IAF Recruitment: ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿ; ಗೇಟ್ ಸ್ಕೋರ್ ಮೂಲಕ ನೇರ ಆಯ್ಕೆಗೆ ಸುವರ್ಣಾವಕಾಶ!

ವಾಯುಪಡೆಯಲ್ಲಿ ತಾಂತ್ರಿಕ ಅಧಿಕಾರಿಗಳ ನೇಮಕಾತಿImage Credit source: Pinterest

ದೇಶದ ಯುವ ಎಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ವಾಯುಪಡೆಯು (IAF) ಸುವರ್ಣ ಅವಕಾಶವೊಂದನ್ನು ಘೋಷಿಸಿದೆ. ವಾಯುಪಡೆಯ ತಾಂತ್ರಿಕ ಶಾಖೆಯ (ಆಫೀಸರ್ ಕೇಡರ್) ನೇಮಕಾತಿಗಾಗಿ ಹೊಸ ಉಪಕ್ರಮವೊಂದನ್ನು ಪ್ರಾರಂಭಿಸಲಾಗಿದ್ದು, ಇದರ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ತಮ್ಮ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (GATE) ಅಂಕಗಳ ಆಧಾರದ ಮೇಲೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಗೇಟ್ ಸ್ಕೋರ್ ಆಧಾರದ ಮೇಲೆ ನೇರ ಕಿರುಪಟ್ಟಿ:

ಈ ಹೊಸ ಯೋಜನೆಯ ಅಡಿಯಲ್ಲಿ, ಮಾನ್ಯವಾದ GATE ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳು ವಾಯುಪಡೆ ಆಯ್ಕೆ ಮಂಡಳಿಯ (AFSB) ಪರೀಕ್ಷೆಗೆ ನೇರ ಆಯ್ಕೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಗಳಿಸಿರುವ ಗೇಟ್ ಅಂಕಗಳ ಅರ್ಹತೆಯ (Merit) ಆಧಾರದ ಮೇಲೆಯೇ ಈ ಶಾರ್ಟ್‌ಲಿಸ್ಟ್ ಪ್ರಕ್ರಿಯೆಯು ನಡೆಯಲಿದ್ದು, ಪ್ರತಿಭಾವಂತ ಎಂಜಿನಿಯರ್‌ಗಳಿಗೆ ವಾಯುಪಡೆ ಸೇರಲು ಇದೊಂದು ಸುಲಭ ಮಾರ್ಗವಾಗಿದೆ.

ಪ್ರಾಥಮಿಕ ಲಿಖಿತ ಪರೀಕ್ಷೆಯಿಂದ (AFCAT) ಮುಕ್ತಿ:

ಈ ಹೊಸ ಉಪಕ್ರಮದ ಪ್ರಮುಖ ವೈಶಿಷ್ಟ್ಯವೆಂದರೆ, ಗೇಟ್ ಸ್ಕೋರ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಾಯುಪಡೆಯ ಪ್ರಾಥಮಿಕ ಲಿಖಿತ ಪರೀಕ್ಷೆಯಾದ ‘ವಾಯುಪಡೆಯ ಸಾಮಾನ್ಯ ಪ್ರವೇಶ ಪರೀಕ್ಷೆ’ (AFCAT) ಇಂದ ವಿನಾಯಿತಿ ನೀಡಲಾಗುತ್ತದೆ. ಇದರಿಂದಾಗಿ ಅಭ್ಯರ್ಥಿಗಳು ಮತ್ತೊಂದು ಲಿಖಿತ ಪರೀಕ್ಷೆ ಬರೆಯುವ ಒತ್ತಡವಿಲ್ಲದೆ, ನೇರವಾಗಿ ಮುಂದಿನ ಹಂತದ ಪರೀಕ್ಷೆ ಮತ್ತು ಸಂದರ್ಶನವನ್ನು ಎದುರಿಸಬಹುದಾಗಿದೆ.

ಇದನ್ನೂ ಓದಿ: ನಟ ವಿಜಯ್ ಪುತ್ರಿ ದಿವ್ಯಾ ಸಾಶಾ ಬಗ್ಗೆ ನಿಮಗೆಷ್ಟು ಗೊತ್ತು? ಶೈಕ್ಷಣಿಕ ಹಿನ್ನೆಲೆಯ ಬಗ್ಗೆ ಇಲ್ಲಿದೆ ಮಾಹಿತಿ

ಅಭ್ಯರ್ಥಿಗಳಿಗೆ ಗರಿಷ್ಠ ನಮ್ಯತೆ ಮತ್ತು ಹೆಚ್ಚಿನ ಅವಕಾಶ:

ಅಭ್ಯರ್ಥಿಗಳಿಗೆ ವಾಯುಪಡೆ ಸೇರಲು ಗರಿಷ್ಠ ಅವಕಾಶ ಮತ್ತು ನಮ್ಯತೆಯನ್ನು ಒದಗಿಸಲು ರಕ್ಷಣಾ ಸಚಿವಾಲಯ ನಿರ್ಧರಿಸಿದೆ. ಹೀಗಾಗಿ, ಅರ್ಹ ಅಭ್ಯರ್ಥಿಗಳು ತಮ್ಮ ಇಚ್ಛೆಯನುಸಾರ ಹಾಗೂ ತಮಗೆ ಅನುಕೂಲವಾಗುವಂತೆ AFCAT ಪರೀಕ್ಷೆಯ ಮೂಲಕ ಅಥವಾ GATE ಸ್ಕೋರ್ ಯೋಜನೆಯ ಮೂಲಕ ತಾಂತ್ರಿಕ ಶಾಖೆಗೆ ಅರ್ಜಿ ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

ತಾಂತ್ರಿಕ ಶಾಖೆಗೆ ಮಾತ್ರ ಈ ಯೋಜನೆ ಅನ್ವಯ:

ಈ ಹೊಸ ಗೇಟ್ ಸ್ಕೋರ್ ಆಧಾರಿತ ನೇಮಕಾತಿ ಯೋಜನೆಯು ಕೇವಲ ತಾಂತ್ರಿಕ ಶಾಖೆಯ ಆಫೀಸರ್ ಕೇಡರ್ ನೇಮಕಾತಿಗೆ ಮಾತ್ರ ಅನ್ವಯಿಸುತ್ತದೆ ಎಂಬುದನ್ನು ಸಚಿವಾಲಯ ಸ್ಪಷ್ಟಪಡಿಸಿದೆ. ತಾಂತ್ರಿಕ ಶಾಖೆ ಸೇರಿದಂತೆ ವಾಯುಪಡೆಯ ಇತರೆ ಎಲ್ಲಾ ಶಾಖೆಗಳ ನೇಮಕಾತಿಗೆ ಎಂದಿನಂತೆ AFCAT ಪರೀಕ್ಷೆಯು ಪ್ರಮಾಣಿತ ಪ್ರವೇಶ ಪರೀಕ್ಷೆಯಾಗಿ ಮುಂದುವರಿಯುತ್ತದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾಣಿ–ಮೈಸೂರು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು!: ಬೈಕ್ ಸವಾರನ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ಅಪಘಾತದ ದೃಶ್ಯ!

ಪೆರಾಜೆ, ಮೇ,27 : ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಬಳಿ ಭೀಕರ ಕಾರು ಅಪಘಾತವೊಂದು ಸಂಭವಿಸಿದೆ. ಹಿಂದಿನಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ (Tempo Traveller) ವಾಹನಕ್ಕೆ ದಾರಿ ಬಿಟ್ಟುಕೊಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಆಳವಾದ ಚರಂಡಿಗೆ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ಕಾರು ಹೆದ್ದಾರಿಯುದ್ದಕ್ಕೂ ಅತ್ಯಂತ ಬೇಜವಾಬ್ದಾರಿತನ ಹಾಗೂ ರಸ್ತೆಯ ಎಡ-ಬಲಕ್ಕೆ ಅಡ್ಡಾದಿಡ್ಡಿಯಾಗಿ (Swerving) ಸಂಚರಿಸುತ್ತಿತ್ತು. ಕಾರಿನ ಹಿಂದೆಯೇ ಬರುತ್ತಿದ್ದ ಬೈಕ್ ಸವಾರನೊಬ್ಬ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಈ ಘಟನೆಯನ್ನು ಸೆರೆಹಿಡಿದಿದ್ದ ಎನ್ನಲಾಗಿದೆ. ರಸ್ತೆಯ ತಿರುವಿನಲ್ಲಿ ಹಿಂದಿನಿಂದ ವೇಗವಾಗಿ ಬಂದ ಟೆಂಪೋ ಟ್ರಾವೆಲರ್‌ಗೆ ಸೈಡ್ ನೀಡಲು ಚಾಲಕ ಯತ್ನಿಸಿದಾಗ ಕಾರು ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದೆ. ಕಾರು ರಸ್ತೆ ಬದಿಯ ಚರಂಡಿಗೆ ಜೋರಾಗಿ ಡಿಕ್ಕಿ ಹೊಡೆದು, ಟೆಂಪೋ ಟ್ರಾವೆಲರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಭಾರಿ ಹಾನಿಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಏನೆಲ್ಲ ಚರ್ಚೆ?

ಬೆಂಗಳೂರು, ಮೇ 27: ನಾಯಕತ್ವ ಬದಲಾವಣೆ ರಾಜ್ಯದಲ್ಲಿ ನಿಶ್ಚಿತ, ಹಾಲಿ ಸಿಎಂ ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯ ನಡುವೆಯೂ ಈ ಕುರಿತ ಗೌಪ್ಯತೆಯನ್ನು ಸಿದ್ದರಾಮಯ್ಯ ಕಾಯ್ದುಕೊಂಡಿದ್ದಾರೆ. ಎಲ್ಲೂ ಈ ಬಗ್ಗೆ ಮೌನ ಮುರಿಯದ ಅವರು, ಕಾವೇರಿ ನಿವಾಸದಲ್ಲಿ 30ಕ್ಕೂ ಹೆಚ್ಚು ಶಾಸಕರ ಜೊತೆ ಸಭೆ ನಡೆಸಿರೋದು ಕುತೂಹಲ ಮೂಡಿಸಿದೆ. ಸಚಿವರು, ಶಾಸಕರೊಂದಿಗೆ ನವದೆಹಲಿಯಲ್ಲಿ ನಡೆದ ಸಭೆ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ತುರ್ತಾಗಿ ರಾಜೀನಾಮೆ ನೀಡದಂತೆ ಸಿದ್ದರಾಮಯ್ಯಗೆ ಶಾಸಕರು ಮನವಿ ಮಾಡಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಿ. ಶಾಸಕರ ಅಭಿಪ್ರಾಯದ ಬಳಿಕ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಿ ಎಂದು ಆಗ್ರಹಿಸಿದ್ದಾರೆ. ಶಾಸಕರ ಸಹಿ ಸಂಗ್ರಹ ಬಗ್ಗೆಯೂ ಕೆಲವು ಸಚಿವರು ಸಲಹೆ ನೀಡಿದ್ದಾರೆ. ಆದರೆ ಸಹಿ ಸಂಗ್ರಹಕ್ಕೆ ಒಪ್ಪದ ಸಿಎಂ ಸಿದ್ದರಾಮಯ್ಯ, ಶಾಸಕರು ಎಷ್ಟೇ ಒತ್ತಡ ಹೇರಿದರೂ ಮೌನವಾಗಿ ಇದ್ದರು. ನಾಳೆ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದಷ್ಟೇ ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪದತ್ಯಾಗಕ್ಕೂ ಮುನ್ನವೇ ತಮ್ಮ ಮಹತ್ವದ ಆಸೆ ಈಡೇರಿಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ

ಬೆಂಗಳೂರು, (ಮೇ 27): ಕರ್ನಾಟಕ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಎನ್ನುವ ದಾಖಲೆಯನ್ನು ಸಿದ್ದರಾಮಯ್ಯ (Siddaramaiah) ಬರೆದಿದ್ದಾರೆ. ಅಲ್ಲದೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎನ್ನುವ ಹೆಗ್ಗಳಿಕೆ ಅವರಿಗಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಲವು ಜನರಪರ ಕಾರ್ಯಕ್ರಮಗಳಿಂದ ಜನ ಮನ್ಣಣೆ ಗಳಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಿಂದುಳಿದ, ಅಹಿಂದ ವರ್ಗಗಳ ಪರವಾಗಿ ನಿಂತಿದ್ದಾರೆ. ಇದರಿಂದ ಅವರನ್ನ ಅಹಿಂದ ನಾಯಕ ಎಂದು ಕರೆಯಲಾಗುತ್ತೆ. ಅದರಂತೆ ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ ಸಂಬಂಧ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನೇನು ನಾಳೆ(ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರಿಂದ ತಮ್ಮ ಕನಸಿನ ಸಿದ್ದರಾಮಯ್ಯ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿದ್ದಾರೆ.

ಇದಕ್ಕೆ ಪೂರಕವೆಂಬಂತೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಸಿಎಂ ಬುಲಾವ್ ನೀಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಇಂದು ಮೇ 27) ಸಂಜೆ ವಿಧಾನಸೌಧಕ್ಕೆ ಬರುವಂತೆ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆಗೂ ಮುನ್ನವೇ ಅಂದರೆ ಇಂದೇ ಜಾತಿಗಣತಿ ವರದಿ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಕೆಳದ ಬಾರಿ ಜಾತಿಗಣತಿ ವರದಿ ಸ್ವೀಕಾರ ಮಾಡಿಲ್ಲವೆಂಬ ಆರೋಪ ಇತ್ತು. ಮುಂದೆ ಎಂದೂ ಈ ರೀತಿ ಆರೋಪ ಬರಬಾರದು ಎಂದು ಅರಿತ ಸಿದ್ದರಾಮಯ್ಯ, ಪದತ್ಯಾಗಕ್ಕೂ ಮುನ್ನ ಜಾತಿಗಣತಿ ವರದಿ ಸ್ವೀಕರಿಸಲು ಪ್ಲ್ಯಾನ್ ಮಾಡಿದ್ದಾರೆ. ಇದರೊಂದಿಗೆ ಅಧಿಕಾರಿದಲ್ಲಿದ್ದಾಗಲೇ ಜಾತಿಗಣತಿ ಸ್ವೀಕಾರ ಮಾಡಿದರು ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಮುಂದಾಗಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

Source link

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವು

ಚಿತ್ರದುರ್ಗ, ಮೇ 27: ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150Aದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸದ್ಯ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

‘ಪೆದ್ದಿ’ ಸಿನಿಮಾ ಶೂಟಿಂಗ್​​ಗೆ ಹಳೆ ಕಾಲದ ತಂತ್ರಜ್ಞಾನ ಬಳಸಿದ್ದೇಕೆ?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾಕ್ಕೆ ಭಾರಿ ಬಂಡವಾಳ ಹೂಡಲಾಗಿದ್ದು, ಸಿನಿಮಾಕ್ಕಾಗಿ ರಾಮ್ ಚರಣ್ ಸಾಕಷ್ಟು ಶ್ರಮ ಪಟ್ಟಿದ್ದಾರೆ. ‘ಪೆದ್ದಿ’ ಸಿನಿಮಾವು ಗ್ರಾಮೀಣ ಭಾಗದ ಯುವಕನೊಬ್ಬನ ಕತೆಯನ್ನು ಒಳಗೊಂಡಿದ್ದು, ಕ್ರಿಕೆಟ್ ಆಟಗಾರನಾಗಿದ್ದ ಯುವಕ ನಂತರ ಕುಸ್ತಿ ಪಟುವಾಗಿ ದೇಶವನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿನಿಧಿಸುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ತಾಂತ್ರಿಕವಾಗಿ ಬಹಳ ರಿಚ್ ಆಗಿ ‘ಪೆದ್ದಿ’ ಮೂಡಿ ಬಂದಿದೆ ಎಂದು ನಿರ್ದೇಶಕ ಹೇಳಿದ್ದಾರೆ. ಆದರೆ ಈ ಸಿನಿಮಾದ ಚಿತ್ರೀಕರಣಕ್ಕೆ ಹಳೆ ಕಾಲದ ತಂತ್ರಜ್ಞಾನವನ್ನು ಬಳಸಲಾಗಿದೆ. ಅದೇಕೆ? ಇಲ್ಲಿದೆ ಮಾಹಿತಿ…

‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್, ಜಾನ್ಹವಿ ಕಪೂರ್, ಶಿವರಾಜ್ ಕುಮಾರ್, ಜಗಪತಿ ಬಾಬು ಇನ್ನೂ ಕೆಲವು ಖ್ಯಾತನಾಮ ನಟ-ನಟಿಯರು ನಟಿಸಿದ್ದಾರೆ. ತೆರೆಯ ಹಿಂದೆಯೂ ಸಹ ಕೆಲವು ಖ್ಯಾತ ನಾಮ ತಂತ್ರಜ್ಞರು ಈ ಸಿನಿಮಾಕ್ಕಾಗಿ ದುಡಿದಿದ್ದಾರೆ. ಆಸ್ಕರ್ ವಿಜೇತ ಎಆರ್ ರೆಹಮಾನ್ ಸಂಗೀತ ನೀಡಿದ್ದರೆ, ಕ್ಯಾಮೆರಾ ಹಿಡಿದಿರುವುದು ಭಾರತೀಯ ಚಿತ್ರರಂಗದ ಟಾಪ್ ಸಿನಿಮಾಟೊಗ್ರಾಫರ್​​ಗಳಲ್ಲಿ ಒಬ್ಬರಾಗಿರುವ ಆರ್ ರತ್ನವೇಲು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ರತ್ನವೇಲು, ತಾವು ಅರ್ಧ ಶತಮಾನಕ್ಕೂ ಹಳೆಯದಾದ ತಂತ್ರಜ್ಞಾನ ಬಳಸಿ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ರತ್ನವೇಲು ಹೇಳಿರುವಂತೆ ಅವರನ್ನು ಈ ಸಿನಿಮಾದ ಭಾಗವನ್ನಾಗಿಸಿದ್ದು ಖುದ್ದು ರಾಮ್ ಚರಣ್ ಅವರಂತೆ. ರಾಮ್ ಅವರೇ ಖುದ್ದು ಕರೆ ಮಾಡಿ ‘ಪೆದ್ದಿ’ ಸಿನಿಮಾಕ್ಕೆ ಕೆಲಸ ಮಾಡುವಂತೆ ಕೇಳಿದ್ದರಂತೆ. ಬಳಿಕ ಬುಚ್ಚಿಬಾಬು ಸನಾ ಕತೆ ಹೇಳಿದಾಗ ಕತೆ ವಿಪರೀತ ಹಿಡಿಸಿ ಈ ಸಿನಿಮಾಕ್ಕೆ ಕೆಲಸ ಮಾಡಲು ಒಪ್ಪಿಕೊಂಡರಂತೆ. ಈ ಹಿಂದೆ ರಾಮ್ ಚರಣ್ ನಟಿಸಿದ್ದ ‘ರಂಗಸ್ಥಳಂ’ ಸಿನಿಮಾಕ್ಕೆ ರತ್ನವೇಲು ಅವರೇ ಕ್ಯಾಮೆರಾಮ್ಯಾನ್.

‘ಪೆದ್ದಿ’ ಸಿನಿಮಾ ತುಸು ಹಳೆಯ ಕಾಲಘಟ್ಟದಲ್ಲಿ ನಡೆಯುವ ಕತೆ ಹೊಂದಿರುವ ಜೊತೆಗೆ ರಾಮ್ ಚರಣ್ ಪಾತ್ರದ ವಿವಿಧ ಜರ್ನಿಯ ಕತೆಯನ್ನು ಸಹ ಒಳಗೊಂಡಿರುವ ಕಾರಣಕ್ಕೆ ಸಿನಿಮಾದ ಒಂದು ನಿರ್ದಿಷ್ಟ ಭಾಗವನ್ನು ರತ್ನವೇಲು ಅವರು ಹಳೆಯ ನೆಗೆಟಿವ್ ಗಳನ್ನು ಬಳಸಿ ಚಿತ್ರೀಕರಣ ಮಾಡಿದ್ದಾರಂತೆ. ದೃಶ್ಯಕ್ಕೆ ಹಳೆಯ ಫೀಲ್ ನೀಡಲು ರಾಮ್ ಚರಣ್ ಪಾತ್ರದ ಒಂದು ಭಾಗವನ್ನು ನೆಗೆಟಿವ್ ಫಿಲಂ ಬಳಸಿ ಅದಕ್ಕೆ ಹೊಂದುವ ಹಳೆಯ ಕ್ಯಾಮೆರಾ ಬಳಸಿ ಚಿತ್ರೀಕರಣ ಮಾಡಿದ್ದಾರಂತೆ.

ಅಂದಹಾಗೆ ರತ್ನವೇಲು ಅವರು ಭಾರತದ ಪ್ರತಿಭಾವಂತ ಸಿನಿಮಾಟೊಗ್ರಾಫರ್. ‘ರೋಬೊಟ್’, ತೆಲುಗಿನ ‘ಆರ್ಯ’, ‘ಕುಮಾರಿ 21ಎಫ್’, ‘ರಂಗಸ್ಥಳಂ’ ಇನ್ನೂ ಹಲವು ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿದ್ದಾರೆ. ಕನ್ನಡದಲ್ಲಿ ‘ಸೈನೈಡ್’ ಮತ್ತು ‘ಗಾಳಿಪಟ’ ಸಿನಿಮಾಗಳಿಗೆ ರತ್ನವೇಲು ಅವರೇ ಕ್ಯಾಮೆರಾಮ್ಯಾನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

20 ಟಿಎಂಸಿ ಸಂಸದರು, 50 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಬಿಜೆಪಿ ಸ್ಫೋಟಕ ಹೇಳಿಕೆ

ಕೊಲ್ಕತ್ತಾ, ಮೇ 27: ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಸುಮಾರು 20 ಸಂಸದರು ಮತ್ತು 50 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಹೈಕಮಾಂಡ್ ಅವರ ಸೇರ್ಪಡೆಗೆ ಅನುಮತಿ ನೀಡಿದರೆ ಪಕ್ಷ ಬದಲಾಯಿಸಲು ಸಿದ್ಧರಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ. ಚುನಾವಣೆಯ ಬಳಿಕ ಹಲವಾರು ಟಿಎಂಸಿ ಸಂಸದರು ಪಕ್ಷದೊಳಗೆ ಅತೃಪ್ತರಾಗಿದ್ದಾರೆ. ಅವರು ರಹಸ್ಯವಾಗಿ ಬಿಜೆಪಿ ಪಾಳಯದ ನಾಯಕರೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಸೌಮಿತ್ರ ಖಾನ್ ಆರೋಪಿಸಿದ್ದಾರೆ.

ಪ್ರಮುಖ ಮುಖ್ಯಾಂಶಗಳು:

  • ಟಿಎಂಸಿಯ 50 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಬಿಜೆಪಿ
  • ಚುನಾವಣೆಯಲ್ಲಿ ಸೋತ ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್
  • ಬಂಗಾಳದಲ್ಲಿ ಸಂಪೂರ್ಣ ಪತನವಾಗುತ್ತಾ ಟಿಎಂಸಿ?

“20 ಟಿಎಂಸಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಬಯಸಿದರೆ, ಮುಂದಿನ ಕೆಲವು ದಿನಗಳಲ್ಲಿ ಇಡೀ ಟಿಎಂಸಿ ಅಂತ್ಯಗೊಳ್ಳುತ್ತದೆ” ಎಂದು ಸೌಮಿತ್ರ ಖಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆದರೆ, ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾದ ಟಿಎಂಸಿ ಸಂಸದರ ಹೆಸರನ್ನು ಬಹಿರಂಗಪಡಿಸಲಿಲ್ಲ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಸಹಿಸುವುದಿಲ್ಲ; ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ 42 ಸಂಸದರಲ್ಲಿ ಟಿಎಂಸಿ ಪ್ರಸ್ತುತ ಲೋಕಸಭೆಯಲ್ಲಿ 29 ಸಂಸದರನ್ನು ಹೊಂದಿದೆ. ಬಿಜೆಪಿ 12 ಮತ್ತು ಕಾಂಗ್ರೆಸ್ ಒಬ್ಬರು ಸಂಸದರನ್ನು ಹೊಂದಿದೆ. ಪಕ್ಷಾಂತರ ವಿರೋಧಿ ಕಾನೂನಿನಡಿ ಅನರ್ಹತೆಯಿಂದ ಪಾರಾಗಲು ಸಂಸದೀಯ ಪಕ್ಷದ ಕನಿಷ್ಠ ಮೂರನೇ ಎರಡರಷ್ಟು ಸದಸ್ಯರು ಒಟ್ಟಾಗಿ ಪಕ್ಷ ಬದಲಾಯಿಸಬೇಕಾಗುತ್ತದೆ.

ಟಿಎಂಸಿ ನಿರಾಕರಣೆ:

ಸೌಮಿತ್ರ ಖಾನ್ ಅವರ ಹೇಳಿಕೆಗಳನ್ನು ನಿರಾಕರಿಸಿದ ಹಿರಿಯ ಟಿಎಂಸಿ ಸಂಸದ ಸೌಗತ ರಾಯ್ ಈ ವರದಿಗಳನ್ನು “ಆಧಾರರಹಿತ” ಎಂದು ಟೀಕಿಸಿದ್ದಾರೆ. 2021ರ ವಿಧಾನಸಭಾ ಚುನಾವಣೆಗೆ ಮುನ್ನ ಟಿಎಂಸಿಯ ಹಲವಾರು ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಆದರೆ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರವನ್ನು ಉಳಿಸಿಕೊಂಡ ನಂತರ ಅನೇಕರು ಮತ್ತೆ ಪಕ್ಷಕ್ಕೆ ಮರಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್​​​ಗೆ ಎಚ್ಚರಿಕೆ

ಬೆಂಗಳೂರು, ಮೇ 27: ಸದ್ಯ ರಾಜ್ಯ ರಾಜಕಾರಣದಲ್ಲಿ ಪಟ್ಟದಾಟ ಕ್ಲೈಮ್ಯಾಕ್ಸ್​​ಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇತ್ತ ಅಧಿಕೃತ ನಿವಾಸ ಕಾವೇರಿ ಎದುರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ‘ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಪಕ್ಷ ಉಳಿಯುವುದಿಲ್ಲ, ನಾವು ಅದಕ್ಕೆ ಬಿಡುವುದಿಲ್ಲ’ ಎಂದು ಅಭಿಮಾನಿಗಳು ಹೇಳಿದ್ದಾರೆ. ಇನ್ನು ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೆಲ ಕಾಂಗ್ರೆಸ್ ನಾಯಕರು, ಹೈಕಮಾಂಡ್‌ನಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ ಎಂದಿದ್ದಾರೆ. ಸುರ್ಜೇವಾಲಾ ಅವರು ಬೆಂಗಳೂರಿಗೆ ಬಂದ ನಂತರ ಪರಿಸ್ಥಿತಿಯ ಕುರಿತು ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಗೃಹಸಚಿವ ಜಿ ಪರಮೇಶ್ವರ ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಇತರ ನಾಯಕರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಕೈ ಕಮಾಂಡ್ ಅಹಿಂದ

ಬೆಂಗಳೂರು, (ಮೇ 27) : ಸಿದ್ದರಾಮಯ್ಯ ಅವರು ನಾಳೆ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಎರಡು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದು, ಇನ್ನೂ ಎರಡು ವರ್ಷ ಆಡಳಿತ ಬಾಕಿ ಇರುವಾಗಲೇ ನಾಯಕತ್ವ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಶೋಷಿತ ವರ್ಗಗಳ ಒಕ್ಕೂಟ ಸಹ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸಿದ್ರೆ ಹೋರಾಟ ಮಾಡುವುದಾಗಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಬೆಂಗಳೂರಿನಲ್ಲಿಂದ ರಾಜ್ಯ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ರಾಜೀನಾಮೆ ಕೇಳಿದ್ದಾರಂತೆ. ಇದು ನಿಜವಾಗಿದ್ರೆ ಯಾವ ರೀತಿ ಎದುರಿಸ್ತಾರೆ ಅನ್ನೋದನ್ನ ತೋರಿಸುತ್ತೆ. ನಮ್ಮ ಸಮಾಜ ಸುಮ್ಮನೆ ಕೂರುವುದಿಲ್ಲ, ನಾಳೆಯಿಂದಲೇ ಹೋರಾಟ ಮಾಡುತ್ತೇವೆ ಎಂದು ನೇರವಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

ಸಿಎಂ ಸಿದ್ದರಾಮಯ್ಯನವರು ಸಂದಿಗ್ಧ ಪರಿಸ್ಥಿತಿಯಲ್ಲಿಲ್ಲ.ರಾಹುಲ್ ಗಾಂಧಿ ಹೇಳಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ರು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಮುಂದೇನು? ಅಹಿಂದ ವರ್ಗ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದೇವೆ. ಯಾವುದೇ ಬದಲಾವಣೆ ಮಾಡಬಾರದ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ವರ್ಚಸ್ಸು ಕಡೆಗಣಿಸಬಾರದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರೋದು ಅಹಿಂದ ವರ್ಗದಿಂದ. ಅಹಿಂದ ವರ್ಗದ ಯಾರನ್ನಾದ್ರೂ ಸಿಎಂ ಮಾಡಲಿ.ಕಾಂಗ್ರೆಸ್​ನವರು ಸಮಸಮಾಜ ನಿರ್ಮಿಸ್ತೇವೆ ಅಂತಾರೆ, ಎಲ್ಲಿ ಮಾಡ್ತಿದ್ದಾರೆ. ನಮ್ಮ ಸಮುದಾಯದ ಶಾಸಕರು ಸಿಎಂ ಸಿದ್ದರಾಮಯ್ಯ ಜೊತೆ ನಿಲ್ಲಬೇಕು ಎಂದು ಕರೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಲವ್ ಆಜ್ ಕಲ್ 2: ತಮ್ಮದೇ ಸಿನಿಮಾವನ್ನು ನಿಷ್ಪ್ರಯೋಜಕ ಚಿತ್ರ ಎಂದ ಜರಿದ ನಿರ್ದೇಶಕ ಇಮ್ತಿಯಾಜ್ ಅಲಿ

ಹಿಂದಿ ಚಿತ್ರರಂಗದಲ್ಲಿ ಕಳೆದ 20 ವರ್ಷಗಳಿಂದ ಸಕ್ರಿಯರಾಗಿರುವ ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ (Imtiaz Ali) ಅವರು ತಮ್ಮ ವೃತ್ತಿಜೀವನದಲ್ಲಿ ಸೋಲಿಗಿಂತ ಹೆಚ್ಚು ಯಶಸ್ಸನ್ನು ಕಂಡಿದ್ದಾರೆ. ಆದರೆ ಅವರ ವೃತ್ತಿಜೀವನದ ಅತಿ ದೊಡ್ಡ ಹಿನ್ನಡೆಗಳಲ್ಲಿ ‘ಲವ್ ಆಜ್ ಕಲ್ 2’ (Love Aaj Kal 2) ಚಿತ್ರವೂ ಒಂದು. ಇದು ಅವರದ್ದೇ ನಿರ್ದೇಶನದ ಸೂಪರ್ ಹಿಟ್ ಚಿತ್ರದ ಸೀಕ್ವೆಲ್ ಆಗಿತ್ತು. ಕಾರ್ತಿಕ್ ಆರ್ಯನ್ (Kartik Aaaryan) ಮತ್ತು ಸಾರಾ ಅಲಿ ಖಾನ್ ಮುಖ್ಯ ಭೂಮಿಕೆಯಲ್ಲಿದ್ದ ಈ ರೊಮ್ಯಾಂಟಿಕ್ ಡ್ರಾಮಾ ಗಲ್ಲಾಪೆಟ್ಟಿಗೆಯಲ್ಲಿ ಹಾಗೂ ವಿಮರ್ಶಾತ್ಮಕವಾಗಿ ತೀವ್ರ ಸೋಲನ್ನು ಅನುಭವಿಸಿತ್ತು. ಇತ್ತೀಚಿನ ಸಂದರ್ಶನವೊಂದರಲ್ಲಿ ಈ ಚಿತ್ರದ ವೈಫಲ್ಯದ ಬಗ್ಗೆ ಮುಕ್ತವಾಗಿ ಮಾತನಾಡಿರುವ ಇಮ್ತಿಯಾಜ್ ಅಲಿ, ಇದೊಂದು ‘ನಿಷ್ಪ್ರಯೋಜಕ ಪ್ರಯೋಗ’ ಎಂದು ಕರೆದಿದ್ದಾರೆ.

‘ಝೂಮ್’ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಚಿತ್ರದ ಮೇಕಿಂಗ್ ಕುರಿತು ಇಮ್ತಿಯಾಜ್ ಅಲಿ ಅವರು ಮಾತನಾಡಿದ್ದಾರೆ. ‘ನನ್ನ ಬಳಿ ಈಗಾಗಲೇ ಕಥೆ ಸಿದ್ಧವಿತ್ತು ಮತ್ತು ನಾನು ಅದರ ಬಗ್ಗೆ ಉತ್ಸುಕನಾಗಿದ್ದರಿಂದ ‘ಲವ್ ಆಜ್ ಕಲ್ 2’ ಮಾಡಿದೆ. ಆದರೆ ಅದು ವರ್ಕ್‌ಔಟ್ ಆಗಲಿಲ್ಲ ಎಂಬುದು ಬೇರೆ ಮಾತು. ನಮಗೆ ಸಿನಿಮಾ ಮಾಡಲು ಮನಸ್ಸಿಲ್ಲದಿದ್ದರೆ ಅದು ಕೇವಲ ಆರ್ಥಿಕವಾಗಿ ಲಾಭದಾಯಕ ಪ್ರಾಜೆಕ್ಟ್ ಆಗಿ ಉಳಿಯುವುದಿಲ್ಲ ಮತ್ತು ಅದೊಂದು ನಿಷ್ಪ್ರಯೋಜಕ ಪ್ರಯೋಗ ಎಂದು ಈ ಸಿನಿಮಾ ನನಗೆ ಕಲಿಸಿಕೊಟ್ಟಿತು. ‘ಲವ್ ಆಜ್ ಕಲ್ 2’ ತನ್ನದೇ ಆದ ವಿಭಿನ್ನ ಕಥೆಯನ್ನು ಹೊಂದಿತ್ತು. ನಾನು ಅದಕ್ಕೆ ಬೇರೆ ಹೆಸರಿಟ್ಟು ಸಿನಿಮಾ ಮಾಡಬಹುದಿತ್ತು’ ಎಂದು ಅವರು ಹೇಳಿದ್ದಾರೆ.

ಸೈಫ್ ಅಲಿ ಖಾನ್ ಮತ್ತು ದೀಪಿಕಾ ಪಡುಕೋಣೆ ನಟಿಸಿದ್ದ ಮೂಲ ‘ಲವ್ ಆಜ್ ಕಲ್’ ಸಿನಿಮಾ 2009ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿತ್ತು. ವಿಮರ್ಶಕರಿಂದ ಪ್ರಶಂಸೆ ಗಳಿಸಿದ್ದಲ್ಲದೆ 120 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಆದರೆ, 2020ರಲ್ಲಿ ಬಿಡುಗಡೆಯಾದ ಇದರ ಸೀಕ್ವೆಲ್ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ತೀವ್ರ ನೆಗೆಟಿವ್ ಪ್ರತಿಕ್ರಿಯೆ ಪಡೆಯಿತು. ಬಾಕ್ಸ್ ಆಫೀಸ್‌ನಲ್ಲಿ ಹಾಕಿದ ಬಂಡವಾಳವನ್ನು ಸಹ ಮರಳಿ ಗಳಿಸಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಜನರು ಇದನ್ನು ಮೂಲ ಚಿತ್ರದೊಂದಿಗೆ ಹೋಲಿಸಿ ಟೀಕಿಸಿದ್ದರು.

ಮೊದಲಿಗೆ ತಾವು ಈ ಚಿತ್ರಕ್ಕೆ ‘ರಿವರ್ಸ್’ ಎಂದು ಹೆಸರಿಡಲು ಬಯಸಿದ್ದಾಗಿ ಇಮ್ತಿಯಾಜ್ ಬಹಿರಂಗಪಡಿಸಿದ್ದಾರೆ. ಆದರೆ ನಂತರ ‘ಲವ್ ಆಜ್ ಕಲ್ 2’ ಎಂದು ಹೆಸರಿಡಲು ನಿರ್ಧರಿಸಲಾಯಿತು. ಇದು ಚಿತ್ರಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲಿಲ್ಲ. ‘ಕೇವಲ ಹಣ ಗಳಿಸುವ ಪ್ರಾಜೆಕ್ಟ್ ಎಂಬ ಕಾರಣಕ್ಕೆ ಸಿನಿಮಾ ಮಾಡುವುದು ನನ್ನನ್ನು ಎರಡು ವರ್ಷಗಳ ಕಾಲ ಆ ಸಿನಿಮಾದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಒಳ್ಳೆತನದ ಮುಖವಾಡ ಧರಿಸಿದ್ದ ದೀಪಿಕಾ ಪಡುಕೋಣೆ’: ಹೇಳಿಕೆಗೆ ಕ್ಷಮೆ ಕೇಳಿದ ನಿರ್ದೇಶಕ

ಇಮ್ತಿಯಾಜ್ ಅಲಿ ಈಗ ‘ಮೈ ವಾಪಸ್ ಆವುಂಗಾ’ ಸಿನಿಮಾಗೆ ನಿರ್ದೇಶನ ಮಾಡಿದ್ದು, ಈ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಭಾರತ-ಪಾಕಿಸ್ತಾನ ವಿಭಜನೆಯ ಹಿನ್ನೆಲೆಯ ರೊಮ್ಯಾಂಟಿಕ್ ಡ್ರಾಮಾ ಇದಾಗಿದ್ದು, ವೇದಾಂತ್ ರೈನಾ, ಶರ್ವರಿ, ದಿಲ್ಜಿತ್ ದೋಸಾಂಜ್ ಮತ್ತು ನಸೀರುದ್ದೀನ್ ಶಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾ ಜೂನ್ 12ರಂದು ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version