ಹೊಸ ರೂಲ್ಸ್: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ – Kannada News | Chamarajanagar: Mahadeshwara Betta Bans Night Padyatra After Deadly Leopard Incident
ಚಾಮರಾಜನಗರ, ಜನವರಿ 23: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ (Leopard) ದಾಳಿಗೆ ಭಕ್ತ (Devotees) ಪ್ರವೀಣ್ ಬಲಿ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿ ಮಾಡಿದೆ. ಇನ್ಮುಂದೆ ರಾತ್ರಿ ವೇಳೆ ಬೆಟ್ಟಕ್ಕೆ ಪಾದಯಾತ್ರೆಗೆ ನಿರ್ಬಂಧ ಹೇರಲಾಗಿದೆ. ಕಾಡುಪ್ರಾಣಿಗಳ ಕಾಟ ಹಿನ್ನೆಲೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆ ನಿರ್ಬಂಧಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಘಟನೆ ಹಿನ್ನೆಲೆ …