ಪದತ್ಯಾಗಕ್ಕೂ ಮುನ್ನವೇ ತಮ್ಮ ಮಹತ್ವದ ಆಸೆ ಈಡೇರಿಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ

ಬೆಂಗಳೂರು, (ಮೇ 27): ಕರ್ನಾಟಕ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಎನ್ನುವ ದಾಖಲೆಯನ್ನು ಸಿದ್ದರಾಮಯ್ಯ (Siddaramaiah) ಬರೆದಿದ್ದಾರೆ. ಅಲ್ಲದೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎನ್ನುವ ಹೆಗ್ಗಳಿಕೆ ಅವರಿಗಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಲವು ಜನರಪರ ಕಾರ್ಯಕ್ರಮಗಳಿಂದ ಜನ ಮನ್ಣಣೆ ಗಳಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಿಂದುಳಿದ, ಅಹಿಂದ ವರ್ಗಗಳ ಪರವಾಗಿ ನಿಂತಿದ್ದಾರೆ. ಇದರಿಂದ ಅವರನ್ನ ಅಹಿಂದ ನಾಯಕ ಎಂದು ಕರೆಯಲಾಗುತ್ತೆ. ಅದರಂತೆ ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ ಸಂಬಂಧ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನೇನು ನಾಳೆ(ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರಿಂದ ತಮ್ಮ ಕನಸಿನ ಸಿದ್ದರಾಮಯ್ಯ ಜಾತಿಗಣತಿ ವರದಿ ಸ್ವೀಕಾರಕ್ಕೆ ಮುಂದಾಗಿದ್ದಾರೆ.

ಇದಕ್ಕೆ ಪೂರಕವೆಂಬಂತೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಸಿಎಂ ಬುಲಾವ್ ನೀಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಇಂದು ಮೇ 27) ಸಂಜೆ ವಿಧಾನಸೌಧಕ್ಕೆ ಬರುವಂತೆ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆಗೂ ಮುನ್ನವೇ ಅಂದರೆ ಇಂದೇ ಜಾತಿಗಣತಿ ವರದಿ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಕೆಳದ ಬಾರಿ ಜಾತಿಗಣತಿ ವರದಿ ಸ್ವೀಕಾರ ಮಾಡಿಲ್ಲವೆಂಬ ಆರೋಪ ಇತ್ತು. ಮುಂದೆ ಎಂದೂ ಈ ರೀತಿ ಆರೋಪ ಬರಬಾರದು ಎಂದು ಅರಿತ ಸಿದ್ದರಾಮಯ್ಯ, ಪದತ್ಯಾಗಕ್ಕೂ ಮುನ್ನ ಜಾತಿಗಣತಿ ವರದಿ ಸ್ವೀಕರಿಸಲು ಪ್ಲ್ಯಾನ್ ಮಾಡಿದ್ದಾರೆ. ಇದರೊಂದಿಗೆ ಅಧಿಕಾರಿದಲ್ಲಿದ್ದಾಗಲೇ ಜಾತಿಗಣತಿ ಸ್ವೀಕಾರ ಮಾಡಿದರು ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಮುಂದಾಗಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

Source link

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವು

ಚಿತ್ರದುರ್ಗ, ಮೇ 27: ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150Aದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೊಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸದ್ಯ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

‘ಪೆದ್ದಿ’ ಸಿನಿಮಾ ಶೂಟಿಂಗ್​​ಗೆ ಹಳೆ ಕಾಲದ ತಂತ್ರಜ್ಞಾನ ಬಳಸಿದ್ದೇಕೆ?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾಕ್ಕೆ ಭಾರಿ ಬಂಡವಾಳ ಹೂಡಲಾಗಿದ್ದು, ಸಿನಿಮಾಕ್ಕಾಗಿ ರಾಮ್ ಚರಣ್ ಸಾಕಷ್ಟು ಶ್ರಮ ಪಟ್ಟಿದ್ದಾರೆ. ‘ಪೆದ್ದಿ’ ಸಿನಿಮಾವು ಗ್ರಾಮೀಣ ಭಾಗದ ಯುವಕನೊಬ್ಬನ ಕತೆಯನ್ನು ಒಳಗೊಂಡಿದ್ದು, ಕ್ರಿಕೆಟ್ ಆಟಗಾರನಾಗಿದ್ದ ಯುವಕ ನಂತರ ಕುಸ್ತಿ ಪಟುವಾಗಿ ದೇಶವನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿನಿಧಿಸುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ತಾಂತ್ರಿಕವಾಗಿ ಬಹಳ ರಿಚ್ ಆಗಿ ‘ಪೆದ್ದಿ’ ಮೂಡಿ ಬಂದಿದೆ ಎಂದು ನಿರ್ದೇಶಕ ಹೇಳಿದ್ದಾರೆ. ಆದರೆ ಈ ಸಿನಿಮಾದ ಚಿತ್ರೀಕರಣಕ್ಕೆ ಹಳೆ ಕಾಲದ ತಂತ್ರಜ್ಞಾನವನ್ನು ಬಳಸಲಾಗಿದೆ. ಅದೇಕೆ? ಇಲ್ಲಿದೆ ಮಾಹಿತಿ…

‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್, ಜಾನ್ಹವಿ ಕಪೂರ್, ಶಿವರಾಜ್ ಕುಮಾರ್, ಜಗಪತಿ ಬಾಬು ಇನ್ನೂ ಕೆಲವು ಖ್ಯಾತನಾಮ ನಟ-ನಟಿಯರು ನಟಿಸಿದ್ದಾರೆ. ತೆರೆಯ ಹಿಂದೆಯೂ ಸಹ ಕೆಲವು ಖ್ಯಾತ ನಾಮ ತಂತ್ರಜ್ಞರು ಈ ಸಿನಿಮಾಕ್ಕಾಗಿ ದುಡಿದಿದ್ದಾರೆ. ಆಸ್ಕರ್ ವಿಜೇತ ಎಆರ್ ರೆಹಮಾನ್ ಸಂಗೀತ ನೀಡಿದ್ದರೆ, ಕ್ಯಾಮೆರಾ ಹಿಡಿದಿರುವುದು ಭಾರತೀಯ ಚಿತ್ರರಂಗದ ಟಾಪ್ ಸಿನಿಮಾಟೊಗ್ರಾಫರ್​​ಗಳಲ್ಲಿ ಒಬ್ಬರಾಗಿರುವ ಆರ್ ರತ್ನವೇಲು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ರತ್ನವೇಲು, ತಾವು ಅರ್ಧ ಶತಮಾನಕ್ಕೂ ಹಳೆಯದಾದ ತಂತ್ರಜ್ಞಾನ ಬಳಸಿ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ರತ್ನವೇಲು ಹೇಳಿರುವಂತೆ ಅವರನ್ನು ಈ ಸಿನಿಮಾದ ಭಾಗವನ್ನಾಗಿಸಿದ್ದು ಖುದ್ದು ರಾಮ್ ಚರಣ್ ಅವರಂತೆ. ರಾಮ್ ಅವರೇ ಖುದ್ದು ಕರೆ ಮಾಡಿ ‘ಪೆದ್ದಿ’ ಸಿನಿಮಾಕ್ಕೆ ಕೆಲಸ ಮಾಡುವಂತೆ ಕೇಳಿದ್ದರಂತೆ. ಬಳಿಕ ಬುಚ್ಚಿಬಾಬು ಸನಾ ಕತೆ ಹೇಳಿದಾಗ ಕತೆ ವಿಪರೀತ ಹಿಡಿಸಿ ಈ ಸಿನಿಮಾಕ್ಕೆ ಕೆಲಸ ಮಾಡಲು ಒಪ್ಪಿಕೊಂಡರಂತೆ. ಈ ಹಿಂದೆ ರಾಮ್ ಚರಣ್ ನಟಿಸಿದ್ದ ‘ರಂಗಸ್ಥಳಂ’ ಸಿನಿಮಾಕ್ಕೆ ರತ್ನವೇಲು ಅವರೇ ಕ್ಯಾಮೆರಾಮ್ಯಾನ್.

‘ಪೆದ್ದಿ’ ಸಿನಿಮಾ ತುಸು ಹಳೆಯ ಕಾಲಘಟ್ಟದಲ್ಲಿ ನಡೆಯುವ ಕತೆ ಹೊಂದಿರುವ ಜೊತೆಗೆ ರಾಮ್ ಚರಣ್ ಪಾತ್ರದ ವಿವಿಧ ಜರ್ನಿಯ ಕತೆಯನ್ನು ಸಹ ಒಳಗೊಂಡಿರುವ ಕಾರಣಕ್ಕೆ ಸಿನಿಮಾದ ಒಂದು ನಿರ್ದಿಷ್ಟ ಭಾಗವನ್ನು ರತ್ನವೇಲು ಅವರು ಹಳೆಯ ನೆಗೆಟಿವ್ ಗಳನ್ನು ಬಳಸಿ ಚಿತ್ರೀಕರಣ ಮಾಡಿದ್ದಾರಂತೆ. ದೃಶ್ಯಕ್ಕೆ ಹಳೆಯ ಫೀಲ್ ನೀಡಲು ರಾಮ್ ಚರಣ್ ಪಾತ್ರದ ಒಂದು ಭಾಗವನ್ನು ನೆಗೆಟಿವ್ ಫಿಲಂ ಬಳಸಿ ಅದಕ್ಕೆ ಹೊಂದುವ ಹಳೆಯ ಕ್ಯಾಮೆರಾ ಬಳಸಿ ಚಿತ್ರೀಕರಣ ಮಾಡಿದ್ದಾರಂತೆ.

ಅಂದಹಾಗೆ ರತ್ನವೇಲು ಅವರು ಭಾರತದ ಪ್ರತಿಭಾವಂತ ಸಿನಿಮಾಟೊಗ್ರಾಫರ್. ‘ರೋಬೊಟ್’, ತೆಲುಗಿನ ‘ಆರ್ಯ’, ‘ಕುಮಾರಿ 21ಎಫ್’, ‘ರಂಗಸ್ಥಳಂ’ ಇನ್ನೂ ಹಲವು ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿದ್ದಾರೆ. ಕನ್ನಡದಲ್ಲಿ ‘ಸೈನೈಡ್’ ಮತ್ತು ‘ಗಾಳಿಪಟ’ ಸಿನಿಮಾಗಳಿಗೆ ರತ್ನವೇಲು ಅವರೇ ಕ್ಯಾಮೆರಾಮ್ಯಾನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

20 ಟಿಎಂಸಿ ಸಂಸದರು, 50 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಬಿಜೆಪಿ ಸ್ಫೋಟಕ ಹೇಳಿಕೆ

ಕೊಲ್ಕತ್ತಾ, ಮೇ 27: ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಸುಮಾರು 20 ಸಂಸದರು ಮತ್ತು 50 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಹೈಕಮಾಂಡ್ ಅವರ ಸೇರ್ಪಡೆಗೆ ಅನುಮತಿ ನೀಡಿದರೆ ಪಕ್ಷ ಬದಲಾಯಿಸಲು ಸಿದ್ಧರಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ. ಚುನಾವಣೆಯ ಬಳಿಕ ಹಲವಾರು ಟಿಎಂಸಿ ಸಂಸದರು ಪಕ್ಷದೊಳಗೆ ಅತೃಪ್ತರಾಗಿದ್ದಾರೆ. ಅವರು ರಹಸ್ಯವಾಗಿ ಬಿಜೆಪಿ ಪಾಳಯದ ನಾಯಕರೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಸೌಮಿತ್ರ ಖಾನ್ ಆರೋಪಿಸಿದ್ದಾರೆ.

ಪ್ರಮುಖ ಮುಖ್ಯಾಂಶಗಳು:

  • ಟಿಎಂಸಿಯ 50 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಬಿಜೆಪಿ
  • ಚುನಾವಣೆಯಲ್ಲಿ ಸೋತ ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್
  • ಬಂಗಾಳದಲ್ಲಿ ಸಂಪೂರ್ಣ ಪತನವಾಗುತ್ತಾ ಟಿಎಂಸಿ?

“20 ಟಿಎಂಸಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಬಯಸಿದರೆ, ಮುಂದಿನ ಕೆಲವು ದಿನಗಳಲ್ಲಿ ಇಡೀ ಟಿಎಂಸಿ ಅಂತ್ಯಗೊಳ್ಳುತ್ತದೆ” ಎಂದು ಸೌಮಿತ್ರ ಖಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆದರೆ, ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾದ ಟಿಎಂಸಿ ಸಂಸದರ ಹೆಸರನ್ನು ಬಹಿರಂಗಪಡಿಸಲಿಲ್ಲ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಸಹಿಸುವುದಿಲ್ಲ; ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ 42 ಸಂಸದರಲ್ಲಿ ಟಿಎಂಸಿ ಪ್ರಸ್ತುತ ಲೋಕಸಭೆಯಲ್ಲಿ 29 ಸಂಸದರನ್ನು ಹೊಂದಿದೆ. ಬಿಜೆಪಿ 12 ಮತ್ತು ಕಾಂಗ್ರೆಸ್ ಒಬ್ಬರು ಸಂಸದರನ್ನು ಹೊಂದಿದೆ. ಪಕ್ಷಾಂತರ ವಿರೋಧಿ ಕಾನೂನಿನಡಿ ಅನರ್ಹತೆಯಿಂದ ಪಾರಾಗಲು ಸಂಸದೀಯ ಪಕ್ಷದ ಕನಿಷ್ಠ ಮೂರನೇ ಎರಡರಷ್ಟು ಸದಸ್ಯರು ಒಟ್ಟಾಗಿ ಪಕ್ಷ ಬದಲಾಯಿಸಬೇಕಾಗುತ್ತದೆ.

ಟಿಎಂಸಿ ನಿರಾಕರಣೆ:

ಸೌಮಿತ್ರ ಖಾನ್ ಅವರ ಹೇಳಿಕೆಗಳನ್ನು ನಿರಾಕರಿಸಿದ ಹಿರಿಯ ಟಿಎಂಸಿ ಸಂಸದ ಸೌಗತ ರಾಯ್ ಈ ವರದಿಗಳನ್ನು “ಆಧಾರರಹಿತ” ಎಂದು ಟೀಕಿಸಿದ್ದಾರೆ. 2021ರ ವಿಧಾನಸಭಾ ಚುನಾವಣೆಗೆ ಮುನ್ನ ಟಿಎಂಸಿಯ ಹಲವಾರು ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಆದರೆ, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರವನ್ನು ಉಳಿಸಿಕೊಂಡ ನಂತರ ಅನೇಕರು ಮತ್ತೆ ಪಕ್ಷಕ್ಕೆ ಮರಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್​​​ಗೆ ಎಚ್ಚರಿಕೆ

ಬೆಂಗಳೂರು, ಮೇ 27: ಸದ್ಯ ರಾಜ್ಯ ರಾಜಕಾರಣದಲ್ಲಿ ಪಟ್ಟದಾಟ ಕ್ಲೈಮ್ಯಾಕ್ಸ್​​ಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇತ್ತ ಅಧಿಕೃತ ನಿವಾಸ ಕಾವೇರಿ ಎದುರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ‘ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಪಕ್ಷ ಉಳಿಯುವುದಿಲ್ಲ, ನಾವು ಅದಕ್ಕೆ ಬಿಡುವುದಿಲ್ಲ’ ಎಂದು ಅಭಿಮಾನಿಗಳು ಹೇಳಿದ್ದಾರೆ. ಇನ್ನು ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೆಲ ಕಾಂಗ್ರೆಸ್ ನಾಯಕರು, ಹೈಕಮಾಂಡ್‌ನಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ ಎಂದಿದ್ದಾರೆ. ಸುರ್ಜೇವಾಲಾ ಅವರು ಬೆಂಗಳೂರಿಗೆ ಬಂದ ನಂತರ ಪರಿಸ್ಥಿತಿಯ ಕುರಿತು ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಗೃಹಸಚಿವ ಜಿ ಪರಮೇಶ್ವರ ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಇತರ ನಾಯಕರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಕೈ ಕಮಾಂಡ್ ಅಹಿಂದ

ಬೆಂಗಳೂರು, (ಮೇ 27) : ಸಿದ್ದರಾಮಯ್ಯ ಅವರು ನಾಳೆ (ಮೇ 28) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಇನ್ನೂ ಎರಡು ಸಿದ್ದರಾಮಯ್ಯನವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದ್ದು, ಇನ್ನೂ ಎರಡು ವರ್ಷ ಆಡಳಿತ ಬಾಕಿ ಇರುವಾಗಲೇ ನಾಯಕತ್ವ ಬದಲಾವಣೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ರಾಜ್ಯ ಶೋಷಿತ ವರ್ಗಗಳ ಒಕ್ಕೂಟ ಸಹ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸಿದ್ರೆ ಹೋರಾಟ ಮಾಡುವುದಾಗಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಬೆಂಗಳೂರಿನಲ್ಲಿಂದ ರಾಜ್ಯ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ರಾಜೀನಾಮೆ ಕೇಳಿದ್ದಾರಂತೆ. ಇದು ನಿಜವಾಗಿದ್ರೆ ಯಾವ ರೀತಿ ಎದುರಿಸ್ತಾರೆ ಅನ್ನೋದನ್ನ ತೋರಿಸುತ್ತೆ. ನಮ್ಮ ಸಮಾಜ ಸುಮ್ಮನೆ ಕೂರುವುದಿಲ್ಲ, ನಾಳೆಯಿಂದಲೇ ಹೋರಾಟ ಮಾಡುತ್ತೇವೆ ಎಂದು ನೇರವಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

ಸಿಎಂ ಸಿದ್ದರಾಮಯ್ಯನವರು ಸಂದಿಗ್ಧ ಪರಿಸ್ಥಿತಿಯಲ್ಲಿಲ್ಲ.ರಾಹುಲ್ ಗಾಂಧಿ ಹೇಳಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ರು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಮುಂದೇನು? ಅಹಿಂದ ವರ್ಗ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದೇವೆ. ಯಾವುದೇ ಬದಲಾವಣೆ ಮಾಡಬಾರದ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ವರ್ಚಸ್ಸು ಕಡೆಗಣಿಸಬಾರದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರೋದು ಅಹಿಂದ ವರ್ಗದಿಂದ. ಅಹಿಂದ ವರ್ಗದ ಯಾರನ್ನಾದ್ರೂ ಸಿಎಂ ಮಾಡಲಿ.ಕಾಂಗ್ರೆಸ್​ನವರು ಸಮಸಮಾಜ ನಿರ್ಮಿಸ್ತೇವೆ ಅಂತಾರೆ, ಎಲ್ಲಿ ಮಾಡ್ತಿದ್ದಾರೆ. ನಮ್ಮ ಸಮುದಾಯದ ಶಾಸಕರು ಸಿಎಂ ಸಿದ್ದರಾಮಯ್ಯ ಜೊತೆ ನಿಲ್ಲಬೇಕು ಎಂದು ಕರೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಲವ್ ಆಜ್ ಕಲ್ 2: ತಮ್ಮದೇ ಸಿನಿಮಾವನ್ನು ನಿಷ್ಪ್ರಯೋಜಕ ಚಿತ್ರ ಎಂದ ಜರಿದ ನಿರ್ದೇಶಕ ಇಮ್ತಿಯಾಜ್ ಅಲಿ

ಹಿಂದಿ ಚಿತ್ರರಂಗದಲ್ಲಿ ಕಳೆದ 20 ವರ್ಷಗಳಿಂದ ಸಕ್ರಿಯರಾಗಿರುವ ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ (Imtiaz Ali) ಅವರು ತಮ್ಮ ವೃತ್ತಿಜೀವನದಲ್ಲಿ ಸೋಲಿಗಿಂತ ಹೆಚ್ಚು ಯಶಸ್ಸನ್ನು ಕಂಡಿದ್ದಾರೆ. ಆದರೆ ಅವರ ವೃತ್ತಿಜೀವನದ ಅತಿ ದೊಡ್ಡ ಹಿನ್ನಡೆಗಳಲ್ಲಿ ‘ಲವ್ ಆಜ್ ಕಲ್ 2’ (Love Aaj Kal 2) ಚಿತ್ರವೂ ಒಂದು. ಇದು ಅವರದ್ದೇ ನಿರ್ದೇಶನದ ಸೂಪರ್ ಹಿಟ್ ಚಿತ್ರದ ಸೀಕ್ವೆಲ್ ಆಗಿತ್ತು. ಕಾರ್ತಿಕ್ ಆರ್ಯನ್ (Kartik Aaaryan) ಮತ್ತು ಸಾರಾ ಅಲಿ ಖಾನ್ ಮುಖ್ಯ ಭೂಮಿಕೆಯಲ್ಲಿದ್ದ ಈ ರೊಮ್ಯಾಂಟಿಕ್ ಡ್ರಾಮಾ ಗಲ್ಲಾಪೆಟ್ಟಿಗೆಯಲ್ಲಿ ಹಾಗೂ ವಿಮರ್ಶಾತ್ಮಕವಾಗಿ ತೀವ್ರ ಸೋಲನ್ನು ಅನುಭವಿಸಿತ್ತು. ಇತ್ತೀಚಿನ ಸಂದರ್ಶನವೊಂದರಲ್ಲಿ ಈ ಚಿತ್ರದ ವೈಫಲ್ಯದ ಬಗ್ಗೆ ಮುಕ್ತವಾಗಿ ಮಾತನಾಡಿರುವ ಇಮ್ತಿಯಾಜ್ ಅಲಿ, ಇದೊಂದು ‘ನಿಷ್ಪ್ರಯೋಜಕ ಪ್ರಯೋಗ’ ಎಂದು ಕರೆದಿದ್ದಾರೆ.

‘ಝೂಮ್’ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಚಿತ್ರದ ಮೇಕಿಂಗ್ ಕುರಿತು ಇಮ್ತಿಯಾಜ್ ಅಲಿ ಅವರು ಮಾತನಾಡಿದ್ದಾರೆ. ‘ನನ್ನ ಬಳಿ ಈಗಾಗಲೇ ಕಥೆ ಸಿದ್ಧವಿತ್ತು ಮತ್ತು ನಾನು ಅದರ ಬಗ್ಗೆ ಉತ್ಸುಕನಾಗಿದ್ದರಿಂದ ‘ಲವ್ ಆಜ್ ಕಲ್ 2’ ಮಾಡಿದೆ. ಆದರೆ ಅದು ವರ್ಕ್‌ಔಟ್ ಆಗಲಿಲ್ಲ ಎಂಬುದು ಬೇರೆ ಮಾತು. ನಮಗೆ ಸಿನಿಮಾ ಮಾಡಲು ಮನಸ್ಸಿಲ್ಲದಿದ್ದರೆ ಅದು ಕೇವಲ ಆರ್ಥಿಕವಾಗಿ ಲಾಭದಾಯಕ ಪ್ರಾಜೆಕ್ಟ್ ಆಗಿ ಉಳಿಯುವುದಿಲ್ಲ ಮತ್ತು ಅದೊಂದು ನಿಷ್ಪ್ರಯೋಜಕ ಪ್ರಯೋಗ ಎಂದು ಈ ಸಿನಿಮಾ ನನಗೆ ಕಲಿಸಿಕೊಟ್ಟಿತು. ‘ಲವ್ ಆಜ್ ಕಲ್ 2’ ತನ್ನದೇ ಆದ ವಿಭಿನ್ನ ಕಥೆಯನ್ನು ಹೊಂದಿತ್ತು. ನಾನು ಅದಕ್ಕೆ ಬೇರೆ ಹೆಸರಿಟ್ಟು ಸಿನಿಮಾ ಮಾಡಬಹುದಿತ್ತು’ ಎಂದು ಅವರು ಹೇಳಿದ್ದಾರೆ.

ಸೈಫ್ ಅಲಿ ಖಾನ್ ಮತ್ತು ದೀಪಿಕಾ ಪಡುಕೋಣೆ ನಟಿಸಿದ್ದ ಮೂಲ ‘ಲವ್ ಆಜ್ ಕಲ್’ ಸಿನಿಮಾ 2009ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿತ್ತು. ವಿಮರ್ಶಕರಿಂದ ಪ್ರಶಂಸೆ ಗಳಿಸಿದ್ದಲ್ಲದೆ 120 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಆದರೆ, 2020ರಲ್ಲಿ ಬಿಡುಗಡೆಯಾದ ಇದರ ಸೀಕ್ವೆಲ್ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ತೀವ್ರ ನೆಗೆಟಿವ್ ಪ್ರತಿಕ್ರಿಯೆ ಪಡೆಯಿತು. ಬಾಕ್ಸ್ ಆಫೀಸ್‌ನಲ್ಲಿ ಹಾಕಿದ ಬಂಡವಾಳವನ್ನು ಸಹ ಮರಳಿ ಗಳಿಸಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಜನರು ಇದನ್ನು ಮೂಲ ಚಿತ್ರದೊಂದಿಗೆ ಹೋಲಿಸಿ ಟೀಕಿಸಿದ್ದರು.

ಮೊದಲಿಗೆ ತಾವು ಈ ಚಿತ್ರಕ್ಕೆ ‘ರಿವರ್ಸ್’ ಎಂದು ಹೆಸರಿಡಲು ಬಯಸಿದ್ದಾಗಿ ಇಮ್ತಿಯಾಜ್ ಬಹಿರಂಗಪಡಿಸಿದ್ದಾರೆ. ಆದರೆ ನಂತರ ‘ಲವ್ ಆಜ್ ಕಲ್ 2’ ಎಂದು ಹೆಸರಿಡಲು ನಿರ್ಧರಿಸಲಾಯಿತು. ಇದು ಚಿತ್ರಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲಿಲ್ಲ. ‘ಕೇವಲ ಹಣ ಗಳಿಸುವ ಪ್ರಾಜೆಕ್ಟ್ ಎಂಬ ಕಾರಣಕ್ಕೆ ಸಿನಿಮಾ ಮಾಡುವುದು ನನ್ನನ್ನು ಎರಡು ವರ್ಷಗಳ ಕಾಲ ಆ ಸಿನಿಮಾದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಒಳ್ಳೆತನದ ಮುಖವಾಡ ಧರಿಸಿದ್ದ ದೀಪಿಕಾ ಪಡುಕೋಣೆ’: ಹೇಳಿಕೆಗೆ ಕ್ಷಮೆ ಕೇಳಿದ ನಿರ್ದೇಶಕ

ಇಮ್ತಿಯಾಜ್ ಅಲಿ ಈಗ ‘ಮೈ ವಾಪಸ್ ಆವುಂಗಾ’ ಸಿನಿಮಾಗೆ ನಿರ್ದೇಶನ ಮಾಡಿದ್ದು, ಈ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಭಾರತ-ಪಾಕಿಸ್ತಾನ ವಿಭಜನೆಯ ಹಿನ್ನೆಲೆಯ ರೊಮ್ಯಾಂಟಿಕ್ ಡ್ರಾಮಾ ಇದಾಗಿದ್ದು, ವೇದಾಂತ್ ರೈನಾ, ಶರ್ವರಿ, ದಿಲ್ಜಿತ್ ದೋಸಾಂಜ್ ಮತ್ತು ನಸೀರುದ್ದೀನ್ ಶಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾ ಜೂನ್ 12ರಂದು ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಫೇವರಿಟ್ ಟೀಚರ್‌ಗಾಗಿ ಮನೆಯಿಂದ ಟೀ ಮಾಡಿಕೊಂಡು ತಂದ ಪುಟಾಣಿ

ಮಕ್ಕಳೆಂದರೆ (children) ಹಾಗೆ, ಯಾರು ತಮ್ಮನ್ನು ಅತಿಯಾಗಿ ಪ್ರೀತಿ ತೋರುತ್ತಾರೋ ಅವರ ಜತೆಗೆ ಆತ್ಮೀಯವಾಗಿ ವರ್ತಿಸುತ್ತಾರೆ. ಈ ಪುಟ್ಟ ಮಕ್ಕಳಿಗೆ ಶಿಕ್ಷಕರು ಎಂದರೆ ಅದೇನೋ ಪ್ರೀತಿ, ಹೀಗಾಗಿ ಏನೇ ಇದ್ರೂ ತನ್ನ ಫೇವರಿಟ್ ಟೀಚರ್ ಬಳಿ ಹೇಳಿಕೊಳ್ಳುತ್ತಾರೆ. ತನ್ನ ಫೇವರಿಟ್ ಟೀಚರ್ ಮನೆಯಿಂದ ಏನಾದ್ರೂ ತೆಗೆದುಕೊಂಡು ಹೋಗುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಪುಟಾಣಿ ಅದೇ ರೀತಿ ಮಾಡಿದೆ. ನೆಚ್ಚಿನ ಟೀಚರ್ ಗೆ ಮನೆಯಿಂದ ಟೀ ಮಾಡಿ ತಂದ ವಿಡಿಯೋ ವೈರಲ್ ಆಗಿದೆ. ಈ ಪುಟಾಣಿಯ ಪರಿಶುದ್ಧ ಪ್ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.

thebharatpost ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯೊಂದು ತನ್ನ ಫೇವರಿಟ್ ಟೀಚರ್ ಗಾಗಿ ಮಾಡಿದ ಕೆಲಸವನ್ನು ನೋಡಬಹುದು. ಮನೆಯಿಂದ ಟೀ ಮಾಡಿಕೊಂಡು ಸ್ಕೂಲ್‌ಗೆ ಬಂದು ಫೇವರಿಟ್ ಟೀಚರ್‌ಗೆ ಕೊಟ್ಟಿರುವುದನ್ನು ನೋಡಬಹುದು. ಈ ವಿಡಿಯೋದಲ್ಲಿ ಟೀಚರ್‌ನನ್ನು ಕಂಡೊಡನೆ ಈ ಪುಟ್ಟ ಬಾಲಕ ಓಡೋಡಿ ಬಂದಿದ್ದಾನೆ. ಆ ಬಳಿಕ ಈ ಪುಟಾಣಿಯ ಬ್ಯಾಗ್‌ನಲ್ಲಿದ್ದ ಪ್ಲಾಸ್ಕ್ ತೆಗೆದು ಟೀಚರ್ ಟೀಯನ್ನು ಲೋಟಕ್ಕೆ ಹಾಕಿದ್ದಾರೆ. ಟೀ ಕುಡಿಯುತ್ತಾ ಪುಟಾಣಿಯ ಹಣೆಗೆ ಮುತ್ತು ನೀಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಕಾಲನ್ನು ತಾನೇ ಸ್ಪರ್ಶಿಸಿ ನಮಸ್ಕರಿಸಿಕೊಂಡ ಪುಟಾಣಿ

ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತುಂಬಾ ಮುದ್ದಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಮುದ್ದಾದ ಟೀ ಸಪ್ಲೈ ಬಾಯ್ ಎಂದು ಹೇಳಿದ್ದಾರೆ. ಮತ್ತೊಬ್ಬರು, ನನ್ನ ಕ್ರಶ್ ಈ ಪುಟಾಣಿ ಮಿಲ್ಕ್ ಮ್ಯಾನ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳೆವಣಿಗೆಗಳು ಗರಿಗೆದರಿದ್ದು, ನಾಯಕತ್ವ ಬದಲಾವಣೆ ಖಚಿತವಾಗಿದೆ. ನಿನ್ನೆ (ಮೇ 26) ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆ ಬಳಿಕ ಸಿದ್ದರಾಮಯ್ಯನವರು (Siddaramaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ಇದಕ್ಕೆ ಪೂರಕವೆಂಬಂತೆ ಬೇರೆ ಬೇರೆ ವಿದ್ಯಮಾನಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುದ್ದಿಗಳ ನಡುವೆಯೇ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದು ತೀವ್ರ ಕುತುಹಲಕ ಮೂಡಿಸಿದೆ. ಈ ಮೂಲಕ ಸಿದ್ದರಾಮಯ್ಯ ತಮ್ಮ ಮಹತ್ವಕಾಂಕ್ಷೆಯ ಯೋಜನೆ ಬಗ್ಗೆ ಬರೆದುಕೊಂಡಿರುವುದು ಸಾರ್ಥಕ ಆಡಳಿತ ನಡೆಸಿದ್ದೇನೆ ಎನ್ನುವ ವಿದಾಯದ ಸುಳಿವು ನೀಡಿದ್ರಾ ಅನ್ನೋ ಚರ್ಚೆಗಳು ಶುರುವಾಗಿವೆ.

ಮುಖ್ಯಾಂಶಗಳು

  • ಕರ್ನಾಟಕ ಕಾಂಗ್ರೆಸ್​​ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆಗಳು
  • ನಾಯಕತ್ವ ಬದಲಾವಣೆ ಗೊಂದಲ ಕ್ಲೈಮ್ಯಾಕ್ಸ್ ಹಂತಕ್ಕೆ
  • ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ
  • ಇದರ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷೆ ಯೋಜನೆ ಬಗ್ಗೆ ಬರೆದು ವಿದಾಯದ ಸುಳಿವು ನೀಡಿದ್ರಾ ಸಿದ್ದರಾಮಯ್ಯ?.

ಸಿದ್ದರಾಮಯ್ಯ ಟ್ವೀಟ್

ರಾಜೀನಾಮೆ ಚರ್ಚೆಗಳ ಮಧ್ಯೆ ಸಿಎಂ ಸಿದ್ದರಾಮಯ್ಯ ತಮ್ಮ ಆಡಳಿತಾವಧಿಯ ಯೋಜನೆ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.

ಇದನ್ನೂ ಓದಿ: ಕರ್ನಾಟಕ ಅಧಿಕಾರ ಹಂಚಿಕೆ: ಕಾಂಗ್ರೆಸ್ ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದು ತಮ್ಮ ವಿದಾಯದ ಮುನ್ಸೂಚನೆಯ ಧನ್ಯವಾದದ ಪೋಸ್ಟ್‌ ಎಂಬ ಕುತೂಹಲಕ್ಕೆ ಕಾರಣವಾಗಿದೆ.

ಅನ್ನಭಾಗ್ಯ ಸಿದ್ದರಾಮಯ್ಯನವರ ಮಹತ್ವಕಾಂಕ್ಷಿ ಯೋಜನೆ

ಹೌದು…ಇದರಲ್ಲಿ ಎರಡು ಮಾತಿಲ್ಲ. ಸಿದ್ದರಾಮಯ್ಯನವರ ಯೋಜನೆಗಳಲ್ಲಿ ಮಹತ್ವಕಾಂಕ್ಷಿ ಯೋಜನೆ ಅಂದರೆ ಅದು ಅನ್ನಭಾಗ್ಯ. ಈ ಹಿಂದೆ 2013ರಲ್ಲಿ ಸಿಎಂ ಆಗಿದ್ದ ವೇಳೆಯಲ್ಲೇ ಸಿದ್ದರಾಮಯ್ಯ ಈ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದರು. ಬಳಿಕ ಈ ಯೋಜನೆಯನ್ನು ತಮ್ಮ ಎರಡನೇ ಅವಧಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಬೇಕು, ಯಾರೊಬ್ಬರೂ ಹಸಿದು ಮಲಗಬಾರದು, ಜನಸಾಮಾನ್ಯರ ಬದುಕು ಹಸನಾಗಬೇಕು ಎಂಬ ಆಶಯವನ್ನು ಸಾಕಾರಗೊಳಿಸಲು ‘ಅನ್ನಭಾಗ್ಯ’ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 5 ಕೆಜಿ ಆಹಾರ ಧ್ಯಾನದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧ್ಯಾನವನ್ನು ಸೇರಿಸಿ ಪ್ರತಿ ತಿಂಗಳೂ ತಲಾ 10 ಕೆಜಿ ಆಹಾರ ಧ್ಯಾನವನ್ನು ಉಚಿತವಾಗಿ ವಿತರಿಸಲಾಗುತ್ತೆ.

ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೇಕೆ?

ಬಡವರಿಗೆ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಜಾರಿ ಮಾಡೋಕೆ ಕಾರಣ ಏನು ಎನ್ನುವ ಬಗ್ಗೆ ಖುದ್ದು ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದರು. ಫ್ರೀ ಅಕ್ಕಿ ಯಾಕೆ ಕೊಟ್ಟೆ ಎನ್ನುವ ಬಗ್ಗೆ ಬಾಲ್ಯದಲ್ಲಿ ತಮ್ಮ ಮನೆಯಲ್ಲಿ ನಡೆದ ಘಟನೆಯನ್ನು ಖಾಸಗಿ ಕಾರ್ಯಕ್ರಮವೊಂದರಲ್ಲಿ ವಿವರಿಸಿದ್ದರು. ಉಚಿತ ಅಕ್ಕಿ ಯಾಕೆ ಕೊಟ್ಟೆ ಅಂದರೆ ನಮ್ಮ ಮನೆಯ ಪಕ್ಕದಲ್ಲಿ ಸವಿತಾ ಸಮಾಜ ಕುಟುಂಬ ಇತ್ತು. ಅವರು ಒಂದು ತುತ್ತು ಅನ್ನಕ್ಕೆ ನಮ್ಮ ಮನೆ ಬಳಿಗೆ ಬಂದು ನಿಲ್ಲೋರು. ನಮ್ಮ ಅವ್ವ ಗೊಣಕಿಕೊಂಡು ಕೊಡೋರು. ಯಾರು ಕೂಡ ಯಾರ ಮನೆ ಬಾಗಿಲಿಗೆ ಅನ್ನಕ್ಕಾಗಿ ನಿಲ್ಲಬಾರದು ಅಂತ ಅನಿಸಿತು ಅಂತ ಸಿದ್ದರಾಮಯ್ಯ ಬಾಲ್ಯದ ಆ ನೆನಪು ಬಿಚ್ಚಿಟ್ಟಿದ್ದರು.

ಇದು ವಿದಾಯದ ಸುಳಿವೇ?

ರಾಜೀನಾಮೆ ಚರ್ಚೆ ನಡುವೆ ತಮ್ಮ 3 ವರ್ಷಗಳ ಅಧಿಕಾರವಧಿಯ ಸಾಧನೆಯ ಪೋಸ್ಟ್‌ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ? ಎಂದು ಪ್ರಶ್ನೆ, ಚರ್ಚೆಗಳು ಶುರುವಾಗಿವೆ. ಹೌದು…ಸಿಎಂ ಸಿದ್ದರಾಮಯ್ಯ ಅವರು ಗುರುವಾರ(ಮೇ.28ರಂದು) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ. ಸದ್ಯ ಇದಕ್ಕೆ ಪೂರಕವೆಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ X ಖಾತೆಯ ಮೂಲಕ ತಮ್ಮ 3 ವರ್ಷಗಳ ಸಾಧನೆಯ ಕುರಿತು ಪೋಸ್ಟ್‌ ಹಂಚಿಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ತಮ್ಮ ಮಹತ್ವಕಾಂಕ್ಷೆಯ ಯೋಜನೆಯಾದ ಅನ್ನಭಾಗ್ಯದ ಬಗ್ಗೆ ವಿವರವಾಗಿ ಬರೆದುಕೊಂಡಿದ್ದಾರೆ. ಈ ಮೂಲಕ ಸಾರ್ಥಕ ಆಡಳಿತ ನಡೆಸಿದ್ದೇನೆ ಎನ್ನುವ ಅರ್ಥದಲ್ಲಿ ಹೇಳಿದಂತಿದೆ.

ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಇಂದು (ಮೇ 27) ಬೆಳಗ್ಗೆ ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗಿದ್ದ ದಿವಂಗತ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ಕಾರ್ಯಕ್ರಮ ಬಳಿಕ ಮಾತನಾಡಿದ ಅವರು,ಜವಾಹರಲಾಲ್ ನೆಹರೂ ಅವರ ಬಗ್ಗೆ ಒಂದಿಷ್ಟು ಮಾತುಳನ್ನಾಡಿದರು. ಇದೇ ವೇಳೆ ರಾಜೀನಾಮೆ ವಿಷಯದ ಕುರಿತು ಮಾಧ್ಯಮಗಳ ಪ್ರಶ್ನೆಗೆ ನಾಳೆ ಮಾತನಾಡುವುದಾಗಿ ಅಲ್ಲಿಂದ ತೆರಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​: ಜಾತಿ ಸಮೀಕರಣದ ಆಧಾರದಲ್ಲಿ ತಂತ್ರ

ಕಾಂಗ್ರೆಸ್​​ ನಾಯಕರಿಂದ ತಂತ್ರImage Credit source: PTI

ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್​​ ಬ್ಯಾಂಕ್​​ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್​​ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ ಆಧರಿಸಿ ಲೆಕ್ಕಾಚಾರ ಹಾಕಲಾಗಿದ್ದು, ಕೇವಲ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೆ ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ ಹೈಕಮಾಂಡ್​​ ಪ್ಲ್ಯಾನ್​​ ರೂಪಿಸಿರುವ ಮಾಹಿತಿ ಸಿಕ್ಕಿದೆ.

ನಾಲ್ವರಿಗೆ ಡಿಸಿಎಂ ಸ್ಥಾನ?

ನೂತನ ಮುಖ್ಯಮಂತ್ರಿಯ ಆಯ್ಕೆ ಜೊತೆಗೆ ನಾಲ್ವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್​​ನಲ್ಲಿ ಚರ್ಚೆ ನಡೆದಿದೆ. ಜಾತಿ ಸಮೀಕರಣ ಆಧರಿಸಿ ನಾಲ್ವರಿಗೆ ಪ್ರಾತಿನಿಧ್ಯ ನೀಡುವ ಮಾತುಗಳು ಕೇಳಿಬಂದಿವೆ. ಒಬಿಸಿ, ದಲಿತ, ಮುಸ್ಲಿಂ ಅಥವಾ ಅಲ್ಪಸಂಖ್ಯಾತ ಮತ್ತು ಲಿಂಗಾಯತ ಕೋಟಾದಡಿಯಲ್ಲಿ ನಾಲ್ವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ವರಿಷ್ಠರು ಒಲವು ತೋರಿದ್ದಾರಂತೆ.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

ಡಿಸಿಎಂ ರೇಸ್​​ನಲ್ಲಿ ಯಾರ್ಯಾರು?

ದಲಿತ ಕೋಟಾದಲ್ಲಿ ಹಾಲಿ ಗೃಹ ಸಚಿವರಾಗಿರುವ ಪರಮೇಶ್ವರ್ ಅಥವಾ ಸಚಿವ ಪ್ರಿಯಾಂಕ್​​ ಖರ್ಗೆ ಡಿಸಿಎಂ ಆಗುವ ಸಾಧ್ಯತೆ ಇದ್ದರೆ, ಒಬಿಸಿ ಕೋಟಾದಲ್ಲಿ ಯತೀಂದ್ರಗೆ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗಿದೆ. ಇನ್ನು ಮುಸ್ಲಿಂ ಕೋಟಾದಲ್ಲಿ ಹಾಲಿ ಸಚಿವ ಜಮೀರ್ ಅಥವಾ ಸದ್ಯ ವಿಧಾನ ಸಭೆ ಸ್ಪೀಕರ್​​ ಆಗಿರುವ ಯು.ಟಿ. ಖಾದರ್​ಗೆ ಹೈಕಮಾಂಡ್​​ ಮಣೆ ಹಾಕುವ ಸಾಧ್ಯತೆ ಇದೆ. ಲಿಂಗಾಯತ ಕೋಟಾದಲ್ಲಿ ಈಶ್ವರ್ ಖಂಡ್ರೆ ಮತ್ತು ಎಂ.ಬಿ.ಪಾಟೀಲ್ ರೇಸ್​​ನಲ್ಲಿದ್ದರೆ, ಅಲ್ಪಸಂಖ್ಯಾತ ಕೋಟಾದಲ್ಲಿ ಕೆ.ಜೆ.ಜಾರ್ಜ್​ಗೆ ಡಿಸಿಎಂ ಸ್ಥಾನ ಸಿಗುವ ಬಗ್ಗೆ ಅಂದಾಜಿಸಲಾಗಿದೆ.

ನೂತನ ಸಿಎಂ ಬೆನ್ನಲ್ಲೇ ಕೆಪಿಸಿಸಿಗೂ ಹೊಸ ಸಾರಥಿ

ಇನ್ನು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅವರ ಆಯ್ಕೆ ಬಹುತೇಕ ಖಚಿತವಾಗಿರುವ ಹಿನ್ನೆಲೆ ಕೆಪಿಸಿಸಿಗೂ ಹೊಸ ಸಾರಥಿಯ ನೇಮಕವಾಗಲಿದೆ. ಸಿಎಂ ಘೋಷಣೆಯ ಜೊತೆಬಜೊತೆಗೆ ಕೆಪಿಸಿಸಿಗೂ ನೂತನ ಅಧ್ಯಕ್ಷರನ್ನು ಹೈಕಮಾಂಡ್ ಘೋಷಿಸಲಿದ್ದು, ಸಿಎಂ ಮತ್ತು ಡಿಸಿಎಂ ಆಯ್ಕೆ ಆಧರಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ದಕ್ಕಲಿದೆ ಎಂಬುದು ನಿರ್ಧಾರವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಈಗಾಗಲೇ ಸಚಿವ ಸತೀಶ್​​ ಜಾರಕಿಹೊಳಿ ಕಣ್ಣಿಟ್ಟಿದ್ದು, ಈ ಸಂಬಂಧ ಕೆಲ ನಾಯಕರ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್​​ ಮಣೆ ಯಾರಿಗೆ ಅನ್ನೋದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:17 pm, Wed, 27 May 26

Source link

Exit mobile version