Headlines

ತಾಳ್ಮೆ ಕಳೆದುಕೊಂಡ ರಘುವಂಶಿಗೆ 4.28 ಲಕ್ಷ ರೂ. ದಂಡ! – Kannada News | IPL 2026: KKR’s Angkrish Raghuvanshi Fined

ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಉದಯೋನ್ಮುಖ ಬ್ಯಾಟರ್ ಅಂಗ್​ಕ್ರಿಶ್ ರಘುವಂಶಿ ಅವರಿಗೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂದ್ಯದ ಸಂಭಾವನೆಯಲ್ಲಿ ಶೇ. 20 ರಷ್ಟು ದಂಡ ವಿಧಿಸಲಾಗಿದೆ. ಇದರೊಂದಿಗೆ ಅವರ ಶಿಸ್ತಿನ ದಾಖಲೆಗೆ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ. ಏಪ್ರಿಲ್ 26 ರಂದು ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ನಡೆದ ಪಂದ್ಯದಲ್ಲಿ ಅಂಗ್​ಕ್ರಿಶ್ ರಘುವಂಶಿ ಅವರು ‘ಫೀಲ್ಡಿಂಗ್‌ಗೆ ಅಡ್ಡಿಪಡಿಸಿದ’ (Obstructing the field) ಕಾರಣಕ್ಕಾಗಿ ಔಟ್ ಎಂದು ಘೋಷಿಸಲಾಯಿತು. ಅಂಪೈರ್ ತೀರ್ಪಿನಿಂದ ತೀವ್ರ…

Read More

Video: ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನಾ ಹೆಲಿಕಾಪ್ಟರ್‌ ಬಳಕೆ – Kannada News | NEET UG 2026: Re Examination Details, Security Measures, and Student Concerns

ಜೂನ್ 21ರಂದು ದೇಶಾದ್ಯಂತ ನೀಟ್ ಯುಜಿ (NEET UG) ಮರು ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಜ್ಜಾಗಿದೆ. ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಈ ಬಾರಿ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ 2:30 ರಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ 15 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 552 ನಗರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನೆಯ ಹೆಲಿಕಾಪ್ಟರ್‌ ಮತ್ತು ವಿಮಾನಗಳನ್ನು ಬಳಸಿಕೊಳ್ಳಲಾಗಿದೆ. ಸಿಆರ್‌ಪಿಎಫ್…

Read More

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಪೊಲೀಸರ ಮೇಲೆಯೇ ಕಿಡಿಗೇಡಿಗಳಿಂದ ಹಲ್ಲೆ! ಇಬ್ಬರ ಬಂಧನ – Kannada News | Bengaluru Crime: Software Engineer and Student Arrested for Attacking Police Constables in Amruthahalli

ಬೆಂಗಳೂರು, ಮೇ 7: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನೈಟ್ ಬೀಟ್ ಮಾಡುವ ಪೊಲೀಸ್ ಸಿಬ್ಬಂದಿಗೇ ರಕ್ಷಣೆ ಇಲ್ಲದಂತಾಗಿದೆ. ತಡರಾತ್ರಿ ನಿರ್ಜನ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದದ್ದನ್ನು ಪ್ರಶ್ನಿಸಿದಕ್ಕೆ, ಕರ್ತವ್ಯ ನಿರತ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯಾಂಶಗಳು ಅಮೃತಹಳ್ಳಿ ಠಾಣೆಯ ಕಾನ್‌ಸ್ಟೆಬಲ್‌ಗಳಾದ ರುದ್ರಪ್ಪ ಮತ್ತು ಹನುಮಂತು ಅವರ ಮೇಲೆ ಹಲ್ಲೆ. ಪಜೇರೋ ಕಾರಿನಲ್ಲಿ ನೈಟ್ ಔಟ್…

Read More

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ: ದಾಳಿ ವೇಳೆ ಕಂಪನಿಯ ಸರ್ವರ್​​ ಡೌನ್​​ ಮಾಡಿ ಕಳ್ಳಾಟ? – Kannada News

ಬೆಳಗಾವಿ, ಜೂನ್​ 04: ಶಿವಂ ಅಸೋಸಿಯೇಟ್ಸ್ ಸಂಸ್ಥೆಯಿಂದ ಸಾವಿರಾರು ಕೋಟಿ ಅಕ್ರಮ ಸಂಬಂಧ ತನಿಖೆ ನಡೆಯುತ್ತಿರುವ ನಡುವೆಯೇ ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಭಾಗ್ಯ ನಗರದಲ್ಲಿರುವ ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್​​ ಲಿಮಿಟೆಡ್​​ ಕಂಪನಿ ಮೇಲೆ ಎಸಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೇಡ್​​ ಕುರಿತು ಮಾಹಿತಿ ಸಿಗುತ್ತಿದ್ದಂತೆ ಆನ್ ಲೈನ್ ಮೂಲಕ ವ್ಯವಹಾರ ನಡೆಸುತ್ತಿದ್ದ ಕಂಪನಿಯ ವೆಬ್​​ಸೈಟ್​​ ಸ್ಥಗಿತವಾಗಿದೆ. ಹೀಗಾಗಿ ಕಂಪನಿ ಮಾಲಿಕ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸಲು ಮುಂದಾದರಾ ಎಂಬ ಅನುಮಾನವೂ ವ್ಯಕ್ತವಾಗಿದೆ….

Read More

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್? – Kannada News | 2026 T20 World Cup: Pakistan’s Participation Doubtful After Bangladesh’s Exclusion

2026 ರ ಐಸಿಸಿ ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ತಂಡ ಭಾಗವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಬಾಂಗ್ಲಾದೇಶ ಈಗಾಗಲೇ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಮ್ಮ ತಂಡದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದು, ಪಾಕಿಸ್ತಾನ ಪಂದ್ಯಾವಳಿಯಲ್ಲಿ ಭಾಗವಹಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದಿದ್ದಾರೆ. ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್…

Read More

Daily Devotional: ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ ! – Kannada News | Daily Devotional: Three Zodiac Signs Should Avoid Black Clothes Until Ugadi

ಬೆಂಗಳೂರು, ಜನವರಿ 26: ಬಣ್ಣಗಳು ಮತ್ತು ವಸ್ತ್ರಗಳು ನಮ್ಮ ಮನಸ್ಸು ಹಾಗೂ ಜೀವನದ ಮೇಲೆ ಗಣನೀಯ ಪ್ರಭಾವ ಬೀರುತ್ತವೆ. ಕೆಲವು ಬಣ್ಣಗಳು ಅದೃಷ್ಟ ತಂದರೆ, ಇನ್ನು ಕೆಲವು ದುರಾದೃಷ್ಟವನ್ನು ತರಬಹುದು. ಕಪ್ಪು ಬಣ್ಣವು ಶನಿಯ ಪ್ರತೀಕವಾಗಿದೆ. ಪ್ರತಿಯೊಂದು ಬಣ್ಣಕ್ಕೂ ತನ್ನದೇ ಆದ ಶಕ್ತಿ ಇರುತ್ತದೆ, ಅದು 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ. ಯುಗಾದಿಯ (ಮಾರ್ಚ್ 19) ತನಕ ಮೂರು ನಿರ್ದಿಷ್ಟ ರಾಶಿಚಕ್ರದವರಿಗೆ ಕಪ್ಪು ಬಟ್ಟೆಗಳನ್ನು ಧರಿಸುವುದು ಅಶುಭಕರವೆಂದು ಪರಿಗಣಿಸಲಾಗಿದೆ. ಮೇಷ, ಕರ್ಕಾಟಕ, ಮತ್ತು ಕನ್ಯಾ ರಾಶಿಗಳಿಗೆ…

Read More

India Test Squad: ಭಾರತ ಟೆಸ್ಟ್ ತಂಡ ಪ್ರಕಟ – Kannada News | India women’s squad for Australia Test Series

ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಹರ್ಮನ್​ಪ್ರೀತ್ ಕೌರ್​ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಪ್ರತೀಕಾ ರಾವಲ್ ಕೂಡ ಕಾಣಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್​ನ ಅಂತಿಮ ಪಂದ್ಯಗಳ ವೇಳೆ ಗಾಯಗೊಂಡಿದ್ದ ಪ್ರತೀಕಾ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಹೀಗಾಗಿ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಈ ಬಾರಿ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪತ್ರೀಕಾ ಇನಿಂಗ್ಸ್…

Read More

ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 

ಅರುಣ್ ಗೌಡ ಹಾಗೂ ಅಮೃತವರ್ಷಿಣಿ ರಜಿನಿ ವಿವಾಹ ಆಗಿದ್ದಾರೆ. ಅರುಣ್ ಫಿಟ್ನೆಸ್ ಟ್ರೇನರ್. ರಜಿನಿ ಹಾಗೂ ಅರುಣ್​​ಗೆ ಪರಿಚಯ ಆಗಿದ್ದು ಜಿಮ್ ಅಲ್ಲಿಯೇ. ಈಗ ಇಬ್ಬರೂ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಅರುಣ್ ಅವರು ಶೋನಲ್ಲಿ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ. ಅವರು ಕಾಲುಂಗರ ಧರಿಸುತ್ತಾರಂತೆ. ‘ಮಮ್ಮಿಗೆ (ರಜಿನಿ) ಕಮಿಟ್ ಆಗಿದ್ದೇನೆ ಎಂಬುದರ ಅರ್ಥ ಇದು’ ಎಂದು ಅರುಣ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು! – Kannada News | Rare Pediatric Surgery: Medicover Bengaluru Removes 480g Hairball from 2 Year Old Pica Patient

ಬೆಂಗಳೂರು, ಮೇ.16: ಸಿಲಿಕಾನ್ ಸಿಟಿಯ ಮೆಡಿಕವರ್ ಆಸ್ಪತ್ರೆಯ ವೈದ್ಯರು ಅತ್ಯಂತ ಅಪರೂಪದ ಮತ್ತು ಸಂಕೀರ್ಣವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ 2 ವರ್ಷದ ಪುಟ್ಟ ಮಗುವಿಗೆ ಮರುಜೀವ ನೀಡಿದ್ದಾರೆ. ಮಗುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 480 ಗ್ರಾಂ ತೂಕದ ಕೂದಲಿನ ಗುಡ್ಡೆ ಹಾಗೂ ರಬ್ಬರ್ ಬ್ಯಾಂಡ್‌ಗಳನ್ನು ಲ್ಯಾಪರೋಸ್ಕೊಪಿಕ್ ಶಸ್ತ್ರಚಿಕಿತ್ಸೆಯ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ವೈದ್ಯಕೀಯ ಜಗತ್ತಿನಲ್ಲಿ ಆಹಾರವಲ್ಲದ ವಸ್ತುಗಳನ್ನು (ಕೂದಲು, ರಬ್ಬರ್, ಪ್ಲಾಸ್ಟಿಕ್ ಇತ್ಯಾದಿ) ತಿನ್ನುವ ಇಂತಹ ವಿಚಿತ್ರ ಮಾನಸಿಕ ಮತ್ತು ದೈಹಿಕ ಅಭ್ಯಾಸವನ್ನು ‘ಪೈಕಾ’ (Pica) ಎನ್ನಲಾಗುತ್ತದೆ….

Read More

Vastu Tips: ಸ್ನಾನಗೃಹದಲ್ಲಿ ಕನ್ನಡಿ ಇಡಬಾರದೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Vastu Tips for Bathroom Mirrors: Proper Placement for Positive Energy

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿಯೊಂದು ಭಾಗವೂ ನಮ್ಮ ಜೀವನದ ಮೇಲೆ ಯಾವುದೋ ರೀತಿಯ ಪ್ರಭಾವ ಬೀರುತ್ತದೆ. ಅದರಲ್ಲಿ ಸ್ನಾನಗೃಹವೂ ಪ್ರಮುಖವಾದ ಸ್ಥಳ ಎಂದು ಪರಿಗಣಿಸಲಾಗುತ್ತದೆ. ಸ್ನಾನಗೃಹದ ಸ್ವಚ್ಛತೆಯ ಜೊತೆಗೆ, ಅಲ್ಲಿ ಇರಿಸಲಾಗುವ ವಸ್ತುಗಳ ವ್ಯವಸ್ಥೆಯೂ ಅಷ್ಟೇ ಮಹತ್ವದ್ದಾಗಿದೆ. ವಿಶೇಷವಾಗಿ, ಸ್ನಾನಗೃಹದಲ್ಲಿ ಇಡುವ ಕನ್ನಡಿಯ ಬಗ್ಗೆ ವಾಸ್ತು ಮತ್ತು ಜ್ಯೋತಿಷ್ಯದಲ್ಲಿ ಕೆಲವು ಪ್ರಮುಖ ನಿಯಮಗಳನ್ನು ಹೇಳಲಾಗಿದೆ. ಸರಿಯಾದ ರೀತಿಯಲ್ಲಿ ಇಡಲಾದ ಕನ್ನಡಿ ಸಕಾರಾತ್ಮಕ ಶಕ್ತಿಯನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂಬ ನಂಬಿಕೆಯಿದೆ. ಕನ್ನಡಿಯನ್ನು ಇಡುವ ಸರಿಯಾದ ದಿಕ್ಕು:…

Read More