ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ – Kannada News | Chandan Shetty talks about his new film Elra Kaaleliyatte Kaala Kannada Movie

ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ಹೀರೋ ಆಗಿ ನಟಿಸಿರುವ ‘ಎಲ್ರ ಕಾಲೆಳೆಯುತ್ತ ಕಾಲ’ (Elra Kaaleliyatte Kaala) ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಏಪ್ರಿಲ್ 17ರಂದು ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ 24ರಂದು ರಿಲೀಸ್ ಆಗುತ್ತಿದೆ. ಅಂದು ಡಾ. ರಾಜ್​ಕುಮಾರ್ ಅವರ ಹುಟ್ಟುಹಬ್ಬ. ಆ ವಿಶೇಷ ದಿನದಂದು ಸಿನಿಮಾ ಬಿಡುಗಡೆ ಆಗುತ್ತಿರುವುದಕ್ಕೆ ಚಂದನ್ ಶೆಟ್ಟಿ (Chandan Shetty) ಅವರಿಗೆ ಖುಷಿ ಇದೆ. ಈ ಸಿನಿಮಾಗೆ ಬೆಂಬಲ ನೀಡಲು ಹಿರಿಯ ನಟಿ ತಾರಾ ಅವರು ಸುದ್ದಿಗೋಷ್ಠಿಗೆ ಆಗಮಿಸಿದ್ದಾರೆ. ‘ತುಂಬ ಪ್ರೀತಿಯಿಂದ ನಾವು ಕೆಲಸ ಮಾಡಿದ್ದೇವೆ. ಈ ಸಿನಿಮಾದಿಂದ ನಿರ್ಮಾಪಕರಿಗೆ ಒಳ್ಳೆಯದಾಗಬೇಕು. ನಾವು ನಿಮ್ಮ ಕಾಲು ಹಿಡಿಯುತ್ತೇವೆ. ನೀವು ನಮ್ಮ ಕೈ ಹಿಡಿಯಿರಿ’ ಎಂದು ಪ್ರೇಕ್ಷಕರಿಗೆ ಹೇಳುವ ಮೂಲಕ ಚಂದನ್ ಶೆಟ್ಟಿ ಅವರು ಬೆಂಬಲ ಬೇಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

16 ವರ್ಷದ ಮಗಳನ್ನು ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿ ಕಾಲುವೆಯಲ್ಲಿ ಎಸೆದ ಅಪ್ಪ! – Kannada News | Lucknow Father kills minor daughter disfigures her face with acid dumped body in Canal

ಲಕ್ನೋ, ಏಪ್ರಿಲ್ 20: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಯಾನಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳನ್ನು ಕೊಂದು, ಆಕೆಯ ಮುಖದ ಮೇಲೆ ಆ್ಯಸಿಡ್ (Acid Attack) ಸುರಿದು ಆಕೆಯ ಗುರುತನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಆರೋಪಿ ನಂತರ ಆಕೆಯ ಶವವನ್ನು ಬಾರಾಬಂಕಿಯ ಶಾರದಾ ಕಾಲುವೆಯಲ್ಲಿ ಎಸೆದಿದ್ದಾನೆ. ಈ ಘಟನೆ ಚಿನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ಆತನೇ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಆರೋಪಿಸಿ ನಾಪತ್ತೆ ದೂರು ದಾಖಲಿಸಿದ್ದಾನೆ. ಪೊಲೀಸರ ತನಿಖೆ ವೇಳೆ ಅಪ್ಪನೇ ಮಗಳ ಕೊಲೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಕಾರ, ಆರೋಪಿ ತಂದೆ ವಿಜಯ್ ಕುಮಾರ್ ಚೌಬೆ 16 ವರ್ಷದ ತನ್ನ ಮಗಳ ಪ್ರೇಮ ಪ್ರಕರಣದಿಂದ ಬೇಸತ್ತಿದ್ದ. ಹೀಗಾಗಿ, ಆಕೆಯಿಂದ ತನ್ನ ಮರ್ಯಾದೆಗೆ ಕುತ್ತು ಬರುತ್ತದೆ ಎಂದು ತನ್ನ ಸ್ನೇಹಿತ ಅಬ್ದುಲ್ ಮನ್ನನ್ ಜೊತೆ ಸೇರಿ ಆಕೆಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಭೂತೋಚ್ಚಾಟನೆ ಮಾಡುವ ನೆಪದಲ್ಲಿ ಆಕೆಯನ್ನು ತನ್ನ ಕಾರಿನಲ್ಲಿ ಕರೆದೊಯ್ದು, ದಾರಿಯಲ್ಲಿ ಟವಲ್​ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದ.

ಇದನ್ನೂ ಓದಿ: ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ

ಕೊಲೆಯ ನಂತರ, ಆ ಬಾಲಕಿಯ ಗುರುತು ಮರೆಮಾಡಲು ಆಕೆಯ ಮುಖಕ್ಕೆ ಆಸಿಡ್ ಹಚ್ಚಿ ಸುಟ್ಟು ಹಾಕಿದ್ದ. ನಂತರ ಆ ಶವವನ್ನು ಬಾರಾಬಂಕಿಯ ಬದ್ದುಪುರ ಪ್ರದೇಶದ ಶಾರದಾ ಕಾಲುವೆಯ ದಡದಲ್ಲಿ ಎಸೆಯಲಾಗಿತ್ತು. ಕೊಲೆಯ ನಂತರ, ಪೊಲೀಸರ ದಾರಿ ತಪ್ಪಿಸಲು ತಾನೇ ಐಜಿಆರ್‌ಎಸ್ ಪೋರ್ಟಲ್‌ನಲ್ಲಿ ನಾಪತ್ತೆ ದೂರು ದಾಖಲಿಸಿ, ತನ್ನ ಮಗಳ ಗೆಳೆಯನೇ ಆಕೆಯನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿದ್ದ. ಪೊಲೀಸರು ಅನುಮಾನಗೊಂಡು ತನಿಖೆ ಆರಂಭಿಸಿದರು. ತನಿಖೆಯ ಸಮಯದಲ್ಲಿ ಆತ ಪದೇಪದೆ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಾ ಇದ್ದುದರಿಂದ ಅನುಮಾನಗೊಂಡ ಪೊಲೀಸರು ತನಿಖೆ ನಡೆಸಿದಾಗ ಆತನೇ ಮಗಳ ಕೊಲೆ ಮಾಡಿದ್ದು ಬಯಲಾಗಿತ್ತು.

ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಬೆಟ್ಟಕ್ಕೆ ಡಿಕ್ಕಿಯಾಗಿ ವಿಮಾನ ಪತನ; ಇಬ್ಬರು ಪೈಲಟ್​ ಸಾವು

ಚಿನ್ಹಾಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತಂದೆ ವಿಜಯ್ ಕುಮಾರ್ ಚೌಬೆ ಮತ್ತು ಆತನ ಸಹಚರ ಅಬ್ದುಲ್ ಮನ್ನನ್ ಅವರನ್ನು ಬಂಧಿಸಿದರು. ಕೊಲೆಗೆ ಬಳಸಲಾದ ಟವೆಲ್ ಮತ್ತು ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಮಗಳನ್ನು ರಕ್ಷಿಸಬೇಕಾದ ತಂದೆಯೇ ಆಕೆಯ ಸಾವಿಗೆ ಕಾರಣನಾಗಿದ್ದು ತೀವ್ರ ಆಘಾತಕಾರಿ ಸಂಗತಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್ – Kannada News | Karna Serial actor Kiran Raj talks about his new Kannada Film Sherr

ನಟ ಕಿರಣ್ ರಾಜ್ ಅವರು ಧಾರಾವಾಹಿ ಮಾತ್ರವಲ್ಲದೇ ಸಿನಿಮಾದಲ್ಲಿ ಕೂಡ ಬ್ಯುಸಿ ಆಗಿದ್ದಾರೆ. ಈಗ ಅವರು ‘ಶೇರ್’ (Sherr) ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಅವರ ಪಾತ್ರ ಬೇರೆ ಬೇರೆ ರೀತಿ ಇರುತ್ತದೆ. ಆ ಬಗ್ಗೆ ಕೇಳಿಬಂದ ಮೆಚ್ಚುಗೆಯ ಕುರಿತು ಕಿರಣ್ ರಾಜ್ (Kiran Raj) ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ನಾನು ನಿರ್ದೇಶಕರ ನಟ. ಅವರಿಂದ ಬಂದ ಸೂಚನೆಯನ್ನು ಪಾಲಿಸುವ ಕೆಲಸಗಾರ ನಾನು. ಆ ರೀತಿ ನಾನು ಕೆಲಸ ಮಾಡುತ್ತೇನೆ. ಆ ಮೂಲಕ ನನ್ನ ಪ್ರತಿಭೆ ತೋರಿಸುತ್ತೇನೆ. ಅದರ ಕ್ರೆಡಿಟ್ ಎಲ್ಲವೂ ನಿರ್ದೇಶಕರಿಗೆ ಸಲ್ಲಬೇಕು. ಈ ಸಿನಿಮಾದಲ್ಲಿ ನಾನು ಅನಾಥ ಹುಡುಗನ ಪಾತ್ರ ಮಾಡಿದ್ದೇನೆ. ಆ್ಯಕ್ಷನ್ ಹೀರೋ ರೀತಿ ನನ್ನ ಜರ್ನಿ ಮುಂದುವರಿಯುತ್ತದೆ. ಈ ಸಿನಿಮಾದಲ್ಲಿ ನನ್ನದೇ ಮುಖ್ಯ ಪಾತ್ರವಲ್ಲ. ಯಾಕೆಂದರೆ ಸಾಕಷ್ಟು ಕಲಾವಿದರು ಇದ್ದಾರೆ. ಎಲ್ಲರ ಪಾತ್ರಕ್ಕೂ ಅಷ್ಟೇ ಮಹತ್ವ ಇದೆ’ ಎಂದು ಕಿರಣ್ ರಾಜ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

GT vs MI: ಮೊದಲ ಎಸೆತದಲ್ಲೇ ವಿಕೆಟ್; ಕೊನೆಗೂ ವಿಕೆಟ್ ಬರ ನೀಗಿಸಿಕೊಂಡ ಬುಮ್ರಾ – Kannada News | Jasprit Bumrah Ends IPL 2026 Wicket Drought: First Ball Strike vs Gujarat Titans

2026 ರ ಐಪಿಎಲ್‌ನಲ್ಲಿ ವಿಕೆಟ್ ಬರ ಎದುರಿಸುತ್ತಿದ್ದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೊನೆಗೂ ತಮ್ಮ ವಿಕೆಟ್ ಖಾತೆ ತೆರೆದಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಶತಕದ ನೆರವಿನಿಂದ 199 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್​ಗೆ ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ಎಸೆತದಲ್ಲೇ ಆಘಾತ ನೀಡಿದರು.

ಬರೋಬ್ಬರಿ 4 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ಪರ ಮೊದಲ ಓವರ್ ಬೌಲ್ ಮಾಡಿದ ಬುಮ್ರಾ ಗುಜರಾತ್ ತಂಡದ ಆರಂಭಿಕ ಸಾಯಿ ಸುದರ್ಶನ್ ಅವರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿದರು. ಈ ಮೂಲಕ 2026 ರ ಐಪಿಎಲ್‌ನಲ್ಲಿ ಬರೋಬ್ಬರಿ 5 ಪಂದ್ಯಗಳ ಬಳಿಕ ಮೊದಲ ವಿಕೆಟ್ ಉರುಳಿಸಿದರು. ಈ ಹಿಂದೆ ಆಡಿದ್ದ 5 ಪಂದ್ಯಗಳಲ್ಲಿ 19 ಓವರ್​ಗಳನ್ನು ಅಂದರೆ 114 ಎಸೆತಗಳನ್ನು ಬೌಲ್ ಮಾಡಿದ್ದ ಬುಮ್ರಾ ರನ್​ಗಳಿಗೆ ಕಡಿವಾಣ ಹಾಕಿದ್ದರಾದರೂ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು. ಆದರೀಗ ಗುಜರಾತ್ ವಿರುದ್ಧ ತಮ್ಮ ವಿಕೆಟ್ ಖಾತೆ ತೆರೆದಿದ್ದಾರೆ.

Source link

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi Doctor Murder: Accused Arrested in 24 Hours in Uttar Kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada

ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ.

ನಡೆದಿದ್ದೇನು?

ಶಿರಸಿಯ ನ್ಯೂ ಕೆಹೆಚ್​ಬಿ ಕಾಲೋನಿಯಲ್ಲಿ ನಡೆದ ವೈದ್ಯ ಡಾ. ರಮೇಶ್ ಕಲಗುಟಕರ ಅವರ ಕೊಲೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಪಡುಬೈಲ್ ಗ್ರಾಮದ ಮಂಜುನಾಥ್ ನಾಯ್ಕ್(61) ಎಂಬಾತನನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಹಣದ ಆಸೆ ಮತ್ತು ಅತಿಯಾದ ಕುಡಿತವೇ ಈ ಬರ್ಬರ ಹತ್ಯೆಗೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: 2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ!

ಅಸಲಿಗೆ ಅಲ್ಲಿ ನಡೆದಿದ್ದೇನು ಅಂದರೆ, ಡಾ. ರಮೇಶ್ ಇಂದು ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದರು. ಶನಿವಾರ ರಾತ್ರಿ ವೈದ್ಯನ ಮನೆಯಲ್ಲಿ ತಂಗಿದ್ದ ಗೆಳೆಯ ಮಂಜುನಾಥ್ ಜೊತೆಗೆ ಮದ್ಯದ ಪಾರ್ಟಿ ಮಾಡಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿದ್ದ ರಮೇಶ್, ತಾನು ಮದುವೆಗಾಗಿ ತಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಒಡವೆಗಳು ಮತ್ತು ಹಣವನ್ನ ಗೆಳೆಯನಿಗೆ ತೋರಿಸಿದ್ದಾರೆ. ಇದೇ ಡಾಕ್ಟರ್ ಪಾಲಿಗೆ ಮೃತ್ಯುವಾಗಿ ಪರಿಣಮಿಸಿದೆ.

15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಸೇರಿ 50 ಸಾವಿರ ರೂ ದೋಚಿ ಪರಾರಿ

ಇಬ್ಬರೂ ರಾತ್ರಿ ಪಾರ್ಟಿ ಮಾಡಿ ಮನೆಯಲ್ಲಿ ಮಲಗಿದ್ದಾರೆ. ಆದರೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮಂಜುನಾಥ್, ನಿದ್ರೆಯಲ್ಲಿದ್ದ ವೈದ್ಯನ ತಲೆಗೆ ಕಬ್ಬಿಣದ ರಾಡಿನಿಂದ ಬಲವಾಗಿ ಹೊಡೆದಿದ್ದಾನೆ. ಬಳಿಕ ಮನೆಯಲ್ಲಿದ್ದ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 50 ಸಾವಿರ ರೂಪಾಯಿ ನಗದನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದ. ಶಿರಸಿ ನ್ಯೂ ಮಾರುಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು, ಕೇವಲ ಒಂದೇ ದಿನದಲ್ಲಿ ಹಂತಕನನ್ನು ಸೆರೆಹಿಡಿದು ಜೈಲಿಗಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ – Kannada News | Several Trees And Sheets Fall In Hassan Due To Heavy Rain

ಹಾಸನ, (ಏಪ್ರಿಲ್ 20): ಬಿಸಿಲ ಬೇಗೆಯಲ್ಲಿ ಬೆಂದು ಹೋಗುತ್ತಿದ್ದ ಜನರಿಗೆ ಮಳೆರಾಯ ತಂಪಾಗಿಸಿದ್ದಾನೆ. ಹೌದು….ಏಪ್ರಿಲ್ ಮೊದಲ ವಾರದಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ಹೀಟ್ ವೇವ್ ನಡುವೆ ಹಾಸನದಲ್ಲಿ ವರುಣ ಅಬ್ಬರಿಸಿದ್ದಾನೆ. ಹೌದು…ಸಂಜೆಯಾಗುತ್ತಿದ್ದಂತೆಯೇ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ದೊಡ್ಡಮಗ್ಗೆ ಗ್ರಾಮದಲ್ಲಿ ಗಾಳಿ ಮಳೆ ಅಬ್ಬರ ಶುರುವಾಗಿದ್ದು, ಭಾರಿ ಗಾಳಿಗೆ ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟ್‌ಗಳು ಹಾರಿ ಹೋಗಿವೆ. ಅಲ್ಲದೇ ಮರದ ಕೊಂಬೆಗಳು ಮುರಿದು ಬಿದ್ದು ಎರಡು ಕಾರುಗಳು ಜಖಂ ಆಗಿದ್ದರೆ, ಇನ್ನೊಂದೆಡೆ ಮರದ ಕೊಂಬೆ ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಹೀಗೆ ಮಳೆರಾಯ ಸಾಲು ಸಾಲು ಅವಾಂತರ ಸೃಷ್ಟಿಸಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

GT vs MI: ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್ – Kannada News | GT vs MI Tilak Varma’s Fastest IPL Century hardik pandya celebration goes viral

ತಿಲಕ್ ವರ್ಮಾ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಆರಂಭದಲ್ಲೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಮುಂಬೈ ತಂಡದ ಇನ್ನಿಂಗ್ಸ್ ನಿಭಾಯಿಸುವುದರ ಜೊತೆಗೆ ಐದನೇ ಕ್ರಮಾಂಕದಲ್ಲಿ ಬಂದು ಭರ್ಜರಿ ಶತಕವನ್ನು ಸಿಡಿಸಿದರು. ಗುಜರಾತ್ ಟೈಟಾನ್ಸ್ ವಿರುದ್ಧ, ಅವರು ಕೇವಲ 45 ಎಸೆತಗಳಲ್ಲಿ ಏಳು ಸಿಕ್ಸರ್‌ಗಳು ಮತ್ತು ಎಂಟು ಬೌಂಡರಿಗಳ ಸಹಾಯದಿಂದ 101 ರನ್ ಕಲೆಹಾಕಿದರು. 224.44 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ತಿಲಕ್, 20ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿ ತಮ್ಮ ಶತಕ ಪೂರೈಸಿದರು. ತಿಲಕ್ ಶತಕ ಬಾರಿಸುತ್ತಿದ್ದಂತೆ ಇತ್ತ ಡಗೌಟ್​ನಲ್ಲಿ ಕುಳಿತಿದ್ದ ನಾಯಕ ಹಾರ್ದಿಕ್ ಪಾಂಡ್ಯ ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮಿಸಿದರು.

ಈ ಶತಕದೊಂದಿಗೆ ತಿಲಕ್ ವರ್ಮಾ, ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಪರ ಅತ್ಯಂತ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಿಲಕ್ ವರ್ಮಾಗೂ ಮೊದಲು, ಸನತ್ ಜಯಸೂರ್ಯ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅವರು 2008 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಈ ಇನ್ನಿಂಗ್ಸ್ ಆಡಿದ್ದರು. ತಿಲಕ್ ಅವರ ಇನ್ನಿಂಗ್ಸ್‌ನ ಮತ್ತೊಂದು ವಿಶೇಷವೆಂದರೆ ಅವರು ಈ ಆವೃತ್ತಿಯ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ 52 ಎಸೆತಗಳಲ್ಲಿ ಶತಕ ಬಾರಿಸಿದ ಸಂಜು ಸ್ಯಾಮ್ಸನ್ ಅವರ ದಾಖಲೆಯನ್ನು ಮುರಿದಿದ್ದಾರೆ.

Source link

ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi doctor murder accused arrested in 24 hours in uttar kannada

ವೈದ್ಯ ರಮೇಶ್ ಕಲಗುಟಕರImage Credit source: tv9 kannada

ಕಾರವಾರ, ಏಪ್ರಿಲ್​ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ.

ನಡೆದಿದ್ದೇನು?

ಶಿರಸಿಯ ನ್ಯೂ ಕೆಹೆಚ್​ಬಿ ಕಾಲೋನಿಯಲ್ಲಿ ನಡೆದ ವೈದ್ಯ ಡಾ. ರಮೇಶ್ ಕಲಗುಟಕರ ಅವರ ಕೊಲೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಪಡುಬೈಲ್ ಗ್ರಾಮದ ಮಂಜುನಾಥ್ ನಾಯ್ಕ್(61) ಎಂಬಾತನನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಹಣದ ಆಸೆ ಮತ್ತು ಅತಿಯಾದ ಕುಡಿತವೇ ಈ ಬರ್ಬರ ಹತ್ಯೆಗೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: 2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ!

ಅಸಲಿಗೆ ಅಲ್ಲಿ ನಡೆದಿದ್ದೇನು ಅಂದರೆ, ಡಾ. ರಮೇಶ್ ಇಂದು ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದರು. ಶನಿವಾರ ರಾತ್ರಿ ವೈದ್ಯನ ಮನೆಯಲ್ಲಿ ತಂಗಿದ್ದ ಗೆಳೆಯ ಮಂಜುನಾಥ್ ಜೊತೆಗೆ ಮದ್ಯದ ಪಾರ್ಟಿ ಮಾಡಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿದ್ದ ರಮೇಶ್, ತಾನು ಮದುವೆಗಾಗಿ ತಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಒಡವೆಗಳು ಮತ್ತು ಹಣವನ್ನ ಗೆಳೆಯನಿಗೆ ತೋರಿಸಿದ್ದಾರೆ. ಇದೇ ಡಾಕ್ಟರ್ ಪಾಲಿಗೆ ಮೃತ್ಯುವಾಗಿ ಪರಿಣಮಿಸಿದೆ.

15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಸೇರಿ 50 ಸಾವಿರ ರೂ ದೋಚಿ ಪರಾರಿ

ಇಬ್ಬರೂ ರಾತ್ರಿ ಪಾರ್ಟಿ ಮಾಡಿ ಮನೆಯಲ್ಲಿ ಮಲಗಿದ್ದಾರೆ. ಆದರೆ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮಂಜುನಾಥ್, ನಿದ್ರೆಯಲ್ಲಿದ್ದ ವೈದ್ಯನ ತಲೆಗೆ ಕಬ್ಬಿಣದ ರಾಡಿನಿಂದ ಬಲವಾಗಿ ಹೊಡೆದಿದ್ದಾನೆ. ಬಳಿಕ ಮನೆಯಲ್ಲಿದ್ದ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 50 ಸಾವಿರ ರೂಪಾಯಿ ನಗದನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದ. ಶಿರಸಿ ನ್ಯೂ ಮಾರುಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು, ಕೇವಲ ಒಂದೇ ದಿನದಲ್ಲಿ ಹಂತಕನನ್ನು ಸೆರೆಹಿಡಿದು ಜೈಲಿಗಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

GT vs MI: 6ನೇ ಪಂದ್ಯದಲ್ಲೂ ಭರವಸೆ ಕಳೆದುಕೊಂಡಿದ್ದ ಮುಂಬೈಗೆ ಬಲ ತುಂಬಿದ ತಿಲಕ್ ಶತಕ – Kannada News | IPL 2026: Tilak Varma’s Maiden Century Powers MI to 199 vs GT

ಐಪಿಎಲ್ 2026 ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿತ್ತು. ಈ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ ಮುಂಬೈ ಮುಂದಿನ ಹಂತವನ್ನು ತಲುಪಬೇಕೆಂದರೆ ಉಳಿದ ಎಲ್ಲಾ ಪಂದ್ಯವನ್ನು ಗೆಲ್ಲಬೇಕು. ಅದರಂತೆ ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್​ಗಳನ್ನು ಕಳೆದುಕೊಂಡು 199 ರನ್ ಕಲೆಹಾಕಿತು. ಈ ಮೂಲಕ ಗುಜರಾತ್ ಗೆಲುವಿಗೆ 200 ರನ್​ಗಳ ಗುರಿ ನೀಡಿದೆ.

ಮುಂಬೈಗೆ ಕಳಪೆ ಆರಂಭ

ಎಂದಿನಂತೆ ಈ ಪಂದ್ಯದಲ್ಲೂ ಮುಂಬೈಗೆ ಉತ್ತಮ ಆರಂಭ ಸಿಗಲಿಲ್ಲ. ತಂಡ ಪವರ್‌ಪ್ಲೇನಲ್ಲಿಯೇ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ರಬಾಡ ದಾಳಿಗೆ ತತ್ತರಿಸಿದ ಮುಂಬೈ ಅಗ್ರಕ್ರಮಾಂಕ ಕುಸಿಯಿತು. ಆದಾಗ್ಯೂ ಈ ಸಂಕಷ್ಟದ ಸಮಯದಲ್ಲಿ ತಂಡದ ಇನ್ನಿಂಗ್ಸ್ ಕಟ್ಟಿದ ತಿಲಕ್ ವರ್ಮಾ ಆರಂಭದಲ್ಲಿ ತಾಳ್ಮೆಯ ಆಟಕ್ಕೆ ಮುಂದಾದರು. ನಮನ್ ದೀರ್ ಜೊತೆಗೂಡಿ ತಂಡವನ್ನು ಶತಕದಂಚಿಗೆ ತಂದರು. ಆದರೆ ಅರ್ಧಶತಕದಂಚಿನಲ್ಲಿ ಎಡವಿದ ನಮನ್ 45 ರನ್​ಗಳಿಗೆ ಔಟಾದರು.

ತಿಲಕ್ ಚೊಚ್ಚಲ ಶತಕ

ಇದಾದ ನಂತರ ನಾಯಕ ಹಾರ್ದಿಕ್ ಪಾಂಡ್ಯರಿಂದ ಉತ್ತಮ ಬೆಂಬಲ ಪಡೆದ ತಿಲಕ್ ಗುಜರಾತ್ ವೇಗಿಗಳ ಬೆವರಿಳಿಸಿದರು. ಅದರಲ್ಲೂ ಕೊನೆಯ 4 ಓವರ್‌ಗಳಲ್ಲಿ ಉಗ್ರರೂಪ ತಾಳಿದ ತಿಲಕ್ ತಂಡವನ್ನು 150 ರನ್​ಗಳ ಗಡಿ ದಾಟಿಸಿದಲ್ಲದೆ 200 ರನ್​ಗಳಿಗೆ ಕೊಂಡೊಯ್ದರು. 20 ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ತಿಲಕ್ ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ ಶತಕವನ್ನು ಪೂರೈಸಿದರು. ಟಿ20 ಕ್ರಿಕೆಟ್​ನಲ್ಲಿ ಎರಡು ಶತಕಗಳನ್ನು ಬಾರಿಸಿರುವ ತಿಲಕ್​ಗೆ ಇದು ಐಪಿಎಲ್‌ನಲ್ಲಿ ಮೊದಲ ಶತಕವಾಗಿದೆ.

ಅಜೇಯ101 ರನ್

ಮೇಲೆ ಹೇಳಿದಂತೆ 17ನೇ ಓವರ್​ನಿಂದ ತಮ್ಮ ಬ್ಯಾಟಿಂಗ್‌ ಗೇರ್ ಬದಲಿಸಿದ ತಿಲಕ್ ಈ ಓವರ್​ನಲ್ಲಿ ಒಂದು ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದರು. ಈ ಓವರ್​ಗೂ ಮುನ್ನ ತಿಲಕ್ 28 ಎಸೆತಗಳಲ್ಲಿ 37ರನ್ ಕಲೆಹಾಕಿದ್ದರು. ಇದಾದ ಬಳಿಕ 18ನೇ ಓವರ್​ನಲ್ಲಿ ಬೌಂಡರಿಗಳ ಮಳೆಗರೆದ ತಿಲಕ್ ಈ ಓವರ್​ನಲ್ಲಿ 3 ಸಿಕ್ಸರ್ ಹಾಗೂ 2 ಭರ್ಜರಿ ಬೌಂಡರಿಗಳನ್ನು ಬಾರಿಸಿದರು. ಇದರೊಂದಿಗೆ ಅರ್ಧಶತಕವನ್ನು ಪೂರೈಸಿದರು. 19ನೇ ಓವರ್​ನಲ್ಲಿ ತಿಲಕ್ ಬ್ಯಾಟ್​ನಿಂದ 1 ಬೌಂಡರಿ ಬಂದರೆ, 20ನೇ ಓವರ್​ನಲ್ಲಿ ತಿಲಕ್ 2 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸಿ ತಮ್ಮ ಶತಕ ಪೂರೈಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 45 ಎಸೆತಗಳನ್ನು ಎದುರಿಸಿದ ತಿಲಕ್ 8 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ ಅಜೇಯ101 ರನ್ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:33 pm, Mon, 20 April 26

Source link

ಕೇಜ್ರಿವಾಲ್​ಗೆ ಭಾರೀ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ – Kannada News | Setback For Arvind Kejriwal Delhi High Court Dismisses Justice Swarana Kanta Sharma Recusal Plea

ನವದೆಹಲಿ, ಏಪ್ರಿಲ್ 20: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ದೊಡ್ಡ ಹಿನ್ನಡೆಯಾಗಿದ್ದು, ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕೆಂದು ಕೋರಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳ ಮೇಲೆ ಮಾಡಲಾದ ಪಕ್ಷಪಾತದ ಆರೋಪಗಳು ಯಾವುದೇ ವಾಸ್ತವಿಕ ಆಧಾರವನ್ನು ಹೊಂದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಹಾಗೇ, ಅರವಿಂದ್ ಕೇಜ್ರಿವಾಲ್ ಅವರ ಕೇಸಿನ ವಿಚಾರಣೆಯಿಂದ ನಾನು ಹಿಂದೆ ಸರಿಯುವುದಿಲ್ಲ ಎಂದು ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಘೋಷಿಸಿದ್ದಾರೆ.

ಬದಲಿ ನ್ಯಾಯಾಧೀಶರನ್ನು ಕೋರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ತೀರ್ಪು ನೀಡಿದ ನ್ಯಾಯಮೂರ್ತಿ ಸ್ವರಣ್ ಕಾಂತ ಶರ್ಮಾ ಅವರು ಆ ಅರ್ಜಿಯನ್ನು ವಜಾಗೊಳಿಸಿದರು. “ನಾನು ಈ ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ. ಈ ಪ್ರಕರಣವನ್ನು ನಾನು ವಿಚಾರಣೆ ನಡೆಸುತ್ತೇನೆ” ಎಂದು ಅವರು ಘೋಷಿಸಿದರು. ಇದಕ್ಕೂ ಮೊದಲು, ಕೇಜ್ರಿವಾಲ್ ಅವರ ಅರ್ಜಿಯ ಕುರಿತು ತೀರ್ಪು ನೀಡುತ್ತಾ, ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರು ತಮ್ಮ ನಿಷ್ಪಕ್ಷಪಾತತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೀವು ಆರ್‌ಎಸ್‌ಎಸ್‌ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೀರಿ; ನ್ಯಾಯಾಧೀಶರ ಕುರಿತು ಕೇಜ್ರಿವಾಲ್ ಆರೋಪ

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಅಧಿವಕ್ತ ಪರಿಷತ್‌ ಕಾರ್ಯಕ್ರಮಗಳಲ್ಲಿ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಭಾಗಿಯಾಗಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ, ಕಾರ್ಯಕ್ರಮಗಳು ರಾಜಕೀಯವಲ್ಲ. ಕಾನೂನು ವಿಷಯಗಳ ಕುರಿತು ಮಾತನಾಡಲು ಭಾಷಣಕಾರರನ್ನು ಆಹ್ವಾನಿಸಲಾಗಿತ್ತು. ಅದರಲ್ಲಿ ನಾನು ಪಾಲ್ಗೊಂಡಿದ್ದೆ ಅಷ್ಟೇ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ

“ನಮ್ಮನ್ನು ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ. ಈ ಸಂವಾದದಲ್ಲಿ ಯಾವುದೇ ರಾಜಕೀಯ ಸಿದ್ಧಾಂತಕ್ಕೆ ಅವಕಾಶವಿರುವುದಿಲ್ಲ. ಬಾರ್ ಮತ್ತು ಬೆಂಚ್ ನಡುವಿನ ಸಂಬಂಧವು ನ್ಯಾಯಾಲಯದ ಕೊಠಡಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಬಾರ್ ಅಸೋಸಿಯೇಷನ್‌ಗಳು ಕಾರ್ಯಗಳನ್ನು ಆಯೋಜಿಸುವುದು ಅಸಾಮಾನ್ಯವೇನಲ್ಲ. ಅದರಲ್ಲಿ ಭಾಗಿಯಾಗಿದ್ದೇವೆ ಎಂದ ಮಾತ್ರಕ್ಕೆ ಪಕ್ಷಪಾತ ಮಾಡುತ್ತಿದ್ದೇವೆ ಎಂದರ್ಥವಲ್ಲ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:56 pm, Mon, 20 April 26

Source link

Exit mobile version