ಬೆಂಗಳೂರು ಕರಗ 2026: ಏನಿದು ಅಲಗು ಸೇವೆ? ವೀರಕುಮಾರರು ಖಡ್ಗದಿಂದ ಎದೆಗೆ ಬಡಿದುಕೊಳ್ಳುವುದರ ಹಿಂದಿದೆ ರೋಚಕ ಇತಿಹಾಸ!

ಬೆಂಗಳೂರು ಕರಗ 2026: ಏನಿದು ಅಲಗು ಸೇವೆ? ವೀರಕುಮಾರರು ಖಡ್ಗದಿಂದ ಎದೆಗೆ ಬಡಿದುಕೊಳ್ಳುವುದರ ಹಿಂದಿದೆ ರೋಚಕ ಇತಿಹಾಸ!

ಬೆಂಗಳೂರು, ಮಾರ್ಚ್​ 31: ಬೆಂಗಳೂರಿನ ಅತ್ಯಂತ ಹಳೆಯ ಮತ್ತು ಸಾಂಪ್ರದಾಯಿಕ ಉತ್ಸವವಾದ ‘ಬೆಂಗಳೂರು ಕರಗ ಶಕ್ತ್ಯೋತ್ಸವ’ಕ್ಕೆ (Karaga Shaktyotsava) ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಕರಗದ ಪೌರಾಣಿಕ ಹಿನ್ನೆಲೆ ಮತ್ತು ವೀರಕುಮಾರರ ಆಚರಣೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಏನಿದು ಅಲಗು ಸೇವೆ? ಇದರ ಹಿನ್ನೆಲೆ ಏನು?

ಪೌರಾಣಿಕ ನಂಬಿಕೆಯಂತೆ, ಚೈತ್ರ ಪೂರ್ಣಿಮೆಯ ಮೂರು ದಿನಗಳ ಮೊದಲು ತಾಯಿ ದ್ರೌಪದಿ ದೇವಿ ಭೂಮಿಗೆ ಬರುತ್ತಾಳೆ ಎಂಬ ನಂಬಿಕೆಯಿದೆ. ಪಾಂಡವರ ಸ್ವರ್ಗಾರೋಹಣದ ಸಂದರ್ಭದಲ್ಲಿ ದ್ರೌಪದಿ ದೇವಿ ಮೂರ್ಛೆ ಹೋದಾಗ, ಅವಳ ಮುಂದೆ ತಿಮಿರಾಸುರ ಎಂಬ ರಾಕ್ಷಸ ಪ್ರತ್ಯಕ್ಷನಾಗುತ್ತಾನೆ. ಆ ರಾಕ್ಷಸನ ಸಂಹಾರಕ್ಕಾಗಿ ದ್ರೌಪದಿ ದೇವಿ ತನ್ನ ಶಕ್ತಿಯಿಂದ ‘ವೀರಕುಮಾರರನ್ನು’ ಸೃಷ್ಟಿಸುತ್ತಾಳೆ.

ರಾಕ್ಷಸ ಸಂಹಾರದ ನಂತರ ಗೋವಿಂದನ ದರ್ಶನ ಪಡೆದಾಗ ತಾಯಿ ದ್ರೌಪದಿ ದೇವಿ ಅದೃಶ್ಯಳಾಗುತ್ತಾಳೆ. ಈ ವೇಳೆ ತಮ್ಮನ್ನು ಅಗಲಿದ ತಾಯಿಯನ್ನು ಮತ್ತೆ ನೆನೆದು, ಭಕ್ತಿಯ ಪರವಶತೆಯಲ್ಲಿ ವೀರಕುಮಾರರು ತಮ್ಮಲ್ಲಿದ್ದ ಖಡ್ಗದಿಂದ ಎದೆಗೆ ಬಡಿದುಕೊಳ್ಳುತ್ತಾರೆ. ಇದನ್ನೇ ಇಂದಿಗೂ ‘ಅಲಗು ಸೇವೆ’ ಎಂದು ಕರೆಯಲಾಗುತ್ತದೆ. ತಾಯಿ ನಮ್ಮನ್ನು ಬಿಟ್ಟು ಹೋಗಬೇಡ, ನಮ್ಮನ್ನು ರಕ್ಷಿಸು ಎಂದು ಬೇಡುವ ಸಂಕೇತವಾಗಿ ಈ ಸೇವೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಟ್ಟುನಿಟ್ಟಿನ ವ್ರತ ಆಚರಿಸುವ ವೀರಕುಮಾರರು

ಕರಗ ಉತ್ಸವದ 11 ದಿನಗಳ ಕಾಲ ವೀರಕುಮಾರರು ಅತ್ಯಂತ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತಾರೆ. ಅವರು ಬರಿಗಾಲಿನಲ್ಲಿ ನಡೆಯುತ್ತಾರೆ, ಹೊರಗಡೆ ಎಲ್ಲೂ ಊಟ ಮಾಡುವುದಿಲ್ಲ ಮತ್ತು ದಿನವಿಡೀ ಉಪವಾಸವಿದ್ದು ದೇವಸ್ಥಾನದ ಪ್ರಸಾದವನ್ನು ಮಾತ್ರ ಸೇವಿಸುತ್ತಾರೆ. ಈ ಭಕ್ತಿ ಮತ್ತು ಶಿಸ್ತಿನ ಆಚರಣೆಯೇ ಬೆಂಗಳೂರು ಕರಗದ ವೈಶಿಷ್ಟ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ನೀಚ ಕೃತ್ಯ: ಸೂಪರ್​ ಮಾರ್ಕೆಟ್​ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಪ್ಯಾಂಟ್ ಸಡಿಲಿಸಿ ಗುಪ್ತಾಂಗ ತಾಗಿಸಿದ ವ್ಯಕ್ತಿ

ಲಾಸ್ ಏಂಜಲೀಸ್, ಮಾರ್ಚ್​ 31: ಎಂಥಾ ನೀಚ ಕೃತ್ಯ, ಸಾರ್ವಜನಿಕ ಸ್ಥಳಗಳಲ್ಲೇ ಎಲ್ಲರೆದುರೇ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಲಾಸ್ ಏಂಜಲೀಸ್​ನ ಸೂಪರ್ ಮಾರ್ಕೆಟ್​ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ(Physical Harassment) ನೀಡಿರುವ ಘಟನೆ ವರದಿಯಾಗಿದೆ. ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸೂಪರ್ ಮಾರ್ಕೆಟ್​​ನಲ್ಲಿ ವ್ಯಕ್ತಿಯೊಬ್ಬ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ಘಟನೆ ಇದಾಗಿದೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ ಫುಡ್ಸ್ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಯುವತಿಯೊಬ್ಬಳು ಮಾರ್ಕೆಟ್​ನಲ್ಲಿ ಮನೆಗೆ ಬೇಕಾದ ವಸ್ತುಗಳನ್ನು ಹುಡುಕುತ್ತಿದ್ದಾಗ ಆ ವ್ಯಕ್ತಿ ಆಕೆಯ ಹಿಂದೆ ಬಂದು ನಿಂತು ಅನುಚಿತವಾಗಿ ವರ್ತಿಸಿದ್ದಾನೆ.

ಮತ್ತಷ್ಟು ಓದಿ: ದಾರಿಯುದ್ಧಕ್ಕೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಅಷ್ಟೇ ಅಲ್ಲದೆ ಪ್ಯಾಂಟ್ ಜಿಪ್ ತೆರೆದು ಆಕೆಯ ಕಿವಿಗೆ ಗುಪ್ತಾಂಗವನ್ನು ತಾಕಿಸಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಯುವತಿ ಅಲ್ಲಿಂದ ಓಡಿ ಹೋಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಅಧಿಕಾರಿಗಳು ಬರುವಷ್ಟರಲ್ಲಿ ಆತ ಅಲ್ಲಿಂದ ಕಾಲ್ಕಿತ್ತಿದ್ದ. ಆ ಕೃತ್ಯ ಆತ ಎಸಗುವ ಸಮಯದಲ್ಲಿ ಆತನ ಕೈಯಲ್ಲಿ ಫೋನ್ ಕೂಡ ಇತ್ತು ಎಂದು ಆಕೆ ತಿಳಿಸಿದ್ದಾಳೆ.

ಈ ಘಟನೆ ಮಾರ್ಚ್ 23 ರಂದು ನಡೆದಿದ್ದು, ಆವರಣದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ವಿಡಿಯೋ ಸೆರೆಯಾಗಿದೆ. ಆ ವ್ಯಕ್ತಿಯ ವಯಸ್ಸು 30ರ ಆಸುಪಾಸಿರಬಹುದು ಎಂದು ಅಂದಾಜಿಸಲಾಗಿದೆ. ಗಡ್ಡ, ನೀಲಿ ಬಣ್ಣದ ಶರ್ಟ್​ ಹರಿದ ಜೀನ್ಸ್​ ತೊಟ್ಟಿದ್ದ.ದೃಶ್ಯಾವಳಿಗಳು ಮತ್ತು ಲಭ್ಯವಿರುವ ಇತರ ಸುಳಿವುಗಳನ್ನು ಬಳಸಿಕೊಂಡು ಆರೋಪಿಯನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಅಧಿಕಾರಿಗಳು ಈಗ ಕೆಲಸ ಮಾಡುತ್ತಿದ್ದಾರೆ. ಅಂಗಡಿಯ ಆಡಳಿತ ಮಂಡಳಿಯು ತನಿಖೆಗೆ ಸಹಕರಿಸಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ವಿಜಯಲಕ್ಷ್ಮೀ ರಂಭಾ ಆಗಿದ್ದು ಹೇಗೆ? ಕಂಬ್ಯಾಕ್​​​ಗೆ ನಡೆದಿದೆ ಪ್ಲ್ಯಾನ್

ನಟಿ ರಂಭಾ ಅವರು ಈಗ ವಿದೇಶದಲ್ಲಿ ಸೆಟಲ್ ಆಗಿದ್ದಾರೆ. 90ರ ದಶಕದಲ್ಲಿ ಮಿಂಚಿದ್ದ ಅವರು ಈಗ ಚಿತ್ರರಂಗದಿಂದ ಸಂಪೂರ್ಣವಾಗಿ ಹಿಂದೆ ಸರಿದಿದ್ದಾರೆ. ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳಬೇಕು ಎಂದು ಕನಸು ಕಾಣುತ್ತಿದ್ದಾರೆ. ಹಾಗಾದರೆ ರಂಭಾ ಅವರು ಯಾರು? ಅವರ ನಿಜವಾದ ಹೆಸರು ಏನು? ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ಉತ್ತರ.

ರಂಭಾ ಅವರ ನಿಜವಾದ ಹೆಸರು ವಿಜಯಲಕ್ಷ್ಮಿ. ಸಿನಿಮಾ ರಂಗಕ್ಕೆ ಕಾಲಿಟ್ಟ ಬಳಿಕ ಅವರು ಹೆಸರನ್ನು ರಂಭಾ ಎಂದು ಬದಲಿಸಿಕೊಂಡರು. ರಂಭಾ ಕನ್ನಡದಲ್ಲಿ ರವಿಚಂದ್ರನ್ ಜೊತೆ ನಟಿಸಿದ್ದಾರೆ. ಇಷ್ಟೇ ಅಲ್ಲದೆ ತೆಲುಗು, ತಮಿಳು, ಹಿಂದಿ, ಮಲಯಾಳ, ಬೆಂಗಾಳಿ, ಭೋಜ್​​ಪುರಿ ಹಾಗೂ ಇಂಗ್ಲಿಷ್ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ರಂಭಾ ಅವರಿಗೆ ಇದೆ.

ಮಲಯಾಳಂ ಸಿನಿಮಾ ‘ಸರ್ಗಂ’ (1992) ಮೂಲಕ ರಂಭಾ ಬಣ್ಣದ ಬದುಕು ಆರಂಭಿಸಿದರು. ಅದೇ ವರ್ಷ ತೆರೆಗೆ ಬಂದ ಅವರ ನಟನೆಯ ತೆಲುಗಿನ ‘ಆ ಒಕ್ಕಟಿ ಅಡಕ್ಕು’ ಅವರ ಬಣ್ಣದ ಬದುಕಿಗೆ ಭದ್ರ ಬುನಾದಿ ಹಾಕಿ ಕೊಟ್ಟಿತು. ಈ ಚಿತ್ರದಲ್ಲಿ ರಂಭಾ ಹೆಸರಿನ ಪಾತ್ರ ಮಾಡಿದ್ದರು. ಆ ಬಳಿಕ ಅವರು ರಂಭಾ ಅಂತಲೇ ಫೇಮಸ್ ಆದರು. 1993ರಲ್ಲಿ ರಂಭಾಗೆ ಕನ್ನಡದಿಂದ ಆಫರ್ ಬಂತು. ಜಗ್ಗೇಶ್ ನಟನೆಯ ‘ಸರ್ವರ್ ಸೋಮಣ್ಣ’ ಅವರ ಕನ್ನಡದ ಮೊದಲ ಸಿನಿಮಾ.

1999ರಲ್ಲಿ ರವಿಚಂದ್ರನ್ ಜೊತೆ ‘ಓ ಪ್ರೇಮವೇ’ ಸಿನಿಮಾ ಮಾಡಿದರು. ಇಬ್ಬರ ಕೆಮಿಸ್ಟ್ರಿ ಜನರಿಗೆ ಸಖತ್ ಇಷ್ಟ ಆಯಿತು. ಅವರು ಕನ್ನಡದಲ್ಲಿ ನಟಿಸಿದ ಕೊನೆಯ ಸಿನಿಮಾ ಎಂದರೆ ಅದು ‘ಅನಾಥರು’. ಆ ಬಳಿಕ ಅವರು ಕನ್ನಡದಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಅವರ ನಟನೆ ಹಾಗೂ ಅದ್ಭುತ ಡ್ಯಾನ್ಸ್ ಅವರನ್ನು ಟಾಪ್ ಹೀರೋಯಿನ್​​ಗಳ ಸಾಲಿನಲ್ಲಿ ನಿಲ್ಲಿಸಿತು.

ಚಿತ್ರರಂಗದಲ್ಲಿ ಹೆಸರು ಮಾಡಿದ ಅವರು ನಂತರ ಅದನ್ನು ತೊರೆಯಲು ನಿರ್ಧರಿಸಿದರು. 2010ರಲ್ಲಿ ಇಂದ್ರಕುಮಾರ್ ಪದ್ಮನಾಥ್ ಅವರನ್ನು ವಿವಾಹ ಆದರು. ಆ ಬಳಿಕ ಅವರು ಚಿತ್ರರಂಗದ ಕಡೆ ಮುಖ ಮಾಡಿಲ್ಲ. ಅವರು ಇತ್ತೀಚೆಗೆ ‘ಜೋಡಿ ಆರ್ ಯೂ ರೆಡಿ ಸೀಸನ್ 2’ ರಿಯಾಲಿಟಿ ಶೋಗೆ ಜಡ್ಜ್ ಆದರು. ರಂಭಾಗೆ ಮೂವರು ಮಕ್ಕಳು. ರಂಭಾ ಸದ್ಯ ಕೆನಡಾದಲ್ಲಿ ಸೆಟಲ್ ಆಗಿದ್ದಾರೆ.

ಇದನ್ನೂ ಓದಿ: ಮೂರು ನಟಿಯರ ಗುಣ ಸಾಯಿ ಪಲ್ಲವಿಯಲ್ಲಿದೆ ಎಂದು ಮೊದಲೇ ಊಹಿಸಿದ್ದ ರಂಭಾ

‘ಮ್ಯಾಕ್ಸ್’ ನಿರ್ಮಾಪಕ ಕಲೈಪುಲಿ ಧಾನು ಅವರು ಮಾತನಾಡುವಾಗ ಒಂದು ವಿಷಯ ಹೇಳಿದ್ದರು. ‘ರಂಭಾ ಅವರ ಆಸ್ತಿ ಸುಮಾರು 2 ಸಾವಿರ ಕೋಟಿ ರೂಪಾಯಿ. ಅವರ ಗಂಡ ನನಗೆ ಕರೆ ಮಾಡಿದ್ದರು. ಪತ್ನಿಗೆ ಒಂದು ಚಾನ್ಸ್ ಕೊಡಿ ಎಂದು ಕೇಳಿದರು. ಒಳ್ಳೆಯ ಪ್ರಾಜೆಕ್ಟ್​ನ ಹುಡುಕಿ ಕೊಡುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದೇನೆ’ ಎಂಬುದಾಗಿ ಕಲೈಪುಲಿ ವಿವರಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Karaga: ಇಂದು ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ; ಹಸಿ ಕರಗ ಹೊತ್ತು ದ್ರೌಪದಿ ದೇವಿ ದರ್ಶನ!

ಬೆಂಗಳೂರು, ಮಾರ್ಚ್​ 31: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವವು ಪ್ರತಿ ವರ್ಷದಂತೆ ಈ ಬಾರಿಯೂ ಸಡಗರದಿಂದ ನಡೆಯಲು ಸಿದ್ಧವಾಗಿದೆ. ಧರ್ಮರಾಯಸ್ವಾಮಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಚೈತ್ರ ಹುಣ್ಣಿಮೆಗೆ ಮೂರು ದಿನಗಳ ಮೊದಲು ದ್ರೌಪದಿ ದೇವಿ ಭೂಮಿಗೆ ಬರುವ ನಂಬಿಕೆ ಈ ಉತ್ಸವದ ಪ್ರಮುಖ ಅಂಶವಾಗಿದೆ.

ಈ ಆಚರಣೆಗೆ ಮಹಾಭಾರತ ಕಾಲದ ಇತಿಹಾಸವಿದೆ. ಪಾಂಡವರ ಸ್ವರ್ಗಾರೋಹಣದ ಸಂದರ್ಭದಲ್ಲಿ ತಾಯಿ ದ್ರೌಪದಿ ದೇವಿ ಮೂರ್ಛೆ ಹೋದಾಗ, ತಿಮಿರಾಸುರ ಎಂಬ ರಾಕ್ಷಸನು ಅಲ್ಲಿ ಕಾಣಿಸಿಕೊಂಡನು. ಈ ರಾಕ್ಷಸನ ಸಂಹಾರಕ್ಕಾಗಿ ವೀರಕುಮಾರರನ್ನು ಸೃಷ್ಟಿಸಲಾಯಿತು. ನಂತರ ಶ್ರೀಕೃಷ್ಣ ದ್ರೌಪದಿ ದೇವಿಯನ್ನು ಕಾಣದಿದ್ದಾಗ, ವೀರಕುಮಾರರು ತಮ್ಮಲ್ಲಿದ್ದ ಖಡ್ಗದಿಂದ ತಮ್ಮ ಎದೆಗೆ ಬಡಿದುಕೊಂಡರು. ಇದನ್ನೇ ಇಂದು ಅಲಗು ಸೇವೆ ಎಂದು ಕರೆಯಲಾಗುತ್ತದೆ. ಈ ಐತಿಹಾಸಿಕ ಆಚರಣೆಗಳು ಬೆಂಗಳೂರಿನ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯುತ್ತವೆ. ಕರಗ ಮಹೋತ್ಸವವು ಬೆಂಗಳೂರಿನ ಸಾಂಸ್ಕೃತಿಕ ಪರಂಪರೆಯ ಪ್ರಮುಖ ಭಾಗವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Karnataka 1st PUC Result 2026: ಪ್ರಥಮ ಪಿಯುಸಿ ಫಲಿತಾಂಶ ಚೆಕ್ ಮಾಡಲು, ಅಂಕಪಟ್ಟಿ ಡೌನ್‌ಲೋಡ್ ಇಲ್ಲಿದೆ ಲಿಂಕ್

ಬೆಂಗಳೂರು, ಮಾರ್ಚ್​ 31: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ಪ್ರಥಮ ಪಿಯುಸಿ (1st PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ರಾಜ್ಯಾದ್ಯಂತ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ, ತಮ್ಮ ರಿಜಿಸ್ಟರ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅಂಕಪಟ್ಟಿಯನ್ನು ಪಡೆಯಬಹುದು. ಫಲಿತಾಂಶದ ಜೊತೆಗೆ ಕಾಲೇಜುಗಳಲ್ಲಿಯೂ ಸಹ ಅಂಕಪಟ್ಟಿಗಳನ್ನು ಪ್ರಕಟಿಸಲು ಸೂಚಿಸಲಾಗಿದೆ.

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2026: ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಲು ಈ ಸರಳ ಹಂತಗಳನ್ನು ಅನುಸರಿಸಿ;

  • ಹಂತ 1: ಮೊದಲಿಗೆ ಕರ್ನಾಟಕ ಪರೀಕ್ಷಾ ಫಲಿತಾಂಶದ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ಹಂತ 2: ಮುಖಪುಟದಲ್ಲಿ ಕಾಣಿಸುವ ‘1st PUC Annual Exam Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹಂತ 3: ಈಗ ಹೊಸ ಪುಟ ತೆರೆಯುತ್ತದೆ, ಅಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು (Registration Number) ನಮೂದಿಸಿ.
  • ಹಂತ 4: ನಿಮ್ಮ ವಿಷಯದ ಸ್ಟ್ರೀಮ್ (Science/Arts/Commerce) ಅನ್ನು ಆಯ್ಕೆ ಮಾಡಿ.
  • ಹಂತ 5: ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.
  • ಹಂತ 6: ನಿಮ್ಮ ಫಲಿತಾಂಶವು ಪರದೆಯ ಮೇಲೆ ಕಾಣಿಸುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಇದನ್ನು ಡೌನ್‌ಲೋಡ್ ಮಾಡಿಕೊಳ್ಳಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಒಂದು ವೇಳೆ ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಟ್ರಾಫಿಕ್ ಕಾರಣದಿಂದ ಪೇಜ್ ಲೋಡ್ ಆಗದಿದ್ದರೆ, ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ ಅಥವಾ ನಿಮ್ಮ ಕಾಲೇಜಿನ ನೋಟಿಸ್ ಬೋರ್ಡ್‌ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

ಇದನ್ನೂ ಓದಿ: SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

ಅಂಕಗಳ ಬಗ್ಗೆ ತೃಪ್ತರಾಗದ ವಿದ್ಯಾರ್ಥಿಗಳಿಗೆ, ಮರುಮೌಲ್ಯಮಾಪನ ಅಥವಾ ಉತ್ತರ ಪತ್ರಿಕೆಯ ಪರಿಶೀಲನೆಗೆ ಕೆಎಸ್‌ಇಎಬಿ ಅವಕಾಶ ನೀಡುತ್ತದೆ. ಅಭ್ಯರ್ಥಿಗಳು ಮಂಡಳಿಯು ಘೋಷಿಸಿದ ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಬೇಕು.

ಪೂರಕ ಪರೀಕ್ಷೆಗೆ ಅವಕಾಶ

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಉತ್ತೀರ್ಣರಾಗಲು ವಿಫಲರಾದ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಈ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಮಂಡಳಿಯು ಇನ್ನೂ ಪ್ರಕಟಿಸಿಲ್ಲ. ಕಳೆದ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಗಮನಿಸಿದರೆ (ಉದಾಹರಣೆಗೆ; 2024-25ರಲ್ಲಿ ಮೇ 20 ರಿಂದ ಮೇ 31 ರವರೆಗೆ ಪರೀಕ್ಷೆ ನಡೆಸಲಾಗಿತ್ತು), ಈ ವರ್ಷವೂ ಮುಂದಿನ ಎರಡು ತಿಂಗಳ ಅವಧಿಯಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Hindu Rituals: ಪೂಜೆ, ಹವನ ಅಥವಾ ಅಭಿಷೇಕಗಳಲ್ಲಿ ಹಸುವಿನ ಹಾಲು ಇರಲೇಬೇಕು ಏಕೆ ಗೊತ್ತಾ?

ಹಿಂದೂ ಧರ್ಮದ ಪೂಜೆ, ಹವನ ಮತ್ತು ಅಭಿಷೇಕಗಳಂತಹ ಧಾರ್ಮಿಕ ವಿಧಿಗಳಲ್ಲಿ ಹಾಲಿಗೆ ವಿಶೇಷ ಸ್ಥಾನವಿದೆ. ನೀರ ಅಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ಅನೇಕ ರೀತಿಯ ಅಭಿಷೇಕಗಳಲ್ಲಿ ಹಾಲು, ಅದರಲ್ಲೂ ಶುದ್ಧವಾದ ಹಸುವಿನ ಹಾಲನ್ನು ಹೆಚ್ಚು ಪ್ರಾಶಸ್ತ್ಯಪೂರ್ಣವೆಂದು ಪರಿಗಣಿಸಲಾಗುತ್ತದೆ. ನಮ್ಮ ಸಂಪ್ರದಾಯಗಳಲ್ಲಿ ಕ್ಷೀರವನ್ನು ಅಮೃತಕ್ಕೆ ಸಮಾನವೆಂದು ಬಣ್ಣಿಸಲಾಗಿದೆ. ಈ ಅಮೃತ ಸಮಾನವಾದ ಹಾಲಿನಲ್ಲಿ ಭಗವಂತನ ಶಕ್ತಿಗಳನ್ನು ಆಕರ್ಷಿಸುವ ಮತ್ತು ಗ್ರಹಿಸುವ ಶಕ್ತಿ ಅಡಗಿದೆ ಎಂಬುದು ಧಾರ್ಮಿಕ ನಂಬಿಕೆ. ಪ್ರತಿನಿತ್ಯದ ಪೂಜೆಯಲ್ಲಿ ಹಾಲಿನ ಅವಶ್ಯಕತೆ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಹಾಲಿನ ಪರಿವರ್ತನೆಯ ಚಕ್ರವು ಅದರ ಪವಿತ್ರತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಹಾಲು ಮೊಸರಾಗಿ, ಮೊಸರು ಬೆಣ್ಣೆಯಾಗಿ, ಬೆಣ್ಣೆ ತುಪ್ಪವಾಗಿ ರೂಪಾಂತರಗೊಳ್ಳುತ್ತದೆ. ಈ ಗೃತ ಅಥವಾ ತುಪ್ಪಕ್ಕೆ ಈ ಪ್ರಪಂಚದಲ್ಲಿ ಸರಿಸಮಾನವಾದ ಬೇರೆ ಯಾವುದೇ ವಸ್ತುವಿಲ್ಲ ಎಂದು ಹೇಳಲಾಗುತ್ತದೆ. ಉದಾಹರಣೆಗೆ, ತಿರುಪತಿಯ ಲಾಡುವಿನಲ್ಲಿನ ತುಪ್ಪದ ಆಕರ್ಷಕ ಸುಗಂಧವು ಹಾಲಿನಿಂದಲೇ ಬಂದಿದೆ. ಈ ತುಪ್ಪವು ಕೇವಲ ರುಚಿಯನ್ನು ನೀಡುವುದಲ್ಲದೆ, ಅದರ ಶುದ್ಧತೆ ಮತ್ತು ಆಧ್ಯಾತ್ಮಿಕ ಮಹತ್ವದಿಂದಾಗಿ ಪೂಜೆಗಳಲ್ಲಿ ಅವಿಭಾಜ್ಯ ಅಂಗವಾಗಿದೆ.

ಪೂಜೆ ಮತ್ತು ಅಭಿಷೇಕಗಳಿಗೆ ಮಾತ್ರವಲ್ಲದೆ, ಹಾಲು ಅನೇಕ ಧಾರ್ಮಿಕ ಮತ್ತು ಶುದ್ಧೀಕರಣ ಕಾರ್ಯಗಳಲ್ಲಿಯೂ ಬಳಕೆಯಾಗುತ್ತದೆ. ಉದಾಹರಣೆಗೆ, ಹೊಸ ಸೈಟ್ ಖರೀದಿಸಿದಾಗ ಭೂಮಿಯಲ್ಲಿ ಸ್ವಲ್ಪ ಹಾಲು ಹಾಕುವುದು, ಅಥವಾ ಯಾವುದೇ ಕರ್ಮ ಕ್ರಿಯೆಗಳಿಗೆ ಹೋಗಿ ಬಂದ ನಂತರ ಶುದ್ಧೀಕರಣಕ್ಕಾಗಿ ತಲೆಯ ಮೇಲೆ ಒಂದು ತೊಟ್ಟು ಹಾಲನ್ನು ಪ್ರೋಕ್ಷಣೆ ಮಾಡಿಕೊಳ್ಳುವುದು ರೂಢಿಯಲ್ಲಿದೆ. ಹಸುವಿನಿಂದ ಬಂದ ಹಾಲು ಪವಿತ್ರ ಗಂಗೆಗೆ ಸಮ ಎಂದು ಕರೆಯಲ್ಪಡುತ್ತದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಹಸುವಿನ ಇತರ ಉತ್ಪನ್ನಗಳಾದ ಗೋಮೂತ್ರ ಮತ್ತು ಗೋಮಯಕ್ಕೂ ಅಪಾರವಾದ ಪವಿತ್ರತೆ ಇದೆ. ಗೋಮೂತ್ರವನ್ನು ಧನ್ವಂತರಿಯ ಸ್ವರೂಪವೆಂದು ಭಾವಿಸಲಾಗಿದ್ದು, ಅನೇಕ ರೋಗಗಳನ್ನು ವಾಸಿ ಮಾಡುವ ಶಕ್ತಿ ಹೊಂದಿದೆ ಎಂದು ನಂಬಲಾಗಿದೆ. ಗೋಮಯವನ್ನು ಪವಿತ್ರ ನದಿಗಳ ಸಂಗಮದಷ್ಟು ಶುದ್ಧವೆಂದು ಪರಿಗಣಿಸಲಾಗುತ್ತದೆ. ಈ ಆರ್ಯವರ್ತದ (ವೇದಗಳು, ಸ್ಮೃತಿಗಳು, ಪುರಾಣಗಳ ಭೂಮಿ) ಸಂಪ್ರದಾಯಗಳಲ್ಲಿ ಹಸುವಿನ ಹಾಲು ಮತ್ತು ಅದರ ಉತ್ಪನ್ನಗಳಿಗೆ ಅಗ್ರಸ್ಥಾನವಿದೆ.

ಹೀಗಾಗಿ, ಪ್ರತಿ ಪೂಜೆಯಲ್ಲಿಯೂ, ಮನೆಯಲ್ಲಿ ಕನಿಷ್ಠ ಪಕ್ಷ ಸ್ವಲ್ಪ ಹಾಲನ್ನಾದರೂ ನೈವೇದ್ಯಕ್ಕೆ ಇಟ್ಟಾಗ ಆ ಪೂಜೆಯು ಪರಿಪೂರ್ಣವಾಗುತ್ತದೆ. ಹಾಲನ್ನು ಧರ್ಮ ಕಾರ್ಯಗಳಿಗೆ ಉಪಯೋಗಿಸುವುದು ಅತ್ಯಂತ ಶುಭಕರ ಮತ್ತು ಫಲಪ್ರದ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ್ದಲ್ಲದೆ, ಬಿಟ್ಟುಕಳುಹಿಸಿದ ಪೊಲೀಸರನ್ನೇ ನಿಂದಿಸಿದಾತನ ವಿರುದ್ಧ ಎಫ್​ಐಆರ್

ದೇವನಹಳ್ಳಿ, ಮಾರ್ಚ್ 31: ಸಂಚರಿಸುತ್ತಿದ್ದ ವಿಮಾನದಲ್ಲಿ ತುರ್ತು ನಿರ್ಗಮನದ ಬಾಗಿಲು (Emergency Door) ತೆರೆಯಲು ಯತ್ನಿಸಿ ಆತಂಕ ಸೃಷ್ಟಿಸಿದ್ದ ಮಹಾರಾಷ್ಟ್ರ ಮೂಲದ ಪ್ರಯಾಣಿಕನೊಬ್ಬ, ಬುದ್ಧಿಹೇಳಿ ಬಿಟ್ಟು ಕಳುಹಿಸಿದ ಬೆಂಗಳೂರು (Bangalore) ಏರ್​ಪೋರ್ಟ್​ ಪೊಲೀಸರ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಸದ್ಯ ಆರೋಪಿಯ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಅಚಾತುರ್ಯದಿಂದ ತಪ್ಪು ಮಾಡಿರಬಹುದು ಎಂದು ಬೆಂಗಳೂರು ಏರ್​ಪೋರ್ಟ್ ಪೊಲೀಸರು ಆತನ ವಿರುದ್ಧ ಎನ್​​ಸಿಆರ್ (Non-Cognizable Report) ಅಥವಾ ಗಂಭೀರವಲ್ಲದ ಪ್ರಕರಣ ದಾಖಲಿಸಿ ಬಿಟ್ಟು ಕಳುಹಿಸಿದ್ದರು. ಆದರೆ, ಠಾಣೆಯಿಂದ ಹೊರಬರುತ್ತಿದ್ದಂತೆಯೇ ಆತ ಮತ್ತೆ ತನ್ನ ಅಸಲಿ ಬುದ್ಧಿ ಪ್ರದರ್ಶಿಸಿದ್ದ.

ಘಟನೆಯ ವಿವರ

ಮಾರ್ಚ್ 22ರಂದು ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಉತ್ಕರ್ಷ್ ಗೌತಮ್ ಎಂಬ ಪ್ರಯಾಣಿಕ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದ. ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಏರ್‌ಲೈನ್ಸ್ ಸಿಬ್ಬಂದಿ ಈತನನ್ನು ಕೆಐಎಬಿ (KIAB) ಪೊಲೀಸರ ವಶಕ್ಕೆ ನೀಡಿದ್ದರು. ಪೊಲೀಸರು ಈತನಿಗೆ ಬುದ್ಧಿವಾದ ಹೇಳಿ ಎನ್‌ಸಿಆರ್ (NCR) ದಾಖಲಿಸಿ ಕಳುಹಿಸಿಕೊಟ್ಟಿದ್ದರು.

ಪೊಲೀಸರ ವಿರುದ್ಧವೇ ಟ್ವೀಟ್

ಪೊಲೀಸ್ ಠಾಣೆಯಿಂದ ಹೊರಬಂದ ಬೆನ್ನಲ್ಲೇ ಆರೋಪಿ ಉತ್ಕರ್ಷ್ ತನ್ನ ಎಕ್ಸ್ (X) ಖಾತೆಯಲ್ಲಿ ಬೆಂಗಳೂರು ಪೊಲೀಸರನ್ನು ನಿಂದಿಸಿದ್ದಾನೆ. ‘Mumbai Police please Arrest @ Blr City Police Bustards’ ಎಂದು ಟ್ವೀಟ್ ಮಾಡಿದ್ದಲ್ಲದೆ, ಪೊಲೀಸರು ತನ್ನನ್ನು 4 ಗಂಟೆಗಳ ಕಾಲ ಸೆಲ್‌ನಲ್ಲಿ ಕೂರಿಸಿ ಹಿಂಸೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದ.

ಇದನ್ನೂ ಓದಿ: ದಾರಿಯುದ್ಧಕ್ಕೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಟ್ವೀಟ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಎಫ್‌ಐಆರ್ ಜಡಿಯುತ್ತಲೇ ಆರೋಪಿ ತನ್ನೆಲ್ಲಾ ಟ್ವೀಟ್ ಡಿಲೀಟ್ ಮಾಡಿ ತಲೆಮರೆಸಿಕೊಂಡಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಇರಾನ್​​ನ ಇಸ್ಫಹಾನ್​ನಲ್ಲಿ ಅಮೆರಿಕ-ಇಸ್ರೇಲ್ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್, ಮಾರ್​ಚ್​ 31: ಇರಾನ್​ನಲ್ಲಿ ಇಂದು(ಮಾರ್ಚ್​31) ಮುಂಜಾನೆ ಭಾರಿ ಸ್ಫೋಟ ಸಂಭವಿಸಿದೆ. ಇರಾನ್​ನ ಇಸ್ಫಹಾನ್​ನಲ್ಲಿ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮತ್ತು ಬದ್ರ್ ಮಿಲಿಟರಿ ವಾಯುನೆಲೆಯ ನೆಲೆಯಾಗಿರುವ ಇರಾನ್ ನಗರವಾದ ಇಸ್ಫಹಾನ್‌ನಲ್ಲಿರುವ ಪ್ರಮುಖ ಶಸ್ತ್ರಾಸ್ತ್ರ ಡಿಪೋದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ಮಾಡಿವೆ ಎಂದು ವರದಿಗಳು ಹೇಳುತ್ತಿವೆ. ಇರಾನ್​ನ ಪರಮಾಣು ಸೌಲಭ್ಯ, ಜಲಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತಂದೆ, ಮಕ್ಕಳಿಗೂ ಸಾಲ ಕೊಟ್ಟಿದ್ದಾರೆ ದಳಪತಿ ವಿಜಯ್; ಟೀಕೆ ಎದುರಿಸಿದ ನಟ

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಸ್ಪರ್ಧೆಗೆ ಇಳಿದಿದ್ದಾರೆ. ಅವರು ಈಗ ಅಫಿಡವಿಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದಾರೆ. ವಿಜಯ್ ಅವರು 603 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಅಫಿಡವಿಟ್ ಅಲ್ಲಿ ಸಾಲ ಕೊಟ್ಟ ವಿವರ ಕೂಡ ಇದೆ. ಇದೇ ವಿಷಯವನ್ನು ಇಟ್ಟುಕೊಂಡು ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ, ಇದರ ಅಸಲಿಯತ್ತು ಬೇರೆಯದೇ ಇದೆ.

ವಿಜಯ್ ಅವರು 603 ಕೋಟಿ ರೂಪಾಯಿ ಆಸ್ತಿಯಲ್ಲಿ 404.58 ಕೋಟಿ ರೂಪಾಯಿ ಮೊತ್ತದ ಚರಾಸ್ತಿ ಹಾಗೂ 198.62 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಅವರು ಕೊಡೈಕೆನಾಲ್ ಅಲ್ಲಿ ಎಸ್ಟೇಟ್ ಹೊಂದಿದ್ದಾರೆ. ಚೆನ್ನೈನ ವಿವಿಧ ಕಡೆಗಳಲ್ಲಿ ವಾಣಿಜ್ಯ ಮಳಿಗೆ ಇದೆ. ಈ ಮಧ್ಯೆ ಅವರು ತಮ್ಮವರಿಗೆ ಕೊಟ್ಟ ಸಾಲದ ವಿಷಯ ಉಲ್ಲೇಖ ಆಗಿದೆ.

ಸಂಗೀತಾ ಅವರಿಗೆ 12 ಕೋಟಿ ರೂಪಾಯಿ, ತಂದೆಗೆ 3 ಕೋಟಿ ರೂಪಾಯಿ ಸಾಲ, ಮಗನಿಗೆ ಹಾಗೂ ತಾಯಿಗೆ ತಲಾ 87 ಲಕ್ಷ ರೂಪಾಯಿ, ಮಗಳಿಗೆ 4 ಲಕ್ಷ ರೂಪಾಯಿ ಸಾಲ ಕೊಟ್ಟ ಬಗ್ಗೆ ಉಲ್ಲೇಖ ಆಗಿದೆ. ಇದನ್ನು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಮಗ ಹಾಗೂ ಅಪ್ಪನಿಗೂ ವಿಜಯ್ ಸಾಲ ಕೊಟ್ಟಿದ್ದಾರೆ ಎಂದರೆ ಇದರ ಅರ್ಥ ಏನು ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ದಳಪತಿ ವಿಜಯ್ 603 ಕೋಟಿ ರೂಪಾಯಿ ಆಸ್ತಿ ವಿವರ ಬಹಿರಂಗ: ಪತ್ನಿ ಬಳಿ ಎಷ್ಟಿದೆ?

ಆದರೆ, ಇದೊಂದು ಸಾಮಾನ್ಯ ಪ್ರಕ್ರಿಯೆ. ಅಫಿಡವಿಟ್ ಪರಿಶೀಲನೆಯ ಸಮಯದಲ್ಲಿ ಮಗ, ಪತ್ನಿ ಅಥವಾ ಯಾರೇ ಇರಬಹುದು, ಅವರಿಗೆ ಕೊಟ್ಟ ಹಣ ಉಲ್ಲೇಖ ಆಗದಿದ್ದರೆ ಅದನ್ನು ಗೌಪ್ಯವಾಗಿ ಇಟ್ಟಿದ್ದು ಎಂದು ಪರಿಗಣಿಸಲಾಗುತ್ತದೆ. ಹಾಗಾಬಾರದು ಎಂಬ ಕಾರಣಕ್ಕೆ ವಿಜಯ್ ಅದನ್ನು ಉಲ್ಲೇಖಿಸಿದ್ದಾರೆ ಎಂದು ಕೆಲವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಸ್ಮಶಾನಕ್ಕೆ ಕಳುಹಿಸುತ್ತೇವೆ’: ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!

ಬೆಂಗಳೂರು, ಮಾರ್ಚ್​ 31: ಇತ್ತೀಚೆಗೆ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾನುವಾರ ಬೆಳಕಿಗೆ ಬಂದ ಬೆನ್ನಲ್ಲೇ ಹಲವು ಮೊಬೈಲ್ ಫೋನ್​ಗಳನ್ನು ಡ್ರೈನೇಜ್ ಮಾರ್ಗದಲ್ಲಿ ಬಚ್ಚಿಟ್ಟಿದ್ದೂ ತಿಳಿದು ಬಂದಿತ್ತು. ಕಟ್ಟುನಿಟ್ಟಿನ ನಿಯಮಗಳಿದ್ದರೂ ಈ ರೀತಿಯ ಅಕ್ರಮ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಈ ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲು ಮುಂದಾದ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವುದೂ ತಿಳಿದುಬಂದಿದೆ.

ಹತ್ತು ದಿನಗಳಲ್ಲಿ 21 ಮೊಬೈಲ್ ಪತ್ತೆ, ಡಿಜಿಪಿ ಅಸಮಾಧಾನ

ಕಳೆದ ಹತ್ತು ದಿನಗಳಲ್ಲಿ ಜೈಲು ಅಧಿಕಾರಿಗಳು 21 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ, ಬಹುತೇಕ ಫೋನ್‌ಗಳನ್ನು ಹಾಲಿನ ಕವರ್‌ಗಳಲ್ಲಿ ಮೊಬೈಲ್‌ಗಳನ್ನು ಪ್ಯಾಕ್ ಮಾಡಿ ಕೊಳಚೆ ನೀರು ಹರಿಯುವ ಪೈಪ್‌ಗಳಲ್ಲಿ ಮರೆಮಾಚಿ ಇಟ್ಟಿರುವುದು ಪತ್ತೆಯಾಗಿದೆ. ಜೈಲಿನೊಳಗೆ ಜಾಮರ್ ವ್ಯವಸ್ಥೆ ಇದ್ದರೂ ನೆಟ್‌ವರ್ಕ್ ಸಿಗುತ್ತಿರುವುದರ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಜೈಲರ್‌ಗಳು ಹಾಗೂ ವಾರ್ಡರ್‌ಗಳ ಶಾಮೀಲು ಇರುವ ಶಂಕೆ ವ್ಯಕ್ತವಾಗಿದ್ದು, ಎಲ್ಲರ ಮೇಲೂ ವಿಚಾರಣೆ ನಡೆಸಲು ಸೂಚಿಸಲಾಗಿದೆ. ಎಸ್‌ಪಿ ಅಂಶುಕುಮಾರ್ ನೇತೃತ್ವದಲ್ಲಿ ಕೆಲ ಅನುಮಾನಿತ ವಾರ್ಡರ್‌ಗಳನ್ನು ವಿಚಾರಣೆಗೊಳಪಡಿಸಲಾಗಿದೆ.

ಇದನ್ನೂ ಓದಿ ‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈದಿಗಳು!

ಬೆದರಿಕೆ ಹಾಕಿದವರ ವಿರುದ್ಧ ಕೇಸ್

ಮೊಬೈಲ್ ವಶಕ್ಕೆ ಪಡೆಯಲು ಮುಂದಾದ ಜೈಲು ಸಿಬ್ಬಂದಿಗೆ ಕೆಲವು ಕೈದಿಗಳು ಜೀವ ಬೆದರಿಕೆ ಹಾಕಿರುವ ಘಟನೆ ಕೂಡ ನಡೆದಿದೆ. ರಿಜ್ವಾನ್ ಅಲಿ ಮತ್ತು ಮೊಹಮ್ಮದ್ ಸಾಧಿಕ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮನೆಗೆ ಹೋಗುವುದಿಲ್ಲ, ಸ್ಮಶಾನಕ್ಕೆ ಕಳುಹಿಸುತ್ತೇವೆ ಎಂದು ಬೆದರಿಕೆ ಹಾಕಿದ ಆರೋಪ ಇದೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 

Source link

Exit mobile version