇಂಥ…

Read More

ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್​​ಬೀರ್ ಕಪೂರ್: ಸಿನಿಮಾ ಯಾವುದು? – Kannada News | Ranbir Kapoor to act in Dhoom 4 as villain here is the detail in Kannada

ರಣ್​​ಬೀರ್ ಕಪೂರ್ (Ranbir Kapoor) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚಿತ್ರೀಕರಣವೂ ಶೀಘ್ರವೇ ಪ್ರಾರಂಭ ಆಗಲಿದೆ. ಬಾಲಿವುಡ್​ನ ಸೂಪರ್ ಸ್ಟಾರ್ ಆಗಿರುವ ರಣ್​​ಬೀರ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಆದರೆ ರಣ್​​ಬೀರ್ ನಟಿಸುತ್ತಿರುವುದು ಸಾಮಾನ್ಯ ವಿಲನ್ ಆಗಿ ಅಲ್ಲ. ರಣ್​​ಬೀರ್ ಕಪೂರ್ ವಿಲನ್ ಆಗುತ್ತಿರುವುದು ‘ಧೂಮ್’ ಸಿನಿಮಾ ಸರಣಿಯ ಹೊಸ ಸಿನಿಮಾನಲ್ಲಿ….

Read More

ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ – Kannada News | PM Modi receives warm welcome by Malaysian PM Anwar Ibrahim after arriving in Kuala Lumpur

ಕೌಲಾಲಂಪುರ, ಫೆಬ್ರವರಿ 7: 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ (PM Modi) ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು. ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಈ ಭೇಟಿಯು ಮಹತ್ವದ ಹೆಜ್ಜೆಯಾಗಿದೆ. ಈ ಭೇಟಿಯ ವೇಳೆ ವ್ಯಾಪಾರ ಮತ್ತು ಹೂಡಿಕೆಯನ್ನು ವಿಸ್ತರಿಸುವುದು, ತಂತ್ರಜ್ಞಾನ ಸಹಕಾರವನ್ನು ಆಳಗೊಳಿಸುವುದು, ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಸಮನ್ವಯದ ಕುರಿತು ಉನ್ನತ ಮಟ್ಟದ ಚರ್ಚೆಗಳನ್ನು…

Read More

ಬರಿದಾದ ಹಿರೇಹಳ್ಳ ಜಲಾಶಯ: ಖಾಲಿ ಡ್ಯಾಂ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ! – Kannada News | Dry Hirehalla Reservoir Turns into Cricket Ground for Children in Koppal

ಕೊಪ್ಪಳ, ಏಪ್ರಿಲ್​​ 26: ಮುದ್ಲಾಪೂರ ಬಳಿಯ ಹಿರೇಹಳ್ಳ ಜಲಾಶಯ ಸಂಪೂರ್ಣವಾಗಿ ಬತ್ತಿದ್ದು, ನೀರಿಲ್ಲದೆ ಭಣಗುಡುತ್ತಿದೆ. ಬರಿದಾಗಿರುವ 1.67 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ‌ವನ್ನೇ ಮಕ್ಕಳು, ಯುವಕರು ಆಟದ ಮೈದಾನ ಮಾಡಿಕೊಂಡು ಕ್ರಿಕೆಟ್​​ ಆಡುತ್ತಿದ್ದಾರೆ. ಹತ್ತು ವರ್ಷಗಳ ನಂತರ ಜಲಾಶಯ ಬರಿದಾಗಿದ್ದು, ಕೇವಲ ಶೇ.20ರಷ್ಟು ನೀರು ಮಾತ್ರ ಉಳಿದಿದೆ. ಇನ್ನೊಂದು ತಿಂಗಳು‌ ಕಳೆದರೆ ಹನಿ ನೀರು ಕೂಡ ಜಲಾಶಯದಲ್ಲಿ ಸಿಗದ ಸ್ಥಿತಿ ತಲುಪಲಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More