ಡಿವೋರ್ಸ್ ಬಳಿಕ 9 ಕಿ.ಮೀ ದೀಡ ನಮಸ್ಕಾರ ಹಾಕಿ ದೇವರಿಗೆ ಥ್ಯಾಂಕ್ಸ್ ಹೇಳಿದ ಯುವಕ! ವಿಡಿಯೋ ವೈರಲ್‌

ಡಿವೋರ್ಸ್ ಬಳಿಕ 9 ಕಿ.ಮೀ ದೀಡ ನಮಸ್ಕಾರ ಹಾಕಿ ದೇವರಿಗೆ ಥ್ಯಾಂಕ್ಸ್ ಹೇಳಿದ ಯುವಕ! ವಿಡಿಯೋ ವೈರಲ್‌

ಲಕ್ನೋ, (ಮಾರ್ಚ್ 30): ಸಾಮಾನ್ಯವಾಗಿ ದಾಂಪತ್ಯ ಜೀವನದಲ್ಲಿ ವಿಚ್ಛೇದನ (Divorce) ಸಂಭವಿಸಿದರೆ ಅದು ದುಃಖದ ಸಂಗತಿ ಎಂದು ಪರಿಗಣಿಸಲಾಗುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಕೆಲವರು ‘ಡಿವೋರ್ಸ್ ಪಾರ್ಟಿ’ ನೀಡಿ ಸಂಭ್ರಮಿಸುವುದನ್ನೂ ನಾವು ನೋಡಿದ್ದೇವೆ. ಅದರಂತೆ ಉತ್ತರ ಪ್ರದೇಶದ (Uttara Pradesh) ಬಸ್ತಿ ಜಿಲ್ಲೆಯ 25 ವರ್ಷದ ಯುವಕನೋರ್ವ ತನಗೆ ಪತ್ನಿಯಿಂದ ​ಕೋರ್ಟಿನಲ್ಲಿ ವಿಚ್ಛೇದನ ಸಿಕ್ಕಿದ್ದಕ್ಕೆ ದೇವರಿಗೆ ಧನ್ಯವಾದ ಸಲ್ಲಿಸಲು ಬರೋಬ್ಬರಿ 9 ಕಿಲೋಮೀಟರ್‌ಗಳಷ್ಟು ದೂರ ದೀಡ ನಮಸ್ಕಾರ ಹಾಕುವ ಮೂಲಕ ವಿಶಿಷ್ಟವಾಗಿ ಹರಕೆ ತೀರಿಸಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಬಸ್ತಿ ಜಿಲ್ಲೆಯ ನರ್ಖೋರಿಯಾ ಗ್ರಾಮದ ಜೋಗೇಶ್ ಎಂಬ ಯುವಕ ಈ ವಿಚಿತ್ರ ಸಾಹಸ ಮಾಡಿದವರು. ನವರಾತ್ರಿಯ ಶುಭ ಸಂದರ್ಭದಲ್ಲಿ ಅವರು ತಮ್ಮ ಗ್ರಾಮದಿಂದ ಸ್ಥಳೀಯ ‘ಬೈದಾ ಸಮಯ ಮಾತಾ’ ದೇವಸ್ಥಾನದವರೆಗೆ ನೆಲದ ಮೇಲೆ ಮಲಗಿ ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಸಾಗಿದ್ದಾರೆ. ಬೆಳಿಗ್ಗೆ ಆರಂಭವಾದ ಈ ಕಠಿಣ ಯಾತ್ರೆಯು ಸುಮಾರು 12 ಗಂಟೆಗಳ ಕಾಲ ನಡೆದಿದ್ದು, ಇಡೀ ಹಾದಿಯುದ್ದಕ್ಕೂ ಜೋಗೇಶ್ ಅವರು ಉಪವಾಸವಿದ್ದು ‘ಜೈ ಶ್ರೀರಾಮ್’ ಮತ್ತು ‘ಜೈ ಬಜರಂಗಬಲಿ’ ಎಂದು ಘೋಷಣೆ ಕೂಗುತ್ತಾ ದೇವಸ್ಥಾನ ತಲುಪಿದ್ದಾರೆ.

ಇದನ್ನೂ ನೋಡಿ: ಬಿರುಗಾಳಿಗೆ ಮಂಟಪವನ್ನೇ ಹಾರದಂತೆ ತಡೆದವನು, ಇನ್ನು ಪತ್ನಿ ಕೈ ಬಿಡುವನೇ!

ಪ್ರಕರಣದ ಹಿನ್ನೆಲೆ

ಜೋಗೇಶ್ ಅವರಿಗೆ 2022 ರಲ್ಲಿ ಮದುವೆಯಾಗಿತ್ತು. ಆದರೆ ಮದುವೆಯಾದ ಮೊದಲ ದಿನದಿಂದಲೇ ದಂಪತಿಗಳ ನಡುವೆ ತೀವ್ರ ಗಲಾಟೆಗಳು ಶುರುವಾಗಿದ್ದವು. ಇದರಿಂದ ದಾಂಪತ್ಯ ಜೀವನ ನರಕಸದೃಶವಾದಾಗ ಜೋಗೇಶ್ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲದೇ ನನಗೆ ಈ ಕಿರಿಕಿರಿ ತುಂಬಿದ ದಾಂಪತ್ಯದಿಂದ ಮುಕ್ತಿ ಸಿಕ್ಕರೆ ದೇವಸ್ಥಾನಕ್ಕೆ ದೀಡ‌ ನಮಸ್ಕಾರ ಮಾಡುತ್ತೇನೆ” ಎಂದು ಅವರು ದೇವರಿಗೆ ಹರಕೆ ಹೊತ್ತಿದ್ದರು. 2026 ಜನವರಿಯಲ್ಲಿ ವಿಚ್ಛೇದನ ಪ್ರಕ್ರಿಯೆ ಕಾನೂನುಬದ್ಧವಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜೋಗೇಶ್ ತಮ್ಮ ಹರಕೆಯನ್ನು ತೀರಿಸಿದ್ದಾರೆ.

ಈ ಯಾತ್ರೆಗಾಗಿ ಜೋಗೇಶ್ ಮುಂಚಿತವಾಗಿಯೇ ಉಪವಿಭಾಗಾಧಿಕಾರಿಗಳಿಂದ (SDM) ಅನುಮತಿ ಪಡೆದಿದ್ದರು. ಯಾತ್ರೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರು ಭದ್ರತೆ ನೀಡಿದ್ದರು. ಜೋಗೇಶ್ ಅವರ ಪೋಷಕರು ಮತ್ತು ಕುಟುಂಬದ ಸದಸ್ಯರು ಕೂಡ ಅವರ ಜೊತೆಗಿದ್ದರು. ದೇವಸ್ಥಾನ ತಲುಪಿದ ನಂತರ ಅವರು ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.

ಇನ್ನಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು, ಮಾರ್ಚ್​ 30: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಮಂಗಳೂರಿನ ಕ್ಯಾಸಾಗ್ರಾಂಡ್​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್​ಗೆ ಬಂದಿದ್ದ ವೇಳೆ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ದಾಸವಾಳ ಹೂವು ನುಂಗಿ ಮಗು ಸಾವು

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮನೆ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವು ನುಂಗಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ಸುದರ್ಶನ್, ನವ್ಯಾ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಮೃತ ಮಗು. ಮನೆ ಹೊಸ್ತಿಲಿನಲ್ಲಿ ಪೂಜೆಗೆ ದಾಸವಾಳ ಹೂವು ಇಟ್ಟಿದ್ದರು. ಒಣಗಿದ ಹೂವನ್ನು ನುಂಗಿ ಚಿನ್ಮಯಿಗೌಡ ಅಸ್ವಸ್ಥಗೊಂಡಿದ್ದ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಚಿನ್ಮಯಿಗೌಡ ಮೃತಪಟ್ಟಿದ್ದಾನೆ.

ರಥೋತ್ಸವ ನೋಡಲು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮತ್ತೊಂದು ಪ್ರಕರಣದಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ರಥೋತ್ಸವ ನೋಡಲು ಬಂದಿದ್ದ ಮಾಗಡಿ ಮೂಲದ ನಂಜುಂಡಸ್ವಾಮಿ(56) ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಥೋತ್ಸವ ನೋಡಲು ಬಂದಿದ್ದ ನಂಜುಂಡಸ್ವಾಮಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಆಟವಾಡುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿ ಬಳಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಟವಾಡುವಾಗ ಆಯತಪ್ಪಿ ಬಿದ್ದು ಕೀರ್ತನಾ(10) ಸಾವನ್ನಪ್ಪಿದ್ದಾಳೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು, ಮಾರ್ಚ್​ 30: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಮಂಗಳೂರಿನ ಕ್ಯಾಸಾಗ್ರಾಂಡ್​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್​ಗೆ ಬಂದಿದ್ದ ವೇಳೆ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ದಾಸವಾಳ ಹೂವು ನುಂಗಿ ಮಗು ಸಾವು

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮನೆ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವು ನುಂಗಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ಸುದರ್ಶನ್, ನವ್ಯಾ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಮೃತ ಮಗು. ಮನೆ ಹೊಸ್ತಿಲಿನಲ್ಲಿ ಪೂಜೆಗೆ ದಾಸವಾಳ ಹೂವು ಇಟ್ಟಿದ್ದರು. ಒಣಗಿದ ಹೂವನ್ನು ನುಂಗಿ ಚಿನ್ಮಯಿಗೌಡ ಅಸ್ವಸ್ಥಗೊಂಡಿದ್ದ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಚಿನ್ಮಯಿಗೌಡ ಮೃತಪಟ್ಟಿದ್ದಾನೆ.

ರಥೋತ್ಸವ ನೋಡಲು ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಮತ್ತೊಂದು ಪ್ರಕರಣದಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ರಥೋತ್ಸವ ನೋಡಲು ಬಂದಿದ್ದ ಮಾಗಡಿ ಮೂಲದ ನಂಜುಂಡಸ್ವಾಮಿ(56) ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಥೋತ್ಸವ ನೋಡಲು ಬಂದಿದ್ದ ನಂಜುಂಡಸ್ವಾಮಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಆಟವಾಡುವಾಗ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿ ಬಳಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಟವಾಡುವಾಗ ಆಯತಪ್ಪಿ ಬಿದ್ದು ಕೀರ್ತನಾ(10) ಸಾವನ್ನಪ್ಪಿದ್ದಾಳೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರ ಎಂಟ್ರಿ: ಫುಲ್​​ ಹೈಡ್ರಾಮಾ

ಬಾಗಲಕೋಟೆ, ಮಾರ್ಚ್​​ 30: ಉಪಚುನಾವಣೆ ಹಿನ್ನೆಲೆ ಬಿಜೆಪಿ ರೋಡ್ ಶೋ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಧ್ವಜ ಹಿಡಿದು ‘ಕೈ’ ಕಾರ್ಯಕರ್ತರು ಎಂಟ್ರಿಕೊಟ್ಟ ಪರಿಣಾಮ ಕಾರ್ಯಕರ್ತರ ಮಧ್ಯೆ ನೂಕಾಟ-ತಳ್ಳಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ಮಧ್ಯೆ ಬೈಕ್ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಕಾರ್ಯಕರ್ತ ಯತ್ನಿಸಿದ್ದು, ಈ ವೇಳೆ ಗದ್ದಲ ಆರಂಭವಾಗಿದೆ. ಕಾಂಗ್ರೆಸ್​​ ಕಾರ್ಯಕರ್ತನನ್ನು ಪೊಲೀಸರು ಎಳೆದು ತಂದಿದ್ದು, ಈ ವೇಳೆ ಅದೇ ಪಕ್ಷದ ಕಾರ್ಯಕರ್ತರು ಕಿರುಚಾಡಿದ್ದಾರೆ. ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಅಂತಿಮವಾಗಿ ಕಾಂಗ್ರೆಸ್​​ ಕಾರ್ಯಕರ್ತನನ್ನು ಪೊಲೀಸರು ಸ್ಥಳದಿಂದ ಕಳುಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಗೃಹ ಸಚಿವ ಪರಮೇಶ್ವರ ಆಪ್ತನ ಹತ್ಯೆ ಹತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾರವಾರ, (ಮಾರ್ಚ್ 30): ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತರಾಗಿರುವ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಅಂಕೋಲಾದಲ್ಲಿ ನಡೆದ ಹತ್ಯೆ  ಯತ್ನ ಪ್ರಕರಣ (Gopalkrishna Nayak Murder Attempt) ಜಿಲ್ಲೆಯಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಮಾರ್ಚ್ 25ರಂದು ಹಾಡಹಗಲೇ ನಡೆದ ಈ ದಾಳಿ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಘಟನೆಯ‌ ಇನ್ನೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಗೋಪಾಲ ಕೃಷ್ಣ ನಾಯಕ್ ಅವರ ತಲೆಗೆ ಹಲವು ಬಾರಿ ಚಾಕುವಿನಿಂದ ಚುಚ್ಚುವ ದೃಶ್ಯ ಸೆರೆಯಾಗಿದೆ. ಘಟನೆ ಸಂಬಂಧ ಸದ್ಯ ಗೋವಾ ಮೂಲದ ಏಳಕ್ಕೂ ಹೆಚ್ಚು ಆರೋಪಿ ಬಂದಿಸಿರುವ ಪೊಲೀಸರು, ಸುಪಾರಿ ಕೊಟ್ಟ ಆರೋಪಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

Source link

ಧುರಂಧರ್ ನೋಡಿ ಕಲಿಯಿರಿ: ಮೌನ ತಾಳಿದ ಬಾಲಿವುಡ್ ಮಂದಿಗೆ ಆರ್​ಜಿವಿ ಖಡಕ್ ಮಾತು

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾದ ದಿನದಿಂದಲೂ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಈ ಸಿನಿಮಾ, ಈಗಾಗಲೇ ಜಾಗತಿಕವಾಗಿ 1,300 ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಮಾಡುವ ಮೂಲಕ ಹಳೇ ದಾಖಲೆಗಳನ್ನೆಲ್ಲ ಮುರಿದಿದೆ. ಆದರೆ, ಈ ಯಶಸ್ಸಿನ ನಡುವೆಯೂ ಬಾಲಿವುಡ್ ಮಂದಿ ತೋರುತ್ತಿರುವ ಮೌನ ಈಗ ಚರ್ಚೆಗೆ ಕಾರಣವಾಗಿದೆ. ಸದಾ ವಿವಾದಿತ ಹೇಳಿಕೆಗಳಿಂದ ಸುದ್ದಿ ಆಗುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಅವರು ಬಾಲಿವುಡ್ ಮಂದಿಯ ಈ ಮೌನದ ವಿರುದ್ಧ ಕಿಡಿಕಾರಿದ್ದಾರೆ.

ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ವರ್ಮಾ, ‘ಆದಿತ್ಯ ಧರ್ ಈಗಾಗಲೇ ಚಿತ್ರರಂಗದ ಅಡಿಯಲ್ಲಿ ಪರಮಾಣು ಬಾಂಬ್ ಸಿಡಿಸಿದ್ದಾರೆ. ಆದರೆ ಇಡೀ ಇಂಡಸ್ಟ್ರಿ ಈ ಬಗ್ಗೆ ವಹಿಸಿರುವ ಭಯಾನಕ ಮೌನ ನನಗೆ ಆಘಾತ ತಂದಿದೆ’ ಎಂದು ಬರೆದುಕೊಂಡಿದ್ದಾರೆ. ‘ಈ ಸಿನಿಮಾವನ್ನು ನೋಡಿ ಕಲಿಯಿರಿ’ ಎಂದು ಅವರು ಕಿವಿಮಾತು ಹೇಳಿದ್ದಾರೆ.

‘ಧುರಂಧರ್ 2 ಸಿನಿಮಾದ ಸ್ಫೋಟಕ್ಕೆ ಚಿತ್ರರಂಗದವರೆಲ್ಲರೂ ಬಾಹ್ಯಾಕಾಶಕ್ಕೆ ಹಾರಿ ಹೋಗಿದ್ದಾರಾ? ಅದಕ್ಕಾಗಿಯೇ ಅವರ ಚಪ್ಪಾಳೆ ನಮಗೆ ಕೇಳಿಸುತ್ತಿಲ್ಲವೇ? ಅಥವಾ ಇದೊಂದು ಕೇವಲ ಪ್ರೊಪಗಾಂಡ ಎಂದು ಭ್ರಮೆಯಲ್ಲಿದ್ದಾರಾ? ಅಥವಾ ಈ ಚಿತ್ರದ ಅದ್ಭುತ ಮೇಕಿಂಗ್ ನೋಡಿ ತಾವಿನ್ನು ಮುಂದೆ ಇಂತಹ ಸಿನಿಮಾ ಮಾಡಲು ಸಾಧ್ಯವಿಲ್ಲ ಎಂದು ಪಾರ್ಶ್ವವಾಯು ಪೀಡಿತರಾಗಿದ್ದಾರಾ’ ಎಂದು ಆರ್‌.ಜಿ.ವಿ. ವ್ಯಂಗ್ಯವಾಡಿದ್ದಾರೆ.

ಈ ಚಿತ್ರದ ಯಶಸ್ಸನ್ನು ಕಡೆಗಣಿಸುವುದು ಮೂರ್ಖತನ ಎಂದು ರಾಮ್ ಗೋಪಾಲ್ ವರ್ಮಾ ಅಭಿಪ್ರಾಯಪಟ್ಟಿದ್ದಾರೆ. ‘ನಿಮ್ಮ ಕಣ್ಣೆದುರೇ ಬೆಂಕಿ ಉಗುಳುತ್ತಿರುವ ಡೈನೋಸಾರ್‌ನಂತಹ ಈ ಸಿನಿಮಾವನ್ನು ಕಡೆಗಣಿಸಲು ಹೇಗೆ ಸಾಧ್ಯ? ಈ ಸಿನಿಮಾದ ಬಾಕ್ಸ್ ಆಫೀಸ್ ಸದ್ದು ನಿಮ್ಮ ಕಾಲ ಕೆಳಗಿನ ನೆಲವನ್ನೇ ನಡುಗಿಸುತ್ತಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಜಾತಿ, ಧರ್ಮ ಮುಖ್ಯವಲ್ಲ’; ರೆಹಮಾನ್​ಗೆ ತಿರುಗೇಟು ಕೊಟ್ಟ ರಾಮ್ ಗೋಪಾಲ್ ವರ್ಮ

‘ನನ್ನ ಎಲ್ಲಾ ಸಿನಿಮಾ ಮಿತ್ರರಿಗೆ ಒಂದು ಸಲಹೆ. ಇದು ಸಿನಿಮಾ ಮೇಕಿಂಗ್‌ನ ಹೊಸ ಕೋರ್ಸ್ ಇದ್ದಂತೆ. ದಯವಿಟ್ಟು ಧುರಂಧರ್ 2 ಸಿನಿಮಾವನ್ನು ಗಂಭೀರವಾಗಿ ಅಧ್ಯಯನ ಮಾಡಿ. ಇಲ್ಲವಾದರೆ 2026ರ ಮಾರ್ಚ್ 19ರ ನಂತರದ ಸಿನಿಮಾದ ಸ್ಮಶಾನದಲ್ಲಿ ನೀವು ಹೂತುಹೋಗುತ್ತೀರಿ’ ಎಂದು ಖಡಕ್ ಆಗಿ ಹೇಳಿದ್ದಾರೆ. ಎಸ್.ಎಸ್. ರಾಜಮೌಳಿ, ಕರಣ್ ಜೋಹರ್, ಆಲಿಯಾ ಭಟ್ ಮುಂತಾದವರು ಈ ಸಿನಿಮಾಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

CSK vs RR Playing XI: ಟಾಸ್ ಗೆದ್ದ ರಾಜಸ್ಥಾನ್; ಧೋನಿ, ಬ್ರೆವಿಸ್ ಇಲ್ಲದೆ ಕಣಕ್ಕಿಳಿದ ಸಿಎಸ್​ಕೆ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2026 ರ ಮೊದಲ ಪಂದ್ಯವು ಮಾರ್ಚ್ 30, 2026 ರಂದು ಅಸ್ಸಾಂನ ಗುವಾಹಟಿಯಲ್ಲಿರುವ ಬಾರ್ಬರಪ್ಪ ​​ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಕಳೆದ ಸೀಸನ್‌ನಲ್ಲಿ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದವು. ಪರಿಣಾಮವಾಗಿ, ಎರಡೂ ತಂಡಗಳು ಈ ಸೀಸನ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸುವ ಇರಾದೆಯಲ್ಲಿವೆ. ಐಪಿಎಲ್‌ನ ಮೊದಲ ಆವೃತ್ತಿಯ ಚಾಂಪಿಯನ್ ಆಗಿರುವ ರಾಜಸ್ಥಾನ್ ರಾಯಲ್ಸ್, ಐದು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದ್ದು, ಇದೀಗ ಈ ಪಂದ್ಯದ ಟಾಸ್ ಕೂಡ ಮುಗಿದಿದೆ.

ಟಾಸ್ ಗೆದ್ದ ರಾಜಸ್ಥಾನ್

ಟಾಸ್ ಗೆದ್ದ ರಾಜಸ್ಥಾನ್ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಿಎಸ್​ಕೆ ಮೊದಲು ಬ್ಯಾಟಿಂಗ್ ಮಾಡಲಿದೆ. ಗುವಾಹಟಿಯಲ್ಲಿ ಮಳೆ ಬಿದ್ದಿರುವ ಕಾರಣ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾಗಿ ಪರಾಗ್ ಹೇಳಿದರು. ಇದರೊಂದಿಗೆ ತಂಡದ ಆಡುವ ಹನ್ನೊಂದರ ಬಳಗವನ್ನು ಖಚಿತಪಡಿಸಿದರು. ಇತ್ತ ಟಾಸ್ ಸೋತ ಬಳಿಕ ಮಾತನಾಡಿದ ಸಿಎಸ್​ಕೆ ನಾಯಕ ರುತುರಾಜ್ ತಾವು ಕೂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದಾಗಿ ಹೇಳಿದರು. ಈ ಮೊದಲೇ ವರದಿಯಾದ್ದಂತೆ ಈ ಪಂದ್ಯದಲ್ಲಿ ಸಿಎಸ್​ಕೆ, ಧೋನಿ ಹಾಗೂ ಡೆವಾಲ್ಡ್ ಬ್ರೆವಿಸ್ ಇಲ್ಲದೆ ಕಣಕ್ಕಿಳಿಯುತ್ತಿದೆ.

ಮುಖಾಮುಖಿ ದಾಖಲೆ

ರಾಜಸ್ಥಾನ ಮತ್ತು ಚೆನ್ನೈ ನಡುವಿನ ಮುಖಾಮುಖಿಯಲ್ಲಿ ಎರಡೂ ತಂಡಗಳು ಸಮಬಲದ ಹೋರಾಟ ನೀಡಿವೆ. ಎರಡೂ ತಂಡಗಳ ನಡುವೆ ಇದುವರೆಗೆ ಒಟ್ಟು 31 ಪಂದ್ಯಗಳು ನಡೆದಿದ್ದು, ಇದರಲ್ಲಿ ಚೆನ್ನೈ 16 ಪಂದ್ಯಗಳಲ್ಲಿ ಗೆದ್ದರೆ, ರಾಜಸ್ಥಾನ 15 ಪಂದ್ಯಗಳಲ್ಲಿ ಗೆದ್ದಿದೆ. ಇನ್ನು ಕಳೆದ ನಾಲ್ಕು ಆವೃತ್ತಿಗಳಲ್ಲಿ, ಎರಡೂ ತಂಡಗಳು ಒಟ್ಟು ಆರು ಪಂದ್ಯಗಳನ್ನು ಆಡಿದ್ದು, ಇದರಲ್ಲಿ ರಾಜಸ್ಥಾನ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಈ ಆರು ಪಂದ್ಯಗಳಲ್ಲಿ ರಾಜಸ್ಥಾನ ಐದು ಪಂದ್ಯಗಳನ್ನು ಗೆದ್ದರೆ, ಚೆನ್ನೈ 2024 ರಲ್ಲಿ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಯಿತು. ಉಳಿದಂತೆ ಐಪಿಎಲ್ 2025 ರಲ್ಲಿ ಆಡಿದ ಎರಡೂ ಪಂದ್ಯಗಳನ್ನು ರಾಜಸ್ಥಾನ ಗೆದ್ದಿತು.

ಉಭಯ ತಂಡಗಳ ಪ್ಲೇಯಿಂಗ್ 11

ಸಿಎಸ್​ಕೆ:ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್(ನಾಯಕ), ಆಯುಷ್ ಮ್ಹಾತ್ರೆ, ಮ್ಯಾಥ್ಯೂ ಶಾರ್ಟ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಜೇಮಿ ಓವರ್ಟನ್, ನೂರ್ ಅಹ್ಮದ್, ಮ್ಯಾಟ್ ಹೆನ್ರಿ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.

ರಾಜಸ್ಥಾನ್: ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ರಿಯಾನ್ ಪರಾಗ್(ನಾಯಕ), ಶಿಮ್ರೋನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ.

Source link

IPL 2026: ಆರ್​ಸಿಬಿ ಪರ ಆಡಲು ರಾಷ್ಟ್ರೀಯ ತಂಡ ತೊರೆಯಲು ನಿರ್ಧರಿಸಿದ ಸ್ಟಾರ್ ವೇಗಿ

2026 ರ ಐಪಿಎಲ್ (IPL 2026) ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯಕ್ಕಾಗಿ ತಯಾರಿ ನಡೆಸುತ್ತಿದೆ. ಆರ್​ಸಿಬಿಯ (RCB) ಮುಂದಿನ ಸಿಎಸ್​ಕೆ ವಿರುದ್ಧ ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ. ಅಂದರೆ ಈ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಆದಾಗ್ಯೂ ಆರ್​ಸಿಬಿ ತಂಡವನ್ನು ಸೇರಲು ಪಣತೊಟ್ಟಿರುವ ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ (Nuwan Thushara), ಲಂಕಾ ಕ್ರಿಕೆಟ್ ಮಂಡಳಿಯ ಕೇಂದ್ರ ಒಪ್ಪಂದದಿಂದ ಹೊರಬರಲು ನಿರ್ಧರಿಸಿದ್ದಾರೆ. ಹೀಗಾಗಿ ಅವರು ನನ್ನನ್ನು ಕೇಂದ್ರ ಒಪ್ಪಂದದಲ್ಲಿ ಸೇರಿಸದಂತೆ ಲಂಕಾ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ವಾಸ್ತವವಾಗಿ ಫಿಟ್‌ನೆಸ್ ಪರೀಕ್ಷೆಯಲ್ಲಿ ವಿಫಲರಾದ ಕಾರಣದಿಂದಾಗಿ ನುವಾನ್ ತುಷಾರ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಯಾವುದೇ ಆಟಗಾರ ವಿದೇಶಿ ಲೀಗ್‌ಗಳಲ್ಲಿ ಆಡಲು ಸಾಧ್ಯವಿಲ್ಲ ಎಂಬುದು ಶ್ರೀಲಂಕಾ ಕ್ರಿಕೆಟ್‌ನ ನೀತಿಯಾಗಿದೆ. ಹೀಗಾಗಿ ಫಿಟ್‌ನೆಸ್ ಪರೀಕ್ಷೆಯಲ್ಲಿ ಫೇಲ್ ಆಗಿರುವ ತುಷಾರ ಐಪಿಎಲ್​ನಲ್ಲಿ ಆರ್‌ಸಿಬಿ ತಂಡವನ್ನು ಇದುವರೆಗೂ ಸೇರಲಾಗಿಲ್ಲ.

ನುವಾನ್ ತುಷಾರ ಐಪಿಎಲ್ ವೃತ್ತಿಜೀವನ

ನುವಾನ್ ತುಷಾರ ಅವರನ್ನು ಆರ್​ಸಿಬಿ 1.6 ಕೋಟಿ ರೂಪಾಯಿಗಳಿಗೆ ಖರೀದಿಸಿದೆ. ಆದಾಗ್ಯೂ, ಶ್ರೀಲಂಕಾ ಕ್ರಿಕೆಟ್ ಅವರಿಗೆ ಎನ್​ಒಸಿ ನೀಡಿಲ್ಲ. ಹೀಗಾಗಿ ಅವರು ಇದುವರೆಗೆ ತಂಡವನ್ನು ಸೇರಲಾಗಿಲ್ಲ. ಇದುವರೆಗೆ ಐಪಿಎಲ್​ನಲ್ಲಿ 8 ಪಂದ್ಯಗಳನ್ನಾಡಿರುವ ನುವಾನ್ ತುಷಾರ 9 ವಿಕೆಟ್‌ಗಳನ್ನು ಕಬಳಿಸಿದ್ದಾರೆ. 2024 ರ ಐಪಿಎಲ್​ನಲ್ಲಿ ಮುಂಬೈ ಪರ ಆಡಿದ್ದ ತುಷಾರ, ಕಳೆದ ವರ್ಷ ಆರ್​ಸಿಬಿ ಪರ ಕೇವಲ ಒಂದು ಪಂದ್ಯವನ್ನು ಆಡಿದ್ದರು. ಇದೀಗ ಫಿಟ್‌ನೆಸ್ ಪರೀಕ್ಷೆಯಲ್ಲಿ ಅನುತೀರ್ಣರಾಗಿರುವ ತುಷಾರ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ.

CSK vs RR IPL 2026 Live Score: ರಾಜಸ್ಥಾನ್- ಸಿಎಸ್​ಕೆ ಮುಖಾಮುಖಿ

ಟಿ20 ಸ್ಪೆಷಲಿಸ್ಟ್ ಬೌಲರ್ ತುಷಾರ

ಟಿ20 ಸ್ಪೆಷಲಿಸ್ಟ್ ಬೌಲರ್​ಗಳ ಪಟ್ಟಿಯಲ್ಲಿ ತುಷಾರ ಕೂಡ ಒಬ್ಬರು. ಅವರ ಆಕ್ಷನ್ ಲಸಿತ್ ಮಾಲಿಂಗ ಅವರಂತೆಯೇ ಇದೆ. ಪವರ್‌ಪ್ಲೇನಲ್ಲಿ ಚೆಂಡನ್ನು ಸ್ವಿಂಗ್ ಮಾಡುವ ಮತ್ತು ಡೆತ್ ಓವರ್‌ಗಳಲ್ಲಿ ಅತ್ಯುತ್ತಮ ಯಾರ್ಕರ್‌ಗಳನ್ನು ಎಸೆಯುವ ಸಾಮರ್ಥ್ಯ ಅವರಿಗಿದೆ. ತುಷಾರ ಶ್ರೀಲಂಕಾ ಪರ 30 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 36 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅವರ ಎಕಾನಮಿ ದರ ಪ್ರತಿ ಓವರ್‌ಗೆ ಕೇವಲ 8.1 ಆಗಿದ್ದು, 20 ರನ್‌ಗಳಿಗೆ 5 ವಿಕೆಟ್‌ ಕಬಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇಗ ಡೀಲ್ ಆಗದಿದ್ದರೆ ಇರಾನ್​ನ ಇಂಧನ ಘಟಕಗಳು, ಖರ್ಗ್ ದ್ವೀಪವನ್ನು ಉಡಾಯಿಸುತ್ತೇವೆ: ಡೊನಾಲ್ಡ್ ಟ್ರಂಪ್ ಕಟ್ಟೆಚ್ಚರಿಕೆ

ನವದೆಹಲಿ, ಮಾರ್ಚ್ 30: ಇರಾನ್​ನ ಹೆಚ್ಚು ಉದಾರಿ ಆಡಳಿತದ ಜೊತೆ ಅಮೆರಿಕದ ಸಂಧಾನ (Negotiations) ನಡೆಸುತ್ತಿದೆ. ಒಂದು ವೇಳೆ, ಈ ಮಾತುಕತೆ ವಿಫಲವಾಗಿ ಶೀಘ್ರದಲ್ಲೇ ಒಪ್ಪಂದಕ್ಕೆ ಬರಲಾಗದಿದ್ದರೆ ಮತ್ತು ಹಾರ್ಮುಜ್ ಜಲಸಂಧಿ ಮುಕ್ತವಾಗದಿದ್ದರೆ ಇರಾನ್​ನ ಇಂಧನ ಮೂಲಸೌಕರ್ಯ (Energy infra), ತೈಲ ಬಾವಿಗಳು (oil wells) ಮತ್ತು ಖರ್ಗ್ ದ್ವೀಪವನ್ನು (Kharg island) ಉಡಾಯಿಸಿಬಿಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಟ್ರಂಪ್ ಅವರು ತಮ್ಮ ಟ್ರೂತ್ ಸೋಷಿಯಲ್ ಪ್ಲಾಟ್​ಫಾರ್ಮ್​ನಲ್ಲಿ ಈ ಬಗ್ಗೆ ಒಂದು ಪೋಸ್ಟ್ ಹಾಕಿದ್ದಾರೆ. ಇರಾನ್​ನಲ್ಲಿ ಅಮೆರಿಕದ ಮಿಲಿಟರಿ ಕಾರ್ಯಾಚರಣೆ ಅಂತ್ಯಗೊಳ್ಳಲು ಅಗತ್ಯವಾದ ಸಂಧಾನಗಳನ್ನು ಗಂಭೀರವಾಗಿ ನಡೆಸಲಾಗುತ್ತಿದೆ. ಇರಾನ್​ನ ಹೊಸ ಮತ್ತು ಹೆಚ್ಚು ಉದಾರಿ ಆಡಳಿತದ ಜೊತೆ ಮಾತುಕತೆ ನಡೆಯುತ್ತಿದೆ ಎಂದೂ ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: ಇರಾನ್​ನ ಖರ್ಗ್ ದ್ವೀಪದ ಮೇಲೆ ಟ್ರಂಪ್​ಗೆ ಕಣ್ಣು? ಅಂಥದ್ದೇನಿದೆ ಅಲ್ಲಿ?

‘ಮಾತುಕತೆಯಲ್ಲಿ ಗಮನಾರ್ಹ ಪ್ರಗತಿ ಸಿಕ್ಕಿದೆ. ಒಪ್ಪಂದ ಬಹಳ ಬೇಗ ಕುದುರಬಹುದು. ಒಂದು ವೇಳೆ ಒಪ್ಪಂದ ಏರ್ಪಡಲು ಆಗದಿದ್ದರೆ ಮತ್ತು ಹಾರ್ಮುಜ್ ಜಲಸಂಧಿಯು ವ್ಯಾಪಾರಕ್ಕೆ ತತ್​ಕ್ಷಣವೇ ತೆರೆಯದಿದ್ದರೆ, ನಾವು ಉದ್ದೇಶಪೂರ್ವಕವಾಗಿ ಮುಟ್ಟದೇ ಸುಮ್ಮನಿರುವ ಇರಾನ್​ನ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕಗಳು, ತೈಲ ಬಾವಿಗಳು ಮತ್ತು ಖರ್ಗ್ ದ್ವೀಪ ಎಲ್ಲವನ್ನೂ ಉಡಾಯಿಸಿ ನಾಶ ಮಾಡುವ ಮೂಲಕ ಇರಾನ್​ನಲ್ಲಿ ನಮ್ಮ ಅದ್ಭುತ ಇರುವಿಕೆಯನ್ನು ಅಂತ್ಯಗೊಳಿಸುತ್ತೇವೆ. ಹಳೆಯ ಆಡಳಿತದ 47 ವರ್ಷದ ಭಯೋತ್ಪಾದನೆಗೆ ಬಲಿಯಾದ ನಮ್ಮ ಹಲವು ಸೈನಿಕರು ಹಾಗು ಇತರರ ಸಾವಿಗೆ ನ್ಯಾಯ ಸಿಕ್ಕಂತಾಗುತ್ತದೆ’ ಎಂದು ಡೊನಾಲ್ಡ್ ಟ್ರಂಪ್ ತಮ್ಮ ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಆರಂಭಿಸಿ ಒಂದು ತಿಂಗಳ ಮೇಲಾಯಿತು. ಫೆಬ್ರುವರಿ 28ರಂದು ಮೊದಲು ದಾಳಿಯಾಗಿದೆ. ಸಾವಿರಾರು ಕ್ಷಿಪಣಿಗಳು, ಡ್ರೋನ್​ಗಳು ಸಾಕಷ್ಟು ಹಾನಿ ತಂದಿವೆ. ಇರಾನ್ ತೀವ್ರ ಪ್ರತಿರೋಧ ಒಡ್ಡುತ್ತಿದೆ. ಇಸ್ರೇಲ್ ಮೇಲೆ ವ್ಯಾಪಕ ವಾಯುದಾಳಿಗಳನ್ನು ಮಾಡಿದೆ. ಅಷ್ಟೇ ಅಲ್ಲ, ಸೌದಿ, ಯುಎಇ ಇತ್ಯಾದಿ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕ ಮಿಲಿಟರಿ ನೆಲೆಗಳು ಹಾಗೂ ಇಂಧನ ಘಟಕಗಳ ಮೇಲೆ ಇರಾನ್ ದಾಳಿ ಮಾಡಿ ಹಾನಿಗೊಳಿಸಿದೆ.

ಇದನ್ನೂ ಓದಿ: ಹಾರ್ಮುಜ್ ನಂತರ ಮತ್ತೊಂದು ಜಲಸಂಧಿ ಕಂಟಕ; ಜಗತ್ತಿಗೆ ಕಾದಿದೆ ಡಬಲ್ ಶಾಕ್

ಇರಾನ್ ಮೇಲೆ ದಾಳಿ ಮಾಡಿದ ಉದ್ದೇಶ ಈಡೇರಿದೆ ಎಂದು ಟ್ರಂಪ್ ಹೇಳಿಕೊಳ್ಳುತ್ತಿದ್ದಾರೆ. ಯುದ್ಧದ ಆರಂಭದಲ್ಲೇ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೆನೈ ಹಾಗೂ ಹಲವಾರು ಇತರ ಮುಖಂಡರನ್ನು ಇಸ್ರೇಲ್ ಮತ್ತು ಅಮೆರಿಕದ ಕಾರ್ಯಾಚರಣೆಯಲ್ಲಿ ಕೊಲ್ಲಲಾಗಿತ್ತು. ಈಗ ವಿಶ್ವದ ಶೇ. 20ರಷ್ಟು ತೈಲ ಸಾಗಣೆಯಾಗುವ ಹಾರ್ಮುಜ್ ಜಲಸಂಧಿಯನ್ನು ಇರಾನ್ ಹಿಡಿತದಿಂದ ಮುಕ್ತಗೊಳಿಸುವುದು ಮತ್ತು ಇರಾನ್​ನ ತೈಲ ಸಾಗಣೆಯ ಕೇಂದ್ರಬಿಂದುವಾಗಿರುವ ಖರ್ಗ್ ದ್ವೀಪವನ್ನು ವಶಪಡಿಸಿಕೊಳ್ಳುವುದು ಅಮೆರಿಕದ ಮತ್ತೊಂದು ಗುರಿ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ

ಹಾಸನ, ಮಾರ್ಚ್​ 30: ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ನಾಲ್ವರಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್​ನಲ್ಲಿದ್ದ ಗ್ಯಾಸ್ ಖಾಲಿಯಾದ ಹಿನ್ನೆಲೆಯಲ್ಲಿ ಬದಲಾವಣೆ ಮುಂದಾಗಿದ್ದಾರೆ. ಗ್ಯಾಸ್ ತುಂಬಿದ್ದ ಸಿಲಿಂಡರ್​ಗೆ ರೆಗ್ಯುಲೇಟರ್ ಅಳವಡಿಸುವಾಗ ಅಡುಗೆ ಅನಿಲ ಸೋರಿಕೆಯಾಗಿ ಏಕಾಏಕಿ ಸ್ಫೋಟವಾಗಿದೆ. ಮಹಿಳೆ, ಪುತ್ರ ಸೇರಿದಂತೆ ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸುಂದರೇಶ್ ಮನೆಯಲ್ಲಿ ಘಟನೆ ನಡೆದಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version