ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​: ಜಾತಿ ಸಮೀಕರಣದ ಆಧಾರದಲ್ಲಿ ತಂತ್ರ

ಕಾಂಗ್ರೆಸ್​​ ನಾಯಕರಿಂದ ತಂತ್ರImage Credit source: PTI

ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್​​ ಬ್ಯಾಂಕ್​​ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್​​ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ ಆಧರಿಸಿ ಲೆಕ್ಕಾಚಾರ ಹಾಕಲಾಗಿದ್ದು, ಕೇವಲ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೆ ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ ಹೈಕಮಾಂಡ್​​ ಪ್ಲ್ಯಾನ್​​ ರೂಪಿಸಿರುವ ಮಾಹಿತಿ ಸಿಕ್ಕಿದೆ.

ನಾಲ್ವರಿಗೆ ಡಿಸಿಎಂ ಸ್ಥಾನ?

ನೂತನ ಮುಖ್ಯಮಂತ್ರಿಯ ಆಯ್ಕೆ ಜೊತೆಗೆ ನಾಲ್ವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್​​ನಲ್ಲಿ ಚರ್ಚೆ ನಡೆದಿದೆ. ಜಾತಿ ಸಮೀಕರಣ ಆಧರಿಸಿ ನಾಲ್ವರಿಗೆ ಪ್ರಾತಿನಿಧ್ಯ ನೀಡುವ ಮಾತುಗಳು ಕೇಳಿಬಂದಿವೆ. ಒಬಿಸಿ, ದಲಿತ, ಮುಸ್ಲಿಂ ಅಥವಾ ಅಲ್ಪಸಂಖ್ಯಾತ ಮತ್ತು ಲಿಂಗಾಯತ ಕೋಟಾದಡಿಯಲ್ಲಿ ನಾಲ್ವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ವರಿಷ್ಠರು ಒಲವು ತೋರಿದ್ದಾರಂತೆ.

ಇದನ್ನೂ ಓದಿ: ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?

ಡಿಸಿಎಂ ರೇಸ್​​ನಲ್ಲಿ ಯಾರ್ಯಾರು?

ದಲಿತ ಕೋಟಾದಲ್ಲಿ ಹಾಲಿ ಗೃಹ ಸಚಿವರಾಗಿರುವ ಪರಮೇಶ್ವರ್ ಅಥವಾ ಸಚಿವ ಪ್ರಿಯಾಂಕ್​​ ಖರ್ಗೆ ಡಿಸಿಎಂ ಆಗುವ ಸಾಧ್ಯತೆ ಇದ್ದರೆ, ಒಬಿಸಿ ಕೋಟಾದಲ್ಲಿ ಯತೀಂದ್ರಗೆ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗಿದೆ. ಇನ್ನು ಮುಸ್ಲಿಂ ಕೋಟಾದಲ್ಲಿ ಹಾಲಿ ಸಚಿವ ಜಮೀರ್ ಅಥವಾ ಸದ್ಯ ವಿಧಾನ ಸಭೆ ಸ್ಪೀಕರ್​​ ಆಗಿರುವ ಯು.ಟಿ. ಖಾದರ್​ಗೆ ಹೈಕಮಾಂಡ್​​ ಮಣೆ ಹಾಕುವ ಸಾಧ್ಯತೆ ಇದೆ. ಲಿಂಗಾಯತ ಕೋಟಾದಲ್ಲಿ ಈಶ್ವರ್ ಖಂಡ್ರೆ ಮತ್ತು ಎಂ.ಬಿ.ಪಾಟೀಲ್ ರೇಸ್​​ನಲ್ಲಿದ್ದರೆ, ಅಲ್ಪಸಂಖ್ಯಾತ ಕೋಟಾದಲ್ಲಿ ಕೆ.ಜೆ.ಜಾರ್ಜ್​ಗೆ ಡಿಸಿಎಂ ಸ್ಥಾನ ಸಿಗುವ ಬಗ್ಗೆ ಅಂದಾಜಿಸಲಾಗಿದೆ.

ನೂತನ ಸಿಎಂ ಬೆನ್ನಲ್ಲೇ ಕೆಪಿಸಿಸಿಗೂ ಹೊಸ ಸಾರಥಿ

ಇನ್ನು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅವರ ಆಯ್ಕೆ ಬಹುತೇಕ ಖಚಿತವಾಗಿರುವ ಹಿನ್ನೆಲೆ ಕೆಪಿಸಿಸಿಗೂ ಹೊಸ ಸಾರಥಿಯ ನೇಮಕವಾಗಲಿದೆ. ಸಿಎಂ ಘೋಷಣೆಯ ಜೊತೆಬಜೊತೆಗೆ ಕೆಪಿಸಿಸಿಗೂ ನೂತನ ಅಧ್ಯಕ್ಷರನ್ನು ಹೈಕಮಾಂಡ್ ಘೋಷಿಸಲಿದ್ದು, ಸಿಎಂ ಮತ್ತು ಡಿಸಿಎಂ ಆಯ್ಕೆ ಆಧರಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ದಕ್ಕಲಿದೆ ಎಂಬುದು ನಿರ್ಧಾರವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಈಗಾಗಲೇ ಸಚಿವ ಸತೀಶ್​​ ಜಾರಕಿಹೊಳಿ ಕಣ್ಣಿಟ್ಟಿದ್ದು, ಈ ಸಂಬಂಧ ಕೆಲ ನಾಯಕರ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್​​ ಮಣೆ ಯಾರಿಗೆ ಅನ್ನೋದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:17 pm, Wed, 27 May 26

Source link

ಕರ್ನಾಟಕದಲ್ಲಿ ಹಾವು ಕಡಿತದಿಂದ ಸಾವಿನ ಪ್ರಮಾಣ ಹೆಚ್ಚಳ:​ ನಿರ್ಲಕ್ಷ್ಯ ವಹಿಸದಂತೆ ಆರೋಗ್ಯ ಇಲಾಖೆ​ ಸೂಚನೆ

ಹಾವು (ಸಂಗ್ರಹ ಚಿತ್ರ)Image Credit source: Gettyimages.in

ಬೆಂಗಳೂರು, ಮೇ 27: ಒಂದು ಕಡೆ ಬೀದಿನಾಯಿಗಳ ಕಾಟ ಹೆಚ್ಚುತ್ತಿದ್ದರೆ, ಮತ್ತೊಂದಡೆ ಹಾವುಗಳು ಸೈಲೆಂಟ್ ಕಿಲ್ಲರ್ ಆಗುತ್ತಿವೆ. ಏಕೆಂದರೆ ಬೆಂಗಳೂರು ಸೇರಿದ್ದಂತೆ ಕರ್ನಾಟಕದಲ್ಲಿ (Karnataka) ಕಳೆದ 5 ತಿಂಗಳಲ್ಲಿ 5597 ಜನರು ಹಾವು ಕಡಿತಗೊಳಗಾಗಿದ್ದು, 56 ಜನರು ಬಲಿ ಆಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಸ್ನೇಕ್ ಬೈಟ್ (snake bites) ಹಾಗೂ ಡೆತ್ ರೇಟ್​​​​ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದು ಕಂಡುಬಂದಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಸ್ನೇಕ್ ಬೈಟ್ ಹಾಗೂ ಡೆತ್​​
  • ಸೂಕ್ತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾದ ಆರೋಗ್ಯ ಇಲಾಖೆ
  • ಹಾವು ಕಡಿವಾದರೆ ನಿರ್ಲಕ್ಷ್ಯವಹಿಸದ್ದಂತೆ ಜನರಿಗೆ ಸೂಚನೆ

ಸದ್ಯ ರಾಜ್ಯದಲ್ಲಿ ಬೀದಿನಾಯಿಗಳ ಕಾಟ ಬೆನ್ನಲ್ಲೇ ಇದೀಗ ಹಾವು ಕಡಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಹಾವು ಕಡಿತ ಪ್ರಕರಣಗಳು ಕಂಡುಬಂದಿವೆ.

ಹಾವಿನಿಂದ ಕಡಿತಕ್ಕೊಳಗಾದವರ ಮತ್ತು ಮೃತರ ಅಂಕಿ-ಅಂಶ

ಇನ್ನು ಹಾವಿನ ಕಡಿತದಿಂದ ಸಾವಿನ ಸಂಖ್ಯೆಯೂ ಹೆಚ್ಚಳವಾಗಿದೆ. 2026 ಜನವರಿಯಿಂದ ಮೇ 17ರವರೆಗೆ ಹಾವು ಕಡಿತಕ್ಕೆ 56 ಜನರು ಮೃತಪಟ್ಟಿದ್ದು, 5597 ಜನರು ಹಾವು ಕಚ್ಚಿಸಿಕೊಂಡಿದ್ದಾರೆ. ಕಳೆದ ಒಂದು ತಿಂಗಳಲ್ಲಿ 2000ಕ್ಕೂ ಹೆಚ್ಚು ಜನರಿಗೆ ಹಾವು ಕಡಿತ ಹಾಗೂ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನು ಕಳೆದ ಒಂದೇ ವಾರದಲ್ಲಿ 545 ಜನರು ಹಾವು ಕಡಿತಕ್ಕೊಳಗಾಗಿದ್ದು, 4 ಜನರು ಬಲಿಯಾಗಿದ್ದಾರೆ.

ಸೂಕ್ತ ಮುನ್ನೆಚ್ಚರಿಕೆಗೆ ಮುಂದಾದ ಆರೋಗ್ಯ ಇಲಾಖೆ 

ಸದ್ಯ ಹೆಚ್ಚುತ್ತಿವರು ಸ್ನೇಕ್ ಬೈಟ್ ಹಾಗೂ ಡೆತ್​​ ಹಿನ್ನೆಲೆ ಆರೋಗ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆಗೆ ಮುಂದಾಗಿದೆ. ರಾಜಧಾನಿ ಬೆಂಗಳೂರಿನ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆ, ತಾಲ್ಲೂಕಾಸ್ಪತ್ರೆಗಳಲ್ಲಿ ಆ್ಯಂಟಿ ಸ್ನೇಕ್‌ ವೀನೋಮ್ ಅನ್ನು ಬೇಡಿಕೆಯಷ್ಟು ಸ್ಟಾಕ್ ಇರಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಹಾವು ಕಚ್ಚಿದರೆ ಜೀವ ಉಳಿಸಲು ಮೊದಲು ಏನು ಮಾಡಬೇಕು? ಏನು ಮಾಡಬಾರದು?

ಇನ್ನು ಜನರು ಮಾತ್ರ ಹಾವು ಕಡಿತಕ್ಕೆ ದಿವ್ಯನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಜನರು ತುರ್ತು ಚಿಕಿತ್ಸೆ ಪಡೆಯದೆ ನಾಟಿ ಔಷಧಗಳತ್ತ ಮುಖ ಮಾಡಿ, ಕೊನೆಯ ಹಂತದಲ್ಲಿ ಆಸ್ಪತ್ರೆಗಳತ್ತ ಬರುತ್ತಿರುವುದು ಸಾವಿಗೆ ಕಾರಣ ಎಂದು ತಜ್ಞರು ಹೇಳುತ್ತಿದ್ದಾರೆ. ಹೀಗಾಗಿ ಯಾವುದೇ ಜಾತಿಯ ಹಾವು ಕಡಿವಾದರೆ ನಿರ್ಲಕ್ಷ್ಯವಹಿಸದ್ದಂತೆ ಜನರಿಗೆ ಆರೋಗ್ಯ ಇಲಾಖೆ ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಜೈಲಿನಿಂದ ಹೊರಬರುತ್ತಿದ್ದಂತೆ ಭರ್ಜರಿ ಪಾರ್ಟಿ! ನೋಟಿನ ಹಾರ ಹಾಕಿಕೊಂಡು ಪತ್ನಿಯೊಂದಿಗೆ ಡಾನ್ಸ್

ಪುಣೆ, ಮೇ.27 : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾರಾಷ್ಟ್ರದ ಪುಣೆಯ ಕಲ್ಯಾಣಿನಗರದ ಪೋರ್ಷೆ (Porsche) ಕಾರು ಭೀಕರ ಅಪಘಾತ ಪ್ರಕರಣದ ಪ್ರಮುಖ ಆರೋಪಿ, ಬಿಲ್ಡರ್ ವಿಶಾಲ್ ಅಗರ್ವಾಲ್ (Vishal Agarwal) ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ವಿಶಾಲ್ ಅಗರ್ವಾಲ್, ತಮ್ಮ ಕುಟುಂಬದೊಂದಿಗೆ ಪಾರ್ಟಿ ಮಾಡಿದ್ದಾರೆ. ನೋಟುಗಳ ಹಾರ ಧರಿಸಿ ಅಸಭ್ಯವಾಗಿ ಡಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 2024ರ ಮೇ ತಿಂಗಳಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವ ಐಟಿ ಇಂಜಿನಿಯರ್‌ಗಳ ಪ್ರಾಣ ಪಕ್ಷಿ ಹಾರಿಹೋಗಿತ್ತು. ಈ ಪ್ರಕರಣದಲ್ಲಿ ತನ್ನ ಅಪ್ರಾಪ್ತ ಮಗನನ್ನು ಬಚಾವ್ ಮಾಡಲು ರಕ್ತದ ಮಾದರಿಯನ್ನು ಅದಲುಬದಲು (Blood Sample Swapping) ಮಾಡಿದ ಆರೋಪದ ಮೇಲೆ ವಿಶಾಲ್ ಅಗರ್ವಾಲ್ ಸುದೀರ್ಘ 22 ತಿಂಗಳುಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಇವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ಜೈಲಿನಿಂದ ಹೊರಬರುತ್ತಿದ್ದಂತೆ ಇಬ್ಬರು ಅಮಾಯಕರ ಜೀವ ಬಲಿಪಡೆದ ಎಂಬ ಪಾಪಪ್ರಜ್ಞೆ ಇಲ್ಲದೆ ನೋಟಿನ ಹಾರಗಳನ್ನು ಹಾಕಿಕೊಂಡು ಪತ್ನಿಯೊಂದಿಗೆ ಕುಣಿದು ಕುಪ್ಪಳಿಸಿರುವುದು ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಭಾರೀ ವೈರಲ್​ ಆಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಾಂತ್ರಿಕ ದೋಷ: 8 ಗಂಟೆ ಹಾರಾಡಿ ದೆಹಲಿಗೆ ವಾಪಸಾದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ

ನವದೆಹಲಿ, ಮೇ 27: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ 230 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ದೆಹಲಿಗೆ ವಾಪಸಾಗಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ಮತ್ತೆ ದೆಹಲಿಗೆ ಬಂದಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಚೀನಾ ವಾಯುಪ್ರದೇಶದಿಂದ ವಾಪಸ್
ಮಾಹಿತಿಯ ಪ್ರಕಾರ, ಮೇ 27 ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ‘AI173’ ವಿಮಾನವು ನಿಗದಿತ ಸಮಯಕ್ಕೆ ಟೇಕ್ ಆಫ್ ಆಗಿತ್ತು. ಆದರೆ, ಚೀನಾದ ವಾಯುಪ್ರದೇಶದಲ್ಲಿ ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ ನಂತರ ವಿಮಾನದಲ್ಲಿ ತಾಂತ್ರಿಕ ದೋಷ ಇರುವುದು ಪೈಲಟ್‌ಗಳ ಗಮನಕ್ಕೆ ಬಂದಿದೆ. ನಿಗದಿತ ತುರ್ತು ಕಾರ್ಯವಿಧಾನಗಳಿಗೆ ಅನುಗುಣವಾಗಿ, ತಕ್ಷಣವೇ ವಿಮಾನವನ್ನು ದೆಹಲಿಯ ಕಡೆಗೆ ತಿರುಗಿಸಲು ನಿರ್ಧರಿಸಲಾಯಿತು. ಸುಮಾರು 8 ಗಂಟೆಗಳ ದೀರ್ಘ ಹಾರಾಟದ ನಂತರ ವಿಮಾನವು ಸುರಕ್ಷಿತವಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು.

ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ
ವಿಮಾನಯಾನ ಸಂಸ್ಥೆಯು ತನ್ನ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಸುರಕ್ಷತೆಯೇ ತನಗೆ ಅತ್ಯುನ್ನತ ಆದ್ಯತೆ ಎಂದು ಒತ್ತಿಹೇಳಿದೆ. ಹಠಾತ್ ಆದ ಈ ಬದಲಾವಣೆಯಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಏರ್ ಇಂಡಿಯಾ, ತಕ್ಷಣವೇ ಕಾರ್ಯಪ್ರವೃತ್ತವಾಗಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ. ದೆಹಲಿಯಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಹೋಟೆಲ್ ವಸತಿ, ಉಪಾಹಾರ ಹಾಗೂ ಅವರ ಇಷ್ಟದಂತೆ ಮುಂದಿನ ವಿಮಾನ ವೇಳಾಪಟ್ಟಿಯನ್ನು ಬದಲಾಯಿಸಲು ಅಗತ್ಯವಿರುವ ಎಲ್ಲಾ ನೆರವನ್ನು ಏರ್ ಇಂಡಿಯಾದ ನೆಲದ ಸಿಬ್ಬಂದಿ ಒದಗಿಸುತ್ತಿದ್ದಾರೆ. ಪ್ರಸ್ತುತ ವಿಮಾನವನ್ನು ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ.

ಮತ್ತಷ್ಟು ಓದಿ: ದುಬಾರಿ ಇಂಧನದ ಎಫೆಕ್ಟ್; ಕೆಲ ಅಂತಾರಾಷ್ಟ್ರೀಯ ಫ್ಲೈಟ್​ಗಳನ್ನು ನಿಲ್ಲಿಸಿದ ಏರ್ ಇಂಡಿಯಾ

ಮೇ 21 ರಂದೂ ನಡೆದಿತ್ತು ಮತ್ತೊಂದು ಘಟನೆ
ಇದೇ ತಿಂಗಳ ಮೇ 21 ರಂದು ಬೆಂಗಳೂರಿನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾದ ‘AI2802’ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದ ತಕ್ಷಣ ಅದರ ಒಂದು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕಾಕ್‌ಪಿಟ್ ಸಿಬ್ಬಂದಿಗೆ ಬೆಂಕಿಯ ಮುನ್ಸೂಚನೆ ಸಿಗುತ್ತಿದ್ದಂತೆ ಎಲ್ಲಾ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ಅನುಸರಿಸಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ನಷ್ಟ ಮಾಡಿ ಡಿಸ್ಕೌಂಟ್ ಕೇಳಿದ ರಣವೀರ್ ಸಿಂಗ್; ಸಂಧಾನ ಸಭೆಯಲ್ಲಿ ನಡೆದಿದ್ದೇನು?

ಬಾಲಿವುಡ್‌ನ ‘ಡಾನ್ 3’ ಸಿನಿಮಾ ವಿವಾದ ಈಗ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಟ ರಣವೀರ್ ಸಿಂಗ್ ಮತ್ತು ‘ಎಕ್ಸೆಲ್ ಎಂಟರ್‌ಟೇನ್‌ಮೆಂಟ್’ ನಿರ್ಮಾಣ ಸಂಸ್ಥೆ ನಡುವಿನ ಮುನಿಸು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಇತ್ತೀಚೆಗೆ ನಡೆದ ಸಂಧಾನ ಸಭೆಯೊಂದರ ಆಸಕ್ತಿದಾಯಕ ಮಾಹಿತಿ ಈಗ ಹೊರಬಿದ್ದಿದೆ. ಚಿತ್ರದಿಂದ ಹೊರನಡೆದ ಕಾರಣ ಎಕ್ಸೆಲ್ ಸಂಸ್ಥೆಗೆ ಉಂಟಾಗಿದ್ದ 45 ಕೋಟಿ ರೂಪಾಯಿ ನಷ್ಟಕ್ಕೆ ಪರಿಹಾರವಾಗಿ ರಣವೀರ್ ಸಿಂಗ್ 10 ಕೋಟಿ ರೂಪಾಯಿ ನೀಡಲು ಒಪ್ಪಿದ್ದರು ಮತ್ತು ಬಾಕಿ ಹಣದಲ್ಲಿ ಡಿಸ್ಕೌಂಟ್ ಕೇಳಿದ್ದರು ಎಂದು ವರದಿಯಾಗಿದೆ.

ವಿಷಯ ಗಂಭೀರ ಸ್ವರೂಪ ಪಡೆಯುವ ಮುನ್ನವೇ, ಮಾರ್ಚ್ ಮೊದಲ ವಾರದಲ್ಲಿ ಬಾಲಿವುಡ್​ನ ಪ್ರಮುಖರಾದ ಆಮಿರ್ ಖಾನ್, ಕರಣ್ ಜೋಹರ್ ಮತ್ತು ಸಾಜಿದ್ ನಾಡಿಯಾಡ್ವಾಲಾ ಅವರ ಸಮ್ಮುಖದಲ್ಲಿ ಒಂದು ಮಹತ್ವದ ಸಭೆ ನಡೆದಿತ್ತು. ಈ ಸಭೆಯಲ್ಲಿ ರಣವೀರ್ ಸಿಂಗ್ ತಂಡವು ನಿರ್ಮಾಪಕರಾದ ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರಿಗೆ ಒಂದು ವಿಶೇಷ ಆಫರ್ ನೀಡಿತ್ತು.

ರಣವೀರ್ ನೀಡಿದ್ದ ಆಫರ್ ಏನು?

45 ಕೋಟಿ ರೂಪಾಯಿ ಪರಿಹಾರ ಮೊತ್ತದಲ್ಲಿ ಎಕ್ಸೆಲ್ ಸಂಸ್ಥೆಗೆ ತಕ್ಷಣವೇ 10 ಕೋಟಿ ರೂಪಾಯಿ ನಗದು ಪರಿಹಾರ ನೀಡಲು ರಣವೀರ್ ಒಪ್ಪಿದ್ದರು. ಇದರ ಜೊತೆಗೆ, ಮುಂದಿನ ದಿನಗಳಲ್ಲಿ ಎಕ್ಸೆಲ್ ಸಂಸ್ಥೆ ಮಾಡುವ ಯಾವುದಾದರೂ ಹೊಸ ಸಿನಿಮಾದಲ್ಲಿ ರಣವೀರ್ ನಟಿಸುವ ಭರವಸೆ ನೀಡಿದ್ದರು. ತಮ್ಮ ಸಂಭಾವನೆಯಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿ ಡಿಸ್ಕೌಂಟ್ ನೀಡೋದಾಗಿ ಹೇಳಿದ್ದರು. ಈ ಮೂಲಕ ಒಟ್ಟು 35 ಕೋಟಿ ರೂಪಾಯಿ ಹಂತ-ಹಂತವಾಗಿ ಸರಿದೂಗಿಸಿ, ವೃತ್ತಿಪರ ಬಾಂಧವ್ಯವನ್ನು ಮುಂದುವರಿಸುವುದು ರಣವೀರ್ ಅವರ ಆಲೋಚನೆಯಾಗಿತ್ತು.

ಆಫರ್ ತಿರಸ್ಕರಿಸಿದ ಫರ್ಹಾನ್ ಅಖ್ತರ್ ತಂಡ:

ಆದರೆ ರಣವೀರ್ ಸಿಂಗ್ ಅವರ ಈ ಡಿಸ್ಕೌಂಟ್ ಆಫರ್ ಅನ್ನು ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ನೇರವಾಗಿ ತಿರಸ್ಕರಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಿನಿಮಾದ ಡೇಟ್ಸ್ ಮತ್ತು ಗೊಂದಲಗಳಿಂದಾಗಿ ತಮಗೆ ಭಾರಿ ಆರ್ಥಿಕ ನಷ್ಟವಾಗಿದೆ ಎಂದು ಅವರು ವಾದಿಸಿದ್ದಾರೆ. ಅಷ್ಟೇ ಅಲ್ಲದೆ, ಭವಿಷ್ಯದಲ್ಲಿ ರಣವೀರ್ ಜೊತೆ ಮತ್ತೆ ಕೆಲಸ ಮಾಡುವ ಯಾವುದೇ ಉದ್ದೇಶ ತಮಗಿಲ್ಲದ ಕಾರಣ, ಮುಂದಿನ ಚಿತ್ರದಲ್ಲಿ ಡಿಸ್ಕೌಂಟ್ ಕೊಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂಬುದು ಅವರ ವಾದ ಆಗಿತ್ತು. ಏನೇ ಇದ್ದರೂ ತಮಗೆ ತಕ್ಷಣವೇ ಸಂಪೂರ್ಣ ನಗದು ಪರಿಹಾರ ಸಿಗಬೇಕು ಎಂದು ಎಕ್ಸೆಲ್ ಸಂಸ್ಥೆ ಪಟ್ಟು ಹಿಡಿದಿತ್ತು.

ರಣವೀರ್ ಸಿಂಗ್ ಅಸಮಾಧಾನಕ್ಕೆ ಕಾರಣವೇನು?

ಮತ್ತೊಂದೆಡೆ, ರಣವೀರ್ ಸಿಂಗ್ ಆಪ್ತರ ಪ್ರಕಾರ ಅವರದ್ದೇ ಆದ ಬೇರೆ ವಾದವಿದೆ. ರಣವೀರ್ ಅವರ ಕೆರಿಯರ್ ಕೊಂಚ ಡಲ್ ಆಗಿದ್ದ ಸಮಯದಲ್ಲಿ ಎಕ್ಸೆಲ್ ಸಂಸ್ಥೆಯು ಅವರ ಬದಲಿಗೆ ಹೃತಿಕ್ ರೋಷನ್ ಸೇರಿದಂತೆ ಇತರ ನಟರನ್ನು ಸಂಪರ್ಕಿಸಲು ಪ್ರಯತ್ನಿಸಿತ್ತು, ಇದು ರಣವೀರ್‌ಗೆ ಬೇಸರ ತರಿಸಿತ್ತು. ನಿರ್ಮಾಣ ಸಂಸ್ಥೆಗೆ ತಮ್ಮ ಮೇಲೆ ಸಂಪೂರ್ಣ ಭರವಸೆ ಇಲ್ಲ ಮತ್ತು ಚಿತ್ರದ ಸ್ಕ್ರಿಪ್ಟ್ ಕೂಡ ಅಷ್ಟೊಂದು ಬಲಿಷ್ಠವಾಗಿಲ್ಲದ ಕಾರಣ ಅವರು ಚಿತ್ರದಿಂದ ಹೊರನಡೆಯುವ ತೀರ್ಮಾನ ತಗೆದುಕೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಣವೀರ್ ವಿವಾದ ಬಳಿಕ ‘ಡಾನ್ 3’ ಚಿತ್ರಕ್ಕೆ ಮರಳಲು ಶಾರುಖ್ ರೆಡಿ; ಹಾಕಿದ ಷರತ್ತೇನು?

ಸದ್ಯ’ಎಫ್‌ಡಬ್ಲ್ಯೂಐಸಿಇ’ ಒಕ್ಕೂಟವು ರಣವೀರ್ ವಿರುದ್ಧ ಅಸಹಕಾರ ಆದೇಶ ಹೊರಡಿಸಿರುವುದರಿಂದ ಈ ವಿವಾದ ಮತ್ತಷ್ಟು ಕಠಿಣ ಸ್ವರೂಪ ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Trupti Bhatt IPS: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಅನೇಕರ ಕನಸಾದ ಯುಪಿಎಸ್‌ಸಿ (UPSC) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಯಶಸ್ಸು ಸಾಧಿಸುವುದು ಸುಲಭದ ಮಾತಲ್ಲ. ವರ್ಷಗಳ ಕಾಲ ಸತತ ಪರಿಶ್ರಮ ಪಟ್ಟರೂ ಹಲವರಿಗೆ ಈ ಕನಸು ಕೈಗೂಡುವುದಿಲ್ಲ. ಆದರೆ ಉತ್ತರಾಖಂಡದ ಅಲ್ಮೋರಾ ಮೂಲದ ತೃಪ್ತಿ ಭಟ್ ತಮ್ಮ ಅಸಾಧಾರಣ ಪ್ರತಿಭೆ, ದೃಢ ಸಂಕಲ್ಪ ಮತ್ತು ಕಠಿಣ ಪರಿಶ್ರಮದ ಮೂಲಕ ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿ IPS ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಇನ್ನೂ ವಿಶೇಷವೆಂದರೆ, ನಾಗರಿಕ ಸೇವೆಯ ಗುರಿಗಾಗಿ ಅವರು ISRO ಸೇರಿ ಒಟ್ಟು 16 ಸರ್ಕಾರಿ ಉದ್ಯೋಗಗಳ ಆಫರ್‌ಗಳನ್ನು ತಿರಸ್ಕರಿಸಿದ್ದರು.

ಶಿಕ್ಷಕರ ಕುಟುಂಬದಿಂದ ಬಂದ ಪ್ರತಿಭಾವಂತ ಯುವತಿ:

ತೃಪ್ತಿ ಭಟ್ ಶಿಕ್ಷಕರ ಕುಟುಂಬದಲ್ಲಿ ಜನಿಸಿ ಬೆಳೆದವರು. ತಂದೆ-ತಾಯಿ ಇಬ್ಬರೂ ಶಿಕ್ಷಣ ಕ್ಷೇತ್ರದಲ್ಲಿದ್ದ ಕಾರಣ ಬಾಲ್ಯದಿಂದಲೇ ಮನೆಯಲ್ಲಿ ಓದಿನ ವಾತಾವರಣವಿತ್ತು. ನಾಲ್ಕು ಸಹೋದರ-ಸಹೋದರಿಯರಲ್ಲಿ ಹಿರಿಯರಾದ ತೃಪ್ತಿ, ಅಲ್ಮೋರಾದ ಬಿರ್ಶೆಬಾ ಸೀನಿಯರ್ ಸೆಕೆಂಡರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದರು. ಬಳಿಕ ಕೇಂದ್ರೀಯ ವಿದ್ಯಾಲಯದಲ್ಲಿ ಪಿಯುಸಿ ಮುಗಿಸಿ, ಪ್ರತಿಷ್ಠಿತ ಪಂತನಗರ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದರು. ಇಂಜಿನಿಯರಿಂಗ್ ನಂತರ ಅವರು ಎನ್‌ಟಿಪಿಸಿ (NTPC) ಸಂಸ್ಥೆಯಲ್ಲಿ ಸಹಾಯಕ ವ್ಯವಸ್ಥಾಪಕಿಯಾಗಿ ತಮ್ಮ ವೃತ್ತಿಜೀವನ ಆರಂಭಿಸಿದ್ದರು.

ಡಾ. ಎಪಿಜೆ ಅಬ್ದುಲ್ ಕಲಾಂ ಭೇಟಿಯಿಂದ ಬದಲಾದ ಬದುಕು:

ತೃಪ್ತಿ ಭಟ್ ಅವರ ಜೀವನದಲ್ಲಿ ಮಹತ್ವದ ತಿರುವು ತಂದದ್ದು ಭಾರತದ ಮಾಜಿ ರಾಷ್ಟ್ರಪತಿ ಹಾಗೂ “ಮಿಸೈಲ್ ಮ್ಯಾನ್” ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಭೇಟಿ. 9ನೇ ತರಗತಿಯಲ್ಲಿ ಇದ್ದಾಗ ತೃಪ್ತಿಗೆ ಡಾ. ಕಲಾಂ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಆ ವೇಳೆ ಅವರು ನೀಡಿದ ಕೈಬರಹದ ಪ್ರೇರಣಾದಾಯಕ ಪತ್ರ ತೃಪ್ತಿ ಅವರ ಮನಸ್ಸಿನಲ್ಲಿ ದೇಶಸೇವೆಯ ಕನಸನ್ನು ಮತ್ತಷ್ಟು ಗಟ್ಟಿಗೊಳಿಸಿತು. ಆ ಕ್ಷಣದಿಂದಲೇ ಅವರು ದೇಶಕ್ಕೆ ದೊಡ್ಡ ಮಟ್ಟದಲ್ಲಿ ಸೇವೆ ಸಲ್ಲಿಸುವ ಗುರಿ ಹೊಂದಿದರು.

ISRO ಸೇರಿ 16 ಸರ್ಕಾರಿ ಉದ್ಯೋಗ ತಿರಸ್ಕಾರ:

ನಾಗರಿಕ ಸೇವೆಗೆ ಸೇರುವ ಕನಸನ್ನು ಸಾಕಾರಗೊಳಿಸಲು ತೃಪ್ತಿ ಭಟ್ ಹಲವು ಆಕರ್ಷಕ ಸರ್ಕಾರಿ ಉದ್ಯೋಗಗಳನ್ನು ತಿರಸ್ಕರಿಸಿದರು. ವರದಿಗಳ ಪ್ರಕಾರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ಅವರಿಗೆ 16 ಸರ್ಕಾರಿ ಉದ್ಯೋಗಗಳ ಆಫರ್ ಬಂದಿದ್ದವು. ಆದರೆ IPS ಅಧಿಕಾರಿಯಾಗಬೇಕೆಂಬ ಏಕೈಕ ಗುರಿ ಹೊಂದಿದ್ದ ತೃಪ್ತಿ, ಎಲ್ಲ ಅವಕಾಶಗಳನ್ನು ಬದಿಗಿಟ್ಟು UPSC ತಯಾರಿಯತ್ತ ಸಂಪೂರ್ಣ ಗಮನ ಹರಿಸಿದರು.

ಮೊದಲ ಪ್ರಯತ್ನದಲ್ಲೇ UPSC ಕ್ಲಿಯರ್:

ತಮ್ಮ ಕಠಿಣ ಪರಿಶ್ರಮದ ಫಲವಾಗಿ, ತೃಪ್ತಿ ಭಟ್ 2013ರ UPSC ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಾದ್ಯಂತ 165ನೇ ರ‍್ಯಾಂಕ್ ಪಡೆದು ಭಾರತೀಯ ಪೊಲೀಸ್ ಸೇವೆಗೆ (IPS) ಆಯ್ಕೆಯಾದರು. ವಿಶೇಷವೆಂದರೆ, ಅವರಿಗೆ ತಮ್ಮದೇ ತವರು ರಾಜ್ಯವಾದ ಉತ್ತರಾಖಂಡ ಕೇಡರ್ ದೊರಕಿತು. ಮೊದಲ ಪ್ರಯತ್ನದಲ್ಲೇ ಸಾಧಿಸಿದ ಈ ಯಶಸ್ಸು ಅನೇಕ ಯುವಕರಿಗೆ ಪ್ರೇರಣೆಯಾಗಿದೆ.

ಇದನ್ನೂ ಓದಿ: ನಟ ವಿಜಯ್ ಪುತ್ರಿ ದಿವ್ಯಾ ಸಾಶಾ ಬಗ್ಗೆ ನಿಮಗೆಷ್ಟು ಗೊತ್ತು? ಶೈಕ್ಷಣಿಕ ಹಿನ್ನೆಲೆಯ ಬಗ್ಗೆ ಇಲ್ಲಿದೆ ಮಾಹಿತಿ

ಪ್ರಮುಖ ಹುದ್ದೆಗಳಲ್ಲಿ ಸೇವೆ:

IPS ಅಧಿಕಾರಿಯಾದ ಬಳಿಕ ತೃಪ್ತಿ ಭಟ್ ಉತ್ತರಾಖಂಡದಲ್ಲಿ ಹಲವು ಪ್ರಮುಖ ಮತ್ತು ಸವಾಲಿನ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅವರು ವಹಿಸಿದ್ದ ಪ್ರಮುಖ ಹುದ್ದೆಗಳು:

  • ಡೆಹ್ರಾಡೂನ್ ಪೊಲೀಸ್ ಸೂಪರಿಂಟೆಂಡೆಂಟ್ (SP)
  • ಚಮೋಲಿ ಪೊಲೀಸ್ ಸೂಪರಿಂಟೆಂಡೆಂಟ್ (SP)
  • ತೆಹ್ರಿ ಗರ್ವಾಲ್ SDRF ಕಮಾಂಡೆಂಟ್
  • ಡೆಹ್ರಾಡೂನ್ ಗುಪ್ತಚರ ಮತ್ತು ಭದ್ರತಾ ವಿಭಾಗದ SP

ಯುವ ಪೀಳಿಗೆಗೆ ಪ್ರೇರಣೆ:

ತೃಪ್ತಿ ಭಟ್ ಅವರ ಯಶೋಗಾಥೆ ಇಂದಿನ ಯುವ ಪೀಳಿಗೆಗೆ, ವಿಶೇಷವಾಗಿ ಮಹಿಳೆಯರಿಗೆ ದೊಡ್ಡ ಪ್ರೇರಣೆ. ಸ್ಪಷ್ಟ ಗುರಿ, ಆತ್ಮವಿಶ್ವಾಸ ಮತ್ತು ನಿರಂತರ ಪರಿಶ್ರಮ ಇದ್ದರೆ ಯಾವುದೇ ಕನಸನ್ನಾದರೂ ನನಸಾಗಿಸಬಹುದು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಪವರ್ ಕೇಬಲ್ ಕದಿಯಲು ಹೋಗಿ ಕಳ್ಳನಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ

ತನ್ನನ್ನು ತಾನು ತುಂಬಾ ಬುದ್ಧಿವಂತ ಎಂದುಕೊಳ್ಳುತ್ತಿದ್ದ ಕಳ್ಳ. ತಡರಾತ್ರಿ ಯಾರೂ ಇಲ್ಲದ ಸಮಯ ನೋಡಿ, ರಸ್ತೆಯ ಪಕ್ಕದಲ್ಲಿದ್ದ ದಪ್ಪನೆಯ ವಿದ್ಯುತ್ ಕೇಬಲ್‌ಗಳನ್ನು ಕತ್ತರಿಸಿ, ಅವುಗಳನ್ನು ಮಾರಿ ಭಾರಿ ಹಣ ಗಳಿಸುವುದು ಅವನ ಪ್ಲಾನ್ ಆಗಿತ್ತು. ತನ್ನ ಯೋಜನೆಯಂತೆ, ಆತ ಕತ್ತರಿ ಮತ್ತು ಉಪಕರಣಗಳೊಂದಿಗೆ ಕಂಬದ ಮೇಲಿದ್ದ ಪವರ್ ಕೇಬಲ್ ಏರಿ ಅದನ್ನು ಕತ್ತರಿಸಲು ಶುರು ಮಾಡಿದ್ದ. ತನ್ನ ಕೆಲಸದಲ್ಲಿ ಎಷ್ಟು ಮಗ್ನನಾಗಿದ್ದ ಎಂದರೆ ತಾನು ನಿಂತಿರುವ ತಂತಿಯನ್ನೇ ಕತ್ತರಿಸಿರುವುದರ ಬಗ್ಗೆ ಅರಿವಿರಲಿಲ್ಲ. ಕೇಬಲ್ ಕತ್ತರಿಸಿದ ತಕ್ಷಣ ದೊಪ್ಪೆಂದು ಕೆಳಗೆ ಬಿದ್ದಿದ್ದಾನೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಚಿರಂಜೀವಿ ಬಗ್ಗೆ ಸುಳ್ಳು ಸುದ್ದಿ ಯೂಟ್ಯೂಬ್ ವಿರುದ್ಧ ದೂರು ದಾಖಲು

ಸಿನಿಮಾ (Cinema) ನಟ-ನಟಿಯರ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಸಾಮಾಜಿಕ ಜಾಲತಾಣಗಳ ಈ ಕಾಲದಲ್ಲಿ ಸುಳ್ಳು ಸುದ್ದಿಗಳು ಬಹು ಬೇಗ ಹರಡುತ್ತವೆ. ಕೆಲವು ಯೂಟ್ಯೂಬ್ ಚಾನೆಲ್​​ಗಳಂತೂ ವೀವ್ಸ್​ಗಾಗಿ ಸಿನಿಮಾ ನಟ-ನಟಿಯರಿಗೆ ಸಂಬಂಧಿಸಿದ ಅತಿ ರಂಜಿತ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತವೆ. ಹಲವು ಸಿನಿಮಾ ನಟ-ನಟಿಯರು ಇಂಥಹಾ ಚಾನೆಲ್​​ಗಳ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಿದೆ. ಆದರೆ ಈ ಕುಕೃತ್ಯ ದಕ್ಷಿಣ ಭಾರತದಲ್ಲಿ ತುಸು ಕಡಿಮೆ ಇತ್ತು. ಆದರೆ ಇದೀಗ ಮೆಗಾಸ್ಟಾರ್ ಚಿರಂಜೀವಿ ಕುರಿತು ಸುಳ್ಳು ಸುದ್ದಿ ಮತ್ತು ತಿರುಚಿದ ವಿಡಿಯೋಗಳನ್ನು ಯೂಟ್ಯೂಬ್ ಚಾನೆಲ್ ಒಂದು ಹಂಚಿಕೊಂಡಿದ್ದು, ಚಾನೆಲ್ ವಿರುದ್ಧ ದೂರು ದಾಖಲಾಗಿದೆ.

ಯೂಟ್ಯೂಬ್ ಚಾನೆಲ್ ಒಂದು ಚಿರಂಜೀವಿ ಅವರ ತಿದ್ದಿದ ಚಿತ್ರಗಳನ್ನು ಬಳಸಿ ನಟನ ಬಗ್ಗೆ ಸುಳ್ಳು ಸುದ್ದಿ ಹರಿಡಿಸುತ್ತಿರುವ ಕುರಿತಾಗಿ ವಕೀಲರೊಬ್ಬರು ಪೊಲೀಸರಿಗೆ ದೂರು ದಾಖಲಿಸಿದ್ದು, ಜೂಬ್ಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ಚಾನೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಯೂಟ್ಯೂಬ್ ಚಾನೆಲ್​​ಗೆ ಸಂಬಂಧಿಸಿದ ಮಾಹಿತಿ ಜೊತೆಗೆ ಕೆಲವು ಸ್ಕ್ರೀನ್ ಶಾಟ್​​ಗಳು ಮತ್ತು ವಿಡಿಯೋಗಳನ್ನು ವಕೀಲ ರಾಮಕೃಷ್ಣ ಮಿರಿಯಾಲ ಅವರು ಪೊಲೀಸರಿಗೆ ನೀಡಿದ್ದಾರೆ. ವಕೀಲರ ದೂರು ಆಧರಿಸಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:‘ಪೆದ್ದಿ’ ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್

ಮೆಗಾಸ್ಟಾರ್ ಚಿರಂಜೀವಿ ಭಾರತದ ಸೂಪರ್ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿದ್ದು, ಸಿನಿಮಾಗಳಲ್ಲಿ ನಟಿಸುವ ಜೊತೆಗೆ ಹಲವು ಸಾಮಾಜಿಕ ಕಾರ್ಯಗಳಲ್ಲಿಯೂ ಸಹ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದರೆ ಅವರ ಆಸ್ತಿ, ಸಿನಿಮಾ, ಕುಟುಂಬದ ಬಗ್ಗೆ ಹಾಗೂ ವ್ಯಕ್ತಿತ್ವದ ಬಗ್ಗೆ ಸುಳ್ಳು ಸುದ್ದಿಗಳನ್ನು ಯೂಟ್ಯೂಬ್ ಚಾನೆಲ್​​ನಲ್ಲಿ ಹರಿಬಿಡಲಾಗಿತ್ತಂತೆ. ಈ ಬಗ್ಗೆ ಚಿರಂಜೀವಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಇದೀಗ ಕಾನೂನಾತ್ಮಕವಾಗಿ ಯೂಟ್ಯೂಬ್ ಚಾನೆಲ್ ಅನ್ನು ಬಂದ್ ಮಾಡುವ ಪ್ರಯತ್ನ ಚಾಲ್ತಿಯಲ್ಲಿದೆ.

ಚಿರಂಜೀವಿ ನಟನೆಯ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಇದೇ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ‘ವಿಶ್ವಂಭರ’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು ಆ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಅದರ ಜೊತೆಗೆ ನಿರ್ದೇಶಕ ಬಾಬಿ ಜೊತೆಗೆ ಒಂದು ಸಿನಿಮಾನಲ್ಲಿ ಚಿರಂಜೀವಿ ನಟಿಸುತ್ತಿದ್ದಾರೆ. ಒದೆಲ ನಿರ್ದೇಶನ ಮಾಡಲಿರುವ ಮತ್ತೊಂದು ಸಿನಿಮಾನಲ್ಲಿ ಚಿರಂಜೀವಿ ನಟಿಸುತ್ತಿದ್ದು ಆ ಸಿನಿಮಾವನ್ನು ಕೆವಿಎನ್ ನಿರ್ಮಾಣ ಮಾಡುತ್ತಿದೆ. ಇನ್ನೂ ಕೆಲವು ಸಿನಿಮಾಗಳು ಚಿರಂಜೀವಿ ಕೈಯಲ್ಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟವೀಗ ನಿರಾಳ: ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್​​

ಬೆಂಗಳೂರು, ಮೇ 27: ಎಬೋಲಾ ವೈರಸ್ ಶಂಕಿತ ಪ್ರಕರಣವೊಂದು ಬೆಂಗಳೂರಲ್ಲಿ ಪತ್ತೆಯಾಗಿರೋದು ಭಾರಿ ಆತಂಕಕ್ಕೆ ಕಾರಣವಾಗಿತ್ತು. ಆದರೆ ಉಗಾಂಡಾ ಮೂಲದ ಮಹಿಳೆಯ ಎಬೋಲಾ ಪರೀಕ್ಷೆಯ ರಿಪೋರ್ಟ್​​ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೈಸೇರಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ರಾಜ್ಯಕ್ಕೂ ಎಬೋಲಾ ಮಾರಿ ಕಾಲಿಟ್ಟಿತಾ ಎಂಬ ಆತಂಕದಲ್ಲಿದ್ದ ಇಲಾಖೆ ನಿಟ್ಟುಸಿರು ಬಿಟ್ಟಿದೆ.

ಮುಖ್ಯಾಂಶಗಳು

  • ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟಕಕ್ಕೆ ಬಿಗ್​​ ರಿಲೀಫ್​​
  • ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್​​
  • ನಿಟ್ಟುಸಿರು ಬಿಟ್ಟ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಉಗಾಂಡಾ ದೇಶದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ (28) ಎಂಬ ಮಹಿಳೆ ಕಳೆದ ಮೇ 23ರಂದು ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ‘ರಾಯಲ್ ಏಸ್ ಬೂಟಿಕ್’ ಹೋಟೆಲ್‌ನ ರೂಮ್ ನಂಬರ್ 303ರಲ್ಲಿ ತಂಗಿದ್ದ ಆಕೆಗೆ ಎಬೋಲಾ ಮಾದರಿಯ ಆರೋಗ್ಯ ಸಮಸ್ಯೆಗಳು ಇರುವುದು ಗೊತ್ತಾಗುತ್ತಿದ್ದಂತೆ ಎಚ್ಚೆತ್ತ ಆರೋಗ್ಯ ಇಲಾಖೆ, ತಕ್ಷಣವೇ ಆದೇಶ ಹೊರಡಿಸಿ ಆಂಬುಲೆನ್ಸ್ ಮೂಲಕ ಅವರನ್ನು ಐಸೋಲೇಷನ್​​ಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಿತ್ತು. ಜೊತೆಗೆ ಶಂಕಿತ ಮಹಿಳೆಯಿಂದ ರಕ್ತ ಹಾಗೂ ಇತರ ಅಗತ್ಯ ಮಾದರಿಗಳನ್ನು ಸಂಗ್ರಹಿಸಿ, ಈ ಸ್ಯಾಂಪಲ್‌ಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಪುಣೆಯ ಲ್ಯಾಬ್‌ಗೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ

ಉಗಾಂಡಾದ ಕ್ಯಾಂಪಾಲಾ ಮೂಲದ ನಾಗಿರೆ ಲತಿಫಾ ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಹೀಗಾಗಿ ಐಸೋಲೇಷನ್​​ನಲ್ಲಿ ಇಡಲಾಗಿದ್ದ ಅವರನ್ನು ಆಸ್ಪತ್ರೆಯಿಂದ ಹೋಟೆಲ್​ಗೆ ಸ್ಥಳಾಂತರ ಮಾಡಲಾಗಿದೆ. ಆದರೂ 21 ದಿನಗಳ ಕಾಲ ನಾಗಿರೆ ಲತಿಫಾ ಕ್ವಾರಂಟೈನ್ ಆಗಬೇಕಿದ್ದು, ಈ ಅವಧಿಯಲ್ಲಿ ಆರೋಗ್ಯ ಇಲಾಖೆ ನಿರಂತರವಾಗಿ ಮಾನಿಟರ್ ಮಾಡಲಿದೆ. ಮತ್ತೆ ರೋಗ ಲಕ್ಷಣ ಕಂಡುಬರದಿದ್ದರೆ ಕ್ಯಾರಂಟೈನ್​ನಿಂದ ಬಿಡುಗಡೆ ಮಾಡಲಾಗುತ್ತದೆ. ಒಂದುವೇಳೆ ರೋಗಲಕ್ಷಣ ಕಂಡುಬಂದ್ರೆ 2ನೇ ಹಂತದಲ್ಲಿ ಪುಣೆಯ NIV ಲ್ಯಾಬ್​ನಲ್ಲಿ ಸ್ಯಾಂಪಲ್ ಪರಿಶೀಲನೆ ನಡೆಯಲಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

254 ರನ್​​ಗಳನ್ನು ನೋಡಿ ಸೋಲೊಪ್ಪಿಕೊಂಡ್ರಾ? ಕಿಡಿಕಾರಿದ ಗ್ಲೆನ್ ಫಿಲಿಪ್ಸ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಚಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು.

ಈ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬರೋಬ್ಬರಿ 92 ರನ್​ಗಳ ಅಂತರದಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಆಗಲಿ ಅಥವಾ ಮುಖ್ಯ ಕೋಚ್ ಆಶಿಶ್ ನೆಹ್ರಾ ಕಾಣಿಸಿಕೊಂಡಿರಲಿಲ್ಲ. ಬದಲಿಗೆ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿರ ಗ್ಲೆನ್ ಫಿಲಿಪ್ಸ್ ಅವರನ್ನು ಕಳುಹಿಸಲಾಗಿತ್ತು.

ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಗ್ಲೆನ್ ಫಿಲಿಪ್ಸ್​​ಗೆ ವರದಿಗಾರರೊಬ್ಬರು, ಆರ್​ಸಿಬಿ ನೀಡಿದ 254 ರನ್​ಗಳ ಕಠಿಣ ಗುರಿ ನೋಡಿ ಗುಜರಾತ್ ಟೈಟಾನ್ಸ್ ಆಟಗಾರರು ಮಾನಸಿಕವಾಗಿಯೇ ಸೋಲು ಒಪ್ಪಿಕೊಂಡ್ರಾ? ಎಂದು ಪ್ರಶ್ನೆ ಮುಂದಿಟ್ಟಿದ್ದರು.

ಈ ಪ್ರಶ್ನೆ ಕೇಳುತ್ತಿರುವಂತೆ ಅಸಮಾಧಾನ ಹೊರಹಾಕಿದ ಗ್ಲೆನ್ ಫಿಲಿಪ್ಸ್, ಇದು ತಂಡದ ವೃತ್ತಿಪರತೆಗೆ ಧಕ್ಕೆ ತರುವಂತಹ ಪ್ರಶ್ನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನೀವು ಕೇಳಿರುವುದು ಅತ್ಯಂತ ಮೂರ್ಖತನದ ಪ್ರಶ್ನೆ. ನಿಜಕ್ಕೂ ಇಂತಹ ಪ್ರಶ್ನೆಗಳೇ ಮೂರ್ಖತನದ್ದು! ಯಾವೊಬ್ಬರ ವೃತ್ತಿಪರ ಕ್ರಿಕೆಟಿಗನೂ ಕೂಡ ಹೀಗೆ ಯೋಚಿಸಲ್ಲ. ಯಾರೂ ಸಹ ಸ್ಕೋರ್ ನೋಡಿ, ಈ ಪಂದ್ಯವನ್ನು ಇಲ್ಲೇ ಕೈ ಬಿಡುತ್ತಿದ್ದೇವೆ ಎಂದು ಮೈದಾನಕ್ಕೆ ಇಳಿಯುವುದಿಲ್ಲ. ಪಂದ್ಯವಾಡಲು ಬಂದವರು ಹಾಗೆ ಏಕೆ ಯೋಚಿಸುತ್ತಾರೆ ಹೇಳಿ”.

“250 ಕ್ಕೂ ಹೆಚ್ಚಿನ ಬೃಹತ್ ಮೊತ್ತವನ್ನು ಬೆನ್ನಟ್ಟುವಾಗ ಪ್ರತಿ ಹಂತದಲ್ಲೂ ನಾವು ಪಾಸಿಟಿವ್ ಆಗಿಯೇ ಯೋಚಿಸಬೇಕಾಗುತ್ತದೆ. ಆದರೆ ಕೆಲವೊಮ್ಮೆ ನಮ್ಮ ಪ್ಲ್ಯಾನ್​ಗಳು ವರ್ಕ್​ ಆಗಲ್ಲ. ಅದೇ ರೀತಿ ಈ ಮ್ಯಾಚ್​ನಲ್ಲಿ ನಾವು ಅಂದುಕೊಂಡಂತೆ ನಡೆದಿಲ್ಲ ಅಷ್ಟೇ” ಎಂದು ಗ್ಲೆನ್ ಫಿಲಿಪ್ಸ್ ಗುಜರಾತ್ ಟೈಟಾನ್ಸ್ ತಂಡದ ಆಟಗಾರರ ಪ್ರದರ್ಶನವನ್ನು ಸಮರ್ಥಿಸಿಕೊಂಡಿದ್ದಾರೆ.

ಫೈನಲ್​ ಮೇಲೆ ಗುಜರಾತ್ ಕಣ್ಣು:

ಈ ಬಾರಿಯ ಐಪಿಎಲ್​ನ ಫೈನಲ್ ಪಂದ್ಯ ನಡೆಯುವುದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ. ಈ ಸ್ಟೇಡಿಯಂ ಗುಜರಾತ್ ಟೈಟಾನ್ಸ್ ತಂಡದ ತವರು ಮೈದಾನ. ಹೀಗಾಗಿ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಜಯಗಳಿಸುವ ಮೂಲಕ ಗುಜರಾತ್ ಟೈಟಾನ್ಸ್ ತಂಡವು ಫೈನಲ್​ಗೇರಲು ಪ್ಲ್ಯಾನ್ ರೂಪಿಸುತ್ತಿದೆ.

ಇದನ್ನೂ ಓದಿ: ಈ ಸಲನೂ ಕಪ್ ನಮ್ದೆ: ಈ ಲೆಕ್ಕಾಚಾರಕ್ಕಿದೆ ಬಲವಾದ ಕಾರಣ!

ಇಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮುಂದಿನ ಎದುರಾಳಿಯಾಗಿ ಸನ್​ರೈಸರ್ಸ್ ಹೈದರಾಬಾದ್ ಅಥವಾ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್​ ತಂಡಕ್ಕೆ ಫೈನಲ್​ಗೇರಲು ಅವಕಾಶವಿದೆ.

 

Source link

Exit mobile version