ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು – Kannada News | India’s traffic chokehold: Bengaluru ranks second; Pune fifth in global congestion index for 2025

ಬೆಂಗಳೂರು, (ಜನವರಿ 23): ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್‌ ಕುಖ್ಯಾತಿ ಪಡೆದ ನಗರಗಳ ಪಟ್ಟಿಯ ಪೈಕಿಯಲ್ಲಿ ಬೆಂಗಳೂರು 2ನೇ ಸ್ಥಾನ ಪಡೆದಿದೆ. ಆ ಮೂಲಕ ಸಂಚಾರ ದಟ್ಟಣೆಯಲ್ಲಿ ಹೊಸ ದಾಖಲೆ ಬರೆದಿದೆ. ಈಗಾಗಲೇ ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಇತ್ತೀಚಿನ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic Index) ಬಿಡುಗಡೆ ಮಾಡಿದ ವರದಿಯಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆಯ ನಗರವಾಗಿ ಹೊರಹೊಮ್ಮಿದೆ. ನಗರದ ಸರಾಸರಿ ಸಂಚಾರ ದಟ್ಟಣೆ ಪ್ರಮಾಣವು ಶೇಕಡ 74.4ರಷ್ಟಿದ್ದು, ಇದು 2024ಕ್ಕಿಂತ ಶೇಕಡ 1.7ರಷ್ಟು ಹೆಚ್ಚಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ!

Source link

ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು? – Kannada News | Chikmagalur: Illegal Resort Construction in Bhadra Tiger Reserve Buffer Zone Ignites Row

ಚಿಕ್ಕಮಗಳೂರು, ಜನವರಿ 23: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ನಡೆಯುತ್ತಿರುವ ಆರೋಪ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನ ಪ್ರಭಾವಿ ಮುಖಂಡನೊಬ್ಬರು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದ ಸರ್ವೆ ನಂಬರ್ 58ರಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶವನ್ನು 2011ರಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಎಂದು ಘೋಷಿಸಲಾಗಿದೆ. ಇದು ಪರಿಸರ ಸೂಕ್ಷ್ಮ ಪ್ರದೇಶವೂ ಆಗಿರುವುದರಿಂದ ಇಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಕಠಿಣ ನಿರ್ಬಂಧಗಳಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಭದ್ರಾ ವೈಲ್ಡ್ ಲೈಫ್ ವಿಭಾಗದ ಡಿಎಫ್‌ಒ ಪುಲ್ಕಿತ್, ಈ ಕಾಮಗಾರಿ ಬಫರ್ ವ್ಯಾಪ್ತಿಗೆ ಬರುತ್ತದೆ. ನಮ್ಮ ಸಿಬ್ಬಂದಿಯಿಂದ ವರದಿ ಕೇಳಿದ್ದೇನೆ. ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಿದ್ದಾರೆ. ವರದಿ ಬಂದ ಬಳಿಕ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಎನ್‌ಟಿಸಿಎ (NTCA) ಮಾರ್ಗಸೂಚಿಗಳ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ, ಚಿಕ್ಕಮಗಳೂರು ವೃತ್ತದ ಸಿಸಿಎಫ್ ಯಶ್ ಪಾಲ್ ಮಾತನಾಡಿ, ಅರಣ್ಯ ಇಲಾಖೆಯಿಂದ ಯಾವುದೇ ಎನ್‌ಒಸಿ ನೀಡಿಲ್ಲ. ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಅವಕಾಶವಿಲ್ಲ. ನಮಗೆ ಈ ಬಗ್ಗೆ ಮಾಹಿತಿ ಬಂದಿದ್ದು, ಕಾನೂನು ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್​ಲಾರ್ಡ್’ – Kannada News | Duniya Vijay starrer Landlord movie tells the story of oppression set in rural India

ನಿರ್ದೇಶಕ ಜಡೇಶ್ ಕೆ. ಹಂಪಿ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಬ್ಲಾಕ್ ಬಸ್ಟರ್ ಹಿಟ್ ಆದ ‘ಕಾಟೇರ’ ಸಿನಿಮಾದ ಕಥೆ, ಚಿತ್ರಕಥೆಯಲ್ಲಿ ನಿರ್ದೇಶಕ ತರುಣ್ ಸುಧೀರ್ ಜೊತೆ ಜಡೇಶ್ ಕೈ ಜೋಡಿಸಿದ್ದರು. ಈಗ ಜಡೇಶ್ ಅವರ ನಿರ್ದೇಶನದಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾ (Landlord Movie) ಮೂಡಿಬಂದಿದೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ (Vijay Kumar), ರಚಿತಾ ರಾಮ್, ರಾಜ್ ಬಿ. ಶೆಟ್ಟಿ, ರಿತನ್ಯಾ ವಿಜಯ್, ಶಿಶಿರ್ ಬೈಕಾಡಿ, ಉಮಾಶ್ರೀ ಮುಂತಾದವರು ನಟಿಸಿದ್ದಾರೆ. ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದ ವಿಮರ್ಶೆ ಇಲ್ಲಿದೆ..

‘ಲ್ಯಾಂಡ್​ಲಾರ್ಡ್’ ಸಿನಿಮಾದ ಟ್ರೇಲರ್ ಬಿಡುಗಡೆ ಆದಾಗಲೇ ಅದರಲ್ಲಿ ‘ಕಾಟೇರ’ ಸಿನಿಮಾದ ಶೇಡ್ ಕಾಣಿಸಿತ್ತು. ಹೌದು, ಈ ಸಿನಿಮಾದಲ್ಲಿ ಅದೇ ರೀತಿಯ ಛಾಯೆ ಇದೆ. ಬಡವ ಮತ್ತು ಶ್ರೀಮಂತರ ನಡುವಿನ ಸಂಘರ್ಷ ಇದೆ. ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವ ಬಡವನ ಕಥೆ ಇದೆ. ಜಾತಿಯ ಹೆಸರಿನಲ್ಲಿ ಶೋಷಣೆಗೆ ಒಳಗಾದ ಜನರ ಕಹಾನಿ ಇದೆ. ರೆಟ್ರೋ ಕಾಲದ ಕಥೆಯನ್ನು ಪ್ರೇಕ್ಷಕರ ಮುಂದೆ ಇಡಲಾಗಿದೆ.

ಇಡೀ ಊರಿಗೆ ಊರೇ ದಣಿಗಳ ಒಡೆತನದಲ್ಲಿ ಇರುವಾಗ, ತನ್ನ ಪಾಲಿಗೂ ಸ್ವಂತದ ತುಂಡು ಭೂಮಿ ಇರಬೇಕು ಎಂಬುದು ಬಡವನ ಆಸೆ. ಆ ಆಸೆಯನ್ನು ಈಡೇರಿಸುವುದು ದಣಿಗಳ ಪಾಲಿಗೆ ದೊಡ್ಡ ವಿಷಯ ಏನೂ ಅಲ್ಲ. ಆದರೆ ಬಡವರಿಗೆ ಭೂಮಿ ಕೊಟ್ಟರೆ ಅವರು ಕೂಡ ‘ಲ್ಯಾಂಡ್​ಲಾರ್ಡ್’ ಎನಿಸಿಕೊಳ್ಳುತ್ತಾರೆ. ಅದರಿಂದ ತಮ್ಮ ಪ್ರತಿಷ್ಠೆಗೆ ಧಕ್ಕೆ ಬರುತ್ತದೆ ಎಂಬುದು ದಣಿಗಳ ವಾದ. ಹಾಗಾಗಿ, ಎಂದೆಂದಿಗೂ ಬಡವರಿಗೆ ಭೂಮಿಯ ಒಡೆತನ ಸಿಗಲೇಬಾರದು ಎಂದು ದಣಿಗಳು ಕುತಂತ್ರ ನಡೆಸುತ್ತಾರೆ. ಅಂಥ ದಣಿಗಳ ವಿರುದ್ಧ ಸಿಡಿದು ನಿಲ್ಲುವ ರಾಚಯ್ಯ ಅಲಿಯಾಸ್ ಕೊಡಲಿ ರಾಚಯ್ಯ ಎಂಬ ಬಡವನ ಕಥೆ ಈ ಸಿನಿಮಾದಲ್ಲಿ ಇದೆ.

ನಟ ದುನಿಯಾ ವಿಜಯ್ ಅವರು ಕೊಡಲಿ ರಾಚಯ್ಯನಾಗಿ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಆ ಪಾತ್ರಕ್ಕೆ ಅವರು ನ್ಯಾಯ ಒದಗಿಸಿದ್ದಾರೆ. ಆ್ಯಕ್ಷನ್ ದೃಶ್ಯಗಳಲ್ಲಿ ಅಬ್ಬರಿಸಿದ್ದಾರೆ. ಕೋಲಾರ ಭಾಗದ ಕನ್ನಡವನ್ನು ಮಾತನಾಡುತ್ತಾ ಆ ಪಾತ್ರವೇ ತಾವಾಗಿದ್ದಾರೆ. ದುನಿಯಾ ವಿಜಯ್ ಅವರಿಗೆ ಜೋಡಿಯಾಗಿ ರಚಿತಾ ರಾಮ್ ಅಭಿನಯಿಸಿದ್ದಾರೆ. ದಿಟ್ಟ ಹೆಣ್ಣುಮಗಳಾಗಿ, ಡಿ-ಗ್ಲಾಮ್ ಪಾತ್ರವನ್ನು ಅವರು ಚೆನ್ನಾಗಿ ನಿಭಾಯಿಸಿದ್ದಾರೆ. ಮಗಳ ಪಾತ್ರದಲ್ಲಿ ನಟಿಸಿರುವ ರಿತನ್ಯಾ ಅವರು ಗಮನ ಸೆಳೆಯುತ್ತಾರೆ.

ಹಿರಿಯ ನಟಿ ಉಮಾಶ್ರೀ ಅವರು ಈ ಸಿನಿಮಾದಲ್ಲಿ ಕೆಲವೇ ದೃಶ್ಯಗಳಲ್ಲಿ ಕಾಣಿಸಿಕೊಂಡರೂ ಕೂಡ ತಮ್ಮ ಛಾಪು ಮೂಡಿಸಿದ್ದಾರೆ. ಅವರಿಂದಾಗಿ ಸಿನಿಮಾದ ತೂಕ ಹೆಚ್ಚಿದೆ. ರಾಜ್ ಬಿ. ಶೆಟ್ಟಿ ಅವರು ಈ ಚಿತ್ರದಲ್ಲಿ ವಿಲನ್ ಆಗಿ ಘರ್ಜಿಸಿದ್ದಾರೆ. ಬಡವರ ರಕ್ತ ಹೀರುವ ಖಳನಾಗಿ ಅವರು ಇಡೀ ಸಿನಿಮಾವನ್ನು ಆವರಿಸಿದ್ದಾರೆ. ಬೇರೆ ಸಿನಿಮಾಗಳಲ್ಲಿ ಕಾಮಿಡಿ ಮೂಲಕ ಮನರಂಜಿಸಿದ ಅವರು ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ಕಟುಕನಾಗಿ ಕಾಣಿಸಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ಪ್ರತಿಭಾವಂತ ಕಲಾವಿದ ದಂಡು ಇದೆ. ಪದ್ಮಾ ಎಂಬ ದೇವದಾಸಿ ಪಾತ್ರದಲ್ಲಿ ಭಾವನಾ ರಾವ್ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಅವರು ಪೊಲೀಸ್ ಅಧಿಕಾರಿಯಾಗಿ, ಸಂಪತ್ ಮೈತ್ರೇಯ ಅವರು ಶಾಸಕನಾಗಿ, ಗೋಪಾಲಕೃಷ್ಣ ದೇಶಪಾಂಡೆ ಅವರು ಬಡವನಾಗಿ, ಅವಿನಾಶ್ ಹಾಗೂ ಶರತ್ ಲೋಹಿತಾಶ್ವ ಅವರು ಜಮೀನ್ದಾರರಾಗಿ, ರಾಕೇಶ್ ಅಡಿಗ ಅವರು ಖಳನಾಗಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: 4 ದಿನಕ್ಕೆ 2 ಮಿಲಿಯನ್ ವೀಕ್ಷಣೆ ಕಂಡ ‘ಲ್ಯಾಂಡ್​ಲಾರ್ಡ್’ ಚಿತ್ರದ ‘ರೋಮಾಂಚಕ’ ಹಾಡು

3-4 ದಶಕಗಳ ಹಿಂದಿನ ಗ್ರಾಮೀಣ ಪರಿಸರದಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾದ ಕಥೆ ಸಾಗುತ್ತದೆ. ಅಂದಿನ ಕಾಲಘಟ್ಟವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುವಲ್ಲಿ ಈ ಸಿನಿಮಾ ಯಶಸ್ವಿ ಆಗಿದೆ. ಅಜನೀಶ್ ಬಿ. ಲೋಕನಾಥ್ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಗಮನ ಸೆಳೆಯುವಂತಿವೆ. ಇತಿಹಾಸದಲ್ಲಿ ಗಾಢವಾಗಿದ್ದ ಅನ್ಯಾಯ, ಅಸಮಾನತೆಗಳನ್ನು ‘ಲ್ಯಾಂಡ್​ಲಾರ್ಡ್’ ಸಿನಿಮಾ ಮತ್ತೆ ನೆನಪಿಸಿದಂತಿದೆ.

ಆರಂಭದಿಂದ ಕೊನೇ ತನಕ ಉಳ್ಳವರು ಮತ್ತು ಇಲ್ಲದವರ ನಡುವಿನ ಹೊಡೆದಾಟವೇ ಈ ಸಿನಿಮಾದಲ್ಲಿ ತುಂಬಿದೆ. ಹಲವು ದೃಶ್ಯಗಳ ಮೂಲಕ ಅದು ಪುನಾರಾವರ್ತಿತ ಆಗಿದೆ. ಹಾಗಾಗಿ ಚಿತ್ರದ ಕಥೆಯನ್ನು ಪ್ರೇಕ್ಷಕ ತುಂಬ ಸುಲಭವಾಗಿ ಊಹಿಸಬಹುದಾಗಿದೆ. ಆಶಯವನ್ನು ಮೀರಿಸುವಷ್ಟು ಕಮರ್ಷಿಯಲ್ ಅಂಶಗಳು ಬೆರೆತಿವೆ. ಕಥಾನಾಯಕನನ್ನು ಸೂಪರ್ ಹೀರೋ ಎಂಬಂತೆ ತೋರಿಸಲಾಗಿದೆ. ಹಾಗಾಗಿ ಲಾಜಿಕ್ ಬಗ್ಗೆ ಪ್ರಶ್ನೆ ಮಾಡುವಂತಿಲ್ಲ. ಇಂಥ ಕೆಲವು ಮಿತಿಗಳ ನಡುವೆಯೂ ‘ಲ್ಯಾಂಡ್​ಲಾರ್ಡ್’ ಸಿನಿಮಾ ಒಂದು ಉತ್ತಮ ಪ್ರಯತ್ನ ಎನಿಸಿಕೊಳ್ಳುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Republic Day 2026: ಈ ಬಾರಿ ಗಣರಾಜ್ಯೋತ್ಸವದಲ್ಲಿ ಕೇವಲ ಮಿಲಿಟರಿ ಮೆರವಣಿಗೆಯಲ್ಲ, ಇರಲಿದೆ ಯುದ್ಧಭೂಮಿ – Kannada News | Republic Day 2026 Live Streaming in Tv9 Kannada, Grand Military Parade, Battlefield Display and Vande Mataram Theme

ನವದೆಹಲಿ, ಜನವರಿ 23: ಈ ಬಾರಿ ಗಣರಾಜ್ಯೋತ್ಸವ(Republic Day)ವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಕೇವಲ ಮಿಲಿಟರಿ ಮೆರವಣಿಗೆಯಲ್ಲ ಬದಲಾಗಿ ಯುದ್ಧಭೂಮಿಯೇ ಕಣ್ಣೆದುರು ಬರಲಿದೆ. ಸ್ವಾತಂತ್ರ್ಯ ಹೋರಾಟದಿಂದ ಸ್ವಾವಲಂಬಿ ಭಾರತದವರೆಗೆ, ಭಾರತ ತೆಗೆದುಕೊಂಡ ಹೆಜ್ಜೆಗಳು ಕಣ್ಮುಂದೆ ಬರಲಿದೆ. ಕಲಾವಿದರು ತಮ್ಮ ಪೂರ್ವಾಭ್ಯಾಸಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.
ಮೆರವಣಿಗೆಯ ಮುಖ್ಯ ವಿಷಯ ವಂದೇ ಮಾತರಂ ಆಗಿರುತ್ತದೆ. ವಿವಿಧ ರಾಜ್ಯಗಳ ಮೆರವಣಿಗೆಗಳು ದೇಶವು ಸಾಧಿಸಿದ ಆರ್ಥಿಕ ಅಭಿವೃದ್ಧಿ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನು ಪ್ರದರ್ಶಿಸುತ್ತವೆ. ಕಲಾವಿದರು ಅಭಿವೃದ್ಧಿ ಹೊಂದಿದ ಭಾರತದ ರೂಪಗಳನ್ನು ಅನಾವರಣಗೊಳಿಸಲಿದ್ದಾರೆ. ಕರ್ತವ್ಯಪಥದಲ್ಲಿ ಪೂರ್ಣ ಡ್ರೆಸ್ ರಿಹರ್ಸಲ್ ನಡೆಯುತ್ತಿದೆ.

77ನೇ ಗಣರಾಜ್ಯೋತ್ಸವ ಆಚರಣೆಗಾಗಿ ಕರ್ತವ್ಯ ಪಥವನ್ನು ಅಲಂಕರಿಸಲಾಗುತ್ತಿದೆ. ಈ ಬಾರಿ ಗಣರಾಜ್ಯೋತ್ಸವದ ಮೆರವಣಿಗೆ ಕೇವಲ ಸಾಂಪ್ರದಾಯಿಕ ಮೆರವಣಿಗೆಯಾಗಿರುವುದಿಲ್ಲ, ಬದಲಾಗಿ ನಿಜವಾದ ಯುದ್ಧಭೂಮಿಯನ್ನು ನೆನಪಿಸುವ ರೀತಿಯಲ್ಲಿ ನಡೆಯಲಿದೆ. ಯುದ್ಧಭೂಮಿಯ ತಂತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಗುತ್ತದೆ. ಪಾಕಿಸ್ತಾನದ ವಿರುದ್ಧ ಭಾರತದ ‘ಆಪರೇಷನ್ ಸಿಂಧೂರ್’ ನಂತರ ನಡೆಯುತ್ತಿರುವ ಮೊದಲ ಗಣರಾಜ್ಯೋತ್ಸವ ಆಚರಣೆ ಇದಾಗಿರುವುದರಿಂದ, ಈ ಬಾರಿ ಭಾರತೀಯ ಸೇನೆಯು ನಿಜವಾದ ಯುದ್ಧಭೂಮಿ ದೃಶ್ಯವನ್ನು ಪ್ರತಿಬಿಂಬಿಸಲು ಕರ್ತವ್ಯ ಪಥದಲ್ಲಿ ಗಿ ಅಭ್ಯಾಸ ಮಾಡುತ್ತಿದೆ.

ಈ ಐತಿಹಾಸಿಕ ಕಾರ್ಯಕ್ರಮವು ಭಾರತದ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ವೈವಿಧ್ಯತೆ, ತಾಂತ್ರಿಕ ಪ್ರಗತಿ ಮತ್ತು ದೇಶಭಕ್ತಿಯ ಮನೋಭಾವವನ್ನು ಪ್ರದರ್ಶಿಸುತ್ತದೆ. ಯಾವುದೇ ಕಾರಣಕ್ಕೂ ನೀವು ಪರೇಡ್ ಅನ್ನು ವೈಯಕ್ತಿಕವಾಗಿ ವೀಕ್ಷಿಸಲು ಸಾಧ್ಯವಾಗದಿದ್ದರೆ, ಹತಾಶೆಗೊಳ್ಳಬೇಡಿ.
ಜನವರಿ 26, 2026 ರಂದು ಬೆಳಗ್ಗೆ 9 ಗಂಟೆಗೆ ಪ್ರಾರಂಭವಾಗುವ ಪರೇಡ್‌ನ ಪ್ರತಿಯೊಂದು ಭಾಗವನ್ನು ನೀವು ಟಿವಿ9 ಕನ್ನಡ ಯೂಟ್ಯೂಬ್​ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು, ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಅದ್ಭುತ ಪಥಸಂಚಲನ ನಡೆಯಲಿದ್ದು, ಶಿಸ್ತು ಮತ್ತು ರಾಷ್ಟ್ರೀಯ ಹೆಮ್ಮೆಯನ್ನು ಪ್ರದರ್ಶಿಸುತ್ತದೆ.

ಮತ್ತಷ್ಟು ಓದಿ:
ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ, ಯಾವುದು ಗೊತ್ತಾ?

ಮೆರವಣಿಗೆಯ ಸಮಯದಲ್ಲಿ, ನೀವು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರದರ್ಶನಗಳನ್ನು ಸಹ ನೋಡುತ್ತೀರಿ. ಈ ಪ್ರದರ್ಶನಗಳು ಭಾರತದ ಸಾಂಸ್ಕೃತಿಕ ಪರಂಪರೆ, ಸಾಂಪ್ರದಾಯಿಕ ಕಲೆಗಳು ಮತ್ತು ಅಭಿವೃದ್ಧಿ ಸಾಧನೆಗಳನ್ನು ಪ್ರದರ್ಶಿಸುತ್ತವೆ. ಇದು ದೇಶದ ವೈವಿಧ್ಯತೆಯನ್ನು ಪ್ರದರ್ಶಿಸುತ್ತದೆ. ಶಾಲಾ ಮಕ್ಕಳು, ಎನ್‌ಸಿಸಿ ಕೆಡೆಟ್‌ಗಳು, ಜಾನಪದ ಕಲಾವಿದರು ಮತ್ತು ಸಾಂಸ್ಕೃತಿಕ ಪ್ರದರ್ಶಕರು ಸಹ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಅವರು ಆಚರಣೆಗಳಿಗೆ ಶಕ್ತಿ ಮತ್ತು ಹಬ್ಬದ ಮೋಡಿಯನ್ನು ತರುತ್ತಾರೆ. ರಾಷ್ಟ್ರೀಯ ನಾಯಕರು, ವಿದೇಶಿ ಗಣ್ಯರು ಮತ್ತು ಗಣ್ಯ ಅತಿಥಿಗಳು ಭಾಗವಹಿಸುವ ಈ ಕಾರ್ಯಕ್ರಮವು ಭಾರತದ ಪ್ರತಿಷ್ಠೆ ಮತ್ತು ಬೆಳೆಯುತ್ತಿರುವ ಜಾಗತಿಕ ನಿಲುವನ್ನು ಪ್ರತಿಬಿಂಬಿಸುತ್ತದೆ.

17 ರಾಜ್ಯಗಳು ಮತ್ತು 13 ಕೇಂದ್ರ ಸಚಿವಾಲಯಗಳ ಮೆರವಣಿಗೆಗಳು ಸಿದ್ಧವಾಗಿವೆ. ಈ ಬಾರಿ, 2,500 ಕಲಾವಿದರು ಕರ್ತವ್ಯ ಪಥದಲ್ಲಿ ನೃತ್ಯಗಳ ರೂಪದಲ್ಲಿ ತಮ್ಮ ರಾಜ್ಯದ ಸಂಸ್ಕೃತಿಯನ್ನು ಪ್ರದರ್ಶಿಸಲಿದ್ದಾರೆ. ಈ ಬಾರಿ, ಕರ್ತವ್ಯ ಪಥದಲ್ಲಿ 90 ನಿಮಿಷಗಳ ಕಾಲ ಮೆರವಣಿಗೆಗಳನ್ನು ಪ್ರದರ್ಶಿಸಲಾಗುವುದು. ಕಾರ್ಯಕ್ರಮದ ಪ್ರಮುಖ ವಿಷಯ ವಂದೇ ಮಾತರಂ ಗೀತೆಯಾಗಿದ್ದು, ಇದು 150 ವರ್ಷಗಳನ್ನು ಪೂರೈಸಿದೆ. ಬಂಕಿಂಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ದೇಶವನ್ನು ಒಂದುಗೂಡಿಸಿತು. ಸಿಡಿಯುವ ಫಿರಂಗಿಯಂತೆ, ವಂದೇ ಮಾತರಂ ಘೋಷಣೆ ದೇಶಾದ್ಯಂತ ಪ್ರತಿಧ್ವನಿಸಿತು.

2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ಹೇಗಿರುತ್ತದೆ ಎಂಬುದನ್ನು ಈ ಪ್ರದರ್ಶನಗಳ ಮೂಲಕ ನೋಡಬಹುದು. ಈ ಬಾರಿ ಭಾರತೀಯ ಕಾನೂನು ಸಂಹಿತೆ ಸಕತವು ವಿಶೇಷ ಆಕರ್ಷಣೆಯಾಗಲಿದೆ. ಆಪರೇಷನ್ ಸಿಂಧೂರ್ ನಂತರದ ಮೊದಲ ಗಣರಾಜ್ಯೋತ್ಸವದ ಪರೇಡ್ ಇದಾಗಿರುವುದರಿಂದ, ನಮ್ಮ ರಕ್ಷಣಾ ಪಡೆಗಳು ಭಾರತದ ಮಿಲಿಟರಿಯ ಶಕ್ತಿ ಮತ್ತು ಶಸ್ತ್ರಾಸ್ತ್ರಗಳನ್ನು ಜಗತ್ತಿಗೆ ತೋರಿಸುತ್ತವೆ. ಯಾವುದನ್ನು ಮಿಸ್ ಮಾಡಿಕೊಳ್ಳಲೇಬೇಡಿ.

Source link

Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ! – Kannada News | Kalaburagi Newlywed Suicide: City Obsession Led to Young Woman’s Tragic Death

ಕಲಬುರಗಿ, ಜನವರಿ 23: ತನ್ನ ಸಹೋದರಿಯರು ನಗರದಲ್ಲಿ ವಾಸಿಸುತ್ತಿದ್ದು, ತಾನು ಮಾತ್ರ ಹಳ್ಳಿಯಲ್ಲಿ ನೆಲೆಸಿದ್ದೇನೆ ಎಂದು ಮನನೊಂದು ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಆಜಾದಪುರ್ ಬಡಾವಣೆಯಲ್ಲಿ ನಡೆದಿದೆ. ಅನಸೂಯಾ ಮೃತ ಯುವತಿಯಾಗಿದ್ದು, ಮನೆಯಲ್ಲಿಯೇ ನೇಣು ಬಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ಮನೆ ಮಗಳ ಹುಚ್ಚು ನಿರ್ಧಾರಕ್ಕೆ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ.

ಅತ್ತೆ ಮಗ ಅವಿನಾಶ್​​ ಜೊತೆ ಸಪ್ತಪದಿ ತುಳಿದಿದ್ದ ಅನಸೂಯಾ, ಆರಂಭದಲ್ಲಿ ಚೆನ್ನಾಗಿಯೇ ಇದ್ದಳು. ಈಕೆಗ ಮೂವರು ಸಹೋದರಿಯರಿಗೂ ಕೂಡ ವಿವಾಹವಾಗಿದ್ದು, ಅವರೆಲ್ಲರೂ ಸಿಟಿಯಲ್ಲಿ ನೆಲೆಸಿದ್ದರು. ಇದೇ ವಿಚಾರಕ್ಕೆ ದಿನ ಕಳೆದಂತೆ ಅನಸೂಯಾಗೆ ಬೇಸರ ಮೂಡಿದೆ. ತಾನು ಮಾತ್ರ ಮದುವೆಯಾಗಿ ಹಳ್ಳಿಯಲ್ಲಿ ಇದ್ದೇನೆ ಎಂಬ ಗಿಲ್ಟಿ ಫೀಲ್ ಬಂದಿದೆ. ಹೀಗಾಗಿ ಮಾನಸಿಕವಾಗಿ ನೊಂದಿದ್ದ ಈಕೆ, ತವರಿಗೆ ಹೋದಾಗಲೂ ವಿಚಾರವನ್ನು ಒಂದೆರಡುಬಾರಿ ಕುಟುಂಬಸ್ಥರಿಗೆ ಹೇಳಿದ್ದಳು. ತಾನು ಉತ್ತಮ ವಿದ್ಯಾಭ್ಯಾಸ ಪಡೆದರೂ ಹಳ್ಳಿಯಲ್ಲಿ ಜೀವನ‌ ನಡೆಸುತ್ತಿರುವ ಕೊರಗಿನ ಬಗ್ಗೆ ಅಲವತ್ತುಕೊಂಡಿದ್ದಳು. ಈ ವೇಳೆ ಆಕೆಗೆ ಪೋಷಕರು ಬುದ್ಧಿಮಾತು ಕೂಡ ಹೇಳಿದ್ದರು. ಆದರೂ ಇದೇ ವಿಚಾರವಾಗಿ ಕೊರಗುತ್ತಿದ್ದ ಆಕೆ ಕೊನೆಗೂ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ: ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗಿಲ್ಲವೆಂದು ಪತ್ನಿ ಕಿರಿಕ್; ಕತ್ತು ಹಿಸುಕಿ ಕೊಲೆ ಮಾಡಿದ ಪತಿ

ಇನ್ನು ಮದುವೆಗೂ ಮುನ್ನ ಅನಸೂಯಾ ಕೂಡ ಬೆಂಗಳೂರಿನಲ್ಲಿ ಒಂದು ವರ್ಷ ಕೆಲಸ ಮಾಡಿದ್ದಳು. ಹೀಗಾಗಿ ಆಕೆಗೆ ಹಳ್ಳಿ ಜೀವನ ಅಂದ್ರೆ ಅಷ್ಟಾಗಿ ಆಗಿ ಬರುತ್ತಿರಲಿಲ್ಲ. ಇತ್ತ ಪ್ರೀತಿಸಿದ ಹುಡುಗ ಬಿಡೋಕು ಆಗ್ತಿರಲಿಲ್ಲ. ಮದುವೆ ಬಳಿಕ ಸಿಟಿ ವ್ಯಾಮೋಹ ಈಕೆಯನ್ನು ವಿಪರೀತ ಕಾಡತೊಡಗಿದೆ. ಈ ನಡುವೆಯೂ ಕಲಬುರಗಿಯ ಆಜಾದಪುರದಲ್ಲಿರುವ ಗಂಡನ ಮನೆಯಲ್ಲಿ ಜೀವನ ಕಳೆಯುತ್ತಿದ್ದ ಈಕೆ, ನಿನ್ನೆ ಮಧ್ಯಾಹ್ನ ಗಂಡನ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:32 pm, Fri, 23 January 26

Source link

ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ಖಾಸಗಿ ಬಸ್​​​ಗಳಿಂದ ದುಪ್ಪಟ್ಟು ದರ ವಸೂಲಿ – Kannada News | Republic Day Holiday Rush: Private Bus Ticket Prices Soar Amid Series of Holidays

ಬೆಂಗಳೂರು, ಜನವರಿ 23: ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ದರಗಳು ಗಣನೀಯವಾಗಿ ಏರಿಕೆಯಾಗಿವೆ. ನಾಳೆ ನಾಲ್ಕನೇ ಶನಿವಾರ, ಭಾನುವಾರ ಮತ್ತು ಸೋಮವಾರ ಗಣರಾಜ್ಯೋತ್ಸವದ ಹಿನ್ನೆಲೆ ಸತತ ಮೂರು ದಿನಗಳ ರಜೆ ಇರುವುದರಿಂದ ಜನರು ತಮ್ಮ ಊರುಗಳಿಗೆ ಪ್ರಯಾಣಿಸುತ್ತಾರೆ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಖಾಸಗಿ ಬಸ್ ಮಾಲೀಕರು ಪ್ರಯಾಣ ದರವನ್ನು ದುಪ್ಪಟ್ಟುಗೊಳಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಹಿಂದಿನ ದರ 1473 ರೂ ಇತ್ತು, ಈಗ ಅದು 5000 ರೂ ತಲುಪಿದೆ. ಬೆಂಗಳೂರು-ಕಾರವಾರ ನಡುವೆ ಪ್ರಸ್ತುತ 1790 ರೂಪಾಯಿಗಳಿಗಿಂತ ಅಧಿಕ ದರವಿದೆ. ಬೆಂಗಳೂರಿನಿಂದ ಕಲಬುರಗಿಗೆ 1299 ರೂಪಾಯಿಯಿಂದ 2200 ರೂಪಾಯಿಗೆ ಏರಿಕೆಯಾಗಿದೆ. ಬೆಂಗಳೂರು-ಶಿವಮೊಗ್ಗ ಪ್ರಯಾಣ ದರ 599 ರೂಪಾಯಿಯಿಂದ ಸುಮಾರು 3000 ರೂ ಇದೆ. ಅದೇ ರೀತಿ, ಬೆಂಗಳೂರಿನಿಂದ ಮಂಗಳೂರಿಗೆ 909 ರೂಪಾಯಿಯಿಂದ 2299 ರೂಪಾಯಿಗೆ ದರ ಏರಿಕೆಯಾಗಿದೆ. ರಜೆಗೆ ತೆರಳುವವರು ಹೆಚ್ಚುವರಿ ದರ ನೀಡಿ ಊರುಗಳಿಗೆ ತೆರಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ – Kannada News | Bangladesh Refuses T20 World Cup 2026 India Trip: ICC Warning, Massive Losses

ಬಾಂಗ್ಲಾದೇಶ 2026 ರ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ. ಭದ್ರತಾ ಕಾರಣಗಳಿಂದಾಗಿ ತಂಡವನ್ನು ಭಾರತಕ್ಕೆ ಕಳುಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರಾಕರಿಸಿದೆ. ಈ ಬಗ್ಗೆ ಪತ್ರಿಕೆಗಳಿಗೆ ಹೇಳಿಕೆ ನೀಡಿರುವ ಬಾಂಗ್ಲಾದೇಶದ ಯುವಜನ ಮತ್ತು ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಭಾರತದ ಭದ್ರತಾ ಪರಿಸ್ಥಿತಿ ಬದಲಾಗಿಲ್ಲ. ಹೀಗಾಗಿ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತಿಲ್ಲ ಎಂದಿದ್ದರು.

ವಾಸ್ತವವಾಗಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದರಿಂದ, ಬಾಂಗ್ಲಾದೇಶದ ಗುಂಪು ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಿಸಿಬಿ, ಐಸಿಸಿಯನ್ನು ಕೋರಿತ್ತು. ಆದಾಗ್ಯೂ, ಐಸಿಸಿ ಮಂಡಳಿಯ ಸಭೆಯು ಭಾರತದಲ್ಲಿ ಯಾವುದೇ ಭದ್ರತಾ ಬೆದರಿಕೆ ಇಲ್ಲ ಎಂದು ಹೇಳಿ ಈ ಪ್ರಸ್ತಾಪವನ್ನು ತಿರಸ್ಕರಿಸಿತು.

ಮಾತ್ರವಲ್ಲದೆ ಬಾಂಗ್ಲಾ ತಂಡ ಭಾರತಕ್ಕೆ ಪ್ರಯಾಣಿಸದಿದ್ದರೆ, ನಿಮ್ಮ ಸ್ಥಾನದಲ್ಲಿ ಬೇರೆ ತಂಡವನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾಗುತ್ತದೆ ಎಂದು ಐಸಿಸಿ, ಬಿಸಿಬಿಗೆ ಎಚ್ಚರಿಕೆ ನೀಡಿತ್ತು. ಇದರ ಹೊರತಾಗಿಯೂ, ಬಾಂಗ್ಲಾದೇಶ ತನ್ನ ನಿಲುವು ಬದಲಾಯಿಸದೆ ಪಂದ್ಯಾವಳಿಯಿಂದ ಹಿಂದೆ ಸರಿಯಲು ನಿರ್ಧರಿಸಿದೆ.

ಈ ನಿರ್ಧಾರದಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಭಾರೀ ಬೆಲೆಯನ್ನು ತೆರಬೇಕಾಗಿದೆ. ಐಸಿಸಿಯಿಂದ ಬರುವ ವಾರ್ಷಿಕ ಆದಾಯದ ಪಾಲಿನಲ್ಲಿ ಸುಮಾರು 3.25 ಬಿಲಿಯನ್ ಬಾಂಗ್ಲಾದೇಶಿ ಟಾಕಾ (ಸುಮಾರು 240 ಕೋಟಿ ಭಾರತೀಯ ರೂಪಾಯಿಗಳು) ನಷ್ಟವಾಗಬಹುದು ಎಂದು ವರದಿಯಾಗಿದೆ.

ಇದಲ್ಲದೆ, ಪ್ರಸಾರ ಹಕ್ಕುಗಳು, ಪ್ರಾಯೋಜಕತ್ವಗಳು ಮತ್ತು ಇತರ ಗಳಿಕೆಗಳಿಂದ ಬರುವ ಒಟ್ಟು ಆರ್ಥಿಕ ನಷ್ಟವು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 60 ಅಥವಾ ಅದಕ್ಕಿಂತ ಹೆಚ್ಚಾಗಬಹುದು. ಇದರ ಜೊತೆಗೆ ಆಟಗಾರರಿಗೆ ಸಿಗುತ್ತಿದ್ದ ಪಂದ್ಯ ಶುಲ್ಕ, ಬೋನಸ್‌ ಮತ್ತು ಬಹುಮಾನದ ಹಣಕ್ಕೂ ಕತ್ತರಿ ಬಿದ್ದಿದೆ.

ಈ ವಿವಾದವು ದ್ವಿಪಕ್ಷೀಯ ಕ್ರಿಕೆಟ್ ಮೇಲೂ ಪರಿಣಾಮ ಬೀರಬಹುದು. ಪೂರ್ವ ನಿಗದಿಯಂತೆ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಭಾರತ ತಂದ ಬಾಂಗ್ಲಾದೇಶ ಪ್ರವಾಸವನ್ನು ಮಾಡಬೇಕಿತ್ತು. ಆದರೀಗ ಆ ಪ್ರವಾಸ ರದ್ದಾಗಬಹುದು. ಇದರಿಂದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಮತ್ತಷ್ಟು ನಷ್ಟಕ್ಕೆ ಕಾರಣವಾಗಬಹುದು. ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು 2025 ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ಬಿಸಿಸಿಐ ಅದನ್ನು ಮುಂದೂಡಿತ್ತು. ಆದಾಗ್ಯೂ, ಈ ತಿಂಗಳ ಆರಂಭದಲ್ಲಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಪ್ರವಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತಾದರೂ ಅದು ನಡೆಯುವ ಸಾಧ್ಯತೆಗಳಿಲ್ಲ.

Published On – 3:18 pm, Fri, 23 January 26

Source link

Ranji Trophy: ದೇಶಿ ಅಂಗಳದಲ್ಲಿ 5 ನೇ ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್

Source link

ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್ – Kannada News | Kichcha Sudeep Gave 10 Lakh rs Gilli Nata In Home Says Bigg boss winner

ಬಿಗ್ ಬಾಸ್ ಕನ್ನಡ ಫಿನಾಲೆಯಲ್ಲಿ ಸುದೀಪ್ ಅವರು ಗಿಲ್ಲಿಗೆ 10 ಲಕ್ಷ ರೂಪಾಯಿ ನೀಡೋದಾಗಿ ಹೇಳಿದ್ದರು.ಕೊಟ್ಟ ಮಾತಿನಂತೆ ಸುದೀಪ್ ನಡೆದುಕೊಂಡಿದ್ದಾರೆ. ಅವರು 10 ಲಕ್ಷ ರೂಪಾಯಿ ಹಣವನ್ನು ಗಿಲ್ಲಿಗೆ ನೀಡಿದ್ದಾರೆ. ಬಿಗ್ ಬಾಸ್ ವೇದಿಕೆ ಮೇಲೆಯೇ ಗಿಲ್ಲಿಗೆ ಸುದೀಪ್ ಕಿವಿಮಾತೊಂದನ್ನು ಹೇಳಿದ್ದರಂತೆ. ‘ಸಿಗೋ ಯಶಸ್ಸನ್ನು ತಲೆಗೆ ಏರಿಸಿಕೊಳ್ಳಬೇಡಿ’ ಎಂದು ಕಿವಿಮಾತು ಹೇಳಿದ್ದರಂತೆ. ಈ ಮಾತಿನಿಂದ ಗಿಲ್ಲಿ ಕೂಡ ಖುಷಿಪಟ್ಟಿದ್ದಾರೆ. ಅವರು ಮಾತನ್ನು ಅನುಸರಿಸೋದಾಗಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ! – Kannada News | Gadags Lakkundi Dig: Eighth Day Reveals Historical Clues, Draws Crowds, and Raises Concerns

ಗದಗ, ಜನವರಿ 23: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾಜರ ಕಾಲದ ಗತ ವೈಭವದ ಕುರುಹುಗಳು ಪತ್ತೆಯಾಗುವ ನಿರೀಕ್ಷೆ ಸ್ಥಳೀಯರಲ್ಲಿ ಹೆಚ್ಚಿದೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾತ್ರವಲ್ಲದೆ, ಫ್ರಾನ್ಸ್‌ನಂತಹ ದೂರದ ದೇಶಗಳಿಂದಲೂ ಪ್ರವಾಸಿಗರು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.

ಆದಾಗ್ಯೂ, ಉತ್ಖನನ ಸ್ಥಳದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಕೊರತೆಯಿದೆ. ಜಿಲ್ಲಾಧಿಕಾರಿಗಳು ಈ ಪ್ರದೇಶವನ್ನು ನಿರ್ಬಂಧಿತ ವಲಯವೆಂದು ಘೋಷಿಸಿದ್ದರೂ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಸಂಬಂಧಿತ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಸಾರ್ವಜನಿಕರ ಓಡಾಟವು ಉತ್ಖನನ ಕಾರ್ಯಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ. ಪೊಲೀಸ್ ಮತ್ತು ಉತ್ಖನನ ಕಾರ್ಮಿಕರಿಗೆ ಜನರನ್ನು ನಿಯಂತ್ರಿಸುವುದು ಕಷ್ಟಕರವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

Source link

Exit mobile version