Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ – Kannada News | Disha Garg’s inspiring journey from humble housewife to successful entrepreneurship

ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ ಈಕೆ ತನ್ನ ಕನಸುಗಳನ್ನು ಸಾಕಾರಗೊಳಿಸುವ ಆಲೋಚನೆ ಮಾಡಲೂ ಬಿಡುವಿಲ್ಲದಂತಾಗಿತ್ತು. ಒಳ್ಳೆಯ ಹೆಂಡತಿ, ಒಳ್ಳೆಯ ಸೊಸೆ ಮತ್ತು ಒಳ್ಳೆಯ ತಾಯಿಯಾಗಲು ಈಕೆ ಶ್ರಮಿಸುತ್ತಿರುವಾಗ ಈಕೆಯ ಫ್ಯಾಷನ್ ಪದವಿ ಎಲ್ಲೋ ಧೂಳು ಹಿಡಿದು ಕೂತಿತ್ತು. ಅದೇನೇ ಆದರೂ ಈಕೆಯ ಗುರಿ ಈಡೇರಿಸುವ ಬಯಕೆಯಂತೂ ಎದೆಯೊಳಗೆ ಸುಪ್ತವಾಗಿ ಇಣುಕುತ್ತಲೇ ಇದ್ದದ್ದು ಹೌದು.

ನಾಲ್ಕು ಗೋಡೆಗಳ ಚೌಕಟ್ಟಿಗೆ ಸೀಮಿತವಾಗದ ಮನಸ್ಸು

ಮದುವೆಯ ನಂತರ, ದಿಶಾ ಗರ್ಗ್ ಅವರು ಕ್ರಮೇಣ ತಮ್ಮ ಗಂಡನ ಕುಟುಂಬಕ್ಕೆ ಸಂಪೂರ್ಣವಾಗಿ ಅರ್ಪಿಸಿಕೊಂಡರು. ಕಾಲ ಕಳೆದಂತೆ, ಅವರು ಅಪ್ಪಟ ಗೃಹಿಣಿಯೇ ಆದರು. ಅವರ ಗುರುತೇ ಗೃಹಿಣಿಯಾಯಿತು. ಮನೆಯ ನಾಲ್ಕು ಗೋಡೆಗಳ ಚೌಕಟ್ಟಿನೊಳಗೆ ಸೀಮಿತಗೊಳ್ಳುವುದು ಆಕೆಯ ಮನಸ್ಸಿನೊಳಗೆ ಎಲ್ಲೋ ಕಸಿವಿಸಿ ಮೂಡಿಸುತ್ತಿತ್ತು. ಮನೆಯ ನೆಲಮಾಳಿಗೆಯಲ್ಲಿ ಒಂದು ಸಣ್ಣ ಅಂಗಡಿ ತೆರೆಯುವ ಬಯಕೆಯನ್ನು ಆಕೆ ವ್ಯಕ್ತಪಡಿಸಿದಾಗ, ಕುಟುಂಬದಿಂದ ವಿರೋಧ ವ್ಯಕ್ತವಾಯಿತು.

ದಿಶಾ ಬ್ಯುಸಿನೆಸ್ ಪ್ರಯಾಣದ ಆರಂಭಿಕ ಹಂತ ಹೇಗಿತ್ತು ಗೊತ್ತಾ?

ಬ್ಯುಸಿನೆಸ್ ಆರಂಭಿಸಲು ಮನೆಯವರ ವಿರೋಧ ಬಂದಾಗ ದಿಶಾ ಗರ್ಗ್ ಅವರು ಚಾಣಾಕ್ಷ್ಯತೆಯಿಂದ ಪರಿಸ್ಥಿತಿ ನಿರ್ವಹಿಸುತ್ತಾರೆ. ತನ್ನ ಅತ್ತೆ ಮತ್ತು ಮಾವ ಅವರ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ. ಕೇವಲ ಇಬ್ಬರು ಟೈಲರ್​ಗಳು ಹಾಗೂ ಬಹಳ ಸೀಮಿತ ಸಂಪನ್ಮೂಲದೊಂದಿಗೆ ದಿಶಾ ಅವರು ಟೈಲರ್ ಅಂಗಡಿ ಶುರು ಮಾಡುತ್ತಾರೆ. ಇಬ್ಬರು ಕೆಲಸಗಾರರೊಂದಿಗೆ ಶುರುವಾದ ಇದರಲ್ಲಿ ಈಗ 25 ಮಂದಿ ಕೆಲಸ ಮಾಡುತ್ತಿರುವ ಹಂತಕ್ಕೆ ಬ್ಯುಸಿನೆಸ್ ಬೆಳೆದಿದೆ. ದೊಡ್ಡ ಸೆಟಪ್ ಇರಲಿಲ್ಲ, ಸಮರ್ಪಕವಾದ ಸಪೋರ್ಟ್ ಸಿಸ್ಟಂ ಕೂಡ ಇರಲಿಲ್ಲ. ಈಕೆಯ ಶಕ್ತಿಯಂತೆ ಇದ್ದದ್ದು ಕೆಲಸದ ಕೌಶಲ್ಯ ಮತ್ತು ಆತ್ಮವಿಶ್ವಾಸ ಮಾತ್ರ. ದಿಶಾ ತನ್ನ ಉದ್ದಿಮೆಯಲ್ಲಿ ಕ್ರಮೇಣವಾಗಿ ಪ್ರಗತಿ ಸಾಧಸುತ್ತಾ ಹೋಗುತ್ತಾ ತನ್ನ ಕೌಶಲ್ಯವನ್ನೂ ಪರಿಷ್ಕರಿಸುತ್ತಾ ಸಾಗಿದರು.

ಇದನ್ನೂ ಓದಿ: ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ ಮಾಡಿ ಗೆದ್ದ ಪ್ರಾಚಿ ಪೊದ್ದಾರ್; ಮದುವೆ ಒತ್ತಡದ ನಡುವೆಯೂ ಕುಂದದ ಛಲ

ಉತ್ಸಾಹಕ್ಕಿಂತ ಬದುಕುಳಿಯುವುದು ಮುಖ್ಯವಾದಾಗ

ವಿಧಿಯು ದಿಶಾಳನ್ನು ತೀವ್ರ ಪರೀಕ್ಷೆಗೆ ಒಳಪಡಿಸಿತು. 2020ರಲ್ಲಿ ಅವರ ಮಾವ ನಿಧನರಾದರು. ನಂತರ 2022 ರಲ್ಲಿ ಅವರ ಪತಿಯೂ ನಿಧನರಾದರು. ಈ ಎರಡು ಪ್ರಮುಖ ಹಿನ್ನಡೆಗಳು ಅವರ ಜೀವನಕ್ಕೆ ದಿಢೀರ್ ತಿರುವು ಕೊಟ್ಟವು. ದಿಶಾಗೆ ಹಿಮ್ಮೆಟ್ಟುವುದನ್ನು ಬಿಟ್ಟು ಬೇರೆ ದಾರಿ ಇದ್ದಂತಿರಲಿಲ್ಲ. ಈ ಕ್ಲಿಷ್ಟ ಸಂದರ್ಭಗಳಿಗೆ ಬಲಿಯಾಗುವ ಬದಲು, ಅವರು ಹೊಸ ಬದುಕಿನ ದಾರಿ ಕಂಡುಕೊಳ್ಳತೊಡಗಿದರು.

ಗ್ರೀನ್ ಪಾರ್ಕ್‌ನ ಡಿಸೈನರ್ ಬೂಟೀಕ್‌

ಇಂದು, ದಿಶಾ ದೆಹಲಿಯ ಗ್ರೀನ್ ಪಾರ್ಕ್‌ನಲ್ಲಿ ಯಶಸ್ವಿ ಡಿಸೈನರ್ ಬೂಟೀಕ್ ಅನ್ನು ನಡೆಸುತ್ತಿದ್ದಾರೆ. ಅವರು ಸುಮಾರು 25 ಜನರಿಗೆ ಉದ್ಯೋಗ ನೀಡಿದ್ದಾರೆ. ಅವರ ವ್ಯವಹಾರವು ಅವರ ಗುರುತಾಗಿರುವುದು ಮಾತ್ರವಲ್ಲ, ಕುಟುಂಬಕ್ಕೆ ಬೆಂಬಲ ಕೊಡುತ್ತಿದೆ. ಸಾಕಷ್ಟು ಹಣ ಸಂಪಾದನೆ ಮಾಡುತ್ತಿದ್ದಾರೆ. ಆದರೆ, ಸಂಪಾದಿಸಿದ ಹಣವು ಖರ್ಚು ಮಾಡಲು ಇರುವುದು ಎನ್ನುವ ಪೈಕಿಯವರಲ್ಲ ದಿಶಾ. ಇವತ್ತಿನ ಸಂಪಾದನೆಯಲ್ಲಿ ನಾಳೆಯ ಸುರಕ್ಷತೆಗಾಗಿಯೂ ಒಂದಷ್ಟು ಪಾಲು ತೆಗೆದಿರಿಸಬೇಕು ಎನ್ನುವಂಥವರು ದಿಶಾ. ನಾಳೆ ದಿಢೀರ್ ಕಷ್ಟ ಬಂದರೆ ಏನು ಮಾಡುವುದು?

ಇದನ್ನೂ ಓದಿ: ಇಂಟೀರಿಯರ್ ಡಿಸೈನ್ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವ ದೀಪಾ ದೇವರಾಜನ್

ಪ್ರತಿಯೊಬ್ಬ ಮಹಿಳೆಗೆ ಆರ್ಥಿಕ ಸ್ವಾತಂತ್ರ್ಯ ಏಕೆ ಮುಖ್ಯ?

ದಿಶಾ ಗರ್ಗ್ ಅವರ ಜೀವನ ಕಥೆಯಿಂದ ಕಲಿಯಬಹುದಾದ ಹಲವು ಪಾಠಗಳಲ್ಲಿ ಒಂದೆಂದರೆ, ‘ಆರ್ಥಿಕ ಸ್ವಾತಂತ್ರ್ಯ ಎಂಬುದು ಲಕ್ಷುರಿ ಅಲ್ಲ, ಅದು ಭದ್ರತೆ’ ಎಂಬುದು. ಜೀವನದಲ್ಲಿ ಇದ್ದಕ್ಕಿದ್ದಂತೆ ಎಲ್ಲವೂ ಕಸಿದು ಹೋದಾಗ, ಮತ್ತೆ ಎದ್ದು ನಿಲ್ಲಲು ನಿಮಗೆ ಶಕ್ತಿಯನ್ನು ನೀಡುವುದು ನಿಮ್ಮ ಆರ್ಥಿಕ ಸ್ವಾತಂತ್ರ್ಯ. ದಿಶಾ ಕೇವಲ ಡಿಸೈನರ್ ಅಲ್ಲ, ಜೀವನದ ಜವಾಬ್ದಾರಿಗಳ ಹೊರೆಯಲ್ಲಿ ಕನಸ್ಸುಗಳನ್ನು ಬಚ್ಚಿಟ್ಟುಕೊಂಡು ಸಾಗುತ್ತಿರುವ ಅನೇಕ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ.

ದಿಶಾ ಗರ್ಗ್

ಹೂಡಿಕೆ ಮಾಡುವ ಮೊದಲು ಈ ವಿಷಯಗಳು ನೆನಪಿನಲ್ಲಿರಲಿ

ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವ ಮುನ್ನ KYC (Know Your Customer) ಪೂರ್ಣಗೊಂಡಿರಬೇಕು. SEBI ವೆಬ್​ಸೈಟ್​ನಲ್ಲಿ ವಿವರ ಹೊಂದಿರುವ ಹಾಗೂ ನೊಂದಾಯಿತವಾಗಿರುವ ಮ್ಯೂಚುವಲ್ ಫಂಡ್ ಕಂಪನಿಗಳೊಂದಿಗೆ ಮಾತ್ರ ಮಾಡಬೇಕು. ಹೂಡಿಕೆದಾರರು ಯಾವುದೇ ದೂರುಗಳಿಗಾಗಿ ನೇರವಾಗಿ AMC ಅನ್ನು ಸಂಪರ್ಕಿಸಬಹುದು ಅಥವಾ SCORES ಪೋರ್ಟಲ್‌ನಲ್ಲಿ (https://scores.gov.in) ದೂರು ಸಲ್ಲಿಸಬಹುದು. ಪರಿಹಾರವು ತೃಪ್ತಿಕರವಾಗಿಲ್ಲದಿದ್ದರೆ, Smart ODR ಪೋರ್ಟಲ್ (https://smartodr.in/login) ಅನ್ನು ಬಳಸಬಹುದು.

HDFC AMC ಬಗ್ಗೆ

HDFC ಅಸೆಟ್ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ ಭಾರತದ ಅತಿದೊಡ್ಡ ಮ್ಯೂಚುವಲ್ ಫಂಡ್ ಕಂಪನಿಗಳಲ್ಲಿ ಒಂದಾಗಿದೆ. ಇದನ್ನು 1999 ರಲ್ಲಿ ಸ್ಥಾಪಿಸಲಾಯಿತು ಮತ್ತು SEBI ಅನುಮೋದನೆ ಪಡೆದ ನಂತರ 2000 ರಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಈಕ್ವಿಟಿ, ಫಿಕ್ಸೆಡ್ ಇನ್ಕಮ್ ಮತ್ತು ಇತರ ಹೂಡಿಕೆ ಆಯ್ಕೆಗಳನ್ನು ನಿರ್ವಹಿಸುತ್ತದೆ. ಮತ್ತು ದೇಶಾದ್ಯಂತ ಶಾಖೆಗಳನ್ನು ಹೊಂದಿದೆ. ಬ್ಯಾಂಕುಗಳು, ಸ್ವತಂತ್ರ ಹಣಕಾಸು ಸಲಹೆಗಾರರು ಮತ್ತು ರಾಷ್ಟ್ರೀಯ ವಿತರಕರ ಮೂಲಕ ಸೇವೆಗಳನ್ನು ಒದಗಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ – Kannada News | Fire Breaks out In Janardhana Reddy And Sriramulu ownership Model House at Bellary, reddy Alleged On Congress

ಬಳ್ಳಾರಿ, (ಜನವರಿ 22): ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ (Bellary Banner violence) ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ. ಹೌದು…ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (janardhan reddy) ಹಾಗೂ ಶ್ರೀರಾಮುಲುಗೆ (Sriramulu) ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ  (Model House) ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಬೆಂಕಿ ಪ್ರಕರಣ ಮತ್ತೆ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಗಳಿವೆ.

ಈ ಮಾಡೆಲ್ ಹೌಸ್​ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಇಬ್ಬರ ಹೆಸರಿನಲ್ಲಿದ್ದು, 13-14 ವರ್ಷಗಳ ಹಿಂದೆ ಮಾಡಲಾಗಿದೆ. ಈ ಹೌಸ್ ಒಟ್ಟು 109 ಎಕರೆ ಟೋಟಲ್ G ಸ್ವ್ಕೇರ್ ಹೊಂದಿದೆ.

ಕೈ ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ

ಈ ಘಟನೆ ಬಗ್ಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇನೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಈಗ ಬೆಂಕಿ ಹಚ್ಚಿದ್ದಾರೆ. ನಮಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ ಹಚ್ಚಿದ್ದಾರೆ. ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಖರೀದಿದಾರರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಿಸಿದ್ದೆವು. ಇಂದು (ಜನವರಿ 23) ಸಂಜೆ ಆರೂವರೆ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿ ಹಚ್ಚಿದವರನ್ನ ಹಿಡಿಯಲು ಕೆಲವರು ಯತ್ನಿಸಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಮಾಡಲ್​ ಹೌಸ್​ಗೆ ಪೆಟ್ರೋಲ್​, ಡೀಸೆಲ್​ ಹಾಕಿ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ಶಾಸಕ ಭರತ್​ ರೆಡ್ಡಿ ಬೆಂಬಲಿಗರೇ ಇದನ್ನ ಮಾಡಿರುವುದು. ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಕೂಡ ಬಂದಿದ್ದಾರೆ. ಇದನ್ನ ನಾವು ಬಿಡಲ್ಲ, ಪೊಲೀಸ್​ ಠಾಣೆಗೆ ದೂರು ನೀಡುತ್ತೇವೆ ಎಂದರು.

ಜನಾರ್ದನ ರೆಡ್ಡಿ ಹೇಳಿದ್ದಿಷ್ಟು

ಇನ್ನು ಈ ಅಗ್ನಿ ಅವಘಡದ ಬಗ್ಗೆ ಶಾಸಕ ಗಾಲಿ ಜನಾರ್ದನರೆಡ್ಡಿ ಟಿವಿ9 ಜೊತೆ ಮಾತನಾಡಿದ್ದು, ಬ್ಯಾನರ್​ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ.ಘಟನೆ ಬಗ್ಗೆ ಬಳ್ಳಾರಿ ಎಸ್​ಪಿ ಜೊತೆ ನಾನು ಮಾತಾಡಿದ್ದೇನೆ ಎಂದು ಹೇಳಿದರು.

Published On – 8:24 pm, Fri, 23 January 26

Source link

ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Milk and Calcium: How Effective Is It for Deficiency?

Milk And Calcium How Effective Is It For DeficiencyImage Credit source: Getty Images

ಹಾಲು (Milk) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಚಾರ. ಚಿಕ್ಕ ಮಕ್ಕಳಿನಿಂದ ಹಿಡಿದು ದೊಡ್ಡವರ ವರೆಗೆ ಒಂದು ಹೊತ್ತಾದರೂ ಹಾಲು ಕುಡಿಯುತ್ತಾರೆ. ಇದು ಬಹಳ ಸಾಮಾನ್ಯ. ದೇಹದ ಬೆಳವಣಿಗೆ ಮತ್ತು ಶಕ್ತಿ ನೀಡುವುದಕ್ಕೆ ಹಾಲು ಪೂರಕ ಎಂದು ಹೇಳಲಾಗುತ್ತದೆ. ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಹೊರತಾಗಿಯೂ, ಹಾಲನ್ನು ಇನ್ನೂ ಪೌಷ್ಟಿಕಾಂಶದ ಮೂಲವೆಂದು ಪರಿಗಣಿಸಲಾಗುತ್ತದೆ. ಅದರಲ್ಲಿಯೂ ಮೂಳೆ ಮತ್ತು ಹಲ್ಲುಗಳ ಆರೋಗ್ಯದ ವಿಷಯಕ್ಕೆ ಬಂದಾಗ, ಹಾಲು ಮೊದಲು ನೆನಪಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಕ್ಯಾಲ್ಸಿಯಂ ಕೊರತೆಗೆ ಸಂಬಂಧಿಸಿದ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದಾಗಿ ಜನ ತಮ್ಮ ಆಹಾರದ ಬಗ್ಗೆ ಮೊದಲಿಗಿಂತ ಹೆಚ್ಚು ಜಾಗರೂಕರಾಗುತ್ತಿದ್ದಾರೆ. ಆದರೆ ಪ್ರತಿದಿನ ಹಾಲು ಕುಡಿಯುವುದು ದೇಹದ ಕ್ಯಾಲ್ಸಿಯಂ ಅಗತ್ಯಗಳನ್ನು ಪೂರೈಸಲು ಸಾಕಾಗುತ್ತದೆಯೇ ಅಥವಾ ಇಲ್ಲವೇ, ಈ ಬಗ್ಗೆ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಹಾಲು ನಿಜವಾಗಿಯೂ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ?

ಲೇಡಿ ಹಾರ್ಡಿಂಗ್ ಆಸ್ಪತ್ರೆಯ ಡಾ. ಎಲ್.ಎಚ್. ​​ಘೋಟೇಕರ್ ಅವರು ಹೇಳುವ ಪ್ರಕಾರ, ಒಂದು ಲೋಟ ಹಾಲು ಕುಡಿಯುವುದರಿಂದ ದೇಹಕ್ಕೆ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ದೊರೆಯುತ್ತದೆ, ಅದನ್ನು ಸುಲಭವಾಗಿ ದೇಹ ಹೀರಿಕೊಳ್ಳುತ್ತದೆ. ಹಾಲಿನಲ್ಲಿರುವ ವಿಟಮಿನ್ ಡಿ ದೇಹದಲ್ಲಿ ಕ್ಯಾಲ್ಸಿಯಂ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಈ ಕಾರಣಕ್ಕಾಗಿ, ಹಾಲು ಮೂಳೆ ಮತ್ತು ಹಲ್ಲುಗಳ ಬಲಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಆದರೆ ಪ್ರತಿಯೊಬ್ಬರ ಕ್ಯಾಲ್ಸಿಯಂ ಅಗತ್ಯತೆ ಒಂದೇ ಆಗಿರುವುದಿಲ್ಲ. ಇದು ವಯಸ್ಸು, ಲಿಂಗ, ಜೀವನಶೈಲಿ ಮತ್ತು ಆರೋಗ್ಯವನ್ನು ಅವಲಂಬಿಸಿರುತ್ತದೆ. ದೇಹ ಹೆಚ್ಚು ಕ್ಯಾಲ್ಸಿಯಂ ಕೊರತೆಯನ್ನು ಹೊಂದಿದ್ದರೆ, ಹಾಲು ಮಾತ್ರ ಕುಡಿದರೆ ಸಾಕಾಗುವುದಿಲ್ಲ. ಇಂತಹ ಸಂದರ್ಭಗಳಲ್ಲಿ, ಹಾಲಿನ ಜೊತೆಗೆ ಮೊಸರು, ಚೀಸ್, ಹಸಿರು ತರಕಾರಿಗಳು, ಎಳ್ಳು ಮತ್ತು ಬಾದಾಮಿಯಂತಹ ಆಹಾರಗಳನ್ನು ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಇದು ದೇಹಕ್ಕೆ ವಿವಿಧ ಮೂಲಗಳಿಂದ ಕ್ಯಾಲ್ಸಿಯಂ ಅನ್ನು ಒದಗಿಸಲು ಸಹಾಯ ಮಾಡುತ್ತದೆ. ಒಟ್ಟಾರೆಯಾಗಿ, ಹಾಲು ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ, ಆದರೆ ಸಮತೋಲಿತ ಆಹಾರವಿಲ್ಲದೆ ಕೊರತೆಯನ್ನು ಸಂಪೂರ್ಣವಾಗಿ ನೀಗಿಸುವುದು ಕಷ್ಟಕರ.

ಇದನ್ನೂ ಓದಿ: ಹಾಲು ಆರೋಗ್ಯಕ್ಕೆ ಒಳ್ಳೆಯದು ಆದ್ರೆ ಎಲ್ಲರಿಗೂ ಅಲ್ಲ! ಹಾಗಿದ್ರೆ ಯಾರು ಕುಡಿಯಬಾರದು?

ದಿನಕ್ಕೆ ಎಷ್ಟು ಲೋಟ ಹಾಲು ಕುಡಿಯಬೇಕು?

ಆರೋಗ್ಯವಂತ ವಯಸ್ಕರು, ಸಾಮಾನ್ಯವಾಗಿ ದಿನಕ್ಕೆ 2 ಗ್ಲಾಸ್ ಅಥವಾ 400 ರಿಂದ 500 ಮಿಲಿ ಹಾಲು ಕುಡಿಯಬಹುದು. ಇದು ದೈನಂದಿನ ಕ್ಯಾಲ್ಸಿಯಂ ಅವಶ್ಯಕತೆಯನ್ನು ಪೂರೈಸುತ್ತದೆ. ಮಕ್ಕಳು, ಹದಿಹರೆಯದವರು ಮತ್ತು ಗರ್ಭಿಣಿಯರು ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಪ್ರಮಾಣವನ್ನು ಹೆಚ್ಚಿಸಬೇಕಾಗಬಹುದು. ಇನ್ನು, ಲ್ಯಾಕ್ಟೋಸ್ ಸಮಸ್ಯೆ ಇರುವವರು ಹಾಲು ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯಬೇಕು. ಅಗತ್ಯಕ್ಕಿಂತ ಹೆಚ್ಚು ಹಾಲು ಕುಡಿಯುವುದು ಪ್ರಯೋಜನಕಾರಿಯಲ್ಲ ಎಂಬುದನ್ನು ಮರೆಯಬಾರದು. ಇದೆಲ್ಲದರ ಜೊತೆಗೆ ಸಂಸ್ಕರಿತ ಆಹಾರ ಮತ್ತು ಸೋಡಾ ಸೇವನೆ ಮಾಡುವುದನ್ನು ಕಡಿಮೆ ಮಾಡಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆ್ಯಸಿಡ್ ಬೆದರಿಕೆ: ರಕ್ಷಣೆ ಕೋರಿ ಪತ್ರ ಸಮೇತ ​ಪೊಲೀಸ್ ಮೆಟ್ಟಿಲೇರಿದ ಪೌರಾಯುಕ್ತೆ ಅಮೃತಾ – Kannada News | Shidlaghatta Commissioner Amrutha Gowda seeks police protection after acid threat

ಚಿಕ್ಕಬಳ್ಳಾಪುರ, ಜನವರಿ 23: ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ (Amrutha Gowda) ಆ್ಯಸಿಡ್ ಹಾಕುವುದಾಗಿ ಬೆದರಿಕೆ  ಬೆನ್ನಲ್ಲೇ ರಕ್ಷಣೆ ನೀಡುವಂತೆ ಪತ್ರ ಸಮೇತ ಪೊಲೀಸರಿಗೆ ಮನವಿ ಮಾಡಿದ್ದಾರೆ. ಸದ್ಯ ಜೀವ ಭಯದಲ್ಲೇ ಕರ್ತವ್ಯ ನಿರ್ವಹಿಸುತ್ತಿರುವ ಅಮೃತಾಗೌಡ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಹಿನ್ನೆಲೆ ರಕ್ಷಣೆ ನೀಡುವಂತೆ ಶಿಡ್ಲಘಟ್ಟ ಟೌನ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಧಮ್ಕಿ ಹಾಕಿದ್ದರು. ಈ ಬಗ್ಗೆ ಅಮೃತಾಗೌಡ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದಂತೆ ತಲೆ ಮರೆಸಿಕೊಂಡಿರುವ ರಾಜೀವ್ ಗೌಡ, ಇನ್ನು ಪತ್ತೆ ಆಗಿಲ್ಲ. ಪೊಲೀಸರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ಇತ್ತ ಪೌರಾಯುಕ್ತೆಗೆ ಬೆದರಿಕೆ ಪತ್ರಯೊಂದು ಬಂದಿದ್ದು, ಆ್ಯಸಿಡ್​ ದಾಳಿ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆ ಇದೀಗ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಾಳೆ ರಾಜೀವ್ ಗೌಡ ಭವಿಷ್ಯ ನಿರ್ಧಾರ

ರಾಜೀವ್ ಗೌಡಗೆ ಕಾನೂನಿನ ಉರುಳು ಬಿಗಿಯಾಗುತ್ತಿದೆ. ಪೌರಾಯುಕ್ತೆ ಅಮೃತಾಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದ ರಾಜೀವ್ ಗೌಡ, ತನ್ನ ಮೇಲಿನ ಎಫ್‌ಐಆರ್ ರದ್ದು ಮಾಡಬೇಕು ಅಂತ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಆ ಅರ್ಜಿಯನ್ನು ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಿದೆ. ತನಿಖೆ ಮುಂದುವರಿಯಲಿ ಎಂದು ಆದೇಶ ನೀಡುವ ಮೂಲಕ ರಾಜೀವ್ ಗೌಡಗೆ ಮೊದಲ ಶಾಕ್ ನೀಡಿದೆ.

ರಾಜೀವ್ ಗೌಡ ಪರ ವಕೀಲರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲಾ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿಯೂ ನಿರೀಕ್ಷಣಾ ಜಾಮೀನಿಗಾಗಿ ಮೊದಲೇ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಎರಡನೇ ವಿಚಾರಣೆ ಇಂದು ನಡೆಯಿತು. ಸರ್ಕಾರಿ ಅಭಿಯೋಜಕರು ಸಲ್ಲಿದ್ದ ಆಕ್ಷೇಪಣೆಗಳಿಗೆ ರಾಜೀವ್ ಗೌಡ ಪರ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದರು.

ಇದನ್ನೂ ಓದಿ: ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪತ್ರ: ಆ್ಯಸಿಡ್​​ ಎರಚುವುದಾಗಿ ಎಚ್ಚರಿಕೆ

ಸದ್ಯ ನ್ಯಾಯಾಲಯ, ವಾದ-ಪ್ರತಿವಾದ ಆಲಿಸಿದ್ದು, ಜನವರಿ 24ರಂದು ಆದೇಶ ಕಾಯ್ದಿರಿಸಿದೆ. ರಾಜೀವ್ ಗೌಡಗೆ ನಿರೀಕ್ಷಣಾ ಜಾಮೀನು ಸಿಗುತ್ತಾ, ಇಲ್ಲಾ ಜೈಲು ಪಾಲಾಗುತ್ತಾರಾ ಎನ್ನುವುದು ನಾಳೆ ಗೊತ್ತಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On – 8:12 pm, Fri, 23 January 26

Source link

ಕುತ್ತಿಗೆಗೆ ರಬಸವಾಗಿ ಬಡಿದ ಚೆಂಡು! ನೋವು ತಾಳಲಾರದೆ ಬಿದ್ದು ಒದ್ದಾಡಿದ ಬ್ಯಾಟರ್; ವಿಡಿಯೋ

ಅಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆದ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಕೂದಲೆಳೆ ಅಂತರದಲ್ಲಿ ಅವಘಡದಿಂದ ಪಾರಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದ ಸಮಯದಲ್ಲಿ ಗುರ್ಬಾಜ್ ಗಾಯಕ್ಕೆ ತುತ್ತಾದರು. ರಬಸವಾಗಿ ಬಂದ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಇದರಿಂದ ಗುರ್ಬಾಜ್ ನೋವಿನಿಂದ ಮೈದಾನದಲ್ಲೇ ಬಿದ್ದು ನರಳಲಾರಂಭಿಸಿದರು.

ಪಂದ್ಯದ 15 ನೇ ಓವರ್‌ನಲ್ಲಿ ನಡೆದ ಈ ಘಟನೆಯಲ್ಲಿ ಚೆಂಡು ಗುರ್ಬಾಜ್ ಅವರ ಕುತ್ತಿಗೆಗೆ ತಗುಲಿತು. ಚೆಂಡು ಗುರ್ಬಾಜ್ ಕುತ್ತಿಗೆಗೆ ತಗುಲಿದ ತಕ್ಷಣ, ಅವರು ನೋವಿನಿಂದ ನರಳಲು ಪ್ರಾರಂಭಿಸಿದರು. ಅವರ ಹೆಲ್ಮೆಟ್ ನೆಲಕ್ಕೆ ಬಿದ್ದಿತು. ಅಂಪೈರ್‌ಗಳು ತಕ್ಷಣ ಅಫ್ಘಾನಿಸ್ತಾನ ಫಿಸಿಯೋವನ್ನು ಮೈದಾನಕ್ಕೆ ಕರೆಸಿದರು. ಆಟವನ್ನು ಸಾಕಷ್ಟು ಸಮಯದವರೆಗೆ ನಿಲ್ಲಿಸಲಾಯಿತು. ಅದೃಷ್ಟವಶಾತ್ ಗುರ್ಬಾಜ್ ಗಂಭೀರವಾಗಿ ಗಾಯಗೊಂಡಿರಲಿಲ್ಲ, ಹೀಗಾಗಿ ಅವರು ಬ್ಯಾಟಿಂಗ್ ಮುಂದುವರಿಸಿ 58 ಎಸೆತಗಳಲ್ಲಿ 71 ರನ್ ಗಳಿಸಿದರು.

Source link

7 ವರ್ಷದ ಬಳಿಕ ಹೊಸ ಸಿನಿಮಾ ಶುರು ಮಾಡಿದ ‘ಬೆಲ್ ಬಾಟಂ’ ನಿರ್ಮಾಪಕ ಸಂತೋಷ್ – Kannada News | Bell Bottom movie producer Santhosh Kumar KC announces new movie after 7 Years

ರಿಷಬ್ ಶೆಟ್ಟಿ ಹೀರೋ ಆಗಿ ನಟಿಸಿದ್ದ ಮೊದಲ ಸಿನಿಮಾ ‘ಬೆಲ್ ಬಾಟಂ’ 2019ರಲ್ಲಿ ಬಿಡುಗಡೆ ಆಗಿತ್ತು. ಜಯತೀರ್ಥ ನಿರ್ದೇಶನದ ಆ ಸಿನಿಮಾವನ್ನು ಸಂತೋಷ್ ಕುಮಾರ್ ಕೆ.ಸಿ. (Santhosh Kumar KC) ಅವರು ನಿರ್ಮಾಣ ಮಾಡಿದ್ದರು. ಆ ಚಿತ್ರ ಸೂಪರ್ ಹಿಟ್ ಆದರೂ ಕೂಡ ಸಂತೋಷ್ ಅವರು ಇನ್ನೊಂದು ಸಿನಿಮಾ ನಿರ್ಮಾಣಕ್ಕೆ ಮುಂದಾಗಿರಲಿಲ್ಲ. ಈಗ ಮತ್ತೆ ಅವರು ಬಂಡವಾಳ ಹೂಡಲು ಸಜ್ಜಾಗಿದ್ದಾರೆ. ಹೌದು, ಬರೋಬ್ಬರಿ 7 ವರ್ಷಗಳ ಗ್ಯಾಪ್ ಬಳಿಕ ಸಂತೋಷ್ ಕುಮಾರ್ ಅವರು ಹೊಸ ಸಿನಿಮಾವನ್ನು ಘೋಷಿಸಿದ್ದಾರೆ. ‘ಹುಬ್ಬಳ್ಳಿ ಹಂಟರ್ಸ್’ (Hubbli Hunters) ಎಂದು ಶೀರ್ಷಿಕೆ ಇಡಲಾಗಿದೆ.

‘ಗೋಲ್ಡನ್ ಹಾರ್ಸ್ ಸಿನಿಮಾ’ ಬ್ಯಾನರ್ ಮೂಲಕ ನಿರ್ಮಾಪಕ ಸಂತೋಷ್ ಕುಮಾರ್ ಅವರು ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾದ ನಿರ್ಮಾಣಕ್ಕೆ‌ ಕೈ ಹಾಕಿದ್ದಾರೆ. ಈ ಸಿನಿಮಾಗೆ ‘ಎಡಗೈ ಅಪಘಾತಕ್ಕೆ ಕಾರಣ’ ಖ್ಯಾತಿಯ ನಿರ್ದೇಶಕರು ಸಾಥ್ ಕೊಟ್ಟಿದ್ದಾರೆ. ಹೌದು, ಕಳೆದ ವರ್ಷ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಮಾಡಿ ಗಮನ ಸೆಳೆದ ಸಮರ್ಥ್ ಬಿ. ಕಡಕೋಳ ಅವರು ಈಗ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಲು ಸಜ್ಜಾಗಿದ್ದಾರೆ.

ಅನೇಕ ಸಿನಿಮಾಗಳ ಮೂಲಕ ಗಮನಾರ್ಹ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡ ನಟ ಪ್ರಮೋದ್ ಶೆಟ್ಟಿ ಅವರು ‘ಹುಬ್ಬಳ್ಳಿ ಹಂಟರ್ಸ್’ ಚಿತ್ರಕ್ಕೆ ಹೀರೋ ಆಗಿದ್ದಾರೆ. ‘ಮಹಾನಟಿ‌’ ಖ್ಯಾತಿಯ ಧನ್ಯಶ್ರೀ ಸುಜಿತ್ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಸಿನಿಮಾದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ.

Hubbli Hunters Team

‘ಹುಬ್ಬಳ್ಳಿ ಹಂಟರ್ಸ್’ ಎಂಬ ಶೀರ್ಷಿಕೆ ಹೇಳುತ್ತಿದ್ದಂತೆಯೇ ಇದು ಉತ್ತರ ಕರ್ನಾಟಕ ಭಾಗದ ಕಥೆ ಇರುವ ಸಿನಿಮಾ ಎಂಬುದು ಖಚಿತವಾಗುತ್ತದೆ. ಹೌದು, ಇದು ಉತ್ತರ ಕರ್ನಾಟಕದ ಸೊಗಡಿನ ಕಥೆ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಸಮರ್ಥ್ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅಭಿಮನ್ಯು ಸದಾನಂದನ್ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಲಿದ್ದಾರೆ.

ಇದನ್ನೂ ಓದಿ: ‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ

ಜನವರಿ 26ರಿಂದ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ಪ್ರಸನ್ನ ಕೇಶವ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಮೂಲಕ ಸಖತ್ ಮನರಂಜನೆ ಇರುವ ಸಿನಮಾವನ್ನು ಪ್ರೇಕ್ಷಕರಿಗೆ ನೀಡಲು ಸಮರ್ಥ್ ಅವರು ಹೊರಟಿದ್ದಾರೆ. ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್, ಸಮರ್ಥ್ ಅವರ ಸಂಭಾಷಣೆ ಈ ಸಿನಿಮಾಗೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ವಾಪಸ್, ಯಾವ ಕ್ಷೇತ್ರದಿಂದ ಸ್ಪರ್ಧೆ? ಎಚ್​​​ಡಿಕೆ ಹೇಳಿದ್ದಿಷ್ಟು – Kannada News | HD Kumaraswamy Once Again Express coming Back to State politics from national

ಮಂಡ್ಯ, (ಜನವರಿ 23): ಎನ್​​ಡಿಎ ಕೈಜೋಡಿಸಿ ರಾಷ್ಟ್ರ ರಾಜಕಾರಣದಲ್ಲಿ ಬ್ಯುಸಿ ಆಗಿರುವ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ (HD Kumaraswamy), ಮತ್ತೆ ರಾಜ್ಯ ರಾಜಕೀಯಕ್ಕೆ ಮರಳುವ ಸೂಚನೆ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕುಮಾರಸ್ವಾಮಿ ಮಾತಾಡ್ತಿದ್ದು, ಕಾಂಗ್ರೆಸ್​ ಸರ್ಕಾರ ವಿರುದ್ಧ ಕೆಂಡಕಾರುತ್ತಿದ್ದಾರೆ. ಇತ್ತೀಗಷ್ಟೇ ಜೆಡಿಎಸ್​ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಡ್ಯಾಡಿ ಈಸ್​ ಹೋಮ್ ಎಐ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ರಾಜ್ಯ ರಾಜಕಾರಣಕ್ಕೆ ಹಿಂತಿರುಗುವ ಬಗ್ಗೆ ಕುಮಾರಸ್ವಾಮಿ ಮಾತಾಡಿದ್ದಾರೆ. ಹೌದು… ಇಂದು (ಜನವರಿ 23) ಮಂಡ್ಯ ತಾಲೂಕಿನ ಶಿವಹಳ್ಳಿಯಲ್ಲಿ ಮಾತನಾಡಿರುವ ಕುಮಾರಸ್ವಾನಿ, ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಪಡುತ್ತಾರೋ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಮರು ಪ್ರವೇಶದ ಗುಟ್ಟು ಬಿಚ್ಚಿಟ್ಟಿದ್ದಾರೆ.

ಮಂಡ್ಯ ತಾಲೂಕಿನ ಶಿವಹಳ್ಳಿಯಲ್ಲಿ ಮಾತನಾಡುತ್ತಿದ್ದ ವೇಳೆ ರಾಜ್ಯ ರಾಜಕಾರಣಕ್ಕೆ ವಾಪಸ್ ಆಗುತ್ತೀರಾ ಎನ್ನುವ ಮಾಧ್ಯಮಗಳ ಪ್ರಶ್ನಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಪಡುತ್ತಾರೋ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಊಹೆ ಇರಲಿಲ್ಲ. ಸಿ.ಎಸ್​.ಪುಟ್ಟರಾಜುರನ್ನು ನಿಲ್ಲಿಸಬೇಕು ಅಂದುಕೊಂಡಿದ್ದೆ. ಆದ್ರೆ, ಅನಿವಾರ್ಯವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕಾಯಿತು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ!

ಡ್ಯಾಡಿ ಈಸ್​ ಹೋಮ್​

ಇತ್ತೀಚೆಗೆ ಅಷ್ಟೇ ಜೆಡಿಎಸ್ ಸೋಶಿಯಲ್ ಮೀಡಿಯಾ ಪೇಜ್​ನಲ್ಲಿ ಸದ್ದು ಮಾಡಿದ್ದ ಡ್ಯಾಡಿ ಈಸ್​ ಹೋಮ್​ ಎಐ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಜೊತೆಗೆ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಕುಮಾರಸ್ವಾಮಿ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡುವ ಸೂಚನೆಯೇ ಈ ವಿಡಿಯೋ ಎನ್ನುವ ಮಾತು ಕೇಳಿ ಬಂದಿತ್ತು. ಈ ಚರ್ಚೆ ಬೆನ್ನಲ್ಲೇ ಸಂಕ್ರಾಂತಿ ಹಬ್ಬದಂದು ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ಕೊಟ್ಟಿದ್ದರು.

ಅಂದರೆ ಕುಮಾರಸ್ವಾಮಿ ಅವರು ಮೇಲಿಂದ ಮೇಲೆ ರಾಜ್ಯ ರಾಜಕಾರಣಕ್ಕೆ ವಾಪಸ್ ಆಗುವ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಇವತ್ತು ಮಂಡ್ಯದಲ್ಲಿ ಮಾತನಾಡಿರುವ ಮಾತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ  ಅವರಿಗೆ ಮಂಡ್ಯ ಲೋಕಸಭೆಗೆ ಸ್ಪರ್ಧಿಸುವ ಆಸೆ ಇರಲಿಲ್ವಂತೆ.  ಆದ್ರೆ, ಕೊನೆ ಕ್ಷಣದಲ್ಲಿ ಅನಿವಾರ್ಯವಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕಾದ ಅನಿವಾರ್ಯತೆ ಬಂತು ಎಂದಿದ್ದಾರೆ.  ಅಂದರೆ ರಾಷ್ಟ್ರರಾಜಕರಣದ ಬದಲಾಗಿ ರಾಜ್ಯ ರಾಜಕಾರಣದಲ್ಲೇ ಇರುವ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.. ಹೀಗಾಗಿ ಕುಮಾರಸ್ವಾಮಿ ಮುಂದಿನ ವಿಧಾನಸಭಾ ಚುನಾವಣೆ ವೇಲೆ ರಾಜ್ಯ ರಾಜಕಾರಣಕ್ಕೆ ವಾಪಸ್ ಆಗಲಿದ್ದು, ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಿಸಿದೆ.

Published On – 7:56 pm, Fri, 23 January 26

Source link

ಐಸಿಸಿ ಎಚ್ಚರಿಕೆಗೂ ಬಗ್ಗದ ಬಾಂಗ್ಲಾದೇಶ; ಕೈತಪ್ಪುತ್ತಾ ವಿಶ್ವಕಪ್ ಆತಿಥ್ಯ? – Kannada News | Bangladesh Cricket Crisis: T20 World Cup Exit and ICC Sanctions Threaten 2031 Hosting Rights

ತನ್ನ ಗುಂಡಿಯನ್ನು ತಾನೇ ತೊಡಿಕೊಳ್ಳುತ್ತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (Bangladesh Cricket Board) ಸಂಕಷ್ಟದ ದಿನಗಳು ಆರಂಭವಾಗಿವೆ. ಐಸಿಸಿ (ICC) ಎಚ್ಚರಿಕೆಗೂ ಬಗ್ಗದೆ ಟಿ20 ವಿಶ್ವಕಪ್​ನಿಂದ (T20 World Cup) ತನ್ನ ತಂಡದ ಹೆಸರನ್ನು ಹಿಂಪಡೆದಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಸರಿಸುಮಾರ್ 260 ಕೋಟಿ ಗೂ. ಅಧಿಕ ನಷ್ಟವುಂಟಾಗಲಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಬಾಂಗ್ಲಾದೇಶ ತಂಡದ ಆಟಗಾರರಿಗೂ ಮಂಡಳಿಯ ನಿರ್ಧಾರದಿಂದ ನಷ್ಟವುಂಟಾಗಿದೆ. ಇದೀಗ ಇದೆಲ್ಲದರ ಜೊತೆಗೆ ಐಸಿಸಿಯ ವಿರುದ್ಧವೇ ಆರೋಪಗಳ ಮಳೆಹರಿಸುತ್ತಿರುವ ಬಾಂಗ್ಲಾದೇಶ 2031 ರ ವಿಶ್ವಕಪ್ ಆತಿಥ್ಯವನ್ನು ಕಳೆದುಕೊಳ್ಳುವ ಹೊಸ್ತಿಲಿನಲ್ಲಿದೆ.

ವಾಸ್ತವವಾಗಿ ಐಪಿಎಲ್​ನಿಂದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಸಿಸಿಐ ಹೊರಹಾಕಿತ್ತು. ಇದರಿಂದ ಕೆರಳಿದ ಬಾಂಗ್ಲಾದೇಶ ಮಂಡಳಿ ಟಿ20 ವಿಶ್ವಕಪ್‌ಗಾಗಿ ನಮ್ಮ ತಂಡ ಭಾರತಕ್ಕೆ ಬರುವುದಿಲ್ಲ ಎಂದು ಬೆದರಿಕೆ ಹಾಕಿ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾ ಅಥವಾ ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿತು. ಆದರೆ ಬಿಸಿಸಿಐ ಮತ್ತು ಐಸಿಸಿ, ಬಾಂಗ್ಲಾದೇಶ ಮಂಡಳಿಯನ್ನು ಮನವೊಲಿಸಲು ಪ್ರಯತ್ನಿಸಿದವು. ಆದರೆ ಬಾಂಗ್ಲಾದೇಶ ಸರ್ಕಾರದ ಒತ್ತಡದಿಂದಾಗಿ ಬಾಂಗ್ಲಾ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್​ನಿಂದ ಹಿಂದೆ ಸರಿದಿದೆ.

ಆತಿಥ್ಯ ಕಳೆದುಕೊಳ್ಳುತ್ತಾ ಬಾಂಗ್ಲಾ?

ಐಸಿಸಿಯ ಎಚ್ಚರಿಕೆಗೂ ಬಗ್ಗದ ಬಾಂಗ್ಲಾದೇಶ ಇದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಬಾಂಗ್ಲಾದೇಶ ಟಿ20 ವಿಶ್ವಕಪ್​ನಿಂದ ಹೊರಬಿದ್ದಿರುವುದರಿಂದ ಸ್ಕಾಟ್ಲೆಂಡ್ ಅದರ ಸ್ಥಾನವನ್ನು ಪಡೆದುಕೊಂಡಿದೆ. ಇದಲ್ಲದೆ ಐಸಿಸಿಯಿಂದ ಬಾಂಗ್ಲಾದೇಶ ಮಂಡಳಿಗೆ ಬರುತ್ತಿದ್ದ ಆದಾಯವು ಸ್ಥಗಿತಗೊಳ್ಳಲಿದೆ. ಇದರ ಜೊತೆಗೆ ಭವಿಷ್ಯದಲ್ಲಿ ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಐಸಿಸಿ ಪಂದ್ಯಾವಳಿಗಳು ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆಗಳಿವೆ. ಬಾಂಗ್ಲಾದೇಶವು ಕೆಲವು ವರ್ಷಗಳ ಹಿಂದೆ ಟಿ20 ವಿಶ್ವಕಪ್ ಅನ್ನು ಆಯೋಜಿಸಿತ್ತು. ಹಾಗೆಯೇ ಭಾರತ ಮತ್ತು ಶ್ರೀಲಂಕಾದೊಂದಿಗೆ 2011 ರ ವಿಶ್ವಕಪ್ ಅನ್ನು ಸಹ ಆಯೋಜಿಸಿತ್ತು.

ದೇಶದಲ್ಲಿನ ಯಶಸ್ವಿ ಪಂದ್ಯಾವಳಿಗಳು ಮತ್ತು ಆಟದ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಐಸಿಸಿ ಬಾಂಗ್ಲಾದೇಶಕ್ಕೆ ಮತ್ತೊಂದು ಪ್ರಮುಖ ಪಂದ್ಯಾವಳಿಯ ಆತಿಥ್ಯ ವಹಿಸುವ ಅವಕಾಶ ನೀಡಿತ್ತು. ಬಾಂಗ್ಲಾದೇಶವನ್ನು 2031 ರ ವಿಶ್ವಕಪ್‌ನ ಸಹ-ಆತಿಥೇಯರನ್ನಾಗಿ ನೇಮಿಸಲಾಗಿದೆ, ಕಾಕತಾಳೀಯವಾಗಿ ಭಾರತದೊಂದಿಗೆ ಆತಿಥ್ಯ ವಹಿಸುವ ಹಕ್ಕುಗಳನ್ನು ಹಂಚಿಕೊಂಡಿದೆ. ಇದೀಗ ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಬಳಿ ಇರುವ ವಿಶ್ವಕಪ್ ಪಂದ್ಯಾವಳಿಯ ಆತಿಥ್ಯ ಹಕ್ಕುಗಳನ್ನು ಕಸಿದುಕೊಳ್ಳುಬಹುದು. ಇದು ಸಂಭವಿಸಿದಲ್ಲಿ, ಬಾಂಗ್ಲಾದೇಶ ಮಂಡಳಿಯು ಮತ್ತೊಂದು ಪ್ರಮುಖ ಆದಾಯದ ಅವಕಾಶವನ್ನು ಕಳೆದುಕೊಳ್ಳುತ್ತದೆ.

ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ

ಕೋಟಿಗಟ್ಟಲೆ ನಷ್ಟ

ಬಾಂಗ್ಲಾದೇಶವು ವಿಶ್ವಕಪ್‌ನಲ್ಲಿ ಭಾಗವಹಿಸಲು ನಿರಾಕರಿಸಿದರೆ, ಐಸಿಸಿಯಿಂದ ಬರುವ ವಾರ್ಷಿಕ ಆದಾಯಕ್ಕೆ (ಸುಮಾರು 3.25 ಬಿಲಿಯನ್ ಬಾಂಗ್ಲಾದೇಶಿ ಟಕಾ) ಕತ್ತರಿ ಬಿದ್ದಿದೆ. ಸಂಪೂರ್ಣವಾಗಿ ಅಲ್ಲದಿದ್ದರೂ, ಅದನ್ನು ಗಣನೀಯ ದಂಡವಾಗಿ ಕಡಿತಗೊಳಿಸಬಹುದು. ಇದಲ್ಲದೆ, ಪಂದ್ಯಾವಳಿಯಲ್ಲಿ ಭಾಗವಹಿಸಲು ಮತ್ತು ಪ್ರತಿ ಪಂದ್ಯವನ್ನು ಗೆದ್ದಿದ್ದಕ್ಕಾಗಿ ಅದು ಪಡೆಯುವ ಬಹುಮಾನದ ಹಣವನ್ನು ಸಹ ಕಳೆದುಕೊಳ್ಳುತ್ತದೆ. ಇದಲ್ಲದೆ, ಇದು ಬಾಂಗ್ಲಾದೇಶ ಮಹಿಳಾ ತಂಡ ಮತ್ತು ಅಂಡರ್-19 ತಂಡದ ಮೇಲೆ ಪರಿಣಾಮ ಬೀರಬಹುದು, ಅವರನ್ನು ಮುಂದಿನ ಕೆಲವು ವರ್ಷಗಳ ಕಾಲ ಐಸಿಸಿ ಪಂದ್ಯಾವಳಿಗಳಿಂದ ನಿಷೇಧಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:40 pm, Fri, 23 January 26

Source link

ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar: Manjra River in Bidar Faces Crisis; Illegal Sand Mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ.

ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ

ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ. ನದಿಯಲ್ಲಿ ಟ್ಯಾಕ್ಟರ್ ಬಳಸಿಕೊಂಡು ಭಾರೀ ಪ್ರಮಾಣದಲ್ಲಿ ಮರಳನ್ನು ಹೆಕ್ಕಿ ತೆಗೆಯುತ್ತಿದ್ದಾರೆ. ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟೂರು ಹಾಗೂ ಔರಾದ್ ತಾಲೂಕಿನ ಖಾನಾಪುರ ಗ್ರಾಮದ ಸುತ್ತಮುತ್ತ ಎಗ್ಗಿಲ್ಲದೆ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ.

ಇದನ್ನೂ ಓದಿ: ಕೋಟ್ಯಂತರ ರೂ ವೆಚ್ಚದಲ್ಲಿ ನಿರ್ಮಿಸಿರುವ ಬ್ಯಾರೇಜ್​​ನಲ್ಲಿ ನಿಲ್ಲದ ನೀರು: ರೈತರ ನೀರಾವರಿ ಕನಸು ನುಚ್ಚುನೂರು

ಹಗಲು ರಾತ್ರಿಯನ್ನದೇ ಕಪ್ಪು ಮರಳು ಸಾಗಾಟ ಮಾಡಲಾಗುತ್ತಿದ್ದು, ಅಧಿಕಾರಿಗಳು ಮಾತ್ರ ನಮಗೂ, ಅದಕ್ಕೂ ಸಂಬಂಧವೇ ಇಲ್ಲದವರಂತೆ ವರ್ತನೆ ಮಾಡುತ್ತಿದ್ದಾರೆ. ಟನ್ ಗಟ್ಟಲೇ ಮಾಂಜ್ರಾ ನದಿಯಿಂದ ಉತ್ತಮ ಗುಣಮಟ್ಟದ ಕಪ್ಪು ಮರಳನ್ನ ರಫ್ತು ಮಾಡಲಾಗುತ್ತಿದೆ. ಆದರೆ ಇದಕ್ಕೆ ಗಾಡ್ ಫಾದರ್ ಆಗಿ ನಿಂತಿರುವುದು ಅಧಿಕಾರಿ ವರ್ಗ ಎನ್ನುವುದು ಜನರ ಆರೋಪ.

ಕಣ್ಣೆತ್ತಿ ನೋಡದ ಅಧಿಕಾರಿಗಳು

ಇನ್ನು ತಿಂಗಳ ಹಿಂದೆ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಇಲ್ಲಿ ಔರಾದ್ ತಾಲೂಕಿನ ಖಾನಾಪುರ ಹಾಗೂ ಭಾಲ್ಕಿ ತಾಲೂಕಿನ ನಿಟ್ಟೂರು ಗ್ರಾಮ ಬಳಿಯ ಮಾಂಜ್ರಾ ನದಿಯಿಂದ ಮರಳು ತೆಗೆಯಲಾಗುತ್ತಿದೆ ಎಂದು ಮಾಹಿತಿ ನೀಡಲಾಗಿತ್ತು. ಆದರೆ ಈವರೆಗೆ ಮರಳು ತೆಗೆಯುವುದು ನಿಂತಿಲ್ಲ. ಮಾಂಜ್ರಾ ನದಿಯಲ್ಲಿ ಬರಪುರ ನೀರಿದೆ, ಎಲ್ಲಿ ನೀರನ ಹರಿವು ಕಡಿಮೆ ಇದೆಯೇ ಅದನ್ನೇ ಬಂಡಾವಾಳ ಮಾಡಿಕೊಂಡು ಕಾರ್ಮಿಕರ ಮೂಲಕ ಮರಳನ್ನ ತೆಗೆದು ಮಾರಾಟ ಮಾಡುತ್ತಿದ್ದಾರೆ. ಜೊತೆಗೆ ಹಗಲು-ರಾತ್ರಿ ಎನ್ನದೇ ಮರಳು ಸಾಗಿಸಲಾಗುತ್ತಿದ್ದರು ಪೊಲೀಸರಾಗಲಿ, ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳಾಗಲಿ ಇತ್ತ ಕಡೆ ಕಣ್ಣೆತ್ತಿ ನೋಡುತ್ತಿಲ್ಲ.

ಇನ್ನು ಮರಳನ್ನ ಸಾಗಿಸುವ ವೇಳೆ ಕೆಲ ಟ್ರ್ಯಾಕ್ಟರ್​ಗಳ ನಂಬರ್ ಪ್ಲೇಟ್​​ ಕೂಡ ಇರುವುದಿಲ್ಲ. ಹತ್ತಾರು ವಾಹನಗಳು ಹಗಲು ರಾತ್ರಿ ಎನ್ನದೇ ಮರಳು ಸಾಗಾಟ ಮಾಡುತ್ತಿರುವುದರಿಂದ ಹಲವು ಗ್ರಾಮಗಳಲ್ಲಿ ಜನರು ರಾತ್ರಿ ನಿದ್ದೆ ಮಾಡಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಮರಳುಗಾರಿಕೆಯಿಂದ ನದಿಗಳ ಅಂತರ್ಜಲ ಬತ್ತಿ ಹೋಗುತ್ತಿದೆ. ಬೇಸಿಗೆ ಆರಂಭವಾದರೆ ನದಿಯಲ್ಲಿ ನೀರು ಕಡಿಮೆಯಾದರೆ ಕುಡಿಯಲು ನೀರು ಸಿಗದ ವಾತಾವರಣ ನಿರ್ಮಾಣವಾಗುವ ಸ್ಥಿತಿ ಕೂಡ ಇದ್ದು, ಕೂಡಲೇ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಅನ್ನೋದು ಹೋರಾಟಗಾರ ಅಂಬಾದಾಸ್​​ರ ಆಗ್ರಹ.

ಇದನ್ನೂ ಓದಿ: ಎರಡು ಕಿ.ಮೀ ದೂರದ ಜಮೀನಿಗೆ 20 ಕಿ.ಮೀ ಸುತ್ತಿಕೊಂಡು ಹೋಗ್ಬೇಕು: ರೈತರ ಗೋಳು ಕೇಳೋರ್‍ಯಾರು?

ನದಿ ದಡದಲ್ಲಿ ನಿತ್ಯವೂ ಅಕ್ರಮ ಮರಳು ದಂಧೆ ನಡೆಯುತ್ತಿದೆ, ಇಷ್ಟಾಗಿಯೂ ಅಧಿಕಾರಿಗಳು ಮೌನ ವಹಿಸುತ್ತಿರುವುದನ್ನ ನೋಡಿದರೆ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಅನ್ನೋದು ರಹಸ್ಯಮಯವಾಗಿ ಉಳಿದಿಲ್ಲ. ಒಟ್ಟಾರೆ ಅಧಿಕಾರಿಗಳು ಮತ್ತು ಲೂಟಿಕೋರರ ಹಣದಾಸೆಗೆ ನದಿಪಾತ್ರ ಬರಿದಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar manjra river in bidar faces crisis illegal sand mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ.

ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ

ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ. ನದಿಯಲ್ಲಿ ಟ್ಯಾಕ್ಟರ್ ಬಳಸಿಕೊಂಡು ಭಾರೀ ಪ್ರಮಾಣದಲ್ಲಿ ಮರಳನ್ನು ಹೆಕ್ಕಿ ತೆಗೆಯುತ್ತಿದ್ದಾರೆ. ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟೂರು ಹಾಗೂ ಔರಾದ್ ತಾಲೂಕಿನ ಖಾನಾಪುರ ಗ್ರಾಮದ ಸುತ್ತಮುತ್ತ ಎಗ್ಗಿಲ್ಲದೆ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ.

ಇದನ್ನೂ ಓದಿ: ಕೋಟ್ಯಂತರ ರೂ ವೆಚ್ಚದಲ್ಲಿ ನಿರ್ಮಿಸಿರುವ ಬ್ಯಾರೇಜ್​​ನಲ್ಲಿ ನಿಲ್ಲದ ನೀರು: ರೈತರ ನೀರಾವರಿ ಕನಸು ನುಚ್ಚುನೂರು

ಹಗಲು ರಾತ್ರಿಯನ್ನದೇ ಕಪ್ಪು ಮರಳು ಸಾಗಾಟ ಮಾಡಲಾಗುತ್ತಿದ್ದು, ಅಧಿಕಾರಿಗಳು ಮಾತ್ರ ನಮಗೂ, ಅದಕ್ಕೂ ಸಂಬಂಧವೇ ಇಲ್ಲದವರಂತೆ ವರ್ತನೆ ಮಾಡುತ್ತಿದ್ದಾರೆ. ಟನ್ ಗಟ್ಟಲೇ ಮಾಂಜ್ರಾ ನದಿಯಿಂದ ಉತ್ತಮ ಗುಣಮಟ್ಟದ ಕಪ್ಪು ಮರಳನ್ನ ರಫ್ತು ಮಾಡಲಾಗುತ್ತಿದೆ. ಆದರೆ ಇದಕ್ಕೆ ಗಾಡ್ ಫಾದರ್ ಆಗಿ ನಿಂತಿರುವುದು ಅಧಿಕಾರಿ ವರ್ಗ ಎನ್ನುವುದು ಜನರ ಆರೋಪ.

ಕಣ್ಣೆತ್ತಿ ನೋಡದ ಅಧಿಕಾರಿಗಳು

ಇನ್ನು ತಿಂಗಳ ಹಿಂದೆ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಇಲ್ಲಿ ಔರಾದ್ ತಾಲೂಕಿನ ಖಾನಾಪುರ ಹಾಗೂ ಭಾಲ್ಕಿ ತಾಲೂಕಿನ ನಿಟ್ಟೂರು ಗ್ರಾಮ ಬಳಿಯ ಮಾಂಜ್ರಾ ನದಿಯಿಂದ ಮರಳು ತೆಗೆಯಲಾಗುತ್ತಿದೆ ಎಂದು ಮಾಹಿತಿ ನೀಡಲಾಗಿತ್ತು. ಆದರೆ ಈವರೆಗೆ ಮರಳು ತೆಗೆಯುವುದು ನಿಂತಿಲ್ಲ. ಮಾಂಜ್ರಾ ನದಿಯಲ್ಲಿ ಬರಪುರ ನೀರಿದೆ, ಎಲ್ಲಿ ನೀರನ ಹರಿವು ಕಡಿಮೆ ಇದೆಯೇ ಅದನ್ನೇ ಬಂಡಾವಾಳ ಮಾಡಿಕೊಂಡು ಕಾರ್ಮಿಕರ ಮೂಲಕ ಮರಳನ್ನ ತೆಗೆದು ಮಾರಾಟ ಮಾಡುತ್ತಿದ್ದಾರೆ. ಜೊತೆಗೆ ಹಗಲು-ರಾತ್ರಿ ಎನ್ನದೇ ಮರಳು ಸಾಗಿಸಲಾಗುತ್ತಿದ್ದರು ಪೊಲೀಸರಾಗಲಿ, ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳಾಗಲಿ ಇತ್ತ ಕಡೆ ಕಣ್ಣೆತ್ತಿ ನೋಡುತ್ತಿಲ್ಲ.

ಇನ್ನು ಮರಳನ್ನ ಸಾಗಿಸುವ ವೇಳೆ ಕೆಲ ಟ್ರ್ಯಾಕ್ಟರ್​ಗಳ ನಂಬರ್ ಪ್ಲೇಟ್​​ ಕೂಡ ಇರುವುದಿಲ್ಲ. ಹತ್ತಾರು ವಾಹನಗಳು ಹಗಲು ರಾತ್ರಿ ಎನ್ನದೇ ಮರಳು ಸಾಗಾಟ ಮಾಡುತ್ತಿರುವುದರಿಂದ ಹಲವು ಗ್ರಾಮಗಳಲ್ಲಿ ಜನರು ರಾತ್ರಿ ನಿದ್ದೆ ಮಾಡಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಮರಳುಗಾರಿಕೆಯಿಂದ ನದಿಗಳ ಅಂತರ್ಜಲ ಬತ್ತಿ ಹೋಗುತ್ತಿದೆ. ಬೇಸಿಗೆ ಆರಂಭವಾದರೆ ನದಿಯಲ್ಲಿ ನೀರು ಕಡಿಮೆಯಾದರೆ ಕುಡಿಯಲು ನೀರು ಸಿಗದ ವಾತಾವರಣ ನಿರ್ಮಾಣವಾಗುವ ಸ್ಥಿತಿ ಕೂಡ ಇದ್ದು, ಕೂಡಲೇ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಅನ್ನೋದು ಹೋರಾಟಗಾರ ಅಂಬಾದಾಸ್​​ರ ಆಗ್ರಹ.

ಇದನ್ನೂ ಓದಿ: ಎರಡು ಕಿ.ಮೀ ದೂರದ ಜಮೀನಿಗೆ 20 ಕಿ.ಮೀ ಸುತ್ತಿಕೊಂಡು ಹೋಗ್ಬೇಕು: ರೈತರ ಗೋಳು ಕೇಳೋರ್‍ಯಾರು?

ನದಿ ದಡದಲ್ಲಿ ನಿತ್ಯವೂ ಅಕ್ರಮ ಮರಳು ದಂಧೆ ನಡೆಯುತ್ತಿದೆ, ಇಷ್ಟಾಗಿಯೂ ಅಧಿಕಾರಿಗಳು ಮೌನ ವಹಿಸುತ್ತಿರುವುದನ್ನ ನೋಡಿದರೆ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಅನ್ನೋದು ರಹಸ್ಯಮಯವಾಗಿ ಉಳಿದಿಲ್ಲ. ಒಟ್ಟಾರೆ ಅಧಿಕಾರಿಗಳು ಮತ್ತು ಲೂಟಿಕೋರರ ಹಣದಾಸೆಗೆ ನದಿಪಾತ್ರ ಬರಿದಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version