ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ ಗೆದ್ದಿರುವ ಖುಷಿ ಒಂದೆಡೆಯಾದರೆ, ಕಳೆದೊಂದು ವರ್ಷದಿಂದ ಕಳಪೆ ಫಾರ್ಮ್ಗೆ ಸಿಲುಕಿ ಒಂದೇ ಒಂದು ಅರ್ಧಶತಕ ಬಾರಿಸಲಾಗದೆ ಬಸವಳಿದಿದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೊನೆಗೂ ಅಬ್ಬರಿಸಿದ್ದಾರೆ. ಬರೋಬ್ಬರಿ 14 ತಿಂಗಳ ನಂತರ ಅಂದರೆ 468 ದಿನಗಳ ನಂತರ ಸೂರ್ಯಕುಮಾರ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ.
ಸೂರ್ಯ ಈ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 6 ಬೌಂಡರಿಗಳೊಂದಿಗೆ ಅರ್ಧಶತಕ ಪೂರೈಸಿದರು. ಇದು ಸೂರ್ಯ ಅವರ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 22 ನೇ ಅರ್ಧಶತಕವಾಗಿತ್ತು. ಎಲ್ಲಕ್ಕಿಂತ ಮುಖ್ಯವಾಗಿ, ಸೂರ್ಯ 14 ತಿಂಗಳು ಮತ್ತು 23 ಇನ್ನಿಂಗ್ಸ್ಗಳ ನಂತರ ತಮ್ಮ ಮೊದಲ ಅರ್ಧಶತಕ ಬಾರಿಸಿದರು.
ಕಳೆದ ಒಂದು ವರ್ಷದಿಂದ ಸೂರ್ಯ ರನ್ ಬರ ಎದುರಿಸುತ್ತಿದ್ದರು. ಇದರಿಂದಾಗಿ, ಐಸಿಸಿ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಸೂರ್ಯ ಅವರ ಪ್ರದರ್ಶನದ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಆದಾಗ್ಯೂ, ನಿರ್ಣಾಯಕ ಕ್ಷಣದಲ್ಲಿ ಸೂರ್ಯ ಮತ್ತೆ ಫಾರ್ಮ್ಗೆ ಮರಳಿರುವುದು ಆಡಳಿತ ಮಂಡಳಿಗೆ ಸಂತಸ ತಂದಿದೆ. ಇನ್ನು ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ಸೂರ್ಯ 37 ಎಸೆತಗಳಲ್ಲಿ 82 ರನ್ ಗಳಿಸಿದರು. ಅವರ ಈ ಇನ್ನಿಂಗ್ಸ್ನಲ್ಲಿ 9 ಬೌಂಡರಿಗಳು ಮತ್ತು 4 ಸಿಕ್ಸರ್ಗಳು ಸೇರಿದ್ದವು.
ನವದೆಹಲಿ, (ಜನವರಿ 23): ಸಂಕಷ್ಟಿತ ಸಮಯದಲ್ಲಿ ಸದಾ ಕರ್ನಾಟಕದ (Karnataka) ರೈತರ ಬೆನ್ನಿಗೆ ನಿಲ್ಲುತ್ತಿರುವ ಕೇಂದ್ರ ಸರ್ಕಾರ, ಇದೀಗ ರಾಜ್ಯದ ಕಡಲೆ (Bengal gram) ಬೆಳೆಗಾರರ ಬೆಂಬಲಕ್ಕೂ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಮನವಿ ಮೇರೆಗೆ ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು ಎಂದಿದೆ.
ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ 5875 ರೂ. ದರದಲ್ಲಿ ಒಟ್ಟು 101340 MT ಹಿಂಗಾರು ಹಂಗಾಮಿನ ಕಡಲೆ ಕಾಳು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಸಚಿವ ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಪ್ರಮುಖ ದ್ವಿದಳ ಧಾನ್ಯಗಳಲ್ಲಿ ಕಡ್ಲೆಯೂ ಒಂದಾಗಿದ್ದು, ಸುಮಾರು 9.24 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಉತ್ಪಾದನೆ ಹೊಂದಿದೆ. ಆದರೆ, ಪ್ರಸ್ತುತ ಮಾರುಕಟ್ಟೆ ಬೆಲೆಗಿಂತ ತೀರಾ ಕಡಿಮೆ ಬೆಲೆಯಿಂದಾಗಿ ಕಡಲೆ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗಾಗಿ ಬೆಂಬಲ ಬೆಲೆಯಲ್ಲಿ ಖರೀದಿಗೆ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದರು.
ರಾಜ್ಯದ ರೈತರು ಹಿಂಗಾರಿನಲ್ಲಿ ಬೆಳೆದ ಕಡಲೆ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ (MSP) ಅಡಿಯಲ್ಲಿ ಖರೀದಿಗೆ ಕೇಂದ್ರ ಕೃಷಿ ಸಚಿವಾಲಯ ಅನುಮತಿ ನೀಡಿದೆ.
ನಾನು ಕೇಂದ್ರ ಕೃಷಿ ಸಚಿವರಲ್ಲಿ ಕರ್ನಾಟಕದಲ್ಲಿ 2025-26ರ ಹಿಂಗಾರು ಬೆಳೆಯಲ್ಲಿ ಬೆಳೆದ ಕಡಲೆ ಕಾಳು ಬೆಳೆಯನ್ನು ರಾಜ್ಯದ ಪ್ರಸ್ತಾವನೆಯಂತೆ ಬೆಂಬಲ ಬೆಲೆ ಯೋಜನೆಯಡಿ (Price Support Scheme… pic.twitter.com/Z5xDu8Jjuq
ಕಡಲೆಗೆ ಪ್ರಸ್ತುತ ಮಾರುಕಟ್ಟೆ ಬೆಲೆ RMS 2026-27ಕ್ಕೆ ಘೋಷಿಸಲಾದ ಪ್ರತಿ ಕ್ವಿಂಟಲ್ಗೆ ₹ 5,875ರ MSP ಗಿಂತ ತುಂಬಾ ಕಡಿಮೆಯಾಗಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಕಡಲೆ ಬೆಲೆ ಮತ್ತಷ್ಟು ಕುಸಿಯುವ ಆತಂಕವಿದೆ. ಆದ್ದರಿಂದ, ಕರ್ನಾಟಕದಲ್ಲಿ ಕಡಲೆ(ಚಾನಾ)ಗೆ ಬೆಂಬಲ ಬೆಲೆ ಯೋಜನೆ (PSS) ಅನ್ನು ಆದ್ಯತೆ ಮೇರೆಗೆ ಜಾರಿಗೆ ತರುವ ಅವಶ್ಯಕತೆಯಿದೆ ಎಂದು ಪ್ರಲ್ಹಾದ ಜೋಶಿ ಕೃಷಿ ಸಚಿವರಿಗೆ ಮನದಟ್ಟು ಮಾಡಿಕೊಟ್ಟಿದ್ದರು.
ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿದ ಕೃಷಿ ಸಚಿವರು ರಾಜ್ಯದ ರೈತರ ಹಿತದೃಷ್ಟಿಯಿಂದ 1 ಲಕ್ಷ ಮೆಟ್ರಿಕ್ ಟನ್ ಗೂ ಹೆಚ್ಚು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಅನುಮೋದನೆ ನೀಡಿದ್ದಾರೆ.
ಕೂಡಲೇ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ಈ ಕೂಡಲೇ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ರೈತರಿಂದ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಜೋಶಿ ಒತ್ತಾಯಿಸಿದ್ದಾರೆ.
ಪ್ರಧಾನಿ-ಕೃಷಿ ಸಚಿವರಿಗೆ ಧನ್ಯವಾದ
ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿಗೆ ಅನುಮತಿ ನೀಡುವ ಮೂಲಕ ರಾಜ್ಯದ ರೈತರ ನೆರವಿಗೆ ಬಂದಿರುವ ಪ್ರಧಾನಿ ನರೇಂದ್ರ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ಅವರಿಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವನ್ನು ಖಚಿತಪಡಿಸಿದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಗಳಿಸಿತು. ಟೀಂ ಇಂಡಿಯಾ 15.2 ಓವರ್ಗಳಲ್ಲಿ ಗುರಿ ಮುಟ್ಟಿತು. ತಂಡದ ಪರ ಇಶಾನ್ ಕಿಶನ್ ಅಬ್ಬರದ ಇನ್ನಿಂಗ್ಸ್ ಆಡಿ ಕೇವಲ 32 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್ಗಳ ಸಹಿತ 237.50 ರ ಸ್ಟ್ರೈಕ್ ರೇಟ್ನಲ್ಲಿ 76 ರನ್ ಗಳಿಸಿದರು.
ಈ ಇನ್ನಿಂಗ್ಸ್ನಲ್ಲಿ ಇಶಾನ್ ಕಿಶನ್ ಅವರ ಅತ್ಯಂತ ಗಮನಾರ್ಹ ಸಾಧನೆಯೆಂದರೆ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದು. ಇದು ನ್ಯೂಜಿಲೆಂಡ್ ವಿರುದ್ಧ ಭಾರತೀಯ ಬ್ಯಾಟ್ಸ್ಮನ್ ಗಳಿಸಿದ ಅತ್ಯಂತ ವೇಗದ ಟಿ20 ಅಂತರರಾಷ್ಟ್ರೀಯ ಅರ್ಧಶತಕವಾಗಿದೆ. ಇದಕ್ಕೂ ಮೊದಲು, ಅಭಿಷೇಕ್ ಶರ್ಮಾ ಸರಣಿಯ ಮೊದಲ ಪಂದ್ಯದಲ್ಲಿ 22 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಈ ದಾಖಲೆಯನ್ನು ನಿರ್ಮಿಸಿದ್ದರು, ಆದರೆ ಇಶಾನ್ ಕೇವಲ 48 ಗಂಟೆಗಳಲ್ಲಿ ಅದನ್ನು ಮುರಿದರು. ಎರಡು ವರ್ಷಗಳ ನಂತರ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದರಿಂದ ಈ ಪ್ರದರ್ಶನ ಇಶಾನ್ಗೆ ಇನ್ನಷ್ಟು ವಿಶೇಷವಾಗಿದೆ.
ತಂಡವು ಆರಂಭಿಕ ಆಟಗಾರರಿಬ್ಬರನ್ನೂ ಬೇಗನೆ ಕಳೆದುಕೊಂಡಿದ್ದರಿಂದ ಇಶಾನ್ ಕಿಶನ್ ಅವರ ಇನ್ನಿಂಗ್ಸ್ ಕೂಡ ವಿಶೇಷವಾಗಿತ್ತು. ಸಂಜು ಸ್ಯಾಮ್ಸನ್ 6 ರನ್ ಗಳಿಸಿ ಔಟಾದರೆ, ಅಭಿಷೇಕ್ ಶರ್ಮಾ ರನ್ ಗಳಿಸದೆ ಔಟಾದರು. ಬಂದ ಕೂಡಲೇ ಕಿಶನ್ ವೇಗವಾಗಿ ರನ್ ಗಳಿಸಿದರು. ಇಶಾನ್ ಕಿಶನ್ ಔಟಾದಾಗ, ತಂಡದ ಸ್ಕೋರ್ 9.1 ಓವರ್ಗಳಲ್ಲಿ 128 ರನ್ ಆಗಿತ್ತು.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನು ಸಹ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 16ನೇ ಓವರ್ನಲ್ಲೇ ಅಂದರೆ ಕೇವಲ 92 ಎಸೆತಗಳಲ್ಲಿ 209 ರನ್ ಕಲೆಹಾಕಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಇಷ್ಟು ಬೃಹತ್ ಮೊತ್ತವನ್ನು ಬೆನ್ನಟ್ಟಿದ ದಾಖಲೆಯನ್ನು ನಿರ್ಮಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಉತ್ತಮ ಆರಂಭವನ್ನು ಪಡೆಯಿತು. ಡೆವೊನ್ ಕಾನ್ವೇ ಮತ್ತು ಟಿಮ್ ಸೀಫರ್ಟ್ ಪವರ್ಪ್ಲೇನಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿದರು. ನಂತರ ರಚಿನ್ ರವೀಂದ್ರ 26 ಎಸೆತಗಳಲ್ಲಿ 44 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ನಾಯಕ ಮಿಚೆಲ್ ಸ್ಯಾಂಟ್ನರ್ ಕೂಡ 27 ಎಸೆತಗಳಲ್ಲಿ ಅಜೇಯ 47 ರನ್ ಗಳಿಸಿದರು. ಗ್ಲೆನ್ ಫಿಲಿಪ್ಸ್ 19 ರನ್ ಮತ್ತು ಡ್ಯಾರಿಲ್ ಮಿಚೆಲ್ 18 ರನ್ಗಳ ಕಾಣಿಕೆ ನೀಡಿದರು. ಪರಿಣಾಮವಾಗಿ, ನ್ಯೂಜಿಲೆಂಡ್ 20 ಓವರ್ಗಳಲ್ಲಿ 6 ವಿಕೆಟ್ಗಳ ನಷ್ಟಕ್ಕೆ 208 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.
ಮತ್ತೊಂದೆಡೆ, ಭಾರತದ ಪರ ಬೌಲಿಂಗ್ನಲ್ಲಿ ಮಿಂಚಿದ ಕುಲ್ದೀಪ್ ಯಾದವ್ ಎರಡು ವಿಕೆಟ್ಗಳನ್ನು ಪಡೆದರೆ, ಹರ್ಷಿತ್ ರಾಣಾ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು. ಆದಾಗ್ಯೂ, ಅರ್ಷದೀಪ್ ಸಿಂಗ್ ತಮ್ಮ ನಾಲ್ಕು ಓವರ್ಗಳಲ್ಲಿ 53 ರನ್ಗಳನ್ನು ಬಿಟ್ಟುಕೊಟ್ಟು ವಿಕೆಟ್ ಪಡೆಯದೆ ದುಬಾರಿ ಎನಿಸಿಕೊಂಡರು.
ಬಿಡುಗಡೆಗೂ ಮುನ್ನವೇ ‘ಬಾರ್ಡರ್ 2’ ಸಿನಿಮಾ ಸಖತ್ ಸುದ್ದಿ ಆಗಿತ್ತು. ಟ್ರೇಲರ್ ಮತ್ತು ಹಾಡಿನಲ್ಲಿ ವರುಣ್ ಧವನ್ (Varun Dhawan) ಅವರ ನಟನೆಯನ್ನು ನೋಡಿ ಕೆಲವರು ಟ್ರೋಲ್ ಮಾಡಿದ್ದರು. ಜನವರಿ 23ರಂದು ಈ ಸಿನಿಮಾ ಬಿಡುಗಡೆ ಆಗಿದೆ. ದೇಶಭಕ್ತಿ ಕಥಾಹಂದರ ಇರುವ ಸಿನಿಮಾ ಎಂಬ ಕಾರಣಕ್ಕೆ ಪ್ರೇಕ್ಷಕರಲ್ಲಿ ಈ ಸಿನಿಮಾ ಕೌತುಕ ಸೃಷ್ಟಿ ಮಾಡಿತ್ತು. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಬಹುತೇಕ ಪ್ರೇಕ್ಷಕರಿಗೆ ‘ಬಾರ್ಡರ್ 2’ (Border 2) ಸಿನಿಮಾ ಇಷ್ಟ ಆಗಿದೆ. ಕೆಲವರಿಗೆ ಇಷ್ಟ ಆಗಿಲ್ಲ. ಹಾಗಾಗಿ ಈ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದಿದೆ.
1997ರಲ್ಲಿ ‘ಬಾರ್ಡರ್’ ಸಿನಿಮಾ ಬಿಡುಗಡೆ ಆಗಿತ್ತು. ಆ ಚಿತ್ರದ ಸೀಕ್ವೆಲ್ ಆಗಿ ಈಗ ‘ಬಾರ್ಡರ್ 2’ ರಿಲೀಸ್ ಆಗಿದೆ. ಅನುರಾಗ್ ಸಿಂಗ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ, ದಿಲ್ಜಿತ್ ದೊಸಾಂಜ್, ಮೋನಾ ಸಿಂಗ್, ಸೋನಂ ಭಾಜ್ವ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
#border2 – Just walked out after watching Border 2 and I’m still buzzing!
Nearly 3 hours later, the excitement is still on.
This is PURE CINEMA Border 2 takes the legacy of Border to the next level 🇮🇳
Goosebumps till the last shot, powerful storytelling, and massive patriotic… pic.twitter.com/MQWXUZO1c8
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. 1971ರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ಆಧರಿಸಿ ‘ಬಾರ್ಡರ್ 2’ ಸಿನಿಮಾ ಸಿದ್ಧವಾಗಿದೆ. ‘ಬಾರ್ಡರ್ ಚಿತ್ರದ ಪರಂಪರೆಯನ್ನು ಬಾರ್ಡರ್ 2 ಸಿನಿಮಾ ಮುಂದುವರಿಸಿದೆ. ಕೊನೇ ದೃಶ್ಯದ ತನಕ ರೋಮಾಂಚನ ಆಗುತ್ತದೆ. ಸಿನಿಮಾ ತುಂಬಾ ಚೆನ್ನಾಗಿದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್ ಮಾಡಿದ್ದಾರೆ.
#Border2Review
Strong performances, impactful dialogues, and a gripping narrative make Border 2 a must-watch.
It reminds us why stories of bravery and unity always hit home.
‘ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ. ಪರಿಣಾಮಕಾರಿಯಾದ ಸಂಭಾಷಣೆಗಳಿವೆ. ಬಿಗಿಯಾದ ನಿರೂಪಣೆಯಿಂದಾಗಿ ಇದು ನೋಡಲೇಬೇಕಾದ ಸಿನಿಮಾ ಆಗಿದೆ’ ಎಂದು ಪ್ರೇಕ್ಷಕರು ಹೊಗಳಿದ್ದಾರೆ. ದೇಶಭಕ್ತಿಯ ಕಹಾನಿಯನ್ನು ಜನರು ಇಷ್ಟಪಡುತ್ತಿದ್ದಾರೆ. ಬಹುತಾರಾಗಣ ಇರುವ ಸಿನಿಮಾ ಆದ್ದರಿಂದ ಮೊದಲ ದಿನ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಂಡಿದೆ.
Just watched Border 2.
A few of my key observations:
The film is deeply patriotic and evokes strong nostalgia. It transports you straight back to your childhood days, reigniting that same thrill and excitement you felt as a kid.
ಕೆಲವರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ‘ಈ ಮೊದಲು ಬಂದಿದ್ದ ಬಾರ್ಡರ್ ಸಿನಿಮಾದಲ್ಲಿ ಸೈನಿಕರ ಮತ್ತು ಕುಟುಂಬದವರ ನೋವಿನ ಕಥೆಯನ್ನು ಯುದ್ಧದ ಹಿನ್ನೆಲೆಯಲ್ಲಿ ತೋರಿಸಲಾಗಿತ್ತು. ಆದರೆ ಬಾರ್ಡರ್ 2 ಕಳಪೆ ವಿಎಫ್ಎಕ್ಸ್ ಹೊಂದಿರುವ ಒಂದು ಯುದ್ಧದ ಸಿನಿಮಾ ಅಷ್ಟೇ’ ಎಂದು ಪ್ರೇಕ್ಷಕರೊಬ್ಬರು ಈ ಸಿನಿಮಾವನ್ನು ತೆಗಳಿದ್ದಾರೆ.
Border was a movie which explored the pain of the soldiers & their family on backdrop of a war
Border 2 is just a war movie with poor vfx .
ಮೂಲ ಸಿನಿಮಾದ ಮೋಡಿಯನ್ನು ಮರುಸೃಷ್ಟಿ ಮಾಡುವಲ್ಲಿ ‘ಬಾರ್ಡರ್ 2’ ಚಿತ್ರ ವಿಫಲವಾಗಿದೆ. ಕಥೆ ಕಳಪೆ ಆಗಿದೆ. ಸುಲಭವಾಗಿ ಊಹಿಸಬಹುದಾದ ಯುದ್ಧದ ಸನ್ನಿವೇಶಗಳು ಇವೆ. ಬಲವಂತಹ ದೇಶಭಕ್ತಿ, ಕಳಪೆ ವಿಎಫ್ಎಕ್ಸ್ ಇದೆ. ಹಾಡಿಗಳು ಚೆನ್ನಾಗಿವೆ. ಆದರೆ ಮನಮುಟ್ಟುವಂತಿಲ್ಲ’ ಎಂದು ಕೂಡ ನೆಟ್ಟಿಗರೊಬ್ಬರು ತಮ್ಮ ವಿಮರ್ಶೆ ತಿಳಿಸಿದ್ದಾರೆ.
Dhurandhar set the bar very high with its clear storytelling and flawless execution. Unfortunately, Border 2 had no proper flow, lacked clarity, and turned out to be a below-average experience.
Only Sunny Deol Energy felt good.#Border2pic.twitter.com/znCip4nl09
‘ಧುರಂಧರ್’ ಸಿನಿಮಾ ಬಿಡುಗಡೆ ಆದ ಬಳಿಕ ‘ಬಾರ್ಡರ್ 2’ ಸಿನಿಮಾ ಬಂದಿದೆ. ಎರಡರಲ್ಲೂ ದೇಶಭಕ್ತಿ ಕಥಾಹಂದರ ಇದೆ. ‘ಧುರಂದರ್’ ಸಿನಿಮಾದಷ್ಟು ನಿರೀಕ್ಷೆಯನ್ನು ಇಟ್ಟುಕೊಂಡು ಕೆಲವರು ‘ಬಾರ್ಡರ್ 2’ ಸಿನಿಮಾ ವೀಕ್ಷಿಸಿದ್ದಾರೆ. ಅಂಥವರಿಗೂ ಈ ಸಿನಿಮಾ ಇಷ್ಟ ಆಗಿಲ್ಲ. ಆದರೆ ಸನ್ನಿ ಡಿಯೋಲ್ ಅವರ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.
ಬೆಂಗಳೂರು, ಜನವರಿ 23: ಶಾಲೆಗಳಲ್ಲಿ ವಿದ್ಯಾರ್ಥಿಗಳ (students) ಸುರಕ್ಷತೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (education department) ಕೆಲವು ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ, ಆಡಳಿತಾತ್ಮಕ ಮತ್ತು ಸರ್ಕಾರಿ ಕಾರ್ಯಕ್ರಮಗಳ ಆಯೋಜನೆ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಲಾ ಕಾಲೇಜುಗಳು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ.
ಮಾರ್ಗಸೂಚಿಗಳು ಏನೇನು?
ಧ್ವಜಾರೋಹಣ ವೇಳೆ ವಿದ್ಯುತ್ ತಂತಿ ಹಾದುಹೋಗದಂತೆ ಕ್ರಮಕೈಗೊಳ್ಳುವುದು. ಧ್ವಜ ಏರಿಸುವಾಗ, ಇಳಿಸುವಾಗ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣ ವೇಳೆ ಅನಿರೀಕ್ಷಿತವಾಗಿ ಬಾವುಟ ಸಿಕ್ಕಿಹಾಕಿಕೊಂಡರೆ ಧ್ವಜಸ್ತಂಭಕ್ಕೆ ಮಕ್ಕಳನ್ನು ಹತ್ತಿಸಬಾರದು.
ಮಕ್ಕಳ ಕವಾಯತು ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ, ಮಕ್ಕಳು ಕುಳಿತುಕೊಳ್ಳುವ ಸ್ಥಳಗಳು ಸುರಕ್ಷಿತವಾಗಿರುವ ಬಗ್ಗೆ ಆಗಿಂದಾಗ್ಗೆ ಪರಿಶೀಲಿಸುವುದು.
ಮಕ್ಕಳನ್ನು ಕಾರ್ಯಕ್ರಮ, ಸ್ಪರ್ಧೆಗಳಿಗೆ ಕರೆದುಕೊಂಡು ಹೋಗುವ ಮತ್ತು ಹಿಂದಿರುಗಿ ಕರೆತರುವ ವಾಹನಗಳ ಬಗ್ಗೆ ಪರಿಶೀಲಿಸಬೇಕು.
ವಾಹನ ಚಾಲಕರು ವೇಗಮಿತಿಯಲ್ಲಿ ಚಲಿಸುವಂತೆ ಸೂಚನೆ ನೀಡುವುದು. ಪ್ರಮುಖವಾಗಿ ಚಾಲಕರು ಮದ್ಯಪಾನ ಮಾಡಿರದ ಬಗ್ಗೆ ಖಚಿತಪಡಿಸಿಕೊಳ್ಳುವುದು ಮತ್ತು ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕರೆದುಕೊಂಡು ಹೋಗಬಾರದು.
ಕಾರ್ಯಕ್ರಮ ನಡೆಸುವ ಸ್ಥಳಗಳಲ್ಲಿ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.
ಮಕ್ಕಳು ಸೇರಿದಂತೆ ಸಾರ್ವಜನಿಕರ ಸಂಪರ್ಕಕ್ಕೆ ಬಾರದಂತೆ ವಿದ್ಯುತ್ ತಂತಿಗಳನ್ನು ಅಳವಡಿಸಲು ತಂತ್ರಜ್ಞರಿಗೆ ಸೂಚಿಸುವುದು.
ವಿದ್ಯುತ್ ತಂತಿಗಳು ಇರುವಲ್ಲಿ ಮಳೆ ನೀರು ಸೋರದಂತೆ ಮತ್ತು ಇತರೆ ಯಾವುದೇ ಮೂಲದಿಂದ ನೀರು ಹರಿಯದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.
ಮಕ್ಕಳಿಗೆ ನೀಡುವ ನೀರು, ಪಾನೀಯ, ಆಹಾರದ ಶುಚಿತ್ವದ ಬಗ್ಗೆ ಪರಿಶೀಲಿಸುವುದು. ಆಹಾರ ತಯಾರಿಸುವ ಸ್ಥಳಗಳಿಗೆ ಮಕ್ಕಳ ಪ್ರವೇಶವನ್ನು ನಿರ್ಬಂಧಿಸುವುದು.
ಗ್ಯಾಸ್ ಹಾಗೂ ಒಲೆಗಳು ಸಮರ್ಪಕವಾಗಿರುವ ಬಗ್ಗೆ ಪರಿಶೀಲಿಸಿ ನಿಗಾವಹಿಸುವುದು. ಯಾವುದೇ ರೀತಿ ಬೆಂಕಿ ಅವಘಡವಾಗದಂತೆ ಕ್ರಮವಹಿಸುವುದು.
ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಮರ್ಪಕವಾಗಿ ವಾಹನ ನಿಲುಗಡೆ ಮಾಡಲು ಸೂಚನಾ ಫಲಕಗಳನ್ನು ಅಳವಡಿಸುವುದು. ಕಾರ್ಯಕ್ರಮದ ಸ್ಥಳದಿಂದ ಕನಿಷ್ಟು 100 ಮೀಟರ್ ದೂರದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸುವುದು.
ಅನಿರೀಕ್ಷಿತವಾಗಿ ಸಂಭವಿಸಬಹುದಾದ ಸನ್ನಿವೇಶಗಳನ್ನು ಎದುರಿಸುವ ಕುರಿತು ಮಕ್ಕಳಿಗೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು.
ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡುವುದು.
ಸ್ಥಳೀಯ ಆಡಳಿತಗಳು ಮಕ್ಕಳ ಸುರಕ್ಷತೆ ಕುರಿತು ಗಮನ ಹರಿಸುವುದು. ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸ್ಥಳೀಯ ಪೊಲೀಸ್, ವೈದ್ಯಕೀಯ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತಕ್ಕೆ ಮಕ್ಕಳ ಕಾರ್ಯಕ್ರಮದ ಕುರಿತು ಕಡ್ಡಾಯವಾಗಿ ಮಾಹಿತಿ ಒದಗಿಸುವುದು. ಯಾವುದೇ ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಲು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ತಿಳಿಸುವುದು.
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಭಾರತ ಮಹಿಳಾ ತಂಡದ ಸೂಪರ್ ಸ್ಟಾರ್ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (palash muchhal) ಅವರೂ ವೈವಾಹಿಕ ಜೀವನಕ್ಕೆ ಕಾಲಿರಿಸಿ ತಿಂಗಳುಗಳ ಕಳೆದಿರಬೇಕಿತ್ತು. ಆದರೆ ಮದುವೆಗೆ ಇನ್ನೊಂದು ದಿನ ಬಾಕಿ ಇರುವಾಗ ಮದುವೆ ಮುರಿದುಬಿದ್ದಿತ್ತು. ಆ ಸಮಯದಲ್ಲಿ ಸ್ಮೃತಿ ಅವರ ತಂದೆಗೆ ಅನಾರೋಗ್ಯದ ಕಾರಣ ಮದುವೆಯನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಕಳೆದ ಡಿಸೆಂಬರ್ನಲ್ಲಿ ಈ ಇಬ್ಬರೂ ಮದುವೆ ರದ್ದಾಗಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ ಯಾವ ಕಾರಣಕ್ಕೆ ಮದುವೆ ರದ್ದಾಯಿತು ಎಂಬುದರ ಬಗ್ಗೆ ಇಬ್ಬರೂ ಖಚಿತವಾಗಿ ಏನನ್ನು ಹೇಳಿರಲಿಲ್ಲ. ಆದರೀಗ ಸ್ಮೃತಿ ಮಂಧಾನ ಅವರ ಬಾಲ್ಯದ ಗೆಳೆಯ ವಿದ್ಯಾನ್ ಮಾನೆ, ಪಲಾಶ್ ಮುಚ್ಚಲ್ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು, ಮದುವೆ ನಿಲ್ಲಲು ಕಾರಣವೇನು ಮತ್ತು ಮದುವೆಯ ಹಿಂದಿನ ದಿನ ಏನೆಲ್ಲ ನಡೆಯಿತು ಎಂಬುದನ್ನು ವಿವರಿಸಿದ್ದಾರೆ.
ಮದುವೆ ರದ್ದಾಗಲು ಇದೇ ಕಾರಣ?
ಮದುವೆ ಮನೆಯಲ್ಲಿ ಅಂದು ನಡೆದಿದ್ದೇನು ಎಂಬುದನ್ನು ವಿವರಿಸಿರುವ ವಿದ್ಯಾನ್ ಮಾನೆ, ‘ಮದುವೆ ಸಮಾರಂಭದಲ್ಲಿ ನಾನು ಕೂಡ ಹಾಜರಿದ್ದೆ. ಅಂದು ಪಲಾಶ್ ಒಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ. ಅದು ಭಯಾನಕ ದೃಶ್ಯವಾಗಿತ್ತು. ಇದಾದ ಬಳಿಕ ಪರಿಸ್ಥಿತಿ ತುಂಬಾ ಉದ್ವಿಗ್ನವಾಯಿತು, ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಥಳಿಸಿದರು. ಇದಾದ ಬಳಿಕ ಮದುವೆ ಮುರಿದುಬಿದ್ದಿತು’ ಎಂದಿದ್ದಾರೆ.
ಇನ್ನು ಪಲಾಶ್ ವಿರುದ್ಧ ವಂಚನೆ ಮತ್ತು ಆರ್ಥಿಕ ದುರುಪಯೋಗದ ಗಂಭೀರ ಆರೋಪಗಳನ್ನು ಹೊರಿಸಿರುವ ವಿದ್ಯಾನ್ ಮಾನೆ, ‘ಪಲಾಶ್ ಚಿತ್ರದ ಹೆಸರಿನಲ್ಲಿ ತನ್ನಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದಿದ್ದಾರೆ, ಆದರೆ ಆ ಚಿತ್ರವನ್ನು ನಿರ್ಮಿಸಲಾಗಿಲ್ಲ ಅಥವಾ ಹಣವನ್ನು ಹಿಂತಿರುಗಿಸಲಾಗಿಲ್ಲ. ನಾನು ಸ್ಮೃತಿಯ ಕುಟುಂಬದ ಮೂಲಕ ಪಲಾಶ್ ಅವರನ್ನು ಭೇಟಿಯಾದೆ. ಈ ಸಮಯದಲ್ಲಿ ಪಲಾಶ್ ನನ್ನ ಬಳಿ ಸಿನಿಮಾ ನಿರ್ದೇಶನದ ಬಗ್ಗೆ ಮಾತನಾಡಿದರು. ಅಲ್ಲದೆ ಆರು ತಿಂಗಳೊಳಗೆ ಸಿನಿಮಾವನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಹೀಗಾಗಿ ನಾನು ಪಾಲಾಶ್ ಸಿನಿಮಾದ ಮೇಲೆ ಸುಮಾರು 40 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದೆ. ಆದಾಗ್ಯೂ, ಮದುವೆ ರದ್ದಾದ ನಂತರ ಪಲಾಶ್ ನನ್ನ ಫೋನ್ ರಿಸೀವ್ ಮಾಡುತ್ತಿಲ್ಲ ಎಂದಿದ್ದಾರೆ.
ನ. 23 ರಂದು ಮದುವೆ ನಡೆಯಬೇಕಿತ್ತು
ಮೇಲೆ ಹೇಳಿದಂತೆ ಸ್ಮೃತಿ ಮಂಧಾನ ಅವರ ವಿವಾಹವು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನವೆಂಬರ್ 23, 2025 ರಂದು ನಿಗದಿಯಾಗಿತ್ತು. ಆದಾಗ್ಯೂ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಮಂಧಾನ ಅವರ ಹಠಾತ್ ಅನಾರೋಗ್ಯದಿಂದಾಗಿ ಸಮಾರಂಭವನ್ನು ಮುಂದೂಡಲಾಯಿತು. ಇದೇ ವೇಳೆ ಪಲಾಶ್ ಕೂಡ ಅನಾರೋಗ್ಯಕ್ಕೆ ಒಳಗಾದರು. ಹೀಗಾಗಿ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕೆಲವು ದಿನಗಳ ನಂತರ, ಮಂಧಾನ ಅವರು ವಿವಾಹವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದ್ದರು. ಇದೀಗ ಸ್ಮೃತಿ ಅವರ ಬಾಲ್ಯದ ಗೆಳೆಯನ ಈ ರೀತಿಯ ಹೇಳಿಕೆ ಎಲ್ಲರನ್ನೂ ಆಘಾತಕ್ಕೊಳಗಾಗುವಂತೆ ಮಾಡಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಜನವರಿ 23: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಇಂದು ಲೋಕಾರ್ಪಣೆಗೊಂಡಿದೆ. ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಆದಿಶಕ್ತಿ ದೇವಾಲಯ ಜೀರ್ಣೋದ್ಧಾರ ಮಾಡಲಾಗಿದ್ದು, ಕಳೆದ ಮೂರು ದಿನಗಳಿಂದ ಜಿಬಿಎ ಕೇಂದ್ರ ಕಚೇರಿ ಕಂಗೊಳಿಸಿತು.
800 ವರ್ಷಗಳ ಸುದೀರ್ಘ ಇತಿಹಾಸ
ಉದ್ಯಾನನಗರಿ ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಸರಿ ಸಮಾರು 800 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು, ಬೆಂಗಳೂರಿನ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಒಂದೆಂದು ಪ್ರಸಿದ್ಧಿ ಪಡೆದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಾಯ, ಸಹಕಾರ ಮತ್ತು ಬೆಂಬಲಗಳಿಂದ ಜೀರ್ಣೋದ್ಧಾರಗೊಂಡಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯದ ಉದ್ಘಾಟನೆ ಮತ್ತು ದೇವತಾ ಪೂಜಾ ಕಾರ್ಯಕ್ರಮಕ್ಕೆ ಮೂರು ದಿನಗಳವರೆಗೂ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ವಿವಿಧ ರೀತಿಯ ದೇವರ ಪ್ರತಿಷ್ಠಾಪನೆ ಮಾಡಲಾಗಿದ್ದು, ಜೊತೆಗೆ ಸಪ್ತಮಾತೃಕಾ ದುರ್ಗಾ, ಶ್ರೀ ಲಕ್ಷ್ಮೀ ಸರಸ್ವತಿ ಹೋಮ, ತತ್ವನ್ಯಾಸ ಕಾಲನ್ಯಾಸ ಹೋಮ, ಕಲಾ ಹೋಮ, ನವ ಚಂಡಿಕಾಯಾಗ, ನವ ಚಂಡಿಕಾ ಹೋಮ, ಕುಂಭಾಭಿಷೇಕ, ವಿಶೇಷ ದುರ್ಗಾ ದೀಪ ನಮಸ್ಕಾರ ಹಾಗೂ ದೇವತಾ ಕಾರ್ಯಕ್ರಮ ನಡೆಯಿತು.
ದೇವಾಲಯದ ಜೀರ್ಣೋದ್ದಾರದ ಮಹತ್ಕಾರ್ಯಕ್ಕಾಗಿ ಸಂಘದ ವತಿಯಿಂದ ಪ್ರತಿ ನೌಕರರಿಂದ ತಲಾ ಒಂದು ಸಾವಿರ ರೂ. ಕಟಾವಣೆ ಮಾಡಲಾಯಿತು ಮತ್ತು ಆರ್ಥಿಕವಾಗಿ ಸಹಾಯ ನೀಡಿ ಅಂದಾಜು 1 ಕೋಟಿ 60 ಲಕ್ಷ ರೂ. ಜೀರ್ಣೋದ್ಧಾರಕ್ಕೆ ನೌಕರರ ವರ್ಗದಿಂದ ದೇಣಿಗೆ ನೀಡಲಾಗಿದೆ. ಜೊತೆಗೆ ಬಿಬಿಎಂಪಿ ನೌಕರರ ಸಹಕಾರ ಸಂಘದಿಂದ 20 ಲಕ್ಷ ರೂ ಉದಾರ ದೇಣಿಗೆ ನೀಡಿ ದೇವಸ್ಥಾನದ ನವೀಕರಣಕ್ಕೆ ಕೈಜೋಡಿಸಲಾಗಿದೆ.
ಒಟ್ಟಾರೆಯಾಗಿ ಹಲವು ವರ್ಷಗಳಿಂದ ದೇವಸ್ಥಾನದ ಶಿಥಿಲಾ ವ್ಯವಸ್ಥೆ ಇಲ್ಲದೆ ಹಳೆ ದೇವಸ್ಥಾನ ಹಾಳಾಗಿತ್ತು. ಪ್ರತಿ ನೌಕರರಿಂದ ತಲಾ ಇಂತಿಷ್ಟು ಹಣವನ್ನು ನೀಡುವ ಮೂಲಕ ಆರ್ಥಿಕವಾಗಿ ಸಹಾಯ ನೀಡುವ ಮೂಲಕ ದೇವಸ್ಥಾನದ ನವೀಕರಣಕ್ಕೆ ಕೈಜೋಡಿಸಿದ್ದಾರೆ.
ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈವ (Kavya Shaiva) ಅವರು ಅತಿಥಿಯಾಗಿ ಬಂದಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಕಾವ್ಯಾ ಜೊತೆ ಫ್ಯಾನ್ಸ್ ಸೆಲ್ಫಿ ತೆಗೆದುಕೊಂಡರು. ಇದೇ ಕಾರ್ಯಕ್ರಮಕ್ಕೆ ಗಿಲ್ಲಿ ನಟ (Gilli Nata), ಶೋಭಾ ಕರಂದ್ಲಾಜೆ, ಅನುಷಾ ರೈ ಮುಂತಾದ ಸೆಲೆಬ್ರಿಟಿಗಳು ಆಗಮಿಸಿದ್ದರು. ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಿದ ಎಲ್ಲರಿಗೂ ಡಿಮ್ಯಾಂಡ್ ಹೆಚ್ಚಿದೆ. ಕಾವ್ಯಾ ಅವರು ಕಿರುತೆರೆ ಮತ್ತು ಸಿನಿಮಾಗಳಲ್ಲಿ ಗುರುತಿಸಿಕೊಂಡಿದ್ದಾರೆ.
ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ ಈಕೆ ತನ್ನ ಕನಸುಗಳನ್ನು ಸಾಕಾರಗೊಳಿಸುವ ಆಲೋಚನೆ ಮಾಡಲೂ ಬಿಡುವಿಲ್ಲದಂತಾಗಿತ್ತು. ಒಳ್ಳೆಯ ಹೆಂಡತಿ, ಒಳ್ಳೆಯ ಸೊಸೆ ಮತ್ತು ಒಳ್ಳೆಯ ತಾಯಿಯಾಗಲು ಈಕೆ ಶ್ರಮಿಸುತ್ತಿರುವಾಗ ಈಕೆಯ ಫ್ಯಾಷನ್ ಪದವಿ ಎಲ್ಲೋ ಧೂಳು ಹಿಡಿದು ಕೂತಿತ್ತು. ಅದೇನೇ ಆದರೂ ಈಕೆಯ ಗುರಿ ಈಡೇರಿಸುವ ಬಯಕೆಯಂತೂ ಎದೆಯೊಳಗೆ ಸುಪ್ತವಾಗಿ ಇಣುಕುತ್ತಲೇ ಇದ್ದದ್ದು ಹೌದು.
ನಾಲ್ಕು ಗೋಡೆಗಳ ಚೌಕಟ್ಟಿಗೆ ಸೀಮಿತವಾಗದ ಮನಸ್ಸು
ಮದುವೆಯ ನಂತರ, ದಿಶಾ ಗರ್ಗ್ ಅವರು ಕ್ರಮೇಣ ತಮ್ಮ ಗಂಡನ ಕುಟುಂಬಕ್ಕೆ ಸಂಪೂರ್ಣವಾಗಿ ಅರ್ಪಿಸಿಕೊಂಡರು. ಕಾಲ ಕಳೆದಂತೆ, ಅವರು ಅಪ್ಪಟ ಗೃಹಿಣಿಯೇ ಆದರು. ಅವರ ಗುರುತೇ ಗೃಹಿಣಿಯಾಯಿತು. ಮನೆಯ ನಾಲ್ಕು ಗೋಡೆಗಳ ಚೌಕಟ್ಟಿನೊಳಗೆ ಸೀಮಿತಗೊಳ್ಳುವುದು ಆಕೆಯ ಮನಸ್ಸಿನೊಳಗೆ ಎಲ್ಲೋ ಕಸಿವಿಸಿ ಮೂಡಿಸುತ್ತಿತ್ತು. ಮನೆಯ ನೆಲಮಾಳಿಗೆಯಲ್ಲಿ ಒಂದು ಸಣ್ಣ ಅಂಗಡಿ ತೆರೆಯುವ ಬಯಕೆಯನ್ನು ಆಕೆ ವ್ಯಕ್ತಪಡಿಸಿದಾಗ, ಕುಟುಂಬದಿಂದ ವಿರೋಧ ವ್ಯಕ್ತವಾಯಿತು.
ದಿಶಾ ಬ್ಯುಸಿನೆಸ್ ಪ್ರಯಾಣದ ಆರಂಭಿಕ ಹಂತ ಹೇಗಿತ್ತು ಗೊತ್ತಾ?
ಬ್ಯುಸಿನೆಸ್ ಆರಂಭಿಸಲು ಮನೆಯವರ ವಿರೋಧ ಬಂದಾಗ ದಿಶಾ ಗರ್ಗ್ ಅವರು ಚಾಣಾಕ್ಷ್ಯತೆಯಿಂದ ಪರಿಸ್ಥಿತಿ ನಿರ್ವಹಿಸುತ್ತಾರೆ. ತನ್ನ ಅತ್ತೆ ಮತ್ತು ಮಾವ ಅವರ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ. ಕೇವಲ ಇಬ್ಬರು ಟೈಲರ್ಗಳು ಹಾಗೂ ಬಹಳ ಸೀಮಿತ ಸಂಪನ್ಮೂಲದೊಂದಿಗೆ ದಿಶಾ ಅವರು ಟೈಲರ್ ಅಂಗಡಿ ಶುರು ಮಾಡುತ್ತಾರೆ. ಇಬ್ಬರು ಕೆಲಸಗಾರರೊಂದಿಗೆ ಶುರುವಾದ ಇದರಲ್ಲಿ ಈಗ 25 ಮಂದಿ ಕೆಲಸ ಮಾಡುತ್ತಿರುವ ಹಂತಕ್ಕೆ ಬ್ಯುಸಿನೆಸ್ ಬೆಳೆದಿದೆ. ದೊಡ್ಡ ಸೆಟಪ್ ಇರಲಿಲ್ಲ, ಸಮರ್ಪಕವಾದ ಸಪೋರ್ಟ್ ಸಿಸ್ಟಂ ಕೂಡ ಇರಲಿಲ್ಲ. ಈಕೆಯ ಶಕ್ತಿಯಂತೆ ಇದ್ದದ್ದು ಕೆಲಸದ ಕೌಶಲ್ಯ ಮತ್ತು ಆತ್ಮವಿಶ್ವಾಸ ಮಾತ್ರ. ದಿಶಾ ತನ್ನ ಉದ್ದಿಮೆಯಲ್ಲಿ ಕ್ರಮೇಣವಾಗಿ ಪ್ರಗತಿ ಸಾಧಸುತ್ತಾ ಹೋಗುತ್ತಾ ತನ್ನ ಕೌಶಲ್ಯವನ್ನೂ ಪರಿಷ್ಕರಿಸುತ್ತಾ ಸಾಗಿದರು.
ವಿಧಿಯು ದಿಶಾಳನ್ನು ತೀವ್ರ ಪರೀಕ್ಷೆಗೆ ಒಳಪಡಿಸಿತು. 2020ರಲ್ಲಿ ಅವರ ಮಾವ ನಿಧನರಾದರು. ನಂತರ 2022 ರಲ್ಲಿ ಅವರ ಪತಿಯೂ ನಿಧನರಾದರು. ಈ ಎರಡು ಪ್ರಮುಖ ಹಿನ್ನಡೆಗಳು ಅವರ ಜೀವನಕ್ಕೆ ದಿಢೀರ್ ತಿರುವು ಕೊಟ್ಟವು. ದಿಶಾಗೆ ಹಿಮ್ಮೆಟ್ಟುವುದನ್ನು ಬಿಟ್ಟು ಬೇರೆ ದಾರಿ ಇದ್ದಂತಿರಲಿಲ್ಲ. ಈ ಕ್ಲಿಷ್ಟ ಸಂದರ್ಭಗಳಿಗೆ ಬಲಿಯಾಗುವ ಬದಲು, ಅವರು ಹೊಸ ಬದುಕಿನ ದಾರಿ ಕಂಡುಕೊಳ್ಳತೊಡಗಿದರು.
ಗ್ರೀನ್ ಪಾರ್ಕ್ನ ಡಿಸೈನರ್ ಬೂಟೀಕ್
ಇಂದು, ದಿಶಾ ದೆಹಲಿಯ ಗ್ರೀನ್ ಪಾರ್ಕ್ನಲ್ಲಿ ಯಶಸ್ವಿ ಡಿಸೈನರ್ ಬೂಟೀಕ್ ಅನ್ನು ನಡೆಸುತ್ತಿದ್ದಾರೆ. ಅವರು ಸುಮಾರು 25 ಜನರಿಗೆ ಉದ್ಯೋಗ ನೀಡಿದ್ದಾರೆ. ಅವರ ವ್ಯವಹಾರವು ಅವರ ಗುರುತಾಗಿರುವುದು ಮಾತ್ರವಲ್ಲ, ಕುಟುಂಬಕ್ಕೆ ಬೆಂಬಲ ಕೊಡುತ್ತಿದೆ. ಸಾಕಷ್ಟು ಹಣ ಸಂಪಾದನೆ ಮಾಡುತ್ತಿದ್ದಾರೆ. ಆದರೆ, ಸಂಪಾದಿಸಿದ ಹಣವು ಖರ್ಚು ಮಾಡಲು ಇರುವುದು ಎನ್ನುವ ಪೈಕಿಯವರಲ್ಲ ದಿಶಾ. ಇವತ್ತಿನ ಸಂಪಾದನೆಯಲ್ಲಿ ನಾಳೆಯ ಸುರಕ್ಷತೆಗಾಗಿಯೂ ಒಂದಷ್ಟು ಪಾಲು ತೆಗೆದಿರಿಸಬೇಕು ಎನ್ನುವಂಥವರು ದಿಶಾ. ನಾಳೆ ದಿಢೀರ್ ಕಷ್ಟ ಬಂದರೆ ಏನು ಮಾಡುವುದು?
ದಿಶಾ ಗರ್ಗ್ ಅವರ ಜೀವನ ಕಥೆಯಿಂದ ಕಲಿಯಬಹುದಾದ ಹಲವು ಪಾಠಗಳಲ್ಲಿ ಒಂದೆಂದರೆ, ‘ಆರ್ಥಿಕ ಸ್ವಾತಂತ್ರ್ಯ ಎಂಬುದು ಲಕ್ಷುರಿ ಅಲ್ಲ, ಅದು ಭದ್ರತೆ’ ಎಂಬುದು. ಜೀವನದಲ್ಲಿ ಇದ್ದಕ್ಕಿದ್ದಂತೆ ಎಲ್ಲವೂ ಕಸಿದು ಹೋದಾಗ, ಮತ್ತೆ ಎದ್ದು ನಿಲ್ಲಲು ನಿಮಗೆ ಶಕ್ತಿಯನ್ನು ನೀಡುವುದು ನಿಮ್ಮ ಆರ್ಥಿಕ ಸ್ವಾತಂತ್ರ್ಯ. ದಿಶಾ ಕೇವಲ ಡಿಸೈನರ್ ಅಲ್ಲ, ಜೀವನದ ಜವಾಬ್ದಾರಿಗಳ ಹೊರೆಯಲ್ಲಿ ಕನಸ್ಸುಗಳನ್ನು ಬಚ್ಚಿಟ್ಟುಕೊಂಡು ಸಾಗುತ್ತಿರುವ ಅನೇಕ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ.
ದಿಶಾ ಗರ್ಗ್
ಹೂಡಿಕೆ ಮಾಡುವ ಮೊದಲು ಈ ವಿಷಯಗಳು ನೆನಪಿನಲ್ಲಿರಲಿ
ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡುವ ಮುನ್ನ KYC (Know Your Customer) ಪೂರ್ಣಗೊಂಡಿರಬೇಕು. SEBI ವೆಬ್ಸೈಟ್ನಲ್ಲಿ ವಿವರ ಹೊಂದಿರುವ ಹಾಗೂ ನೊಂದಾಯಿತವಾಗಿರುವ ಮ್ಯೂಚುವಲ್ ಫಂಡ್ ಕಂಪನಿಗಳೊಂದಿಗೆ ಮಾತ್ರ ಮಾಡಬೇಕು. ಹೂಡಿಕೆದಾರರು ಯಾವುದೇ ದೂರುಗಳಿಗಾಗಿ ನೇರವಾಗಿ AMC ಅನ್ನು ಸಂಪರ್ಕಿಸಬಹುದು ಅಥವಾ SCORES ಪೋರ್ಟಲ್ನಲ್ಲಿ (https://scores.gov.in) ದೂರು ಸಲ್ಲಿಸಬಹುದು. ಪರಿಹಾರವು ತೃಪ್ತಿಕರವಾಗಿಲ್ಲದಿದ್ದರೆ, Smart ODR ಪೋರ್ಟಲ್ (https://smartodr.in/login) ಅನ್ನು ಬಳಸಬಹುದು.
HDFC AMC ಬಗ್ಗೆ
HDFC ಅಸೆಟ್ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ ಭಾರತದ ಅತಿದೊಡ್ಡ ಮ್ಯೂಚುವಲ್ ಫಂಡ್ ಕಂಪನಿಗಳಲ್ಲಿ ಒಂದಾಗಿದೆ. ಇದನ್ನು 1999 ರಲ್ಲಿ ಸ್ಥಾಪಿಸಲಾಯಿತು ಮತ್ತು SEBI ಅನುಮೋದನೆ ಪಡೆದ ನಂತರ 2000 ರಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಈಕ್ವಿಟಿ, ಫಿಕ್ಸೆಡ್ ಇನ್ಕಮ್ ಮತ್ತು ಇತರ ಹೂಡಿಕೆ ಆಯ್ಕೆಗಳನ್ನು ನಿರ್ವಹಿಸುತ್ತದೆ. ಮತ್ತು ದೇಶಾದ್ಯಂತ ಶಾಖೆಗಳನ್ನು ಹೊಂದಿದೆ. ಬ್ಯಾಂಕುಗಳು, ಸ್ವತಂತ್ರ ಹಣಕಾಸು ಸಲಹೆಗಾರರು ಮತ್ತು ರಾಷ್ಟ್ರೀಯ ವಿತರಕರ ಮೂಲಕ ಸೇವೆಗಳನ್ನು ಒದಗಿಸುತ್ತದೆ.